ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ವಿಜಯದಾಸರ ಪ್ರಾರ್ಥನೆ) ಜಯ ಜಯ ವಿಜಯೇಂದ್ರ ಜಿತಬುದ್ಧಿ ತಂದ್ರ ನಯ ನೀತ ಗುಣ ಸಾಂದ್ರ ನುತ ರಾಮಚಂದ್ರ ಪ. ಅಷ್ಟಮಹಾಸಿದ್ಧಿಯರಿತ ಗಂಭೀರ ಗಜ ಕುಂಭದಾರ ಕೃಷ್ಣಾರಾಧಕ ಚತು:ಷಷ್ಟಿಕಳಾಧಾರ ಇಷ್ಟ ಸಿದ್ಧಿಗಳ ಪಾಲಿಸು ಬೇಗ ಧೀರ 1 ಶೇಷಾದ್ರಿನಾಥನ ಕರುಣೈಕ ಪಾತ್ರ ವ್ಯಾಸ ಮುನೀಂದ್ರ ಕರಾಬ್ಜಜ ಪುತ್ರ ದೋಷವೆಣಿಸದೆ ಸ್ವೀಕರಿಪುದೇ ಸ್ತೋತ್ರನೀ ಸಲಹುವದಾರಾಧಿತ ಮಾಕಳತ್ರ 2
--------------
ತುಪಾಕಿ ವೆಂಕಟರಮಣಾಚಾರ್ಯ
ಕಲಭಯಾನೆ ಕಂಜಲೋಚನೆ ಕದವತೆಗೆಯೆಲೆ ಭಾಮಿನಿ ನಾಂ ಬಳಲಿ ಬಂದೆನು ಭಾಮಿನೀ ಪ. ಬಳಲಿ ಬಂದರೆ ಒಳ್ಳಿತಾಯಿತು ತಳರ್ವುದಿಲ್ಲಿಂ ನಿಲ್ಲದೆ ನಾಂ ಕದವ ತೆಗೆಯೆನು ಸಾರೆಲೆ ಅ.ಪ. ಭಾಪುಭಾಪೆಲೆ ಕೋಪಗೈವುದು ಚಾಪಲ್ಯಾಂಬಕಿ ಯೆನ್ನೊಳು ಓವನಲ್ಲೇ ಕೋಪಸಲ್ವುದೆ ಈ ಪರಿಯೊಳ್ ಪೇಳ್ವುದು ನೀ ನೀಪರಿಯೊಳ್ ಪೇಳ್ವುದು 1 ಪರಿ ಕಪಟನಾಟ್ಯವ ಮಾಳ್ಪರೇ ಓಪೆÀನೆಂದು ಕೂಗುತಿರುವ ಭೂಪನಾವನು ಸಾರೆಲೋ ನಾನೋಪೆ ಯಾರಿಗೆ ಸಾರೆಲೊ 2 ನೀರೆ ಮುಕ್ತಾಹಾರೆ ಸ್ಮರವೈಯ್ಯಾರೆಯಿಂತು ಪೇಳ್ವರೇ ಕೇಳ್ ನೀರನಾನೆಲೆ ಶ್ರೀಕರೆ 3 ನೀಂ ಜಾರನಂದದಿ ಕಾಣುವೆ ನೀನಾರು ಪೇಳು ನೋಡುವೆ 4 ದೇವಿಕೇಳು ವಸುದೇವ ದೇವಕಿಕುಮಾರ ನಾನೆಲೆ ಭಾಮಿನೀ ಸುಕುಮಾರನಾನೆಲೆ ಭಾಮಿನೀ ಭಾವಜಾತನ ಬಾಣಕೀಯದೆ ಕಾವುದೆನ್ನನು ಕಾಮಿನೀ ದಯೆತೋರು ಮನೋಮೋಹಿನೀ5 ದೇವಕೀಸುತನಾದರೊಳ್ಳಿತು ನಾವು ಬಲ್ಲೆವು ಸಾರುನೀಂ ಮಾವನನ್ನೆ ಮಥಿಸಿ ಬಂದ ಮಹಾಮಹಿಮನೆ ಸಾರು ನೀಂ, ಆಹ ಭಾವಿಸೀ ಭಯಪಡುವೆನೇಂ 6 ಭೀಷ್ಮಕಾತ್ಮಜೆ ಭೇಷಜಾಂಬಕಿ ಹಾಸ್ಯ ಮಾಡದೆ ಬೇಗನೆ ನಾಂ ಬೇಡಿಕೊಂಬೆನು ನಿನ್ನನು 7 ದೋಷವೆಣಿಸದೆ ಪೋಷಿಸೆನ್ನ ಮದೀಶ ಹಾಸ್ಯವ ಮಾಡಿದೆ ಶೇಷಶೈಲನಿ ವಾಸ ಎನ್ನನು ಪೋಷಿಸೆಂದಳು ವಿನಯದಿ ಕೈಪಿಡಿದ ದೇವನ ಮೋದದಿ 8 ಜಯಜಗನ್ನಾಥ ಭಕ್ತಾಭಯಪ್ರದ ಶ್ರೀಕರ ಜಯದೇವ ದಯಾಸಾಗರ ಶೇಷಗಿರೀಶ ಶ್ರೀಧರ 9
--------------
ನಂಜನಗೂಡು ತಿರುಮಲಾಂಬಾ
ದಾಸರಾಯ ವಿಜಯದಾಸರಾಯ | ದೋಷವೆಣಿಸದೆ ಸದಾ ಪೋಷಿಸು ಕರುಣದಿ ಪ ಸಕಲಜಗತ್ತಿಗೆ ಲಕುಮೀಶಪರೆನೆಂದು ಮಖವಾಚರಿಪ ಮುನಿ ನಿಕರಕೆÉ ಸಾರಿದ 1 ಜ್ಞಾನಿ ಶಿರೋಮಣಿ ಧೇನುಪಾಲಾರ್ಯರ | ಮಾನಸ ಕುಮುದಕೆÉ ಏಣಾಂಕನೆನಿಸಿದ 2 ಮುದ ತೀರ್ಥಾಗಮ ಮರ್ಮ ಮಧುರ ಕನ್ನಡದಲಿ ವಿಧ ವಿಧ ರಚಿಸಿದ ಸದಮಲ ಸುಚರಿತ್ರ 3 ಬೇಸಿಗೆ ಬಿಸಲೊಳು ರಾಸಭ ತೃಷೆಯಿಂದ | ಷಾಸಿಯಾಗಿರೆ ಜಲಪ್ರಾಶನಗೈಸಿದ ದಾಸರಾಯ 4 ನಿಷ್ಟೆಯಿಂದಲಿ ಮನ ಮುಟ್ಟಿ ಭಜಿಪರಿಗೆ ಇಷ್ಟಾರ್ಥಗರೆಯುವ ಪುಟ್ಟ ಬದರಿವಾಸ 5 ಪೊರೆವ ಚಿಪ್ಪಶಿಖರನಿಲಯ 6 ಪಾಮರನಾದೆನಗೆ ಶಾಮಸುಂಧದರ ಸ್ವಾಮಿ ನಾಮಾಮೃತಪಾನ ಪ್ರೇಮದಿ ನೀಡಯ್ಯ ದಾಸರಾಯಾ 7
--------------
ಶಾಮಸುಂದರ ವಿಠಲ
ಯಾಕೆ ಕೃಪೆ ಬಾರದೋ-ಲೋಕರಕ್ಷಕ ನಿನಗ್ಯಾಕೇ ಪ ಲೋಕ ರಕ್ಷಕ ದುಷ್ಟಕಾಕ ಶಿಕ್ಷಕ ನಿನಗ್ಯಾಕೇ ಅ.ಪ. ಪಕ್ಷಿವಾಹನನೆಸಿ ಲಕ್ಷಿಸದಿರಲು ಲೋಕದಿ ಶುಭ ಲಕ್ಷಣ ಮೂರುತಿ ನಿನಗ್ಯಾಕೆ ಕೃಪೆ 1 ಕುಕ್ಷಿಯೊಳೀ ಜಗವನಿಟ್ಟು ರಕ್ಷಿಸುವ ಲಕ್ಷ್ಮೀಪತಿ ದಕ್ಷಿಣಶೇಷಾದ್ರಿವಾಸ ರಕ್ಷಿಸುವ ನಿನಗ್ಯಾಕೇಕೃಪೆ 2 ಸನ್ನುತ ಶ್ರೀನಿವಾಸ ನಿನ್ನ ದಾಸನೊಳು ದೋಷವೆಣಿಸದೆ ಕಾಯೊದೋಷರಹಿತನೆ ನಿನಗ್ಯಾಕೇ 3 ಶುಭ ದೃಷ್ಟಿಯಿಂದ ನೋಡಿಯನ್ನ ಕಷ್ಟವ ಬಿಡಿಸಿ ಮನದಿಷ್ಟವ ಪಾಲಿಸು 4 ಭವ ತಾರಣ ಚರಣಗುಣ ಪೂರಣ ವರದ ವಿಠಲ ಕಾರುಣಿಕರರಸನಿನಗೆ5
--------------
ಸರಗೂರು ವೆಂಕಟವರದಾರ್ಯರು
ಶ್ರೀ ಮಧ್ವಮತವೆಂಬಕ್ಷೀರಪಾರಾವಾರ|ಸೋಮನೆನಿಸುತಿಹ ವರದೇಂದ್ರ ಕರಸಂಜಾತ |ನೀ ಮಹಿಯೊಳಾವಾವಪರಿಕಾಣಿಸುವ ನೋಡಿರಾಮ ಪದ ಜಲಜ ಭೃಂಗ ಪಕುಂಡಲಿಯೊ ಭಾರತಿಯೊ ಈಶನೊ ಎಂದುದ್ವಿಜ|ಷಂಡ ತುತಿಸುವುದು ಶ್ರೀ ಭುವನೇಂದ್ರ ರಾಯರಾ |ಕಂಡು ಪದಯುಕ್ತ ಪುರುಷಾಕಾರ ಶಿಖಾರಹಿತ ಕೂಡದಿದುಯೆನಲು ಪೇಳ್ವೆ ||ದಂಡಧರ ಯೋಗದಾಢ್ರ್ಯದೊಳು ತಾ ಅಹಿಯಂತೆ |ಪಂಡಿತೇಶನು ವಾಗ್ಬಲದಲಿ ಭಾರತಿಯಂತೆ |ರುಂಡಮಾಲಿಯ ತೆರದಿ ತೋರುವರು ವೈರಾಗ್ಯದಲಿ ನಿರುತ ಭಜಿಸುವರಿಗೆ 1ವಿಧಿಯೊ ಅರ್ಕನೊ ಇಂದ್ರನೋ ಎಂಬ ತೆರದಿಂದ |ಬುಧಜನಕೆ ತೋರ್ವನಾಲ್ಮೊಗಖಗಸಹಸ್ರಾಕ್ಷ |ಇದು ಯೆಂತು ಸಾಮ್ಯವೆನೆ ಸರ್ವಜನ ಯೋಗ್ಯತೆಯನರಿವಂತೆ ಧಾತನಂತೇ ||ಮದಡಜ್ಞಾನಾಖ್ಯ ತಮವಳಿವಲ್ಲಿ ರವಿಯಂತೆ |ಪದುಮೇಶನ ಗುಣವ ವಿಚಾರಿಸಲನೇಕಾಕ್ಷ |ಚದುರನೆನುವ ಬಗೆಯಿಂದೊಪ್ಪುತಿಹ ನಮ್ಮ ಗುರುವ ತುತಿಸುವೊದಕ್ಕೆನ್ನ ವಶವೆ 2ಕಡಲೊ ಸುರಧೇನವೊ ಹಂಸನೋ ಯೆಂಬಂತೆ |ಪೊಡವಿಗೆ ವಿರಾಜಿಸುವ ಉದಕಮಯವಾಗಿಹದು |ಕಡು ಚತುಷ್ಪಾದಿಅಂಡಜಜಂತು ಈ ಸಾಮ್ಯ ಸಲ್ಲದೆನೆ ಸಲ್ವ ವಿವರ ||ಒಡಲಿನೊಳು ಪ್ರಾಣೇಶ ವಿಠಲಮಣಿಪೊಳೆವುತಿದೆ |ಕೊಡುವ ಬೇಡಿದ ವರವ ಅಮರರಾಕಳಿನಂತೆ |ಕುಡಿವಂತೆ ಹಂಸ ಪಯ ಜಲವುಳಿದು ದೋಷವೆಣಿಸದೆ ಬಿನ್ನಪವ ಲಾಲಿಪ 3
--------------
ಪ್ರಾಣೇಶದಾಸರು