ಒಟ್ಟು 4461 ಕಡೆಗಳಲ್ಲಿ , 126 ದಾಸರು , 3134 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
ಇಂದು ಇಂದು ಸೂಕರ ಕ್ರೂರರೂಪವತಾಳ್ದನಾ ಪೋರ, ಜನನಿಶಿರಹಾರಿ, ವನಚರ, ನಾರಿಜನರಿಗೆ ಒಲಿದನಾ 1 ನಾರಿವ್ರತ ಪರಿಹಾರ ಮಾಡಿ ಹಯವನೇರಿ ಮೆರೆದನಾ ಧಾರುಣಿಯೊಳು ಸಮೀರಗಿರಿವಾಸ ವೀರಪುರದೊಳು ತೋರೊನಾ 2 ವೀತಶೋಕ ವಿಧಾತಜನಕನ ದೂತಜನ ಪರಿಪಾಲನಾ ಖ್ಯಾತಮಹಿಮನ ದಾತಗುರುಜಗ ನ್ನಾಥವಿಠಲ ರಾಯನಾ 3
--------------
ಗುರುಜಗನ್ನಾಥದಾಸರು
(1) ದಶಾವತಾರ ಶ್ರೀಹರ ನಿನ್ನ ಲೀಲೆ ಏನು ಹೇಳಲಯ್ಯ ನಾನು ಪ ಮೋಹಗೊಳಿಸಿ ಲೋಕವನ್ನು ಪಾಲಿಸುತ್ತಿಹೆ ಅ.ಪ ಮತ್ಸ್ಯನಾಗಿ ವೇದ ತಂದೆ ಆಮೆಯಾಗಿ ಅಮೃತ ವಿತ್ತೆ ವರಹನಾಗಿ ನೀನು ಧರಣಿ ಹೊತ್ತೆಯೈ 1 ನರಹರಿ ತರಳರಕ್ಷ ಬ್ರಹ್ಮಚಾರಿ ಇಂದ್ರಪಾಲ ದಾ ಶರಥಿಯೆ ನೀನು ಧರ್ಮ ತೋರ್ದೆಯೈ 2 ಬಾಲಕೃಷ್ಣ ಲಾಲಿಲೀಲೆ ಪರುಶುಧಾರಿ ಪಿತೃಭಕ್ತ ಬಲ್ಲರಾಮನಾಗಿ ನೀನು ಬುದ್ಧಿ ಪೇಳ್ದೆಯೈ 3 ಕಲ್ಕಿಯಾಗಿ ಕೆಸರ ತೊಳೆವೆ ವಿಷ್ಣು ಜಾಜಿಶ್ಯಾಮವನ್ನು ಶುಲ್ಕವಿಲ್ಲದಂತೆ ನಿನ್ನಲ್ಲಿಗೊಯ್ವುದೈ 4
--------------
ಶಾಮಶರ್ಮರು
(2) ರಾಮಾನುಜರು ಬೇಡಿಕೊಂಬುವೆನು ನಿಮ್ಮ ರಾಮಾನುಜರೆ ಬೇಡಿಕೊಂಬುವೆನು ನಿಮ್ಮಾ ಪ ಪಾಡಿ ಹಿಗ್ಗುವ ಸುಖವ ಸಂತತ ಕಮಲ ಮಧ್ಯದೊ ಳಾಡುತೆನ್ನನು ರಕ್ಷಿಸೆನುತಲಿ ಅ.ಪ ಚರಮ ಶ್ಲೋಕವ ಬೋಧಿಸಿ ಅಷ್ಟಾಕ್ಷರಿಯೊ ಳಿರುವ ಗೋಪ್ಯವ ತೋರಿಸಿ ಗೈವುತ ಪ್ರಣವ ಶಬ್ದದಿ ಬೆರಸಿ ನಿನ್ನನೆ ಭಜಿಸಿ ಸ್ಮರಿಸುತ ಪರಮನಾಗುವ ಮತಿಯ ತ್ವರಿತದಿ 1 ಅಷ್ಟಮದಗಳು ಎನ್ನನೂ ಬಂಧಿಸಿ ಮಾಯಾ ಅಷ್ಟಪಾಶದಿ ನೊಂದೆನೊ ದುಷ್ಟಕಾಮಾದಿಗಳ ಭ್ರಾಂತಿಯು ಕಟ್ಟ ನರಕದಿ ಕೆಡಹಿ ಸುಡುತಿದೆ ಭ್ರಷ್ಟಗುಣಗಳ ದೂರಸೇರಿಸಿ ಶ್ರೇಷ್ಠಮುಕ್ತಿಯ ಪಡೆವ ವಿರತಿಯ 2 ಜ್ಯೋತಿ ಜ್ಯೋತಿಯ ನಿಲ್ಲಿಸಿ ಹೂಬಳ್ಳಿಯೊಳ್ ಜ್ಯೋತಿನೋಡು ಪೂಜಿಸಿ ಮಾತೆ ಮಾತುಳ ಪಾಲಕಾನುಜ- ಸತಿ ಸುತ ಬಂಧು ಮಿತ್ರ ವ್ರಾತ ಸಂಗಡಬಂಧಬಿಟ್ಟು ಪು ನೀತನಾಗಲಿಬೇಕು ಎನುತಲಿ 3 ಯಾದವಾದ್ರಿಯ ವಾಸನೆ ಭಕ್ತರನೆಲ್ಲ- ಮೋದದಿಂದಲಿಯಾಳ್ವನೇ ಮೇದಿನೀಮಹದೇವಪುರವರ ನಾದಶ್ರೀಗುರುರಂಗ ನಿನ್ನ ಸು- ಪಾದನಂಬಿದ ರಂಗದಾಸನ ಪರಮಯೋಗಿಯು ಎನ್ನಿಸೆನುತಲಿ 4 ಅಷ್ಟಾಕ್ಷರದ್ವಯದರ್ಥದಿ ನಿಷ್ಠಾಪರನಾಗಿ ಮನದಿ ನಿರುತಂ ಜಪಿಸಲ್ ಇಷ್ಟಾರ್ಥವು ಸಿದ್ಧಿಸುತಂ ಅಷ್ಟಮನೋಳ್ಬೆರದುನಿಲ್ವನಿದು ಸಿದ್ಧಾಂತಂ ಕಂದ
--------------
ರಂಗದಾಸರು
(ಶೇಣಿ ಗೋಪಾಲಕೃಷ್ಣ) ಗೋಪಾಲಕೃಷ್ಣ ನಿನ್ನಡಿಗಳ ಸೇರಿದೆ ಪ. ಕಾಳಕೂಟಧರ ಕಾಳಿಯ ಸರ್ಪನ ಧಾಳಿಗೊಂಡಿಹ ಗೋಪಾಲರನ್ನು ಪಾಲಿಪೆನೆಂದು ಕೃಪಾಲಯ ತಾಂಡವ ಲೀಲೆಯಿಂದ್ಯಮುನಾಜಲಾಲಯ ಬಿಡಿಸಿದ 1 ವಿಷವೃಕ್ಷ ದಾವಾಗ್ನಿ ವೃಷಭಕೇಶಿ ಬಕ ಅಸಮಸಾಹಸಧೇನುಕಾದಿಗಳಾ ನುಸಿಯಂತೆ ಬಡಿದು ತನ್ನೊಶಗರ ಸಲಹಿದ ಪಶುಪತಿ ವಂದ್ಯ ನೀ ದೆಸೆಯೆಂದು ನಂಬಿದೆ 2 ಸರ್ವದೋಷಹರ ಸಕಲಲೋಕ ವಂದ್ಯ ಗೀರ್ವಾಣಗಣಪೂಜ್ಯ ಪಾದಪದ್ಮ ನಿರ್ವಹಿಸುತ ನೀನೆ ನಿರುತ ನಾಗರಾಜ ಪರ್ವತನಾಥ ಸುಪರ್ಣಾಂಗ ಗಮನಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅನುದಿನ ಸಾನುರಾಗದಿ ಸಲಹೋ ವಾನರೋತ್ತಮ ಮಾರುತಿ ಪ ವಾಣಿಯ ಮುದಕೆ ಕ್ಷೋಣಿ ಕುಮುದಕೆÉ ಏಣಿಲಾಂಛನನೆನಿಸಿ ಗಾಣಧಾಳದಿ ತಾಣಗೈದಿಹ ಪ್ರಾಣದೇವನೆ ಅ.ಪ ಯುಗಯುಗದಲಿ ಜನಿಸಿ | ರಘುಕುಲೇಶನ ಸ್ತುತಿಸಿ ವಾರಿಧಿ ಲಂಘಸಿ || ಜಗದ ಜನನಿಗೆ ಕ್ಷೇಮತಿಳುಹಿದ ಒದೆದು ನಗರ ದಹಿಸಿದ | ಸುಗುಣ ನಾಲ್ಮೊಗ ಪದಾರ್ಹನೆ ಮುಗಿವೆ ಕರವನು ಅಘವ ಓಡಿಸಿ 1 ದ್ವಾಪರದಲ್ಲಿ ಬಹುಪಾಪಾತ್ಮಕರಾದ ಭೂಪಾಲರ ಧುರದಿ | ಕೋಪದಿ ಸಂಹರಿಸಿ ಸತಿಮಣಿ ದ್ರೌಪದಿಗೆ ಮುದವಿತ್ತು ಸೇವೆಯನು ಗೋಪತಿ ಶ್ರೀಕೃಷ್ಣ ಸಲಹಿದ ಭಾಪು ಭಾಪು ಪರಾಕ್ರಮಶಾಲಿ 2 ಬಂದು ಈ ಯುಗದಿ ಮಧ್ಯಮಂದೀರಾತ್ಮಜನಾಗಿ ಮಂದರ ಮತವ ಮುರಿದು || ಪರ | ನೆಂದು ವಿಜಯದಿ ದುಂದುಭಿ ಮೊಳಗಿಸಿದ ಕಾರಣ ಗುರುಗಂಧವಾಹನ 3
--------------
ಶಾಮಸುಂದರ ವಿಠಲ
ಅಬ್ಜಭವಪಿತ | ಮದ್ಗುರ್ವಂತರ್ಯಾಮಿ | ಸಲಹಯ್ಯ ಕುಬ್ಜ ಮೂರುತಿ | ಯಾದ ಗುರು | ಗೋವಿಂದ ವಿಠಲಯ್ಯ ||ಪ| ಈಶ ತಂದೆ ವೆಂಕ | ಟೇಶ ವಿಠಲನ | ದಾಸ ಸಹವಾಸ |ದೋಷ ರಾಶಿಯ | ನಾಶ ಗೈಸಿತು | ಶ್ರೀಶ ಕೇಶವನೇ 1 ಮರಣ ಸಮಯದಿ | ಚರಣ ಪುಷ್ಕರ | ಭಜಿಸಿದ ಜಮಿಳನ |ಕರುಣದಿಂದಲಿ | ಮರೆದ ವೋಲ್ | ಎನ್ನ ಮನಕೆ ಬಾ ನಾರಾಯಣ 2 ಭೇದ ಮತವೆಂ | ಬಬ್ಧಿಯಲಿ | ಉದಿಸಿವೆನು ಕಾಣಯ್ಯ |ಮಧ್ವಪತಿ | ಮದ್ಭಾರ ನಿನ್ನದು | ಸಲಹೊ ಮಾಧವನೆ 3 ಗೋವಿದಾಂಪತಿ | ಗೋಪ ಪಾಲಕ | ಶ್ರೀಶ ಗೋವಿಂದಮಾವ ಕಂಸನ | ಕೊಂದಸಿರಿ | ಗೋವಿಂದ ಸಲಹಯ್ಯ 4 ಸಿರಿ | ಕೃಷ್ಣ ಬೇಡುವೆ | ಕಷ್ಟ ಬಿಡಿಸಯ್ಯ |ವೃಷ್ಟಿಕುಲ ಸಂ | ಪನ್ನ ಪಾವನ | ವಿಷ್ಣು ಮೂರುತಿಯೆ 5 ವೇದಗಮ್ಯ | ದಯಾಪಯೋನಿಧಿ | ಸಾಧು ವಂದಿತನೆ |ಮೋದದಿಂ | ತವಪಾದ ಪೂಜಿಪೆ | ಪಾಲಿಸೈ ಮಧುಸೂಧನ 6 ಕಾಯ ಮಮತೆಲಿ | ಕಟ್ಟೆ ಧರ್ಮಾತ್ಮ |ಭವದ ಭವಣೆಯ | ಬಿಡಿಸುವುದು | ಬಲಿವರದ ತ್ರಿವಿಕ್ರಮ 7 ವಿಮಲ ಸತ್ಕಲ್ಯಾಣ | ಗುಣ ನಿಸ್ಸೀಮ | ಸುಜ್ಞಾನಾಅಮರಾರಿಯ ಧ್ವರ | ಕೆಡಿಸಿ ಉಳಿಸಿದೆ | ಶೀಲ ವಾಮನ 8 ಹೃದಯ ಶೋಭಿತ | ಮೋದಮಯ | ಮಧ್ವಾಂತರಾತ್ಮಕನೇ |ಆದಿಮೂರುತಿ | ಸಾಧು ವಂದಿತ ಕಾಯೋ ಶ್ರೀಧರನೇ 9 ಭಂಜನ ಬಿಸಜ ಭವ ಪಿತ | ಈಶ ಸರ್ವೇಶಾ |ಒಸೆದು ಬೇಡುವೆ | ಕಸರು ಕರ್ಮವ | ಹರಿಸೋ ಹೃಷಿಕೇಶ 10 ಬದ್ಧ ಜೀವನ | ಅಬದ್ಧ ಮಾಡಲು | ತಿದ್ದಿ ಸೃಜಿಸಿದೆಯೋ |ಸದ್ಗುರುವೆ ಮತ್ | ಪೊದ್ದಿಕೆಯ ಕಳೆ | ಪದ್ಮನಾಭನೆ 11 ಸಿರಿ ಮನೋಹರ |ಧಾಮತ್ರಯ ಸು | ತ್ರಾಮ ವಂದಿತ | ಪಾಲಿಸೈ ದಾಮೋದರ 12 ಪಂಕ ಕಳೆಯಯ್ಯ |ವೆಂಕಟಾ ಬಿರು | ದಾಂಕ ಜಯ ಜಯ | ಸಂಕರುಷಣ 13 ವಿಶ್ವ ವ್ಯಾಪಕನೇಶ್ರೀಶ ಸದ್ಮನೆ | ವಾಸುದೇವನೆ | ಪೋಷಿಸೈ ಪರಮಾತ್ಮನೇ 14 ನಿರವದ್ಯ ಆಪನ್ನ ಪಾಲನೆ | ಪೊರೆಯೊ ಪ್ರದ್ಯುಮ್ನ 15 ಅನಿರುದ್ಧ 16 ಕರಿವರನು ತವ | ಚರಣ ಸರಸಿಜ | ನಂಬಿ ಮೊರೆಯಿಡಲು |ಕರದ ಚಕ್ರದಿ | ತರಿದು ನಕ್ರನ | ಬಿಸುಟ ದೊರೆ ಪುರುಷೋತ್ತಮ 17 ದರ ಚಕ್ರಧರ | ಅಧೋಕ್ಷಜ18 ತರಳ ಕರೆಯಲು | ಭರದಿ ಕಂಬದಿ | ಬಂದ ತ್ರಿಪದಾಹ್ವದುರುಳ ಹಿರಣ್ಯನ | ತರಿದು ಭಕ್ತನ | ಸಲಹಿದ್ಯೋ ನರಸಿಂಹನೆ 19 ಕಚ್ಛಪ ಅಚ್ಯುತ | ಸಲಹೊ ಚ್ಯುತಿ ದೂರ | 20 ಸಾನುಕೂಲವು | ಸಕಲ ಸಾಧನ | ನಿನ್ನ ಭಜಿಸುವಗೇ ಜ್ಞಾನಗಮ್ಯ | ಅನಾದಿ ರೋಗವ | ನೀಗೋ ನೀ ಜನಾರ್ಧನ 21 ಸ್ಮರ ಕೋಟಿ ಸುಂದರ | ಪಾಹಿ ಉಪೇಂದ್ರ 22 ಮರದಿ ಎಂಜಲ | ಸವಿದು ಶಬರಿಯ | ಕಾಯ್ದೆ ಮುರವೈರಿ ತ್ವರದಿ ತ್ವತ್ಪದ | ವನಜ ಕಾಂಬುವ | ಹದನರುಹು ಶ್ರೀಹರಿ 23 ಜಿಷ್ಣು ಸಖ | ಶಿಷ್ಟೇಷ್ಟಪರಿ | ಹರಿಸಯ್ಯ ಮುತೃಷ್ಣಾ |ಕೃಷ್ಣೆ ಗಕ್ಷಯ | ವಸನ ದಾತನೆ | ಕಾಯೊ ಶ್ರೀ ಕೃಷ್ಣ 24 ನಿರುತ ನಿನ್ನಯ | ಚರಣ ಪುಷ್ಕರ | ಮಧುಪನೆನಿಸಯ್ಯಸ್ಮರಿಪರಘ | ಪರಿಹರಿಪ ಗುರು | ಗೋವಿಂದ ವಿಠಲಯ್ಯಾ | 25
--------------
ಗುರುಗೋವಿಂದವಿಠಲರು
ಆರೀಗೆ ಮೊರೆ ಇಡಲೋ | ನಿನ್ಹೊರತಿನ್‍ಆರೀಗೆ ಮೊರೆ ಇಡಲೋ ಪ ಮಾರ ಜನಕೆ ಹರೇ ಅ.ಪ. ಭಾರ ಬೆನ್ನಿಲಿ ಪೊತ್ತುಧಾರುಣಿಯನೆ ಚಿಮ್ಮಿ | ದುರುಳನ ತಂದೆಯೋ 1 ಕರವ ಚಾಚಿದೆ ದೇವಾ 2 ಪರಶುವ ಸಿಡಿದು ನೀ | ತರಿದೆಯೊ ತಾಯ್ ಕೊರಳಶರದಿಯ ಬಂಧಿಸಿ | ದುರುಳರ ತರಿದೆಯೋ 3 ಪೂಥಣಿ ಶಕಟ ಧೇನುಕ ವತ್ಸ ಭಂಜನಮಥಿಸಿ ಕಂಸನ ನಿನ್ನ ಮಾತಾಪಿತರ ಕಾಯ್ದೆ 4 ಬೆತ್ತಲೆ ತಿರುಗಿ ನೀ | ಉತ್ತಮ ಹಯವೇರಿವತ್ತಿ ದುರುಳನ ಶಿರ | ಕತ್ತರಿಸಿದೆ ದೇವಾ 5 ಆರತ ಜನ ನಿನ್ನ | ಈ ರೀತಿ ಪೇಳ್ವರುವಾರುತೆ ಕೇಳಿ ನಾ | ಮೊರೆಯಿಟ್ಟು ಅರುಹುವೆ 6 ಮುರಹರ ಶ್ರೀಕೃಷ್ಣ | ಗುರು ಗೋವಿಂದ ವಿಠಲಸರುವ ದೇವೋತ್ತಮ | ಕರುಣದಿ ಸಲಹೆನ್ನ 7
--------------
ಗುರುಗೋವಿಂದವಿಠಲರು
ಇಂದಿರಾನಂದ ಉದಧಿವರ್ಧನನೆಂದು ಪ ಕಂದರ್ಪಕೋಟಿ ಲಾವಣ್ಯನಿಧಿ ಮನಪೊಂದು ಅ.ಪ ನಾನು ನನ್ನದು ಎಂಬ ಜ್ಞಾನ ಸಂತತಿಯಿಂದ ನಾನಾ ಯಾತನೆ ಭಾವ ಬಲೆಯ ಕಟ್ಟಿ ಹೀನಗೋಜಿಲಿ ಸಿಕ್ಕಿ ಬಲುನೊಂದೆ ಗೋವಿಂದ ನೀನು ನಿನ್ನದು ಎಂಬ ಅಮೃತಗಾನದಿ ನಿಲಿಸು 1 ದರ್ವಿಯಂದದಿ ನಾನು ನೀ ಸರ್ವ ಸ್ವಾತಂತ್ರ ನಿರ್ವಾಹ ನಿನ್ನಿಂದ ಸರ್ವ ಜಗಕೆ ದೂರ್ವ ಏರಿಸೆ ಸಕಲ ದುರಿತವಳಿಸಿ ಮುಕ್ತಿಸುಖ ತೋರ್ವಂಥ ಗುಣನಿಧಿ ಸರ್ವಾತ್ಮ ಹೊರೆ ಹೊರೆಯೊ 2 ನಿನ್ನ ದರುಶನ ಬಿಟ್ಟು ಅನ್ಯತ್ರ ನಿರ್ಭೀತಿ ಎನ್ನಲಿ ಎಂದೆಂದು ವೇದವೇದ್ಯ ನಿನ್ನ ದರುಶನ ಫಲಕೆ ನಿನ್ನ ಮಹಕರುಣ ಇನ್ನು ಕಾರಣದೇವ ಧನ್ಯರಲಿ ಇಡು ಎನ್ನ 3 ಮನೋವಿಕಾರಗಳೆಂಬ ದುಃಖಾರ್ಣದಿ ಬಿದ್ದು ಅನುಮಾನ ಮಾಡಿದೆನೊ ನಿನ್ನ ಅಮೃತ ತನುಧ್ಯಾನ ಮನಕಿಡಿಯದೇನುಗತಿ ಯದುವರ್ಯ ತೃಣಕೆ ಕೈವಲ್ಲೀವ ತ್ರ್ಯಧೀಶಮನಪೊಂದು 4 ಜ್ಞಾನಮನ ಬಿಡದಿರು ದೀನ ಬಾಂಧವ ಕೃಷ್ಣ ಇನ್ನು ಮಾಯವನು ತೆಗೆದೆನ್ನ ಬೆರೆಯೊ ಜ್ಞಾನನಿಧಿ ಜಯೇಶವಿಠಲನೆ ವಿಧಿವಂದ್ಯ ಪ್ರಾಣಾಧಾರಕ ಶುಕನ ಆನಂದನಿಧಿ ಪಾಹಿ 5
--------------
ಜಯೇಶವಿಠಲ
ಉಗಾಭೋಗ ಪರಶು ಮುಟ್ಟಲು ಲೋಹ ಸ್ವರ್ಣವಾಗುವ ಪರಿ ಸಿರಿ ಒಲಿಯೆ ದಾರಿದ್ರ್ಯ ಹತವಾಗಿ ಪೋಪಂತೆ ಅರಸು ಮುಟ್ಟಲು ದಾಸಿ ವರನಾರಿ ಅಪ್ಪಂತೆ ವಿರಜೆ ಮುಳುಗಲು ಜೀವ ವಿರಜನಾಗುವ ತೆರದಿ ವರ ಸುಧಾಪಾನದಿ ಜರೆ ಮರೆ ರೋಗಗಳು ಹರಿದ್ಹೋಗುವಂದದಿ ಹರುಷದಿ ನಮಗಿನ್ನು ಗುರುವರ ದೊರಕಲು ವರ ಪುಣ್ಯರಾಸಿಯಂತೆ ಪಾಪಿ ನಾನು ಹರಿಭಕ್ತನಾದೆ ಮುಂದೆ ಕರುಣಾರ್ಣವ ಸುರತ ಜಯೇಶವಿಠಲ ಸುರಿವ ಕರುಣ ನಿಶ್ಚಿಂತೆ
--------------
ಜಯೇಶವಿಠಲ
ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಎಷ್ಟೆಂದು ಪೇಳುವೆನು ನಮ್ಮುಡುಪಿಯ ಕೃಷ್ಣನÀ ಮಹಿಮೆಯನು ಅಷ್ಟೋತ್ತರ ಶತಯೀರೆಂಟು ಸಾವಿರ ಶ್ರೇಷ್ಠ ಮಹಿಷಿಯರ ಸೇವೆ ಕೈಗೊಂಬುದ ಪ. ದ್ವಾರಕೆಯೊಳಗೆ ನೆಲೆ ತೋರುತಲಿದ್ದು ಸ್ವಾರಿ ಹೊರಟ ಮೇಲೆ ಕಾರುಣ್ಯನಿಧಿ ಕಡಲೊಳು ಬಂದು ಕಮಲಾಸ- ನಾರೂಹನಾಗುವ ನರಯತಿಯನು ಕಂಡು ಘೋರತರ ಸಂಸಾರಕೂಪವ ಸೇರಿ ಬಳಲುವ ಸಕಲಸುಜನೋ- ದ್ಧಾರ ಮಾಡುವೆನೆಂದು ಮೂರ್ತಿಯ ತೋರುತಿಲ್ಲಿಹ ತ್ರಿಭುವನೇಶನ 1 ಪಾಪಿಷ್ಠ ಕಲಿಯಾಳುತ್ತಿರುವ ಕಾಲದಲಿ ಸ್ತ್ರೀ ರೂಪದಿಂದಲಿ ಪೂಜೆಯ ಕೊಳಲು ಸುಜ- ನಾಪವಾದದ ಭೀತಿಯ ತಾನೆನಸಿ ಮನದಲಿ ಕಾಪುರುಷನನು ಕಣ್ಣ ಕಟ್ಟಿ ಮಹಾಪರಾಧಿಗಳೊಳಗೆ ಸೇರಿಸಿ ಭೂಪತಿಗಳಲ್ಲಿರುವ ಯತಿವರ ರೂಪರೊಡನಾಡುವ ಪರಾತ್ಮನ 2 ಪಾಂಡುಕುಮಾರರು ಪರಿಯಾರು ಕ್ರಮದಿಂದ ಹೆಂಡತಿಯಾಳ್ದರೆಂದು ದೂಷಿಸುವರ ಕಂಡು ತಾ ಮನಕೆ ತಂದು ಕಾರುಣ್ಯ ಸಿಂಧು ಕುಂಡಲೀಂದ್ರ ಗಿರೀಂದ್ರ ನಿಜಪದ ಪುಂಡರೀಕ ಛಾಯಗಳ ಮತಿ- ವತ್ಸರ ದ್ವಯ ಖಂಡನೆ ಕೈಕೊಂಡು ಮೆರಪನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಏನ ಮಾಡಿ ತೀರುವೆ ಸದ್ಗುರುನಾಥಗೆ ಏನಮಾಡಿ ತೀರುವೆನೀನೆಯು ಬ್ರಹ್ಮವೆಂದು ಯನ್ನಕೈಯಲಿ ಹಿಡಿದು ಕೊಟ್ಟ ಪ ವೇದಕ್ಕೆ ನಿಲುಕದಿಹ ಷಣ್ಮತಗಳ ವಾದಕ್ಕೆ ತೋರದಿಹನಾದಕ್ಕೆ ಬೇರಿಹ ನಾಮರೂಪವಳಿದಿಹಆದಿಯು ನೀನೆಯೆಂದು ಯನ್ನಕೈಯಲಿ ಪಿಡಿದು ಕೊಟ್ಟ 1 ಬುದ್ಧಿ ಮನಕೆ ಹೊರತಾ ತತ್ವಂಗಳಲಿದ್ದ ಗುಣಕೆ ಅತೀತಶುದ್ಧ ಬ್ರಹ್ಮವು ನೀನು ಸಿದ್ಧಾ ಸಿದ್ಧಾಂತೆಂದುಮುದ್ದಿಸಿ ನಿನ್ನನು ಎನ್ನ ಕೈಯಲಿ ಹಿಡಿಕೊಟ್ಟ2 ಕಾರ್ಯ ತನುವ ಧರಿಸಿ ಜನ್ಮ ಜನ್ಮಾದಿ ತೋರುವ ಜೀವವೆನಿಸಿಕಾರ್ಯ ಕಾರಣಾತೀತನಾದ ಚಿದಾನಂದನು ಬೇರಿಲ್ಲನೀನೇ ಎಂದು ಎನ್ನ ಕೈಯಲಿ ಹಿಡಿದು ಕೊಟ್ಟ 3
--------------
ಚಿದಾನಂದ ಅವಧೂತರು
ಕರುಣಿಸಿ ವೃಷ್ಟಿಗರಿ ಕಮಲನಯನನರರಪರಾಧಗಳ ನೋಡದಲೆ ವೇಗದಲಿ ಪ ತ್ರಿವಿಧ ಸಾಧನ ಪೂರ್ತಿಪದು ||ಅನ್ನದಿಂದಲೆ ಅಭಿವೃಧ್ದಿ ಆಹದರಿಂದ ಪ-ರ್ಜನ್ಯದಿಂದಲಿ ಅನ್ನ ಜನಿಸುವ ಕಾರಣದಿ 1 `ಭೀಷ್ಮಾಸ್ಮಾದ್ವಹತಿ ಪವತಿ` ಎಂಬೋಕ್ತಿಯಲಿಈ ಸಮಸ್ತಮರರೂ ನಿನ್ನ ಭಯದಿ ||ಬ್ಯಾಸರವೆ ತಮ ತಮ್ಮ ವ್ಯಾಪಾರಗಳ ಮಾಡಿಪೋಷಿಸುವರು ಜಗವ ಪ್ರೀತಿಯಿಂದ 2 ಸುರರು ನಿಮಿತ್ಯ ಮಾತ್ರಪರಮ ಗುಣಸಾಂದ್ರ ಹೇ ಕರುಣಾಬ್ಧಿ ಚಂದ್ರ 3 ನರನೊಬ್ಬ ಪ್ರಭು ತನ್ನ ಪರಿಚಾರಿಗಳನ್ನು ಪರಮ ಅಭಿಮಾನದಲಿ ಪರಿಪಾಲಿಪ ||ಸುರರ ಬ್ರಹ್ಮಾದಿಗಳ ದೊರೆಯ ನಿನಗೀ ಮಾತುಸರಿಹೋದರೆ ವಚನ ಸಲಿಸು ಕೃಪೆಯಿಂದ 4 ಆವಾವ ಸಾಧನದಿ ಆವ ಸುಖವೈದುತಿರೆದೇವ ನಿನ್ನಯ ಕೀರ್ತಿ ಬರುವದೆಂತೋ ||ದೇವ ದೇವೇಶ ಗುರು ವಿಜಯ ವಿಠಲರೇಯ ಸಾವಧಾನದಲಿತ್ತು ಪರಿಪಾಲಿಪುದು ಬಿನ್ನಪವ 5
--------------
ಗುರುವಿಜಯವಿಠ್ಠಲರು
ಕ್ಷಿತಿಪರನ ಸ್ಮರಿಸಿ ಜನರು ಕ್ಷಿತಿಪರನ ಸ್ಮರಿಸಿ ನಿಮಗಪವಿಜಯವೆಂದಿಗೆ ಇಲ್ಲ-ಸು ಪುತರಾದ ವರನೆ ಕೃಪವನಧಿ ಹರಿವೊಲಿವಾ ಪ ಬಲಿ ವಿಭೀಷಣ ರಂಧ್ರಗಣ ರಂತಿರೇವತ ಮಲಯಧ್ವಜ ರಾಮಭೋಜಾ ಯದು ಬಲಗಿರಿಕ ಗಾಂಧಾರ ಗಯಸೇತು ಈಶ್ವರ ಕುಲಿಶಧ್ವಜ ಸಗರ ವೀರಾ ಸುರಭ ಶಶಿಬಿಂದು ಮಾಂಧಾತ ಧ್ರುವ ಶಿವಪ್ರಿಯ ಛಲಭರತ ಆಷ್ಮಾಕ ವಾಲಿ ಲೋಹಿತನೃಗಸು ಕುಕ್ಷಿ ಯದು ಭೂಷಣ1 ಅಸಮಂಜ ಸಂಜನಾಭಾ ವಸುದತ್ತ ಸೌಗಂಧಿಮಣಿ ಮುಕ್ತಕೇಸರೆ ನಿಸಿದಮಣಿ ವಾಹನಾ ಮಹವೀರ್ಯ ಕ್ಷೇಮಕ ಹಸ್ತಿ ವಸು ಅರಿಹಹೇಮಗರ್ಭ 2 ಕುಕುಸ್ಥ ಇಕ್ಷ್ವಾಕು ಮರುತ ಮುನಿಚೈತ್ರರಥ ವಿಕುಕ್ಷಿ ಸುರಥ ಆರಾವಾಚಿ ಶೃತಿ ಕೀರ್ತನ ಹುಶದಿಪ್ತಕೇತ ಸುವುತವಿಭಾವ ಸು ಶಕುತಿ ಶಿಖಿ ಸಾರ್ವಭೌಮಾ ಸುಖಸೇನ ಭಗೀರಥ ಅಜಮಾನು ಸ್ವರ್ಭಾನು ರುಕ್ಮಾಂಗದ ವಿರಾಜ 3 ಪುರಮೀಢ ಸುಮೀಢ ಭದ್ರಾಶ್ವ ರಮಣಕಾ ಹರಿಧರ್ಮನೇತ್ರ ಸುನೇತ್ರಕೇತುಮಾಲ ಪುರೋರವ ಮಿತ್ರಮನ ಜಯಸೇನ ಶುಭವರ್ಮ ಧರಯತೀ ಪುಣ್ಯದ್ರವಿಣೌ ಕರವೀರ ಸಾವೀರ ಪೌಷ್ಯಕೇಸರಿ ಸಿಂಗ ಮರುರುಕ್ಷ ಪ್ರದೀಪ ದಿಲೀಪ ಅಷ್ಟಕಕಂಪ ಅರಣಿ ಭೂಮನ್ಯು ಪ್ರಥಮಾಹವೀರ್ಯ ಸುರದತ್ತ ಹರಿವೀರಮನ್ಯು ವಿಶ್ವಾ 4 ಸುಮತಿ ಸುಂಹರ ರಘು ಮುಚಕುಂದ ದಶರಥ ಸುಮನ ದುಷ್ಯಂತ ಸಂಯಾತಿ ಹಂಸಧ್ವಜ ದಮಯಂತ ನೀಲಾಂಗ ಧರ್ಮಾಂಗದ ಶಮಲ ವಿಮರ ರವಿಕಾಂತ ನಹುಷ ದ್ರುಮಿಳ ಪದ್ಮಾಶತಾಯುಧ ಮಯೂರಧ್ವಜ ಪ್ರಮಿಲ ಕೀರ್ತಿವಾನ ತೊಂಡವಾನ ವಿದಗರ್ಭ ಅಮಿತ ಪರಾಕ್ರಮ ನಭಾಗಂಬರೀಷ ಸೌಮಿತ್ರ ಕಾರ್ತವೀರ್ಯಾ 5 ಪರಮೇಷ್ಟಿ ಮಣಿನಾಭ ಚೋಳ ತ್ರಿಶಂಖ ಶಂಖಣ ಶಂಖ ಮಣಿಕೇತ ಪಾಂಚಜನ್ಯ ಧನಂಜಯ ಕಾಶಿ ಸುಕಾಂತಕುಶ ಕುಶನಾಭ ಮಣಿಸೇನ ಪಾಂಡವ ಜಂಬುನದಿ ದಿವ್ಯರಥ ವನ ಕಕ್ಷಸೇನ ಜಾಕ್ಷಿತ ಪರಿಕ್ಷಿತ ದೃಂಹ್ಯ ಅನು ಅನಾಯುಪದಾತೀ 6 ಹರಿಶ್ರವ ಉತ್ತಾನಪಾದ ಕುಂಡಲಗಜ ಯವನಾಶ್ವರಾಜ ನೀಲಧ್ವಜ ಸುರವೃತ್ತ ಕವೇರ ಆಯು ದೃಢಾಯು ವಿಶಾಲ ಪ್ರತಿ ಶ್ರವ ಚಿತ್ರವೀರ್ಯ ಸುಭಗಾ ಕವಿವಂಗ ಅಂಗ ಕೋಶಲ ಹೇಮಗರ್ಭ ಶುಚಿ ವಿಕುಂಠ ಸುರಭೀ ಸೂ ಹವಿ ಅಭಿರಾಜ ಸುಹಿಜಾ 7 ಶಿಂಧು ಶುಭವರ್ನ ಸಿರ್ಯಾತಿ ಯಯಾತಿ ಸತ್ಯ ಸಂಧ ರೋಹಣ ಸಾಹದೇವ ವಾಪೀ ನಂದನ ಸುಮನ್ಯು ಸ್ವರ್ಭಾನು ಪಿಪ್ಪಲರವಿ ಚಂದ್ರಹಾಸ ಅಶ್ವವಂತ ಶಬಲಾಶ್ವ ಅಣು ಚಂದ್ರವರ್ಣ ಚಪನ ಸತ್ಯ ಸಯಾತಿ ಬಲ ವೃಂದ ವಿಷ್ಣುವರ್ಧನ 8 ಸಂತತದಲಲ್ಲೆಣಿಸಿದರೆ ಪಾರಗಂಡವರಾರು ಚಿಂತನೆಗೆ ತೋರಿದುದು ಸಾರಿದೆನು ಚನ್ನಾಗಿ ಸಂತರು ಕೇಳಿ ಲಾಲಿಸೀ ಪಿಂತೆ ಬಲು ಜನನದಾ ದುರಿತೌಘ ಪೋಗುವದು ಸಂತೋಷವಾಗುವುದು ಪರಿಸಿದ ಜನಕೆ ನಿತ್ಯ ಕಂತುಪಿತ ವಿಜಯವಿಠ್ಠಲನ ಚರಣಾಂಬುಜವ ಸಂತತಿ ಸಹಿತ ಕಾಂಬರೂ 9
--------------
ವಿಜಯದಾಸ