ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಧಂತಮಸು ಇನ್ನಾರಿಗೆ ಗೋ-ವಿಂದನ ನಿಂದಿಸುವರಿಗೆ ಪ ಸಂದೇಹವಿಲ್ಲದೆ ಸಾರಿಸಾರಿಗೆ ವಾಯುನಂದನನ ವಂದಿಸದವರಿಗೆ ಅ ಮಾತುಮಾತಿಗೆ ಹರಿಯ ನಿಂದಿಸಿ ಸ-ರ್ವೋತ್ತಮ ಶಿವನೆಂದು ವಾದಿಸಿಧಾತುಗ್ರಂಥಗಳೆಲ್ಲ ತೋರಿಸಿ ವೇ-ದಾಂತ ಪ್ರಮಾಣಗಳ ಹಾರಿಸಿಸೋತು ಸಂಕಟಪಟ್ಟು ಘಾತಕ ಒಡಲೊಳಗಿಟ್ಟುನೀತಿ ಹೇಳುವ ಕೆಟ್ಟ ಜಾತಿಗಳಿಗಲ್ಲದೆ 1 ಮೂಲಕವತಾರಕ್ಕೆ ಭೇದವು - ಮುಖ್ಯಶೀಲ ಪಂಡಿತರೊಳಗೆ ವಿವಾದವುಲೀಲಾ ಸಾದೃಶ್ಯವ ತೋರುತ - ಲಿಂಗಭಂಗವಿಲ್ಲದ ದೇಹ ಹಾರುತಮೂಲ ಗುರುವು ಕುಂತೀಬಾಲನೆನ್ನದೆ ವೃಥಾಶೀಲಗೆಟ್ಟಂಥ ಖೂಳರಿಗಲ್ಲದೆ ಮತ್ತೆ 2 ವ್ಯಾಸರ ಮಾತುಗಳಾಡುತ ವಿ-ಶ್ವಾಸ ಘಾತಕತನ ಮಾಡುತದೋಷವೆಂದರೆ ನುಡಿ ಕೇಳದೆ ಸಂ-ತೋಷವೆಂದರೆ ನೋಡಿ ಬಾಳದೆಶೇಷಶಯನನಾದಿಕೇಶವರಾಯನದಾಸರೊಡೆಯ ಮಧ್ವದ್ವೇಷಿಗಳಿಗಲ್ಲದೆ 3
--------------
ಕನಕದಾಸ
ಸಲ್ಲದು ಸಲ್ಲದು ಜ್ಞಾನ ಬೋಧೆಸುಳ್ಳರಿಗೆ ಮತ್ತು ಶುಂಠರಿಗೆಪಮುಂದೆ ಹೊಗಳಿ ಹಿಂದೆ ನಿಂದಿಸುವರಿಗೆಸಂದೇಹಿಸುತ ಸಜ್ಜನರಿಗೆ ಹಳಿಯುತಮುಂದೆ ಕಾಣದೆ ಮೂರ್ಖತೆಯಲಿ ನುಡಿಯುತಕುಂದುಕೊರತೆಯಹ ಕುಹಕರಿಗೆ1ಬರಡು ಮಾತಿನಲಿಕಾಲಕಳೆಯುತಜರಿದುನುಡಿಯುತಾ ಕೂಡಿ ನಗುವರಿಗೆಇರುಳು ಹಗಲು ಇಹಪರದಿ ಬಿದ್ದಿಹನರರುಗಳಿಗೆ ಮತಿ ನಷ್ಟರಿಗೆ2ಬ್ರಹ್ಮ ನುಡಿಯ ಮೂರು ನುಡಿಯನೆ ಕಲಿತಬ್ರಹ್ಮ ವಿದ್ವಾಂಸರು ವಾದಿಸುವಬ್ರಹ್ಮತಾವಾಗುವ ಪರಿಯೆಂತೋಪರಬ್ರಹ್ಮ ಚಿದಾನಂದನ ಕಾಣದವರಿಗೆ3
--------------
ಚಿದಾನಂದ ಅವಧೂತರು