ತಡವ ಮಾಡುವಿಯಾಕೊ ಒಡೆಯ ಗೋವಿಂದ
ಬಡವನ ಮೇಲಿನ್ನು ಮುನಿಸೆ ಮುಕುಂದ ಪ.
ಕೆಟ್ಟ ಕೃತ್ಯಗಳತ್ಯುತ್ಕøಷ್ಟವಾದುದರಿಂದ
ಮಂಡೆ ಕುಟ್ಟುವ ತೆರದಿ
ಸಿಟ್ಟಿನಿಂದಲಿ ಬಹು ಕಷ್ಟಗೊಳಿಸಿದಿ
ಕಟ್ಟ ಕಡೆಯಲಿ ನೀ ಕಟ್ಟ ಬಿಡಿಸಿದಿ 1
ದುಷ್ಟ ಬಾಧೆಯ ಮುರಿದಟ್ಟಿದಿ ದಯದಿ
ಘಟ್ಟ ಬೆಟ್ಟಗಳನ್ನು ಮೆಟ್ಟಿ ನಾ ಭರದಿ
ನಿಟ್ಟುಸುರಲಿ ಬಾರೆ ಕೃಷ್ಣ ನೀ ಕರುಣದಿ
ತೊಟ್ಟಿಲ ಶಿಶುವಿನಂದದಲಿ ಪಾಲಿಸಿದಿ 2
ಜನರ ಸಹಾಯವ ಕನಸಿಲಿ ಕಾಣೆ
ಧನಬಲವೆಂದೆಂದಿಗಿಲ್ಲ ನಿನ್ನಾಣೆ
ವನರುಹೇಕ್ಷಣ ನಿನ್ನ ನಾಮ ಒಂದೆ ಹೊಣೆ
ಯೆನುತ ನಂಬಿದುದರ ಫಲವಿನ್ನು ಕಾಣೆ 3
ಜಗದ ಸಜ್ಜನರಿದು ಮಿಗೆ ಮೀರಿತೆನಲು
ಹಗೆಗಳೆಲ್ಲರು ಬಹು ಸೊಗಸಾಯಿತೆನಲು
ನಗಲು ಎನ್ನನು ನೋಡಿ ನಗಧರ ನೀ ಬಂದು
ಅಘಟಿತ ಘಟನ ಮಾಡಿದಿ ದೀನಬಂಧು 4
ಈ ಪರಿಯಲಿ ನಿರುಪಾಧಿಯೊಳೆನ್ನ
ಕಾಪಾಡಿ ಕಡೆಯೊಳೀ ಕಷ್ಟಗಳನ್ನ
ನೀ ಪರಿಹರಿಸಲೇಬೇಕು ಪ್ರಸನ್ನ
ಶ್ರೀಪತಿ ಶೇಷಾದ್ರಿವಾಸ ಮೋಹನ 5