ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಹಹ ಮರುಳನಾದೆ ಸುಮ್ಮನೆ ಪೂರ್ವ ಮಹಿಮ ಹರಿಯ ಸೇವೆಯನ್ನು ಸಹಿಸಿಕೊಂಡು ಗ್ರಹದೊಳಿರದೆ ಪ. ಇಂದಿರೇಶನಿರವನರಿಯದ ಮೂರ್ಖರಾದ ಮಂದಮತಿಗಳಾದ ಕುಜನರ ಬಂದು ಸೇರಿ ಬುದ್ಧಿಹೀನರೆಂದ ನುಡಿಯ ಕೇಳಿ ಬಹಳ ಮೂರ್ತಿ ಬಿಟ್ಟು 1 ತರಣಿ ತಿಮಿರವಟ್ಟಿಲಿರುವದೆ ಸಿಂಹರಾಜ ಮರಿಯ ಕೂಡೆ ನರಿಯು ಬರುವುದೆ ಮರುಳತನದ ಭಾಗ್ಯವೆಂಬೀ ನರಕ ಪಾತ್ರರಾದ ಜನರು ಪಾದ ಪದ್ಮದಾಸ ಚರಿಯವೆಂದು ತಿಳಿವರುಂಟೆ 2 ನೀರಗುಳ್ಳೆಕಿಂತ ಲಘುತರವಾದ ಸಂಸಾರ ಸಂಬದ್ಧ ಪರಿಸರ ಸೇರಿ ಹಿಂದೆ ನಡೆದ ತಪ್ಪ ನೀರಜಾಕ್ಷ ಕ್ಷಮಿಸಿ ಮಹಾ- ದ್ವಾರದೆಡೆಗೆ ಕರಸಿಕೊಳ್ಳೊ ಭೂರಮೇಶ ವೆಂಕಟೇಶ 3
--------------
ತುಪಾಕಿ ವೆಂಕಟರಮಣಾಚಾರ್ಯ