ಒಟ್ಟು 8 ಕಡೆಗಳಲ್ಲಿ , 7 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುತಕೆ ಮುಟ್ಟದೆ ಗುರುತದ ಮಾತನು ಆಡಬೇಡ |ಗುರುವಿನ ಸನ್ಮುಖ ಗರ್ವ ಅಹಂಕಾರ ಮಾಡಬೇಡ ಪ ನರಜನ್ಮಕೆ ಬಂದು (ಅಸಿದ್ಧದವರ ಕಾಡಬೇಡ) ಗುರುವಿನ ಭಕ್ತಿಯ ಮಾಡದವನ ಮೋರೆ ನೋಡಬೇಡ 1 ಮನದೊಳಗಿನ ಮಾತು ಸದ್ಗುರುವಿನ ಮುಂದೆ ಮುಚ್ಚಬೇಡ |ಧನವಗಳಿಸಿಕೊಂಬ ನಾ ಬಲು ದೊರೆಯೆಂದು ನೆಚ್ಚಬೇಡ 2 ಎನ್ನ ನೆಂಟರ ಚಿಂತಿಯ ಮನೆಯೊಳು ಸೇರಬೇಡ |ಜ್ಞಾನಬೋಧನ ಪ್ರಭು ಗೋವಿಂದನ ಮಾತು ಮೀರಬೇಡ 3
--------------
ಜ್ಞಾನಬೋದಕರು
ದೊರೆಯೆಂದು ನಂಬಿದೆ ನಿನ್ನ ಪ ಇರುವೇ ಮೊದಲು ವಿಧಿ ಪರಿಯಂತವು ಪ್ರಾಣಿ ಹೊರಗೊಳಗೆ ವ್ಯಾಪಿಸಿರ್ಪ ಅ.ಪ ಯಾರು ಬಲ್ಲರೋ ನಿನ್ನಾ ಪಾರ ಮಹಿಮೆಯನ್ನ ಶ್ರೀನಾರಾಯಣ ಸುಪ್ರಸನ್ನಾ 1 ದಾಸರನೆಲ್ಲಾ ಪೋಷಿಸಬಲ್ಲಾ ಈಶನೀನಲ್ಲದಿನ್ನಿಲ್ಲಾ 2 ಕರಿವರದನೆಂದು ಮರೆ ಹೊಕ್ಕೆÀ್ಕನಿಂದು | ಶ್ರೀ ಗುರುರಾಮವಿಠಲ ಬಂದು 3
--------------
ಗುರುರಾಮವಿಠಲ
ನಿನ್ನ ಮನ ಬಂದಂತೆ ವಿಹರಿಸೊ ಸಿರಿಕೃಷ್ಣ ಎನ್ನ ಸ್ವಾಮಿ ನೀ ಎಂದು ಮರುಳಾದೆನಲ್ಲದೆ ಪ ಬೊಮ್ಮ ಮೊದಲು ಸುರೋತ್ತಮದ ಪಾದ ಧುಮ್ಮಿನೊಳು ಮುಳುಗಿಹೆ ಎಮ್ಮಯ್ಯ ಕೇಳು 1 ಸರ್ವಜ್ಞನೆಂಬಿಯಾ ಉರ್ವಿಯ ಪತಿಗಳು ಸರ್ವ ಜನಗಳಾ ಪೆÀೂರ್ವರೆ ಕಂಡೀಗ2 ಅಕ್ಷೀಣ ಶಕುತೆಂಬ ದಾಕ್ಷಿಣ್ಯವಿಲ್ಲದೆ ಸುಕ್ಷೀಣ ಜನರನ್ನು ರಕ್ಷಿಪರಯ್ಯ 3 ಭಕುತ ವತ್ಸಲನೆಂಬೊ ಭಕುತಿಯು ಎನ್ನಲ್ಲೆ ಯುಕುತವಾಗಿಹವು ವ್ಯಕತ ನಿನಗಲ್ಲವೆ 4 ಶರಣರ ದೊರೆಯೆಂದು ಕರುಣ ಮಾಡುವೆನೆಂಬ ಸಿರಿ ವಾಸುದೇವವಿಠಲ ಕರುಣಿಸಾಲಸ್ಯವ್ಯಾಕೊ 5
--------------
ವ್ಯಾಸತತ್ವಜ್ಞದಾಸರು
ಬಾ ಬಾ ಬಾರೈಯ್ಯಾ ಶ್ರೀ ಗಿರಿದೊರೆಯೆ ಸಿರಿ ಹರಿಯೆ ಚಿ ಪ ನೀ ಬರುವೆಂದಬುಜಾಭವಾದೀ ಸುರರು ಕಾದೂಕೊಂಡಿಹರು ಶ್ರೀ ಭೂಮಿ ಸಹಿತದಿ ಶ್ರೀ ಗಿರಿಯಿಳಿದು ಈ ಭವನವನು ನೀ ಪಾವನ ಮಾಡಲು ಅ.ಪ ಕರೆದರೆ ಬರೆ ಯಾಕೊ ಬಡವರೊಳೀಪರಿಯ ಪಂಥವು ಸಾಕೊ ಸುಲಭನಾಗಿರಬೇಕೊ ಕೊಡುವ ದೊರೆಯೆಂದು ದೃಢದಿ ತಿಳಿದು ನಿ ನ್ನಡಿ ಬಿಡದೆ ಬಲು ಕಾಡದೆ ಬಿಡುವರೆ 1 ಭವ ಶರಧಿಗೆ ನಾವೆ ಬಡವರಾದರೀಯೂ ನೀನಲ್ಲವೆ ಕೊಡೆನಗೆ ನಿನಸೇವೆ ಒಡೆಯ ನೀನಲ್ಲದೆ ಬಡದೇವತೆಗಳು ಕೊಡಬಲ್ಲವೆ ಪೇಳು ತಡಮಾಡದೆ ನೀ 2 ಹದಿನಾಲ್ಕು ಲೋಕದೊರೆಯು ನೀನು ಎನುತ ತಿಳಿದು ನಾನು ಪದುಳದಿ ನಿನ್ನ ಸೇವಿಸ ಬಂದೆನು ಕೇಳಯ್ಯಾ ಇನ್ನು ಪದುಮನಾಭನೆ ನೀ ಸದಯದಿ ನೋಡಿ ಇದನೆ ಕರುಣಿಸು ನಿನ್ನ ಪದಸೇವೆಯನು 3 ಸಿರಿ ಧರೆ ನಾರಿಯರ ನಾ ಕೇಳಲಿಲ್ಲಾ ಕೊಟ್ಟರು ಬೇಕಿಲ್ಲ ದೊರೆತನ ಬಯಸಿ ನಾ ಬೇಡ ಬಂದಿಲ್ಲ ಕೇಳೆನ್ನೆಯ ಸೊಲ್ಲ ಪರಿ ಬೇಡುವೆ ನಿನ್ನ ಪದಸೇವಕರ ಪರಿಚಾರಕರನೆನಿಸೊ ಪರಮ ದಯಾಳೊ 4 ಮಾತಿದು ಪುಸಿಯಲ್ಲ ನೀರಜ ಭವಾಂಡದಿ ನಿನಗೆದುರ್ಯಾರಿಲ್ಲ ರಂಗೇಶವಿಠಲ ದೂರ ನೋಡುತಲಿ ಘೋರಪಾತಕರೊಳು ಸೇರಿಸದೆನ್ನನು ಪಾರುಮಾಡಲು ಬೇಗ5
--------------
ರಂಗೇಶವಿಠಲದಾಸರು
ಶ್ರೀಶ ಕರುಣಾಭೂಷ ಶ್ರೀನಿವಾಸ ರಕ್ಷಿಸು ವೀಶಗಮನ ಪ. ತಂದೆ ತಾಯಿ ಸಹಜ ಮುಖ್ಯ ಬಂಧ ಬಳಗವೆಲ್ಲವು ನೀ- ಇಂದು ನಂಬಿದೆ ಇಂದಿರೇಶ ತನ್ನ ಮನಕೆ ಬಂದ ತೆರವ ಮಾಳ್ಪ ಭವ- ಸಿಂಧು ಪೊತ್ತ ನಿನ್ನ ದಾಸನೆಂದು ತಿಳಿದಾನಂದಗೊಳಿಸು 1 ನಿಗಮವೇದ್ಯ ನಿನ್ನೊಳಿರುವ ಅಘಟಿತಘಟನ ಶಕ್ತಿ ಬಗೆಯ ತೋರಿ ಪೊರೆವಿ ಎನ್ನ ಮಗುವಿನಂದದಿ ಅಗಣಿತಾನಂದ ಚಿದಾತ್ಮ ಜಗದಿ ನಿನ್ನ ಪೋಲ್ವ ಕರುಣಾ ಳುಗಳನೆಲ್ಯೂ ಕಾಣೆ ಶಕ್ರಾದಿಗಳು ಸೇರುವರು ನಿನ್ನನೆ 2 ಸರಸಿಜಾಕ್ಷ ಪಾದಪದ್ಮ ಸ್ಮರಣೆ ಮಾತ್ರದಿಂದ ಸರ್ವ ಪುರುಷಾರ್ಥಂಗಳೆಲ್ಲ ಸೇರಿ ಬರುವುದೆಂಬುದಾ ಅರಿಯದಂಥ ಮೂಢರೆಲ್ಲ ಬರಿದೆ ಬಯಲು ಭ್ರಾಂತಿಗೊಳಿಸುವ ಉರಗ ಶಿಖರವಾಸ ನೀನೆ ದೊರೆಯೆಂದು ನಾನೊರೆವೆ ಶ್ರೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ಧರಣಿಗೆ ದೊರೆಯೆಂದು ನಂಬಿದೆ - ಇಂಥ - |ಪರಮಲೋಭಿಯೆಂದು ಅರಿಯೆ ಶ್ರೀ ಹರಿಯೆ ಪಕಾಡಿಬೇಡುವರಿಗೆ ಕೊಡಲಾರದೆ ಅಂಜಿ |ಓಡಿ ನೀರೊಳು ಸೇರಿಕೊಂಡೆ ಬೇಗ ||ಹೇಡಿಯ ತೆರದಲಿ ಮೋರೆಯ ತೋರದೆ |ಓಡಿ ಅರಣ್ಯದಿ ಮೃಗಗಳ ಸೇರಿದೆ 1ಬಡವರಬಿನ್ನಪ ಲಾಲಿಸದಲೆ ಹಲ್ಲ |ಕಡುಕೋಪದಲಿ ತೆರೆದಂಜಿಸಿದೆ ||ತಡೆಯದೆ ಭಿಕ್ಷುಕನಾದರು ಬಿಡರೆಂದು |ಕೊಡಲಿಯ ಪಿಡಿದುಕೋಡಗ ಹಿಂಡ ಕಾಯ್ದೆಯೊ2ಉತ್ತಮನೆಂದರೆ ಮತ್ತೆ ಚೋರನಾದೆ |ಬತ್ತಲೆ ನಿಂತು ತೇಜಿಯನೇರಿದೆ |ಎತ್ತಪೋದರು ಬಿಡೆ ಬಿಡೆ ನಿನ್ನ ಪಾದವ |ಚಿತ್ತಜ ಜನಕ ಶ್ರೀ ಪುರಂದರವಿಠಲನೆ3
--------------
ಪುರಂದರದಾಸರು
ಶ್ರೀ ನರಸಿಂಹ ಸ್ತೋತ್ರ11ವಂದಿಸು ನರಹರಿಯ ಮನವೆ ವಂದಿಸು ನರಹರಿಯವಂದ್ಯವಂದ್ಯನು ಬಹು ಸುಂದರ ಸುಖಮಯಇಂದಿರರಸ ಅರವಿಂದ ಸುನಾಭನ ವಂದಿಸು ನರಹರಿಯ ಪಸಿಂಧುಸಂಚರ ಬಹು ಸುಂದರ ಗಿರಿಧರತಂದನು ವಸುಧೆಯ ಕಂದನ ಕಾಯ್ದ ಪುರಂದರವರದ ಮುನೀಂದ್ರ ಕುಮಾರ ಕಪೀಂದ್ರಗÉ ಒಲಿದಮರೇಂದ್ರಗೆ ಬೋಧಿಸಿನಿಂದ ದಿಗಂಬರಕುಂಭಿಣಿಸುರನುತಮಂದರಗಿರಿ ಎತ್ತಿ ಸಿಂಧುವಿಂದಲಿ ಬಂದುಅಂಧ ಮೂಢರ ತನ್ನ ಅಂದ ಮೋಹದಿಕಟ್ಟಿದಾನ್ತ ಸುರರಿಗೆಲ್ಲ ಚಂದ ಸುಧೆಯನಿತ್ತಇಂದಿರಾಕಾಂತನನಂತ ಸುಗುಣಗಳಚಿಂತಿಸಿ ಯೋಗ್ಯದಿ ಕಂದದ ಪ್ರೇಮದಿವಂದಿಸು ನರಹರಿಯ 1ವೇದಾಂತರ್ಗತಬಾದರಾಯಣಹರಿಪಾದಾರಾಧಕಮೋದಸುತೀರ್ಥರಪಾದಾವಲಂಬಕ ಸಾಧು ಸುಮೇಧರಹೃದಯಾಕಾಶದಿ ಪದುಮದ ಮೂಲದಿಸದಮಲಾತ್ಮನಾದಿತ್ಯನುಪೋಲುವಿಧವಿಧಭಾಸದಿ ಪದೆ ಪದೆ ನೋಡುತವಿಧಿಯ ತಾತನ ಬಹುಮೋದಸುಗುಣಗಳಮುದದಲಿ ಚಿಂತಿಪಕೋವಿದಹಿರಿಯರಪಾದಸುಪಾಂಶುವ ನಿಯಮದಿ ಪೊಂದಿ ನೀಪದುಮೇಶನ ನಿನ್ನ ಹೃದಯದಿ ಚಿಂತಿಸಿವಂದಿಸು ನರಹರಿಯ 3ನಿಜಸುಖಮಾರ್ಗದಿ ಭಜಕ ಬಾಲಕ ಪೋಗೆಅರ್ಜಿತ ದ್ವೇಷದಿ ಮೂರ್ಜಗ ಶತ್ರುಗಜಾದಿಗಳಿಂ ಹೆಜ್ಜೆಜ್ಜೆಗೆ ಬಾಧಿಸೆಧೂರ್ಜಟಸೇವ್ಯ ಜನಾರ್ಧನ ನರಹರಿಗರ್ಜಿಪ ವದನನು ಸಜ್ಜನಪಾಲಕಅಜಸುರರೆಲ್ಲರು ತೇಜೋಮಯ ಅತಿಜ್ವಲಿಸುವ ನಖದಿಂ ದುರ್ಜನ ರಾಜನಜೋಜ್ಜೆಯ ಛೇದಿಸಿ ಭಜಕಗೆ ವರವಿತ್ತುಸೃಜ್ಯಾಸೃಜ್ಯರ ಪ್ರಾಜÕನ ಮರೆಯದೆವಂದಿಸು ನರಹರಿಯ 3ಸೃಷ್ಟ್ಯಾಧೀಶನದೃಷ್ಟನಾಗಿರುತಿಹಸೃಷ್ಟಾಸೃಷ್ಟ ಪ್ರವಿಷ್ಟಾಸೃಷ್ಟನುಶಿಷ್ಟರ ಇಷ್ಟ ಸುದೃಷ್ಟಿಯ ಬೀರುತಶಿಷ್ಟರ ಬಹು ವಿಧ ಕಷ್ಟಗಳಳಿದುಅಭೀಷ್ಟಗಳೀವನು ದುಷ್ಟರ ಶಿಕ್ಷಿಪಭ್ರಷ್ಟಜನರಿಗಿವ ಸ್ಪಷ್ಟನಾಗುವನಲ್ಲಶ್ರೇಷ್ಠೋತ್ತಮಪರಮೇಷ್ಠಿಜನಕನಿವಕಾಷ್ಟಾಗ್ನಿಯವೊಲ್ ಅದೃಷ್ಟಾದೃಷ್ಟನುದುಷ್ಟದೂರ ವಾಸಿಷ್ಠ ಶ್ರೀ ಕೃಷ್ಣನುತಿಷ್ಟನು ನಿನ್ನೊಳುತ್ಕøಷ್ಟನೆಂದರಿತುವಂದಿಸು ನರಹರಿಯ 4ಸರಿಪರರಿಲ್ಲದ ಸಿರಿಯರಸನಚಾರುಚರಣಾರಾಧನ ಪರಸುಖವೀವುದುಸಿರಿದೊರೆ ಸುಹೃದನು ಸಿರಿಸಹ ಮೆರೆಯುತಅರಿತ ಸುಜನರನು ಪೊರೆವನು ದಯದಿಮೊರೆಯನು ಲಾಲಿಸಿ ಪೊರೆದನು ಗರ್ಭವಮರೆತು ನಾರಾ ಎಂದ ನರಸುರಗೊಲಿದನುಪೊರೆದನು ದಯದಿ ನರಾಧಮ ಎನ್ನನುಕರಿವರ ದ್ರೌಪದಿವರದ ವಿಖ್ಯಾತನುಸರಸಿಜಭವತಾತ ಪ್ರಸನ್ನ ಶ್ರೀನಿವಾಸಪೊರೆವನು ನೆನೆವರ ಸಿರಿಭೂದೊರೆಯೆಂದುವಂದಿಸು ನರಹರಿಯ 5
--------------
ಪ್ರಸನ್ನ ಶ್ರೀನಿವಾಸದಾಸರು
ಹೊಡೆಯೊ ನಗಾರಿ ಮೇಲೆ ಕೈಯ |ಆನಂದಮದವೇರಿ ಗಡಗಡ ಪ.ಮೃಡಸಖನಪಾದ ಬಿಡದೆ ಭಜಿಂಸರಫ |ಬಿಡಿಸಿ ಕಾಯ್ವ ಜಗದೊಡೆಯ ಶ್ರೀ ಹರಿಯೆಂದು 1ವೇದಗಮ್ಯ ಸಕಾಲಾರ್ತಿನಿವಾರಕ |ಮೋದವೀವ ಮಧುಸೂದನ ದೊರೆಯೆಂದು 2ಗಾನಲೋಲ ತನ್ನ ಧ್ಯಾನಿಸುವರನೆಲ್ಲ |ಮಾನದಿಂದ ಕಾಯ್ವ ಶ್ರೀನಿಧಿ ಪರನೆಂದು 3ನಿಷ್ಠೆಯಿಂದಲಿ ಮನಮುಟ್ಟಿ ಭಜಿಸುವರ |ಕಷ್ಟವ ಕಳೆವ ಶ್ರೀ ಕೃಷ್ಣನು ಪರನೆಂದು 4ಈ ಪೃಥಿವಿಯೊಳಗೆ ವ್ಯಾಪಕನಾಗಿಪ್ಪ |ಶ್ರೀಪತಿ ಪುರಂದರವಿಠಲನು ಧಣಿಯೆಂದು 5
--------------
ಪುರಂದರದಾಸರು