ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇಇಂಥ ದುರ್ದೆಸೆಗೆನ್ನ ಎಳೆತಂದು ಬಿಡಲಿಕ್ಕೆ ಪ ಉದಯ ಕಾಲದೊಳೆದ್ದು ಉದರ ಪೋಷಣೆಗಾಗಿಹದವನರಿಯದೆ ಬಳಲಿ ಅಂತಿಂತು ಬಡೆದಾಡಿಬದುಕು ತಂದೊಡಲ ಹೊರಕೊಂಡು ಸಲೆನನ್ನಪದವ ನೆನೆಯಲು ಸ್ವಲ್ಪ ಸಹ ವೇಳೆ ಸಿಗದಂತೆ 1 ಹಿಡಿದ ಕಾರ್ಯಗಳೆಲ್ಲ ಬಿಡದೆ ನಿಷ್ಫಲವಾಗಿಒಡವೆ ಇಲ್ಲದ ಬರಿಯ ಒಡೆತನಕೆ ಅಣಿಮಾಡಿಮಡದಿ ಮಕ್ಕಳ ಬಿರುಸು ನುಡಿಗೇಳಿ ಮನನೊಂದುಸುಡುಬಾಳ್ವೆ ಇದನೆಂದು ಮುಡುಕುವಂದದು ಗೈಸಿ 2 ನಂಬಿದವರನು ಹರಿಯು ಬೆಂಬಿಡನು ಎಂದೆಂದುಎಂಬ ಬಿರುದನು ತೊರೆದು ಇಂಬುಗೊಡದಿರಲಿಕ್ಕೆಅಂಬುಜಾಕ್ಷನೆ ನಿನಗೆ ಸಂಬಂಧವಿರದೇನುಹಂಬಲಿಪ ದುಃಸ್ಥಿತಿಗೆ ತುಂಬ ತಂದಿಡಲಿಕ್ಕೆ 3 ಅಣುಗರಿಗೆ ಉಣಿಸಲಿಕೆ ಹಣವೆತ್ತ ಗಳಿಸಲಿಫಣಿಶಯನ ನಿನಗಿನ್ನು ಗುಣವೆತ್ತ ತೋರಿಸಲಿಮಣಿಗಳನು ಎಣಿಸುತ್ತ ಪ್ರಣವೆತ್ತ ಧೇನಿಸಲಿಹಣಿವ ಭವದೊಳು ಸಿಲುಕಿ ಕ್ಷಣವು ಸಹ ಸಿಗದಾಯ್ತು 4 ಬಾಳಿನೊಳು ಸೌಖ್ಯವೇ ಆಳವೈಶ್ವರ್ಯವೆತೋಳಿನೊಳು ದಾಢ್ರ್ಯವೆ ಚಿತ್ತದೊಳು ಸ್ಥೈರ್ಯವೆಹೇಳು ಗದುಗಿನ ವೀರನಾರಾಯಣನೆ ಮಣಿವೆ 5
--------------
ವೀರನಾರಾಯಣ
ನಾನ್ಯಾಕೆ ಚಿಂತಿಸಲಿ ನಾನ್ಯಾಕೆ ಧೇನಿಸಲಿ ತಾನಾಗಿ ಶ್ರೀರಾಘವೇಂದ್ರಯತಿ ಒಲಿದ ಪ ಪೋರತನದವನು ಎರೆಡು ತೆರೆಗಳಲ್ಲಿ ದೂರಾಗಿ ಮೊರೆಯು ಅಲ್ಲವೆಂದು ಕಾರುಣ್ಯದಿಂದ ತಮ್ಮಯ ಗುರುತುಗಳ ತೋರಿ ಧೀರ ತಾ ಕರವನು ಪಿಡಿದ ಬಳಿಕ 1 ಜಗದೊಳಗೆ ಪದಾರ್ಥಗಳು ಗುಣದಿ ಭುಂಜಿಸುವಂಗೆ ಅಗದಂಕರನು ತಾನು ಬಳಿಗೆ ಬಂದು ಬಗೆಬಗೆಯಿಂದಲಿ ಸುರಸ ಪದಾರ್ಥಗಳು ಸೊಗಸಾಗಿ ಉಣಿಸಲು ಚಿಂತೆಯುಂಟೆ2 ಪೂರ್ಣಜಲ ಹರಿವ ವಾಹಿನಿ ಕಂಡು ಬೆದರುವಗೆ ಕರ್ಣಧಾರನು ತಾನೆ ಬಂದು ನಿಂದು ತೂರ್ಣದಲಿ ಕರಪಿಡಿದು ಹರಿಗೋಲ ಒಳಗಿಟ್ಟು ಫೂರ್ಣಿಸಲು ಅವನಿಗೆ ಚಿಂತೆಯುಂಟೆ 3 ತನ್ನಯ ಹಿತವು ತಾ ವಿಚಾರಿಸಲವಂಗೆ ಚನ್ನಾಗಿ ಪರಮ ಗುರು ತಾನೆ ಬಂದು ಸನ್ಮಾರ್ಗವನು ತಾನೆ ಪೇಳುವೆನೆನಲು ಇನ್ನು ಆಯಾಸವುಂಟೆ ಅವನಿಗೆ 4 ಏಸು ಜನ್ಮದಲಿ ಅರ್ಚಿಸಿದೆನೊ ನಾ ಇನ್ನು ಪಾದ ಪದುಮ ಲೇಸಾಗಿ ಈ ಸುಕೃತದಿಂದೆನ್ನ ಹರಿದಾಸ ಈ ಸುಗುಣ ಗುರುರಾಯ ಎನಗೆ ಒಲಿದ 5
--------------
ವ್ಯಾಸತತ್ವಜ್ಞದಾಸರು