ಒಟ್ಟು 15 ಕಡೆಗಳಲ್ಲಿ , 11 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

1. ರಾಮಾನುಜರು ಆಚಾರ್ಯ ಪ್ರಾಚಾರ್ಯ ಪರಮಾಚಾರ್ಯಾ ನೀಚತೆ ನೀಗಿಸಿ ನಿನ್ನಂತೆ ಗೈದೇ ಪ ಸರ್ವಗುರುವೇ ನಮಿಪೆ ಧ್ಯಾನಿಪೆ ಶ್ರೀನಿವಾಸಾ ಅ.ಪ ಪಾದೋದಕದಿಂ ಪಾವನಗೈದೇ ಸಾಧು ಸಂಗತಿಗಳ ಸಂತಸದಿ ಪೇಳ್ದೇ1 ಭೇದವ ತೊರೆದೇ ವೇದಗಳೊರೆದೇ ಸಾದರದಿಂ ಸದ್ಬಂಧು ನೀನಾದೇ 2 ಪಾಪವ ಕಳೆದೇ ಗೋಪ್ಯಗಳುಸುರಿದೆ ಶ್ರೀಪತಿಮೂರ್ತಿಯ ಹೃದಯದಿ ತೋರ್ದೆ 3 ಕೃಪೆಯನ್ನು ತೋರ್ದೆ ಅಪಾರ ಮಹಿಮ ಉಪಕರಿಸುತ ಎನ್ನ ಉನ್ನತಿಗೆ ತಂದೆ 4 ಸಂಸಾರಾಂಬುಧಿ ಹಿಂಸೆ ದಾಂಟಿಸಿದೆ ಹಂಸನೆ ಸಿಂಹ ಕಿಶೋರ ನ್ಯಾಯದಿ 5 ವಿಪರೀತಮತಿಯನ್ನ ಪರಿಹರಿಸಿದೆ ನೀಂ ಸುಪಥದಿ ಸುಖದಾನಂದನಿಧಿಯಿತ್ತೇ 6 ಜಾಜೀಶನಿಗೆ ಪ್ರೇಮಪುತ್ರನು ನೀಂ ಪೂಜಿಪೆ ಪದಯುಗ ಶರಣನೆ ಕರುಣಿಸು 7
--------------
ಶಾಮಶರ್ಮರು
3. ನವಗ್ರಹ ಸಕಲಗ್ರಹಬಲವು ನೀನೆ ಶ್ರೀನಿವಾಸ ಸುಖದಾಯಕನೇ ಅಖಿಲೇಶ್ವರ ಪ ಆರ್ತರ ಸಲಹುವ ಮಾರ್ತಂಡ ಬಲವು ಕೀರ್ತಿಯನೀಯುವ ಚಂದ್ರನ ಬಲವು ಪಾರ್ಥಿವರಗೈವ ಭೂ ಪುತ್ರ ಬಲವು 1 ವಿದ್ಯಾದಾಯಕನಾದ ಬುಧನ ಬಲ ಅದ್ಭುತ ಭಯಹರ ಶ್ರೀಗುರುವೊಲವು ಶುದ್ಧ ಸತ್ವದ ಶುಕ್ರನ ನಲಿವು 2 ಅನವರತವು ಶುಭದಾಯಕ ಶನಿಫಲ ಅನಿಷ್ಟಹಾರಕ ರಾಹುಕೇತು ಬಲ ಅನುದಿನ ಧ್ಯಾನಿಪೆ ಜಾಜೀಕೇಶವ 3
--------------
ಶಾಮಶರ್ಮರು
ಎಂತೋಪೂಜಿಪುದಂತರ್ಯಾಮಿಯಾ-ನಂತಾದಿರಹಿತನ ಚಿಂತಾದೂರನ ಚಿನುಮಯ ರೂಪನಾ ದೆಂತೋಧ್ಯಾನಿಪೆ ನಾ ಪ ಈಶ-ವೀಶ-ವಾಹನಗೀಸಚರಾಚರ ಮಿಸಲಿಗೊಳಗಲ್ಲಾ ವಾಸುಕಿ ಭೋಗನಿವಾಸಿಗೆ ತರವಲ್ಲಾ 1 ಚರಣದಿ ಗಂಗೆಯ ಧರಿಸುವಾತನ ಚರಣವ ತೊಳೆಯುವರೇ ತರಣಿಗೆ ತೇಜದ ಭರಣಿಗೆ ದೀಪದ ಸರಣಿಯ ತೋರುವರೆ 2 ವಿಗ್ರಹರಹಿತನಿಗಘ್ರ್ಯದ ಪೂಜೆಯು ದುರ್ಘಟ ಕಾರ್ಯವಲೆ ಭರ್ಗಾದ್ಯಮರರ ವರ್ಗವು ತಮ್ಮ ನಿಸರ್ಗದಿ ಕಾಣದಲೆ 3 ಕಲಶಾಂಬುಧಿಯೊಳು ನೆಲಸಿಹಮೂರ್ತಿಗೆ-ಸಲಿಲ ಸ್ಪರ್ಶನವೆ ಜಲರುಹನೇತ್ರಗೆ ಜಲರುಹಗಾತ್ರಗೆ ಜಲದಲ್ಲಿ ಮಜ್ಜನವೆ 4 ಸ್ವರ್ಣಾಂಬರಗಳ ಬಣ್ಣಿಸುಡುವಗೆ ಬಣ್ಣದವಸ್ತ್ರಗಳೆ ಉನ್ನತ ಕೌಸ್ತುಭರನ್ನದ ತೊಡವಿಗೆ ಬಿನ್ನಣದೊಡವೆಗಳೆ 5 ಬಿಸಜನಾಭನಿಗೆ ಕುಸುಮಾಸ್ತ್ರನ ಮಾನಸದಿಂಪಡೆದವಗೆ ಮಿಸುಪ ತುಲಸಿಯಿಂದೆಸವಗೆ ಪೂಗಳ ವಿಸರ ಮನೋಹರವೇ 6 ಗಂಧವಾಹನ ಸುವಿಂದಲಿಸೃಜಿಸಿದ ಗಂಧವತೀಶನಿಗೆ ಗಂಧಧೂಪಗಳು ಬಂಧುರಂಗಳೆ ಗಂಧರ್ವಾನತನಿಗೆ 7 ವೇದ ಗೋಚರಿಸು ವೇದಾತ್ಮಕನು ವೇದೋದ್ಧಾರಕನು ವೇದಲೇಶದಿಂ ಮೋದಿಸುವನೋ ಸಮ್ಮೋದ ಪರಾತ್ಮಕನೆ 8 ಪೊಕ್ಕರೆ ಜಲಮಂ ಕುತ್ತಿಗೆ ನೆರೆಯದವಸ್ತು ಪರಾತ್ಪರನಾ ನಿತ್ಯತೃಪ್ತನಂ ಚಿತ್ರಾನ್ನಗಳಿಂ ತೃಪ್ತಿಪುದೆಂತುಜನಾ 9 ಮಂತ್ರ ಮೂರುತಿಗೆ ಮಂತ್ರಜ್ಞನಿಗೆ ಸ್ವತಂತ್ರವಿಹಾರನಿಗೆ ಮಂತ್ರ ಯಂತ್ರಗಳ ತಂತ್ರವದೆಂತೊ ಮಂತ್ರಾಧಾರನಿಗೆ 10 ಅಂತರ್ಬಹಿಯೊಳಗಂತರವಿಲ್ಲದ ನಂತ ಗುಣಾತ್ಮಕನಾ ಎಂತು ಪ್ರದಕ್ಷಿಣೆಯಾಂತು ನಮಿಪೆ ಜಗದಂತ ಶರೀರಕನಾ 11 ಸರ್ವಾಧಾರನ ಸರ್ವ ಶರೀರನ ಸರ್ವವ್ಯಾಪಕನಾ ಸರ್ವನ ನಮಿಸುವಗರ್ವವೆಂತುಟೊ ಶಕ್ರನಮಸ್ಕøತನಾ 12 ಧರೆಯೊಳು ಪುಲಗಿರಿವರದ ವಿಠಲನ ಚರಣವ ಭಜಿಸುವರ ನಿರುತದಿ ಪೂಜಿಪ ಹರುಷವು ಸಾಲದೆ ಹರಿದಾಸೋತ್ತಮರಾ 13
--------------
ಸರಗೂರು ವೆಂಕಟವರದಾರ್ಯರು
ಕರುಣಾಸಾಗರ ಬಾ ಗುರುವೆ | ಚರಣ ಕಮಲವನು ಸಾರಿದೆನೈ ಸ್ವಾಮಿ ಪ ಏನೆಂದು ಬಣ್ಣಿಪೆ | ದೀನವತ್ಸಲಪ್ರಭುವೆ | ಸಾನುರಾಗದಿ ನಿನ್ನ ಧ್ಯಾನಿಪೆನೈ ಜೀಯ1 ಗುರುರಾಘವೇಂದ್ರನೆ | ಶರಣರ ಸುರತರುವೆ | ನಿರುತ ಎಮ್ಮೊಳು ಕೃಪೆಯ ತೋರಿದಿರೈ ಸ್ವಾಮಿ 2 ಶ್ರೀ ಸುಧೀಂದ್ರಾರ್ಯರ | ಭಾಸುರಪ್ರಿಯತನಯ | ಶ್ರೀಶಕೇಶವನೊಲುಮೆ ಯಾಚಿಸುವೈ ಪ್ರಭುವೆ 3
--------------
ಶ್ರೀಶ ಕೇಶವದಾಸರು
ಕೃತ್ತಿವಾಸನ ಪ್ರಿಯ ಪುತ್ರನೆ ಗುಹ ಸ- ರ್ವೋತ್ತಮ ಚಿದ್ರೂಪ ಪ ಚಿತ್ತಜ ಪ್ರತಿರೂಪಾ ಪ್ರತಾಪಾಅ.ಪ ದೀನತನದಿ ಕಡುಬೇನೆಯ ಪಡುತಲಿಹೀನಮನುಜನೆನ್ನಾ | ದಾನಿಯಾಗಿಹ ಕರುಣಾನಿಧಿ ಕೈಪಿಡಿ ಧ್ಯಾನಿಪೆ ನಾ ನಿನ್ನ ಪ್ರಸನ್ನ 1 ಸುತ್ತಮುತ್ತಿರುವ ವಿಪತ್ತುಗಳಾ ಭಯ ಮೆತ್ತಿಕೊಂಡಿದೆ ತಾನೇ ಸತ್ವಶಾಲಿಯೇ ನೀ ಕಿತ್ತೊಗೆಯದಿರೆ ಅ- ನ್ಯತ್ರ ಗತಿಯ ಕಾಣೆ ನಿನ್ನಾಣೆ 2 ಪಾಶ ಅಂಕುಶಧರ | ನಾ ಸಹೋದರ ಪಾವಂ- ಜೇಶ ಮಹಾನುಭಾವ | ದಾಸರಿಗೊದಗುವ ತ್ರಾಸವ ಕಳೆ ಸ- ರ್ವೇಶನೆ ಮಹದೇವಾ | ದೇವರ ದೇವಾ 3
--------------
ಬೆಳ್ಳೆ ದಾಸಪ್ಪಯ್ಯ
ಘನನಂದನ ರಾಮಚಂದ್ರ ಪ ತಂದೆ ತಾಯಿ ಬಂಧು ನೀನು ಸಂದ ಯೆನ್ನ ಮಿತ್ರನೀನು ಕಂದನಿಗಾನಂದ ಬೀರಿ ಅಂದವಾದ ಪಾದತೋರು1 ಸ್ವಾಮಿ ನಿನ್ನ ನಾಮವನ್ನು ನೇಮದಿಂದ ಧ್ಯಾನಿಪೆನ್ನ ಪ್ರೇಮದಿಂದ ಕ್ಷೇಮ ಕೊಟ್ಟು ಸಾಮಗಾನಗೈಸು ವಿಷ್ಣು 2 ಅಗ್ರಹಾರಪಾಲಾಧೀಶ ಅಗ್ರಪೂಜೆಗೊಂಬ ಶ್ರೀಶ ಸುಗ್ರೀವನ್ನ ಪೊರೆದ ಉಗ್ರದೈತ್ಯನಾಶ ಹೆಜ್ಜಾಜೀಶ 3
--------------
ಶಾಮಶರ್ಮರು
ತುಂಗೆ ಮಂಗಳ ತರಂಗೆ | ಕರುಣಾಂತರಂಗೆ ರಂಗನಾಥನ ಪದಭೃಂಗೆ ಪ. ಅಂಗಜಪಿತನ ಅಂಗದಿ ಉದ್ಭವೆ ಭವ ಭಂಗ ಹರಿಸೆ ಅಂಗನೆ ಎನ್ನಂತರಂಗದಿ ಹರಿಪಾ- ದಂಗಳ ತೋರಿಸೆ ಶೃಂಗೆ ಶುಭಾಂಗೆ ಅ.ಪ. ಆದಿ ದೈತ್ಯನು ಖತಿಯಲಿ | ಮೇದಿನಿಯ ಸುತ್ತಿ ಒಯ್ದು ಪಾತಳ ಪುರದಲಿ ಮಾಧವ ಕರುಣದಿ ಆದಿವರಾಹನೆಂದೀ ಧರೆಯೊಳು ಬಂದು ಮೇದಿನಿ ಪೊರೆಯಲು ಶ್ರೀದನ ದಾಡೆಯಿಂ ನೀನುದುಭವಿಸಿದೆ 1 ಸ್ನಾನಪಾನದಿ ನರರನು | ಪಾವನಗೈವ ಮಾನಿನಿ ನಿನ್ನ ಕಂಡೆನು ನಾನಾ ದುಷ್ಕøತಗಳ ನೀನೋಡಿಸಿ ಮತ್ತೆ ನಾನು ಎಂಬುವ ನುಡಿ ನಾಲಗೆಗೀಯದೆ ಮಾನವ ಕಾಯೆ ಶ್ರೀನಾಥನ ಪದಧ್ಯಾನವನೀಯೆ 2 ಹರನ ಪೆಸರಿನ ಪುರದಲಿ | ಹರಿದು ಬಂದು ವರ ಶ್ರೀ ಕೂಡಲಿ ಸ್ಥಳದಲಿ ಭರದಿ ಭದ್ರೆಯ ಕೂಡಿ ಪರಿದಲ್ಲಿಂದಲಿ ಹರಿಹರ ಕ್ಷೇತ್ರವ ಬಳಸಿ ಮಂತ್ರಾಲಯ ಪುರಮಾರ್ಗದಿ ಸಾಗರವನೆ ಸೇರಿ ವರ ಗೋಪಾಲಕೃಷ್ಣವಿಠ್ಠಲನೆ ಧ್ಯಾನಿಪೆ 3
--------------
ಅಂಬಾಬಾಯಿ
ನೀನೇ ಸಕಲವೆನಗೆ ಶ್ರೀರಾಮಚಂದ್ರ ನೀನೇ ದೊರೆಯರಸನೊ ಪ ಶ್ರೀನಿಧಿಯೆ ನಿನ್ನವರುಸತತ ಸಾನುರಾಗದ ಬಳಗವಹುದೈ ದೀನಜನಮಂದಾರ ನೇಹಂ ಶ್ರೀನಿಕೇತನ ಸತ್ಯಸಾರ ಅ.ಪ ತಾಮತಿಯು ಶ್ರೀ ಮನೋಹರ ಸಹಜರೆಲ್ಲ ಪ್ರೇಮ ಪಂಚ ರಾಮರೂಪವ ತೋರ್ಪನಾಡಿಯು 1 ಧನ್ಯ ಶರೀರವು ಮಾನ್ಯಗೆ ತಾಮಸದ ಸರೃಹವೂ ಕಣ್ಣನಿದ್ರೆಯು ಯೋಗಮುದ್ರೆಯು ಚಿಣ್ಣನ ಸಂಚರಂಗಳು ಸ್ವಾಮಿ ನಿನಗೆ ಪ್ರದಕ್ಷಿಣೆ 2 ಬಾಲನ ಮಾತುಗಳು ವೇದೊಕ್ತ ಸಶೀಲನ ಸ್ತೋತ್ರಗಳು ಕಾಲಂಕಾಲಗಳಲ್ಲಿ ಗೈಯುವ ಕಾರ್ಯಗಳು ಪರಮಾತ್ಮ ಸೇವೆಯು ಶ್ರೀಲತಾಂಗಿಯ ಲೋಲ ಧ್ಯಾನಿಪೆ ಪಾಲಿಸೈ ಜಾಜೀಶ ಕೇಶವ3
--------------
ಶಾಮಶರ್ಮರು
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ. ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀ ಕಾಲ ಕಾಮಿತಫಲಪ್ರದಾಯಕ ಅ.ಪ. ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿ ಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದ ಪರಿ ಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿ ಬನ್ನ ಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನು ಹರಿ 1 ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನು ಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನು ಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನು ಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2 ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವ ನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವ ನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವ ನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ3 ಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿ ಭೂರಿ ಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿ ಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4 ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹ ಗೃಹ ಗೈದಿಸಿ ಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿ ಮಿಂಚಿಯೆನ್ನೊಳು ಮೋದಿಸಿ ಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ5 ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆ ಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆ ಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆ ಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6 ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆ ಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆ ನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆ ಪಡುತಿರುಪತಿ ಪುರೇಶನೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರಸನ್ನ ಶ್ರೀ ನವಗ್ರಹ ಸ್ತುತಿಗಳು ಶ್ರೀ ಸೂರ್ಯದೇವ ಸ್ತೋತ್ರ 88 ಆ ನಮಿಸುವೆ ಘೃಣಿ ಆದಿತ್ಯ ಸೂರ್ಯ ಸೂರಿ ಪ್ರಾಪ್ಯ ಪ ಅಮಿತ ಸ್ವತೇಜದಿ ಝಗಿ ಝಗಿಸುತಿ ಜಗತ್ ಜನ್ಮಾದಿಕರ್ತ ಚೇಷ್ಟಕ ಸ್ಫೂರ್ತಿದಾತ ಅಮಯ ದೂರ ಸುಗುಣ ಗಣಾರ್ಣವ ದೇವ ಶ್ರೀಮನ್ನಾರಾಯಣ ಧ್ಯೇಯ ಧ್ಯಾನಿಪೆ ನಿನ್ನ 1 ಮಕರ ಕುಂಡಲವಾನ್ ಕಿರೀಟಿಯೆ ಅರಿದರ ಧಾರಿ ಅವ್ಯಯಾನಂದ ಚಿತ್ ಚಾಮೀಕರ ವಪು ಶ್ರೀಯುಕ್ ಪದ್ಮದಿ ಇರುತಿಹಿಯೋ ಅರ್ಕಸ್ಥ 2 ಹಿಂಕಾರ ಪ್ರಸ್ತಾವ ಆದಿ ನಮೋ ನಮೋ ಉದ್ಗೀಥ ಪ್ರತಿಹಾರೋಪದ್ರವ ನಿಧನ ಉತ್ಕøಷ್ಟ ಸಾಮ ಪ್ರತಿಪಾದ್ಯ ನಾರಾಯಣ ಋಕ್ ಸಾಮ ವೇದದಿಂ ಸ್ತುತ್ಯ ವಾಗ್ವಾಯ್ವಿಂದ 3 ಭೂತೇಂದ್ರಿಯ ಕರ್ಣಾದಿಗಳಿಗೆ ದೂರ ದ್ಯುಸ್ಥದಿವಃಪರ ತ್ರಿಪಾದ ಜ್ಯೋತಿರ್ಮಯನು ಹಿತಕರನಿವ ಅರ್ಕನೋಳ್ ಜ್ವಲಿಸಿ ಅರ್ಕಗೆ ಒದಗಿಸಿಹ ತನ್ನ ಸೂರ್ಯನೆಂಬೋ ನಾಮ 4 ಸೂರ್ಯದೇವನೆ ದಯಾವಂತನೆ ನಮೋ ನಮೋ ಕಶ್ಯಪಾತ್ಮಜ ನೀ ಎನ್ ಪಾಪ ಪರಿಹರಿಸೋ ಮಹಾದ್ಯುತಿ ತಮೋಘ್ನನೇ ಜ್ಞಾನಾಯುರ್ದಾತ ನೀ ಶ್ರೀಯಃಪತಿ ನಾರಾಯಣನ್ನೊಲಿಸೋ ಎನಗೆ 5 ಸೂರ್ಯ ನೀ ಅಹರಹ ಎನ್ನಸರ್ವಪೀಡೆಗಳ್ ಕಳೆದು ಬೃಹತಿಸಾಸಿರ ಸ್ವರ ವ್ಯಂಜನಾಕ್ಷರ ವಾಚ್ಯ ಶ್ರೀಹರಿಯ ಭಜಿಸಲು ಶತಾಯುಸ್ ಬಲವೀಯೋ 6 ಶರಣು ಪದ್ಮಜಪಿತ ಪ್ರಸನ್ನ ಶ್ರೀನಿವಾಸ ಸೂರ್ಯ ನಿನ್ನ ಪ್ರೀತಿಪಾತ್ರ ಸೂರ್ಯನೊಳಿದ್ದು ನೀ ಜಗತ್ಸರ್ವ ಕಾಯುತ್ತಿ ಕರುಣದಿ ಎನ್ನನು ಎನ್ನವರನು ಕಾಯೋ 7 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಜಾನಕಿದೇವಿ ನಿನ್ನ ನಾ ಧ್ಯಾನಿಪೆ ತಾಯಿ ಪ ಸುಜ್ಞಾಪ್ರದೆಯೆನ್ನ ಮನೋಭೀಷ್ಟವನೀಯ್ಯೆ ಅ.ಪ ಸಂಸಾರವಾರ್ಧಿಯೊಳಗೆ ಮುಳುಗಿ ಬಳಲುವೆನಮ್ಮ | ಇದು ಪಾರುಗಾಣೋದೆಂದಿಗೊ ನಿನ್ನ ಪತಿಯ ಕೇಳಮ್ಮ 1 ವಿನುತ ಪದಾಂಬುಜಯುಗಳೆ ಜಗದಂಬೆ ನಿನ್ನ ನಂಬಿದೆ ವಿಶ್ವಂಭರಪ್ರಿಯಳೆ 2 ಸಾಮಜರಾಜವರದ ಶ್ರೀಗುರುರಾಮವಿಠಲನ | ಹೃ ದ್ಧಾಮದಲ್ಲಿ ತೋರಿಸಿ ಪರಚಿಂತೆ ಬಿಡಿಸೆನ್ನ 3
--------------
ಗುರುರಾಮವಿಠಲ
ಧ್ಯಾನಿಪೆ ನಿನ್ನ ಧ್ಯಾನಿಪರಘಹರ ಧ್ಯಾನಿಪೆ ನಿನ್ನಜಾನಕೀಧವ ತವಚರಣ ಕರುಣ ಕೋರಿ ಪಪರತರ ಮಹಿಮನೆ ಶರಣರ ಪ್ರಿಯಗಿರಿಧರ ಸಿರಿವರ ಮರೆ ಕರುಣಿಸು ನರಹರಿ 1ಪತಿತಪಾವನ ನಿಮ್ಮ ಶ್ರುತಿಬೋಧ್ವಾಕ್ಯಗಳಭಿರತಿಹಿಡಿದಿತ್ತು ಯತಿನುತಕ್ಪಿತಿಪತಿಪೊರೆ2ಪೋಷಿಸೆನ್ನನು ನಿನ್ನ ದಾಸತ್ವ ನೀಡಿ ಮುನ್ನದೋಷನಾಶನೆÉ ಜಗದೀಶ ಶ್ರೀರಾಮನೆ 3
--------------
ರಾಮದಾಸರು
ನೀನೇಯೆಂದು ಮರೆ ಹೊಕ್ಕೆನೋ ರಂಗ |ದೀನ ಜನರ ಪಾಲಿಪ ದಯಾಸಾಗರ ಪಉತ್ತಮ ದ್ವಿಜರು ಮನೆಗೆ ಬರಲು |ಪ್ರತ್ಯುತ್ಥಾನವ ಕೊಡದಲೆ ಉ ||ನ್ಮತ್ತತನದಿ ಬಹು ಪಾಪವ ಗಳಿಸಿದೆ |ಚಿತ್ತಜಜನಕನೆ ದೋಷನಗ ಕುಲಿಶ 1ಪಾತ್ರರ ಸಂಗಡ ಕ್ಷೇತ್ರಗಳ |ಯಾತ್ರೆ ಚರಿಸದೆ ನಿರರ್ಥಕದಿ ||ಗಾತ್ರವ ಬೆಳಸಿದೆ ರುಕ್ಮಿಣೀವರನೆ ವಿ- |ಧಾತೃ ಕರಾರ್ಚಿತ ಕುಂದನೆಣಿಸದಿರು 2ಸ್ನಾನ ಸಂಧ್ಯಾವಂದನೆ ಬಿಟ್ಟು |ಜ್ಞಾನಿಗಳಾದವರನು ಹಳಿವೆನು ||ಧ್ಯಾನಿಪೆ ಸರ್ವದಾ ಪರರ ಕೇಡನು |ಏನೆಂಧೇಳಲಿ ಯನ್ನಯ ಅವಗುಣ 3ಮರೆತಾದರೂ ಹರಿಯೆಂದೊಮ್ಮೆ |ಸ್ಮರಿಸಿದವರ ದುರ್ಗುಣಗಳನು ||ಪೊರೆವನೆಂಬ ನಿನ ಬಿರುದುಕೇಳಿಪದ |ಸರಸಿಜಕೆರಗಿದೆ ಕರುಣಿಸೋ ಮಾಧವ 4ಪುಸಿಯಲ್ಲವೋ ಇದು ಅಜಾಮಿಳ |ಪೆಸರಾಗಿಹ ಪಾಪಿಷ್ಠರೊಳು ||ವಶ ಮೀರಿ ಸುತನ ಕರೆಯಲಾಕ್ಷಣ |ಪೋಷಿಸಿದೆ ತ್ವರದಿ ಶ್ರೀ ಪ್ರಾಣೇಶ ವಿಠ್ಠಲಾ 5
--------------
ಪ್ರಾಣೇಶದಾಸರು
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ.ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀಲೋಲಮೋಹನಲೀಲದುರ್ಜನಕಾಲಕಾಮಿತಫಲಪ್ರದಾಯಕಅ.ಪ.ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದಪರಿಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿಬನ್ನಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನುಹರಿ1ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನುಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನುಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನುಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ 3ವೀರ ವೈಷ್ಣವ ಮಾರ್ಗದೊಳು ಸಂಚಾರ ಮಾಡುವ ತೆರದಲಿಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿಭೂರಿಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹಗೃಹಗೈದಿಸಿಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿವಂಚಿಸುವ ಬಂಧುಗಳ ಮನವನುಮಿಂಚಿಯೆನ್ನೊಳು ಮೋದಿಸಿಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ 5ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆಲೋಲಲಕ್ಷ್ಮೀನಾರಾಯಣಾಶ್ರಿತಪಾಲಪಡುತಿರುಪತಿ ಪುರೇಶನೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ