ಒಟ್ಟು 14 ಕಡೆಗಳಲ್ಲಿ , 7 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಎರಡು ಮೃಗ ಬ್ಯಾಟಯಲಿ ಹೊರಟ್ಹೋಗುವಾ ಯಕ್ಷಾನುಗರಿಂದ ತಾ ಮೃತನಾಗುವಾ ಮಗ ಬಾರಾನೆಂದು ತಾಯಿ ಮಿಡುಕುತಾ ರಾಜ್ಯ ಅಗಲಿ ಹೋಗ್ವಳು ತಾ ಹುಡುಕುತಾ 7 ಅಂತ:ಕರುಣ ತಾಪದಲಿ ಕಾಡಾಕಿಚ್ಚಿ ನಂತದೊಳಗೆ ಬೀಳೋಳು ಗಾಡಾ ಚಿಂತೆಯಾಕೆ ನೃಪಹೋಗಿನ್ನ ನಿ ಶ್ಚಿಂತೆಯಿಂದಲಿ ರಾಜ್ಯ ಮಾಡಿನ್ನ 8 ಎಂದು ಹಸ್ತವ ಶಿರದಲ್ಲಿಟ್ಟು ಆ ನಂದದಿಂದಲಿ ವರಗಳನು ಕೊಟ್ಟು ಮುಂದನಡೆದ ಪಕ್ಷಿವಾಹನನು ಜಗ ದ್ವಂದ್ಯ 'ಶ್ರೀ ಅನಂತದ್ರೀಶ' ನು 9 ಪದ ಆದಿ ಮೂರುತಿ ಶ್ರೀರಮೇಶಾ ತನ್ನ ಧಾಮಕ್ಕ್ಹೋದನು ಮೋದರಹಿತನಾಗಿ ಬಾಲದೀರ್ಘ ಉಸುರಗಳದನು ಪೋದನೆಂದು ದು:ಖದಿಂದ ತಿರುಗಿ ಪುರಕ ನಡದನು ಯಾದವೇಶ ಹಾ ಮುರಾರಿ ಎಂದು ಆಗ ನುಡದನು 1 ಪೂರ್ವ ಪುಣ್ಯದಿಂದ ನಿನ್ನ ರೂಪ ಯನಗ ತೋರಿದಿ ಶರ್ವಮಿತ್ರಯೆನ್ನಾ ವಿಷಯ ಮಡುವಿನೊಳಗ ಹಾಕಿದಿ ಸರ್ವಕಾರ್ಯ ಬಿಟ್ಟು ಕರುಣಾದಿಂದ ಆಗ ನೋಡಿದಿ ಗರ್ವಯುಕ್ತನಾಗಿ ಯನ್ನಬಿಟ್ಟು ಈಗವೋಡಿದಿ 2 ಸಿಕ್ಕಿದಂಥ ದಿವ್ಯಮಾಣಿಕ್ಯ ಕಳದಂತಾಯಿತು ಫಕ್ಕನೆದ್ದು ಕುಳಿತು ಕಂಡಾಕನಸಿನಂತಾಯಿತು ಮಿಕ್ಕ ವಿಷಯ ಭೋಗ ಬೇಡಿ ಜನ್ಮ ವ್ಯರ್ಥವಾಯಿತು ತಕ್ಕ ಮುಕ್ತಿ ಬೇಡಲಿಲ್ಲಾ ಯನ್ನ ಬುದ್ಧಿ ಹೋಯಿತು 3 ಕ್ಲೇಶ ಬಿಟ್ಟು ಈಗ ಬಹಳ ವಿಷ್ಯ ಸೌಖತು” ಏಸು ಜನ್ಮ ಪೂಜೆ ಮಾಡಿದಾರು ದೇವ ದೊರಕನು ಮಾಸ ಪಂಚದಿಂದ ಯನ್ನ ದೃಷ್ಟಿ ವಿಷಯ ನಾದನು 4 ಆಶಿಇಂದ ಆಗ ವಿಷಯ ಸËಖ್ಯವನು ದೈವಕೆ ಮಾಡಿಕೊಂಡು ಹೀಂಗ ಮನಸ್ಸಿನಲ್ಲಿ ಬಂದ ಪಟ್ಟಣಕೆ ಕೊಂಡ ಪುರಸಮೀಪಕೆ 5 ಶ್ಲೋಕ ಆಗ ನೋಡಿದ ಒಬ್ಬ ಧ್ರುವನ್ನಾ ವೇಗ ಪುಟ್ಟಿತು ಮನಸಿಗೆ ತನ್ನ ಬ್ಯಾಗ ಪೇಳಿದ ಅರಿಸಿನ ಮುಂದಾ ಬಾಗಿ ಬಿನ್ನಯಿಸಿ ತಾನಯ ದಿಂದಾ 1 ಪದ ರಾಜಭೂಪಾನೆ ನಿನ ಕಂದ ಬಂದಾ|| ಪೂಜಿಸಿ ದೇವೇಶನ ಛಂದದಿಂದ || ಪರಿಪರಿಯಿಂದಾ ಗುರುಕೃಪೆಯಿಂದಾ | ತಿರುಗಿ ಇಲ್ಲಿಗೆ ಕ್ಷೇಮದಿಂದಲಿಂದಾ 1 ಪುಣ್ಯಗಳಿಂದಾರಣ್ಯದಲಿಂದಾ ಸಣ್ಣಬಾಲನು ಭಾಳನಂದದಿಂದಾ 2 ಅನಂತರದಿಂದಾ ಅನಂತ ಸÉೀವಿಂದಾ 'ನಂತ್ರಾದೀಶನಾ’ ದಯದಿಂದ ಲಿಂದಾ 3 ಆರ್ಯಾ ಕಾಂಬೆನು ಯಂದಾ ಹುಟ್ಟಿತು ಆನಂದಾ1 ಪದ ರಾಗ :ಶಂಕರಾಭರಣ ಆದಿತಾಳ ಸುದ್ದಿ ಹೇಳಿದಾತಾಗೆ ಬೇಕಾದ್ದು ಕೊಟ್ಟು ಹರುಷದಿಂದ ಯದ್ದು ರಥವಾನೇರಿ ತಾ ಸನ್ನದ್ಧ ನಾದನು 1 ಇಬ್ಬರ ಹೆಂಡಿರ ಕೂಡಿ ಒಬ್ಬ ಪುತ್ರನಿಂದ ಕೂಡಿ ಅಬ್ಬರದಿಂದಲಿ ತಾ ಉಬ್ಬುಬ್ಬಿ ನಡದಾನು 2 ಮಂತ್ರಿಗಳು ವಿಪ್ರಾರು(ಗಳು) ಮಂತ್ರಜ್ಞಾರು ಮಾನವಾರು ಸಂತ್ರೋಧಾರ ನಡದಾರು ಬಜಂತ್ರಿ ಘೋಷಾದಿ 3 ಮೃದಂಗ ಘೋಷ ಸಾರಿಸಾರಿ ನುಡದಾವು ಅಬ್ಬಾರದಿಂದಲಿ 4 ತಂಬೂರಿಘೋಷಾ ಜಾಣೆ ರಾಮಂಜುಳಗೀತಾವಾಣಿ ಘೋಷಾವು 5 ಅಂಗಾನೇರು ಕುಂಕುಮಾದಿ ಮಂಗಲ ಭೂಷಾದಿಂದ ಶೃಂಗಾರಿಸಿ ಕೊಂಡಾರು ಕುರಂಗ ನೇತೆÀ್ರರು 6 ಧಟ್ಟಿ ಪೀತಾಂಬರನುಟ್ಟ ಬಟ್ಟಾ ಕುಚದಲ್ಯೊಪ್ಪುವಾ ಕಠ್ಠಾಣಿ ಮೋಹನ ಮಾಲೆನಿಟ್ಟು ಕೊರಳಿಗೆ 7 ರಂಬೇರು ವೀಳ್ಯವ ಮೆದ್ದು ತಾಂಬೂಲಗಲ್ಲಾದಲ್ಯೊತ್ತಿ ತುಂಬಿ ಹರುಷದಿಂದ ಚಂದ್ರ ಬಿಂಬ ಮುಖಿಯರು 8 ಮೀರಿದಾ ಸಂಭ್ರಮದಿ ಶೃಂಗಾರವನು ಮಾಡಿಕೊಂಡು ಥೋರಾಗನ್ನಡಿಲಿ ತಮ್ಮ ಮಾರಿ ನೋಡೋರು 9 ಕುಡಿಗಣ್ಣ ನೋಟಾದವರು ನಡಸಣ್ಣಾದಿ ಬಳಕುವರು ಮಂದ ನಡಗಿ ವಂತರು 10 ಪಟ್ಟಾಣದಿಂದಲಿ ವಳ್ಳೇ ಧಿಟ್ಟನಾರಿಯರು ಕಾಲಾ ಬಟ್ಟಿನಲಿ ಕಾಲುಂಗುರ ಮೆಟ್ಟಿ ನಡದಾರು11 ಪರಿಪರಿ ವಿಲಾಸದಿಂದ ಕರದಲ್ಲಿ ಕರತಳಾನಿಕ್ಕಿ ಕಿರಿನಗಿಯಿಂದಲ್ಲೆ ನಗುತಾ ಬರುವುತೀಹರು 12 ಹಿಂಡುಜನರಾಗಳ ಕೂಡಿಕೊಡು ರಾಜಾಬಂದು ಮಗನಾರಥವಾನಿಳುದು ಅಪ್ಪಿಕೊಂಡಾ ಹರುಷದಿ 13 ಮೂಸಿ ನೋಡಿತನ್ನ ಜಲಜಾ ಲೋಚನಗಳಿಂದ ಜಲವಾಧರಿಸಿದ 14 ಛಂದಾದಿ ಬಾಲಾನು ತನ್ನ ತಂದಿ ಪಾದಾದೊಳು ಯರಗಿ ಪಾದ ಬಂದು ಯರಗಿದ 15 (ತಾಯಿಯರ ಪಾದಗಳಿಗೆ ಪೋರ ಬಂದು ಯರಗಿದ) ಸಾಧುತಂದಿತಾಯಿ ಆಶೀರ್ವಾದ ಯುಕ್ತನಾಗಿ ತನ್ನ ಮೋದ ಬಟ್ಟಾಳು 16 ಏಳಯ್ಯಾ ಎಳಯ್ಯಾಯೆಂದು ಭಾಳಾನಂದಾದಿಂದ ಲ್ಯಪ್ಪಿ ಭಾಳಾಯುಷ್ಯಾವಂತನಾಗೊ ಬಾಲಾಯೆಂದಾಳು 17 ಉತ್ತಮ ಧ್ರುವನು ತಾತಾ ಗುಣೋತ್ತಮ ಇಬ್ಬರು ಕೂಡಿ ಅತ್ಯಂತ ಹರುಷಗೊಂಡಾರಂತ:ಕರುಣದಿ 18 ಇಂದಿಗೆ 'ಅನಂತಾದ್ರೀಶಾ’ ಹೊಂದಿಸಿದಾ ನಮ್ಮಿಬ್ಬರಾ ನೆಂದು ಮಾತನಾಡಿದರು ಕಂದರಿಬ್ಬಾರು 19 ಛಂದ ಹೆತ್ತ ತಾಯಿಗೆ ಚಿತ್ತಸಂಭ್ರಮಾ ಮತ್ತ ಜನರಿಗೆ ಚಿತ್ತ ವಿಭ್ರಮಾ ಪುತ್ರನಷ್ಟಿ ತಾ ಯೆತ್ತಿಕೊಂಡಳು ಸುತ್ತ ಚಿಂತಿಯಾ ಮರ್ತುಬಿಟ್ಟಳು 1 ಸುಂದರಾಂಗಿಯ ಆನಂದ ಬಾಷ್ಪದಾ ಬಿಂದು ಸ್ನಾನವು ಕಂದ ಮಾಡಿದಾ ಮುಂದ ರಥದಲ್ಲಿ ಬಂದು ಕುಳಿತನು ಮುಂದಿರುವ ಬಾಲನ ಒಲಿದು ನೋಡುತಾ ಮೊಲಿಯ ಪಾಲು ಚೆಮ್ಮಿ ತಲಿಯಲಿ ಹರುತಾ ಹಲವು ರಾಜ್ಯಕೆ ಮುಂದ ಸೂಚನಾ2 ಕುದರಿಸೈನ್ಯದಿಂದ ನಡದನು ಭಾಳ ಬಿರುದಿನಾ ಕಾಳಿ ಊದುತಾ ತಾಳ ವಾದ್ಯವು ಭಾಳ ನುಡುವುತಾ ಕೇಳಿಪುರದಲ್ಲಿ ಬಾಲಪುರುಷರು ಮಾಳಿಗಿಯಲಿ ಭಾಳ ನಿಂತರು 3 ಉತ್ತಮಾರ್ಯರು ಮತ್ತ ಸ್ತ್ರೀಯರು ಹತ್ತಿ ಮಾಳಿಗಿ ಸುತ್ತ ನಿಂತರು ಯೆತ್ತ ನೋಡಲು ರತ್ನ ಭೂಷಿತಾ ಉತ್ತುಮಾ ಪುರಿ ಭರ್ತ ಪಾಲಿತಾ 4 ಸಾಲು ಸಾಲಕೆ ವಿಶಾಲ ಮಂಟಪಾ ಸಾಲ ದೀಪದಿ ಭಾಳ ಶೋಭಿಪಾ ಸೆಲ (ಚೆಲ್ವ?) ಮುತ್ತಿನ ಸಾಲಯಳಿಗಳು ಮ್ಯಾಲ ಮಲ್ಲಗಿ ಮಾಲಕಿಗಳು 5 ಆರ್ಯಾ ಮಂದ ಮಾರುತಾನಿಂದ ಭಾಳಮಕರಂದ ಪುಷ್ಟದಾ ವಾಸನವು ಮುಂದ ಪತಾಕಿಗಳಿಂದ ಕಣ್ಣಿಗೆ ಛಂತ ತೋರಿಪಾ ಪಟ್ಟಣ್ಣವು 1 ವೇಗದಿಂದ ರಥ ಸಾಗಿಸಿ ಧ್ರುವ ಛಂ ದಾಗಿ ನಡೆದನು ಪುರದೊಳಗೆ ಬ್ಯಾಗ ಗೋಪುರದ ಬಾಗಿಲದಾಟಿ ಪೋಗಿ ಕುಳಿತನು ಸಭಿಯೊಳಗೆ 2 ಬಾಲನ ಕಂಡು ಭೂಪಾಲನು ಹಿಗ್ಗುತಾ ಭಾಳಪುಟ್ಟಿ ಮನದುದ್ರೇಕಾ ಕಾಲ ಮೂಹೂರ್ತದ ವ್ಯಾಳಯವು ಸಾಧಿಸಿ ಬಾಲಗ ಮಾಡಿದ ನಭಿಷೇಕಾ3 ಕೊಟ್ಟರಾಜ್ಯವನು ಪಟ್ಟಗಟ್ಟಿ ಮುಂ ದಿಟ್ಟ ಶಿಖಾ ಮುದ್ರಿಕಿಯನ್ನು ಅಷ್ಟ ವಿಭೂತಿಗ¼ಷ್ಟು ಕೊಟ್ಟು ಸಂ ತುಷ್ಟನಾದ ಭೂಪತಿ ತಾನು 4 ಛಂದದಿ ದೇವರಿಗೊಂದಿಸಿ ಧ್ರುವ ಆ ನಂದದಿ ಬ್ರಾಹ್ಮರಿಗೆರಗಿದನು ತಂದಿ ತಾಯಿಗಳಿಗೊಂದಿಸಿ ಬಹುತ್ವರ ದಿಂದ ಏರಿದಾ ಪೀಠವನು 5 ಸುಂದರ ಸಭಿಯಲಿ ಬಂದು ಕೂಡಲು ದೇ ವೇಂದ್ರನಂತೆ ಬಹು ಶೋಭಿಸಿದಾ ಬಂಧು ಜನರಿಗ್ಯಾನಂದವ ತೋರುತ ಚಂದ್ರಮನಂತೆ ಶೋಭಿಸಿದ 6 ಝಗಿಝಗಿ ತೋರುವ ಬಗಿಬಗಿ ಕುಪ್ಪುಸ ಬಿಗಿಬಿಗಿ ಇಂದಲಿ ತೊಟ್ಟವರು ಲಗು ಬಗೆಯಿಂದಲಿ ನಗಿನಗಿ ಮಾತಿನ ಸೊಗಸು ಗಾರಿಕೆ ಬಲ್ಲವರು 7 ಥೊರಮುತ್ತು ಜರತಾರ ಮಯದ ಉಡ ಗೊರಿ ತಂದರು ಆ ಜನರು ಸಾರ ಸಿಂಹಾಸನಯೇರಿದ ಧ್ರುವನಿಗೆ ಆರುತಿ ತಂದರು ನಾರಿಯರು 8 ಮುತ್ಹಚ್ಚಿದ ಹೊಸ ನತ್ತುಗಳಿಂದಲಿ ಮತ್ತಿಷ್ಟೊಪ್ಪುವ ಮುಖದವರು ಪುತ್ಥಳಿ ಸರಘುನ ಮುತ್ತಿನ ಸರಗಳು ಉಳ್ಳವರು9 ಹತ್ಹೊರಷುದ ಮ್ಯಾಲ್ಮತ್ತೆರಡೊರ್ಷದ ಉತ್ತಮ ಪ್ರಾಯದ ಬಾಲಿಯರು ಮತ್ತ ಕಾಲುಂಗರ ವತ್ತೊತ್ತಿ ನಡುವುತ ಗತ್ತಿನಿಂದಲೆ ನಡುವುವರು 10 ಪದ ತಂದ್ರು ಆರುತಿ ಚಂದ್ರ ಮುಖಿಯಾರು ತಂದ್ರು ಆರುತಿ ಬಹು ಸುಂದರ ಸುಗುಣೇರು ಪ ಚಂದುಟಿ ಕಚ್ಚುತ ನಿಂದ್ರದ ಮದದ ಗ ಜೇಂದ್ರ ಗಮನಿಯರು ಬಂದ್ರಾಗಲೇ ದೇ ವೇಂದ್ರನ ಸಮರಾಜೇಂದ್ರನÀ ಸುತಗೆ ಅ.ಪ ಬಣ್ಣಗಾರಿಕೆಯಲಿ ಸಣ್ಣಕುಂಕುಮನಿಟ್ಟ ಕಣ್ಣಕುಡಿ ಹುಬ್ಬು ಕುಣಿಕುಣಿಸ್ಯಾಡುತ ಹೆಣ್ಕೋಕಿಲ ಸ್ವರ ಸಣ್ಕಂಠದಿ ನುಡಿ ಸಣ್ಕದಿ ಪಾಡುತ 1 ಕೈ ಬೆರಳಿಗೊಪ್ಪುವ ಹರುಳಿನುಂಗುರ ಇಟ್ಟವರು ಯರಳಿಯಂತೆ ಹೊರಹೊರಳಿ ನೋಡಿ ಮುಂ ಗುರುಳ ಗೂದಲಾ ತೀಡುವರು ಜಾಣಕಾಂತಿಯರು 2 ಮೇಲ್ಮಾಟದ ಬಗಿಯುಲ್ಮಾತಾಡುತ ಬಲ್ಮೋಹದಿ ಬಹು ಮೆಲ್ಲಮೆಲ್ಲನೆ ಹೆಜ್ಜೆ ನೆಲ್ಲ ಮ್ಯಾಲಿಕ್ಕುತ ಸೊಲ್ಮುಡಿನೇವರಿಸಿ ಮ್ಯಾಲ್ಮಲ್ಲಿಗಿ ಸರಗಳ ಮುಡಿಯವರು 3 ಸದ್ರಸ ಕುಂಕುಮ ಮುದ್ರಾಂಕಿತ ಕುಚ ಘದ್ರಿಸುತಲಿ ಬಹು ಉದ್ರೇಕದಿ `ಅನಂತಾದ್ರೀಶನ ' ಮುದ್ರಿಕಿ ಪದಗಳು ಘದ್ರಿಸಿ ನುಡಿವುತಾ ಭದ್ರಾಂಗಿಯರು 4 ಪದ ಮಂಗಳ ಮೂರುತಿ ಬಾಲಾಗೆ ಶ್ರೀ ನೃಪಾಲಾಗೆ ಮಂಗಳ ಗುಣಶೀಲಾಗೆ ಮಂಗಳಮೂರುತಿ ಛಂದಾ ಬಗಿಯಿಂದಾ ಪ ಶುಭದಿಂದಾ ಆನಂದದಿಂದಾ ಅಂಬೂಧಿಯೊಳಗಾಡಿ ಗಂಭೀರಾಗಿರಿಪೊತ್ತಾ ಜಾಂಬುನದಾಕ್ಷಾರಿ ವರ ಪ್ರಿಯಾಗೆ ಗಂಭೀರಾ ನೃಸಿಂಹಾನ ನೆಂಬಿ ರಕ್ಷಿತ ನೀಗೆ ರಂಭೇರು ಕರುಣಾದಿ ನೋಡಿ ಒಡಗೂಡಿ ಕೊಂಡಾಡಿ ತ್ವರಗೂಡಿ ಪಾಡಿ 1
--------------
ಅನಂತಾದ್ರೀಶ - ಕಥನಕಾವ್ಯಗಳು
ಇದೇ ಹೌದು ಭವತರಿಯುವ ಶಸ್ತ್ರ ಪದೇ ಪದೇ ಸಿರಿವರನ ಸ್ತೋತ್ರ ಪ ಅಧಮಮತಿಯ ಬಿಟ್ಟು ಸದಮಲ ಮನದಿಂ ವಿಧವಿಧ ಹರಿಯೆಂದೊದುರುತ ಕಾಣುವುದೆ ಅ.ಪ ದಾನಧರ್ಮಯಜ್ಞ ಇವು ಯಾಕೊ ಸ್ನಾನ ಮೌನ ಜಪ ಮತ್ತ್ಯಾಕೊ ನಾನಾ ಮಂತ್ರ ತಂತ್ರ ಗೋಜ್ಯಾಕೆಬೇಕೊ ಕ್ಷೋಣಿ ತಿರುಗಿ ಬಹು ದಣಿಲ್ಯಾಕೊ ನಾನಾಪರಿಯಲಿಂದ ದೀನದಯಾಪರ ಗಾನಲೋಲನ ಭಜನಾನಂದ ಪಡೆವುದೆ1 ವೇದಪುರಾಣ ಪುಣ್ಯ ಶಾಸ್ತ್ರಗಳ್ಯಾತಕೊ ಸಾಧನಸಿದ್ಧಿಗಳ ಬಲವ್ಯಾಕೋ ಭೇಧಯೋಗದ ಬಹು ಬೋಧಗಳ್ಯಾತಕೊ ಓದಿಓದಿ ದಿನಗಳಿಲ್ಯಾಕೊ ವೇದಗಮ್ಯದಾದಿ ಮೂರುತಿ ಶ್ರೀ ಪಾದವರಿತು ಆರಾಧಿಸುತಿರುವುದೆ 2 ಕಾಶಿ ಕಂಚಿ ಕಾಳಹಸ್ತಿ ತಿರುಗಲ್ಯಾಕೊ ಸಾಸಿರದೈವಕೆ ಬಾಗುವುದ್ಯಾಕೊ ಮಾಸಪಕ್ಷ ವ್ರತ ನೇಮಗಳ್ಯಾತಕೊ ಘಾಸಿಯಾಗಿ ದೇಹ ದಂಡಿಸಲ್ಯಾಕೊ ಶೇಷಶಯನ ನಮ್ಮ ಶ್ರೀಶ ಶ್ರೀರಾಮನ ಲೇಸಾದ ನಾಮವೊಂದೆ ಧ್ಯಾಸದಿಟ್ಟು ನುಡಿ 3
--------------
ರಾಮದಾಸರು
ಕುಟ್ಟಿ ಕೊಳ್ಳೊ ಮಾಣಿ ನಿನ್ನ ಹುಟ್ಟಿಸಿರುವ ದೈವಕೆ ಹೊಟ್ಟೆ ತುಂಬ ಬಾಯಿಗಾನು ಬಿಟ್ಟೆನೆಂದ್ರೆ ಕ್ಷೀರವಿಲ್ಲ ಪ ಕೊಟ್ಟು ಪಡೆಯಲಿಲ್ಲ ಮುನ್ನಹುಟ್ಟಿ ಪಡೆಯಲಿಲ್ಲ ಮುಂದೆ ಹಟ್ಟಿಯೊಳಗಣಾಕಳೆಲ್ಲ ನಷ್ಟವಾಯ್ತು ರೋಗದಿಂದ 1 ಅತ್ತು ಸಾಯ ಬೇಡ ನೀನು ಎತ್ತಿ ಕೊಂಬರೊಬ್ಬರಿಲ್ಲ ಭತ್ತವನ್ನು ಕುಟ್ಟಿ ನಾನು ತುತ್ತಮಾಡಿ ತಿನ್ನಿಸುವೆನು 2 ನೀರು ಕಾದು ಬಂತು ಬಿಸಿಯ ನೀರ ನೆರೆವೆನೀಗ ನಿನಗೆ ಸಾರಿ ಮೊಲೆಯ ನೂಡಿ ನನ್ನ ಸೀರೆ ಸೆರಗಹಾಸಿ ಕೊಡುವೆ 3 ದೊಡ್ಡ ಕೂಸ ಕಾಣೆಯವಳು ಗುಡ್ಡೆ ಬಸವಿಯಾದಳೀಗ ಚಡ್ಡೆಯಲ್ಲದೆ ಹೋಗುತಿಹಳು ಸಡ್ಡೆ ಮಾಡಳೆನ್ನಮಾತ 4 ಇಂತೆನುತ್ತ ಬಾಲಕನ್ನ ಸಂತವಿಟ್ಟು ನಾರಿ ಲಕ್ಷ್ಮೀ ಕಾಂತ ಮಾಡ್ದ ಲೀಲೆಗಳನು ನಿಂತು ಪಾಡಿಪೋದಳಾಕೆ 5
--------------
ಕವಿ ಪರಮದೇವದಾಸರು
ಜಯ ದೇವ ಜಯ ದೇವ ಜಯ ಗುರು ಮೈಲಾರಿ ಮನಮೈಲ ಮರ್ದಿಸಿದಯ್ಯ ನೀನೆ ಅಸುರಾರಿ ಧ್ರುವ ಖಡ್ಗವ ಕರದಲಿ ಪಿಡಿದು ಖಂಡಿಸಿದಙÁ್ಞನ ಖಂಡೇರಾಯೆನಿಸಿಕೊಂಡು ಪ್ರಕಟಿಸಿದನುದಿನ ಹಿಂಡದೈವಕೆ ಪ್ರಚಂಡನಹುದೊ ಪರಿಪೂರ್ಣ ಮಂಡಲದೊಳು ನಿಮ್ಮ ಕೊಂಡಾಡುದು ತಾ ಸುರಜನ 1 ಮಲಹರಣ ಮಾಡಲು ಧರಿಸಿ ಅವತಾರ ಮೂಲೋಕ ಪಾವನಮಾಡುವ ಸಹಕಾರ ಸಲಹುವೆ ಭಕ್ತಜನರಿಗೆ ನೀ ಘನ ಮಂದಾರ ಮಲೆತಿಹ ದೈತ್ಯರ ಸಂಹರಿಸುವೆ ನೀ ಅತಿಶೂರ 2 ಪತಿ ಅಹದು ಶ್ರೀಗುರು ಭೂಪತಿ ಬಾಹ್ಯಾಂತ್ರಿ ಬೆಳಗುವೆ ಶ್ರೀಪಾದಕೆ ಆರ್ತಿ ಇಹಪರಕೆ ದಾತನಹುದೊ ಶ್ರೀಪತಿ ಜಯಜಯವೆಂದು ಬೆಳಗುವೆ ದಾಸ ಮಹಿಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬ್ರಹ್ಮ ಸುಖದಲಿ ನಲಿದಾಡುವೆ ಧ್ರುವ ನಮೋ ಶ್ರೀ ಗಣನಾಯಕನಿಗೆ ನಮೋ ನಮೋ ಶ್ರೀ ಸರಸ್ವತಿಗೆ ನಮೋ ನಮೋ 1 ಸದ್ಗುರುವಿಗೆ ನಮೋ ಶ್ರೀ ಸ್ವಾಮಿಗೆ ನಮೋ ನಮೋ 2 ಇಷ್ಟದೈವಕೆ ನಮೋ ಮಹಿಮಗೆ ನಮೋ ನಮೋ 3 ಸೂತ್ರಾಂತ್ರಿಗೆ ನಮೋ ಸುಪಥಕೆ ನಮೋ ನಮೋ 4 ಸುಸರ್ವ ದೈವಕೆ ನಮೋ ರೂಪಕೆ ನಮೋ ನಮೋ 5 ಶಕ್ತಿಗೆ ನಮೋ ಮುನಿಗಳಿಗೆ ನಮೋ ನಮೋ 6 ಸುಭಾಗವತರಿಗೆ ನಮೋ ನಮೋ ನಮೋ 7 ಸುಮಹಿಮರಿಗೆ ನಮೋ ಸುತೀರ್ಥಕ್ಷೇತ್ರಕ್ಕೆ ನಮೋ ನಮೋ 8 ಸುಪುಣ್ಯಶ್ಲೋಕರಿಗೆ ನಮೋ ಸಜ್ಜನರಿಗೆ ನಮೋ ನಮೋ 9 ತ್ರೈಲೋಕ್ಯನಾಥಗೆ ನಮೋ ಸರ್ವೋತ್ಮಗೆ ನಮೋ ನಮೋ 10 ಸುಕರುಣಿಗೆ ನಮೋ ಭಕ್ತವತ್ಸಲಗೆ ನಮೋ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವೇನೆಂಬುದನರಿಯೋ ಮನುಜ ಮನ ವೇನೆಂಬುದನು ಧ್ರುವ ಮನವೇನೆಂಬುದನನುಭವಕೆ ತಂದು ಖೂನದಲಿಡದೆ ಜ್ಞಾನದಲಿ ನಾನಾ ಶಾಸ್ತ್ರವ ಓದಿ ನೀ ಅನುದಿನ ಏನು ಘಳಿಸಿದ್ಯೊ ಮರುಳ ಮನುಜ1 ಉತ್ಪತ್ತಿ ಸ್ಥಿತಿ ಲಯ ಕರ್ತನೆಂದೆನಿಸಿ ಪ್ರತ್ಯೇಕರವನು ತೋರುತಲಿ ಮತ್ತೆ ಬ್ಯಾರ್ಯಾದ ಪರಬ್ರಹ್ಮೆಂದು ತಾ ಚಿತ್ತ ಭ್ರಮಿಸುದು ದಾವುದೊ ಮನುಜ 2 ಏಕೋ ವಿಷ್ಣು ವೆಂದೆನಿಸಿ ಮುಖದಲಿ ಪೋಕ ದೈವಕೆ ಬಾಯದೆರೆಸುತಲಿ ನಾಕುವೇದವ ಬಲ್ಲವನೆಂದೆನಿಸಿ ವಿಕಳಿಸುತಿಹ್ಯದು ದಾವುದೊ ಮನುಜ 3 ಉತ್ತಮೊತ್ತಮರ ಕಂಡಾಕ್ಷಣ ಹರುಷದಿ ನಿತ್ಯಿರಬೇಕೀ ಸಹವಾಸವೆನಿಸಿ ಮತ್ತೊಂದರಘಳಿ ಗಾಲಸ್ಯವ ತೋರಿ ಒತ್ತಿ ಆಳುವದು ದಾವುದೊ ಮನುಜ 4 ಪಾಪವ ಮಾಡಬಾರದು ಎಂದೆನಿಸಿ ವ್ಯಾಪಿಸಿಗೊಡದೆ ಕಾಣದನಕ ಉಪಾಯದಲಿ ಅಪಸ್ವಾರ್ಥವು ಇದಿರಡೆ ಅಪಹರಿಸುವದು ದಾವುದೊ ಮನುಜ 5 ಪ್ರಾಚೀನವೆ ತಾಂ ನಿಜವೆಂದರುಹಿಸಿ ಆಚರಣೆಯ ಬ್ಯಾರೆ ತೋರುತಲಿ ನೀಚ ಊಚ ಹೊಡೆದಾಡಿಸುತ ನಾಚಿಸುತಿಹುದು ದಾವೊದೊ ಮನುಜ 6 ಸಗುಣ ನಿರ್ಗುಣ ಬ್ಯಾರೆರಡನೆ ತೋರಿ ಬಗೆ ಬಗೆ ಸಾಧನ ತೋರಿಸುತ ಬಗೆದೊಂದೆವೆ ಭಕುತಿಗೆ ನೆಲೆಗೊಳಿಸಿದ ಪ್ರಗತಿ ತೋರುವುದು ದಾವುದೊ ಮನುಜ 7 ಧ್ಯಾನಕೆ ಕೂಡಿಸಿ ಮೋನವ ಹಿಡಿಸಿ ಅನುದಿನ ಜಪವನು ಮಾಡಿಸುತ ಘನವಾಗಿಹÀ ಅನುಭವ ಸುಖದಾಟದ ಖೂನ ದೋರಿಸುದು ದಾವುದೊ ಮನುಜ 8 ಮರವಿಗೆ ತಾನೆ ಅರಿವೇ ಕೊಟ್ಟು ತಿರಿವು ಮರವಿನಂಕುರದ ಕುರ್ಹುವಿನ ಇರಹು ತೋರಿಸುದು ದಾವುದೊ ಮನುಜ 9 ಮನವಿನ ಮೂಲವು ತಿಳಿವದು ಭಾನುಕೋಟಿ ಪ್ರಕಾಶನ ಕರುಣದಲಿ ನಾನು ನಾನೆಂಬವರಿಗೆ ಇದರ ಖೂನ ಲೇಶ ತಿಳಿಯದೊ ಮನುಜ 10 ಹರಿಯೆ ಗುರುವೆಂದರುಹಿಸಿ ಆತ್ಮಲಿ ಶರಣಹೋಗುವ ಭಾವನೆದೋರಿ ತರಳಮಹಿಪತಿ ಗುರುದಯ ಪಡಕೊಂಡಿಂದು ಯೋಗ್ಯನಾಗುವದಿದೊಂದೆ ಮನುಜ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ರಕ್ಷಿಸೊ ಸ್ವಾಮಿ ನೀ ಪಕ್ಷಿ ಸುವಾಹನ ಭಿಕ್ಷೆ ಸುನೀಡೊ ನೀ ಲಕ್ಷ ಸುಸಾಧನ ಅಕ್ಷಯಾನಂದ ನೀ ಲಕ್ಷುಮಿ ಜೀವನ ಪಕ್ಷ ನೀ ಪ್ರಾಣಕ ಈಕ್ಷಿಸಿದವನ 1 ಸೃಷ್ಟಿಗಧಿಕ ನೀ ವಿಷ್ಣು ಜನಾರ್ಧನ ಕಷ್ಟ ನೀ ಹಿಂಗಿಸೊ ದುಷ್ಟರ ಮರ್ದನ ಶಿಷ್ಟರ ಪಾಲಕ ಶ್ರೇಷ್ಠ ನಾರಾಯಣ ದೃಷ್ಟಿಸಿ ನೋಡೊ ನೀ ಕೃಷ್ಣ ಕೃಪಾಘನ2 ಈಶನೆಂದರಿಯದೆ ದೋಷದ ರಾಶಿ ನಾ ವಾಸನೆ ಪೂರಿಸೊ ದಾಸರ ದಾಸ ನಾ ಏಸು ತಾ ಜನ್ಮಕೆ ಬಂದು ಸೂಸಿದೆನೊ ಹೇಸಿತು ಜೀವನ ಸ್ಮರಿಸಬೇಕೆಂದು ನಾ 3 ನಿಮ್ಮನೆ ನೋಡಬೇಕೆಂದು ಬಂದೆ ನಾ ಘಮ್ಮನೆ ಪೂರಿಸೊ ಭಾವನೆ ಕಂದನ ತಮ್ಮನೆ ಬೇಡಿಕೊಂಬುದು ತಾ ವಂದನ ಅಮ್ಮ ನಮ್ಮಪ್ಪನೆ ಬಂಧು ನೀ ಎಂದೆ ನಾ 4 ಕಾಣದ ಪಾಮರ ಹೀನ ಸೂಕರ ಏನು ತಾ ಬಲ್ಲದು ಲೂನದ ಸೂಕರ ನೀನೆ ದಯಾನಿಧೆ ಜ್ಞಾನದ ಸಾಗರ ನ್ಯೂನ ನೋಡದೆ ತಾರಿಸೊ ಶ್ರೀಧರ 5 ಪಾರ ನೀ ಗೆಲಿಸೊ ದ್ವಾರಕಿನಾಥನೆ ಸಾರಿ ನೀ ಬೋಧವ ತಾರಿಸೊ ದಾತನೆ ತೋರಿ ನೀ ಪಾದವ ಬೀರು ಸ್ವಹಿತನೆ ಸಿರಿ ಲೋಲನೆ ನೀಕರುಣಿಸಿ ಮಾತನೆ 6 ಪಾಲಿಸೊ ಪ್ರಾಣವ ಬಾಲಮುಕುಂದನೆ ಲಾಲನೆ ನೋಡು ಗೋಪಾಲ ಗೋವಿಂದನೆ ತ್ಯಕ್ತ ನಾ ತಾಳು ನೀ ಸಚ್ಚಿದಾನಂದನೆ ಕೀಲನೆ ಹೇಳು ನೀ ಭಕ್ತಿಯ ವಂದನೆ 7 ದೇವರ ದೇವನೆ ಕಾವ ಕರುಣನೆ ಜೀವದ ಜೀವ ನೀ ಸ್ವಾಮಿ ಸರ್ವೇಶನೆ ಭಾವದ ಭಾವ ನೀ ಸಾವಿರ ನಾಮನೆ ಸೇವೆಗೆ ಯೋಗ್ಯನ ಮಾಡು ಸರ್ವೋತ್ಮನೆ 8 ಹಿಂಡ ದೈವಕೆ ಪ್ರಚಂಡ ಪರೇಶನೆ ಗಂಡು ಹೆಣ್ಣಿಗೆ ತಾ ಒಬ್ಬ ಸರ್ವೇಶನೆ ಮಂಡಿ ಮರೆಯಲಿಹನೆ ಮಹೇಶನೆ ಕಂಡುಕಾಂಬ ಸುಖದೋರು ದೇವನೆ 9 ವೇದಕ ನಿಲ್ಕದಾಭೇದ್ಯ ಪುರುಷನೆ ಸಾರ ಸುರಸನೆ ಅದಿಗಿಂದತ್ತಲ್ಯಾನಾದಿ ನಿರ್ವಿಶೇಷನೆ ಹಾದಿದೋರಿಕೊಡೊ ಭಕ್ತಿಗೊಂದೀಶನೆ 10 ಮಹಿಪತಿಗೆ ನೀ ಸ್ವಾಮಿ ಶ್ರೀನಾಥನೆ ಬಾಹ್ಯ ಅಂತ್ರಕೆ ನೀನೆವೆ ಸುದಾತನೆ ಸೋಹ್ಯದೋರಿಕೊಡೊ ಸಾಹ್ಯವುಳ್ಳಾತನೆ ತ್ರಾಹಿಯಂದವನ ಮಾಡು ಸನಾಥನೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮರಿಸೊ ಮನವೇ ಹರಿಯ ನರಹರಿಯ ಅರಸಾಗ್ಯಾಳುವ ಸಿರಿಯ ಧ್ರುವ ಕರಿಯ ಕೇಳಿದ ಮೊರಿಯ ನೀನರಿಯ ಸುರರ ಬಿಡಿಸಿದ ಸರಿಯ ಧರೆಯೊಳಗಿದು ಖರಿಯ ಯುಗಮೊರಿಯ ಹೊರೆವನು ತಾ ಪರೋಪರಿಯ 1 ಸರ್ವದೈವಕೆ ಹಿರಿಯ ಮುರ ಅರಿಯ ಹರ ಹೃದಯದಲಿ ಪರಿಯ ಸ್ಮರಿಸುವದೀ ಪರಿಯ ದುರಿತ ಕರುಣಕಿಲ್ಲೀತನ ಸರಿಯ 2 ಸೆರಗವಿಡಿದು ಹರಿಯ ಪರಿಪರಿಯ ಅರಿಯೋ ನವವಿಧ ಪರಿಯ ಶರಣಾಗತರ ಸಿರಿಯ ಸುರವರ್ಯಾ ತರಳಮಹಿಪತಿ ದೊರೆಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಸದ್ಗುರುವೆ ನಿಮ್ಮ ಪಾದಕಮಲಕೆರಗುವೆ ಧ್ರುವ ಹಿಂಡುದೈವಕೆ ಪ್ರಚಂಡಮೂರ್ತಿ ಕೊಂಡಾಡುವ ನಿಮ್ಮ ಅಖಂಡ ಕೀರ್ತಿ 1 ಭಾವಭೋಕ್ತ ದೇವೋತ್ತಮ ಸೇವಿಸುವೆ ನಿಮ್ಮ ದಿವ್ಯನಾಮ 2 ಜಯ ಜಯ ಆನಂದ ಕಂದ ಧ್ಯಾಯಿಸುವೆ ನಿಮ್ಮ ಪಾದಾರವಿಂದ 3 ದಯಾಸಿಂಧು ದೇವ ದೇವ ಕಾಯೋ ಮಹಿಪತಿ ಪ್ರಾಣಜೀವ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏಳಿ ಮೊಸರ ಕಡೆಯಿರೇಳಿ-ಗೋ-|ಪಾಲ ಚೂಡಾಮಣಿ ಏಳದ ಮುನ್ನ ಪಇಂದುಮುಖಿಯರೆದ್ದು ಮುಖವನೆ ತೊಳೆದು ಶ್ರೀ-|ಗಂಧ-ಕಸ್ತೂರಿ-ಕುಂಕುಮಗಳಿಟ್ಟು ||ಚಂದ್ರಗಾವಿಯ ಸೀರೆಯ ನೀರಿವಿಟ್ಟು ಮು-|ಕುಂದನ ಪಾಡುತ ಚದುರೆಯರೆಲ್ಲ 1ಹೊಂಗೊಡ ಬೆಳಗಿಟ್ಟು ಪೊಸಮೊಸರನೆತುಂಬಿ|ರಂಗನೀಲದ ಕಡೆಗೋಲನಿಟ್ಟು ||ಶೃಂಗಾರವಾದ ರೇಶಿಮೆಯ ನೇಣನೆ ಹಿಡಿದು |ರಂಗನ ಪಾಡುತ ಚದುರೆಯರೆಲ್ಲ 2ಬಡನಡು ಬಳುಕುತ ಕುಚಗಳಲ್ಲಾಡುತ |ಕಡಗ-ಕಂಕಣ ಝಣಝಣರೆನ್ನುತ ||ಮುಡಿದ ಮಲ್ಲಿಗೆ ಹೂವು ಎಡಬಲಕುದುರೆ ಪಾ-|ಲ್ಗಡಲೊಡೆಯನ ಪಾಡುತ ಚದುರೆಯರು 3ಹುಸಿನಿದ್ದೆಯಲಿ ಶ್ರೀಕೃಷ್ಣನು ಮಲಗಿರೆ |ಹಸಿದು ಆಕಳಿಸಿ ಬಾಯಾರುತಲಿ ||ಮುಸುಕಿನೊಳಿದ್ದು ಬೆಣ್ಣೆಯ ಬೇಡುತಲಿರೆ |ಶಶಿವದನನಿಗೆ ಬೆಣ್ಣೆಯ ನೀಡಲೋಸುಗ 4ಏಣಾಂಕಮುಖಿಯರು ಹೊಸ ಬೆಣ್ಣೆಯನು ತೆಗೆದು |ಪ್ರಾಣಪದಕ ಕೃಷ್ಣನಿಗೆ ಕೊಡಲು ||ಚಾಣೂರ ಮಲ್ಲನ ಗೆಲಿದು ಬಾರೆನುತಲಿ ||ಜಾಣ ಪುರಂದರವಿಠಲನಪ್ಪಲುಗೋಪಿ5ದೃಷ್ಟಿಯು ತಾಗೀತೆಂದಿಟ್ಟು ಅಂಗಾರವ |ತಟ್ಟೆಯೊಳಾರತಿಗಳ ಬೆಳಗಿ ||ಥಟ್ಟನೆ ಉಪ್ಪು-ಬೇವುಗಳನಿವಾಳಿಸಿ|ತೊಟ್ಟಿಲೊಳಿಟ್ಟು ಮುದ್ದಾಡುವಳೊ 6ನಮ್ಮಪ್ಪ ರಂಗಯ್ಯ ಅಳಬೇಡವೊ ದೊಡ್ಡ |ಗುಮ್ಮ ಬಂದಿದೆ ಸುಮ್ಮನಿರು ಎನುತ ||ಅಮ್ಮಿಯನೀಯುತ ಅಮರರನಾಳ್ದನ |ರಮ್ಮಿಸಿ ರಮ್ಮಿಸಿ ಮುದ್ದಾಡುವಳೊ 7ಏಸೊ ಬೊಮ್ಮಾಂಡವ ರೋಮದೊಳಿರಿಸಿದ |ವಾಸುದೇವನನೆತ್ತಿ ಕೊಂಬುವಳೊ ||ನಾಶರಹಿತನಾಯುಷ್ಯ ಹೆಚ್ಚಲೆಂದು |ರಾಶಿದೈವಕೆ ತಾ ಬೇಡಿಕೊಂಬುವಳೊ 8ಮಾಧವಬಾ ಮದುಸೂದನ ಬಾ ಬ್ರ-|ಹ್ಮಾದಿವಂದಿತಹರಿಬಾ ಯೆನುತ ||ಆದಿ ಮೂರುತಿ ಶ್ರೀ ಪುರಂದರವಿಠಲನ |ಆದರದಲಿ ಮುದ್ದಾಡುವಳೊ 9
--------------
ಪುರಂದರದಾಸರು
ಕಲಿಯುಗದ ಮಹಿಮೆಯನು ಕಾಣಬೇಕಿಂತು ಪ.ಹರಿಸ್ಮರಣೆಯನು ಬಿಟ್ಟು ಹೀನರನೆ ಸ್ತುತಿಸುವರು |ಗುರುಹಿರಿಯರೊಳು ದೋಷವೆಣಿಸುತಿಹರು |ಪೊರೆದ ತಾಯ್ತಂದೆಗಳ ಮಾತ ಕೇಳದೆ ತಮ್ಮ |ತರುಣಿಯರ ನುಡಿಗಳನು ಲಾಲಿಸುತ್ತಿಹರು 1ಕಂಡುದನೆ ಹೇಳರು ಕಾಣದನೆ ಹೇಳುವರು |ಉಂಡ ಮನೆಗೆರಡನ್ನೆ ಎಣಿಸುತಿಹರು ||ಕೊಂಡಾಡಿ ಬೇಡಿದರೆ ಕೊಡರೊಂದು ರುವಿಯನ್ನು |ದಂಡಿಸುವರಿಂಗೆ ಧನಗಳನು ಕೊಡುತಿಹರು 2ಕಳ್ಳರೊಳು ಕಡುಸ್ನೇಹ ಸುಳ್ಳರೊಳು ಸೋಲುವರು |ಒಳ್ಳೆಯವರೊಡನೆ ವಂಚನೆ ಮಾಳ್ಪರು ||ಇಲ್ಲದ ಅನಾಥರಿಗೆ ಇದ್ದಷ್ಟು ತಾವ್ ಕೊಡರು |ಬಲ್ಲಿದವರಿಗೆ ಬಾಯ ಸವಿಯನುಣಿಸುವರು 3ಪಟ್ಟದರಸಿಯನಗಲಿ ಮೋಸದಲಿ ತಪ್ಪುವರು |ಕೊಟ್ಟ ಸಾಲವ ನುಂಗಿ ಕೊಡದಿಪ್ಪರು ||ಮುಟ್ಟಿ ಪರಹೆಣ್ಣಿಂಗೆ ಮೋಸದಲಿ ಕೂಡುವರು |ಬಿಟ್ಟು ಕುಲಸ್ವಾಮಿಯನು ಬಡದೈವಕೆರಗುವರು 4ಮಾಡಿದುಪಕಾರವನು ಮರೆತುಕಳೆವರು ಮತ್ತೆ |ಕೂಡಾಡಿ ಬೇಡುವರು ಕುಟಿಲತ್ವದಿಂದ ||ರೂಢಿಗೊಡೆಯನು ನಮ್ಮ ಪುರಂದರವಿಠಲನ |ಪಾಡಿ ಪೊಗಳುವರಿಂಗೆ ಭವಭಯಗಳಿಲ್ಲ 5
--------------
ಪುರಂದರದಾಸರು
ಶ್ರೀ ವೆಂಕಟೇಶನ ಬಿಡಬೇಡಿ ಪ.ಹಲವು ದೈವಕೆ ಹಲ್ಲು ತೆರೆಯದೆ ಹೊಗಳದೆಛಲದೆ ಮನದಣಿಯೆ ಕೊಂಡಾಡಿ 1ಸುರಭಿಯ ಬಿಟ್ಟು ಕಂಡಾವಿನ ಬೆಂಬತ್ತಿತಿರುಗದೆ ಕಣ್ಣುದಣಿಯೆ ನೋಡಿ 2ಸ್ಥಿರವಲ್ಲ ಮಿಕ್ಕವರ ವರಂಗಳು ಚರಂಗಳುಪರಸನ್ನವೆಂಕಟಪತಿಯ ಬೇಡಿ 3
--------------
ಪ್ರಸನ್ನವೆಂಕಟದಾಸರು