ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉತ್ಸವದಲಾಹ್ನಿಕವ ಕಡು ಜನರು ಕೇಳಿರಯ್ಯ ಪ. ಅರುಣ ಉದಯದೊಳೆದ್ದು ಆ ದ್ವಾರಪಾಲಕರುಭರದೆ ಘಂಟೆ ಸುವಿಘ್ನ ಮಾಡೆತರತರದ ಹರಿದಾಸರು ತಾಳ ಮೇಳಗಳಿಂದಪರಿಪರಿಯ ಗಾನ ಪಾಡೆ ತ್ವರಿತ ವಾದ್ಯಗಳಿಂದ ತರುವಾಯ ಭೋರಿಡೆ ಮುರಹರನುಪ್ಪವಡಿಸೆತರುಣ ಯತಿಗಳು ಎದ್ದು ಸ್ನಾನ ಜಪಗಳ ಮಾಡಿನಿರುತ ಶಂಖ ಭ್ರಮಣೆ ಮಾಡೆ ನೀಟಾಗಿಒಪ್ಪುತಿಹ ಉಡುಪಿಯ ಶ್ರೀಕೃಷ್ಣನ 1 ಘೃತ ನೆನೆಕಡಲೆಯುಶುದ್ಧಾದ ಪಾಲ್ಮೊಸರು ಶುಂಠಿ ಸಕ್ಕರೆಲಡ್ಡಿಗೆತಂದ ನೈವೇದ್ಯವ ಸವಿದು ತಾ ಪೂಜೆ ಮಾಡಿಸಿಕೊಂಬ 2 ಪದ್ಮನಾಭಗೆ ಬೇಗ ಪುರುಷಸೂಕ್ತದಭಿಷೇಕಮುದದಿಂದ ಮಾಡಿದ ಬಳಿಕವಿಧಿಯ ಪೂರ್ವಕವಾಗಿ ಅಗಿಲು ಗಂಧ ತುಲಸಿಮಾಲೆಅಧಿಕವಾಗಿ ಸಮರ್ಪಿಸಿ ಒದಗಿದ್ದ ಶುಂಠಿ ಬೆಲ್ಲ ಒಳಿತಾದ ಅನ್ನ ಸೂಪದಧಿ ಕ್ಷೀರ ಕದಳಿಫಲವು ಮುರಮರ್ದನನುಚೆಲುವ ತಾ ಹಂಸಪೂಜೆಯ ಕೊಂಬ ತದನಂತರದಲಿ ಮೃತ್ತಿಕೆಯ ತಾ ಗಣಿಯಕಟ್ಟಿಸಿಕೊಂಬ 3 ದಧಿ ದಿವ್ಯ ಮಧು ಸಕ್ಕರೆ ಸೀಯಾಳವು ಇಂ-ದಿರೇಶಗೆ ಬೇಗ ಶಿರದ ಮೇಲ-ಭಿಷೇಕ ಮುದದಿಂದ ಮಾಡಿದ ಬಳಿಕತಿರುಗಿ ನೈವೇದ್ಯವನು ತೀವ್ರದಿಂದಲೆ ಸ-ಮರ್ಪಿಸಿ ಚೆಲುವ ಮಂಗಳಾರತಿಯಿಂದಪಂಚಾಮೃತದ ಪೂಜೆಗೊಂಬ 4 ಜಲಜನಾಭಗೆ ಉಷ್ಣಜಲವ ತಂದ್ಹದ ಮಾಡಿಲಲಿತವಾಗಿ ಎರೆಯುತಒಳಿತಾದ ಹೆಸರ್ಹಿಟ್ಟಿನಲಿ ಒರೆಸಿ ಮೈಯನೆತೊಳೆದು ಸುಲಭಗೆ ಪಾಲನುಣಿಸಿ ಬಳಿಕಬಾಲಉಡಿಗೆಯಿಟ್ಟು ಬಹುನೈವೇದ್ಯವನರ್ಪಿಸಿಚೆಲುವ ಉದ್ವಾರ್ಚನೆ ಪೂಜೆಚೆಂದಾಗಿ ಮಾಡಿಸಿಕೊಂಬ 5 ಮಧ್ವ ಸರೋವರಜಲವು ಹೊಳೆವÀ ಚಿನ್ನ ಕಲಶÀದಲಿಶುದ್ಧದಲಿ ಶೋಧಿಸಿ ತುಂಬಿಸಿಬದ್ಧ ಘಂಟೆನಾದದಲಿ ಬಹುಬೇಗದಲಿಬಂದು ಸನ್ನಿಧಿಯಲಿ ಪೂಜಿಸಿವಿಧುರಥನೆ ಶಂಕರಥನೆ ಪುರುಷಸೂಕ್ತÀದಭಿಷೇಕಮುದದಿಂದ ಮಾಡಿದ ಬಳಿಕ ಸಜ್ಜಿ ಘೃತದೋಸೆ ಬೆಣ್ಣೆ ಸಾರು ನೈವೇದ್ಯವ ಸವಿದು ಚೆಲುವಮಂಗಳಾರತಿಯಿಂದ ಮುದದಿ ತೀರ್ಥಪೂಜೆಗೊಂಬ 6 ಉರು ಪದಕಾಭರಂಣಗಳು ಉನ್ನಂತತೋಳ್ಬಂದಿಕರಮುದ್ರೆ ಕಂಕಣಗಳು ಚರಣಾರವಿಂದಗಳಿಗೆ ಚಾರುಚಿನ್ನದ್ಹಾವಿಗೆಕಿರುಗೆಜ್ಜೆ ಕಾಲಲಂದುಗೆವರ ಪೀತಾಂಬರ ಕಟಿಗೆ ವಡ್ಯಾಣ ನೇವಳ ಇಟ್ಟುನಿರುತ ಸುವರ್ಣದ ಕವಚವುಕೊರಳ ಕೌಸ್ತುಭಹಾರ ಕೋಮಲ ಸುವರ್ಣಕುಂಡಲಸಿರಿಮೂರುತಿ ಸಣ್ಣ ನಾಮ ಶಿರದ ಜಾವಳ ಜಡೆ ಕಡಗೋಲು ನೇಣುಸಹಿತ7 ದಧಿ ಶುಂಠಿ ನಿಂಬೆರಸ ತಕ್ರಜಗದೇಕ ಸವಿದ ಪರಿಯ 8 ಬಗೆಬಗೆಯ ಮಂಗಳಾರತಿ ಬಾರಿಬಾರಿಗೆ ಮಾಡಿ ಚಾ-ಮರ ದರ್ಪಣಗಳೆಸೆಯೆ ನಗೆಮುಖದ ಕೃಷ್ಣ-ನಂಘ್ರಿಗೆ ಷೋಡಶ ಪೂಜೆಯ ಮಾಡಿಮುಗಿಸಿ ಗುರುರಾಯ ಬರಲುಹನುಮಂತದೇವರಿಗೆ ಹಸನಾದ ಭಕ್ಷ್ಯಭೋಜ್ಯಅನುದಿನದಲರ್ಪಿಸಿ ಪೂಜಿಸಿಮುನಿ ಮಧ್ವರಾಯರಿಗೆ ಮುದದಿಂದಲರ್ಪಿಸಿ9 ಅರಳು ಆರಚ್ಚು ಬೆಲ್ಲವುಆ ಕಾಲದಲರ್ಪಿಸಿ ಪೂಜಿಸಿ ಕರಣದಲಿ ನೋಡಿ ನಗುವ 10 ಪುಟ್ಟ ಕೃಷ್ಣರಾಯರಿಗೆ ಹೊನ್ನ ಕವಚವ ತೊಡಿಸಿಇಟ್ಟ ರನ್ನದ ಕಿರೀಟವುದಿಟ್ಟಾದ ಪದಕಂಗಳು ದಿವ್ಯಮುತ್ತಿನ ಸರಕಟ್ಟಿದ್ದ ಪೂಮಾಲೆ ಎಸೆಯೆಶ್ರೇಷ್ಠವಾದ ಧೂಪದೀಪ ಶ್ರೀಪತಿಗೆ ದೋಸೆ ಬೆಣ್ಣೆಗಟ್ಟುರುಳಿ ನೈವೇದ್ಯವು ಕಟಕಟನೆಶುಂಠೀಕಷಾಯುಂಡು ಬಾಯಿ ತೊಳೆದುತಟ್ಟನೆ ರಾತ್ರಿ ಪೂಜೆಯಗೊಂಡು ತಾ ಪಲ್ಲಕ್ಕಿಯೇರಿ ಬರುವ11 ಅರಳು ಬಹುಕೊಬರಿ ಚೂರುಗಳು ಆ ಕಾಲದಲಿ ಸೂಸಿ ಪೂಜಿಸೆ ಕರುಣದಲಿ ನೋಡಿ ನಗುವ 12 ಧೀರನಿಗೆ ಚತುರ್ವೇದ ದಿವ್ಯಶಾಸ್ತ್ರಪುರಾಣ ಚೆಲುವಗಷ್ಟಕ ಗೀತವುಭೇರಿಮೌಳಿ ಮೌಳಿವಾದ್ಯಮೌಳಿಮೌಳಿ ಚಕ್ರವಾದ್ಯತಾರತಮ್ಯದ ಸರ್ವವಾದ್ಯಗಳೆಸೆಯೆತಾರಿ ಸೇವೆಯ ಮಾಡಿ ಸ್ವಾಮಿ ವೀಳ್ಯ ಮಂತ್ರಾಕ್ಷತೆ ಕಾರುಣ್ಯದಲಿಬೆರೆಸಿ ಮಾರಜನಕಗೆ ಏಕಾಂತ ಸೇವೆಯ ಮಾಡಿ ನವಮಾರಜನಕನ ಹಂಪೂಜೆಯ ಜಾಗ್ರತೆಯಲಿ ನೋಡಿ ನಗುವ 13 ಹಡಗಿನಿಂದಲಿ ಬಂದು ಕಡಲ ತಡಿಯಲಿ ನಿಂದುಬಿಡದೆ ಯತಿಗಳ ಕೈಯ ಬಿಂಕದಿ ಪೂಜೆಗೊಂಬಆದಿ ಕೃಷ್ಣನ ಆಹ್ನಿಕವನು ಆಧಾರದಲಿಓದಿವಿನೋದದಲಿ ಪಠಿಪ ಜನರಿಗೆಆಧಿವ್ಯಾಧಿಗಳಟ್ಟಿ ಬಹು ಭಾಗ್ಯಗಳ ಕೊಡುವಮಾಧವನ ಕೃಪೆಯಿಂದಲಿವಾದಿರಾಜರಿಗೊಲಿದು ವಚನ ಶುದ್ಧೋಕ್ತದಲಿ ಹೇಳುವ ಜನರಿಗೆಬರುವ ದುರಿತವ ಕಳೆದು ಮೇಲಾಗಿ ರಕ್ಷಿಸಿಕೊಂಬ ಹಯವದನ 14
--------------
ವಾದಿರಾಜ
ಎರಡನೆಯ ಸಂಧಿ ಶ್ರೀಕಾಂತನ ಕರುಣವುಳ್ಳವಗೆ ಕುಂತಳಪುರಕೆ ಕಳುಹಿದನು 1 ಗಂಧಾಕ್ಷತೆ ಫಲಪುಷ್ಪದಿಂದ ಸಾಕ್ಷಾತು ಗಣಪತಿಗರ್ಪಿಸಿ ತರಳನ ಶಿಕ್ಷಾಗುರುವಿಗೆ ಒಪ್ಪಿಸಿದ2 ಮಣ್ಣ ಹರಹಿ ಅಕ್ಷರವ ಬರೆದು ಎನ್ನಣ್ಣನೀ ತಿದ್ದು ಬಾ ಎನಲು ಎನ್ನೊಡೆಯ ಶರಣೆಂದು ಬರೆದ 3 ನಿನ್ನ ಜ್ಞಾನ ಬೇರೆ ಚಿತ್ತ ಬೇರೆ 4 ಎಂದು ಧಿಕ್ಕರಿಸಿ ಹೇಳಿದನು 5 ಚಾತುರ್ಯದ ಬುದ್ಧಿ ಬೇರೆ ತೊಡರು ತಾತಗೆ ಒಯ್ದು ಒಪ್ಪಿಸಿದ 6 ಮುಕುಂದನ ಭಜಕನೆಂದೆನದೆ ಬಂದ ಹಾಂಗಿರಲೆಂದು ಸುತನ 7 ಧ್ರುವ ಪ್ರಹ್ಲಾದ ಅಕ್ರೂರಾಂಬರೀಷ ಮಾಧವ ಮುರಾರಿಯನ್ನು ಭಜಿಸಿ ಭವ ಭಯಾದಿಗಳಿಲ್ಲ ನಮಗೆ 8 ಕಟ್ಟಿಕೊಟ್ಟರು ಕರಲೇಸು ಎನುತ ಕಟ್ಟೆದರ್ ವೇದೋಕ್ತದಲಿ 9 ಓದಿಸಿದರು ಗುರುಮುಖದಿ ಮಾಧವನಲ್ಲದೆ ಅನ್ಯತ್ರರಿಲ್ಲವೆಂದು ಭೇದಾಭೇದವನೆಲ್ಲ ತಿಳಿದು 10 ಹೊಳೆವ ಶ್ರೀ ಮುದ್ರಿಕೆಯಿಟ್ಟು ಗೆಳೆಯರೆಲ್ಲರಿಗೆ ಬೋಧಿಸಿದ 11 ಪತಿತರಾದಪಗತಿ ಕುಮಾರರಿಗೆಲ್ಲ ಸದ್ಗತಿಯಾಗಬೇಕೆಂದೆನುತ ಮಾಡಿಸಿದನಾಜೆÉ್ಞಯಲಿ 12 ದ್ವಾದಶ ನಾಮವ ಹಚ್ಚಿ ಸಾದಿ ಸಾಧಿಸಿರಿ ಏಕಾದಶಿ ವ್ರತವೆಂದು ಬೋಧಿಸಿದನು ಎಲ್ಲರಿಗೆ13 ಜಾಗರ ಮಾಡಿ ಫುಲ್ಲನಾಭನ ಭಜಿಸುವರು ಪರಗೋಷ್ಠಿಯಿಲ್ಲ 14 ಬೆಳೆಸುವ ಹÀರಿಭಕ್ತರೊಡನೆ ಪರಾಕ್ರಮಿಯೆನಿಸಿದನು 15 ಇಮ್ಮಡಿಯನು ಗೆದ್ದು ಹೇರಿಸಿದನು ತನ್ನ ಪುರಕೆ 16 ತಂದು ಆರತಿಗಳನೆತ್ತಿ ಚರಣಕ್ಕೆರಗಿದನು 17 ಜಗದಧಿಪತಿಯಾಗು ಎಂದು ಹರುಷವನೆ ತಾಳಿದಳು 18 ಲೇಸಾದ ಶುಭಲಗ್ನವ ಕಟ್ಟಿ ಸುತನ ಸಿಂಹಾಸನದಲ್ಲಿ ಕುಳ್ಳಿರಿಸಿ ಭೂಸುರ ಬಂಧುಗಳೆಲ್ಲರು ನೆರೆದಿಂದುಹಾಸಗೆ ಪಟ್ಟಗಟ್ಟಿದರು19 ಪರಿ ಪಾಲಿಸುತ್ತ ರಾಜ್ಯನೀತಿಯಿಂದಾಳುತಲಿಹನು 20 ಲಾಲಿಸು ಕುಂತಳೇಶ್ವರಗೆ ಕಾಲಕಾಲಕೆ ಕಪ್ಪವ ಕೊಟ್ಟು ಬಹೆವು ಆಲಸ್ಯವಾಯಿತು ಎಂದ21 ಉದಾರಬುದ್ಧಿಯಲಿಂದುಹಾಸ ವಿಚಾರಿಸಿದನು ತನ್ನಪಿತನ 22 ಜೋಯಿಸ ಪುರೋಹಿತಗೆ ಕಾಂತಿಗೊಡದ ಕನಕಾಭರಣವೆಲ್ಲವ ಅಂತಸ್ಥದಿಂದ ಕಟ್ಟಿದನು23 ಜ್ಞಾನವುಳ್ಳ ಭೃತ್ಯರೊಡನೆ ದಾನವಾಂತಕನ ಕಿಂಕರನು 24 ತೆರಳಿದರಲ್ಲಿಂದ ಮುಂದೆ ಹೆಬ್ಬಾಗಿಲ ಮುಂದೆ 25 ದಿಟ್ಟರಾರೆಂದು ಕೇಳಿದನು ಅಟ್ಟಿದೆನ್ನೊಡೆಯ ಪುಳಿಂದ 26 ಮಂದಿರಕಾಗಿ ಕರೆಸಿದ ಕರವ ಮುಗಿದರು 27 ಕಡೆಗಣ್ಣಲಿ ನೋಡಲಿಲ್ಲವರೊಳು ಮಾತನುಡಿಯದೆ ಸನ್ಮಾನಿಸದೆ ಝೇಂಕರಿಸಿ ಕೇಳಿದನು 28 ಜೀಯ ಹಸಾದ ನಿಮ್ಮಡಿಗೆ ಇಂದಿನ ವಾಯಿದ ಕಟ್ಟಿದ ಧನವು ದೇವರು ಕೈಕೊಂಬುದೆನಲು 29 ನಗ ನಾಣ್ಯ ದೇವಾಂಗವನು ನಗ ನಾಣ್ಯ ದೇವಾಂಗವನು 30 ಸೊಗಸಾಗಿ ಮಾಡಿಸು ಎಂದ ನಗೆಮುಖದಿಂದ ಹೇಳಿದನು 31 ಸಣ್ಣ ರಾಜಾನ್ನದಕ್ಕಿಯನ್ನ ಶಾಕವು ಅಣ್ಣೆವಾಲೆರೆದ ಪಾಯಸವು ಉಣ್ಣೇಳಿರೆಂದು ಕರೆದರು 32 ನಿರಾಹಾರವು ನಮಗೆ ಎಂದು ಕೇಳಿದನು 33 ಎಮ್ಮೊಡೆಯನ ಸುಕುಮಾರ ತಮ್ಮ ರಾಜ್ಯದಲ್ಲಿ ಏಕಾದಶಿವ್ರತ ನಿರ್ಮಾಣವನ್ನೆ ಮಾಡಿದನು34 ಸತಿ ಎಂದೆಲ್ಲರು ಹೇಳುತಲಿಹರು ಎಲ್ಲಿದ್ದ ಆತಗೆ ಸುತನು 35 ಹಿಂದಟ್ಟಿ ಹೋದನು ಪುಳಿಂದ ಅಟ್ಟಡವಿಯೊಳಗಿರಲು 36 ಪೋಷಣೆಯನು ಮಾಡಿದರು ಭೂಸುರರನೆ ಪಾಲಿಸುವನು 37 ನಟ್ಟಂದದಿ ಮನದೊಳು ಮರುಗಿ ಎಂದು ತಾ ಮನದೊಳು ತಿಳಿದ 38 ಅನುಕೂಲವಾದ ಕಾರ್ಯವು ಮನದಲ್ಲಿ ಚಿಂತೆ ಮಾಡಿದನು 39
--------------
ಹೆಳವನಕಟ್ಟೆ ಗಿರಿಯಮ್ಮ
ಮಹಾಲಕ್ಷ್ಮಿ ಇಂದಿರೇ ಪಾಲಿಸು ಕಮಲಮಂದಿರೆ ಪ ಇಂದಿರೆ ಇಂದುನಿಭಾಸ್ಯೆ - ಗುಣ - ವೃಂದ ಶೋಭಿತೆ ಶುಭಗಾತ್ರೆ - ಆಹಾ ಇಂದು ಶೇಖರಸುರವಂದಿತಪಾದ ದ್ವಂದಾರವಿಂದಳೆ ಮಂದಸ್ಮಿತಾನನೆ ಅ.ಪ ಅರುಣದಿಂದೊಪ್ಪುವ ಚರಣ ಯುಗಳಾ - ಭರಣ ಭೂಷಿತ ಯೋಗಿಶರಣಾ ನಿಜ ಶರಣರ್ಗೆ ರನ್ನದರ್ಪಣಾಭವ - ಅರಣತಾರಣಕಾರಣ - ಆಹಾ ಶರಣು ಪೊಕ್ಕೆನು ದೇವಿ ಚರಣಕಮಲಯುಗ ವರಣಿಸಲಳವಲ್ಲ ಕರುಣಿಸು ನೀ ಎನ್ನ 1 ಶ್ರುತಿನುತವಿತತಸÀಚ್ಚರಿಯೆ ಸದಾ- ನತÀರ ಸಂತೈಪೊದಾಶ್ಚರಿಯೆ ನಿನ್ನ ಸ್ತುತಿಸಿದವಗೆ ಮಹಾ ಶಿರಿಯೆ ಮತ್ತೆ ನಿರಯ ಅಹಾ ಸತತ ನಿನ್ನಲಿ ಮನೋರತಿನಿತ್ತು ಶೋಕದ ವ್ರತತಿ ಖಂಡಿಸಿ ಸುಖತತಿಯ ಪಾಲಿಸು ದೇವೀ 2 ಜಗಕೆ ಸೃಷ್ಟಿಸ್ಥಿತಿನಾಶಕಾರಿ ಬಗೆ ಬಗೆ ಭವನದಲ್ಲಿ ಕ್ಲೇಶ-ಹರಸಿ ಸುಗಮದಿಂದ ಪರಿತೋಷ-ಬಡಿಸಿ ನಗಿಸುವಿ ಎನ್ನಭಿಲಾಷಾ ಅಹಾ ನಗೆಮುಖದಲಿ ಗುರು ಜಗನ್ನಾಥ ವಿಠಲನ್ನ ನಿತ್ಯ ಸೊಗಸಾಗಿ ಇರುತಿಪ್ಪಿ 3
--------------
ಗುರುಜಗನ್ನಾಥದಾಸರು
ಶುಕ್ಕುರವಾರದಿ ಭಕ್ತಿಲಿ ಭಜಿಸುವೆ ಲಕ್ಕುಮಿ ದೇವಿಯನುರುಕ್ಮಾಭರಣ ವಿಲಕ್ಷಣ ಶೋಭಿಪ ಸುಲಕ್ಷಣ ಮೂರ್ತಿಯನುರಕ್ಕಸರಿಪು ಬಲಪಕ್ಕದಿ ಕೂತಿಹ ರುಕ್ಮಿಣಿ ದೇವಿಯನು ಪ ಸಂತತ ಭಜಿಸುವ ಸಂತರ ಹತ್ತಿರ ನಿಂತು ರಕ್ಷಿಸುತಿಹಳುಶಾಂತಳು ಸದ್ಗುಣವಂತಳು ಕಮಲಾಕಾಂತನ ಸುಪ್ರಿಯಳೂ ಕರವೀರಪ್ರಾಂತ್ಯದೊಳಿರುತಿಹಳು ಹೃತ್ಕಮಲಂಚಳ ಸಂಸ್ಥಿತಳು 1 ಮಾಧವ ಭೂಮಿಯ ಮಂಗಳ ಮೂರ್ತಿಯು ಸುಖರಾಶಿ2 ಆಸ್ಯಾಂಬುಜತನು ಹಾಸಸುಕುಂತಳೆ ಭೂಷಿತ ಬಿಂಬೋಷ್ಠೀಕೂಸಿಗೆ ಕೊಡು ಇಂದಿರೇಶನ ಸಹಜಗದೀಶಳೆ ತವ ಭೆಟ್ಟಿ3 ಅಗಣಿತ ಮಹಿಮನಸುಗುಣದೊಳಾಡುವ ಮಿಗೆ ಹರುಷವ ಕೊಡುನಗೆಮುಖದವಳೇ 4 ಸಂದರವದನೆ ಸಿಂಧುರಗಮನೆ ಕುಂದದ ಅಸುರರನೆಮಂದರಮಾಲಾ ಭೂಷಿತವೇಣಿ ಇಂದಿರೇಶನ ಪಾದದ್ವಂದ್ವತೋರಿಸು ನಿನಗೊಂದಿಸುವೆನು ಶರದಿಂದು ಸುಮನಸೆ 5
--------------
ಇಂದಿರೇಶರು
ದೇವಿವರಲಕ್ಷ್ಮಿ ಭಕ್ತರ ಕಾಯ್ವಿಕರುಣದಿ ವರವ ನೀಡಿ ಪ.ಸಿಂಧುಶಯನನ ದಯೆಎಂದೆಂದು ಬಿಡದಂತೆಚಂದದಿ ಕರುಣಿಸೆ ಇಂದಿರೆÉ ನಮಗೆ 1ಮಂದಗಮನೆಯರು ತಂದಮಂದಾರಮಲ್ಲಿಗೆಗಂಧ ಕುಂಕುಮದಿಂದ ಚಂದಾಗಿ ಅರ್ಚಿಸೆದೇವಿ 2ಮಿತ್ರವಿಂದಾದಿಗಳಿಂದಮತ್ತೊಮ್ಮೆ ಲಕುಮಿಯೆಮುತ್ತು ರತ್ನದ ವಸ್ತ ವಸ್ತ್ರ ವೀಳ್ಯವ ಕೊಳ್ಳದೇವಿ 3ನಗಧರರಾಮೇಶನುಅಗಲದಂತೆ ನಮ್ಮಮುಗಿದೇವ ಕರಗಳ ನಗೆಮುಖದ ಗೌರಿ ನೀ ದೇವಿ 4
--------------
ಗಲಗಲಿಅವ್ವನವರು