ನಂಬಿ ಕೆಟ್ಟವರಿಲ್ಲವೋ ರಾಯರ ಪಾದಾ
ನಂಬದೆ ಕೆಡುವುರುಂಟೋ ಪ
ನಂಬಿದ ಜನರಿಗೆ - ಬೆಂಬಲ ತಾನಾಗಿ
ತುಂಬಿ ಕೊಡುವರನ್ನ ಅ.ಪ
ಜಲಧರ ದ್ವಿಜವರಗೆ ತಾನೇ ಒಲಿದು
ಸುಲಭದಿ ಮುಕುತಿಯನಿತ್ತ
ಚಲುವ ಸುತನ ಪಡೆದಲಲನೆಗೆ ತ್ವರದಿಂದ
ಪುಲಿನ ಗರ್ತದಿ ದಿವ್ಯ - ಜಲವ ನಿತ್ತವರನ್ನ 1
ಮೃತ್ಯುದೂತರು ತನ್ನನು ಪೊಂದಿದ ನಿಜ
ಭೃತ್ಯನ ಕರೆದೊಯ್ಯಲು
ಸತ್ತ ದ್ವಿಜನ ತಾನು - ಮತ್ತು ಧsರೆಗೆ ತಂದು
ಮೃತ್ಯು ಬಿಡಿಸಿ ಸುಖ - ವಿತ್ತು ಪೊರೆದಿಹರನ್ನಾ 2
ಧಿಟ ಗುರುಜಗನ್ನಾಥ ವಿಠಲನೊಲಿಮೆ
ಘಟನವಾದುದರಿಂದ
ಘಟನಾಘಟನ ಕಾರ್ಯ - ಘಟನಾ ಮಾಡುವ ನಮ್ಮ
ಪಟು ಗುರುವರ ಹೃ - ತ್ಪುಟ ದಿರುವೋರನ್ನ 3