ಒಟ್ಟು 15 ಕಡೆಗಳಲ್ಲಿ , 11 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಭಕ್ತರು ಬಂದರೆಂದು ಗೋವಿಂದ ತಾ ನಲೆದಾಡಿದ ಗೋಪಾಲ ತಾ ನಲೆದಾಡಿದ ಪ. ಹರಿಯು ಆಡಿದ ಮಾತು ದೊರೆ ಧರ್ಮನು ಕೇಳಿಕರುಣಾಳು ನಿಮ್ಮ ಕೃಪೆಯಿಂದ ಕರುಣಾಳು ನಿಮ್ಮ ಕೃಪೆಯಿಂದಪರಮ ಆಶೀರ್ವಾದ ಇರಲುಂಟು1 ಮುತ್ತಿನ ಮಂಚದ ಹತ್ತಿಲೆ ಸಾಲಾಗಿಮತ್ತ ಪಾಂಡವರು ಕುಳಿತರುಮತ್ತ ಪಾಂಡವರು ಕುಳಿತರು ಹರುಷದಿಭಕ್ತವತ್ಸಲನ ಮುಖನೋಡಿ 2 ಹಸಿರು ಪಚ್ಚವ ಬಿಗಿದ ಕುಸುರು ಸಿಂಹಾಸನದೇಶಕೆಲ್ಲ ಬೆಳಕು ಎಸೆಯುತದೇಶಕೆಲ್ಲ ಬೆಳಕು ಎಸೆವೊ ಸಿಂಹಾಸನದಿವಸುಧಿಪಾಲಕರು ಕುಳಿತರು 3 ಇಂದ್ರಾದಿಗಳು ಮುನಿವೃಂದ ಸಹಿತಾಗಿ ಬಂದು ಒಂದೆ ಮನದಲೆ ಕುಳಿತರು ಒಂದೆ ಮನದಲೆ ಕುಳಿತರು ದೇವಕಿನಂದನ ನೋಡಿ ಹರುಷಾಗಿ 4 ರನ್ನ ಮಾಣಿಕ ಬಿಗಿದ ಹೊನ್ನಮಂಚಕೆಹೊಂದಿ ಕನಿ ಸುಭದ್ರೆ ದ್ರೌಪದಿಕನಿ ಸುಭದ್ರೆ ದ್ರೌಪದಿ ಕುಳಿತರುಚನ್ನ ಕೃಷ್ಣಯ್ಯನ ಮುಖನೋಡಿ5 ಚಿತ್ರ ವಿಚಿತ್ರದ ರತ್ನಗಂಬಳಿ ಮ್ಯಾಲೆಪುತ್ರರ ಸಹಿತ ಹರುಷದಿಪುತ್ರರ ಸಹಿತ ಹರುಷದಿ ಕುಳಿತರು ಭಕ್ತವತ್ಸಲನ ಮುಖ ನೋಡಿ 6 ಸಾಲು ದೀವಿಗೆಯಂತೆ ಬಾಲೆಯರುಕುಳಿತಾರೆ ಬಾಲರ ಸಹಿತ ಹರುಷದಿಬಾಲರ ಸಹಿತ ಹರುಷದಿ ರುಕ್ಮಿಣಿ ನಿಂತಿಹಳು ಲೋಲ ರಾಮೇಶನ ಮುಖನೋಡಿ7
--------------
ಗಲಗಲಿಅವ್ವನವರು
ಎಂಥಾ ಮೋಹನನೇ ನೋಡಮ್ಮಯ್ಯಾ| ಸಂತತ ತೃಪ್ತನು ಬಾಲಕನಾದಾ|ಅ- ನಂತ ಚರಿತೆಯಾ ದೋರುವ ಕೃಷ್ಣ ಪ ಮೂಡಣ ದೇಶಕೆ ಪಡರಲು ಗೋಪಿಯು| ತಡೆಯದೆ ದುಮುಧುಮು ಧುಮುಕೆನುತ| ಕಡೆಯಲು ಧುಡು ಧುಡು ಧುಡುನಡೆಯುತ ಬಂದು| ಪಿಡಿದೆನ್ನ ಸೆರಗ ಬೆಣ್ಣೆ ಬೇಡುವಾ ಕೃಷ್ಣ 1 ಸಮಗೆಳೆಯರ ಸಂಗಡ ಧ್ವನಿವೇಣಿಯ| ಉಮಟೆಸುತಲಿ ಧಿಗಿಧಿಗಿಲೆನುತಾ| ಧಿಮಿಕಿಟ ಧಿರಕಿಟ ತಿರುಕಿಟವೆಂಬೋ| ಕ್ರಮದಿ ವಾದ್ಯವ ಬಾರಿಸುವಾ ಕೃಷ್ಣ 2 ಗುರು ಮಹೀಪತಿ ಪ್ರಭುವಿನ ಪದರಜ| ದೊರಕದು ಅಜಭವ ಮುಖ್ಯರಿಗೆ! ಹರುಷದಿ ತೋಳ್‍ದೊಡೆ ಮೇಲೆ ಓಡಾಡುವಾ| ಧರೆಯೊಳು ಯಶೋಧೆ ಸುಕೃತವೆಂತೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಕನಾದ ಹರಿಗುರುಗಳ ಬಿಟ್ಟು ನರಸ್ತುತಿಗಳನು ಮಾಡಬಾರ್ದು ಪ ಸಿರಿವುರಿಯಲಿ ಸಿಕ್ಕಿ ನರಹರಿ ಚರಣವ ಬಿಡಬಾರ್ದು ಅ.ಪ. ಒಂಟಿಲಿ ಸತಿಯನು ಪತಿವ್ರತೆ ಎನ್ನುತ ಬಿಡಬಾರ್ದು ನೆಂಟೆಗೆ ಮಿತ್ರಗೆ ಸೂಳೆಗೆ ಸಾಲವ ಕೊಡಬಾರ್ದು ತುಂಟರ ಕುಡುಕರ ಜಾರರ ನೆರೆಹೊರೆ ಇರಬಾರ್ದು ಒಂಟಿಯ ಊಟವ ಪಯಣವ ಕಲಹವ ಬೆಳೆಸಬಾರ್ದು 1 ಮಾವನ ಮನೆಯಲಿ ದುಡಿಯದ ಅಳಿಯನು ನಿಲ್ಲಬಾರ್ದು ಕೋವಿದರಡಿಗಳ ಸುಜನರ ಸಂಗವ ಬಿಡಬಾರ್ದು ಜೀವರು ಹರಿ ಸಮ ಮಾಯವೆ ಜಗಸರಿ ಎನಬಾರ್ದು ದೇವನ ದೂಡುತ ವಿಷಯವ ಹರಿಸುತ ಕೆಡಬಾರ್ದು 2 ಮನೆಕದ ಮುಂದಿಲಿ ಪತಿವ್ರತೆ ತಾನು ನಿಲಬಾರ್ದು ತನುವನು ತೋರುತ ಸೆರೆಗನು ಬೀರುತ ನಡಿ ಬಾರ್ದು ವನಿತೆಯ ಸಂಗಡ ಗುಟ್ಟಿನ ವಿಷಯವ ನುಡಿಬಾರ್ದು ಮಣಿಯದೆಲೆಂದಿಗು ಹಿರಿಯರ ಚರಣಕೆ ನಡಿಬಾರ್ದು3 ನುಡಿಯುವ ತೆರೆದಲಿ ನಡೆಯದ ಮನುಜನ ನಂಬಬಾರ್ದು ತಡೆಯದೆ ಕೋಪವ ದುಡುಕುವ ನೆಡೆಯಲಿ ನಿಲ್ಲಬಾರ್ದು ಬೆಡಗನು ತೋರುವ ನಾರಿಯ ಕಡೆಯಲಿ ನೋಡಬಾರ್ದು ದುಡುಕುತ ಲೊಡನೆಯೆ ಯಾವುದು ನಿಶ್ಚಯ ಮಾಡಬಾರ್ದು 4 ಕೆಟ್ಟರೆ ನೆಂಟರನೆಂದಿಗು ಮಾನಿಯು ಸೇರಬಾರ್ದು ಕಷ್ಟವು ಬಂದೆಡೆ ಧೈರ್ಯವನೆಂದಿಗು ಬಿಡಬಾರ್ದು ಗುಟ್ಟಿನ ಮಂತ್ರವು ಘಟ್ಟಿಲಿ ಜಪಿಸುತ ಕೂಗಬಾರ್ದು ಶಿಷ್ಯರಿಗಲ್ಲದೆ ದುಷ್ಟಗೆ ಶಾಸ್ತ್ರವ ನುಡಿಬಾರ್ದು 5 ತಿಂಡಿಯ ಚಪಲವ ನರಹರಿ ತೊಂಡನು ಮಾಡಬಾರ್ದು ಹೆಂಡರ ಭಜಕನ ಜಾರನ ನುಡಿಗಳ ನಂಬಬಾರ್ದು ಸತಿ ಸಹ ಸರಸವ ಮಾಡಬಾರ್ದು ಮಂಡೆಲಿ ಚರಣದಿ ಬರಿತೆರ ವೆಂದಿಗು ಹೋಗಬಾರ್ದು 6 ಹುಡುಗರ ಶಾಲೆಗೆ ಕಲಿಯಲು ಹುಡುಗಿಯ ಕಳಿಸಬಾರ್ದು ಮಡದಿಗೆ ಭಂಟಗೆ ಒಡನೆಯೆ ಸದರವ ನೀಡಬಾರ್ದು ಹುಡುಗಿಯ ಕಾಣದ ಜನರಿಗೆ ದೇಶಕೆ ಕೊಡಬಾರ್ದು ನಡೆನುಡಿ ನೋಟ ವಿಶೇಷದಿ ನೇಮವನಿಡದಲೆ ಇರಬಾರ್ದು 7 ಯಾಚಕ ಸವಿನುಡಿ ವಿನಯ ವಿವೇಕವ ಮರಿಬಾರ್ದು ಯೋಚನೆ ಗೈಯದೆ ನೆರೆಹೊರೆ ಹಗೆತನ ಗಳಿಸಬಾರ್ದು ಒಗೆತನ ಹುಳುಕನು ಹಾಕಬಾರ್ದು ಮೋಚಕ ನಿಜ ಸಖ ಹರಿತಾನೆಂಬುದ ಮರಿಬಾರ್ದು 8 ದೊಡ್ಡವರೆಡೆಯಲಿ ಹುಡುಗರು ಸರಸವ ಮಾಡಬಾರ್ದು ದುಡ್ಡಿನ ಜನಗಳನೆದುರಿಸಿ ಬಡವನು ನಿಲ್ಲಬಾರ್ದು ಸಡ್ಡೆಯ ಮಾಡದೆ ಅಡ್ಡಿಗಳೆಲ್ಲವ ಸರ್ವರಿಂ ದೊಡ್ಡವ ಶ್ರೀ ಕೃಷ್ಣವಿಠಲನ ಭಜನೆಯ ಬಿಡಬಾರ್ದು 9
--------------
ಕೃಷ್ಣವಿಠಲದಾಸರು
ಕರದೊಳಿನ ಮಣಿಗೆ ಕನ್ನಡಿಯೇತಕೆ ಪ ಸಿರಿ ರಮಣನಲತಿ ಸಂಶಯವೇತಕೆ ಅ.ಪ ಶರಧಿಯ ಜಲವನ್ನು ಪರಿಪರಿ ದೇಶಕೆ ಬಿರುಗಾಳಿಗಳಿಂದ ದೊರಕಿಸುವನು ಯಾರು ಧರೆಯೊಳು ನವನಾಗರಿಕರೆಂದರಿಯುವ ಪರಿ ತರವೆ ಯೋಚಿಸೆಲೊ 1 ಎಲ್ಲಾ ದೇಶಗಳ ವಿಚಾರ ನೋಟಗಳನ್ನು ಇಲ್ಲೇ ತೋರಿಸುವಂಥ ನಲ್ಲರು ಇರುವರು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆ ಎಂದು ಬಲ್ಲರೇ ಇವರು ತಲ್ಲಣಿಸುತಿಹರು 2 ಘಾಸಿಯ ಮಾಡದೆ ಪೋಷಿಸುವನು ಯಾರು ಈಶನ ಕರುಣವು ಲೇಶ ತಪ್ಪಿದರೆ ಆ ಶಿಶುವಿನ ಜೀವದಾಶೆ ಎಂತಿಹುದೊ 3 ಎಲ್ಲಾ ನಾರಿಯರು ಗರ್ಭ ಧರಿಸುವರೆ ಎಲ್ಲಾ ಬೀಜಗಳಿಂದ ತರುಗಳು ಬರುವುದೆ ಬಲ್ಲವರುಂಟೆ ಇದಕೆ ಕಾರಣ ಲಕ್ಷ್ಮೀ ಪರಿ 4 ಭಿನ್ನದೇಶಗಳಲ್ಲಿ ಭಿನ್ನ ರೂಪಗಳುಳ್ಳ ಭಿನ್ನ ಗುಣಗಳುಳ್ಳ ಭಿನ್ನ ಜಂತುಗಳಿಗೆ ಭಿನ್ನ ಕಾಲಗಳಲ್ಲಿ ಅನ್ನವನೀಯಲು ಅನ್ಯರಿಗಳವೆ ಪ್ರಸನ್ನನಿಗಲ್ಲದೆ 5
--------------
ವಿದ್ಯಾಪ್ರಸನ್ನತೀರ್ಥರು
ಗುರುರಾಯರ ನಂಬಿರೋ | ರಾಘವೇಂದ್ರಗುರುರಾಯರ ನಂಬಿರೋ ಪ ದುರಿತ ದುಷ್ಕ್ರತ ಹರಿಸಿಪುರುಷಾರ್ಥ ಪರಮವ ಕರಗತ ಕೈಗೊಳ್ಳಿ ಅ.ಪ. ಪರಿಮಳೇತ್ಯಾದಿ ಸಂದ್ಗ್ರಂಥ | ವಿರಚಿಸಿವರಮೋಕ್ಷ ಪ್ರದವೆನಿಸುವಂಥ |ಎರಡೆರಡ್ಹತ್ತು ಮತ್ತೆ | ಎರಡೈದು ಗ್ರಂಥವಧರಣಿ ಸುರರಿಗಿತ್ತು | ಕರುಣವ ತೋರಿದ 1 ರಾಮಕೃಷ್ಣ ನರಹರೀ | ವೇದವ್ಯಾಸಮಾಮನೋಹರ ವೃಂದಾವನದಿವಾಮಾಂಗ ಎನಿಸೀಹ | ಶ್ರೀಮಹಿಳೆಸಹಿತಾಗಿಕಾಮಿತಾರ್ಥದ ಹರಿ | ನೇಮದಿ ನೆಲಸೀಹ 2 ಕೂಸೆರಡರ ವಯದೀ | ಮಂತ್ರಾಲಯದೇಶಕೆ ಪೋಗಿ ಮುದದೀ |ಲೇಸು ಸೇವೆಯ ಗೈಯ್ಯೆ | ಕಾಸರೋಗವನೀಗಿಮೇಶ ಗುರುಗೋವಿಂದ | ದಾಸನ್ನಾಗಿಸಿದ 3
--------------
ಗುರುಗೋವಿಂದವಿಠಲರು
ನಾನೇನ ಮಾಡಿದೆ ತಪ್ಪುಗಳನ್ನ ನಾನೇನ ಮಾಡಿದೆ ದೇವರದೇವ ಪ ನಿನ್ನ ದಾಸರ ತಪ್ಪನೆಣಿಸದೆ ಪೊರೆಯುವೆ ನಾನೊಬ್ಬ ದಾಸನೆಂದರಿದು ನೀ ಪೊರೆಯೊ 1 ಭೃಗುವಂತೆ ನಿನ್ನಯ ಎದೆಗೆ ತುಳಿಯಲಿಲ್ಲ ನಗವೈರಿಯಂತೆ ಯುದ್ಧವ ಮಾಡಲಿಲ್ಲ 2 ಅಂಗಾಧಿಪತಿಯಂತೆ ಕೊಂದೆನೆಂದರಿತಿಲ್ಲ ಗಂಗೆಯ ಸುತನಂತೆ ಫಣಿಗೆ ಹೊಡೆಯಲಿಲ್ಲ 3 ನಿನ್ನ ಬಿಟ್ಟನ್ಯ ದೇಶಕೆ ಪೋಗಲಿಲ್ಲಾ 4 ಭಾವದಿ ನುಡಿದಂತೆ ನಿನಗೇನು ಪೇಳಿಲ್ಲ 5 ನಿನ್ನಾ ಕುವರರು ಸುಭದ್ರೆಯ ಮದುವೆಯ ಚೆನ್ನಾಗಿ ತಡೆದಂತೆ ತಡೆಯಲಿಲ್ಲವೊ ನಾನು6 ವಸುದೇವ ದೇವಕಿ ಮುಖ್ಯರಂತೆ ನಿನ್ನ ಮಾ- ನುಷನೆಂದು ನಾನೇನು ತಿಳಿದುಕೊಂಡಿಲ್ಲ 7 ಮೌಲಿಯ ಕದ್ದಂತೆ ಕದ್ದುಕೊಂಡಿಲ್ಲ8 ರಾಜೇಶಹಯಮುಖ ಭಜಕರೊಳಗೆ ಮತ್ತೆ ನಿತ್ಯ ಭಕ್ತರಾರಿಹರು 9
--------------
ವಿಶ್ವೇಂದ್ರತೀರ್ಥ
ನೂರೆಂಟು ನೆನೆದು ಫಲವೇನು ಈರೇಳು ಜಗದೊಡೆಯಹರಿಯನೊಮ್ಮೆ ನೆನೆ ಮನವೆ ಪ. ಧನದಾಸೆಗಳಲದಿರು ಭವದುಃಖ ಬಳಲದಿರುಜನಾರ್ದನನ ಮರೆಯದಿರು ಈ ತನುವ ಪೊರೆಯದಿರುಅನಘಜನರೊಡನಾಡು ದಿನದಿನ ಶುಭವಕೂಡುಇನಿತು ಜನಮವೆ ಸಾಕು ಇನ್ನು ಮುಕುತಿಯೆ ಬೇಕು 1 ಸಾಕು ದುರ್ಜನÀರಾಟ ಸಾಕು ಸತಿಯರ ಬೇಟಸಾಕು ಸವಿಯನ್ನದೂಟ ಸಾಕು ಘನಕೂಟಸಾಕು ದೇಶಕೆವೋಟ ಸಾಕು ಸಲೆ ಭವನೋಟಸಾಕದೆಲ್ಲ ಖಳಕೂಟ ಸಾಕುಮನೆ[ಮಠ] 2 ಕೇಳು ಹರಿಮಹಿಮೆಯನು ಪೇಳು ಹರಿನಾಮವನುಬಾಳು ಬಂದಷ್ಟರಿಂದ ತಾಳು ಹಸಿತೃಷೆಗಳಶ್ರೀಲಲನೆಯಾಳ್ದ ಹಯವದನ ಸಿರಿನರಹರಿಯಆಳುತನವನು ಬೇಡು ಕೀಳು ಬುದ್ಧಿಯ ದೂಡು 3
--------------
ವಾದಿರಾಜ
ಯಾತರವ ನಾನೈಯ ಇಂದಿರೇಶ ಪ ಹೋತನ ಕೊರಳೊಳಗೆ ಮೊಲೆಯಿರ್ಪ ತೆರದಲಿ ಅ.ಪ ಗ್ರಾಸಕ್ಕಲ್ಲದೆ ನಾನು ದೇಶ ದೇಶಕೆ ಪೋಗಿ ವಾಸಪಗೆ ಸಮರೆಂದು ದೋಶಿಗಳ ಪೊಗಳೀ ಕಾಸುಗಳಿಸಲು ದಾಸ ವೇಷ ಹಾಕಿದ ಶೂರ ಏಸು ಜನ್ಮವು ಕಳಿಯೆ ನಾಶವಾಗದೊ ಆಶೆ 1 ನೇಮ ನಿಷ್ಠೆಗಳಾಟ ಪರರಿಗೋಸುಗ ಹೂಡಿ ಕೋಮಲಾಂಗಿಯರ ಮನ ಮೆಚ್ಚಿಸುತ ಜಗದೊಳಗೆ ಹೇಮದಾಶೆಗೆ ಸೂಳೆ ಪ್ರೇಮವನ್ನು ತೋರ್ಪಂತೆ ನಾಮಸವಿಯುಣ್ಣದೆಲೆ ಗಾಯನವ ಮಾಡುವೆನು 2 ವ್ಯಾಸಕೂಟದಿ ಬೇರೆ ದಾಸಕೂಟವು ಎಂಬ ದೋಷವಾದವ ಮಾಡಿ ವ್ಯಾಸದಾಸರ ದ್ರೋಹ ಗ್ರಾಸವಾದೆನು ನಾನು ಶಾಸ್ತ್ರವಾಹುದೆ ಬೇರೆ ಭಾಷೆ ಬೇರೆಯು ಆಗೆ ಶ್ರೀಶ ಹರಿಸೋ ಇದನು 3 ಮಾನವರ ಬಹುಮಾನ ಸಾನುರಾಗದಿ ಬಯಸಿ ನಾನು ಮೋದಿಸುವೆ ಹೀನ ಮತಗಳ ಹುಳುಕು ಪ್ರಾಣಪತಿಮತ ಮೇಲ್ಮೆಗಾನಮಾಡೆನು ದೃಢದಿ ಸ್ವಾನುಸಂಧಾನ ವಹೀನ ಜ್ಞಾನಿಯೊ ನಾನು4 ಖ್ಯಾತಿ ಜೀವನಕಾಗಿ ಶಾಸ್ತ್ರವೋದಿದ ಮೂಢ ನೀತಿ ಪೇಳುವೆ ಜನಕೆ ನೀತಿತೆರನಾನಡಿಯೆ ನಿತ್ಯ ನೇಮವುಯನಗೆ ಈತರದ ಹರಿದಾಸ ಮಾತರಿಶ್ವಗೆ ದೂರ 5 ದಾನ ಧರ್ಮಗಳಿಲ್ಲ ಮೌನ ಜಪ ತಪವಿಲ್ಲ ಹೀನಗುಣ ಬಿಡಲಿಲ್ಲ ನಾನುಯೆಂಬುವೆನಲ್ಲ ಸೊಲ್ಲು ಏನು ಬಿಡೆದಿಹೆನಲ್ಲ ನಿನ್ನ ನಂಬಿಹೆನಲ್ಲ ನೀನು ಬಿಡೆ ಮದ್ದಿಲ್ಲ6 ಇಂತುಟಾದರು ಮೆರೆವೆ ಹಂತ ನಿನ್ನಯ ಕೃಪೆಯೊ ಯೆಂತು ಪೇಳಲಿ ಜೀಯ ಸಂತ ಜಯಮುನಿ ವಾಯುವಂತರದಿ ನಲಿವಂಥ “ಶ್ರೀ ಕೃಷ್ಣವಿಠಲ”ನೆ ನಿನ್ನಂಥ ದೊರೆಯಿಲ್ಲ ಸರ್ವೋತ್ತಮನೆ ಶರಣೈಯ7
--------------
ಕೃಷ್ಣವಿಠಲದಾಸರು
ವಿಷಯಾಸೆ ಬಿಡಲೊಲ್ಲದೋ ದೇವ ಪ. ವಸುದೇವಸುತ ನಿನ್ನ ವಶವಾಗೋತನಕ ಅ.ಪ. ಉದಯದಲಿ ಎದ್ದು ಹರಿಪದಗಳನು ಸ್ಮರಿಸದಲೆಕುದಿದು ಪರರನ್ನೆ ಬೈದು ಸುಯಿದುಮುದದಿಂದ ಮಜ್ಜನವ ಮಾಡದಲೆ ಕಂಡಕಡೆಒದಗಿ ಪರಸದನಕಾಗಿ ಪೋಗಿಮದಗರ್ವದಿಂದ ಗುರುಹಿರಿಯರಿಗೆ ವಂದಿಸದೆಕದನವನೆ ತೆಗೆದು ಬಂದು ನಿಂದುಇದೆ ಸಾಧನವೆಂದು ಉದರ ನೆವದಿ ತಿರುಗಿಸುದತಿಯರ ಸುಖಬಡಿಸಿ ಮದನವೆಗ್ಗಳನಾದೆ 1 ಓದುವೆನು ವಿದ್ಯೆಗಳ ಓದನದ ಬಯಕೆಯಲಿಸಾಧುಶಾಸ್ತ್ರಗಳ ಮರೆದು ತೊರೆದುಕಾದುವೆನು ತರ್ಕವ್ಯಾಕರಣ ಬಲದಿಂದಬೀದಿಬೀದಿಯಲಿ ಚರಿಸಿ ಅರಸಿಮಾಧವನ ಪೂಜಿಸದೆ ಪರರ ಅನ್ನವನುಂಡು ಶೋಧಿಸದೆ ಪುಣ್ಯಪಾಪ ಲೇಪಕ್ರೋಧದಿಂದಲಿ ಇನಿತು ಪರಿಪರಿಯ ಬವಣೆÀಯಿಂದಬೋಧನೆಗೆ ಒಳಗಾಗಿ ಕುಧರ್ಮವನು ಪಡೆದೆ2 ಪರರ ಸೌಭಾಗ್ಯ ವಿದ್ಯಾ ಮಕ್ಕಳ ಕಂಡುಮರುಗಿ ಮನದೊಳಗೆ ಕೊರಗಿ ಸೊರಗಿತರತರಕೆ ಪರರಾಂಗನೆಯರ ಚೆಲುವಿಕೆ ಕಂಡು[ತೆರೆದ] ಕಣ್ಣಿಂದ ನೋಡಿ ಬಾಡಿಎರಗಿ ಮನ ಅವರಲ್ಲಿ ಏಕಾಂತದಲಿ ಕಂಡುಕರದಿ ಸನ್ನೆಯನು ಮಾಡಿ ಕೂಡಿಹೊರಗೆ ಗುಣವಂತನೆಂದೆನಿಸಿ ಧರೆಯೊಳಗೆ ಪಾಮರ ಬುದ್ಧಿಯಿಂದ ಸಂಚರಿಸಿ ನಿನ್ನನು ಮರೆದೆ3 ದೇಶದೇಶಕೆ ಧನದಾಸೆಗಾಗಿ ನಡೆದುಬ್ಯಾಸರದೆ ಮನೆ ಮನೆಗೆ ಪೋಗಿ ಕೂಗಿಭೂಸುರೋತ್ತಮರು ನಾವೆಂದು ಪರರಮುಂದೆಹೇಸದಲೆ ಪೇಳಿಕೊಂಡು ಭಂಡುಮೋಸಗೊಳಿಸಿ ಪರರ ಆಶ್ರಯವನೆ ಮಾಡಿಭೇಷಜವ ತೋರಿ ಕಳೆದೆ ಪೊಳೆದೆಈಸುಪರಿ ಧನವ ತಂದು ಕೂಳನೆ ಹಾಕಿಆಸತಿಸುತರೆನಗೆ ಗತಿಯೆಂದು [ಗುಣಿಸಿದೆ] 4 ಕಾಯದಾಸೆಗಾಗಿ ನೋಯಬಯಸದಲೆ ಉ-ಪಾಯವ ಚಿಂತಿಸುತ್ತಲಿತ್ತಹೇಯವಿಲ್ಲದೆ ಸ್ನಾನ ಸಂಧ್ಯಾವಂದನೆ ತೊರೆದುತೋಯಿಸದೆ ದೇಹವನ್ನು ಇನ್ನುಮಾಯಮೋಸಗಳಿಂದ ಬಾಯಿಗೆ ಬೇಕಾದ್ದುಆಯಾಸಪಟ್ಟು ತಂದು ತಿಂದುಶ್ರೀಯರಸ ಹಯವದನರಾಯನೆ ನಾ ನಿನ್ನಮಾಯವನು ತಿಳಿಯದನ್ಯಾಯದಿಂದಲಿ ಕೆಟ್ಟೆ 5
--------------
ವಾದಿರಾಜ
ಶುಭ ಪ ಬ್ರಹ್ಮರೂಪದಿ ಜಗವನು ಪುಟ್ಟಿಸಿ ಬ್ರಹ್ಮಜನಕನ ನೆತ್ತಿಲಿ ರಕ್ಷಿಸಿ ಬ್ರಹ್ಮ ಮೂರುತಿ ಬಾಲಬ್ರಹ್ಮದಿ ಚರಿಸಿದಾತಂಗೆ ಮಹಾ | ಬ್ರಹ್ಮಾಂಡಕೋಟಿ ಉದರದೊಳಿರಿಸಿ | ಬ್ರಹ್ಮನ ಸ್ತುತಿಗೆ ನಿಲುಕದ ಅವಿನಾಶಿ ಬ್ರಹ್ಮಾದಿ ಸುರವಂದಿತ ರುದ್ರನಾಗಿ ಸಂಹರಿಸಿ 1 ಜಗವನುದ್ಧರಿಸಲು ದೇಹವನು ಜಗದೀಶ್ವರನು ಅವತರಿಸಿ ಬಂದಿಹನು | ಜಗ ಮೃಗಜಲವೆಂದು ತಿಳಿದಿರೆ ಜಗದೊಳಾಡುವಗೆ || ಬಗೆ ಬಗೆಯಲಾಡುತ ಗಗನ ಗಟ್ಟಿಹನು | ನಿಗಮಕೆ ನಿಲ್ಕದೆ ನಿತ್ಯನೆನಿಸುವನು ಝಗಝಗಿಸುವ ಆರತಿಯ ಬೆಳಗಿರೆ ಜಗದ ಜನಕನಿಗೆ 2 ಛಪ್ಪನ್ನ ದೇಶಕೆ ಶೋಭಿಸುವ ಒಪ್ಪುವ ಕೋಳಕೂರೆಂದೆನಿಸುವ ದಿಕ್ಕು ದಕ್ಷಿಣಾ ಭೀಮಾತೀರದಿ ಥಳಥಳದಿ ಹೊಳೆವ |ಶ್ರೀ ಮಹಾಗುರು ಇಪ್ಪತ್ತೊಂದು ಸಮಾಧಿಯೊಳಿರುವತಪ್ಪದೆ ರಾಮಾತ್ಮಜನಾಗಿರುವ | ಸೊಪ್ಪೆರಾಯನು ಸಹಜಾನಂದ ತಾ ಯೋಗಿಯಾಗಿ ಮೆರೆವ 3
--------------
ಭೀಮಾಶಂಕರ
ಸೀತಾರಾಮ ಶ್ರೀರಘುರಾಮ ಕಾ ಕುತ್ಸ್ಥರಾಮ ಕರುಣಾಳು ರಾಮ ಪ ಉತ್ತಮ ಗುರುಗಳಿಗೆ ಭಕ್ತಿಯಿಂದಲೆ ಎರಗಿ ಭಕ್ತವತ್ಸಲನ ಚರಿತ್ರೆ ಪೇಳುವೆನು 1 ಆದಿಮೂರುತಿಮಹಿಮೆ ವೇದಂಗಳರಿಯದು ಎನ್ನ ಭೇದಬುದ್ಧಿಗೆ ಇದು ಬೋಧವಾಗುವುದೆ 2 ಪತಿತಪಾವನ ನಿಮ್ಮ ಸ್ತುತಿಯ ಮಾಡುವುದಕ್ಕೆ ಮತಿಯ ಪಾಲಿಸಿ ಸದ್ಗತಿಯ ಕೊಡೆನೆಗೆ 3 ಆದಿಸೃಷ್ಟಿಯಲಿ ಆದುದು ಈ ಆತ್ಮ ಬಾಧೆಯ ಪಡುತಿಹುದು ಭವರೋಗದಲಿ 4 ಜನನ ಮರಣವೆಂಬ ಜಾಡ್ಯವನು ಬಿಡಿಸಿ ನಿನ್ನ ಚರಣದೊಳಿರಿಸೆನ್ನ ಕರುಣವಾರಿಧಿಯೆ 5 ಹೃಷಿಕೇಶವ ಎನ್ನ ಹೃದಯದೊಳಗೆ ಇದ್ದು ವಿಷಯಕೆ ಎನ್ನನು ವಶವ ಮಾಡುವರೇ 6 ದೆ ಮನ್ನಿಸಿ ರಕ್ಷಿಸೊ ಪನ್ನಗಶಯನ 7 ಪಾರ್ಥಸಾರಥಿ ನಿಮ್ಮ ಪಾದವ ನಂಬಿದೆ [ಅರ್ಥಿಯಿಂ] ಪಾವನ ಮಾಡೆನ್ನ ಪರಮಪುರುಷನೆ 8 ನಿಮ್ಮ ಪಾದದ ಭಕ್ತಿ ನಿಮ್ಮ ಪಾದದ ಸ್ತುತಿ ನಿಮ್ಮ ಪೊಗಳುವ ಮತಿಗತಿಯ ಕೊಡೆನಗೆ 9 ತಂದೆತಾಯಿಯು ನೀನೇ ಬಂಧುಬಳಗವು ನೀನೆ ಆ ನಂದದಿಂದಲಿ ಕಾಯೊ ಇಂದಿರಾರಮಣ 10 ಸುರರೆಲ್ಲ ಪೋಗಿ ಮೊರೆಯಿಡಲಾಗಿ ಅರಿತನು ಭೋಗಿಶಯನ ತಾನಾಗಿ11 ವಸುಧೆಯ ಭಾರವನಿಳುಹುವೆನೆಂದು ದಶರಥನುದರದಿ ಜನಿಸಿ ತಾ ಬಂದು 12 ಪಂಕಜನೇತ್ರ ಪರಮಪವಿತ್ರ [ಸು]ಕೋಮಲಗಾತ್ರ ಕೌಸಲ್ಯಪುತ್ರ 13 ಪುತ್ರರ ನೋಡಿ ಸಂತೋಷಗೂಡಿ ಅರ್ತಿಯಿಂದಲೆ ಚೌಲ ಉಪನಯನ ಮಾಡಿ 14 ನೋಡಿ ಕೌಶಿಕನ ಚಿಂತೆಯ ಮಾಡಿ ಕೂಡಿ ಅನುಜನ ಮುನಿವರನೊಡನೆ ವೋಡಿ 15 ಕರೂಶದೇಶಕೆ ಬಂದು ತಾಟಕಿಯನು ಕೊಂದು ಮ ಹ ಸ್ತ್ರೀಯೆಂದು ಆನಂದದಿ ಗ್ರಹಿಸಿ 16 ಮಾರೀಚನ ಹಾರಿಸಿ ಕ್ರತುವನ್ನು ಪಾಲಿಸಿ ತೋರಿಸಿ ಗಂಗೆಯ ಆನಂದದಿಂ ಸ್ತುತಿಸಿ 17 ಮಾಡಿ ಶಿಲೆಯ ಪಾವನ ಮಿಥಿಲಪುರಕೆ ವೋಡಿ ನೋಡಿ ಧನುವ ಮುರಿದು ಜಾನಕಿ ಕೂಡಿ 18 ಮಾರ್ಗದಲ್ಲಾಗ ಭಾರ್ಗವನ ಆಗ್ರಹವ ಬೇಗ ಮುರಿದು ತಾ ಶೀಘ್ರದಿಂ ಬಂದ 19 ಸತಿ ಸಹಿತನಿಂದು ರಾಜ್ಯ ಗ್ರಹಿಸುವೆನೆಂದ ಮಾತೆಗಾನಂದ 20 ಮಾತೆಗೆ ವಂದಿಸಿ ಸೀತೆಯನೊಡಗೊಂಡು ಸು ಮಿತ್ರೆಜಾತನ ಸಹಿತ ರಘುನಾಥ ತಾ ಪೊರಟ 21 ಪೋಗಿ ಜನಕನಿಗಾಗಿ ವನಕೆ ತಾ ಯೋಗಿ 22 ಬೇಗ ಭರತನಿಗಾಗಿ ಪಾದುಕೆಗಳ ಅನು ರಾಗದಿಂದಿತ್ತು ಯೋಗದಿಂ ಪೋಗಿ 23 ಅತ್ರಿಮಹಾಮುನಿ ಇತ್ತ ಆಭರಣವ ವಸ್ತ್ರವ ಗ್ರಹಿಸಿದ ಪುರುಷೋತ್ತಮನು 24 ವಿರಾಧನ ಕೊಂದು ಹರುಷದಿಂ ಬಂದು ಕರುಣದಿಂದ ನಿಂದು ಋಷಿಗಳಿಗಭಯವ[ನಿತ್ತು] 25 ದನುಜೆನಾಸಿಕವರಿದು ಖರದೂಷಣರ ತರಿದು ತಾನೊಲಿದು ಸತಿಗೆ ಗುಹೆಯಲ್ಲಿ ನಲಿದು26 ಬಂದು ರಾವಣ ಜಾನಕಿಯ ಕದ್ದೊಯ್ಯಲಂದು ಕೊಂದು ಮಾರೀಚನ ಗೃಧ್ರಗೆ ಮೋಕ್ಷಾವ [ನಿತ್ತು] 27 ಕಬಂಧನ ಗೆಲಿದು ಪಂಪಾತೀರದಿ ನಲಿದು ಶಬರಿಯಿತ್ತ ಫಲವನ್ನು ಸವಿದು ಹರಿಗೆ ತಾನೊಲಿದು 28 ಕುಟ್ಟಿ ವಾಲಿಯ[ನು] ರವಿಜಗೆ ಪಟ್ಟವ ಕಟ್ಟಿ ಸೃಷ್ಟಿಜಾತೆಯನರಸಲು ಕಪಿಗಳನಟ್ಟಿ 29 [ಭರದಿವಾನರ] ಕೈಲಿ ಉಂಗುರವಿರಿಸೆ ಆ ಮಾರುತಿ ಕಪಿಗಳುವೆರಸಿ ಜಾನಕಿ[ಯ]ನರಸೆ 30 ಶರಧಿಯನ್ಹಾರಿ ಸೀತೆಯ ನೋಡಿ ಗುರುತನು ತೋರಿ ದುರುಳನೊಡನ್ಹೋರಿ ಮಣಿಯ ತಂದನಾಧಾರಿ 31 ವನವನ್ನು ಮುರಿದು ಅಕ್ಷನ ತರಿದು ಅಸ್ತ್ರಕ್ಕೆ ಅ [ವನೊ]ಲಿದು ರಾವಣನೆದುರಲ್ಲಿ ನಲಿದು 32 ಪುರವೆಲ್ಲ ಸುಟ್ಟು ವಿಭೀಷಣನ ಗುಟ್ಟು ಬಾಲ ಶರಧಿಯೊಳಿಟ್ಟು ಕಪಿಗಳ ಸೇರಿದನಷ್ಟು 33 ಭಂಗಿಸಿ ಮಧುವನವ ಭರದಿಂದ [ರಾಮನೆಡೆಗೆ] ಲಂಘಿಸಿ ಮಾತೆಯ ಕಂಡೆವೆಂದೊಂದಿಸಿ ಮಣಿಯನಿರಿಸೆ 34 [ವರರಾಮ] ತಾ ನೋಡಿ ವ್ಯಸ ಮಾಡಿ ಹರಿಯನ್ನು ಕೂಡಿ ಆಲಿಂಗನೆ ಮಾಡಿ 35 ಹರಿಗನ ಕೂಡಿ ಭರದಿಂದಲೋಡಿ ಶರಧಿಯ ನೋಡಿ ಯೋಚನೆ ಮಾಡಿ 36 ವರುಣನ ವಂದಿಸಿ ವಿಭೀಷಣನ ಮನ್ನಿಸಿ ಶರಧಿಯ ಬಂಧಿಸಿ ಅಂಗದನ ಸಂಧಿಗೆ ಕಳುಹಿಸಿ 37 ಇಂದ್ರಜಿತುವೊಡನೆ ಛಂದದಿಂದಲೆ ಕಾದಿ ಬಂದ ಸರ್ಪಾಸ್ತ್ರವ ಖಗನಿಂದ ಬಿಡಿಸಿ 38 ಹಂಗಿಸಿ ರಾವಣನಕಿರೀಟವ ಮೈಯೆಲ್ಲ ನಡುಗಿಸಿ ಭಂಗಿಸಿ ತಾ ಜಗದೊಡೆಯನೆಂದೆನಿಸಿ 39 ಕುಂಭನಿಕುಂಭ ಕುಂಭಕರ್ಣರ ಕೊಂದು ಕುಂಭಿನಿಯೊಳು ನಿಂದನಂಬುಜನಾಭ 40 ಪತಿತಪಾವನ [ನನುಜನ] ಪಿತಾಮಹಾಸ್ತ್ರದಿ ಕಟ್ಟೆ ಹಿತದಿಂದೌಷಧಿ ತಂದ ಮಾರುತನ ಕುಮಾರ 41 ಮಾಯೆ ಸೀತೆಯನರಿ[ಯದೆ] ಮೋಹಪಡು ತ ಉ ಪಾಯದಿಂದಲೆ ಬಂದ ಮಾಯಾವಿಯೆಡೆಗೆ 42 ತಮ್ಮ ಲಕ್ಷ್ಮಣ ತಾನು ಹೆಮ್ಮೆಯಿಂದಲೆ ಕಾದಿ ಒಮ್ಮೆ [ಲೆ] ಅಸ್ತ್ರಗಳ ಸುಮ್ಮಾನದಿಂ ಬಿಟ್ಟು 43 ಸತ್ಯಮೂರುತಿ ಪವಿತ್ರ ತಾನಾದರೆ ಅಸ್ತ್ರವೆ ಶತ್ರುವ ಜಯಿಸಲೆಂದನಾಗ 44 ಎಂದು ಬಾಣವಬಿಡೆ ಇಂದ್ರಜಿತುವ ಕೊಂದು ಆ ನಂದದಿಂ ಲಕ್ಷ್ಮಣನ ಹೊಂದಿತಾ ಬಾಣ 45 ವಿರೂಪಾಕ್ಷ ಯೂಪಾಕ್ಷ ಶೋಣಿತಾಕ್ಪನ ಕೊಂದು ಮ ಕರಾಕ್ಷನ ಕೊಂದ ಮಹಾನುಭಾವರಾವಣನ 46 ಮೂಲಬಲವನ್ನೆಲ್ಲ ಲೀಲೆಯಿಂದಲೆ ನಿ ರ್ಮೂಲನ ಮಾಡಿ[ದ] ಲೀಲಾವಿನೋದದಿ 47 ಬಂಧುಗಳೆಲ್ಲರು ಮರಣ ಪೋಗಲು ಕಂಡು ಬಂದ ರಾವಣನು ತಾನು ಒಂದೆಮನಸಿನಲಿ 48 ಯಾರು ಇಲ್ಲದಾಗ ಚೋರತನದಲ್ಲಿ ನಾರಿಯ ಕದ್ದೊಯ್ದ ಧೀರ ಬಾರೆಂದ [ರಾಮ] 49 ಅಸ್ತ್ರಕ್ಕೆ ಅಸ್ತ್ರವ ಒತ್ತಿ ಬಿಡಲು ಆಗ ಮತ್ತೆ ಆಕಾಶವ ಮುತ್ತಿತು ಬಾಣ 50 ರಾಮರಾವಣರ್ಯುದ್ಧ ನೋಡಿ ಮಹಾಸುರರೆಲ್ಲ ಪ್ರೇಮದಿಂದಲೆ [ಹರಸಿದರು] ಆನಂದಗೂಡಿ 51 ಕತ್ತರಿಸಿದ [ರಾವಣನ]ಶಿರ ಮತ್ತೆ ಬೆಳೆಯಲು ನೋಡಿ ಚಿತ್ತದಿಂ ನೆನೆದು [ರಾಮ] ಬ್ರಹ್ಮಾಸ್ತ್ರದಿಂ ಕಡಿದ 52 ದಶಕಂಠನೆಂತೆಂಬ ಹಸನಾದ ವೃಕ್ಷವ ದಶರಥಸುತವಾತ ಬಂದು ಮುರಿಯಿತು 53 ರಾವಣನೆಂತೆಂಬ ವಾರಣ[ದ ಕೋಡ] ವೀರ ರಾ ಘವನೆಂಬ ಕೇಸರಿಯು ಮುರಿಯಿತು 54 ಪುಲಸ್ತ್ಯಪುತ್ರನೆಂಬ ರಾಜವೃಷಭವನ್ನು ಇಕ್ಷ್ವಾಕು [ಕುಲದ] ವ್ಯಾಘ್ರವು ಭಕ್ಷಿಸಿತಾಗ 55 [ಆಮಹಾ] ರಾಕ್ಷಸೇಂದ್ರನೆಂಬ ಜ್ವಲಿಸುವ ಅಗ್ನಿಯ [ಶ್ರೀ] ರಾಮಜೀಮೂತವು ಬಂದು ಕೆಡಿಸಿತು 56 ಸುರರೆಲ್ಲ ಜಯವೆಂದು ಪುಷ್ಪಗಳರಳನ್ನು ಕರೆಯಲು ಶಿರದಲ್ಲಿ ಧರಿಸಿದ [ತಾ] ಪರಮಪುರುಷನು 57 ರಾಕ್ಷಸೇಂದ್ರ [ವಿಭೀಷಣ]ಗೆ ಮಾಡಿ ರಾಜ್ಯಾ ಭಿಷೇಕವ ಮೂರ್ಜಗದಲಿ ಕೀರ್ತಿ ಪಡೆದ ರಾಘವ 58 ತಂದೆಗೆರಗಿ ಅಗ್ನಿತಂದ ಸೀತೆಯ ನೋಡಿ ಆ ನಂದದಿಂದಲೆ ಕೂಡಿನಿಂದ ರಾಘವನು 59 ಅಜಭವಸುರರೆಲ್ಲ ಭುಜಗಶಯನನ ನೋಡಿ ನಿಜವಾಗಿ ಸ್ತೋತ್ರ ಮಾಡಿದರು ನಿರ್ಮಲದಿ 60 ವೇದವನಿತ್ತು ಅಜನಿಗೆ ಭಾರವ ಹೊತ್ತು [ಆ] ಧಾರುಣಿಯ ತಂದು ಕಂಬದಿಂ ಬಂದು 61 ದಾನವ ಬೇಡಿ ಕ್ಷತ್ರಿಯಕುಲವನೀಡಾಡಿ ಜಾನಕಿಯ ತಂದು ಪ್ರಲಂಬನ ಕೊಂದು 62 ಕಾಳಿಯ ಒತ್ತಿ ಕುದುರೆಯ ಹತ್ತಿ ಜಗ ವೆಲ್ಲ ಸುತ್ತಿ ನಿಮ್ಮ ದರ್ಶನ ಮುಕ್ತಿ 63 ಜಗದೋದ್ಧಾರ ದುರಿತಕ್ಕೆ ದೂರ ಜಗಕೆ ಆಧಾರ ದುಷ್ಟರಿಗೆ ಕ್ರೂರ 64 ಪೃಥುವಿಯ ಪಾಲ ದಿಟ್ಟಗೋಪಾಲ ಸತ್ಯದಲಿ ಶೀಲ ರುಕ್ಮಿಣೀಲೋಲ 65 ಅರಿ ನಿ ಸ್ಸೀಮ ಭಕ್ತರಾಪ್ರೇಮ 66 ವಿಶಾಲನೇತ್ರ ಪರಿಪೂರ್ಣಗಾತ್ರ [ವ ರ] ಸೀತಾಕಳತ್ರ ಸುಗ್ರೀವಮಿತ್ರ 67 [ರಾಜ] ದಶರಥ ಬಾಲ ಜಾನಕೀಲೋಲ ಮೂರ್ಜಗಪಾಲ ಕೀರ್ತಿವಿಶಾಲ 68 ಸತ್ಯಮೂರುತಿ ಪವಿತ್ರ ನೀನೆ ಜಗಕೆ ಕರ್ತನೂ ಕಾರಣಮೂರ್ತಿಯೂ ನೀನೆ 69 ನಂದನಕಂದ ಮುಕುಂದ ಗೋವಿಂದ ಇಂದಿರಾರಮಣ ನೀನೆಂದು ಪೊಗಳಿದರು 70 ಪುಷ್ಪಕವನು ಏರಿ ಲಕ್ಷ್ಮೀಸಹಿತವಾಗಿ [ರಾಮ]<
--------------
ಯದುಗಿರಿಯಮ್ಮ
ಪ್ರಜೋತ್ಪತ್ತಿ ಸಂವತ್ಸರ ಸ್ತೋತ್ರ148ರಾಜ ರಾಜೇಶ್ವರಗೆ ರಾಜರಾಜೇಶ್ವರಿ ಪತಿಗೆರಾಜೀವಭವಪಿತಗೆ ಶರಣು ನಮೋ ಶ್ರೀಪದ್ಮನಾಭನಿಗೆಪಪ್ರಭವಾದಿ ಷಷ್ಠಿ ಸಂವತ್ಸರದಿ ಪ್ರಾಬಲ್ಯ ಪೆಚ್ಚಿವುದು ಈ ವರುಷಸುಪ್ರಜೋತ್ಪತ್ತಿ sಸಾಧು ಕ್ಷೇಮಕರ ಯೋಜನೆಗಳಿಗೆ ಸುಸಂಸ್ಕøತರುಪ್ರಾರಂಭಿಸುವುದಕೆ ಅನುಕೂಲ ಅಧಿಕಾರವರ್ಗವುಈ ರೀತಿ ತಿಳಿವುದು 1ಸಂವತ್ಸರ ರಾಜ ಸೂರ್ಯ ಮಂತ್ರಿಯೂ ಸಹ ತಂದತರ್ಯಾಮಿಸೂರಿಪ್ರಾಪ್ಯಘೃಣಿಯುಸರ್ವವಿಧದಲ್ಲು ದಯೆ ಪಾಲಿಸುವನವನಾಯಕರೊಳು ಸಹ ಇದ್ದುಸರ್ವೇಶ ಶ್ರೀಪ ಪದ್ಮನಾಭನು ಸ್ಮರಿಸುವವರ ಸುರಧೇನುವು 2ಸುಖಪೂರ್ಣ ಚಿನ್ಮಯನು ನಿತ್ಯತೃಪ್ತನುಪಜÕನ್ಯನೊಳುಇದ್ದು ಮಳೆಗರೆವಶ್ರೀಹರಿ ಅರ್ಕವಿಧು ಗ್ರಹನಕ್ಷತ್ರಗಳೊಳ್ಇದ್ದು ಜ್ಯೋತಿಹರಿಬೆಳಕುಕೊಡುವ ಮಕ್ಕಳು ಮೊಮ್ಮಕ್ಕಳು ಸುಖವೀವ ಶ್ರೀರಮೇಶನುವೇದನಾಯಕಿ ಎಂಬ ಉಮೆಯರಸನ ಸಂಗಮೇಶ್ವರೊಳಿದ್ದು 3ಸರ್ವವಾಂಛಿತವೀವ ಸರ್ವಸ್ಥ ಲಕ್ಷ್ಮೀರಮಣ ಸರ್ವೋತ್ತಮನುಸರ್ವಕಲ್ಯಾಣ ಸುಗುಣಾರ್ಣವನು ನಿದÉರ್ೂೀಷನುವಾಂಛಿüಸುವವರು ಪರವಿತ್ತಸ್ಥೇಯಪರನಿಂದಾ ವ್ಯಭಿಚಾರರೇತಸ್ಸÀ್ಸಂಗಮ ತ್ಯಜಿಸಲೇಬೇಕು 4ಬಾಲ ಮತ್ತು ಪ್ರೌಢ ವಿದ್ಯಾರ್ಥಿಗಳಿಗೆ ದೈವಭಕ್ತಿಮತ್ತು ಸಾಧುನೀತಿಗಳಪಾಠಗಳ ಬೋಧಿಸುವುದು ಅಧಿಕಾರವರ್ಗದವರು ಮಾಡಲೇಬೇಕುಇಳೆಯಲ್ಲಿ ಪ್ರಜಾಕ್ಷೇಮ ಅಭಿವೃದ್ಧಿ ಆಗಲಿಕ್ಕೆ ಇದುಉಪಾಯ ಹರಿದಯದಿ 5ವಸುಂಧರೆಯಲ್ಲಿ ಇನ್ನು ಬೆಳೆಯುವುದು ಪ್ರಜಾ ಉಪಯೋಗಆಗಿ ಮಿಕ್ಕದ್ದೇ ಪರದೇಶಕೆ ಕೊಡಬಹುದುಆಸುರೀ ಸಂಪತ್ತು ಬೆಳಸದೆ ದೈವಿ ಸಂಪತ್ತೇ ಗುರಿಯಾಗಿ ಸರ್ವರುತಮ್ಮ ತಮ್ಮ ಸಮಯಗಳ ನೀತಿಗಳ ಆಚರಿಸಲುರಾಷ್ಟ್ರ ಲೋಕಗಳಿಗೆ ಲಾಭ 6ಎನ್ನ ಮಾತುಗಳಲ್ಲ ಇವು ಕ್ಷೇಮಕರ ಪ್ರಜೋತ್ಪತ್ತಿಸ್ವಾಮಿಶ್ರೀಪದ್ಮನಾಭ ಶ್ರೀನಿವಾಸ ನುಡಿಸಿದವುಎನ್ನನ್ನು ಎನ್ನವರನ್ನು ಸರ್ವಲೋಕಜನರನ್ನುರಕ್ಷಿಸಲಿ ಶ್ರೀಹರಿ ಸರ್ವದಾ 7
--------------
ಪ್ರಸನ್ನ ಶ್ರೀನಿವಾಸದಾಸರು
ಮತದೊಳಗೆ ಒಳ್ಳೆ ಮತ ಮಧ್ವಮತವು - ರಘು - |ಪತಿಪೂಜಾವಿಧಾನಕೆ ಪಾವನ ಮತವುಪ.ನಾರಾಯಣನ ನಾಮ ತುಂಬಿದ ಮತವೇದ - |ಪಾರಾಯಣಕೆ ಅನುಕೂಲ ಮತವು ||ತಾರತಮ್ಯದಿ ಉದ್ಧರಿಸಿ ಶ್ರುತಿಗಳನೊರೆದಧಾರಣಿಸುರರ ಸಂತೋಷದ ಮತವು 1ಅಕಲಂಕ ಶ್ರೀಹರಿಗೆ ವಜ್ರಾಂಕಿತ ಮತವು |ಸಕಲ ದೇಶಕೆ ಸನ್ಮತವಾದ ಮತವು ||ಅಕುಟಿಲಶುಕ - ಸನಕಾದಿ ಮುನೀಂದ್ರರ |ನಿಖಿಲಕ್ರಿಯ ಪದವೀವ ನಿರ್ಮಲ ಮತವು 2ಸರಸ ಸದ್ಗುಣ ಸತ್ಯಸಾತ್ತ್ವಿಕ ಮತವಿದು |ಗುರುಶಿಷ್ಯರಿಗೆ ಅನುಕೂಲ ಮತವು ||ಪರಮತ ಖಂಡಿಸಿ ಪಂಡಿತರು ಪೇಳಿದ |ಪುರಂದರವಿಠಲನ ಮತವೆ ಹನುಮನ ಮತವು 3
--------------
ಪುರಂದರದಾಸರು
ಶರಣು ಶರಣೂ ಪ.ಮಹಾದೇವರಾ ಗರ್ಭದಲಿ ಉದ್ಭವಿಸಿದಿಯೊ ನೀನುಸಾಧುಮಾತೆಯ ಶಾಪವನ್ನು ಕೈಗೊಂಡುಆದಿಪೂಜೆಗೆ ಅಭಿಮಾನಿದೇವತೆಯಾದಿಮಾಧವನಮ್ಮ ಹಯವದನನ್ನ ಪ್ರಿಯ1ಹಿಮಗಿರಿಗೆ ಮಗಳಾಗಿ ಜನಿಸಿ ತಪವನು ಗೈದುಕಮಲಸಂಭವಸುತನ ಒಲಿಸಬೇಕೆಂದುರಮಣಿ ರಾಮಮಂತ್ರ್ರ ದಿನಸಹಸ್ರವು ಜಪಿಸೆಕಮಲಾಕ್ಷನೆಮ್ಮ ಹಯವದನನ್ನ ಪ್ರಿಯೆ 2ಮಡದಿ ಹೋದಾಗ್ರಹಕೆ ಜಡೆಯ ಕಿತ್ತಪ್ಪಳಿಸಿಕಡುಘೋರ ತಪಗೈಯೆ ಮನ್ಮಥನು ಬರಲುಕಿಡಿಗಣ್ಣಿನಲಿ ಅವನ ಭಸ್ಮವನು ಮಾಡಿದಿಕಡಲೊಡೆಯ ನಮ್ಮ ಹಯವದನನ್ನ ಪ್ರಿಯ 3ಮತ್ಸ್ಯದೇಶಕೆ ಪೋಗಿ ಮನದ ಚಿಂತೆಯಲಿರಲುತುಚ್ಛರಕ್ಕಸನು ನಿಮ್ಮನು ಪಿಡಿಯ ಬರಲುಚಿತ್ತದೊಲ್ಲಭಗ್ಹೇಳಿ ಕೊಚ್ಚಿಸಿದಿ ಅವನ ಶಿರಅಚ್ಯುತನಮ್ಮ ಹಯವದನನ್ನ ಪ್ರಿಯೆ4ಕೇಸರಿಯ ಗರ್ಭದಲಿ ಉದ್ಭವಿಸಿದಿಯೊ ನೀನುತ್ರೇತೆಯಲಿ ರಾಮರ ಸೇವೆಯನು ಮಾಡಿಭೂತಳದೊಳು ಭೀಮ ಕಡೆಗೆ ಯತಿಯಾಗಿ ನೀಶ್ರೀಪತಿ ಹಯವದನ ದೂತ ಪ್ರಖ್ಯಾತ 5ಈರೇಳು ಲೋಕದ ಜನರ ನಾಲಗೆಯಲ್ಲಿಬೀಜವನು ಬಿತ್ತಿ ಅನ್ನವ ಕೊಡುವ ತಾಯೆವಾರಿಜಸಂಭವನ ಹಿರಿಯ ಪಟ್ಟದ ರಾಣಿನೀರಜಾಕ್ಷನಮ್ಮ ಹಯವದನನ್ನ ಪ್ರಿಯೆ6ಜನನಿಹುಟ್ಟಿದ ನಾಳದಲ್ಲಿ ಜನಿಸಿದಿ ನೀನುಜನರ ಸೃಷ್ಟಿ ಸ್ಥಿತಿಗೆ ಕಾರಣನೆಂದುಅನಿಮಿಷರೆಲ್ಲರೂ ಸ್ತುತಿಸಿ ಕೊಂಡಾಡಲುವನಜಾಕ್ಷ ನಮ್ಮ ಹಯವದನನ್ನ ಪ್ರಿಯ 7ಪದ್ಮದಲ್ಲುದ್ಭವಿಸಿ ರಾಮರ ಕೈಹಿಡಿದುಪದ್ಮಾಕ್ಷನ ರಥಕ್ಕೆ ಕೈ ನೀಡಿ ಬಂದೆಪದ್ಮಾವತಿ ಎಂದು ಖ್ಯಾತಿ ಮೂರ್ಲೋಕದೊಳುಪದ್ಮಾಕ್ಷ ನಮ್ಮ ಹಯವದನನ್ನ ಪ್ರಿಯೆ 8ಅನಂತ ನಾಟಕಾನಂತ ಸೂತ್ರಧಾರಿಅನಂತ ಚರಿತ ನಿತ್ಯಾನಂದಭರಿತಅನಂತಾಸನ ಶ್ವೇತದ್ವೀಪ ವೈಕುಂಠಅನಂತಗುಣಭರಿತ ಹಯವದನ ಚರಿತ 9ಶರಣುಮತ್ಸ್ಯಕೂರ್ಮವರಾಹನಾರಸಿಂಹಶರಣು ವಾಮನಭಾರ್ಗವರಾಮಚಂದ್ರಶರಣು ಕೃಷ್ಣ ಬೌದ್ಧ ಕಲ್ಕ್ಯಸ್ವರೂಪನೆಶರಣು ಹಯವದನನ್ನ ಚರಣಗಳ ನುತಿಪೆ 10
--------------
ವಾದಿರಾಜ