ಒಟ್ಟು 14 ಕಡೆಗಳಲ್ಲಿ , 11 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಬಗೆಯಿಂದ ಸಲಿಗೆಯನಿತ್ತಿಯೊ ಮಾವಮರ್ದನ ರಂಗ ನಿನ್ನ ದಯಾ ತಿಳಿಯದು ಪ ಅಂದರೆ ಆನಂದ ಅನಂದದೇ ಅನಾನಂದ ನಿಂದದೆ ಗೋಕುಲ ನಿಲದದೆ ವ್ಯಾಕುಲ ಬಂದದೆ ಪುರುಷಾರ್ಥ ಬಾರದಿದ್ದರೆ ವ್ಯರ್ಥ ಮಂಧರಧರ ನಿನ್ನ ಮನಸು ಬಂದದ್ದೆ ಸರಿ 1 ಕೊಟ್ಟದ್ದೆ ಪುರುಷಾರ್ಥ ಕೊಡದಿಪ್ಪದೆ ಅನರ್ಥ ಅಟ್ಟಿ ಬರುವ ಪಾಪ ಸುಟ್ಟು ಬಿಡು ನಿರ್ಲೇಪ ತಟ್ಟಿದುದೆ ವೇದಾರ್ಥ (ತಟ್ಟದದೆ) ಮಿಥ್ಯ ವಿಠ್ಠಲ ನಿನ್ನ ಭಕ್ತರಿಗೆ ನೀ ಬಲು ಸುಲಭಾ 2 ದೆರಗಲು ಆಕ್ಷಣವೆ ಸಿದ್ಧ ಮಾಳ್ಪೆ ಕರುಣ ನಿಧಿಯೆ ನಮ್ಮ ವಿಜಯವಿಠ್ಠಲ ನಿನ್ನ ಸರಿಯಾದ ದೇವರನು ಕಾಣೆ ತ್ರಿಭುವನದಲ್ಲಿ3
--------------
ವಿಜಯದಾಸ
ಕಾಯಯ್ಯಾ ಎನ್ನಾ ಪ ಸರಸೀರುಹ ಶತಕಿರಣಾ | ಅರುಣಾಂಬುಜಾಲಯ ರಮಣಾ | ಅರುಣಾನುಜ ಗಮನಾ | ಅರಿದಮನಾ 1 ಕಿನ್ನರ ಸುತ ಚರಣಾ | ಶರಣಾಗತ ಜನಭಯ ಹರಣಾ | ಅರುಣಾದ್ರಿ ನಿಲಯ ಸಖಚಿದ ನಾ 2 ಗುರು ಮಹಿಪತಿ ಸುತ ಪ್ರಭು ಕರುಣಾ | ಹರಿಣಾಂಕ ಕುಲವರ ರನ್ನಾ | ಧರಣಿ ಧರಧರ ದೀನೋದ್ಧರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚಾರು ಕೋರಿ ಸ್ಮರಿಸುವೆನು ಹರಿಯೆ ಪ ಕಾರುಣ್ಯ ಸಾಗರ | ಪರಮಕೃಪಾಕರ | ಸಾರಸುಗುಣ ಗಂ | ಭೀರ ರಮಾವರ|| ಠಾರ ಭುವನೋ | ದ್ಧಾರ ದೀನೋ | ದ್ಧಾರ ಹತ್ತವ | ತಾರ ಶ್ರೀಹರಿ1 ಚಂದದಿ ಪೂಜಿಸಿ ದೇವ || ಕಂದರ್ಪನಯ್ಯನೆ | ಮಂಧರಧರನೆ ಮು | ಕುಂದ ಗೋವಿಂದ | ಬೃಂದಾರಕ ವಂದ್ಯ || ನಂದಕಂದನೆ | ಸಿಂಧುಶಯನನೆ | ಹರಣ ಜಗದಾ | ನಂದಮೂರುತಿ | ವೆಂಕಟೇಶನೆ 2
--------------
ವೆಂಕಟ್‍ರಾವ್
ಧಗಧಗಿಪ ಬಿಸಿಲೊಳಗೆ ಜಗವು ಸುಡುತಿಹುದು ಪ ಮಗಳಾದ ಭಾಗೀರಥಿಯ ಕಳುಹಿ ಸಲಹೊ ಅ.ಪ ಪೋಷಣೆಗೆ ಗತಿಯೇನು ಶೇಷಶಯನ 1 ಮಾಯಾ ದೀನ ವತ್ಸಲನೆಂದು ನನ್ನೊಂದರಿಕೆ 2 ಧರಧರನೆ ಸುರಿಸಿದೆ ಸದಾನಂದಗೈದೆ 3
--------------
ಸದಾನಂದರು
ಪರಮ ಪಾಪಿಷ್ಠ ನಾನು ಪ ನರಹರಿಯೆ ನಿಮ್ಮ ನಾಮ ಸ್ಮರಣ ಮಾಡದಲೆ ನರಕಕ್ಕೆ ಗುರಿಯಾದೆನೋ ಹರಿಯೆ ಅ.ಪ. ಹೊಸಮನೆಯ ಕಂಡು ಬಲು ಹಸಿದು ಭೂಸುರರು ಬರೆ ಕೊಸರಿ ಹಾಕುತ ದಬ್ಬುತ ಶಶಿಮುಖಿಯೆ ಬಾರೆಂದು ಅಸಮಸದಿ ಬಣ್ಣಿಸಿ ವಶವಾಗಿ ಅವಳೊಲಿಸುತ ದಶಮಿ ಏಕಾದಶಿ ದ್ವಾದಶೀ ದಿನತ್ರಯದಿ ಅಶನವೆರಡ್ಹೊತ್ತುಣ್ಣುತ ಘಸಘಸನೆ ತಾಂಬೂಲ ಪಶುವಿನಂದದಿ ಮೆದ್ದು ಕುಸುಮ ಗಂಧಿಯ ರಮಿಸುತ ಸತತ 1 ಕೆರೆ ಭಾವಿ ದೇವಾಲಯವ ಕೆಡಿಸಿ ದಿವ್ಯ ಹಿರಿದಾಗಿ ಮನೆ ಕಟ್ಟದೆ ನೆರೆ ನಡೆವ ಮಾರ್ಗದೊಳು ಅರವಟ್ಟಗೆಗಳನ್ನು ಧರಧರದಿ ಬಿಚ್ಚಿ ತೆಗೆದೆ ಪರಮ ಸಂಭ್ರಮದಿಂದ ಅರಳಿಯಾ ಮರ ಕಡಿಸಿ ಕೊರೆಸಿ ಬಾಗಿಲು ಮಾಡಿದೆ ಏಕ ಮಂದಿರವ ಮುಗಿಸಿ ಹರುಷ ಚಿತ್ರವ ಬರೆಸಿ ಪರಿಪರಿಯ ಸುಖ ಸಾರಿದೇ ಮೆರೆದೆ 2 ಸಾಕಲ್ಯದಿಂದ ಸಾಲಿಗ್ರಾಮದ ಅಭಿಷೇಕ ಆಕಳ ಹಾಲಲಿ ಮಾಡದೆ ನಾಕೆಂಟು ನಾಯಿಗಳ ಸಾಕಿ ಮನೆಯೊಳು ಬದುಕ ಬೇಕೆಂದು ಹಾಲು ಹೊಯ್ದೆ ಕಾಕು ಬುದ್ಧಿಗಳಿಂದ ಗುಡಿ ಗುಡಿ ನಸಿ ಪುಡಿ ಹಾಕಿ ಭಂಗಿಯಾ ಸೇದಿದೆ ಲೋಕ ನಿಂದಕ ನಾಗಿ ಪಾಪಕ್ಕೆ ಕೈ ಹಚ್ಚಿ ಅ ನೇಕ ಜೂಜುಗಳಾಡಿದೇ ಬಿಡದೆ 3 ಸ್ನಾನ ಸಂಧ್ಯಾನ ಅತಿಮೌನ ಗಾಯಿತ್ರಿ ಜಪ ಭಾನುಗಘ್ರ್ಯವನು ಕೊಡದೆ ಹೀನತ್ವ ವಹಿಸಿ ದಾನ ಧರ್ಮವ ಮಾಡದೆ ಶ್ವಾನನಂದದಿ ಚರಿಸಿದೇ ಶ್ರೀನಿವಾಸನೆ ನಿನ್ನ ಅನುಪೂರ್ವಕ ಪೂಜೆ ನಾನೊಂದು ಕ್ಷಣಮಾಡದೇ ಬೇನೆ ಬಂದಂತಾಗೆ ಹೀನ ಸಕೇಶಿಯ ಕೈಲೆ ನಾನ ವಿಧಾನ್ನ ತಿಂದೇ ನೊಂದೇ 4 ಭಾಗವತ ಕೇಳಲಿಕೆ ಆದರವೆ ಪುಟ್ಟಲಿಲ್ಲಾ ವಾದಿಗಳ ಮತವಳಿದ ಮಧ್ವ ಸಿದ್ಧಾಂತದ ಹಾದಿಗೆ ಹೋಗಲಿಲ್ಲ ಶೋಧಿಸಿದ ಚಿನ್ನಕೆ ಸಮರಾದ ವೈಷ್ಣವರ ಪಾದಕ್ಕೆ ಬೀಳಲಿಲ್ಲ ವೇದ ಬಾಹಿರನಾಗಿ ಅಪಸವ್ಯ ಮನನಾಗಿ ಓದಿಕೊಂಡೆನೋ ಇದೆಲ್ಲ ಸುಳ್ಳ 5 ಉತ್ತಮ ಬ್ರಾಹ್ಮಣರ ವೃತ್ತಿಗಳನೆ ತೆಗಸಿ ಬ್ರ ಹ್ಮಹತ್ಯಗಾರನು ಎನಿಸಿದೆ ಮತ್ತೆ ಮದುವೆ ಮುಂಜಿ ಸಮಯಕ್ಕೆ ನಾ ಪೋಗಿ ಸತ್ತ ಸುದ್ದಿಯ ಪೇಳಿದೆ ವಿತ್ತವಿದ್ದವರ ಬೆನ್ಹತ್ತಿ ದೂತರ ಕಳುಹಿ ಕುತ್ತಿಗೆಯ ನಾ ಕೊಯ್ಸಿದೆ ನಿತ್ಯ ಕಲ್ಲೊಡೆಯುತಿರೆ ಮೃತ್ಯು ದೇವತೆಯೆನಿಸಿದೆ ಬಿಡದೇ 6 ಕ್ಷಿತಿಯೊಳಗೆ ಇನ್ನಾರು ಹಿತವ ಬಯಸುವವರೆನಗೆ ಗತಿಯೇನು ಪೇಳೊ ಕೊನೆಗೆ ಸತತ ತವ ಧ್ಯಾನದಲಿ ರತನಾಗಿ ಇರುವ ಸ ನ್ಮತಿಯ ಪಾಲಿಸಯ್ಯ ಎನಗೆ ಪತಿತಪಾವನನೆಂಬ ಬಿರಿದು ಅವನಿಯ ಮೇಲೆ ಶ್ರುತಿ ಸಾರುತಿದೆಯೋ ಹೀಗೆ ಶಿತಕಂಠನುತ ಜಗನ್ನಾಥವಿಠ್ಠಲ ನಿನಗೆ ನುತಿಸದೆ ಬೆಂಡಾದೆ ಕಾಯೋ ಹರಿಯೆ 7
--------------
ಜಗನ್ನಾಥದಾಸರು
ಪೇಳಲೇನು ವಿಧಿಯ ಲೀಲೆಯ ಮಹಿಮೆ ಪ ವ್ಯಾಳಶಯನನ ಸಂಕಲ್ಪದಂತಿಹುದು ಅ.ಪ. ಮೂರ್ತಿ ನೋಡುವ ಕಂಗಳು ಅಂಗನೆಯರ ರೂಪ ನೋಡಲೆಳಸಿದವು 1 ಶ್ರೀ ರಮಣನ ಕಥೆ ಕೇಳುವ ಕರ್ಣಗಳು ವಾರನಾರಿಯರ ವಾರ್ತೆಗೆ ಸೋತವು 2 ಮಂಧರಧರನ ನಿರ್ಮಾಲ್ಯವನೊಲ್ಲದೆ ಸುಂದರಿಯರ ಮೈ ಗಂಧ ಬಯಸಿತು ಘ್ರಾಣ 3 ಹರಿಯ ಪ್ರಸಾದವು ಭುಜಿಸದೆ ಜಿಹ್ವೆಯು ಪರಮ ನಿಷಿದ್ಧ ಪಾನ ಭೋಜನ ಬಯಸಿತು 4 ರಂಗನ ಭಕ್ತರ ಸಂಗವ ಬಿಟ್ಟು ಸ್ಪರ್ಶ ಅಂಗನೆಯ ದೇಹಾಲಿಂಗನ ಬಯಸಿತು 5 ಶ್ರೀನಿಕೇತನ ನಾಮ ನುಡಿಯುವ ನಾಲಿಗೆ ದೀನ ಕಾಮಾತುರ ನುಡಿಯಲಿ ನಲಿಯಿತು 6 ಪಾದ ಸ್ಮರಣೆಯ ಬಿಟ್ಟಾ ಮನ ತರುಣಿಯರು ಸದಾ ನೆನೆಸಿತು ಅಕಟಾ 7
--------------
ವರಾವಾಣಿರಾಮರಾಯದಾಸರು
ಪೊರೆಯಲಿದು ಸಮಯ ಗೋವಿಂದ ದೇವ ಶರಣರಕ್ಷಕ ನೆಂಬ ಬಿರುದು ಮೆರೆದ ಮುಕುಂದ ಪ ಬಂಧನದ ಭವದೊಳಗೆ ನಾನೊಂದು ದಿನ ಸುಖವನರಿಯೆ ಮಂದ ಮತಿಯಲಿ ತೊಳಲಿ ಕಂದಿಕುಂದಿ ಮುಂದು ಗಾಣದೆ ಯಮನ ಬಂಧದೊಳು ಸಿಲುಕಿದನು ಮಂಧರಧರ ಕರುಣಸಿಂಧು ನೀ ಬಂದು 1 ಘೋರ ತಾಪವು ಬಂದು ಸಾರಿ ಎನ್ನನು ಮುಸುಕೆ ಭೋರ ನುರಿಯಲಿ ಬಳಲಿ ಚೀರಿಹಾರಿ ದುರಿತ ವಾರಿಧಿಯೋಳ್ ಬಿದ್ದು ಬಾಯಾರಿ ಮೊರೆಯಿಡುವೆ ನರಕಾರಿ ದಯತೋರಿ 2 ತಂಡತಂಡದಿ ವೈರಿಗಳು ಕೂಡಿ ಕಾಯದೊಳು ಅಂಡುಗೊಂಡೆನ್ನಳೆದು ತಂದು ಕೊಂಡು ಹಿಂಡು ಖಂಡವನು ಸುಟ್ಟುರುವಿ ನುಂಗುವರೆನುತ ಕಂಡು ಕೊಂಡಾನು ಸಾರಿದೆನಿಂದು ಬಂದು 3 ತರಳತನ ದಾಯಸದÀಲಿ ನೊಂದೆ ಮುನ್ನಬಲು ತರುಣಿಯರ ಸಂಗದಲಿ ಮರುಳಾದೆನು ಜರೆಬಂದು ಮುಸುಕಿ ಕಣ್ಗಾದೀ ಪರಿಯಭವ ಶರಧಿಯೊಳು ಮುಳುಗಿ ಮೊರೆಯಿಡುವ ಚಿನ್ಮಯನೆ 4 ಹಿಂಗದಿದು ಭಯವ ಪೇಳಲು ತೀರದೆನಗೆ ಶ್ರೀ ರಂಗನಿನ್ನಧೀನ ಜನವರಿಯಲೂ ಮಂಗಳಾತ್ಮಕ ವಾಯುಜನ ಕೋಣೆ ಲಕ್ಷ್ಮೀಶ ನಿನ್ನ ಡಿಂಗರಿಗನ ಕಾಯ್ವುದೀಗ ಸಮಯ ಕೃಪಾಳೋ 5
--------------
ಕವಿ ಪರಮದೇವದಾಸರು
ಬಾರೋ ಬಾಲಾ ಬಾ ಅಪ್ಪುವೆ ತಾರೋ ತೋಳನು ತಾಭೂರಿ ದೃಷ್ಟಿಯ ಮಾಲಿಯನ್ಹಾಕಿದಾಪಾರ ಮಹಿಮ ಬಾ ಪ ಐದು ವರುಷ ಬಾ ಎನಗೆ ಬೋಧವ ನೀಡಿದಿ ಬಾಸಾಧು ಸೇವಿತ ಶ್ರೀಧರ ಭೂಧರ ಗೋಧರಧರನೇ ಬಾ 1 ಗೌರ ಮುಖನೆ ಬಾ ಕರುಣಾವಾರಿ ನಿಧಿಯೇ ಬಾಆರ ಮಾತನು ಹಚಿಕೋ ಬ್ಯಾಡೆಲೆ ಸಾರಿದ ಕೃಷ್ಣ 2 ಗೋಪಿ ಬಂಧನ ಹರಣಾ ಬಾಮುಂದೆ ನಿಲ್ಲುತ ಮಾತುಗಳಾಡಿಸಿ ಇಂದಿರೇಶ ಬಾ 3
--------------
ಇಂದಿರೇಶರು
ಸಂಗವಿತ್ತು ಸಲಹೋ ರಾಯಾ ಸುಖ ಸಂಗಿಗಳಾ ಪ ಸದಾಶಿವ ಶರಣರ ಕರುಣ ಕವಚ ತೊಡಿಸಿ ಜೀಯಾ ಅ.ಪ. ನೀಲಕಂಧರಧರ ರುಂಡಮಾಲೆ ಕುಂಡಾಲ ಚರ್ಮ ಪೆತ್ತವನಪ್ರೀಯಾಮುಗಿದೆನೋ ಕರಮುಗಿದು ಕಳೆಯೊ ತಾಪತ್ರಯ 1 ಮದ್ದು ಹಾಕಿ ಮಣಿಸೋ ಮತ್ತೆ ಮಧ್ವಚಾಲನ ಪಾಲಿಸೋ ತವ ಶುದ್ಧಮತದೊಳಗಾಡಿಸೋ ಗುರುಮಧ್ವರಾಜ ತವದಾಸನೆನಿಸೊ2 ಶತ ಪತ್ರಾರಿಯ ಥಂಪನ ಸುತನೋ ಮತ್ತೆ ಶತ್ರಾನುಜನೆನಿಸುವನೊಪಾಶುಧರಿಪಾಗ್ರಜನೊ ಮತ್ತೆ ಪಶುವೇರುವನ ತಂದೆವರದಗೋಪಾಲ ವಿಠ್ಠಲನ ಭಜಿಸುವನೋ 3
--------------
ತಂದೆವರದಗೋಪಾಲವಿಠಲರು
ಏನು ಫಲ ಇದು ಏನು ಫಲಏನು ಫಲ ಇನ್ನೇನು ಫಲಪಬೇವಿನ ಮೂಲಿಕೆ ಬೆಲ್ಲವ ಸುರಿದರೆಹಾವಿಗೆ ಹಾಲೆರೆದಷ್ಟೆ ಫಲಮಾವಿನ ಮರದಡಿ ಗಾಯನ ಹಾಡಲುಸಾವಿನ ಮನೆಯೊಳಗತ್ತ ಫಲ1ಕೋಣನ ಮುಂದೆ ವೀಣೆಯ ನುಡಿಸಲುಮಾಣಿಕ್ಯ ಮರ್ಕಟಗಿತ್ತ ಫಲಶ್ವಾನನ ಬಾಲವ ನಳಿಗೆಯೊಳಿಟ್ಟರೆಹೀನ ಕುಲಜ ಮಡಿಯುಟ್ಟ ಫಲ2ಮೂರ್ಖಗೆ ಬುದ್ಧಿಯ ಮಾತನು ಪೇಳಲುಗೋರ್ಕಲ್ಲ ಮೇಲೆ ಮಳೆ ಹೊಯ್ದ ಫಲಊರ್ಕತಿ ಕಂಟಕನಾಗಿಹ ಮನುಜನುನೂರ್ಕಾಲ ಬದುಕಿದರೇನು ಫಲ3ಸೂಳೆಯ ಬಳಿಯಲಿ ಅಂತರ್ಯ ನುಡಿದರೆಗಾಳಿಗೆ ಕಸ್ತೂರಿ ಇಟ್ಟ ಫಲಕೋಳಿಯ ಕಾಲಿಗೆ ಗೆಜ್ಜೆಯ ಕಟ್ಟಲುನೀಲಿಯ ನೀರೊಳು ತೊಳೆದ ಫಲ4ಹಂದಿಯ ಕೊರಳಿಗೆ ಹಾರವ ಹಾಕಲುಅಂಧಗೆ ಕನ್ನಡಿ ಕೊಟ್ಟ ಫಲಮಂಧರಧರ ಗೋವಿಂದನೋಳ್ವೈರದಿಇಂzÀ್ರನು ಮಳೆ ಸುರಿದ ಫಲ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಜಯಭೋ ಜಯಭೋ ಜಯ ವೆಂಕಟೇಶ ಪ್ರಭೊಜಯಕರ್ತಾ ಭಯಹರ್ತಾಭಯದಾಯಕ ಮೂರ್ತೆ ಪ.ಫಣಿಗಿರಿವರ ಫಣಮಂದಿರ ಪ್ರಣತಮನೋಹರಘನಸದ್ಗುಣಗಣಪೂರ್ಣಘನಶಾಮಲವರ್ಣಮನ್ಮಾನಸ ಮುನಿತಾಪಸ ಮನೋಮಾನಸ ಹಂಸದನುಸುತಹರ ಧನುಸಂಹರ ದಿನಮಣೀಶ ರುಚಿರ 1ವನಜಾಕ್ಷಾವನಿಜಾಂತಕ ವನಜಾಸನ ಜನಕಕನಕಾಕ್ಷಹ ಕನಕಾಲಯ ಕನಕಸ್ತ್ರೀಪ್ರಿಯವನಭ್ರಮಣಾವನಿರಮಣ ವಿನತಾತ್ಮಜಗಮನಅನಿಮಿತ್ತಜ ಅನಸೂಯಜ ಅನಿಮಿಷೇಂದ್ರಾನುಜ 2ಅರಿಧರಧರ ಅರಿಪರಿಹರ ಅರುಣಾಂಬರಧರಚಿರಮಣಿ ರುಚಿರಾಭರಣಾನುಚರಸುರತರುವೀರಸುರಪರಮಾಪ್ತನೆ ಸಾಸಿರ ಕ್ರೀಡಾಶ್ಚರ್ಯಗಾರಕಲಿಕಲುಷಹರ ಕರುಣಾಕರ ಪ್ರಸನ್ವೆಂಕಟೇಶ್ವರ 3
--------------
ಪ್ರಸನ್ನವೆಂಕಟದಾಸರು
ಜೋಗಿಯ ಕಂಡೆಪರಮಯೋಗಿಯ ಕಂಡೆಭೋಗಿಶಯನಗಂಬೂರ ಚರ್ಚಿತಾಂಗ ವೆಂಕಟೇಶಪ.ವೇದವ ಕದ್ದೊಯ್ದವನ ಕೊಂದ ಜೋಗಿಯ ಕಂಡೆಭೂಧರಧರನಾದ ಜೋಗಿಯ ಕಂಡೆಭೇದಿಸಿ ಪಾತಾಳ ಪೊಕ್ಕು ಗರ್ಜಿಪ ಜೋಗಿಯ ಕಂಡೆಆದರದಿ ಕಂದನ ನುಡಿಯನಾಲಿಸಿ ಬಂದ 1ಅಂಗುಟದಿ ಬೊಮ್ಮಾಂಡವ ಸೀಳಿದ ಜೋಗಿಯ ಕಂಡೆಹೆಂಗಳ ತಲೆಯನರಿದ ಜೋಗಿಯ ಕಂಡೆಅಂಗನೆಗೋಸುಗಾರಣ್ಯ ಸಂಚಾರಿ ಜೋಗಿಯ ಕಂಡೆಪೊಂಗೊಳಲನೂದಿ ಮೂಜಗವನು ಮೋಹಿಸುವ 2ಕನ್ಯೇರ ವ್ರತಗೇಡಿ ದಿಗಂಬರ ಜೋಗಿಯ ಕಂಡೆಉನ್ನತ ವಾಜಿಯೇರಿದ್ದ ಜೋಗಿಯ ಕಂಡೆಪನ್ನಗಾದ್ರಿವರದ ಪ್ರಸನ್ನವೆಂಕಟೇಶನೆಂಬತನ್ನ ನಂಬಿದವರನು ಬಿಡದೆ ಪಾಲಿಸುವ 3
--------------
ಪ್ರಸನ್ನವೆಂಕಟದಾಸರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ಪಾಲಿಸಂಬುಧಿಶಾಯಿ ವ್ಯಾಳಕಶಿಪುಶಾಯಿಪಾಲಿಸು ವಾರಿಧಿüಕೂಲದಿ ದರ್ಭಶಾಯಿ ಮೂಲ ವಟಪತ್ರಶಾಯಿ ಪ.ವೇದೋದ್ಧಾರ ದಯಾಳು ಭೂಧರಧರ ದಯಾಳುಮೇದಿನಿಅಂತರ್ಮಾಲಾದಂಡಶುಭಕುಠಾರಧಾರಿಯೆ ದಯಾಳುಕೋದಂಡಧರ ದಯಾಳುಸ್ವಾದವೇಣುಧರ ದಯಾಳು ಸಮಾಧಿ ವ್ರತಧರ ಧರ್ಮಾಧರ ವಿಶ್ವಾಧರಮಾಧವನಿತ್ಯದÀಯಾಳು1ಪಂಚಜನನವೈರಿವಂಚಕಾಸುರವೈರಿಕಾಂಚನನೇತ್ರಕ ಯದುಪತಿ ಬಲಿಮದಚಂಚಲ ಖಳವೈರಿಪಂಚದ್ವಯಾಸ್ಯನವೈರಿಪಂಚಪಾರ್ಥಾರಿತವೈರಿಪಂಚಬಾಣಾರಿವೈರಿ ಪಂಚಪಾತಕವೈರಿ ಸಂಚಿತಘಕೆವೈರಿ2ಸರನಿಕೇತನಿವಾಸ ಗಿರಿತಳ ಸನ್ನಿವಾಸ ವರಸ್ವಾಮಿಪುಷ್ಕರಸಿರಿಅಹೋಬಲ ನೃಪಾಗರ ತ್ರಿಜಗನಿವಾಸಸರಯೂತೀರ ನಿವಾಸ ಶರಧಿಮಂದಿರವಾಸಸುರವಿರೋಧಿಸದನಪರಮಶಂಬಲವಾಸ ಪರಸನ್ನವೆಂಕಟವಾಸ3
--------------
ಪ್ರಸನ್ನವೆಂಕಟದಾಸರು