ಒಟ್ಟು 5 ಕಡೆಗಳಲ್ಲಿ , 2 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವಿ ಶ್ರೀಸರಸ್ವತಿಯೆ ಕಾಯೇ ಪ ಮಾವಿನುತ ಹರಿನಾಮ ಸಂತತದಿ | ನುಡಿಸೀ ಅ.ಪ. ಪತಿ ಮಾತೆ | ನಾಲಗೆಯಲೀ ನಿಂತುಕಾಲ ಕಾಲಕೆ ಹರಿಯ | ಲೀಲಾತಿಶಯವಾ |ಪೇಳಿಸುತ ಜಿಹ್ವಾಂಗ | ಸಾರ್ಥಕೆನಿಪುದು ಎಂದುಕೇಳುವೆನು ವರ ನಿನ್ನ | ಪಾಲಿಪುದು ಅದನ 1 ವಿದೈಗಳಿಗಭಿಮಾನಿ | ಬುದ್ಧಿ ಪೂರ್ವಕ ಬೇಡ್ವೆತಿದ್ದಿ ಎನ್ನಲಿ ಇಹ ಅ | ವಿದ್ಯೆಗಳನೆಲ್ಲಾ |ಮಧ್ವೇಶ ಹರಿಯೊಲಿವ | ಶುದ್ಧ ಸಾಧನವಿತ್ತುನಿದ್ರೆಯಿಂದೆಚ್ಚರಿಸಿ | ಬುದ್ಧಿ ಪ್ರದಳೆನಿಸೇ 2 ಅಜನ ಅರ್ಧಾಂಗಿನಿಯೆ | ಪ್ರಜ್ವರವ ಕಳೆವಂಥಸುಜನ ಸಂಗವನಿತ್ತು | ರಜ ದೂರನೆನಿಸು |ಅಜನ ಜನಕನು ಗುರು | ಗೋವಿಂದ ವಿಠಲ | ಪದಅಬ್ಜವನು ತೋರವ್ವ | ನಿಜ ಹೃದಾಬ್ಜದಲೀ3
--------------
ಗುರುಗೋವಿಂದವಿಠಲರು
ಕರುಣದಿ ಕಾಯೊ ಗೋಪಾಲಾಚರಣವ ಸ್ಮರಿಸುವೆ ಶರಣರ ಪಾಲಾ ಪ ಹರಣ ಹೋಗದ ಮುನ್ನ | ಹರಿ ನಿನ್ನ ಹಂಬಲನ್ನಕರುಣಿಸಿ ಕಾವುದೆನ್ನ | ಕರುಣ ನಿಧಿಯೆ ಘನ್ನಮೊರೆಯಿಡುವೆನು ನಿನ್ನ | ಚರಣ ಸರೋಜವನ್ನಶಿರದೊಳಗಿರಿಸೆನ್ನ | ಪರಮ ಪಾವನ್ನ 1 ಮರುತನ ಮತದಲ್ಲಿ | ಕರೆ ತಂದು ಎನ್ನನುತರತಮ ಜ್ಞಾನವ | ಅರುಹುವುದೊಳಿತಲ್ಲೆ |ಹರಿಯೆ ಸರ್ವೋತ್ತಮ | ಮರುತ ಜೀವೋತ್ತಮಹರ ವೈಷ್ಣವೋತ್ತಮ | ವರ ಜ್ಞಾನ ಪಾಲಿಸಿ 2 ಪನ್ನಗಾಚಲವಾಸ | ಪ್ರಸನ್ನರಘನಾಶನಿನ್ನ ನಾಮವ ಅನಿಶ | ಎನ್ನಿಂದ ನುಡಿಸೀಶ |ಅನ್ನಂತ ಗುಣ ಗುರು | ಗೋವಿಂದ ವಿಠಲನೆಎನ್ನ ಬಿನ್ನಪ ಸಲಿಸು | ಮನ್ನಿಸಿ ಕುಂದುಗಳ 3
--------------
ಗುರುಗೋವಿಂದವಿಠಲರು
ಭ್ರಷ್ಟ ಸಂಕಲ್ಪನ್ನ | ಮಾಡದಿರೆಲೋ |ಇಷ್ಟ ದೈವವೆ ಎನ್ನ | ಕಷ್ಟದೊಳು ಹಾಕಿ ಪ ಖಗ ವರಧ್ವಜ ದಾಸಮಿಗಿಲಾಗಿ ಪೇಳ್ವೆನೆಂದ | ವಘಡಿಸೀ ನುಡಿಸೀಹಗರಣದಿ ಹರಿದಿನದಿ | ಸುಗುಣ ತಾ ಬರದಿರಲುಖಗಗಮನ ನಿನ್ವಚನ | ಲಘುವಾಗಲಿಲ್ಲೇ 1 ಅಪ್ಪ ವಿಜಯಾರ್ಯ ಪದ | ವಪ್ಪಿ ಪೂಜಿಸಿ ಪೋಗಿಚಿಪ್ಪಗಿರಿಯಲಿ ನೋಡೆ | ಒಪ್ಪಿದವ ಬರದೇಅಪ್ಪಾರ ಮನನೊಂದು | ಅರ್ಪಿಸಿಹೆ ನಿನ್ನಡಿಗೆಕೃಪ್ಪೆಯಿಂ ಬರಮಾಡೊ | ಗೊಪ್ಪ ಶಿಷ್ಯನ್ನಾ 2 ಮಾನಾಪಮಾನಗಳು | ಯೇನೊಂದು ನಿನ್ನೊಳಗೊಮಾನನಿಧಿಯೆ ಕೇಳೊ | ಮೌನಿ ವರದಾದೀನ ಜನಪಾಲ ಗುರು | ಗೋವಿಂದ ವಿಠ್ಠಲನೆಮಾನ್ಯ ಮಾನದನೆಂಬ | ಸೂನೃತವ ಸಲಿಸೋ 3
--------------
ಗುರುಗೋವಿಂದವಿಠಲರು
ಸುಂದರ ಕಾಂಡ ರಾಮಾಯಣ ಸಿರಿ ಸಿರಿ ಹನುಮನಾ ||ಮೆರೆವ ಸಚ್ಚರಿತೆ ಮಮ | ಗುರುವೆ ನುಡಿಸೀದಷ್ಟುಒರೆವೆ ಕೇಳ್ಪುದು ಸಜ್ಜನಾ ಪ ಗೃಹ ಮೇಧಿ ಇರುವ ಬಗೆ | ಬಹು ಪರೀಯಲಿ ತೋರಿಗುಹ ವನಂಗಳನೆ ಚರಿಸೀ |ಗೃಹಿಣಿಯನು ಕಾಣದಲೆ | ಬಹು ನಟಸಿ ನರರಂತೆಮಹ ಮಹಿಮ ರಾಮ ಬರಲೂ 1 ಪತಿ ದಶರಥನ | ಸುತನ ಕಂಡೆರಗಿ ರವಿಸುತಗೆ ರಾಜ್ಯವನೆ ಕೊಡಿಸೀ 2 ರಾಮನಾಣತಿ ಪೊತ್ತು | ಭೂಮಿಜೆಯ ವಾರ್ತೆಯನುನೇಮದಲಿ ತರುವೆ ನೆನುತಾ ||ಆ ಮಹಾ ಶರಧಿಯನು | ಧೀಮಂತ ಲಂಘಿಸುತಭೂಮಿಜೆಯ ಕಂಡು ಎರಗೀ 3 ಪತಿ | ರಾಮನ್ನ ಕಂಡ ಪರಿಆಮೋದದಲ್ಲಿರುತಿರೇ 4 ಶ್ರೀ ಲೋಲ ರಾಮನಿಗೆ | ಆಳಾಗಿ ಇರಲೊಂದುವಾಲುಳ್ಳ ಕಪಿಯು ಬಂದೂ ||ಕೇಳುವರು ಇಲ್ಲದಲೆ | ಪೋಲಾಗಿ ಹೋಯ್ತೆಂಬಕೀಳು ನುಡಿಗವಕಾಶ ಕೊಡದೇ 5 ವಂದೆರಡು ಹಣ್ಣಾನು | ತಿಂದ್ಹೋಗುವೇನೆಂದುಇಂದೀವರಾಕ್ಷಿಯ ಬೇಡುತಾ ||ನಂದೀಸಿ ಅಶೋಕ | ನಂದನ ವನವ ಮದಸಿಂಧೂರ ನಂತೆಸಗಿದೇ 6 ಕೋಟ್ಯಶೀತಿಯು ನಿ | ಶಾಟ ಯೂಥಪ ಸಹಸಾಷ್ಟ ಕಾಯುತ ಮುಖ್ಯರಾ ||ಖೇಟ ರಾವಣ ಸೇನೆ | ಕೂಟ ಮೂರರಲೊಂದುರೋಟಿಸುತ ನೀ ಮೆರೆದೆಯೋ 7 ಅಕ್ಷೋಹ್ಣಿ ಬಲ ಸಹಿತ | ರಾಕ್ಷಸಾಧಿಪ ಸುತನುಅಕ್ಷಯ್ಯ ಕುವರ ಬರಲೂ ||ಪಕ್ಷೀಂದ್ರ ತೆರ ಪಿಡಿದು | ಈ ಕ್ಷಿತಿಗೆ ಅಪ್ಪಳಿಸೆತಕ್ಷಣದಲಸು ನೀಗಿದಾ 8 ಮಂದಜಾಸನ ವರದಿ | ಇಂದ್ರಜಿತು ಮದವೇರಿಬಂದೆಸೆಯೆ ಬ್ರಹ್ಮಾಸ್ತ್ರವಾ ||ಛಂದದಲ್ಯೋಚಿಸುತ | ಬಂಧನಕೆ ನೀನಾಗಿನಂದದ ಲ್ವೊಳಗಾದೆಯೋ 9 ತೆತ್ತೀಸ ಕೋಟಿ ದೇ | ವತ್ತೀಗಳಿಗೆಲ್ಲಾಉತ್ತೂಮನಾದ ನೀನೂ ||ಸುತ್ತೀಸಿ ಬಾಲವನು | ಹತ್ತೂತಲೆಯವನನೆತ್ತೀಯ ಮೇಲ್ ಕುಳಿತೆಯೋ 10 ನಾರೀಯ ಚೋರ ನಿ | ನ್ನಾರೆಂದು ಕೇಳಾಲುಮಾರುತ್ತರವಿತ್ತು ಜರಿದೇ ||ಮಾರೀಚ ಮೊದಲಾದ | ನೂರಾರು ರಕ್ಕಸರದೂರೋಡಿಸೀದವನ ದೂತಾ 11 ಕೋಟಲೆಗಳ ಕೊಟ್ಟ | ತಾಟಕಾದೀ ದೈತ್ಯಕೂಟಗಳ ಸಂಹರಿಸಿದಾ ||ಕೂಟಸ್ಥ ಲೋಕಗಳ | ನೋಟದಲಿ ದಹಿಪ ವೈರಾಟ ಪ್ರಭುವಿನಾಳೂ 12 ಕೇಳೆಲೋ ರಾವಣನೇ ತಿಳಿಯಯಾ ನೀನು ನಿನ್‍ಹುಳುವೆಂದು ನಿಜ ಬಾಲದೀ |ಸಿಲುಕಿಸಿ ಜಲನಿಧಿ | ನಾಲಕ್ಕು ಮುಳುಗಿದವಾಲಿ ಪೆಸರನು ಮರೆತೆಯಾ 13 ತಾಲಮರಗಳ ಶೀಳಿ | ವಾಲೀಯನೆ ಕೊಂದರ್ಕಬಾಲಗೇ ರಾಜ್ಯ ಕೊಡಿಸೀ ||ಕೋಲಿನಿಂ ನಿಮ್ಮೆಲ್ಲ | ಹೂಳುವ ರಾಮನಆಳು ನಾನೆಂದು ತಿಳಿಯೋ 14 ರಕ್ಕಸ ಪತಿಯಾಜ್ಞೆ | ಇಕ್ಕಿ ತಲೆಯಾ ಮೇಲೆರಕ್ಕಸರೆಲ್ಲ ತವ ಪುಚ್ಛ ||ಕಿಕ್ಕಲೂ ಉರಿ ಲಂಕೆ | ಪೊಕ್ಕು ಪುರವನೆ ದಹಿಸಿಅಕ್ಕರದಿ ವನದಿ ಹಾರೀ 15 ಕಾಯ ಸಹಿತರ ನೋಡಿಪ್ರೀಯ ದ್ವಾರ್ತೆಯ ನರುಹಲೂ ||ಗೇಯ ಹನುಮನ ತುತಿಸಿ || ರಾಯಗೆರಗುವ ವನದಿಕಾಯ ಕುಪ್ಪಳಿಸುತಿರಲೂ 16 ಕಾತುರತೆಯ ಕಪಿ | ಜಾತೆಗಳ ಸಂತೈಸಿಪ್ರೀತಿಯಿಂ ಮಧುವನವನಳಿದ ||ಸೀತೆಯನು ಕಂಡಂಥ | ವಾರ್ತೆಯನು ಪೇಳೆ ರಘುಜಾತ ನಿನ್ನನು | ಅಪ್ಪಿದಾ 17 ಎರಡೇಳು ಭುವನದೊಳು | ಇರುವರೇ ನಿನ್ಹೊರತುಹರಿಗೆ ಪ್ರೀತ್ಯಾಸ್ಪದನು ಎನಿಸೀ ||ಮೆರೆವ ಭಕ್ತಾಗ್ರಣಿಯೆ | ಎರಗುವೆನು ತ್ವತ್ವದಕೆಹರಿಭಕ್ತಿ ಕರುಣಿಸಯ್ಯಾ 18 ಉದಯಕಾಲದಲೆದ್ದು | ಮುದದಿಂದಲೀ ಪದವಸದಯ ಹೃದಯರು ಪಠಿಸಲೂ ||ಬದಿಗ ಗುರು ಗೋವಿಂದ | ವಿಠಲನೋಳ್ ಸದ್ಭಕ್ತಿವದಗಿ ಪಾಲಿಪ ಹನುಮನೂ 19
--------------
ಗುರುಗೋವಿಂದವಿಠಲರು
ಮಂಗಳ ಪದಗಳು391ಕೋಲು ಕೋಲೆನ್ನಿರೆ ರನ್ನದ ಕೋಲು ಕೋಲೆನ್ನಿರೇಕೋಲು ಕೋಲೆಂದು ರನ್ನದಕೋಲಧರಿಸಿನಿಂದುಲೋಲಾಕ್ಷಿ ದೇವಿ ಚರಿತೆಯ ಸ್ಮರಿಸುತ್ತ ರನ್ನದಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲೋಲಾಕ್ಷಿ ದೇವಿ ಚರಿತೆ ಸ್ಮರಿಸುತ್ತ ನಲಿದಾಡಿಪಾಲಿಸೆ ಧರೆಗೆ ವರವ ಕರದೀಗಳ್ ರನ್ನದಾ1ಆದಿದೇವಿಯು ಚತುರ್ವೇದ ಗರ್ಭನನಿತ್ಯಪಾದಸೇವೆಯ ಗೈವಳ್ ಮೋದದಿ ರನ್ನದಿಕೋಲು ಪಾದಸೇವೆಯ ಗೈವಳ್ಮೋದದಿ ಮಾಧವನ ಪೂಜಿಸಿ ನಮಿಸಿಕ್ಷೀರಾಬ್ಧಿಯೊಳ್ ರನ್ನದಾ2ಘೋರದಾನವರೆಲ್ಲ ಧಾರಿಣಿ ಬಾಧಿಸಲುವಾರಿಜೋದ್ಭವನಾರದಾದ್ಯರು ರನ್ನದಾವಾರಿಜೋದ್ಭವನಾರದಾದ್ಯರು ದೇವಿಯೊಳುದೂರಿಡೆಕೇಳಿಅಭಯವಿತ್ತಳು ರನ್ನದಾ3ಸುರರುದಾನವರೆಲ್ಲ ಶರಧಿಯ ಮಥಿಸಲುಅರವಿಂದಮುಖಿ ಲಕ್ಷ್ಮಿ ಜನಿಸಿದಳೆ ರನ್ನದಅರವಿಂದ ಮುಖಿಲಕ್ಷ್ಮಿ ಜನಿಸಲು ನಾರಾಯಣನರಸಿಯೆಂದೆನಿಸಿ ಮೆರೆದಳು ರನ್ನದಾ4ಅಘವಿನಾಶಿನಿ ಜಗದಾಂಬಿಕೆ ಕೀರವಾಣಿಸುಗುಣೆ ಸುಂದರಿ ಸುಶೀಲೆಯು ಫಣಿವೇಣಿನಗುವ ಮೊಗದ ಚಂದ್ರವದನೆಯು ರನ್ನದಾ5ದುಷ್ಟ ನಿಗ್ರಹರೆಂದು ಸೃಷ್ಟಿಗೆ ನಡೆತಂದುಶ್ರೇಷ್ಠಾದಿ ನೂರೊಂದು ರೂಪಾದಳ್ ರನ್ನದಾಶ್ರೇಷ್ಠಾದಿ ನೂರೊಂದು ರೂಪಾಗಿ ಶಿಕ್ಷಾ ರಕ್ಷಾಧ್ಯಕ್ಷಳೆನಿಸಿ ಖಡುಗ ಧರಿಸಿದಳ್ ರನ್ನದಾ6ಘೋರಮಹಿಷನ ಸಂಹಾರಕೆಂದು ಬಂದುಮಾರಾಂತು ರಣದಿ ದುರುಳನ ರನ್ನದಾಮಾರಾಂತು ರಣದಿ ದುರುಳನ ಮರ್ದಿಸಿಈರೇಳು ಜಗವಾ ಪೊರೆದಳು ರನ್ನದಾ7ಶುಂಭಾ ನಿಶುಂಭ ಖಳರೆಂಬ ದೈತ್ಯರ ಗೆಲಿದುಅಂಬುಜಾಲಯದಿ ನೆಲಸಿದಳ್ ರನ್ನದಾಅಂಬುಜಾಲಯದಿ ನೆಲೆಸಲು ಪೂಜಿಸಿದಕುಂಭಿನಿಸುರರಿಗೊಲಿದಾಳು ರನ್ನದಾ8ಚಂಡ ಮುಂಡಕರೆಂಬಘೋರದೈತ್ಯರನೆಲ್ಲತುಂಡು ತುಂಡಾಗಿ ಶಿರ ಖಂಡೀಸಿ ರನ್ನದಾತುಂಡು ತುಂಡಾಗಿ ಶಿರ ಖಂಡೀಸಿ ಮೆರೆದಳುಚಂಡಿ ಕರಾಳಿ ಚಾಮುಂಡಿಗೇ ರನ್ನದಾ9ರಕ್ತ ಬೀಜನಘೋರಶಕ್ತಿಯ ಪರೀಕ್ಷಿಸಿಮುಕ್ತಿ ಪಥವ ತೋರೆ ಮಾಂಕಾಳಿ ರನ್ನದಾಮುಕ್ತಿ ಪಥವ ತೋರೆ ಮಾಂಕಾಳಿ ಅರ್ಚಿಸಿದಭಕ್ತರಿಗೊಲಿದು ನಲಿದಳ್ ರನ್ನದಾ10ದೇವರಾಮನ ಸತಿಯಾಗಿ ಲಂಕೆಗೆ ಪೋಗಿರಾವಣಾದ್ಯರನೆಲ್ಲ ಕೊಲಿಸೀದಳ್ ರನ್ನದಾರಾವಣಾದ್ಯರನೆಲ್ಲ ಕೊಲಿಸೀದಳ್ ಸೀತೆಯು ತಾಪಾವಕನುರಿ ಹೊಕ್ಕಿ ಪೊರಟಳ್ ರನ್ನದಾ11ಸೃಷ್ಟೀಶ ಭೀಷ್ಮಕನ ತನುಜೆ ರುಕ್ಮಿಣೀದೇವಿಕೃಷ್ಣಮೂರ್ತಿಗೆ ಓಲೆ ಬರೆದಾಳು ರನ್ನದಾಕೃಷ್ಣಮೂರ್ತಿಗೆ ಓಲೆ ಬರೆದು ಒಲಿಸಿಕೊಂಡುಪಟ್ಟದರಸಿಯಾಗಿ ಬಾಳಿದಳು ರನ್ನದಾ12ಮಾನಿನೀಮಣಿಪದ್ಮಾವತಿಯು ಜಲಕೇಳಿಗೈದುಶ್ರೀನಿವಾಸನ ಕಂಡು ಸ್ಮರಿಸೀದಳ್ ರನ್ನದಾಶ್ರೀನಿವಾಸನ ಕಂಡು ಸ್ಮರಿಸಿ ಕಲ್ಯಾಣವೆಸಗಿತಾನೆ ವಿಷ್ಣುವ ಪೂಜೆಗೈದಳ್ ರನ್ನದಾ13ನವರಾತ್ರಿ ದಿನದಲಿ ನವದುರ್ಗಿ ರೂಪಿನಲಿನವಗಂಧ ಕುಂಕುಮಚಂದನಪುಷ್ಪಗಳಿಂದನವವಿಧ ಪೂಜೆ ಕೊಂಬಳ್ ರನ್ನದಾ14ಮಾರಿಪೂಜೆಯ ರಕ್ತ ಹಾರಕ್ಕೆ ಮನಗೊಂಬಾಕ್ರೂರಗಣಗಳೊಡ ಸೇರಿದಳ್ ರನ್ನದಾಕ್ರೂರಗಣಗಳೊಡ ಸೇರಿ ಧಾರುಣಿಯೊಳುಚಾರುವರ್ಣ ಪೂಜೆ ಕೈಕೊಂಬಳ್ ರನ್ನದಾ15ಸರ್ವಮಂಗಲ ಮಾತೆ ಸರ್ವಸಜ್ಜನ ಪ್ರೀತೆಸರ್ವ ಆಭರಣ ಭರಿತೇಯು ರನ್ನದಾಸರ್ವ ಆಭರಣ ಭರಿತೇಯು ಪೀತಾಂಬರನೆರಿಹಿಡಿದುಟ್ಟು ರನ್ನದಾ16ಹದಿನೆಂಟು ಪೌರಾಣದಿ ಮೆರೆವ ಈ ದೇವಿ ಚರಿತೆಹದಿನೆಂಟು ಪದವಾಗಿ ನುಡಿಸೀದಳ್ ರನ್ನದಾಹದಿನೆಂಟು ಪದದಿ ತಪ್ಪಿರಲು ತಿದ್ಯೋದಿದವರವಿಧವಿಧ ಮನದ ಬಯಕೆ ಒದಗುವಾದೆ ರನ್ನದಾ17ಮಂದಗಮನೆಧರಣಿಭಾರತಗ್ಗಿಸಿ ಬಂದುನಿಂದಾಳು ವಿಷ್ಣು ವಕ್ಷಸ್ಥಲದಲಿ ರನ್ನದಾನಿಂದಿರ್ದ ವಿಷ್ಣು ವಕ್ಷಸ್ಥಲದ ರಮೆಗೆ ಗೋವಿಂದದಾಸನು ಸರಿಸಿ ನಮಿಸೂವೆ ರನ್ನದಾ18
--------------
ಗೋವಿಂದದಾಸ