ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈಡುಗಾಣೆನಯ್ಯ ಜಗದೊಳಗೆ ಪ. ಬೇಡಿದಭೀಷ್ಟಗಳ ಕೊಡುವ ಹನುಮ ಭೀಮ ಮಧ್ವರಾಯ ಅ.ಪ. ಅಷ್ಟದಿಕ್ಕಲಿ ಭೂಪರಾಳಿದ ದುಷ್ಟರಾವಣನ್ನ ಪುರವ ದೃಷ್ಟಿಸಿ ನೋಡಿ ಸಮರದಲಿ ಪ್ರಹಾರವನೆ ಕೊಡಲು ಕಷ್ಟದಿ ಮೂಛ್ರ್ಯಕೃತನಾಗಿಯೆದೆ ಹಿಟ್ಟಾಗಿಸನಂತಕಂದಿಸಿಯೆ ಕಂಗೆಟ್ಟು ಹತ್ತು ದಿಸೆಗೆ ಓಡಿಸಿದ್ಯೊ ದಿಟ್ಟನಾಗಿ ನಿರಂತರದಿ ಹನುಮಾ 1 ನಾರದ ಅಯೋಧ್ಯದಿ ಪೇಳಲು ಶ್ರೀ ರಾವಣ ಸೈನ್ಯಗಳ ಓಡಿಸಿ ವಾರಿಧಿಗಳ ದಾಟಿ ಬೇಗ ನೂರುತಲೆ ಅಸುರನ ಪಟ್ಟಣದ ದ್ವಾರ ಬಂಧಿಸಿ ಸಕಲದ್ವೀಪದಲ್ಲಿದ್ದ ಕ್ರೂರ ಅಸುರನ್ನ ಕಾಲಲೊದ್ದು ವರ ವಿಭೀಷಣ ಸುಗ್ರೀವರ ಪುಚ್ಛದಲಿ ತರುಬಿದಿಯೊ ಸಮರ್ಥ ಹನುಮಾ 2 ರುದ್ರ ಬ್ರಹ್ಮರ ವರದಲವಧ್ಯನಾದ ಜರಾಸಂಧನಾ ಖಳರ ಸೀಳಿದ್ಯೊ ನೃಪರ ನಿಂದೆ ಯುದ್ಧದಲಿ ದುರ್ಯೋಧನನ ಕೊಂದ ಪ್ರಸಿದ್ಧ ಭೀಮರಾಯ ನಿಮಗೆ3 ವಾದಿಗಜಕೆ ಮೃಗೇಂದ್ರ ವಾದಿವಾರುಧಿ ಬಡಿವ ಮಾಯಾ ವಜ್ರ ಭೇದ ಮತಾಂಬುಧಿಗೆ ಚಂದ್ರ ಮೋದತೀರ್ಥಾನಂದಗೆ ಕೃಷ್ಣಾ ಅಷ್ಟವಾಳುಕ ಮುಷ್ಟಿ ತಂದೆ ಸಾಧುಜನರಿಗೆ ತತ್ವಬೋಧಿಸಿದೆ ಮೇದಿನಿಯೊಳು ಮಧ್ವರಾಯ ನಿಮಗೆ 4 ಇಂದುಮುಖಿ ಸೀತೆಗೆ ಮುದ್ರಿಕೆಯನಿತ್ತು ವಂದಿಸಿ ರಾಮಕಥೆಯ ಪೇಳಿದೆ ಅಂದು ರೋಮಕೋಟಿ ಶಿವರಮಾಡಿ ಪುರುಷಮೃಗವನೆ ತಂದೆ ಚಂದದಿಂ ಮಣಿಮಂತನ ಕೊಂದು ಸೌಗಂಧಿಕವ ತಂದೆ ನಂದತೀರ್ಥರಾದ ಅಚಲಾನಂದ ವಿಠಲನ ದಾಸ ನಿಮಗೆ5
--------------
ಅಚಲಾನಂದದಾಸ
ಧ್ಯಾನವನೆ ಮಾಡಿ ನವರತ್ನ ಸಿಂಹಾಸನಸಾನಂದದಿಂದ ನಿಮಗರ್ಪಿಸುವೆನುಶ್ರೀ ನಿಧಿಯೆ ಪಾದ್ಯಾಘ್ರ್ಯ ಮಧುಪರ್ಕಗಳನು ಸು-ಮ್ಮಾನದಿಂದರ್ಪಿಸುವೆ ಗೌರಿ ದೇವಿ ಜಯ 1 ತುಂಗಭಧ್ರಾ ಸರಸ್ವತಿ ಯಮುನೆ ಕಾವೇರಿಗಂಗಾದಿ ಶುಭತೀರ್ಥ ಸಲಿಲದಿಂದಮಂಗಲಸ್ನಾನವನೆ ರಚಿಸಿ ಜಡೆವೆಣೆದು ಕುಸುಮಂಗಳಂ ಮುಡಿಗೆ ಮುಡಿಸುವೆನಂಬಿಕೆ 2 ಚಂದ್ರಗಾವಿಯ ಸೀರೆ ಕುಪ್ಪಸವ ತೊಡಿಸುವೆನುಚಂದದಿಂದರಿಸಿನವ ಲೇಪಿಸುವೆನುಚಂದ್ರಕಸ್ತೂರಿ ತಿಲಕ ಕುಂಕುಮದ ರೇಖೆಯನುಅಂದದಿಂದಿಡುವೆ ಶ್ರೀ ಗೌರಿ ನಿಮಗೆ3 ಕಣ್ಣ ಕಪ್ಪಿಟ್ಟು ಕರಯುಗಕೆ ಗಂಧವ ತಿವುರಿಚಿನ್ನದಾಭರಣ ನಿಕರವನಿಡುವೆನುರನ್ನ ದುಂಗುರ ಹಾರ ಪದಕದಿಂದ ಶೃಂಗರಿಸಿನಿನ್ನ ಪದಯುಗವ ಪೂಜಿಪೆನು ಗೌರಿ ಜಯ4 ಚಾರು ಪುನ್ನಾಗ ಪೂಗಸಿರಿಸ ಸುರಹೊನ್ನೆ ಸಂಪಗೆ ಮೊದಲಾದ ಪೂಸರವ ಸಿರಿಮುಡಿಗೆ ಮುಡಿಸುವೆನು ಗೌರಿ ಜಯ 5
--------------
ಕೆಳದಿ ವೆಂಕಣ್ಣ ಕವಿ