ಕೋಪದೊಳು ಜಮದಗ್ನಿ ತಾಪದೊಳು ಮಾರ್ತಾಂಡ
ಭೂಪರೊಳು ರಘುನಾಥನೆನ್ನ ನಾಥ
ದ್ವೇಷದೊಳು ಭಾರ್ಗವನು ರೋಷದೊಳು ದೂರ್ವಾಸ
ಮೋಸದೊಳ್ ಶ್ರೀಕೃಷ್ಣ ಮುದ್ದು ಕೃಷ್ಣ
ಭೋಗದೊಳು ದೇವೇಶ ರಾಗದೊಳು ಗಿರಿಜೇಶ
ತ್ಯಾಗದೊಳು ಶಿಬಿರಾಯ ಮದನಕಾಯ
ಜ್ಞಾನದೊಳು ಜನಕನು ಧ್ಯಾನದಲಿ ದತ್ತರ್ಷಿ
ಸೂನೃತದಿ ಹರಿಶ್ಚಂದ್ರ ಮಾನನಿಧಿಯು
ಧನಿಕನೆಂದೆನಲಷ್ಟಸಿದ್ಧಿದಾತಂದೆ
ಘನವಂತನೆನೆ ಪ್ರಣವಸ್ವರೂಪಗೆ
ಧಣಿಯೆನಲು ಮೂಜಗಕ್ಕೊಡೆಯನಿವÀನೆ
ಎಣೆಯುಂಟೆ ಶೇಷಾದ್ರಿವಾಸನಿವಗೆ