ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಸತ್ಯವರರೆಂಬ ಕಲ್ಪಭೂಜಾ ಧರೆಯೊಳಗೆಮ್ಮನುದ್ಧರಿಸ ಬಂತಿದಕೊ ಪ ಶ್ರೀಮಧ್ವಮತವೆಂಬೋ ಭೂಮಿಯೊಳಗುದ್ಭವಿಸಿ ರಾಮ ವೇದವಾಸ್ಯರಂಘ್ರಿ ಯುಗಳ ವ್ಯೋಮ ಮಂಡಲವನಾಶ್ರಯಿಸಿ ಸತ್ಕೀರ್ತಿನಿ ಸ್ಸೀಮ ಶಾಖೋಪಶಾಖೆಗಳಿಂದ ಶೋಭಿಸುತ 1 ಭವವೆಂಬ ಭಾಸ್ಕರತಪದಿಂದ ಬೆಂದು ಬಂ ದವರ ಮಂದಸ್ಮಿತ ನೆಳಲಿಂದಲೀ ಪ್ರವಣರಂತಃಸ್ತಾಪ ಕಳೆದು ನಿತ್ಯದಲಿ ಸ ತ್ಕವಿ ದ್ವಿಜಾಳಿಗಲಿಗಾಶ್ರಿತರಾಗಿ ಮೆರೆವ 2 ಕರ್ಮ ಜ್ಞಾನ ಮಾರ್ಗಸ್ಥ ಜನರಿಗಾಗಿ ಲ್ಲಿಹವು ಫಲ ಪುಷ್ಪ ಐಹಿಕಾಮುಷ್ಮಿಕಾ ಭುಜಗ ಹೃ ದ್ಗುಹದೊಳಿಪ್ಪದು ಮಾಯಿಮೂಷಕಗಳೋಡಿಸುತ 3
--------------
ಜಗನ್ನಾಥದಾಸರು