ಭಕ್ತಿಯಲಿ ನಡೆವರಿವರೇ ಸುಗುಣರೊ
ಮುಕ್ತಿಯನು ಬಯಸಿ ಮುರಾರಾತಿಯ ಚರಣದಲ್ಲಿ ಪ
ಉದಯದಲೆದ್ದು ಉನ್ನತ ಸ್ವರದಿಂದ ಹರಿ
ಪದವೇ ಗತಿ ಎನುತಾ ಎಲ್ಲ ಕಾಲಕೆ
ಉದರ ಚಿಂತಿಯ ಮರೆದು ಮನ ಉಬ್ಬಿ ಉತ್ಸವದಿ
ಪದೋಪದಿಗೆ ಮಂಗಳಾವಾರ್ತಿ ಪೇಳುತ ನಿತ್ಯಾ 1
ಭಾಗವತ ಮಿಕ್ಕ ಪುರಾಣಾದಿ
ನುಡಿಗೆ ಕಿವಿಗೊಟ್ಟು ಹಾಹಾ ಎನತಲಿ
ಒಡನೊಡನೆ ಹರಿ ಮಹಿಮೆಯಲಿ ಇದ್ದು ಮಾರಿಗಳ
ಅಡಿಮಾಡಿ ಆದ್ಯಂತಕಾಲ ಸುಖಿಸುವ ನಿತ್ಯಾ 2
ಈ ದೇಹ ತ್ಯಾಗ ಮಾಡದೆ ಆಗಲಿ ಪಂಚ
ಭೇದ ಪೇಳುವದು ಬಿಡೆನೆಂಬೊ ಸೊಲ್ಲು
ಆದಿತ್ಯ ಲೋಕಕ್ಕೆ ಮುಟ್ಟುವಂತೆ ಕೂಗಿ
ಸಾಧನ ಮಾಡುತಲಿಪ್ಪ ಶುಭಮಾರ್ಗದಲಿ ನಿತ್ಯಾ 3
ಅವಾವ ಮೋಹಕವು ಶಾಸ್ತ್ರದಲ್ಲಿದ್ದರೂ
ಭಾವದಲಿ ಗುಣಿಸದೆ ನಿಕ್ಕರಿಸೀ
ದೇವದೇವೇಶನೆ ಬ್ರಹ್ಮಾದಿಗಳು ವಂಚಿಪ
ಕಾವ ಕೊಲ್ಲುವನೀತನೆಂದು ತಿಳಿದು ನಿತ್ಯಾ 4
ಅನ್ಯಶಬ್ದವು ಅನ್ಯಸ್ಪರಿಶ ರೂಪಕ ರಸಾ
ಅನ್ಯಗಂಧಗಳಿಗೆ ಇಂಬುಗೊಡದೇ
ಧನ್ಯರಾಗಿದ್ದವರ ಕರುಣ ಸಂಪಾದಿಸಿ
ಪುಣ್ಯಭೂಮಿಯನು ಹಾರೈಸುವ ನಿತ್ಯಾ 5
ಅವೈಷ್ಣವನು ಹರಿ ಎಂದು ನುಡಿವಡೆ ತಾನು
ಅವನಂತೆ ಸ್ಮರಿಸದೇ ಸುಮ್ಮನಿದ್ದೂ
ಭವವದ್ದು ಭಾಗ್ಯವನು ಅಪೇಕ್ಷಿಸದೇ ಮುಂದೆ
ನಿತ್ಯ 6
ಭೂಸುರರ ಪಾದದಲಿ ವಿಶ್ವಾಸ ಇಟ್ಟು ದು
ರಾಶೆಯನು ಮಾಡಿ ನರರಾಶ್ರೈಸದೆ
ಏಸೇಸು ವಿಪತ್ತು ಗುಣ ಮೇಲಟ್ಟಿದರು
ನಿತ್ಯ 7
ಕಾಲ ಮೃತ್ಯು ಬಂದು ಹುಂಕರಿಸಿ ನಿಂದು ಮಹ
ಜ್ವಾಲೆಯನು ತೋರಿ ಕಠಿಣೋಕ್ತಿಯಲ್ಲೀ
ಏಳೇಳು ಎನುತ ಎಬ್ಬಿಸಿದ ಕಾಲಕೆ ತನ್ನ
ನಾಲಿಗೆಲಿ ಹರಿ ಕೃಷ್ಣ ಕೇಶವನೆನುತ ನಿತ್ಯಾ 8
ಸಕಲ ಚೇಷ್ಟಾದಿಗಳು ಹರಿಮಾಡಿಸಲು ಉಂಟು
ಮುಕುತಿ ನರಕವೆಂಬ ಯೋಚನ್ಯಾಕೆ
ಸಿರಿ ವಿಠ್ಠಲನಲ್ಲಿ
ಸುಖ ದು:ಖವಿತ್ತದು ಸಮ್ಮತವೆನುತ ನಿತ್ಯಾ 9