ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಡದೆ ಬೇಡದೆ ಕಂಗೆಡದೆ ಕೋ ಮನವೆ ನಿಜ ಸುಭಿಕ್ಷ ಗುರು ಸಂರಕ್ಷ ಧ್ರುವ ಅಳುಕದೆ ಬಳುಕದೆ ತುಳುಕದೆ ನಿಂದು ತಿಳಕೊ ನಿಜಸುಭಿಕ್ಷೆ ಕೊಳಕ ಹುಳಕ ಮೊಳಕನೆಂದು ಮಾಡದಿರುಪೇಕ್ಷ ನಾಳೆ ನಾಡದಿಂದ್ಯಾಗೆಂದು ಕಲ್ಪಿಸಿಕೊಬ್ಯಾಡಪೇಕ್ಷ 1 ಲಜ್ಜೆ ಅಳಿದು ಗುರು ಶರಣವ ಹೊಕ್ಕು ಸರಕ್ಕನೆ ಕೋ ಸುಭಿಕ್ಷೆ ಹೆಜ್ಜೆಜ್ಜಿಗೆ ಸುರಿಮಳೆಗರೆವುತಲದೆ ಗುರುಕರುಣದಕಟಾಕ್ಷ ಫಜ್ಜಿಗೆ ಬಂದುವರಿತ ಮ್ಯಾಲೆ ಕಂಜನಾಭನೆ ಸುಪಕ್ಷ 2 ಬೇಡಿಸಿಕೊಳ್ಳದೆ ನೀಡುತಲಾನೆ ಭಾಸ್ಕರ ಗುರು ಸಮರ್ಥ ನೀಡಿ ನಿಜನಿಧಾನವ ಕೊಟ್ಟು ಮಾಡುತಲಾನೆ ಹಿತಾರ್ಥ ಬಡವರಾಧಾರೆನ್ನೊಡೆಯನೆ ಜಗತ್ರಯಕ್ಕೊಬ್ಬನೆ ಕರ್ತ ಮೂಢ ಮಹಿಪತಿಗನುದಿನ ಬಿಡದೆ ನೀಡುತಾನೆ ಸಕಲಾರ್ಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏಕೆ ಗೋಪಾಲ ಕರೆಯುತಾನೆ - ಎಲೆ ಸಖಿಯೆ ಎನ್ನ |ಏಕೆ ಗೋಪಾಲ ಕರೆಯುತಾನೆ ? ಪಕಣ್ಣ ಸನ್ನೆ ಮಾಡುತಾನೆ - ಮತ್ತೆ ಬಗೆ ಬಗೆ |ಹಣ್ಣ ಕೈಯಲಿ ತೋರುತಾನೆ - ಎನ್ನ ಚೆಲುವಿಕೆ ||ಬಣ್ಣಿಸುತಲಿ ತಿರುಗುತಾನೆ - ಇವನೇನೆ |ಇನ್ನೂರು ವರಹಗಳ ಕೊಟ್ಟು ಮದುವೆಯಾದನೇನೆ ಎಲೆ ಸಖಿಯೆ 1ಹವಳ ಸರವ ತೋರುತಾನೆ - ದುಂಡು ಮುತ್ತಿನ - |ಧವಳಹಾರವ ನೀಡುತಾನೆ - ಹಾಸಿಗೆಯ ಮೇಲೆ ||ಪವಡಿಸಬೇಕೆನುತಾನೆ - ಇವನೊಡನಿರಲು ನ-|ಮ್ಮವರು ಸುಮ್ಮನೆ ಇಹರೇನೆ - ಎಲೆ ಸಖಿಯೆ 2ಬಟ್ಟಲ ಪಿಡಿದು ಬರುತಾನೆ - ಹಗಲೆ ಬಾ ಎಂದು -|ಬಟ್ಟ ಬಯಲೊಳು ಕರೆಯುತಾನೆ - ಎನ್ನ ಮನದೊಳು ||ದಟ್ಟು ಧಿಗಿಲು ಎನ್ನದೇನೆ - ಪುರಂದರವಿಠಲ - |ಇಟ್ಟು ಕೊರಳಾಣೆ ಈಗ ಬಾ ಎಂಬುವನೆ - ಎಲೆ ಸಖಿಯೆ 3
--------------
ಪುರಂದರದಾಸರು