ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ಪಶ್ಚಿಮಕೆ ತಿರುಗಿದಾ ಪರಿಯದೇನೋ ಅಚ್ಯುತಾನಂತ ಗೋವಿಂದ ಗೋಪಾಲ ಪ. ಪರಿ ಪರೀ ಸ್ತುತಿಗೈದು ಪೂರ್ವಾಭಿಮುಖವಾಗಿ ಸ್ಥಾಪಿಸಿರಲೂ ಆವಕಾಲಕು ಪವನ ಮತದಂತೆ ನಟನೆಯವ ಈ ವಿಧದಿ ಅವರ ಮನಮೀರಿ ತಿರುಗಿಹುದೂ 1 ಕ್ಷೀರ ಸಾಗರ ಜಾತೆ ನೋಡುವಳೆಂದು ನಾರಿ ಹಂಬಲನೆನಸಿ ಕಡಲ ಕಡೆಗೇ ಸೇರಬೇಕೆಂದು ವೈಕುಂಠವನು ತಿರುಗಿದ್ಯಾ ಕಾರಣವದೇನೈಯ್ಯ ನಾರದ ಸ್ತುತನೇ 2 ಕ್ಷೀರಸಾಗರ ಮಧ್ಯೆ ತೋರುವೋ ದಿವ್ಯಪುರ ಸೇರಿದಾ ಮುಕ್ತ ಸ್ತುತಿಯನಾಲೈಸಿ ಹಾರಿಹೋಗಲು ಮನಸು ಹಾರಿತೇ ಮಮತೆಯಲಿ ದ್ವಾರಕಿಯ ನೆನಪಾಯಿತೇನೋ ಕೃಷ್ಣಯ್ಯ 3 ದುರ್ಜನಕೆ ದುರ್ಮನಸು ಮರುಕಲಿ ಪುಟ್ಟಲೂ ಸರ್ಜನಕೆ ಸರ್ವೇಶ ನೀನೇನಿಸಲೂ ಮೂರ್ಜಗದಿ ನಿನ್ನ ಮೀರಿದರಿಲ್ಲವೆನಿಸಲೂ ಅಬ್ಜಭವಪದರಲ್ಲಿ ಸಲುಗೆ ಬಹಳಿರಲೂ 4 ಎಲ್ಲ ಕಾರಣವಿರಲಿ ಬಲ್ಲ ಕನಕನು ಬರಲು ಗುಲ್ಲು ಮಾಡುತ ಕುರುಬನೆಂದೊಳಗೆ ಬಿಡದೇ ನಿಲ್ಲಿಸಲು ಕಲ್ಲೊಡೆದು ಪಶ್ಚಿಮಕೆ ತಿರುಗಿ ನೀ ಅಲ್ಲೆ ಕನಕಗೆ ದಿವ್ಯ ದರುಶನ ಕೊಡಲೂ 5 ಸಿರಿಬೊಮ್ಮ ಸುರರ ಲೆಕ್ಕಿಸದೆ ಸದ್ಭಕ್ತರಾ ಗರುವ ರಹಿತರ ಸ್ತುತಿಗೆ ಮೈದೋರುವಾ ಪರಿಯ ತೋರಲು ಇತ್ತ ತಿರುಗಿದ್ಯಾ ಪೇಳಿನ್ನು ಪರಿ ತಿಳಿವರಾರೈ6 ಆನಂದ ಗುಣಪೂರ್ಣ ಆನಂದ ಮುನಿವರದ ಆನಂದ ಕಂದ ಪಶ್ಚಿಮ ತಡಿಯವಾಸಾ ಆನಂದ ಗೋಕುಲದಿ ಆನಂದ ತೋರಿದಾ ಆನಂದ ಗೋಪಾಲಕೃಷ್ಣವಿಠಲೈಯ್ಯಾ 7
--------------
ಅಂಬಾಬಾಯಿ
ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು
[ನಿನ್ನ ಭಕ್ತರಿಗೆ ಭವದ ದೋಷವಿಲ್ಲ ಸರ್ವ ಕರ್ತೃ ಸ್ವತಂತ್ರ ಹರಿಯೇ, ನೀನೆ ಪ್ರೇರಿಸಿ ಭಕ್ತರಿಂದ ಅಪರಾಧ ಮಾಡಿಸಿ ಹೊಣೆಗಾರರನ್ನು ಮಾಡಿ ದಣಿಸದಲೆ ಕ್ಷಮಿಸಿ ಚಿತ್ತದಲಿ ಪೊಳೆ ಎಂದು ಪ್ರಾರ್ಥನಾ.] ಧ್ರುವತಾಳ ಅಪರಾಧಿ ನಾನಲ್ಲ ಅಪರಾಧ ಎನಗಿಲ್ಲವಿಪರೀತವೇನಯ್ಯ ಎನ್ನಂದಿಲಿಅಪರಿಮಿತ ಸ್ವಾತಂತ್ರವುಳ್ಳ ಕರ್ತುತ್ವದಿಂದಕೃಪಣರ ಬಾಧೆಗೆ ಯತನವೇನೋವಿಪುಳ ಐಶ್ವರ್ಯದಿಂದ ಸ್ವಾಮಿ ನೀನಾದರೂಸುಪಥ ನಡಿಯದಿಪ್ಪ ಕುಜನರನ್ನತಪುತ ದುಃಖದಲ್ಲಿ ನಿಯಾಮಿಸುವಿಯೆಂದುಅಪೌರುಷೇಯವಾದ ಶ್ರುತಿಯು ಪೇಳೆಖಪತಿ1ಯು ಬಾಧಿಪದಕೆ ಕಾರಣವೇನುಂಟುಉಪಗೂಢ2 ಕರುಣಿಯೇ ತಿಳುಹಬೇಕುಕ್ಲಿಪುತ ರಹಿತವಾದ ವಪುಗಳು ಬರಲೇಕೆಶಪಥ ಉಂಟು ನಿನ್ನ ಬಿಡೆನೆಂದೂಉಪರಿಯಿನ್ನು ಉಂಟು ಅಪರಾಧವೇನು ತಿಳಿಯೆನೃಪತಿ ಹೀನವಾದ ಸತಿಯನೊಲಸೆಉಪಮ ರಹಿತವಾದ ಸಥೆ ಮಾಳ್ಪ ತೆರದಂತೆಚಪಲನಾದರು ಇದನು ಪೋಗದೆಂದು ರಿಪು ಕುಲ ದಲ್ಲಣನಾದ ಪಿತನ ಭಯಕೃಪೆಗೆ ವಿಷಯನಾದ ಸುತರಿಗೆ ನೀನುಅಪಾರ ಗುಣನಿಧೆ ಇನಿತು ಮಾತೆ ಹೊರತುಕುಪಿತನಾಗುವದಕ್ಕೆ ಕೃತ್ಯವಿಲ್ಲಶಪಥ ರೂಪನೆ ನಿನ್ನ ಆಜ್ಞ ಪಾಲನೆ ಮುಖ್ಯಸಫಲವಲ್ಲದೆ ಮತ್ತೊಂದಧಿಕವಿಲ್ಲ ಅ-ನುಪಮ ಸಾಧನ ಇದೆ ಇದೆ ಸಿದ್ಧವೆಂದುವಿಪ ಅಹಿಪಾದ್ಯರು ಮಾಳ್ಪುದಾಗಿ ಸುಪವಿತ್ರವೆನಿಪ ಸತ್ವಬೋಧಿತನಾಗಿ ಹರಿಕ್ಷಿಪಣರ1 ವ್ಯಾಪಾರನಿಂದಾದಕ್ಕೆಸ್ವ ಪಕ್ಷದವರನ್ನು ವೊಹಿಸದಲೆ ಕಡಿಗೆ ಪ-ರ ಪಕ್ಷದವರೆಲ್ಲ ನುಡಿದ ನುಡಿಗೆ ಅಪಹಾಸ ಮಾಡಿದಿ ಅಭಿಮಾನವಿಲ್ಲದಲೆಆಪ್ತನೆಂಬೊ ಮಾತು ಉಳಿಸದಲೆತಪನವಾದ ಭವದಿ ತಂದು ಕ್ಲೇಶವ ಬಡಿಸಿಅಪಹೃತವಾದ ಜ್ಞಾನ ಮಾಡಿದೆನಗೆಉಪಕಾರವೇನು ನಿನ್ನ ಮಾತು ಕೇಳಿದದಕೆಈ ಪರಿ ಮಾಡದಿರು ನಂಬಿದವರತಪುತ ಸುವರ್ಣ ವರ್ಣ ಗುರು ವಿಜಯ ವಿಠ್ಠಲರೇಯಯಃ ಪ್ರಾಣದಾತಿ ಮದ್ಭಕ್ತನೆಂಬೋದು2 ಸತ್ಯ ಮಾಡು 1 ಮಟ್ಟ ತಾಳ ಪ್ರೌಢ ಕರ್ಮದಿ ನಿನ್ನ ಪ್ರೀತಿಯ ಎನಸಲ್ಲಕೀಡ ಕರ್ಮ3 ನರಕವೆಂದೆಂಬೋಸು ಅಲ್ಲಮಾಡು ಎಂದವರನ್ನು ಬಿಡುವರೆ ಮಹಾಪಾಪಬೇಡ ಎಂದದರನ್ನ ಮಾಡುವದೆ ದೋಷಈಡಿಲ್ಲವೋ ನಿನ್ನ ಮಹಿಮೆಗೆ ಏನೆಂಬೆ ರೂಢಿಗಾಗಿದೆ ನೋಡು ದ್ರೋಣನ ವಧೆಗಾಗಿ ನೀ-ನಾಡಿದ ಉಕುತಿಯನು ಗ್ರಹಿಸದ ಕಾರಣದಿ ನೋಡಿಸಿದಿ ನರಕ ದುಃಖವ ಧರ್ಮಜಗೆಗೂಢ ಬಲ್ಲವರಾರು ನಿನ್ನ ಪ್ರೀತಿಯು ಧರ್ಮಗಾಢ ಭಕುತರೆಲ್ಲ ಇದೆ ಮಾಡುವರಾಗಿಕ್ರೋಧ ಮೂರುತಿ ಗುರು ವಿಜಯ ವಿಠ್ಠಲರೇಯಆಡಿದ ವಚನಗಳು ಸಕಲ ಸಾಧನವೆನಗೆ 2 ತ್ರಿವಿಡಿತಾಳ ಅರಸು ತನ್ನ ನಿಜ ಪರಿಚಾರ ಜನರಿಗೆಸರಿ ಬಂದ ಕಾರ್ಯದಲಿ ನಿಲ್ಲಿಸಲುನರರಿಗುಂಟೇನಯ್ಯ ವಿಹಿತಾವಿಹಿತದ ಭಯಧರಣಿಪತಿಯ ಪ್ರೀತಿ ಒಂದೇ ಹೊರ್ತುಸರಸಿಜ ಹರಿಭವ ಸುರಪಾದಿ ನಿರ್ಜರರುಹರಿಯೆ ನಿನ್ನಾಜ್ಞವ ಪಾಲಿಪರೋಸರಸಿಜಾಂಡವನ್ನು ನಿಯಾಮಿಸಿ ಒಂದೊಂದುಪರಿಯ ವ್ಯಾಪಾರದಲ್ಲಿ ನಿಲ್ಲಿಸಲೂಪರಮಾಣುಗಳ ಸ್ಥೂಲ ಸೃಷ್ಟಿ ಸ್ಥಿತಿಯ ಮಾಡಿತರುವಾಯ ಲಯದಲ್ಲಿ ಅಭಿಮುಖರುಪರಮ ಭಯಂಕರವಾದ ಕಾರ್ಯಗಳಿಂದಕರುಣವಿಲ್ಲದಲೆ ಖಂಡ್ರಿಪರು ಈತೆರದಿ ಮಾಡುವರಿಗೆ ಪಾಪ ಪುಣ್ಯವೇನುಧೊರಿಯೆ ನಿನ್ನಯ ಪ್ರೀತಿ ಒಂದಲ್ಲದೆಮರಳೆ ಸಂದೇಹವಿಲ್ಲ ``ಭೀಷಾಸ್ಮಾದ್ವಾತಃ ಪವತಿ’’ವರಲುತಿವೆ ವೇದ ಅಂತವಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಾಶರಣರ್ಗೆ ಕರ್ಮಗಳ ಲೇಪ ಉಂಟೆ 3 ಅಟ್ಟತಾಳ ಸತಿ ಕರ್ಮ ಕೊರತೆ ಮಾಡೆಪಾತಿವ್ರತಕೆ ದೋಷಕೆ ಎಂದಿಗಾದರೂ ನೋಡಾಸ್ತೋತ್ರ ಮಾಡುವಾಗ ಶಬ್ದ ಡೊಂಕಾಗಲು ಪಾ-ರತ್ರಿಕವಾಗುವ ಪುಣ್ಯಕ್ಕೆ ದೋಷವೆಸೂತ್ರನಾಮಕ ನಿನ್ನ ಆಜ್ಞವ ನಡಿಸುವಭಕ್ತರಿಗೆ ಉಂಟೇನೊ ಭವದೋಷವನ್ನುಕ್ಷೇತ್ರ ಮೂರುತಿ ಗುರು ವಿಜಯ ವಿಠ್ಠಲರೇಯಾ ಧಾ-ರಿತ್ರಿಯೊಳಗೆ ನಿನ್ನವಗೆ ದೋಷವೇನೊ 4 ಆದಿತಾಳ ಒಂದಪರಾಧ ಉಂಟು ವಂದಿಪೆ ತಲೆಬಾಗಿಇಂದಿರೆ ಮೊದಲಾಗಿ ಶ್ವಾಸ ಬಿಡಿಸೊ ಶಕ್ತಿಎಂದಿಗೆ ಬಾರದು ನಿನ್ನ ಹೊರತಾಗಿ ಸಿಂಧುಜ1 ಮೊದಲಾದ ಸುರರಲ್ಲಿ ನೀನಿಂದುಚಂದ ಚಂದದ ಕಾರ್ಯ ಮಾಡಿಸಿ ಭಕ್ತರ್ಗೆಪೊಂದಿದ ಘನತೆಯು ನಿನ್ನದಲ್ಲದೆ ಅನ್ಯ-ರಿಂದಲಿ ಮಾಳ್ಪ ಕೃತ್ಯ ಎಳ್ಳಿನಿತಿಲ್ಲವೆಂದುಮಂದಮತಿಗನಾಗಿ ತಿಳಿಯದೆ ಅಹಂಕಾರಬಂದೊದಗಲು ಅದರನ್ನೆ ಅತ್ಯಭಿವೃದ್ಧಿ ಮಾಡಿತಂದು ಈ ಲೋಕದಿ ಬಂಧನ ಮಾಡಿಸಿದಿತಂದೆ ನಿನಗೆ ಇದು ಪರಮ ಸಮ್ಮತವಾಗೆ ಎ-ನ್ನಿಂದಾಗುವದೆ ಮೋಚನ ಮಾರ್ಗವಒಂದು ತೀರಿಸ ಬಂದು ಹನ್ನೊಂದು ಗಳಿಸಿಕೊಟ್ಟಿಬಂಧು ಅನಿಮಿತ್ಯನಾದದ್ದು ನಿಜವಿತ್ತೆಕುಂದುಗಳೆಣಿಸದೆ ಪಾಲಿಪದೆನ್ನನುಮಂದರಧರ ಗುರು ವಿಜಯ ವಿಠ್ಠಲರೇಯಾಇಂದು ಎಂದೆಂದಿಗೆ ನೀನೆವೆ ಗತಿಯೊ 5 ಜತೆ ಭಕತರ ಅಪರಾಧವೆಣಿಸದಲೆ ತ್ವರಿತದಿ ಚಿತ್ತಮುಕುರದಲಿ ಪೊಳೆಯೊ ಗುರು ವಿಜಯ ವಿಠ್ಠಲರೇಯಾ || [ವಿಷನಾಮ ಸಂ|| ಮಾರ್ಗಶೀರ್ಷ ಶುದ್ದ 8]
--------------
ಗುರುವಿಜಯವಿಠ್ಠಲರು
ಈ ಭಾಗ್ಯವೆ ನಿನ್ನದೊ ವರ ಭೋಗಿಶಯನಾ ಪ ಸೌಭಾಗ್ಯವೇ ನಿನ್ನ ಮಹಿಮೆ ತಿಳಿಯುವ ಯೋಗಅ.ಪ ನೀನಿಲ್ಲದಾಸ್ಥಾನ ಈ ನಳಿನಜಾಂಡದೊಳಿಲ್ಲ ನೀನೆಲ್ಲವನು ಬಲ್ಲೆ ನಿನ್ನತಿಳಿಯಗೊಡದೆ ಹೀನಮಾನವ ನಾನು ನಿನ್ನನವರತ ಮರೆತರು ನೀ ಎನ್ನ ಮರೆಯದಲೆ ಎನ್ನೊಳಗೆ ಇಹೆ ಎಂಬ 1 ನಿಲ್ಲಿಸಲು ನಿಲ್ಲುವೆನು ಮಲಗಿಸಲು ಮಲಗುವೆನು ತಿಳಿಸಿದರೆ ನಾ ತಿಳಿವೆ ತಿಳುವಳಿಕೆ ನೀನೆ ತಿಳಿಯಗೊಡಿಸೋಎನ್ನಕ್ರಿಯೆಗಳನು ದೇಹದ ನೆಳಲಂತೆ ನಿನಗೆ ನಾನಿಹೆನಯ್ಯ ದೇವಾ 2 ಈ ಜಗತ್ತಿನೊಳಗೆಲ್ಲ ಪೂಜ್ಯಪೂಜಕ ಪೂಜ್ಯ ಪೂಜೋಪಕರಣದೊಳು ನೀನೆ ನಿಂತು ಮೂರ್ಜಗತ್ಪತಿಯೆ ನಿನ್ನನರ್ಚಿಸುವ ಭಜಕರಿಗೆ ನೈಜಸುಖ ವ್ಯಕ್ತಿಯನು ಮಾಡುತಲಿ ಪೊರೆವೇ 3 ನೀರು ತೃಣವನು ಕೊಡಲು ಹರುಷದಿಂದಲಿ ಗೋವು ಕ್ಷೀರವನು ಕರೆದು ಜನರ ಪೊರೆವಂತೆ ಸೂರಿಗಳು ಮಾಳ್ವ ಅಪರಾಧಗಳೆಣಿಸದಲೆ ಕರುಣದಿಂದಲಿ ಅವರ ಪೊರೆವ ಶ್ರೀಹರಿಯೆ4 ಪನ್ನಗಾಚಲನಿಲಯ ನೀನೆ ಎನ್ನೊಳಗಿರಲು ಬನ್ನಪಡಲ್ಯಾತಕೆ ಚಿನ್ಮಯರೂಪ ಎನ್ನಂಥಜೀವರಿನ್ನೆಷ್ಟೋ ಬ್ರಹ್ಮಾಂಡದೊಳು ಘನ್ನಭಕುತಿಯನೀಡೋ ಶ್ರೀಉರಗಾದ್ರಿವಾಸವಿಠಲ 5
--------------
ಉರಗಾದ್ರಿವಾಸವಿಠಲದಾಸರು
ಮಾಧವ ಮುಕುಂದ ಹರಿ ದನುಜಾರಿದಯಾವಾರಿಧಿ ಅನುದಿನದಿ ನಿಮ್ಮ ಚರಣವ ನಂಬಿದವರಿಗಿಂಥ ಬಿನುಗುದುರಿತಗಳು ಬಾಧಿಸುವುದ್ಯಾತಕೊ ಸ್ವಾಮಿ ಪ. ತರುಣಿಕುಲರಾಮನೊಳು ತೊಡಕು ಬೇಡವು ಸೀತೆ(ಯ) ಹರಿಗೆ ಒಪ್ಪಿಸು ಎನಲು ಊರ ಹೊರಗೋಡಿಸಿರಲು ಭರದಿಂದ ಬಂದು ಮರೆಹೊಗಲು ವಿಭೀಷಣನು ಚರಣಕಮಲಕೆ ಎರಗಲು ಕರವ ಪಿಡಿದೆತ್ತಿ ಅಭಯವನಿತ್ತು ಲಂಕೆಯ ಸ್ಥಿರಪಟ್ಟಕಟ್ಟಿದ ಕರುಣಾಳುಗಳ ದೇವ 1 ಒದೆದೆಳೆದು ಪತಿಗಳೈವರ ಮುಂದೆ ದ್ರೌಪದಿಯ ನಡುಸಭೆಯೊಳು ನಿಲ್ಲಿಸಲು ಉಡುವ ಸೀರೆಯ ಸೆಳೆವೆನೆಂದು ದುಶ್ಯಾಸ(ನ) ಕೈ ದುಡುಕುತಿರಲಾಕ್ಷಣದಲಿ ಕೆಡುವದಭಿಮಾನ ಶ್ರೀ ಹರಿ ನೀನೆ ಕಾಯೊ ಎನ್ನೆಂ- ದೊದರುತಿರಲು ನುಡಿಯಲಾಲಿಸಿ ನಾನಾಪರಿಯ ವಸ್ತ್ರವನಿತ್ತು ಉಡಿಸಿ ಅಭಿಮಾನ ರಕ್ಷಿಸಿದಂಥ ಶ್ರೀಕಾಂತ 2 ಉತ್ತಾನಪಾದರಾಜ (ನ)ಣುಗ ತಮ್ಮಯ್ಯನ ಮತ್ತ ತೊಡೆಯೇರಿಇರಲು ನಿತ್ಯದಲಿ ಸುರುಚಿ ಸುನೀತಿ ಕುಮಾರಕನ ಎತ್ತಿ ಕಡೆಯಕ್ಕೆ ನೂಕಲು ನಿತ್ತ ವಿಚಾರವಿಲ್ಲದಂತೆ ಸತ್ಯಮೂರುತಿ ಹೆಳವನಕಟ್ಟೆರಂಗಯ್ಯ ಭಕ್ತವತ್ಸಲನೆಂಬೊ ಬಿರುದು ನಿನ್ನದು ಸ್ವಾಮಿ 3
--------------
ಹೆಳವನಕಟ್ಟೆ ಗಿರಿಯಮ್ಮ