ಒಟ್ಟು 49 ಕಡೆಗಳಲ್ಲಿ , 33 ದಾಸರು , 48 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಅಂಬುಜೇಕ್ಷÀಣ ನಂಬಿದೇ ನಿನ್ನ ಪ. ಅಂಬುಜೇಕ್ಷಣ ನಿನ್ನ ನಂಬಿದ ಭಕ್ತರಘ ದ್ಹಂಬನು ಕಡಿದು ನಿನ್ನಿಂಬನು ತೋರುವೆ ಅ.ಪ. ಅನುಪಮ ಚರಿತ ಅಪ್ರಮೇಯನೆ ಕೃಷ್ಣ ತನುಮನಧನಗಳಾ ನಿನಗರ್ಪಿಸುವೆ ಎನ್ನ ಚಿನುಮಯ ರೂಪನೆ ಮನುಮಥ ಪಿತನೆ ನಿನ್ನ ಸರಿಯಾರೋ ಹನುಮದೀಶ ಕೃಷ್ಣ 1 ಉತ್ತಮರುಗಳನು ನಿತ್ಯದಿ ಸೇವಿಪ ಚಿತ್ತವೆನಗೆ ಕೊಡೋ ಉತ್ತಮೋತ್ತಮನೆ ತೆತ್ತೀಸ ಕೋಟಿ ದೇವರ್ಕಳು ನಿನ್ನನು ಸುತ್ತಿ ಸ್ತುತಿಪರೋ ನರ್ತನ ಗೈಯ್ಯುತ 2 ಪದುಮ ಸಂಭವ ಪಿತ ಪದುಮಿಣಿಯರಸನೆ ಒದಗುತ ಭಕ್ತರಾಪ್ತನು ನೀನಲ್ಲೆ ಸದನದಿ ಕಾಯುತ ಮುದವನು ಬೀರುತ ನೀ ಚದುರ ಶ್ರೀ ಶ್ರೀನಿವಾಸ ಕದನವಿನ್ಯಾತಕೋ ರಾಮ 3
--------------
ಸರಸ್ವತಿ ಬಾಯಿ
ಆಪದ್ಭಾಂಧವ ವಿಠಲ | ಕಾಪಾಡೊ ಇವಳಾ ಪ ಶ್ರೀಪತಿ ಶೀರಂಗ ಸ | ಮೀಪಗನೆ ಹರಿಯೇ ಅ.ಪ. ದುರಿತ ರಾಶಿಗಳಳಿದು | ಹರಿನಾಮ ಸುಧೆ ಸವಿಯೆವರಮಾರ್ಗ ತೋರಿ ಪೊರೆ | ಶ್ರೀದ ನರಹರಿಯೇ |ತರುಣಿಮಣಿ ಹರಿದಾಸ್ಯ | ನೆರೆಸುಕಾಂಕ್ಷಿಸಲಾಗಿವಿರಚಿಸಿಹೆ ಉಪದೇಶ | ಪರಿಪಾಲಿಸಿವಳಾ 1 ತಾರತಮ್ಯಾಂತರದಿ | ಹರಿಯ ಉತ್ಕರ್ಷತ್ವಸುರಸಾದಿ ಸುರರೆಲ್ಲ | ಹರಿದಾಸರೆಂಬಾ |ಎರಡು ಮೂರ್ಭೇದ ಸಹ | ವರ ಜಗದ ಸತ್ಯತೆಯಅರುಹಿ ಪಾಲಿಸು ಇವಳ | ಕರಿವರದ ಹರಿಯೇ2 ಸೀಮೆ ಮೀರಿದ ಮಹಿಮ | ಭೂಮ ಗುಣ ಸಂಪೂರ್ಣಕಾಮಾರಿ ಸಖಕೃಷ್ಣ | ಕಾಮಿತಾರ್ಥದನೇನೇಮ ನಿಷ್ಠೆಗಳಿತ್ತು | ಸಾಧನಗಳಳವಡಿಸಿಕಾಮಿನಿಯ ಪೊರೆಯೊ ಹರಿ ಸ್ವಾಮಿ ಭೂವರಹಾ 3 ಜಲಜಾಕ್ಷನಮಲ ಗುಣ | ತಿಳಿಯಲ್ಕೆ ಸಾಧನವುಕಲಿಯುಗದಿ ಸತ್ಸಂಗಾ | ಬಲ ಉಳ್ಳದೋಹಲವು ಮಾತೇಕೆ ನಿನ್ನ | ಮಲಗುಣ ನಾಮಗಳತಿಳಿಸಿ ಪೊರೆ ಇವಳನ್ನು | ಕಲಿಮಲಧ್ವಂಸೀ 4 ಪಾವ ಮಾನಿಯ ಪ್ರೀಯ ದೇವ ದೇವೋತ್ತಮನೆಭಾವುಕಳ ಪೊರೆಯಲ್ಕೆ | ತೀವ್ರ ಭಿನ್ನವಿಪೇಕಾವ ಕರುಣಾಳು ಗುರು | ಗೋವಿಂದ ವಿಠ್ಠಲನೆಈ ವಿಧದ ಭಿನ್ನಪವ | ನೀ ವೊಲಿದು ಸಲಿಸೋ5
--------------
ಗುರುಗೋವಿಂದವಿಠಲರು
ಇಕೋ ದೇವನೆಂದಾಗಮಗಳು ಪೇಳೆನೀ ಕೋಟಿದೇವರನೇಕೆ ಭಜಿಸುವೆ ಪಸಾಕೊ ಸಂಸೃತಿಯಾಟವಿಷ್ಟರ ಮೇಲೆನೂಕೊ ರಾಗ ದ್ವೇಷಗಳ ಚನ್ನಾಗಿಕಾಕೋದರನಂತೆ ಕಾಡದೆ ಜನರನುಬೇಕೋ ಸಾಧನಗಳ ನೀ ಸಾಧಿಸಲು 1ಏಕೋ ಮೂಢನಂದದಿ ಸುಮ್ಮನಿರುವೆ ವಿವೇಕೋಪಚಯವ ಮಾಡು ಮನದಲಿಲೋಕೋಪಕಾರವ ನಡಸು ನಿಷ್ಕಪಟದಿಈ ಕೋಪವ ಬಿಟ್ಟರಿದಿರಾರು ನಿನಗೆ 2ಫಣ ಕೋಪಮನನಾಗಿ ಪಗಲ ಕಾಣದೆ ನಿನ್ನನಾ ಕೋಪಮೆಗೆ ಪೆಚ್ಚಿದ ನಿಜ ಸುಖವಾತಾಕೋ ಶ್ರೀ ಪಾದವನು ಗೋಪಾಲಾರ್ಯನಕೋ ಕೋ ಎಂದು ಕೊಡುವನು ಮುಕುತಿಯನು 3
--------------
ಗೋಪಾಲಾರ್ಯರು
ಇದನಾ ಬೇಡಿದವನಲ್ಲಾ ಬುಧರಂತರ್ಯಾಮಿ ಲಕುಮಿನಲ್ಲ ಪ ಪಾಪ ಕಾರ್ಯದ ಪಾಪ ವ್ಯಾಪಿಸಿ ದೇಹದಿ ಲೋಪಗೈಸೋದು ಸತ್ಕರ್ಮ ದೀಪ ನೀನಾಗಿರೆ ಉಪದೇಶಿಸೀ ಭವ ಕೂಪದಿಂದೆತ್ತೆಂದು ಬೇಡಿದೆನಲ್ಲದೆ 1 ವಿಷಯದೊಳ್ ಸಂಚರಿಪ ದೋಷಕಾರಿ ಮನ ಆಶೆಯೊಳು ಪೊಕ್ಕು ನಾಶಗೈಪೋದೆನ್ನ ವಿಶೇಷ ಸಾಧನಗಳ ನೀ ಪೋಷಿಸು ಎಂದು ಬೇಡಿದೆನಲ್ಲದೇ 2 ಸುಧೆ ತಂದ ವಿಜಯ ರಾಮಚಂದ್ರವಿಠಲ ನಿನ ಗೆದುರ್ಯಾರೊ ಪೇಳುವರು ಮುದದಿಂದ ಕೃಷ್ಣಾರ್ಯರೊಳು ಬೇಡಿದೆನಲ್ಲದೇ 3
--------------
ವಿಜಯ ರಾಮಚಂದ್ರವಿಠಲ
ಇಂದಿರೇಶ ಭಾಗವತ ಎಂದು ಬರುವನು ಇಲ್ಲೆ ಮಂದಸೂನನುನಮಗೆ ಮುಂದೆ ಗತಿಯೇನುದ್ಧವಾಒಂದು ಕಾರ್ಯವು ಬಾರದಂದಿನಾದಿಈಶ ಸುರಸುಂದರನು ಪೋದನಲ್ಲೋ ಉದ್ಧವಾ ಪ ಪತಿ ಸುತರ ಪರಿಚರಿಸುತಿಹ ನಮ್ಮಮರುಳು ಮಾಡಿದನುದ್ಧವಾ 1 ತೊರೆದು ಮನೆ ಧನಗಳನೆ ಬರಲು ಬಳಿಯಲಿ ಭಾಳತರಲಿ ಮಾಡಿದನುದ್ಧವಾಅರಿಯಲಿಲ್ಲವೊ ನಾವು ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 2 ಮರುಗ ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆತುರುಬಿನೊಳಗಿಟ್ಟುದ್ಧವಾಸರಸ ಸೌಂದರ್ಯಕ್ಕೆ ಮರುಳಾದನಿವನೆಂದುಗರುವ ಮಾಡಿದೆವುದ್ಧವಾಅಂತು ನಮ್ಮನು ಬಿಟ್ಟು ಮರೆಯಾಗಿ ರೋಧಿಸಲುಭರದಿ ಬಂದನುದ್ಧವಾ 3 ಕೋಲು ಕುದುರೆಯನೇರಿ ಬಾಲಕರಕೂಡಿ ತಾ ಕೇಳಿ ಮಾಡಿದನುದ್ಧವಾಲೀಲೆ ಚತುರರ ಸದೃಶ ಬಾಲೆಯರಕೂಡಿ ತಾ ಕೋಲನಾಡಿದನುದ್ಧವಾ4 ದಧಿ ಬೆಣ್ಣೆ ನಮ್ಮಾಲಯದೊಳುತಿಂದು ಭಾಳ ಮೋಹಿಸಿದನುದ್ಧವಾ 5 ಗರಳ ಹರಿಸಿನುದ್ಧವಾಉರಿಯ ನುಂಗುತ ಮುಖದಿ ಬೆರಳೊಂದುಹತ್ತೊಂದು ವರುಷ ಇಲ್ಲಿದ್ದುದ್ಧವಾಅರಿಯಲಿಲ್ಲವೊ ನಾವು ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 6 ಒಂದಿನಾದರೂ ಒಮ್ಮೆ ಮನದಿ ಗೋಕುಲದವರಇಂದು ಸ್ಮರಿಪನೆ ಉದ್ಧವಾಚಂದ್ರ ವದನೇರ ಸ್ನೇಹ ಕೂಡಿ ಪುರದೊಳು ನಮ್ಮನಿಂದು ಮರೆತನೆ ಉದ್ಧವಾ 7 ಬಂದು ಬಳಗವ ಬಿಟ್ಟು ಮಧುರೆಗೆಲ್ಲರುನಿನ್ನ ಹಿಂದೆ ಬರುವೆವೊ ಉದ್ಧವಾಕಂದರ್ಪ ಪಿತನಿವನ ಸ್ಮರಿಸುತಲೆ ದೇಹದಿಪ್ರಾಣವೊಂದೇ ಉಳಿದಿಹುದುದ್ಧವಾ8 ಪರಮ ವೈಕುಂಠನು ಸರತಿಯಲೆ ತೋರಿಸುತಮರುಳು ಮಾಡಿದನುದ್ಧವಾಗಿರಿಗಿರಿ ಝರಿಯೊಳಗೆ ಚರಿಸಿ ಚಿನ್ನದ ಚರಯಗುರುತು ಮಾಡಿದನುದ್ಧವಾಅರಿಯಲಿಲ್ಲವೋ ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 9
--------------
ಇಂದಿರೇಶರು
ಈಗ ಶಾಸ್ತ್ರಗಳನ್ನು ಎರಗಿ ಪೇಳುವೆ ನಾನು ಯೋಗೇಶ ಪ್ರತಿಗ್ರಹಿಸುಆಗುಮಾಡಿದೆ ನೀನು ಅಖಿಲಾಗಮಂಗಳನುಭಾಗಿಸಿ ಬಹುವಾಗಿ ಬಗೆಗಳನು ಪಹದಿನಾಲ್ಕು ಸೂತ್ರಗಳು ಹುದುಗಿದ ವೃತ್ತಿಗಳು ವೊದಗಿ ಶಬ್ದವ ಬೋಧಿಸಿಅದರ ದೋಷಗಳನ್ನು ಅಟ್ಟಿ ಶುದ್ಧಿಯ ಮಾಳ್ಪುದಿದು ತಾನೆ ಮೊದಲಾಗಿ ುೀ ಶಾಸ್ತ್ರವಿರಲು 1ಎರಡನೆಯದು ತರ್ಕವೆಲ್ಲಾ ಜೀವರ ಬಗೆಯನರುಹಿಸಿ ಕೊಡುತಿಹುದುಪರಿಕಿಸಿ ಹದಿನಾರು ಪರಿ ಪದಾರ್ಥಗಳನ್ನುನೆರಹಿಸಿುರೆ ನೀನುನಿನಗೊಪ್ಪಿಸುವೆನು 2ಈ ಸಾಧನಗಳಿಂದಲೇಕ ವಸ್ತುವ ತಿಳಿದುತಾ ಸಾಧಿಸುವ ಬಗೆಯಮೋಸವಿಲ್ಲದ ಹಾಗೆ ಮುಕ್ತಿ ತೋರ್ಪುತ್ತರ ಮೀಮಾಂಸೆ ಯೆಂದೆಂಬುದೆ ನಿಜ ಶಾಸ್ತ್ರ ವಾಗೆ 3ಕರ್ಮ ಬ್ರಹ್ಮವೆಯೆಂದು ಕೊಂಡಾಡಿ ಜನರನ್ನುಧರ್ಮಮಾರ್ಗದಿ ನಿಲಿಪಮರ್ಮದೋರುವ ಪೂರ್ವ ಮೀಮಾಂಸೆ ಯೆಂಬುದನಿರ್ಮಿಸಿುರೆ ನೀನು ನಿರ್ಣೈಪುದಾಗಿ 4ಪರಿಕಿಸಿ ನಿನ್ನುವನು ಪಡೆÉುಸಿ ಪ್ರಾಣಗಳನ್ನುಪರಮಾನಂದದಿ ನಿಲಿಸಿಮೆರೆವ ಶ್ರೀ ತಿರುಪತಿ ವರದ ವೆಂಕಟರಮಣಚರಣಸೇವೆಗೆ ಯೆನ್ನ ಚಲಿಸದಂತಿರಿಸು 5
--------------
ತಿಮ್ಮಪ್ಪದಾಸರು
ಎಲ್ಲಾ ಶಾಸ್ತ್ರದ ಸಾರದ ತಿಳಲ್ಮನ ದಲ್ಲಿ ಹರಿಯನು ಕಾಂಬುದಕೆ ಪ. ಮನದಲಿ ಹರಿಯನು ಕಾಂಬುವ ಸೊಬಗು ಬಲ್ಲಿದ ವೈಕುಂಠಕೋಡ್ವದಕೆ ಅ. ವಿಧಿನೀಷೇಧಗಳಾಚರಿಸುವುದು ವಿಧ ವಿಧ ಜೀವರ ಸಾಧನಕೆ ವಿಧ ವಿಧ ಸಾಧನ ನಂತರ ತಿಳಿವುದು ವಿಧಿ ಜನಕನ ಪದಪಿಡಿವುದಕೆ 1 ಸ್ನಾನಜಪಾಹ್ನೀಕಗಳೆಲ್ಲವು ತನ್ನ ಧ್ಯಾನಕೆ ಶ್ರೀಹರಿ ನಿಲ್ವುದಕೆ ಧ್ಯಾನಕೆ ಶ್ರೀಹರಿ ನಿಂತ ಮೇಲೆ ಸು ಜ್ಞಾನದಿಂದ ತನ್ನರಿವುದಕೆ 2 ನೆಲೆ ಇಲ್ಲದ ಕರ್ಮಾಳಿಗಳ್ ದೇಹದ ಮಲಿನ ತೊಳೆದು ಶುದ್ಧಿಗೈವುದಕೆ ಮಲಿನ ತೊಳೆದು ಮನಶುದ್ಧದಿ ಹೃದಯದಿ ಇಳೆಯರಸನ ನೆಲೆ ಅರಿವುದಕೆ 3 ಅಗ್ನಿ ಹೋತ್ರಯಜ್ಞಾದಿ ಕಾರ್ಯಗಳ್ ಶೀಘ್ರದಿ ಹರಿಯನು ಕಾಂಬುದಕೆ ಶೀಘ್ರದಿ ಹರಿಯನು ಕಂಡ ಮ್ಯಾಲೆ ಇವು ಅಗ್ರಜವಲ್ಲೆಂದರಿವುದಕೆ 4 ರಂಗನ ಮೂರ್ತಿಯನಿಟ್ಟು ಪೂಜಿಸುವುದು ಅಂಗÀದಲ್ಲಿ ತಾನು ಕಾಂಬುದಕೆ ಅಂಗದಲ್ಲಿ ತಾನು ಕಂಡ ಮೇಲೆ ಇವು ಅಂಗಡಿ ಎಂತೆಂದರಿವುದಕೆ 5 ನಿತ್ಯ ನೈಮಿತ್ತಿಕ ಕರ್ಮಗಳೆಲ್ಲವು ಚಿತ್ತದಿ ಹರಿಯನು ತೋರ್ಪುದಕೆ ಚಿತ್ತದಿ ಹರಿಯನು ಕಂಡ ಮೇಲೆ ಇವು ಮತ್ರ್ಯರಿಗೆಸಗಿ ಮೌನಾಗ್ವುದಕೆ 6 ಚಾಂದ್ರಾಯಣ ವ್ರತ ಉಪವಾಸಗಳು ಇಂದ್ರಿಯ ನಿಗ್ರಹ ಮಾಡ್ವದಕೆ ಇಂದ್ರಿಯ ಚಲಿಸದೆ ಮನ ಧೃಡವಾಗಲು ಹಿಂದಿನ ಹಂಬಲ ತ್ಯಜಿಪುದಕೆ 7 ಮಧ್ವಶಾಸ್ತ್ರದ ಸಾರತತ್ವ ಮನ ಶುದ್ಧಿಯಗೈಸುತ ಸುಖಿಪುದಕೆ ಶುದ್ಧರಾದ ಶ್ರೀ ಗುರು ಕರುಣವು ಅನಿ- ರುದ್ಧನ ಹೃದಯದಿ ತೋರ್ವದಕೆ 8 ನೇಮದಿ ದ್ವಾದಶ ನಾಮಧಾರಣೆ ಹರಿ ನಾಮದ ದೇಹ ಬೆಳಗ್ವದಕೆ ಕಾಮಕ್ರೋಧವ ಬಿಡುವುದು ವಳಗಿನ ಶ್ರೀ ಮನೋಹರನನು ಕಾಂಬುದಕೆ 9 ಹೊರಗಿನ ವಸ್ತು ದೃಷ್ಟಿಸುವುದು ಶ್ರೀ ಹರಿ ವರ ವಿಶ್ವರೂಪವ ತಿಳಿವುದಕೆ ವರ ವಿಶ್ವರೂಪಧ್ಯಾನದಿಂದ ತನ್ನ ವರ ಬಿಂಬನ ಕಂಡು ನಲಿವುದಕೆ 10 ಅರಗಣ್ಣ ಮುಚ್ಚುವ ಅಭ್ಯಾಸಗಳೆಲ್ಲ ಸ್ಥಿರಮನವಾಗುವ ಕಾರಣಕೆ ಸ್ಥಿರಮನ ಶ್ರೀ ಹರಿ ದಯ ಮಾಡಲು ನೇತ್ರ ತೆರೆಯದೆ ಬಿಂಬನ ಕಾಂಬುದಕೆ 11 ಶಾಸ್ತ್ರದಿ ಪೇಳುವ ಧ್ಯಾನ ಪ್ರಕರಣವು ಶ್ರೋತ್ರದಿ ಕೇಳುತ ತಿಳಿವುದಕೆ ಗಾತ್ರದಿ ಶ್ರೀ ಗುರು ಕೃಪೆ ಮಾಡಲು ವಳ ನೇತ್ರದಿ ಸರ್ವವು ಕಾಂಬುದಕೆ 12 ಪಕ್ಷಮಾಸ ವ್ರತ ಪಾರಾಯಣ ಅಪ- ರೋಕ್ಷ ಪುಟ್ಟಲು ದಾರಿ ತೋರ್ವದಕೆ ಶಿಕ್ಷ ರಕ್ಷಕರಾದ ಗುರುಕರುಣವು ಅಪ- ರೋಕ್ಷ ಪುಟ್ಟಿಸಿ ನಿಜವರಿವುದಕೆ13 ಪರಿ ಜನರನು ಸೇವಿಸುವುದು ತನ್ನ ಪರಮಾರ್ಥತೆ ದೂರಾಗ್ವದಕೆ ಗುರುಚರಣವ ಸೇವಿಸುವುದು ಶ್ರೀ ಹರಿ ಅರಘಳಿಗಗಲದೆ ಪೊರೆವುದಕೆ 14 ಡಾಂಭಿಕ ಸಾಧನವೆಲ್ಲವು ಶ್ರೀ ಹರಿ ಡಿಂಬದೊಳಗೆ ಮರೆಯಾಗ್ವದಕೆ ನಂಬಿ ಶ್ರೀ ಹರಿ ಗುರು ಚರಣವ ಪೊಗಳ್ಪದು ಡಿಂಬದೊಳಗೆ ಹರಿ ಕಾಂಬುದಕೆ15 ಕರ್ಮ ವೈರಾಗ್ಯಗಳೆಲ್ಲವು ಪುಟ್ಟಿಸಲೂ ಭಕ್ತಿ ಜ್ಞಾನಕ್ಕೆ ಪುಟ್ಟಲು ಭಕ್ತಿ ಜ್ಞಾನ ಪಾಂಡುರಂಗ ವಿಠ್ಠಲನೊಬ್ಬನ ಪಿಡಿವುದಕೆ 16 ಯಾತ್ರೆ ತೀರ್ಥ ಚರಿಪುದು ಶ್ರೀ ಹರಿ ತನ್ನ ಗಾತ್ರದಲ್ಲಿರುವನೆಂದರಿವುದಕೆ ಗಾತ್ರವೆ ಕ್ಷೇತ್ರವೆಂದರಿತ ಮೇಲೆ ಸ ರ್ವತ್ರದಿ ವಿಠಲನ ಕಾಂಬುದಕೆ17 ಎಂತೆಂತೋ ಮಾರ್ಗಗಳರಸುವುದು ಚಿಂತನೆಗೆ ಹರಿ ನಿಲ್ವುದಕೆ ಚಿಂತನೆಗೆ ಹರಿ ನಿಂತ ಮೇಲೆ ತಾನು ಶಾಂತನಾಗಿ ಜಡನಾಗ್ವದಕೆ 18 ಹೊರಗಿನ ಸಂಸ್ಕಾರಗಳೆಲ್ಲವು ತನ್ನ ವಳಗಿನ ಸಂಸ್ಕಾರ ತೆರೆವುದಕೆ ವಳಗಿನ ಸಂಸ್ಕಾರ ತೆರೆದಮ್ಯಾಲೆ ತನ್ನ ಇರವರಿತು ಸುಖ ಸುರಿವುದಕೆ19 ಸಾಸಿರ ಜನ್ಮದ ಸಾಧನಗಳು ಹರಿ ದಾಸನಾಗಿ ತಾನು ಮೆರೆವುದಕೆ ದಾಸನಾದ ಮೇಲೆ ಕ್ಲೇಶಕೆ ಸಿಲುಕದೆ ಶ್ರೀಶನ ಹೃದಯದಿ ಕಾಂಬುದಕೆ 20 ಸಾರತತ್ವವನು ಅರಿವುದು ಗುರು ಮಧ್ವ- ಚಾರ್ಯರ ಮಾರ್ಗವ ಪಿಡಿವುದಕೆ ಪ್ರೇರಕ ಗೋಪಾಲಕೃಷ್ಣವಿಠಲ ಮನ ಸೇರಲು ಕಂಡು ತಾ ನಲಿವುದಕೆ 21
--------------
ಅಂಬಾಬಾಯಿ
ಏನಬೇಡಲೊ ಕೃಷ್ಣ ನಾಚಿಕಿಲ್ಲದೆ ಪ ಜ್ಞಾನಶೂನ್ಯನಾಗಿ ಬಹಳ ಹೀನ ಕಾರ್ಯ ಮಾಡಿ ನಾನು ಅ.ಪ. ಪರರ ವನಿತೆ ಧನಗಳಿಂಗೆ ಅರಿತು ಅರಿತು ಆಶೆಪಡುತ ದುರಿತಕೋಟಿಗಳನು ಮಾಡಿ ಪರಮ ನೀಚನೆನಿಸಿದವನು 1 ವನಗಳನು ಕಡಿಸಿ ಹಿರಿದು ಮನೆಗಳನ್ನು ರಚಿಸಿಕೊಂಡು ವನಿತೆ ಮಾತು ಕೇಳಿ ಜನನಿ ಜನಕರನ್ನು ತೊರೆದ ಪಾಪಿ 2 ಸತ್ಯ ಮತವನು ತುಚ್ಛಗೈದು ನಿತ್ಯಕರ್ಮಗಳನು ಬಿಟ್ಟು ಮತ್ತನಾಗಿ ತಿಂದು ಮಲಗಿ ಕತ್ತೆಯಂತೆ ಹೊರಳುವವನು 3 ಆರ್ತರಾದ ಜನರ ಸಲಹಿ ಕೀರ್ತಿಯನ್ನು ಹೊಂದಿ ದೇಹ ಸಾರ್ಥಕವನು ಮಾಡಿಕೊಳದೆ ಧೂರ್ತನೆನಿಸಿಕೊಳುವ ನರನು 4 ವಾಸುದೇವ ಸಕಲ ದೋಷ ರಾಸಿಗಳನು ದಹಿಸುವ ರಂ- ಗೇಶವಿಠಲರೇಯ ನಿನ್ನ ದಾಸನೆಂದು ಪೇಳದವನು 5
--------------
ರಂಗೇಶವಿಠಲದಾಸರು
ಕರುಣವ ಬೀರು ಚೆನ್ನ ಕಾಯಬೇಕೋ ಎನ್ನಮರೆತಿರೆ ಕಾವರ ಕಾಣೆಪ. ಸೊಪನ ಜಾಗರದಲ್ಲಿ ನಿನ್ನ ಧ್ಯಾನವೆ ಬಂದುತೃಪ್ತನಾಗಿ ನಾನು ಜೀವಿಸುವೆಕಪಟದ ನುಡಿಯಲ್ಲ ನೀನೆ ಬಲ್ಲೆವಿಪತ್ತುಗಳನೆ ಬಿಡಿಸಯ್ಯ 1 ಕಡಲಮಗಳ ಗಂಡ ಕಾಮಧೇನು ನೀ ಕಂಡ್ಯಾಬಡವ ನಿನ್ನಡಿಗೆ ಪೊಡಮಡುವೆಒಡಲ ಬಳಿಯ ನೆಳಲಂತೆ ಬಿಡದೆ ನಿನ್ನದೃಢವಾಗಿ ನಾನು ಕೂಡುವೆನು 2 ತಂಡ ತಂಡದ ವ್ಯಾಧಿಯ ಉಂಡು ಉಂಡು ಬಳಲಿದೆಕಂಡ ಕಂಡವರ ಬೇಡಿ ನೊಂದೆಹಿಂಡುಹಿಂಡುಗಟ್ಟಿ ಬಂದ ಚಂಡ ದಂಡಧರನವರುತುಂಡು ತುಂಡು ಮಾಡಿ ಕಾಡುವರು 3 ಘೋರತರ ವ್ಯಾಧಿಗಳ ತೋರಿ ತೋರಿ ನರಕದಿಮುರಹರನುಣಿಸದೆ ಬಿಡನುಮೀರಿ ಮೀರಿ ಬಹ ಮೃತ್ಯು ಆರನಂಜಿಸುವುದುಭಾರಿ ಭಾರಿ ಗಳಿಸಿದ ಪಾಪ 4 ಹರಿ ನಿನ್ನ ಚರಣದ ಸ್ಮರಣೆ ಒಂದಿರೆ ಸಾಕುಮರಣಗಿರಣಕಂಜೆನಯ್ಯಶರಣಜನರು ನಿನ್ನ ಪ್ರಾಣಕ್ಕೆ ಸರಿಯೆಂಬೆಸಿರಿರಮಣನೆ ಸಲಹೆನ್ನ 5 ಶರಧಿಯೊಳಾಡುವ ಮಂದರಧರ ವರಾಹನೆಹಿರಣ್ಯಾಕ್ಷವೈರಿ ವಾಮನನೆಪರಶುರಾಮನೆ ರಘುರಾಮ ಕೃಷ್ಣ ಬೌದ್ಧನೆಧುರದಿ ಕಲ್ಕಿಯಾಗಿ ಮೆರೆದೆ 6 ಕರಕರ ಮತತತ್ವವ ಒರದೊರೆದು ಪೇಳುವೆಥÀರಥರದ ಹಿರಿಯರನೆಲ್ಲಮಿರಿ ಮಿರಿ ಮಿಂಚುತಿಹ ಮುರಹರನ ಭಜಿಸದೆಹರಿಹರಿಯೆಂದು ಪೇಳೆನೊಮ್ಮೆ 7 ಮನೆಮನೆವಾರ್ತೆಗೆ ಧನಂಗಳ ಗಳಿಸಿದೆಚಿನಿಚಿನಿಯಂಬರಕೆ ಮರುಳಾಹೆಮನೆಮನೆ ಮಹಿಮೆಯ ಕಾಣೆ ಕಾಣೆ ಕೆರೆಗಳನೆನೆನೆನೆದಾಡುತ್ತ ನಾ ಭಜಿಸಿ 8 ತನು ಜೀರ್ಣವಾಯಿತು ಕರಣ ಎನ್ನಿಚ್ಛೆಯೊಳಿಲ್ಲಮನವೆನ್ನ ಮಾತು ಕೇಳದಯ್ಯಇನಿತು ಸಂಕಟದವ ಇನ್ನು ನಾನೆಂತರ್ಚಿಪೆವನಜನಾಭನೆ ಹಯವದನ9
--------------
ವಾದಿರಾಜ
ಛೀ ನಿನ್ನ ಮೋರೆ ಮೇಲೆ - ಠೊಣ್ಯಛೀ ನಿನ್ನ ಮೋರೆ ಮೇಲೆ ಪ ನಿತ್ಯ ಪರಿ ಆಯುಷ್ಯವ ವ್ಯರ್ಥ ಕಳೆಯುತಿದ್ದೆ ಠೊಣ್ಯ 1 ಕಂಡ ಕಂಡಲ್ಲಿಗೆ ಪೋಗಿ ಧನಂಗಳ ಕೊಂಡು ಬರುತ್ತಲಿದ್ದೆಹೆಂಡಿರು ಮಕ್ಕಳು ಹಿತದವರೆಂದು ಕೊಂಡಾಡುತಲಿದ್ದೆಖೋಡಿ ಮಾತುಗಳನು ಹೇಳಿ ಮಂದಿಯ ಕುಂಡೆ ಚಿವುಟುತಿದ್ದೆಭಂಡ ಬಾಳು ಇದು ರಂಡೆ ಗಂಡ ಕಂಡ್ಯ ಯಮನ ಬಾಧೆ ಠೊಣ್ಯ2 ಮಾನವ ಜನ್ಮಕೆ ಬಂದು ಪುಣ್ಯ ಮತ್ತೇನೂ ಮಾಡದೆ ಹೋದೆದಾನವಾಂತ ಸತ್ಪಾತ್ರರಿಗೆ ನೀ ದೀನತ್ವವ ಪಡೆದೆಜ್ಞಾನಶೂನ್ಯ ಮದವೇರಿದ ಸೊಕ್ಕಿದ ಕೋಣಕೆ ಹುಟ್ಟಿದ್ದೆದೀನರಕ್ಷಕಾದಿಕೇಶವ ವಿಠಲಂಗೆ ನೀನತಿ ದೂರಾದೆ ಠೊಣ್ಯ 3
--------------
ಕನಕದಾಸ
ಜನುಮಪಾವನ ಹರಿನಾಮ ಭಜನೆ ಜನುಮ ಪಾವನ ಪರಲೋಕಸಾಧನ ಪ ದಿನದಿನದಿ ಘನವಾಗಿ ಕನಸುಮಸಿನೊಳು ಬಿಡದೆ ವನಜನಾಭನ ನೆನೆದರಿಲ್ಲ ಜನನ ಮರಣ 1 ಲೊಂದುಭವದ ಬಂಧನಗಳ್ ಸಂಧಿಸವೆಂದಿಗು 2 ಕಾಮಜನಕ ಸ್ವಾಮಿ ಶ್ರೀರಾಮಮಂತ್ರ ಗೂಢದಿಟ್ಟು ನೇಮದಿಂದ ಪೊಗಳುತಿರೆ ಆ ಮಹಮೋಕ್ಷ ಸಿದ್ಧಿ3
--------------
ರಾಮದಾಸರು
ತತ್ವಚಿಂತನೆ ಪೇಳಬಹುದೊಬ್ಬರಿಗೆ ವ್ಯಾಸನೆ ಪೇಳಲು ನಿಮಗೆ ಮಾಡಲಶಕ್ಯವಲ್ಲ ಪ ಶ್ರವಣ ಕ್ಷಣಬಿಡದೆ ಮಾಡು ನೀಯೆಂಬಿ ಶ್ರವಣ ಬವಣೆಯು ಬಲ್ಲರೇ ಬಲ್ಲರೊ ಶ್ರವಣ ಮತಿಯೆಂದು ವಾಕ್ಯದಿಂದಲಿ ನಿಮಗಿ ಲ್ಲವರ ಗುರುವಾದಿ ವಾಯು ವಿರಂಚಿಗೆ 1 ಮನನ ಮಾಡೆಂದು ಮಂದಿಗೆ ನೀ ಬೋಧಿಸುವೆ ಮನನ ನಿಮಗೆ ಎಂದಿಗೆ ಇಲ್ಲವೊ ಮನನ ಶಾಸ್ತ್ರಗಳ ಮಾಡಿ ಹ್ಯಾಗ ತಿಳಿಯದೊ ಮನವೆ ಬಲ್ಲುದು ನಿನ್ನ ಮಹಿಮೆ ಎಲ್ಲ 2 ಧ್ಯಾನ ಮಾಡೆಂಬಿ ತಾ ಒಂದೆರೆಡು ವಿಷಯಗಳ ಜ್ಞಾನ ಬಿಡಲಾರೆನೊ ಬಹಳ ಬಿಡುವೆ ನೀನು ಒಂದನ್ನ ಒಮ್ಮೆನ್ನ ಬಿಡಲಾರಿಯೊ ಏನೊ ನೀ ಮಾಡುವುದು ಮಾತ್ರ 3 ನಿನ್ನ ಖಳಗುಣಗಳ ಪರೋಕ್ಷ ನಿಗಮನುದಿನ ಅನ್ಯ ಸಾಧನಗಳಿಂದಲ್ಲದಾಗಿ ನಿತ್ಯ ಮುಕುತಿ ಪೂರ್ಣ ತಾ ಅನ್ಯ ಜನರಿಗೆ ಬಂದ ದಣುವು ತಿಳಿಯೊ 4 ಏಸು ತಾನಂದರು ಖರಿಯ ಪುಸಿವೊಂದಿಲ್ಲ ಲೇಸು ಕೊಡುವವನೊಬ್ಬನಿಲ್ಲ ವಾಸುದೇವವಿಟ್ಠಲ ಒಲಿದು ಸಜ್ಜನರಿಂದ ಈಸು ಸಾಧನೆಗಳಿಂದ ನೀ ಮಾಡಿಸೊ 5
--------------
ವ್ಯಾಸತತ್ವಜ್ಞದಾಸರು
ತಾಸು ಬಾರಿಸುತಿದೆ ಕೇಳೋ ಮನುಜತಾಸು ಬಾರಿಸುತಿದೆ ಕೇಳೋ ಪ ಮೋಸ ಹೋಗಲು ಬೇಡ | ಆಶಪಾಶಕೆ ಶಿಲ್ಕಿವಾಸುದೇವನ ಮನ | ಒಲಿಸುವುದೆಂದೂ ಅ.ಪ. ಶ್ರೀ ತರುಣೇಶನ ಜಗಕೇಕನೆನಿಪನಮಾತು ಮಾತಿಗೆ ನೆನೆ ಮನುಜಾ |ಗಾತುರಗೋಸುಗ ಆತುರ ಪಡದಲೆಪ್ರೀತಿ ಬಿಡಿಸೊ ಸಂಕೀರ್ತಿಸಿ ಎಂದು 1 ಕಾಲ ಕಳೆಯ ಬೇಡ ||ವ್ಯಾಳ ಶಯ್ಯ ಶ್ರೀ ವೆಂಕಟ ನಿಲಯನ |ವ್ಯಾಳೆ ವ್ಯಾಳೆಕೆ ನೆನೆ ಅಲಸದಲೆಂದು 2 ಹೆಣ್ಣು ಹೊನ್ನು ಮಣ್ಣುಗಳ ನೆಚ್ಚಿಬನ್ನ ಬಹಳವ ಪಡವಿಯೊ ಮನುಜಮುನ್ನವೆ ಯೋಚಿಸಿ ಎಚ್ಚರದಲ್ಲಿ |ಪನ್ನಗಶಯ್ಯನ ನೆನೆವುದೆಂದೂ 3 ಭವ ಸಿಂಧುವ ಕಳೆಯೋನಂದವನೀಯುವ ಇಂದಿರೆಯರಸನಚಂದದ ಚರಣಾರವಿಂದತುತಿಪುದೆಂದು 4 ತನುವು ಅಸ್ಥಿರ ಮನವು ಚಂಚಲವೊಧನವೂ ಸಾಧನಗಳು ಬಲು ದುಷ್ಟಾ |ಘನ ಮಹಿಮನು ಗುರು ಗೋವಿಂದ ವಿಠಲನದಿನ ದಿನ ನೆನೆದು ಸುಖಿಸುವುದೆಂದೂ5
--------------
ಗುರುಗೋವಿಂದವಿಠಲರು
ದಯವ ಮಾಡೋ ಎನ್ನ ಭಯವ ಬಿಡಿಸೋ ಪ ರಥಾಂಗ ಮಾವಿನಕೆರೆರಂಗಾ ಅ.ಪ ಅನುದಿನ ಭಜಿಪರೋ ತನು ಮನ ಧನಗಳ ನಿನಗೊಪ್ಪಿಸಲು ಘನ ತಪೋಶಕ್ತಿಯಿಂದ ಮನವೊಲಿಸುವರು ನಿನ್ನಾ ಅನಿತನರಿಯದೆನ್ನೊಳು ಸನುಮತದಿಂದಲಿಯೆನ್ನೊಳು 1 ಕಾಮ ಕ್ರೋಧಂಗಳಿಂ ಭ್ರಾಮಕನಾದೆನ್ನ ನೇಮವೊಂದಿಲ್ಲ ನಿನ್ನ ನಾಮಂಗಳುಲಿಯೆ ನಾ ಭೂಮಿಯೊಳನೇಕ ಜನ್ಮನಾಮದಿಂದೆ ಜನಿಸಿ ಪಾಪ ಕರ್ಮವ ತಳೆದೆಂ ರಾಮದಾಸಾರ್ಚಿತನೆ ಯೆನ್ನೊಳು 2 ಕರಿಯ ಪೊರೆದೆ ಹರೀ ತರಳಗೊಲಿದೇ ಶೌರಿ ದುರುಳನ ಪೊರೆದೆ ಉದಾರಿ ಸರಸಿಜಾಕ್ಷ ಮುರಾರಿ ಸುರಪತೆ ರಕ್ಕಸಾರಿ ಕರುಣಿಸೋ ಸೂತ್ರಧಾರಿ ಕರವಪಿಡಿದು ಯೆನ್ನೊಳು 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಧ್ಯಾನ ಮೌನಗಳೆಂಬ ಜ್ಞಾನಸಾಧನಗಳನು| ಏನು ಅರಿಯದತಿ ದೀನನಾಭವಕಂಜಿ| ನಿನ್ನನೇ ಮೊರೆಯಹೋಕ್ಕಿಹನೋ|| ನಿನ್ನ ನಂಬಿದ್ದವರ ಘನ್ನಭಯ ಹರಿವೆಂದು| ನಿನ್ನನೇ ಮೊರೆಯಹೊಕ್ಕಿಹೆನೋ|| ಜಲದೊಳಗೆ ಎದ್ದೆನ್ನ ಪಾಲೊಳಗೆದ್ದೆನ್ನ| ತಿಳಿದಂತೆ ಮಾಡೋ ನೀ ಮಹಿಪತಿಸುತ ಪ್ರಾಣ|| ನಿನ್ನನೇ ಮೊರೆಯ ಹೊಕ್ಕಿಹೆನೋ
--------------
ಕಾಖಂಡಕಿ ಶ್ರೀ ಕೃಷ್ಣದಾಸರು