ಒಟ್ಟು 15 ಕಡೆಗಳಲ್ಲಿ , 13 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ತ್ರೀರೂಪಿ ಶ್ರೀ ಗಾಯತ್ರೀ ನಾಮಕನ ಸ್ತೋತ್ರ ಶ್ರೀಗಾಯತ್ರೀ - ನಮಸ್ತುಭ್ಯಂ - ಗತಿಪ್ರದೇಉ- ದ್ಗೀಯೇಕಪದೇ - ದ್ವಿಪದೇ | ತ್ರಿಪದೇ - ಚತುಷ್ಪದೇ ಪದೇ ಪ ನಾಗಹ - ರಥಿಕಾ - ನಾಗಶಯನಾ - ಹಿರಣ್ಯಾ ವರ್ಣಾಗಗನಮಣಿ ಕೋಟಿ ಭಾಸಮಾನಾ - ಭಕ್ತ ಶರಣ್ಯಾನೀಗುವ ಭವರೋಗವ | ಹೃತ್ಕಮಲದಿ ತೋರುವಬಾಗುವ ಜನ ಕಾಯುವ | ಶ್ರೀ ಹರಿ ಮುದ ಬೀರುವ ಅ.ಪ. ಜ್ಯೋತಿರ್ಮಯಾವೂ - ಮಂಡಲದಿಂ - ತವರೂಪಜ್ಯೋತಿಯಲಿ ಮುಸುಕಿಹುದು - ಭಕ್ತಗದೂನೀ ತೋರ್ವುದು - ಮಹ ಮಹಿಮನೆ - ಹೇ ಪೂರ್ಣಈ ತೋಕನ ಸ್ವಾರೂಪಿಕ - ಜ್ಞಾನಧನ ಪ್ರಾಪಕ ಸನ್ನುತ ಚರಣಭೌತಿಕ ವಿಶರಣ ಧನ | ಪಾಲಿಸು ಸುಮನಾ 1 ವೇದಮಾತೆಯೇ - ಆದಿಕತ್ರ್ರೇ ಗುಣಾಪಾರೇಮೋದ ದಕ್ಷಿಣ ಪಕ್ಷೇ - ಪ್ರಮೋದ ಉತ್ತರ ಪಕ್ಷೇಭೇದಾದಿರಹಿತೇ - ಆವಯವಾದಿಯಲಿ - ಸುಮಹಾರೇಭೋದಿಪೆ ಬ್ರಹ್ಮಾದಿಗೆ ಕಪಿ | ಲಾದಿ ರೂಪಿ ಹರೇ ದ್ರುತ - ಕಾದುಕೋ | ಅಭಯಕರೇ | ಪುಸ್ತಕ ಭೂಷಿತ ಕರೆಸಾಧುಗಳಘಗಳ್ಹರೇ- ಕಾಯುವುದೆನ್ನ ಶ್ರೀಹರೇ 2 ಭೂತೇಶ ಶ್ವೇತ ದ್ವೀಪಾದಿ ಪದದ್ರುತ - ಗೇಯ ಗುರು ಗೋವಿಂದ ವಿಠಲ | ಸೂರ್ಯನೋಳ್ದೇಯ ನೆಲ ಗಾಯ ಕರ್ಮಾಯ ಪಟಲ | ಪರಿಹರಿಸುವ ವಿಠಲ3
--------------
ಗುರುಗೋವಿಂದವಿಠಲರು
ಅಧ್ಯಾಯ ಏಳು ಜ್ಞಾಪಿತೋ ಬಕುಲಾವಾಕ್ಯಾಚ್ಛುಕ ಜೀವಾನು ಮೋದಿತಃ ಭೂಪೇನ ನಿಶ್ಚಿತೋ ಮಾಯಾದ್ವಿಪಹಾ ಯೋವರೋ ಹರಿಃ ವಚನ ಅರಸಿ ತನ್ನ ತೊಡೆಯಲಿರುವ ಪರಿಯು ಮಾತಾಡಿದಳು ಕೊರವಿ ಮಾತಿನರಗಿಳಿಯೆ ನೀನು ಅರಸಿ ಮಾತಿಗೆ ಬಾಯ ತೆರೆದು ಮಾತಾಡದಲೆ ಪರಮಗಂಭೀರ ಳಾಗಿರುವ ಪದ್ಮಾವತಿಯ ಕರಪಿಡಿದು ಏಕಾಂತ ದಲಿ ಕೇಳಿದಾಗ ಪರಮ ಅಂತ:ಕರಣೆ ಪರವಶದಿ ಆಗ 1 ರಾಗ:ಭೈರವಿ ಅಟತಾಳ ನಾ ಕೊಡಲೋಪ ಪ್ರೀತಿಯ ಮಗಳೆ ನಿನ್ನ ಮಾತಿಗೆ ಹೊರ್ತಿಲ್ಲ ಖ್ಯಾತೀಲೆ ವೇಂಕಟನಾಥ ನೆಂತೆನಿಪಗೆ ಅ.ಪ ಅರಸಗೆ ಪೇಳಲ್ಯೊ ನಾ ಬಲ್ಲಂಥ ಹಿರಿಯರ ಕೇಳಲ್ಯೊ ಸರಿ ಬಂದವರ ನೋಡಿಕಳಹಲ್ಯೊ 1 ಮಂದಿಯ ಕೇಳಲ್ಯೋ ನಾ ಕೊಡಲಾರದೆ ಜರಿಯಲÉ್ಯೂೀ 2 ಮಿತ್ರೇರ ಸಂಗತಿಯೋ ಅದು ಮಿಥ್ಯವೋ 3 ವಚನ ಕಾಮಜನಕರ ಸ್ಮರಿಸುತಲೆ ಜನರಮುಂದ್ಹೇಳುವದಕನು ಬಂದದÀು ತಾನೆ ಅನು ಅಪಹಾಸ್ಯವನು ಒಬ್ಬರನೋವು ತನಗೆಂಬುವದÀು ಹೇಳುವದಕನುಮಾನವ್ಯಾಕೆ 1 ರಾಗ:ನೀಲಾಂಬರಿ ಭಿಲಂದಿತಾಳ ಪತಿ ಅವನ ಸರಿಯಿಲ್ಲವನಿಯೊಳಗ ಅವನೇ ಜಗಜ್ಜೀವನನೆ ಪ ಮಂಜುಳಮಾತಿಗೆ ರಂಜ ಪಾದ ಕಂಜಕೆ ಅರ್ಪಿಸು ಅಂಜುವದ್ಯಾಕಮ್ಮ ಅಂಜನಾದ್ರೀಶಗೆ ಅಂಜಲುಬೇಡ ನಿರಂಜನೆ ಭಯಭಂಜನೆ 1 ಹೂವಿನ ತೋಟಕೆ ಪೋಗಲು ಚಿತ್ತಪಲ್ಲಟವಾಗಿ ನೀಟಾಗಿ ನಿರ್ಮಿಸಿ ಆಟವಮಾಡುವ ಕಪಟ ನಾಟಕನೆ 2 ಭೂಷಣ ಉರದಲ್ಲಿ ಶ್ರೀವತ್ಸವು ಚಲ್ವಿಕೆ ನೋಡಲು ಎಲ್ಲ ಜ್ಯೋತಿಗಳವನಲ್ಲಿ ನಿವಾಳಿಸಿ ಚಲ್ಲವುದು ಅಲ್ಲೇನಿಲ್ಲೆಂದು ಮತ್ತೆಲ್ಲಿ ಹಂಬಲಿಸದೆ ಅಲ್ಯವಗರ್ಪಿಸು ಆಹ್ಲಾದದಿಂದಲ್ಲೇ ಬಲ್ಲಿದನಾಂತಾದ್ರಿಯಲ್ಲಿರುವ ಎನ್ನೊಲ್ಲಭನೆ ಪ್ರಾಣದೊಲ್ಲಭನೆ 3 ವಚನ ಮಗಳಿಗÉಂದಳು ನಾ ನಿನ್ನ ಜಗ ಗಗನ ರಾಜನ ರಾಣಿ ಸುಗುಣ ಬಕುಲಾ ಬರುವರ ಕೂಡಿ ಬರುವಳಾ ಅಗಸಿಯೊಳಗೆ 1 ಹೊರಳಿ ನೋಡಿದ ಬರುವಳಿವಳ್ಯಾರೆಂದು ಕೊರವಿ ಕರೆಸಿದಳು ಬೇಗ ಸರಸಿ- ಎಂದು ಸುರಿಸಿ ಅಮೃತದ ವಾಣಿ ಬೆರೆಸಿ ಸ್ನೇಹವ ಮತ್ತೆ ತರಿಸಿ ರತ್ನದಪೀಠ ಇರಿಸಿ ಕೂಡೆಂದು ಕುಳ್ಳಿರಿಸಿ ಕೇಳಿದಳಾಗ ಹರುಷದಿಂದಾ2 ರಾಗ:ಗೌರಿ ಆಟತಾಳ ಲಲನೆ ನೀ ದಾರಮ್ಮ ಹೆಸರೇನು? ಶೇಷಾ ಚಲವಾಸಿ ಬಕುಲಾವತಿ ನಾನು 1 ಎಲ್ಲಿಗ್ಹೋಗುವೆ ಮುಂದೆ ನೀನು? ತಿಳಿ ಇಲ್ಲಿಗೆ ಬಂದೆ ನೇಮಿಸಿ ನಾನು 2 ನಿನ್ನ ಮನದ ಕಾರ್ಯಗಳೇನು? ಮುಖ್ಯ ಕನ್ಯಾರ್ಥಿಯಾಗಿ ಬಂದೆನು ನಾನು 3 ದಾವಾತ ವರನಾಗಿರುವನು?ದಿವ್ಯ ದೇವ ನೆಂದೆನಿಸುವ ತಿಳಿ ನೀನು4 ಕೃಷ್ಣವೇಣಿಯೆ ಅವನ್ಹೆಸರೇನು? ಶ್ರೀ ಕೃಷ್ಣನೆಂದೆನಿಸುವ ತಿಳಿ ನೀನು5 ತಾಯಿ ತಂದೆಗಳೆಂಬುವರಾರು?ತಿಳಿ ದೇವಕಿ ವಸುದೇವರು ಅವರು 6 ಚಂದಾಗಿ ಕುಲದಾವದ್ಹೇಳಮ್ಮ ಶುಭ ಚಂದ್ರಮನ ಕುಲಕೇಳಮ್ಮ 7 ಶ್ರೇಷ್ಠವಾಗಿಹ ಗೋತ್ರದಾವದು?ವಾ ಶಿಷ್ಠ ನಾಮಕವಾಗಿರುತಿಹುದು 8 ನಕ್ಷತ್ರ ಪೇಳು ಪನ್ನಗವೇಣಿ ಶ್ರವಣ ನಕ್ಷತ್ರ ತಿಳಿ ರಾಜನ ರಾಣಿ 9 ವಿದ್ಯೆಯಿಂದ ಹ್ಯಾಂಗಿರುವ? ಬ್ರಹ್ಮ ವಿದ್ಯೆಯಿಂದಲಿ ಗಮ್ಯ ಎನಿಸುವ 10 ಧನವಂತನೇನಮ್ಮ ಗುಣನಿಧಿಯೇ? ಬಹು ಧನವಂತರಾಗುವರವನಿಂದೆ 11 ಕಣ್ಣುಮೂಗಿಲೆ ಹ್ಯಾಗಿರುವವ?ಕೋಟಿ ಮನ್ಮಥ ಲಾವಣ್ಯ ಎನಿಸುವ 12 ಹೆಣ್ಣಿನ ಮನಸೀಗೆ ಬಂದೀತೇ? ಅವನ ಕಣ್ಣಿಲಿ ಕಂಡರೆ ತಿಳಿದೀತೆ 13 ಅದಾವು ದಿವಸೆಷ್ಟು ಪೇಳಮ್ಮಾ?ಇಪ್ಪ- ತ್ತೈದರ ಮೇಲಿಲ್ಲ ತಿಳಿಯಮ್ಮ 14 ಚಿಕ್ಕಂದು ಮದುವೆ ಇಲ್ಯಾಕಮ್ಮ?ಅವನ ತಕ್ಕ ಹೆಂಡತಿ ಇರುತಿಹಳಮ್ಮ 15 ಮುಖ್ಯಳಿರಲು ಮದುವ್ಯಾಕಮ್ಮ?ತಿಳಿ ಮಕ್ಕಳಿಲ್ಲದ ಕಾರಣವಮ್ಮ 16 ನೇಮದಿಂದಿರುತಿಹ ತಾನೆಲ್ಲಿ ತಿಳಿ ಶ್ರೀಮದನಂತಾದ್ರಿಯಲಿ 17 ರಾಗ:ಯರಕಾಲ ಕಾಂಬೋದಿ ಭಿಲಂದಿತಾಳ ಕಾಂತನ ಮುಂದ್ಹೇಳಿದಳೇ ಅಂತರಂಗದೊಳು ಚಿಂತೆ ಮಾಡಲು ಬೇಡ ಕೇಳು ಸಂತೋಷದ ಸುದ್ದಿ 1 ಕೊರವಿ ಬಂದಿದ್ದಳು ಮರಗುತ ಮಲಗಿದ ಕೊರವಿ ಕಾಲ್ಗುಣದಿ 2 ಪರಿ ಕೊರವಿ ನಾಡ ಸಖಿಯರ ಕೂಡಿ ಪ್ರೌಢ ಪುರುಷನ 3 ಪ್ರಾಕೃತ ಪುರುಷನಲ್ಲ ಜ್ವರಮಗಳಿಗೆ ಬಂತೆಂದು ಕಾಮಜ್ವರವಂತೆ ಕೇಳು 4 ನಾಶಾವಾಯಿತು ಇನ್ನು ನಿತ್ಯನಿವಾಸಿಯೆನಿಸುವ ಅವಗೆ ತೋಷದಿ ಕೊಟ್ಟರೆ ಜ್ವರ ನಿಶ್ಯೇಷ ಹೋಗುವದು 5 ಎನ್ನ ಮನೆಯಲಿ ಚೆನ್ನಾಗಿ ಪೇಳುವಳು ಚೆನ್ನಿಗವನನ್ಯಾರೆಂದು 6 ಪೇಳುವಳು ಇನ್ಯಾತಕೆ ಸಂಶಯ ಮಾಡಿನ್ನು ಶುಭಶೀಘ್ರಾ 7 ವಚನ ಸಂಭ್ರಮದಿ ಆನಂದವೆಂಬ ತುಂಬ ರೋಮಗಳುಬ್ಬಿ ರಂಭೆ ಪೂರ್ವದ ಪುಣ್ಯ ಎಂಬುವರು ಮುಕ್ತ ಬಹಳ ಗಂಭೀರ ಅಂಬುಜೋದ್ಬವ ಪಿತನ ತುಂಬಿ ಕುಳಿತದ್ದು ಕಣ್ಣುತುಂಬ ನೋಡೇನು ಎಂದು ಅಂಬುಜಾಕ್ಷಿ 1 ಆಕಾಶಪರಿವೃಡನು ಕ್ಲೇಶದ ಮಗಳಿದ್ದಲ್ಲೆ ನಡೆದು ಒಡೆದು ಆಡಿದನು ಹರುಷ ಹಿಡಿಯಲಾಗದು ನಿನ್ನೊಳು ನೀನೆ ಮಿಡುಕಿ ಬೇಡ ಎನ್ಹಡೆದವ್ವನೆ ನೀನು ಮೂಡಲಗಿರಿ ಒಡೆಯ ವೇಂಕಟಪತಿಗೆ ಕೊಡುವೆ ನಿನ್ನ 2 ಶುಭ ಪತ್ರವನು ಕೊಟ್ಟು ಬೃಹಸ್ಪತಿಯು ವೃತ್ರಾರಿ ಧರಿತ್ರೀಯಲ್ಲೀ ಪೃಥ್ವೀಶ ತಾನು ನತಿಸಿ ವಿಧಿಯುಕ್ತ ಪೂಜೆ ಉತ್ತಮನೆ ನೀ ಕೇಳು ಸತ್ಯ ನಿತ್ಯ ನೀನೆ 3 ಪನ್ನಗಾಚಲದಲ್ಲಿ ನಿನ್ನ ಅನುಮತಿಯಿಂದ ಬಿನ್ನಹದ ನುಡಿ ಕೇಳಿ ಮನಸಿಗೆ ಹರುಷ ಪೇಳುವೆ ಕೇಳು ಚನ್ನಾಗಿ 4 ನಿತ್ಯ ಅವನ ಆ ವಿಸ್ತಾರವೆಲ್ಲ ಪಂಚಕೋಶದಲಿ ಇಲ್ಲಿರುವ ಅವನೇ ಶ್ರೀ ಶುಕಾಚಾರ್ಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅರಸಕೇಳಲೈ ಸರಸಿಯೊಳಗೆ ತಾ ಸರಸವಾಡುತಾ ಕರಿವರನಿರೆÉ ಪರಮ ಭೀಕರ ಪ್ರಬಲ ನಕ್ರವು ಕರಿಯ ಕಾಲನು ಪಿಡಿದು ಸೆಳೆಯಿತು 1 ಚಕಿತನಾಗುತ ಚತುರ ದ್ವಿಪವರ ಮಕರಿ ವದನದಿಂ ಮುಕ್ತನಾಗಲು ಸಕಲ ಸಾಹಸಗೈದನಕ್ಕಟ ವಿಕಲವಾಯಿತಾ ಯತ್ನವೆಲ್ಲವು 2 ನಕ್ರ ಸೆಳೆತವು ಪ್ರಬಲವಾಗಲು ದಿಕ್ಕು ತೋರದೆ ಕೂಗಿಕೊಂಡನು ಮಿಕ್ಕ ಗಜಗಳು ಕೂಡಿ ಬಿಡಿಸಲು ಶಕ್ತಿಮೀರಿ ಸಾಹಸಗೈದುವು 3 ಆನೆಗಳು ಒಂದೆಡೆ ಎಳೆಯಲು ನೆಗಳು ಒಂದೆಡೆ ಎಳೆಯಲು ಏನನೆಂಬೆ ಹೋರಾಟವೀ ಪರಿ ಏನು ನಡೆದರೂ ವಿಫಲವಾಯಿತು 4 ಹಿಂಡು ಬಳಗಗಳೆಲ್ಲ ನೋಡುತ ದಂಡೆ ಮೇಲೆ ತಾವ್ ನಿಂತುಬಿಟ್ಟವು ಜೊಂಡು ಹುಲ್ಲು ತಾ ಪಿಡಿದು ತನ್ನಯ ಶುಂಡಾಲ ಗೆದ್ದನು 5 ನಕ್ರಬಾಧೆಯು ಬಿಡಿಸಲಾರಿಗೂ ಶಕ್ಯವಾಗದೆ ಹೋಯಿತಕ್ಕಟ ದಿಕ್ಕುಗೆಟ್ಟು ತಾ ದೈನ್ಯದಿಂದಲೇ ದುಃಖಪಡುತ ಭೋರಿಟ್ಟು ಕೂಗಿದ 6 ಉದಿಸಿತಾಗ ಸುಜ್ಞಾನವವನೊಳು ಸುದತಿ ಮಕ್ಕಳು ಸಲಹರೆಂಬುದು ಬದಲು ಬಯಸದ ಬಂಧು ಕರಿಗಿರಿ ಸದನನೆಂದು ತಾನಂಬಿ ನೆನೆದನು 7
--------------
ವರಾವಾಣಿರಾಮರಾಯದಾಸರು
ಏನು ರಾಗವ ಮಾಡಲ್ಯಾ ನಾನು ಬ್ಯಾಗನೆ ಸಾನುರಾಗದಿ ಹರಿಯು ತಾನೇ ಮಾಡಿಸುವಾ ಪ ದಾನವ ದ್ವಿಪ ವೃಂದ ಮಾನನದಿ ಕರ್ಚಿದ ಮಾನನಿಧಿ ಕೇಸರಿಯೋ ಶ್ರೀಹರಿಯೋ ಅ.ಪ. ಅಜ್ಞಾನ ತಮದೊಳಗೆ ಸುಜ್ಞಾನಿಗಳು ಬಳಲೆ ತಜ್ಞಾನಪೂರ್ಣ ಸರ್ವಜ್ಞರವತರಿಸಿ ಅಜ್ಞಾನದಿಂದ ಗತಿಯಕ್ಕುದೆಂದರುಹಿಸಿದ ಸುಜ್ಞಾನ ದರ್ಪಣವೋ ಶ್ರೀ ಧನವೊ 1 ಕರ್ಮದಿಂದಲೆ ಭಕ್ತಿ ವೈರಾಗ್ಯ ವಿಜ್ಞಾನ ಧರ್ಮವರಿಯಲು ಮುಕ್ತಿಪಥಕೆ ಸೋಪಾನ ಮರ್ಮವರಿಯದೆ ವಿಷಯ ಕಾನನದಿ ಚರಿಸುವ ನರರಿಗೆ.... ಶ್ರೀವರನೊ 2 ವನರುಹಭವಾಂಡದೊಳು ಕುನರ ಸಸಿಗಳು ಬೆಳೆದು ಸುನರ ಕಮಲವು ತೋರದಂತೆ ಮುಸುಕೆ ವನಜದಂದವ ತೋರೆ ನರಸಿಂಹವಿಠಲಾಖ್ಯ ಮುನಿದು ಸದೆ ಬಡೆÉದಗದವೋ ಶ್ರೀ ಮುದವೊ 3
--------------
ನರಸಿಂಹವಿಠಲರು
ಕೃಪೆಯಿಟ್ಟು ಸಲಹೆನ್ನ ಹರಿಯೆ ನರಹರಿಯೆ ದ್ವಿಪÀವರವರದನೇ ಬಾರಯ್ಯ ದೊರೆಯೆ ಪ ದುರಿತಹರÀ ವರ ಚರಣಕಮಲನೆ ಧರಣಿಧರವನು ಕರಸರೋಜದಿ ಧರಿಸಿ ಸುಜನರ ಪೊರೆದ ಮುರಳೀ- ಧರನೇ ಮೋದವಪಡಿಸಿದಂತೆ ಅ.ಪ ನಂದನಂದನ ನಿನ್ನ ಚರಣ ಒಂದೇ ಶರಣ ಎನಗೆಂದು ನಂಬಿರುವುದೇ ಒಳ್ಳೇ ಆಭರಣ ಇಂದಿರೇಶನೆ ಮಾಡೋ ಕರುಣ ಸಿಂಧುಶಯನ ಸುಂದರೀಮಣಿ ಸಹಿತದಲಿ ನೀ ಬಂದು ಎನ್ನಯ ಮಂದಿರದಲಿ ನಿಂದು ಎನ್ನವನೆಂದು ಭಾವಿಸಿ ನಂದಪಡಿಸೈ ನಂದಬಾಲನೆ 1 ದೀನಪಾಲನೆ ಭೂಮಿಭಾರ ಹಾನಿಕಾರ ಪಂಚ ಸೂನಶರನಪಿತ ವಿಗತವಿಕಾರ ಶ್ರೀನಾಥ ಸುಜನಮಂದಾರ ಮೀನಾಕಾರ ನಾನು ನಿನ್ನವನಯ್ಯ ಎನ್ನಯ ಮಾನ ಮತ್ತಪಮಾನ ನಿನ್ನದು ಹೀನಮತಿ ಇವನೆಂದು ತಿಳಿದುದಾ- ಸೀನಮಾಡದೆ ಸಾನುರಾಗದಿ 2 ಸೋಮ ಕುಲಾಂಬುಧಿಸೋಮರಾರಾಮ ಬಲರಾಮ ಸಹಜನೇ ಸುರರಿಪು ಭೀಮ ವಾಮಲೋಚನೇರಿಗೆ ಕಾಮ ಪ್ರೇಮಧಾಮ ಕಾಮಜನಕನೆ ಸಾಮಗಪ್ರಿಯ ನಾಮಗಿರಿ ಶ್ರೀ ರಾಮ ನರಹರೆ ಕಾಮಿತಾರ್ಥವನೀವ ಸುರತರುಕಾಮಧೇನು ಚಿಂತಾಮಣಿಯೆ ನೀ 3
--------------
ವಿದ್ಯಾರತ್ನಾಕರತೀರ್ಥರು
ಕೈಲಾಸದ ಹುಲಿಯೇ ಕಲಿಕಲುಶವ ಕಳೆಯೊಕಾಳಿಯಾಗಿಳಿಯೇ ಪ ಕಾಲಕಾಲಕೆ ನಿನ್ನ ಕಾಲಿಗೆರಗುವೆ ಕರುಣಾಲಯತೋರೋ ಕರುಣಾಳುಗಳರಸನೆ ಅ.ಪ. ತುಳಸಿಗೆ ಕಳಸೀದರೆನ್ನ ತುಳಸಿಯ ತಾರದೆ ನಾ ಹೊಲಸಿನೊಳಳುತಿರೆ ಘಳಿಗೆಯಾ ತಾಳದೆ ಘಳಿಸಿದೆ ತುಳಸಿಯಾ ಕಳಸವ ಕಳ್ಳ ನಾ ಗೆಳೆಯನೆ ಕಳವಳಿಗಳು ಕಳುಹಿಸಿ ಕಾಳ್ವಗೈಸುವ ಕಾಳಿರಮಣ ನಿನ್ನ ಧೂಳಿ ಧರಿಸುವಂತೆ ಖೂಳನಾ ಮಾಡದೆ 1 ಚಲುವ ಚನ್ನಿಗ ನೀನಹುದೋ ಚಂಚಲ ನಯನಾ ಕರುಣಾ ಚಲ ನೀನಹುದೊ ಚಾಲೂವರಿಯಲು ಎನಗೆ ಕಾಲವು ತಿಳಿಯದು ಶೂಲಿ ಚಂಚಲ ಎನ್ನ ಸಂಚಿತಗಾಮಿ ವಂಚಿಸದೆ ಕಾಯ್ವುದೊ ಇದೇ ಕೊಡುವುದೋಕಂಬು ಕಂಧರಮಣಿ ಹಂಚುವುಗಾಣದೆ ಚಂಚಲೂ ನಯನದಿ ಸುರವಂಚಕನಾಗಿ ಪ್ರಪಂಚದಿ ಶರಪಂಚನ ಚಿಂತಿಸಿಸಂತೆಯಾನರುಹಿದ 2 ಅಕಳಂಕ ಮಹಿಮನೆ ದೋಷದೂರ ನೀ ಗುಣವಂತನೇ ಸಹಸ ಬಲವಂತನೆ ಕಾಂತಿಯ ತಂದನೆ ಕಾಂತಿಯುಳ್ಳ ಕಂತಿಯು ಧರಿಸಿದ ದಿಗಂತ ನಿಷ್ಕಿಂಜನರ ಕಾಂತನೆ ಭುಜಬಲ ಮಹಬಲವಂತನೆ ಕುರುಕಂತನೆ ಅಂತು ಇಂತು ತಂತು ಬಿಡದೆ ನಿಜ ಕುಂತಿಯ ಮಗನನ ಕಂತೆಯುಪೂಜಿಪ ಮಂತ್ರಿಯೆನಿಸಿ ಸುಖತಂತ್ರ ಪಠಿಸಿ ಶೃತಿಪಂಶವಿಂಶತಿ ದ್ವಿಪಿಂಚಕಲ್ಪವ ಮಿಂಚಿನಂದದಿ ತಪವಗೈದು ಪಂಚಪದವಿಯ ಪೊ0ದುಕೊಂಡು ಪಂಚ ಬಾಣನ ಪಿತನು ಯನಿಸಿದ ಮಾಂಗಲ್ಯ ಲಕುಮಿಯ ರಮಣ ಯೆನ ತಂದೆವರದಗೋಪಾಲವಿಠ್ಠಲನ ಆತಂಕವಿಲ್ಲದೇ ಚಿಂತಿಸುವ ನಾರಾಯಣಾಚಾರ್ಯನೇ3
--------------
ತಂದೆವರದಗೋಪಾಲವಿಠಲರು
ಗಣೇಶಸ್ತುತಿ ಗಣಪತಿ ಎನದೋಷ ಬಿಡಿಸುವುದೊ ಶ್ರೀ- ಶಾನತಿ ದಾಸಾ ವೆಂಕಟೇಶವಿಠಲನಾ ಪ ದ್ವಿಪತುಂಡ ಅಪರಾಧ ಎಣಿಸಾದಿರೋ ಪಾಪಾ ಚತುರೀಪಾ ಗಂಗಾಪಾ ಸಜ್ಜನರ 1 ಇಭಮುಖ ಅಭಯವನೀಯುವುದೋ ಕಾಯಾಚಿತ ಮಾಯಮಾಡಯ್ಯ ಪಾಮರಸ 2 ವರಜೇಶಾ ಶಿರಿಮೊಗ ತೋರುವದೊ ಜಿರಹಾಕೃತ ಸ್ನೇಹಾ ನರಸಿಂಹವಿಠ್ಠಲನಾ 3
--------------
ನರಸಿಂಹವಿಠಲರು
ಜ್ಞಾನಿಗಳು ತಪ್ಪುವರೆ ಕೊಟ್ಟ ವಚನ ಪ್ರಾಣಹೋದರೂ ಭಾಷೆ ಕೊನೆಗಾಣೋತನಕ ಪ ಖ್ಯಾತಿವಂತ ನಳರಾಜ ಸೋತ ರಾಜ್ಯಾಕೆಂದು ಮಾತಿಗಾಗಿಯೆ ತಾಂ ಪೋದ ವನವಾಸ ಮಾತುಳುಹಿಕೊಳ್ಳಲ್ಕೆ ಸತ್ಯವಂತ್ಹರಿಶ್ಚಂದ್ರ ನೀತಿಯಿಂ ತಾ ಕಾಯ್ದ ಸುಡುಗಾಡವ 1 ವಾಮನಮೂರುತಿಗೆ ಭೂಮಿ ಮೂರಡಿಯಂ ಭೂಮಿಪ ಬಲಿಚಕ್ರಿ ಪ್ರೇಮದಿಂದಿತ್ತಿರಲು ಸ್ವಾಮಿ ತಾಂ ಪರಿಕಿಸಲಿ ಭೂಮಿ ಈರಡಿಗೈಯೆ ಸ್ವಾಮಿ ಮಿಕ್ಕಾದಡಿಗೆ ಪ್ರೇಮದಿತ್ತ ಶಿರವ 2 ನಾರಿಗೆ ಪಿತನ್ವೊಚನ ಮೀರಲಾಗದುಯೆನುತ ನಾರಿಅನುಜರಿಂದ್ವಿಪಿನ ಸೇರಿದೆಯೊ ಶ್ರೀರಾಮ ಆರುಳಿಯ ಬಲ್ಲರೈ ಮೀರಿ ನಿಮ್ಮಾಜ್ಞೆಯನು ಭೂರಿ ಕರುಣದಿ ನೀನೆ ಪಾರುಮಾಡೆನ್ನ 3
--------------
ರಾಮದಾಸರು
ದೀನ ಪಾಲನೆ ಗಾನಲೋಲನೆ ಸುಜನ ಪ್ರಿಯನೇ ಪ ಈ ನರಜನ್ಮದ ಕಾನನದಲಿ ಬಲು ದೀನನಾಗಿ ಗುಣಗಾನ ಮಾಡುವೆನೊ ಅ.ಪ ದುಷ್ಟಭೋಗಗಳನುಭವಿಸುತ ಸದಾ ಭ್ರಷ್ಟನಾದೆ ನಾನು ಅಷ್ಟಿಷ್ಟಲ್ಲದೆ ಮರುಗುತಿರುವೆ ಪರ ಮೇಷ್ಟಿ ಜನಕ ಎನ್ನ ನಿಷ್ಠನ ಮಾಡೊ 1 ಜಪವ ಮಾಡಲಿಲ್ಲ ತಪವ ಮಾಡಲಿಲ್ಲ ಉಪವಾಸವ ಕಾಣೆ ತಪಿಸುತಿರುವೆ ಎನ್ನ ಅಪರಾಧಗಳಿಗೆ ಕುಪಿತನಾಗದಿರೊ ದ್ವಿಪ್ರವರ ವರದ 2 ಧರ್ಮವ ಬಿಟ್ಟು ಸತ್ಕರ್ಮವ ತ್ಯಜಿಸುತ ದುರ್ಮಾರ್ಗದಲಿ ಬಲು ಹೆಮ್ಮೆ ಮಾಡಿದ ನನ್ನ ಹಮ್ಮು ಮುರಿದಿಹುದು ಬೊಮ್ಮ ಜನಕ ಸುಪ್ರಸನ್ನನಾಗೆಲೊ 3
--------------
ವಿದ್ಯಾಪ್ರಸನ್ನತೀರ್ಥರು
ಮಂಗಳಾರತಿಯು ನಮ್ಮ ಲಿಂಗವಿನುತಗೇ ನಮ್ಮ ಪ ಅಂಗನೆಯರೆಲ್ಲ ಕೂಡಿ ಅಚ್ಯುತಾಯೈ ನಮಃ ಎನ್ನಿ ಅ.ಪ ವೇದಕಾದಿಪ್ರಣವವೆಂದು ಬೋಧಿಸಿದನುಶಿವನುಉಮೆಗೆ ನಾದಬಿಂದುಕಳೆಯಗೂಡಿನ ನಾರಾಯಣನಿಗೆ ಮಂಗಳಂ 1 ಸುರರೂ ನರರೂ ಮುಖ್ಯಮಾದಾ ಗರುಡ ವಿಶ್ವಕ್ಸೇನರೆಲ್ಲ ಪರಮತತ್ವಮಹುದಿದೆಂದು ಯಿರುವೋತದ್ವಿಪಾದಗಳಿಗೆ2 ನಿರ್ವಿಕಲ್ಪ ನಿಶ್ಚಲಾತ್ಮ ಸರ್ವಲೋಕಸಾಕ್ಷಿಭೂತ ಗರ್ವಕಲನುಯೆಂಬೊ ನಾಮ ಉರ್ವಿಯೊಳಗೆ ವಹಿಸಿರುವಗೆ 3 ತತ್ವಗುರುವು ತುಲಶಿರಾಮ ಚಿತ್ಸುಖಾಂಶ ಶಿವಪ್ರಿಯನಿಗೆ 4
--------------
ಚನ್ನಪಟ್ಟಣದ ಅಹೋಬಲದಾಸರು
ಲಿಂಗಾಭಟ್ಟರಗ್ರಹಾರದಲ್ಲಿ ಗುರುದರ್ಶನಕಾವೇರಿ ತೀರದಲಿ ಕಂಡೆ ಗುರುವರರಆವಜನ್ಮಾಂತರದಲಾಯ್ತೊ ಭವಪಾರ ಪಶ್ರೀರಂಗಪಟ್ಟಣದ ಸನ್ನಿಧಿಯೊಳಿರುತಿರುವಆರ್ಯ ಲಿಂಗಾಭಟ್ಟರಗ್ರಹಾರದಲಿಮಾರಹರನಾಲಯದ ಮುಂದೆಸೆವ ಮಠದಲ್ಲಿಸೇರಿದ್ದರದ ಕಾಣೆ ಸ್ನಾನಕವರೈತರಲು 1ಏಕಾದಶಿಯ ದಿವಸ ದಿನನಸ್ತಮಯದಲ್ಲಿಆ ಕಮಲ 'ುತ್ರನಿಂಗಭಿನ'ುಸಿ ಬಳಿಕಪ್ರಾಕಾರದಲಿ ಶಿವನ ಪ್ರಾದಕ್ಷಿಣಂಗೆಯ್ಯುತಾ ಕಾಲದಲಿ ನನ್ನ ಕರೆದು ಮನಿನ್ನಿದವರ 2ನಾರಾಯಣಾಯೆನುತ ನಾಮಗಳನ'ುತವನುಚೀರಿ ಹೊಗಳುತ ತಾವು ಚರಣಗಳನಿಡುತಸೇರಿ ಸನ್ನಿಧಿಯಲ್ಲಿ ಸದ್ವಿಪ್ರರಿಬ್ಬರಿರೆ'ುೀರಿಯವರನು ನನ್ನ ಮಂದಲಿಸಿದವರನ್ನು 3ಅಪರಿ'ುತ ಜನ್ಮಗಳಲಾರ್ಜಿಸಿದ ಕರ್ಮಗಳಸುಪ'ತ್ರ ದೆಮ್ಮಡಿಗೆ ಸೇರಿಸೆಂದೆನುತತಪನ'ಗ್ರಹರದನು ತಾವೆ ಸೆಳೆದೆವೆನುತ್ತಸುಪಥನನು ಮಾಡಿ ಸಲೆ ಸನ್ಮಂತ್ರ'ತ್ತರನು 4ಇರು ಜಪಿಸುತೀ ಮನವನಿಚ್ಛೆ ಬಂದಂತೆಂದುಯೆರಗಿಸಿದರೀಶನಡಿಗೆಣಿಸಿ ನೂರೆಂಟಾತಿರುಪತಿಯ ವೆಂಕಟನ ತನು ರೂಪರಾದಿಂಥಉರು ದಯಾನಿಧಿಯಾದ ವಾಸುದೇವಾರ್ಯರನು 5
--------------
ತಿಮ್ಮಪ್ಪದಾಸರು
ಸಾರಸ ನಯನ ಶ್ರೀರಾಮಚಂದ್ರನ ಚರಿತೆ ಸಾರ ಹೃದಯ ಶ್ರೀ ಪ ಭವ ಮುಖರರ ಮೊರೆಯ ಕೇಳಿ ಧಾರುಣಿಯೊಳಗವತಾರ ಮಾಡಿದನಮ್ಮಾ ಅ.ಪ. ದಶರಥ ಸುತನೆನಿಸಿ ವಸುಧೆಯೊಳವತರಿಸಿ ಕುಶಿಕಸುತನ ಯಜ್ಞವ ನೆರೆಪಾಲಿಸಿ ಅಶಮವಾಗಿದ್ದ ಅಹಲ್ಯೆಯ ಶಾಪ ಪರಿಹರಿಸಿ ವಸುಧೀಶ ಜನಕನಾಸ್ಥಾನ ಪ್ರವೇಶಿಸಿ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯನೊಲಿಸಿ ಅಸಮ ಭಾರ್ಗವನೊಡನೆ ಸರಸವ ನೆಸಗಿ ಜಗದೊಳು ಲೀಲೆ ತೋರಿದ 1 ಜನಕನಾಜ್ಞೆಯ ತಾಳಿ ಜನಕ ಸುತೆಯ ಸಹಿತ ಅನುಜನೊಡನೆ ಹೊರಟು ವನವಾಸಕೆ ಘನಭಕ್ತಿ ಭರಿತ ಶ್ರೀ ಭರತಗೆ ಪಾದುಕೆ ನೀನು ಕರುಣಿಸಿ ಮುಂದೆ ವನದಂಡಕವ ಪೊಕ್ಕು ದುರುಳ ವಿರಾಧಮುಖರನು ಹನನಗೈದಾ ಬಳಿಕ ಶರಭಂಗ ಮುನಿಗೆ ಸದ್ಗತಿಯಿತ್ತಗಸ್ತ್ಯನ ವಿನುತ ಅಸ್ತ್ರಗಳನು ಪಡೆದನಾ 2 ಪಂಚವಟಿಯೊಳಗೆ ಸಂಚುಗೈಯುತ ಬಂದ ಕಾಂಚನಮೃಗವನು ಪಂಚಕಗೊಳಿಸಿ ಕುಂಚಿತ ಮತಿಯ ದ್ವಿಪಂಚಶಿರನು ಬರಲು ವಂಚನೆಯಿಂದಪರಿಹರಿಸಲು ಸೀತೆಯ ಸಂಚುಕಾಣದೆ ವನವನದೊಳು ಸಂಚರಿಸುತಲಿ ಶೋಕ ತೋರುತ ಪಂಚಶರಹತನಂತೆ ಬಳಲುತ ಪಂಚಶರ ಪಿತ ಬಂದ ಪಂಪೆಗೆ 3 ಮಾರುತಸುತನ ವಿನಯಭರಿತ ವಾಕ್ಯಕೆ ಮೆಚ್ಚಿ ತರಣಿಸುತನ ಕೂಡೆ ಸಖ್ಯವ ಬೆಳೆಸಿ ದುರಿತವಗೈದ ವಾಲಿಯ ನಿಗ್ರಹಿಸಿ ಕಪಿ ವರ ಸುಗ್ರೀವಗೆ ರಾಜ್ಯಕರುಣಿಸಿದಾ ಬಳಿಕ ಪರಮ ವಜ್ರಶರೀರಿ ಪವನಜ ಶರಧಿಯ ಲಂಘಿಸಿ ಧರಣಿತನಯಳಿ ಗರುಹಿ ಕುಶಲವ ಮುದ್ರಿಕೆಯನಿತ್ತು ಉರುಹಿ ಲಂಕೆಯ ಬರಲು ಒಲಿದನು 4 ಭಕ್ತ ವಿಭೀಷಣನಿಗೆ ಇತ್ತು ಅಭಯವನು ಶರಧಿ ಬಂಧಿಸಿ ದಾಟಿ ಹತ್ತು ತಲೆಯವನ ಪುರವ ಪ್ರವೇಶಿಸಿ ದೈತ್ಯಶೂರರನ್ನೆಲ್ಲ ಮೃತ್ಯು ವಶವ ಮಾಡಿ ಮತ್ತೆ ಕುಂಭಕರ್ಣೇಂದ್ರಜಿತ್ ಮುಖ ದೈತ್ಯರನು ಸಂಹರಿಸಿ ರಣದೊಳು ಶತ್ರು ಭಯಂಕರನಾಗಿ ಮೆರೆದನು ಸ್ತುತ್ಯ ಮಹಿಮ ಶ್ರೀ ಕರಿಗಿರೀಶನು 5
--------------
ವರಾವಾಣಿರಾಮರಾಯದಾಸರು
ಶ್ರೀ ಕರಾರ್ಚಿತ ಜಗದೇಕಕಾರಣ ಶ್ರೀಕರಾದೇವಾ ಪಸಾಕುವನಿಗೆ ನಾನ್ಯಾಕೆ ಬಾರೆನೊ ಮನಕೆ ಅ.ಪವಸತಿಸ್ಥಳವಿಲ್ಲಾವಸುಧೆತಿರುಗುವೆನಲ್ಲಾವಸುಧೆಭಾರಾದೆನಲ್ಲಾ ಸ್ವಾಮಿವ್ಯಸನ ಬಡುತಿಹ ದ್ವಿಪದ ಪಶುವಿನ ನೋಡಿ ನಿನಗೆ 1ಜನನಿಜನಕ ತನಯಾ ವನುತೆ ಈ ದೇಹಾಮನಕೆ ಬಾರೆನೊಅವರಅನುಕೂಲವಾಗದಲೆವನದಲ್ಲಿ ಸಂಚಾರ ಇನುತೆ ಮಾಳ್ಪನ ನೋಡಿ 2ವರಣಿಸಾಲೇನಿನ್ನು ಸುಪರಣವಹÀನಭವಕರಣರಹಿತಶಾಯಿ ಕರಣ ವೈರಿಯಮಿತ್ರಕರುಣಿಸ್ಯನ್ನನು ಎಂದು ಶರಣು ಪೊಕ್ಕದು ನೋಡೀ 3ನರರ ಸೇವೆಯ ಮಾಡಿ ನರರಗುಣಕೊಂಡಾಡಿನರರ ಮಾತನೆಕೇಳಿನರರಗಾಥವಕೇಳಿಹರಿನಿನ್ನ ಚರಣಾಶ್ರಯಸಿದವನಾ ನೋಡೀ4ವಾತದೇವನತಾತಸೀತಾನಾಥನೆ ನಿನ್ನತಾತಕೇಳೀಗೆನ್ನ ಮಾತು ಮನಸಿಗೆ ತಂದುದಾತನೀನೆಂದು ನಾ ಆತುರದಿ ಬೇಡಿದೆನೊನೀತ ಗುರುಜಗನ್ನಾಥವಿಠಲ ನಿನಗೆ 5
--------------
ಗುರುಜಗನ್ನಾಥದಾಸರು
ಶ್ರೀ ಮಧ್ವರಾಯರ ಸೇವೆ ದೊರಕುವುದುಜನುಮ ಸಫಲ ಕಾಣಿರೋ ಪಶ್ರೀಮದಾನಂದ ತೀರ್ಥರ ಪಾದವ ನೆನೆವರುಸಾಮಾನ್ಯಸುರರುಕಾಣಿ-ಬೊಮ್ಮನಆಣಿಅ.ಪಜಗತು ಸತ್ಯವು ಅಲ್ಲ ಜಡ-ಜೀವ ಭೇದವಲ್ಲಅಗುಣನು ಪರಬೊಮ್ಮನು-||ಹೀಗೆ ನುಡಿವ ಜನರ ನಿಗಮಶಾಸ್ತ್ರದಿ ಗೆದ್ದುಜಗ ಸತ್ಯ ಸಗುಣ ಬ್ರಹ್ಮ ಎಂದು ಪೇಳುವ 1ಹರಿಸರ್ವೋತ್ತಮನಿತ್ಯತರುವಾಯ ರಮಾದೇವಿತರುವಾಯ ವಿಧಿಪ್ರಾಣರುಸರಸ್ವತಿಭಾರತಿಗರುಡ ಅನಂತ ರುದ್ರತರುವಾಯ ಆರು ದೇವಿಗಳು 2ಸೌಪರ್ಣಿವಾರುಣಿದೇವಿ ಅಪರ್ಣಾದೇವಿಯರು ಸಮರುದ್ವಿಪದಿ ಮನ್ವಾದಿಗಳು ||ಈಪರಿತಾರತಮ್ಯ ಜಪ-ಧ್ಯಾನಾರ್ಚನೆಯಿಂದಅಪವರ್ಗದನ ಸೇವೆಯ ಮಾಡಿರೊ ಎಂಬ 3ಒಂದೊಂದು ಯುಗದಲಿ ಅನಂತ ಸೇವೆಯ ಮಾಡಿಚೆಂದದಿಂದಲಿ ಲಾಲಿಸಿ ||ಇಂದಿರಾರಮಣ ಗೋವಿಂದನೇ ದೈವವೆಂದು |ಸಂದೇಹವಿಲ್ಲದೆ ಸಾಧಿಸಿ-ಮಾಯೀ ಸೋಲಿಸಿ 4ಹಿಮಗಿರಿಯಿಂದ ಸೇತುವೆಯ ಪರ್ಯಂತರಭ್ರಮಿಸುತ ಸುಜನರಿಗೆ ||ಕ್ರಮತತ್ತ್ವ ಬೋಧಿಸಿ ಕಮಲನಾಭನಮೂರ್ತಿಕ್ರಮವರಿತು ಸ್ಥಾಪಿಸಿ ಪೂಜಿಸಿರೆಂದ 5ಭೂತಳದೊಳು ರೌಪ್ಯಪುರದಿ ನೆಲಸಿ ಗೆದ್ದುಧಾತ್ರೀ ಮುದ್ರೆಯ ತೋರಿಸಿ ||ಈತನೇ ಹನುಮಂತ ಈತನೇ ಭೀಮಸೇನಈತನೇ ಭವಿಷ್ಯದ ಬ್ರಹ್ಮಜೀವೋತ್ತಮ6ಶ್ರೀಮದನಂತನೆ ಅನಂತಕಾಲಕೆಯೆಂದುಯಮಕ ಭಾರತ ತೋರಿಸಿಸ್ವಾಮಿ ಸರ್ವಾಂತರ್ಯಾಮಿ | ಸರ್ವಗುಣಪೂರ್ಣನೆಂದುಪ್ರೇಮಿಪುರಂದರವಿಠಲನ ದಾಸನಾದ7
--------------
ಪುರಂದರದಾಸರು
ಸಕ್ಕರೆ ಸವಿ ಸಮ ತತ್ವರಸಿಕಸುಖತೀರ್ಥರಲ್ಲದೆ ಶುನಿಕುತರ್ಕ ಪರ್ಣಾಶನ ನರಗುರಿ ಬಲ್ಲವೆಮುಕ್ತಿಪಥದಹವಣಪ.ಪಯಸ ಪಯವ ನಿರ್ಣೈಸಿ ಸೇವಿಪ ಹಂಸಚಯವಲ್ಲದೆ ಮಲವಬಯಸಿ ಮೆಲ್ಲುವ ವೃದ್ಧ ವಾಯಸ ತಾ ಬಲ್ಲದೆನಯರುಚಿಹೇಳಾ1ದ್ವಿಪಶಿರ ಪೀಯೂಷವ ಸಾಮಭೇದಜÕ ಮೃಗಾಧಿಪ ಬಲ್ಲಾಮೇಧ್ಯ ಆಮಿಷಚಪ್ಪರಿದುಂಬೊಶೃಗಾಲಶ್ವಾನತಾವು ಬಲ್ಲವೆಆ ಪರವಿಡಿಯ ಸುಖವ 2ಮಂಗಳಾಂಬುಜ ಮಕರಂದ ಭೋಜಕಶುಭಭೃಂಗವಲ್ಲದೆ ಅಶುಭಗುಂಗಿ ತಾ ಬಲ್ಲದೆಸುರಭಿಅಸುರಭಿ ಗುಣಂಗಳ ಬಗೆಗಳನು 3ಸುರತರುವಿಂಧನಸುರಭಿಪಶು ಪಾಮರಗೆ ಮಣಿಯೆ ಕಲ್ಲುವರಪೇಯ ವಿಷಗುರುಗುರುಕೃಪೆ ಹಿತದುರುಳನಿಗಪಕಾರ 4ಸಲ್ಲ ಕರುಧಿ ಗಿ? ರುಣೆ ಪಾಲ್ಗರಿದುಣ್ಣಲುಬಲ್ಲ ಪೂರಣಬೋಧರುಫುಲ್ಲನಾಭಪ್ರಸನ್ನವೆಂಕಟಪತಿಯಆಹ್ಲಾದ ಕಾರಣರು 5
--------------
ಪ್ರಸನ್ನವೆಂಕಟದಾಸರು