ಶ್ರೀಗುರುವಿಟ್ಟಂತಿರಿರೋ ವ್ಯರ್ಥಸ್ಯ ಭ್ರಮೆಗೊಳ್ಳಬೇಡೀ ಪ
ಕೊಟ್ಟರೂಟವ ಮಾಡಿ ಕೊಡದಿದ್ದರವನ ಪಾಡಿ
ಸಿಟ್ಟಾಗಿ ಶಿವನ ಬೈಬೇಡೀ 1
ಸಂತೆಯ ಕೂಟವಿದು ಸಟೆಯ ಸಂಸಾರವಿದು
ಅಂತರಾತ್ಮನ ಧ್ಯಾನಿಸುವನೇ ಸಾಧು 2
ಯಾರಿಗೆ ಯಾರಿಲ್ಲಾ ನರದೇಹ ಸ್ಥಿರವಲ್ಲಾ
ವಸ್ತು ಮೀರಿದ ಬಳಿಕ ಇರಲಿಲ್ಲಾ 3
ಒಂದೇ ಜನ್ಮದ ನಂಟು ಸುಖದುಃಖಕ್ಕೋಂದೇ ಗಂಟು
ಸಂದೇಹವಿಲ್ಲ ಕೊಟ್ಟ ಋಣ ಉಂಟು 4
ವರಮಂಗೀಶಾತ್ಮಾರಾಮಾ ಇರಿಸಿದಂತಿರುವ ನೇಮಾ
ಗುರು ವಿಮಲಾನಂದ ಸುಖಧಾಮಾ 5