ಒಟ್ಟು 7 ಕಡೆಗಳಲ್ಲಿ , 5 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಂತೆಯಾತಕೆ ನಿನಗೆ ಎಲೆ ಪ್ರಿಯಳೆ | ಸಂತತ ತಿಳುಪುವೆನು ಭಕುತಿಯಿಂದಲಿ ಕೇಳು ಪ ಈ ಭೋಗ ನಮಗೆ ಯಾಕೆಂದು ನೀ ಕೇಳುವಿಯಾ | ಲಾಭವಲ್ಲದ ಇದು ನೋಡುವದಕೆ ಶ್ರೀ ಭೂರಮಣ ತಾನೆ ತಂದಿತ್ತ ವಿಚಿತ್ರ ವೈಭೋಗವಲ್ಲೆನೆಂದರೆ ಬಿಡದು ರಮಣೀ 1 ಹಿರಿಯರು ಈರ್ವಗೆ ಮಾಡಿದ ನಿಷ್ಠೆ ವಿ ಪರಿ ಸೌಖ್ಯವ ಹಿರಿದಾಗಿ ಕೊಟ್ಟು ನಮ್ಮನು ಪಾಲಿಸುವುದು ಬಲು ಮೊರೆಯಿಟ್ಟರೆ ಕೇಳು ಹರಿಯ ಮಹಿಮೆಗೆ ನಮೋ 2 ಕ್ಷೀರಸಾಗರದೊಳಗೆ ಓಲ್ಯಾಡುವವನ ವಿ ಚಾರಮಾಡದೆ ತಂದು ಹೃದಯಮಧ್ಯ ಸೇರಿಸುವಂದದಿ ಎನಗೆ ಇಲ್ಲಿಹ್ಯುದು ಸಂ ಸಾರದೊಳಗಿದ್ದ ಸುಖವಿನಿತುಂಟು ರಮಣೀ 3 ಸಂತಾನವಿಲ್ಲೆಂದು ಈರ್ವರೂ ಚಿಂತಿಪದ್ಯಾಕೆ ಪಿಂತೆ ಕಾಂತಾರದಲಿ ಬಾಲಮೃಗನ ಅಂತಕನ ಪುರಿಗೆ ಅಟ್ಟಿದ ದೋಷದಿಂದ ನಮ- ಗಿಂತು ತೋರಿತು ಗುಟ್ಟು ಪೇಳಬಾರದು ರಮಣೀ 4 ಈ ಜನ್ಮ ಬಂದದಕೆ ಇನ್ನಾದರೆಚ್ಚೆತ್ತು ಮಾಜಿಕೊಂಡಿದ್ದು ಜನರಂತೆ ನಡದು ಸಿರಿ ವಿಜಯವಿಠ್ಠಲನ ಸ ರೋಜ ಚರಣವನು ಪೂಜಿಸುವೆನು ರಮಣೀ 5
--------------
ವಿಜಯದಾಸ
ದುರಿತ ಪರಿಹರಿಸೋ ಭಾರಕನು ನೀನು ಪಾದ ಹೊಂದಿದವರಿಗೆಯಿನ್ನು ಪ ಮಾನವ ನಾನು ಮನ ಖಚಿತವಿಲ್ಲದ ಕಂದರಕೆ ಬಿದ್ದು ಬಹುಕಷ್ಟ ಪಡುತಾ ಸಂದೇಹವಾನು ಬಿಡದೆ ಸಂಶಯಿಸಿ ನಿನ್ನೊಮ್ಮೆ ಎಂದು ಕೊನಿಮದ ದೋಷದಿಂದ ಅದರಿಂದಾ 1 ಕಷ್ಟವನು ಪಡುವಾಗ ಕೃಷ್ಣ ನೀನೆ ಗತಿಯೆಂದು ಅಷ್ಟು ಮಾತ್ರ ಸುಖಬರಲು ಅರಿತು ನಿನ್ನ ನಿಷ್ಠರಾದವರನಾಸಂಖ್ಯ ಅರಿಯೆನು ಮಾಡ್ದ ದುಷ್ಟ ಬುದ್ಧಿಗಳಿಂದ ದುರುದ್ದೇಷದಿಂದಾ 2 ನೀನೆ ಸೂತ್ರಧಾರನಾಗಿರುವೆ ಸಕಲಕ್ಕೂ ನಾನೊಂದೂ ಅರಿಯದಜ್ಞಾನಿ ಹರಿಯೆ ಏನಾದರಾಗಲಿ ಇನ್ನು ಎನ್ನನು ಬಿಡದೆ ನೀ ದಯಮಾಡಿ ರಕ್ಷಿಸೋ ನಿಜ 'ಹೊನ್ನ ವಿಠ್ಠಲಾ 3
--------------
ಹೆನ್ನೆರಂಗದಾಸರು
ನಗಬಹುದು ನೀ ಮುಗುಳು ನಗೆಯಾ ಗುರುರಾಯಮಿಗೆ ಕಂಡು ದೇಹಾಭಿಮಾನಿಗಳ ಬಗೆಯಾ ಪತನ್ನ ತಾನರಿಯಲೀಸದ ಮಾಯೆಗೊಳಗಾಗಿಅನ್ಯರೇತೋಜಾತಮಾದ ದೇಹವ ನೋಡಿತನ್ನಿಂದ ತಾ ಕಾಣಪಡುತಿಹುದಿದಲ್ಲವೆಂದೆನ್ನಲಾರದೆ ದೋಷದಿಂದಾಉನ್ನತದ ಮಾಂಸ ರಕ್ತಾಸ್ತಿಮಲ ಮೂತ್ರಂಗಳಿನ್ನೆನೆದುನಾರುವ ನವದ್ವಾರ ಮಾರ್ಗದಿಂತನ್ನ ಮರಸುವದೇಹವೆತನ್ನದೆಂದು ಮರೆದುಣ್ಣುರಿವಾತಗಳ ಕಂಡೂ ಮಾಯೆ ಭಾಪೆನ್ನುತ್ತ ಬೆರಳೊಲದು ಕೊಂಡು ಬಗೆಗಂಡೂ 1ಬಿಟ್ಟ ಮನೆ ಜನ ಧನಂಗಳಲಿ ಮತ್ತೂ ಮನವನಿಟ್ಟು ವಾಂತ್ಯಾಶನವನುಂಬ ನಾಯಂದದಲಿಪಟ್ಟಣಂಗಳಲಿ ತಿರುಗುತ ಪರರ ಬಾಧಿಸುತಕೆಟ್ಟ ಬುದ್ಧಿುಂದ ಧೃತಿಗುಂದಿಕೊಟ್ಟಪುದು ಕರ್ಮವೆಂಬುದ ಮರೆತು ಗೇಣುದ್ದಹೊಟ್ಟೆ ಬಟ್ಟೆಗೆ ದೈನ್ಯ ಬಟ್ಟು ಮೂಢತೆುಂದಕೆಟ್ಟೆನಿನ್ನಾರು ರಕ್ಷಿಪರೆಂದು ಚಿಂತಿಸುವಹೊಟ್ಟೆಹೊರಕರನು ನೋಡುತ್ತಾ ಕಟಕಟಾಕೆಟ್ಟರಿವರೆಂದು ಹಾಸ್ಯವನು ಮಾಡುತ್ತಾ 2ತಾನಾತ್ಮನೆಂಬುದನು ಕೇಳಿದ್ದುದೃಷ್ಟಾನುಮಾನಂಗಳಿಂ ನಂಬಿಗೆಯೆುಲ್ಲದದರಲ್ಲಿಮಾನಾವಮಾನಂಗಳಿಂ ಹರುಷ ಶೋಕಾದಿಹೀನಬುದ್ಧಿಗಳ ಮಾಡುತ್ತಾಜ್ಞಾನಮಾರ್ಗದಲಿ ವಿಶ್ವಾಸವಿಲ್ಲದೆ ತನ್ನ ಕಾಣಲಾರದೆ ಭೇದ ಬುದ್ಧಿುಂ ವ್ರತತೀರ್ಥಸ್ನಾನಾದಿುಂದ ಮುಕುತಿಯ ಪಡೆಯಬೇಕೆಂಬಮಾನವರ ಭ್ರಾಂತಿಯನು ತಿಳಿದೂ ಇವರ್ಗಳಿಗೆಸ್ವಾನುಭವವಿಲ್ಲೆಂದು ಸಮತೆಯಲಿ ನಿಂದೂ 3ರಾಗವನು ಬಿಡಲಾರದಾಶಾಪಿಶಾಚಕೊಳಗಾಗಿ ಸತ್ಸಂಗ ಸತ್ಕಥೆಯ ಕೇಳಿಕೆಗಳನುನೀಗಿ ಧನಿಕರೊಳಿಚ್ಚಿತವನಾಡಿ ಸದ್ಧರ್ಮತ್ಯಾಗಿಯಾಗ್ಯನೃತಕ್ಕೆ ಪೊಕ್ಕೂಹೀಗೆ ತಿರುಗುತ ಪರಾನ್ನಾದಿ ಭೋಗಕ್ಕಾಗಿಕಾಗೆಯಂದದಲಲ್ಲಿಗಲ್ಲಿಗೆ ಸದ್ಗತಿುೀವಯೋಗ ಮಾರ್ಗವ ಬಿಟ್ಟುಭ್ರಾಂತರಾದಿರಿ ಮಹದ್ರೋಗಿಗಳ ಕಂಡು ಬೆಸಗೊಂಡು ಇವರ್ಗೆ ಭವರೋಗ ಬಿಡದೆಂದು ನಿಜಪದದಲ್ಲಿ ನಿಂದೂ 4ಇಂತರಿವ ಜನರಲ್ಲಿ ನಿಂತು ಸನ್ಮತಿುತ್ತುಚಿಂತೆಗಳ ಬಿಡಿಸುತ್ತಲಂತರಾತ್ಮಕನಾಗಿಸಂತಗೋಪಾಲಾರ್ಯ ಗುರುವರ್ಯನಾಗಿ ವೇದಾಂತದರ್ಥವನು ಬೋಧಿಸುತಾಅಂತವಿಲ್ಲದ ನಿಜವ ತೋರಿ ಪಾಲಿಸಿ ಮುದವಂತಾಳ್ದು ಸಕಲ ಸಂಶಯಗಳನು ಪರಿಹರಿಸಿಶಾಂತರಾದಿರಿ ಮೋಹಹೋುತ್ತು ನಿತ್ಯ ಸ್ವಾತಂತ್ರ್ಯವಾುತು ಗೆದ್ದಿರೆನುತಾಸಂತತಾನಂದಕನುಗೈದು ಕೈ ಹೊುದೂ 5
--------------
ಗೋಪಾಲಾರ್ಯರು
ನಿನ್ನಾಧೀನ ----------- ವೆಂಕಟಾದ್ರಿವಾಸ ವೆಂಕಟ ಪರಹರಿಸೊ ನೀ ಎನ್ನ ಸಂಕಟ ಪ ಚಿನ್ಮಯ-----ನಾದ-----ಶ್ರೀನಿವಾಸ ಪರಮಪುರಷ ಮುನ್ನ ನಾ ಮಾಡಿದ ದೋಷದಿಂದ ಅಮಲನಾಗಿ ವ್ಯರ್ಥ ಬಳಲುತಿಹೆನಾ ------ ಘನವೆ ನಿನಗೆ ಇರುವುದಿನ್ನು ಅನಿಮಿಷವು ನಿಮ್ಮ ಧ್ಯಾನದಲ್ಲಿ ಮಗ್ನರಾದ ಅವರಾ 1 ಶರಣರಾದ ಅವರಾ ಪೊರೆವ ಬಿರುದು ನಿನ್ನದಾಗಿ ಇರಲು ಪರಮ ಪತಿತ ಪಾವನನೆ ಭಕ್ತ ಜನರ ಬಿಡದೆ ಕಾಯ್ವ ಧೊರಿಯು ನೀನೇ ಎಂದು ನಿನ್ನ ಚರಣಕಮಲ ನೆಚ್ಚಿದವನಾ ಪರಿವೆ ಮಾಡದೆ ಇರುವುದಿನ್ನು ಭರದಿ ಮೋಚನ ಪಾಪನಾಶನ 2 --------ದೊಳಧಿಕನಾದವನ ವರಹೊನ್ನ ನಿ--------- ನಿಗಮಗೋಚರ 'ಹೊನ್ನವಿಠ್ಠಲಾ’ ನಿತ್ಯ ಸತ್ಯ ಜಗವಿಲಾಸ --------ಯಿಂದ ನಿನ್ನ ಪಾಡುವಂಥ ಭಜಕರನ್ನ------------- ರಕ್ಷಿಸುವ ಅಭಯ ನಿನ್ನದಾಗಿ ಇರಲೂ 3
--------------
ಹೆನ್ನೆರಂಗದಾಸರು
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಸಾಕು ಸಾಕು ಇನ್ನು ಕಷ್ಟ ಅನೇಕಾ ಬೇಕು ಬೇಕು ನಿನ್ನ ಕರುಣ ಪ ಹಿಂದಿನಿಂದ ಎನ್ನ ಹೊಂದಿಬಂದ ದೋಷದಿಂದ ನಾನು ಬಹು ಬಳಲುತಲಿ ----------------------- ಎಂದು ಎಂದು ನಿಮ್ಮಂದ ದ್ವಯಪಾದ ಹೊಂದುವೆ ನಾನೆಂದೆನುತಲಿ----- ಬೆಂದುನೊಂದು ಈ ಚಂದದಿ ಈ ಪರಿಯಿಂದ ನಿನ್ನನಾ ಹೊಗಳುತಲಿ--- ಬೆಂದು ನೊಂದೆ ನಿನ್ನ ಮಂದಿರ ಸೇವಕನೆಂದು ಬಹಳ ಗೋವಿಂದ ಕೃಪಾಳು 1 ಘೋರ ರಾಕ್ಷಸ----ರಿದ ಅವರ ಸಂಹಾರವ ಮಾಡಿದ ಬಲವಂತ ------------------ ವೀರಶೂರ ಗಂಭೀರ ಕೃಪಾಕರ ವಾರಿಜೋದ್ಭವನ ಪಡೆದಂಥಾ ಸಾರಿಸಾರಿ ನಿಮ್ಮ ಸ್ಮರಿಸುವವರಿಗೆ ಸರ್ವ ಸಂಭ್ರಮವು ಮಾಡುವಂಥಾ ಕೀರುತಿ-----ರನು ಯನುತಲಿ ------ನಿಮ್ಮ ಸರ್ವೋತ್ತಮನಂಥಾ 2 ಗಾಧೆ ಬೋಧೆ ಗೊಳಗಾದೆ ಈ ಪರಿ ವೇದಾಂತ---ದೊಂದರಿಯೆ ಸಾಧು ಸಾಧಕರ ಬೋಧೆಗಳೆಂಬುವ ಸದಾ ಕರ್ಣದಿ ಕೇಳರಿಯೆ----ದರೆ ಮಾಧವ ಮಧುಸೂದನ ಧೊರಿಯೆ ವೇದ ಆದಿ ಅಗಾಧ ಗೋಚರನೆ ಪತಿ 'ಹೆನ್ನ ವಿಠ್ಠಲ’ ಹರಿಯೆ 3
--------------
ಹೆನ್ನೆರಂಗದಾಸರು
ಜಯತು ಜಗದಾಧಾರ ಜಯತು ದೋಷ ವಿದೂರಕುಂದಕುಟ್ಮಲದಂತೆವದನಮಂದಹಾಸಇಂದಿರಾಲಯವಕ್ಷ ತುಲಸಿಮಾಲೆಸಿರಿಸ್ತಂಭ ಉರುಟುಕದಳಿಊರು ಜಾನುಜಂಘೆಶ್ರೀಪತಿ ಅನೇಕರೂಪನಾಗಿನಿಂದುಇಂದೀವರಾಕ್ಷಿಯರ ಮನದ ಹದನವನರಿತುಕೊಳ್ಳಲುಬಳಿಯಲೊಬ್ಬಳನೆ ನಿಲಿಸಿ ಹೆಗಲಲ್ಲಿಕರವಹಾಕಿಕುಳದಲ್ಲಿ (?) ಕೃಷ್ಣನ ಸ್ಥಳದಲ್ಲಿ ಹೆಜ್ಜೆಯೊಳುಘಲಕು ಘಲಕು ತಾಳಗತಿಗಳಿಂದಲಿ ಸುತ್ತಿದುಂದುಭಿವಾದ್ಯ ತಮ್ಮಿಂದ ತಾಂ ಬಾರಿಪವುಒಂದೊಂದು ದೋಷದಿಂದಿನ್ನು ಅಜಭವಸುರರುಶರಣು ಕರುಣಾನಿಧಿಯೆ ಶರಣು ಗುಣವಾರಿಧಿಯೆರಾಸಕ್ರೀಡೆಯಲಿ ತೋರಿಸಿದ ಗೋಪಿಯರ ಅಭಿ-
--------------
ಗೋಪಾಲದಾಸರು