ಹರಿವಾಸರದ ಮಹಿಮೆಯೆನು ಅರಿತಷ್ಟು ಪೇಳುವೆನು
ತರಳರಾಡುವ ನುಡಿಯೆಂದು ಗುರುಜನರು ಮನ್ನಿಸಿರಿನ್ನು ಪ.
ಹಿಂದೆ ತಾನಜಾಮಿಳನು ಮಂದಮತಿಯಾಗಿ ಜಗದಿ
ನಿಂದಿತಾಚಾರದಲಿ ಮನವಿರಿಸಿ ನಲಿದು
ಬಂಧುಮಿತ್ರರ ನುಡಿಗೊಂದಿಷ್ಟು ಕಿವಿಗೊಡದೆ ಮನ
ಬಂದಂತೆ ಚರಿಸಿದರನು ಮದಮೋಹದಿಂದ 1
ಮಂದಿರವ ನೊಳಪುಗಲು ಗಂಗೆಯಂತು
ದಂದುಗದಿನೊಂದು ಮಡದಿ ಮಕ್ಕಳಿಗಾಗಿ
ನಿಂದಂತೆ ತಾನುಪವಾಸ ಜಾಗರದಿ ಕಳೆದು ಮರುದಿನ ದ್ವಾದಶೀ2
ಮರಣದಾಹದಿ ಹರಿವ ನೀರ ಕುಡಿಯೇ
ಹರಿಗರ್ಪಿಸಿದ ತುಳಸಿದಳವೊಂದದರೊಳಿರೆ
ದುರಿತಕೋಟಿಗಳೆಲ್ಲ ದೂರಸಾರೆ 3
ಅಂತ್ಯಕಾಲದೊಳೈತಂದ ಅಂತಕನದೂತರಂ ಕಂಡು
ಇಂದಿರೇಶನಾಣತಿಯಂತೆ ಕಿಂಕರರು 4
ಅರಿಯದಾಚರಿಸಿದೊಡಂ ಹರಿವಾಸರದ ಮಹಿಮೆ
ಪರಮಪದನಾಥನೇ ವಶನಪ್ಪನಯ್ಯಾ 5
ಹರಿಭಕ್ತ ರುಕ್ಮಾಂಗದನ ಪರಿಭವಿಸೆ ಬರೆ ಮೋಹಿನಿ
ತರಳ ಧರ್ಮಾಂಗದನ ಶಿರವತೆಗೆಯೆಂದೆನಲು
ವರಧರ್ಮದೇವನೇ ಕರವಿಡಿದು ಪೊರೆದಂ6
ದಶಮಿ ದ್ವಾದಶೀ ದಿನದಲ್ಲಿ ಅಶನವೊಂದೇಸಾರಿ ಏಕಾ
ಕುಸುಮನಾಭನಾ ಶೇಷಗಿರಿವಾಸ ಕೈಬಿಡನೊ 7