ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಬಂದ್ಯೋ ಜೀವವೆ ಶರೀರದೊಳು ವ್ಯರ್ಥವಾಗಿಪ. ದಾನಧರ್ಮ ಮಾಡಲಿಲ್ಲ ದಯಬುದ್ಧಿ ಪುಟ್ಟಲಿಲ್ಲಜ್ಞÁನವರಿತು ಹರಿಪೂಜೆ ಮಾಡಲಿಲ್ಲಜ್ಞಾನಿ ಸುಜ್ಞಾನಿಗಳಸನ್ನಿಧಿಯಲ್ಲಿರಲಿಲ್ಲ ನಿರ್ಮಲಮನದಲಿ ಒಂದುದಿನವಿರಲಿಲ್ಲ 1 ಸತಿ ಪುರುಷರು ನಾವು ಸಂತೋಷದಿಂದಿರಲಿಲ್ಲಯತಿಯಾಗಿ ತೀರ್ಥಯಾತ್ರೆ ಮಾಡಲಿಲ್ಲಶ್ರುತಿಶಾಸ್ತ್ರ ಪುರಾಣಗಳ ಕಿವಿಗೊಟ್ಟು ಕೇಳಲಿಲ್ಲಮೃತವಾಗೋಕಾಲ ಬಂತು ಬರಿದೆ ಮುಪ್ಪಾದೆನಲ್ಲ 2 ಉಂಡು ಸುಖಿ ಅಲ್ಲ ಉಟ್ಟು ತೊಟ್ಟು ಪರಿಣಾಮ ಇಲ್ಲಕೊಂಡು ಕೊಟ್ಟು ಹರಿಸೇವೆ ಮಾಡಲಿಲ್ಲದುಂಡು ನಾಯಿಯಂತೆ ಮನೆಮನೆಗಳ ತಿರುಗಿ ಕೆಟ್ಟೆಮೊಂಡಜೋಗಿಗುಣಂಗಳ ಬಿಡಿಸೊ ಹಯವದನ 3
--------------
ವಾದಿರಾಜ
ಪ್ರಾಯಶ್ಚಿತ್ತವು ಎನಗೆ ಇಲ್ಲವಯ್ಯಾ ಪ ನಾಯಿಯಂತೆ ಕಂಡ ಕಂಡಲ್ಲಿ ತಿಂಬುವಗೆ ಅ.ಪ ಮಾನಸದಿ ತ-ದೇಕ ಧ್ಯಾನದಲ್ಲೇ ಕುಳಿತು ಜ್ಞಾನಿಗಳ ಸಹವಾಸ ಮಾಡದಲೆ ಹೀನರಾಶ್ರೈಸೆ ನಾಲಿಗ್ಯೆ ಹಿತವನೆ ಬಯಸಿ ಮೀನು ಗಾಣಕೆ ಬಿದ್ದು ಮಿಡುಕುವಂದದಲಿ 1 ಸರಸರನೆ ಕಂಠವನು ಗರಗಸದಿ ಕೊಯ್ದರೂ ತರಹರಿಸದೇ ಪರರ ಮನೆಯನ್ನವನ್ನು ಕರದಲಿ ಸ್ಪರ್ಶ ಸಲ್ಲದು ಎಂದು ಪೇಳುತಿರೆ ಹಿರಿದಾಗಿ ಕುಳಿತು ಭುಂಜಿಸುವ ಪಾತಕಿಗೆ2 ಪರರಿತ್ತ ಕೂಳಿನಲಿ ಅವರ ಕುಲಕೋಟಿ ಸಾ- ವಿರ ಜನುಮದಲಿ ಅರ್ಜಿಸಿದ ಪಾಪ ಬೆರೆತಿಹುದು ಎಂದ್ಹೇಳಿ ಕೇಳಿ ಕೇಳಿ ನಗುತ ಹರುಷದಿಂ ಕುಳಿತು ವಿಷವುಂಬ ಪಾತಕಿಗೆ 3 ಯಾತ್ರೆಯ ಪೋಪಲ್ಲಿ ತಿಥಿ ಮತಿ ಹವ್ಯದಲಿ ಮತ್ತೆ ಕುಲಹೀನದಲಿ ಅನ್ನ ತಿಂದು ನಿತ್ಯ ಹಿಂಗದಲೆ ಈ ನೀಚ ಒಡಲನು ಹೊರೆವ ತೊತ್ತು ಬಡುಕಗೆ ಪುಣ್ಯವೆತ್ತ ದೊರಕುವುದೊ 4 ಕ್ಷಿಪ್ರ ಪ್ರಾಯಶ್ಚಿತ್ತ ಪೊಂದಿಹುದು ಕೇಳಯ್ಯಾ ಈ ಪೃಥ್ವಿಯೊಳಗೆಲ್ಲ ನಿನ್ನ ನಾಮ ಕಾಯ ವಿಜಯವಿಠ್ಠಲರೇಯ ಸುಪ್ರಸಾದವನಿತ್ತು ಶುದ್ಧಾತ್ಮನನು ಮಾಡು 5
--------------
ವಿಜಯದಾಸ
ಮೋಸ ಹೋದೆನಲ್ಲ -ವಿಠಲ- ಮೋಸ ಹೋದೆನಲ್ಲಾ ಪಆಸೆಬಿಟ್ಟು ಹಂಬಲಿಸಿ |ಹೇಸಿ ನರಕದೊಳಗೆ ಸಿಲುಕಿ ಅ.ಪಪುಷ್ಪ ಶ್ರೀ ತುಳಸಿಯನ್ನು |ಒಪ್ಪದಿಂದ ಮನೆಗೆ ತಂದು ||ಅಪ್ಪ ಕೃಷ್ಣನ ಪೂಜೆಯ ಮಾಡಿ - ಮೇ-|ಲಿಪ್ಪ ಲೋಕದ ಸೂರೆಗೊಳದೆ 1ಕಾಯದಾಸೆಗೆ ಕಂಡುದ ಬಯಸಿ |ನಾಯಿಯಂತೆ ಮನೆಮನೆ ತಿರುಗಿ ||ಮಾಯಾಪಾಶದೋಳಗೆ ಸಿಲುಕಿ |ಜೀಯನಿನ್ನನು ಧ್ಯಾನಿಸಲರಿಯದೆ2ಸತಿಸುತರು- ಪಿತೃ-ಬಾಂಧವರು |ಪಥವ ತೋರಿಸಬಲ್ಲರೆ ಇವರು ||ಗತಿನೀನೇಪುರಂದರವಿಠಲ |ಹಿತವ ತಾಯಿ ತಂದೆ ನೀನು 3
--------------
ಪುರಂದರದಾಸರು