ಏತಕೆ ಒಣಭ್ರಾಂತಿ ತಿಳಿಯದು ಮೂರುದಿನದ ಸಂತಿ
ನೀತಿಗೆಟ್ಟು ಸತಿಮೋಹದಿ ಕುಳಿತೆಮದೂತರೆಳೆಯುವಾಗೇನಂತಿ ಪ
ಬರುವಾಗೊರ್ವಬಂದಿ ಬರುತಲೆ ಮಂದಿ ಮಕ್ಕಳೆಂದಿ
ಇರು ಇರುತೆಲ್ಲ ನನ್ನದೆಂದಿ
ಮರೆವಿನ ಆಲಯದೊಳು ನಿಂದಿ
ಕರುಣವಿಲ್ಲದೆತುಸು ಹೆಡತಲೆಮೃತ್ಯು
ಮುರಿದು ತಿನ್ನುವಾಗ್ಯಾರಿಲ್ಲ ಹಿಂದೆ 1
ತನುಜನರು ಇವರು ಧನಕನಕಿರುವತನಕ ಹಿತರು
ಜನಕಜನನಿಯರು
ಕೊನೆಗೆ ಸಂಗಡ ಬರರ್ಯಾರು
ಕನಿಕರವಿಲ್ಲದೆ ಕಾಲದೂತರು
ಘನಬಾಧೆಪಡಿಸಲು ಬಿಡಿಸರೋರ್ವರು 2
ಭೂಮಿ ಸೀಮೆಯೆಲ್ಲ ಈ ಮಹರಾಜ್ಯ ಭಂಡಾರ ಸುಳ್ಳು
ಪಾಮರ ಸಂಸಾರ
ಕಾಮಿಸಿ ಕೆಡಬೇಡೇಲೆ ಮಳ್ಳ
ಕಾಮಜನಕ ನಮ್ಮ ಸ್ವಾಮಿ ಶ್ರೀರಾಮನ
ನಾಮಭಜಿಸಿ ಭವಗೆಲಿದು ನೀ ಬಾಳೋ3