ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸೊ ಗುರು ತಾರಿಸೊ ಶರಣರಕ್ಷಕ ನಮ್ಮ ಕರುಣಾಕರ ದೇವ ಧ್ರುವ ¨Àವಜನ್ಮದಲಿ ಬಂದು ಬಹುಬಳಲಿದೆ ನಾನು ಅವಿದ್ಯದಾಟಕೆ ಐವರು ಕೂಡಿ ತಾ ಜೀವನ ಮುಕ್ತಿಗಾಣಿಸಗೊಡದಿಹರು 1 ಮೂರೊಂದು ಮಂದಿಯು ಸೇರಗೊಡದೆ ಪಥ ಆರುಮಂದಿಯ ಕೂಡಿ ಕಾಡುತಲಿ ಆರು ಮತ್ತೆರಡುಮಂಡೆಯ ಕಾವಲಿಗೆ ನಾನು ಆರೆನಯ್ಯ ಶ್ರೀಗುರುಶಿರೋಮಣಿಯೆ 2 ಹತ್ತು ಹೊಳಿಯು ಸುತ್ತ ಅಡ್ಡಗಟ್ಟಿಹುದು ಪಥ ನಡಲೀಸದೆ ಇಂತಿವ ತಾರಿಸಿ ಮೂಢsÀಮಹಿಪತಿಯ ಸಂತತ ಸದ್ಗತಿಸುಖ ಈವುದೆನಗಿನ್ನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸೋ ಗುರು ತಾರಿಸೋ ಶರಣರಕ್ಷಕ ನಮ್ಮ ಕರುಣಾಕರ ದೇವ ಧ್ರುವ ಭವ ಜನ್ಮದಲಿ ಬಂದು ಬಹು ಬಳಲಿದೆ ನಾನು ಮೂವಿಧ ಬಲೆಯಲಿ ಸಿಲುಕಿ ಜೀವನವು ಅವಿದ್ಯ ದಾಟಕ ಐವರು ಕೂಡಿ ತಾಂ ಜೀವನ ಮುಕ್ತಿಗಾಣಿಸಗುಡದಿಹರು 1 ಮೂರೊಂದು ಮಂದಿಯ ಸೇರುಗುಡದೆ ಪಥ ಅರುಮಂದಿಯು ಕೂಡಿ ಕಾಡುತಲಿ ಆರುಮತ್ಯೆರಡು ಮಂದಿಯ ಕಾವಲಿಗೆ ನಾನು ಆರಯ್ಯ ಶ್ರೀಗುರು ಶಿರೋಮಣಿಯ 2 ಹತ್ತು ಹೊಳೆಯ ಸುತ್ತ ಅಡ್ಡಗಟ್ಟಿಹುದು ಪಥ ನಡಲೀಸದೆ ಇಂತವತಾರಿಸಿ ಮೂಢ ಮಹಿಪತಿಯ ಸಂತತಸದ್ಗತಿ ಸುಖ ಈವ ಘನಗಿನ್ನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು