ಕೆಡದಿರು ಕಡುಮೋಹದಡವಿಬಿದ್ದು ಮನ
ಕೆಡುವ ಶರೀರ ಜಡದೃಶ್ಯವಿದು ಪ
ಜಲದ ಮೇಲಿನ ಗುರುಳೆಯಂತೆ ಈ ದೇಹ್ಯ
ಗಳಿಗೆ ಚಲಿಸಿ ಒಡೆದು ನೆಲಕೆ ಬೀಳುವುದು
ಬಳಿದ ಕಸದತೆರಗಳಿಗೆ ನಿಲ್ಲದೆ ಇದನು
ಎಳೆದುಹಾಕುವರಂತ್ಯ ಕಾಲದಲಿ 1
ಕ್ಷಿತಿಯೊಳಿರುವ ತನಕ ಸತಿಸುತರೆಲ್ಲರು
ಸತತ ಹಿತದಿ ಬಲುಪೂಜೆ ಮಾಳ್ಪರು
ಸತ್ತ ಬಳಿಕ ತಮಗ್ಹತ್ತಿತ್ತು ಮುಟ್ಟೆಂದು
ಹಿತದವರೆಲ್ಲ ಮುಟ್ಟುತೊಳಕೊಂಬರು2
ಗಳಿಸಿದ ಧನಮಾನ್ಯ ಬಲುಸಂಪದವೆಲ್ಲ
ಉಳಿವುದು ಎಲ್ಲ ಇಲ್ಲೇ ಜತೆಯಲಿ ಬರದೇನು
ತಿಳಿದು ಶ್ರೀರಾಮನ ಚರಣಕಮಲಧ್ಯಾನ
ಗಳಿಸಿ ಘನಮುಕ್ತಿ ಪಡಕೊಳ್ಳೆಲೊ 3