ಮೊರೆಯ ಹೊಕ್ಕೆನು ನಿನ್ನಾ | ಚರಣ ಕಮಲಕ
ಸಿರಿಪತಿ ಭವರೋಗ ವೈದ್ಯ ನೆಂಬದು ಕೇಳಿ ಪ
ಅನ್ಯವಾರ್ತೆಯ ಕೇಳಿ ಕಿವಿಬಧಿರಾಗದೆ
ನಿನ್ನ ಕಥಾಶ್ರವಣದ ರಸದೀ
ಇನ್ನು ಕೇಳುವ ಪರಿಮಾಡೋ ಅವಿದ್ಯದಾ
ಕಣ್ಣಿನ ಪರಿಗೆ ಜ್ಞಾನಾಂಜನವಿಡೋದೇವಾ 1
ವಿಷಯನಂಜಲಿ ತಾಪವೆಡಗೋಂಡದೇಹಕೆ
ಅಸಮಸತ್ಸಂಗ ಕಷಾಯಕೊಟ್ಟು
ಹುಸಿ ನುಡಿ ಪರನಿಂದೆಯಾಡಿದ ರೋಗದಿ
ಹಸಗೆಟ್ಟ ನಾಲಿಗೆ ನಾಮಾಮೃತವ ನೀಡೋ 2
ನಾಸಿಕ ಕೊರಡಾಯಿತಿಭೋಗ ದ್ರವ್ಯದಿ
ವಾಸನೆ ಕೊಡು ತುಳಸಿಯಾರ್ಪಿತವಾ
ಧ್ಯಾಸತೈಲದಿ ಮನಸಿನ ಕರ್ಮವಾತವಾ
ದೋಷಬಿಡಿಸಿ ಕಾಯೋ ಗುರು ಮಹಿಪತಿ ಸ್ವಾಮಿ 3