ಒಟ್ಟು 43 ಕಡೆಗಳಲ್ಲಿ , 23 ದಾಸರು , 41 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇವೆ ಪೂಜೆಯ ನೋಡಿ ಹೃದಯದಲಿ ನಿಜ ಒಡಗೂಡಿ ಧ್ರುವ ನಾಮಸ್ವರೂಪದ ನಿಜಗುಹ್ಯವಾರ್ತಿ ವ್ಯೋಮಾಕಾರದ ಮನೆಮೂರ್ತಿ ಸ್ವಾಮಿ ಸದ್ಗುರುವಿನ ಕೀರ್ತಿ 1 ನಿತ್ಯ ನಿರ್ಗುಣ ನಿರ್ವಿಕಲ್ಪಾ ಸತ್ಯಸದ್ಗುರು ಸ್ವರೂಪಾ ನಿತ್ಯ ನಿತ್ಯರ್ಥ ಸುದೀಪಾ ತತ್ವಜ್ಞಾನ ಮನಮಂಟಪಾ 2 ಸ್ವಾದೋದಕ ಙÁ್ಞನ ಭಾಗೀರಥೀ ಅಭಿಷೇಕ ಮೌನಮೌನ್ಯವಸ್ತ್ರಾ ಮೋಲಿಕಾ ಧಾನ್ಯವೆಂಬುದೇ ಸೇವೆ ಅನೇಕಾ 3 ಗಂಧಾಕ್ಷತಿ ಪರಿಮಳವುಳ್ಳ ಪುಷ್ಪ ಬುದ್ಧಿಮನವಾಯಿತು ಸ್ವರೂಪಾ ಸದ್ವಾಸನ್ಯಾಯಿತು ಧೂಪದೀಪ ಸದ್ಭಾವನೆ ನೈವೇದ್ಯಮೋಪಾ 4 ಫಲತಾಂಬೋಲವೆ ಸದ್ಭಕ್ತಿ ಮ್ಯಾಲಭಿಭಾವನೆ ಮಂಗಳಾರ್ತಿ ಕುಲಕೋಟಿ ಉದ್ಧರಿಸುವ ಗತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡದ್ದು ಬಯಸಿ ಕಂಗೆಡು ಬೇಡಾ ಪಾದ ಬಿಡಬೇಡಾ ಪ ಕಾಲನಿನ್ನದಲ್ಲ ಕಡುಮೂರ್ಖ ಆ ಕಾಲ ಪುರುಷ ಮಾಡಿದನೇಕಾ ಪರಿಗಳಿಂದ ಇನ್ನು ಯಾಲೋಕಾದಲಿ ನಡುವುದಲ್ಲಾ ಸುಖದು:ಖ ಪಾಲಿಗೆ ಬಂದದ್ದು ಬಿಡದನಕಾ ಪ್ರಾಪ್ತಿ ಇದ್ದಷ್ಟೇ ಇಲ್ಲಧಿಕಾ ಶ್ರೀಲೋಲನ ನೀನಿರುವತನಕಾ ಸ್ಮರಿಸದೆ ಇರಬೇಡ ಅವಿವೇಕಾ 1 ಘಣಿಯಲ್ಲಿ ಬರದದ್ದು ತಪ್ಪದಲ್ಲೆ ಜಗ ಭಗವಂತ ನೀ ಮಾಡಿದಲ್ಲೆ--- -------- ನಿನ್ನದಲ್ಲೆ ಅನುಗ್ರಹ ಮಾಡುವ ಭರದಲ್ಲೆ ನಗಧರನಾ ನಾಮ ಬಲದಲ್ಲೆ ಅಘಗಳ ಕಳಿ ನೀ ತೀವ್ರದಲ್ಲೆ 2 ಇಷ್ಟಾರ್ಥ ನೀ ಮಾಡಬೇಕಂದಿ ಸಂಚಿತ ಎಲ್ಲೆಂದಿ ಕಷ್ಟವ ಪಡಕೊಂಡು ನೀ ಬಂದಿ ಕಾಮಕೆ ಸುಖವು ಇಲ್ಲೆಂದಿ ಇಷ್ಟದಿ ಶ್ರೀ ಹರಿ ಪದಹೊಂದಿ ಇರದೆ ನೀ ಇರಬೇಡಾ ಇಬ್ಬಂದಿ ಸ್ಪಷ್ಟದಿ 'ಹೊನ್ನಯ್ಯ ವಿಠ್ಠಲಂದಿ’ ಸಾರ್ವದಿ ಮುಂದಕ ನೀ ಬಂದಿ3
--------------
ಹೆನ್ನೆರಂಗದಾಸರು
ಕಪಟನಾಟಕನೀತ ಕೃಪಾಸಿಂಧು ಸಾಕ್ಷಾತ ಧ್ರುವ ಸಗುಣ ಸುಪಥ ದೋರಿ ನಿರ್ಗುಣನಾಗಿಹ ಶ್ರೀಹರಿ ಅಗಣಿತ ಗುಣದೋರುವ ಅನೇಕಾಪರಿ ಜಗದೊಳು ಮುರಾರಿ 1 ಹಿಡಿದೇನೆಂದರೆ ಸಿಲುಕ ಗೂಡಿನೊಳಗೆ ಮಾಡಿಹ್ಯ ಮಲಕ ನೋಡೇನೆಂದರೆ ಭಕ್ತಿಗೆ ನಿಲುಕ ಒಡಿಯ ಗೋಪಾಲಕ 2 ಕುಲಗಳ್ಳಗೆ ಕೊಡುವ ಮ್ಯಾಲೆ ಹುಯಲು ತಾ ಮಾಡುವ ಬಲುಖಳ ದೈವ 3 ಭಾಷೆ ಕೊಟ್ಟರೆ ತಪ್ಪ ಋಷಿ ಮುನಿಗಳ ಪಾಲಿಪ ಭಾಸುತ ಭಕ್ತರ ಹೃದಯದೊಳಗಿಪ್ಪ ಭಾಸ್ಕರ ಸ್ವರೂಪ 4 ಗುಹ್ಯ ಆಗೋಚರ ಸೋಹ್ಯ ತಿಳಿಯಲು ಸಾಕ್ಷಾತ್ಕಾರ ಇಹಪರ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕ್ಷಣದಲಿ ಸೌಖ್ಯ ಕ್ಷಣದಲಿ ದುಃಖ ಬಣಗು ಸಂಸಾರದಿ ಎಣಿಸಿದರೆ ಪ ಕೊಟ್ಟರೆ ತಂದರೆ ಸಂತೋಷ ಬಿಟ್ಟರೆ ಕೊಡದಿರೆ ಬಲುರೋಷ 1 ಎರೆಡು ಘಳಿಗೆ ಬಹಳಾಯಾಸ ಏನು ಇಲ್ಲ ಕೊನೆಗೆ ನಿರಾಶ 2 ತಾನೇಕಾದಶಿ ಪಿಕ್ನಿಕ್‍ವೂಟ ಭಾನುವಾರ ಇಸ್ಪೇಟಾಟ3 ಕೋಟುಷರಟು ಜುಬ್ಬ ಇಜಾರು ನೋಟಕೆ ಮೇಲೆ ಕಾರ್ಬಾರು 4 ಕರುಡು ಕುಂಟ ಮೂಕರು ಮಾತ್ರ ಸತ್ಪಾತ್ರ 5 ಅತಿಜಾರಿಗೆ ಕೆಂಪು ಬೆಂಡೋಲೆ 6 ಹಾದರಗಿತ್ತಿಗೆ ದೂದ್‍ಫೇಢ ಸಾಧುಸ್ತ್ರೀಗನ್ನವು ಬೇಡ 7 ಹಿರಿಯರ ಮಾತಿಗೆ ನಾನ್ಸೆನ್ಸು ದುರುಳರ ಬೋಧೆಗೆ ತಾ ಒಳ್ಳೆಮನಸು 8 ಮೋಕ್ಷವಿದ್ಯೆ ಕೆಲಸಕೆ ಬಾರದು ಕುಕ್ಷಿಂಬರ ವಿದ್ಯೆ ಬಲು ದೊಡ್ಡದು 9 ಹರಿಕಥೆ ಕೇಳ್ವುದು ಬೇಜಾರು ಹರಟೆ ಹರಟುವುದು ಬಲು ಜೋರು 10 ಪರರ ನೋಡಿ ನನ್ನಾಚರಣೆ ಗುರುರಾಮ ವಿಠಲನಲಿಲ್ಲ ಸ್ಮರಣೆ 11
--------------
ಗುರುರಾಮವಿಠಲ
ಚತುರ್ದಶಿಯ ದಿನ (ಹನುಮಂತನನ್ನು ಕುರಿತು) ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆಪ. ಇವನ್ಯಾರೆ ಮಹಾಶಿವನಂದದಿ ಮಾ- ಧವನ ಪೆಗಲೊಳಾಂತು ತವಕದಿ ಬರುವವ1 ದಾಡೆದಂತಮಸಗೀಡಿರುವದು ಮಹಾ ಕೋಡಗದಂತೆ ಸಗಾಢದಿ ಬರುವವ2 ಕಡಲೊಡೆಯನು ಮೃದುವಡಿಯಡರಿಸಿ ಬಿಡ ದಡಿಗಡಿಗಾಶ್ರೀತರೊಡಗೂಡಿ ಬರುವವ3 ಊರ್ವಶಿ :ನಾರಿ ಕೇಳೆಲೆಗೆ ವೈಯಾರಿ ನೀ ಮುದದಿ ನಾರಾಯಣನಿಗೀತ ಬಂಟನಾದಾದರಿದಿ ವೀರ ರಾಮವತಾರದಿ ಹಿಂದೆ ಹರಿಯ ಚಾರಕನಾಗಿ ಸೇವೆಯ ಗೈದ ಪರಿಯ ಕ್ರೂರ ದಶಾಸ್ಯನ ಗಾರುಗೆಡಿಸಿ ನೃಪ ವೀರನ ಪೆಗಲಿನೊಳೇರಿಸಿ ದೈತ್ಯರ ಭೂರಿವಧೆಗೆ ತಾ ಸಾರಥಿಯಾದವ ಕಾರುಣೀಕ ಮಹಾವೀರ್ಹನುಮಂತ1 ಆಮೇಲೆ ವೀರಾವೇಶದಿ ವಾರಿಧಿಯನು ರಾಮನಪ್ಪಣೆಯಿಂದ ದಾಟಿದನಿವನು ಭೂಮಿಜೆಗುಂಗುರ ಕೊಟ್ಟ ನಂತರದಿ ಕಾಮುಕರನು ಸದೆಬಡಿದನಾ ಕ್ಷಣದಿ ಹೇಮಖಚಿತ ಲಂಕಾಮಹಾನಗರವ ಹೋಮವ ಗೈದು ಸುತ್ರಾಮಾರಿಗಳ ನಿ- ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ- ಡಾಮಣಿ ತಂದ ಮಹಾಮಹಿಮನು ಇವ2 ವಾರಿಮುಖಿ ನೀ ಕೇಳಿದರಿಂದ ಬಂದ ವೀರ ಹನುಮಂತನನೇರಿ ಗೋವಿಂದ ಸ್ವಾರಿಗೆ ಪೊರಟ ಚಾತುರ್ದಶಿ ದಿವಸ ಆರತಿಯನು ಕೈಕೊಳ್ಳುವ ಶ್ರೀನಿವಾಸ ಭೇರಿ ಮೃದಂಗ ಮಹಾರವದಿಂದ ಸ- ರೋರುಹನಾಭ ಮುರಾರಿ ಶರಣರು ದ್ಧಾರಣಗೈಯುವ ಕಾರಣದಿಂದ ಪಾ- ದಾರವಿಂದಗಳ ತೋರಿಸಿ ಕೊಡುವ3 ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿ ನಲವಿಂದ ವೇದಘೋಷವ ಕೇಳ್ವ ಶೌರಿ ಜಲಜಭವಾದಿ ನಿರ್ಜರರಿಗಸಾಧ್ಯ ಸುಲಭನಾದನು ಭಕ್ತಜನಕಿದು ಚೋದ್ಯ ಸುಲಲಿತ ಮಂಟಪದೊಳೊ ನೆಲಸುತ ನಿ- ಶ್ಚಲಿತಾನಂದ ಮಂಗಲದ ಮಹೋತ್ಸವ ಗಳನೆಲ್ಲವ ಕೈಕೊಳುತಲಿ ಭಕ್ತರ ಸಲಹುವ ನಿರುತದಿ ಮಲಯಜಗಂಧಿನಿ4 ಶ್ರೀಕಾಂತ ಬಳಿಕ ಭಕ್ತರ ಒಡಗೂಡಿ ಏಕಾಂತ ಸೇವೆಯಗೊಂಡ ಕೃಪೆಮಾಡಿ ಸಾಕಾರವಾಗಿ ತೋರುವ ಕಾಣೆ ನಮಗೆ ಬೇಕಾದ ಇಷ್ಟವ ಕೊಡುವ ಭಕ್ತರಿಗೆ ಶ್ರೀಕರ ನಾರಾಯಣ ಶ್ರೀನಿವಾಸ ಕೃ- ಪಾಕರ ವಿಬುಧಾನೇಕಾರ್ಚಿತ ರ- ತ್ನಾಕರಶಯನ ಸುಖಾಕರ ಕೋಟಿ ವಿ- ಚಾರಕ ಭಾಸತ್ರಿಲೋಕಾಧಿಪನಿವ5
--------------
ತುಪಾಕಿ ವೆಂಕಟರಮಣಾಚಾರ್ಯ
ಟೀಕಾಕೃತ್ಪಾದ ಕರುಣಾಕರ ಗುರು ಶ್ರೀಕಾರಸರಿತವಾಸ ನಾಕಾಧಿಪನೆ ಮನಶೋಕಾ ಹರಿಸಿ ನಿತ್ಯ 1 ಪೂರ್ಣಬೋಧರ ಮತಾರ್ಣವಚಂದಿರ ನಿರ್ಣಯಿಸಿದೆ ಟೀಕಾರ್ಣವದೊಳು ಸುಧ ಉಣ್ಣಿಸಿದೆಯೊ ಗ್ರಂಥ ವರ್ಣಿಸಿಇರುವೆ ಸತ್ಯ 2 ಮಿಥ್ಯಾವಾದಿಗಳ ಸತ್ಯ ತತ್ತ್ವವೆಲ್ಲ ಕತ್ತರಿಸಿದೆ ನಿತ್ಯ ದೈತ್ಯೋನ್ಮತ್ತರನೆಲ್ಲಾ ಸದೆದೆ3 ನಾಕಾಪತಿಗೆ ದೈತ್ಯಲೋಕಗಳಾ ಬಾಧೆ ತಾ ಕಳೆಯಲು ನಿತ್ಯ ಶ್ರೀಕರದಮೃತವ ಶ್ರೀಕಾಂತನಿತ್ತಂತೆ ನೀ ಸುಧೆಯನು ತಂದೆ 4 ದಶಪ್ರಮತಿಸುಶಾಸ್ತ್ರಶರಧಿಯೊಳು ವಾಸಿಸುವೆಯೊ ನಿತ್ಯ ಮೀಸಲಮನ ಕೊಟ್ಟೆನ್ನಾಸೆಯ ಹ ರಿಸಿ ಪದಸೇವೆಯ ಕೊಡೊ ನಿತ್ಯ5 ಪಾಕಶಾಸನ ಸುಖ ಬೇಕಾಗಿ ತೊರೆದು ನೀ ನೇಕಾಂತದಲಿ ನಿಂತೇ ಲೋಕಸುಖದಿ ಭವಶೋಕದಲ್ಲಿಹ ಎ ನ್ನ ಕಾಪಾಡುವುದು ನಿತ್ಯ6 ಶೇಷಾವೇಶ ಆವೇಶಾಮಹಿಮ ಎನ್ನ ದೋಷರಾಶಿಯ ಕಳೆದು ಶೋಷಿಸು ಮನಕಲ್ಮಷವಿಷವನೆಲ್ಲ ನಿ ಶ್ಶೇಷವ ಮಾಡಿ ಸಲಹೊ 7 ಹಲವು ವಿಷಯದ ಹಂಬಲದಿಂದ ಎನ್ನ ಜ್ಞಾನ ಹೊಲಬುಗೆಟ್ಟುದು ನಿತ್ಯ ಅಲವಬೋಧರ ತತ್ತ್ವ ಲವಮಾತ್ರವಾದರು ನೀ ಎನಗೆ ಪಾಲಿಸೊ8 ಮುಕ್ತಿಮಾರ್ಗಕೆ ಜ್ಞಾನಭಕ್ತಿವೈರಾಗ್ಯಗುರು ಭಕ್ತಿಯೆ ಮುಖ್ಯಕಾರಣ ಯುಕ್ತಶಾಸ್ತ್ರ ಪ್ರಸಕ್ತಿ ಇಲ್ಲದ ತ್ವ ದ್ಭಕ್ತನಾದೆನ್ನ ಸಲಹೊ9 ಅಕ್ಷೋಭ್ಯ ಕಟಾಕ್ಷದಿ ಯತಿ ಹ ರ್ಯಕ್ಷನಾಗಿಹೆ ದೀಕ್ಷಾ ಶಿಕ್ಷೆಮಾಡಿ ಪರಪಕ್ಷವಾದಿಗಳನ್ನು ಸ ತ್ಶಿಕ್ಷಕನಾಗಿ ಮೆರೆದೆ10 ಮರುತಾಂತರ್ಗತ ಶ್ರೀ ವೇಂಕಟೇಶನ ಪಾದ ಚರಣಕಮಲಮಧುಪ ನಿರುತ ನೀ ಕರುಣಿಸು ಉರಗಾದ್ರಿವಾಸವಿಠಲನ ನಿಜದಾಸ 11
--------------
ಉರಗಾದ್ರಿವಾಸವಿಠಲದಾಸರು
ದಾತ ಹೈ ತೂಹೀ ಮೇರಾ ಹರಿಯೇ ಕೃಪಾಕರ ಚರಣ ತುಮ್ಹಾರೇ ಪ ಕೋಯೀ ನಹೀ ದುನಿಯಾಮೇ ಮೇರೇ ಹಿಮ್ಮತ ಜಾನಕೀನಾಥ ತುಮ್ಹಾರೇ ಶಿವಾಯ್ ರಹಕೇ ದೇವತಾ ಕೋಯೀ ನಹೀ ದಿಖತಾ 1 ಹಿರಸ್ಕೇ ಚಕ್ಕರ್ಮೇ ಗಿರ್ಕರ್ ಬಹುತ್ ಮೈ ಟಕ್ಕರ್ ಖಾಯಾ ರೇ ಮುರಾರಿ ಜಗ್ ಲೇನ್ ದೇನ್ ಕಾ ಬಜಾರ ಹೈ ಇಜ್ಜತ್ ಬಚ್ಯಾರೇ 2 ನ ಕೋಯೀ ಭಾಯೀ ಬಂಧು ಹೈ ನ ಕೋಯೀ ಪ್ಯಾರೇ ಅಪ್ನಾ ಹೈ ಸಭೀ ಹೈ ಧನ್ಕೇ ದೌಲತ್ಕೇ ರಿಷ್ತಾದಾರ ಸಂಗತ ಕೋಯೀ ನಹೀರೇ 3 ಬಚಪನ್ ಖೇಲ್‍ಮೇ ರಖದಿಯಾ ತರುಣಪನ್ ಕಾಮಮೇ ಖೋಲಿಯಾ ಪ್ರಪಂಚ ಮಾಯಮೇ ಮೇರಾ ಉಮರ್ ಬೇಕಾರ್ ಗಂವಾಯಾ 4 ಗಫಲತ್ ದುನಿಯಾ ದರಿಯಾಸೇ ತೀರ್ಕರ್ ಪಾರ್ ಹೋನೇಕಾ ಸೂರತ್ ದಿಖಾದೇ ಶ್ರೀರಾಮ ಜಲ್ದೀಸೇ ಬಚಾಲೇ ಅಫತ್ಸೇ 5
--------------
ರಾಮದಾಸರು
ನಾಥಾ ನಮಿಪೆ ನಿನಗೇ | ಶ್ರೀ ಬದರೀನಾಥಾ ನಮಿಪೆ ನಮಿಪೆ ನಿನಗೆ ಪ ನಾಥಾ ಜಗಕೆ ಸರ್ವಾ | ನಾಥ ಜನರ ಪಾಲಭೀತಿ ರಹಿತ ಬದರಿ | ನಾಥ ವಿಚಿತ್ರ ಶಕ್ತಾ ಅ.ಪ. ಸರ್ವ ಪ್ರಾಭವ ಶಕುತೀ | ರಕ್ಷಣ ಲಯಸರ್ವ ವಿಚಿತ್ರ ಶಕುತೀ ||ಪರ್ವ ಪರ್ವಗಳಲ್ಲಿ | ಸರ್ವಾಸ್ಥಿ ಮಜ್ಜದಲಿಸರ್ವ ದೇಹದಿ ನಿಂತು | ಸರ್ವ ಕಾರ್ಯವ ಮಾಳ್ಪೇ ||ದ್ರುತ :- ಪರ್ವತ ಸುತೆ ಪ್ರಿಯ | ಶರ್ವನೊಡೆಯಪವಮಾನನಾದಿ ಸುರ | ಸರ್ವವಂದ್ಯ ಹರಿಉರ್ವಿಲಧಿಕ ಮ | ತ್ತೋರ್ವರ ಕಾಣೆನೊದುರ್ವಿಭಾವ್ಯ ಸಮ | ಸರ್ವೋತ್ತಮನೆ 1 ಏಕಮೇವನೆ ತಪವ | ಆಚರಿಸುತ್ತಲೋಕರಕ್ಷಕ ಕಾರ್ಯಮ ||ಅನೇಕಾ | ವಿಚಿತ್ರರೂಪ | ಸಾಕಾರಿ ಪ್ರಭು ನಿ-ರ್ವಿಕಾರಿಯಾಗಿ ಆ | ನೇಕಾ ಬಗೇಲಿ ಮಾಳ್ಪೆದ್ರುತ :ನಾಕ ಜಪಿತಭುವ | ನೈಕಾರಾಧ್ಯನೆಏಕ ಗುಣದಲಿ | ಏಕದೇಶ ರಮೆಲೋಕೇಶಾದಿ ಪಿ | ನಾಕಿಗಳ್ಬಲ್ಲರೆಪ್ರಾಗ್ದೇವತೆ ಹರ | ಸಾಕುವುದೆಮ್ಮ 2 ಚಿತ್ಸುಖಮಯ ವಪುಷ | ಧೇನುಕ ಮತ್ತೆವತ್ಸಾರಿ ಗೋಪ ಹರುಷ ||ವತ್ಸರದವಗುಣ | ಕುತ್ಸಿತ ಜನ ಹರಮತ್ಸ್ಯಾದಿರೂಪ ಶಿರಿ | ವತ್ಸ ಲಾಂಛನನೇ ||ದ್ರುತ :ಮತ್ಸ್ಯ ಧ್ವಜಪ ಪುರು | ಕುತ್ಸ ಭೋಜಪ ಗೋವತ್ಸ ಧ್ವನಿಗೆ ಬಹ | ಉತ್ಸಹ ಉಳ್ಳನೆಚಿತ್ಸುಖ ಪ್ರದ ಶರ | ಣ್ವೋತ್ಸಲ ಗುರು ಗೋ-ವಿಂದ ವಿಠಲ | ಮಾಂ ಪಾಹಿ ಪಾಹೀ 3
--------------
ಗುರುಗೋವಿಂದವಿಠಲರು
ನೋಡಿದೇ ಶ್ರೀ ವಿಠಲನ ನೋಡಿದೆ ಪ ಕುಂಡಲ ಧರನ ಅ.ಪ. ದಾಸರಂದದಿ ಕಾವಿ ವಸನ | ಹೊದ್ದುಭಾಸೀಸುತಿಹ ಸಿರಿವರನ | ವಸನಮೀಸಲನವನು ತೆಗೆಯಲದನ | ಕಂಡೆಲೇಸಾದ ಶಾಲು ಹೊದ್ದವನ | ಆಹಕಾಶಮೀರದ ಶಾಲು | ಭಾಸುರ ಜರೆ ಖಚಿತಭೂಷಿತ ಹರಿ ಕುಳಿತು | ತೋಷಿಪ ಭಕುತರನ 1 ಸುತ್ತಿಹ ಪಾವಡೆ ಶಿರಕೇ | ಬಲುಸುತ್ತು ಸುತ್ತಿರುವುದು ಅದಕೆ | ಹರಿಮಸ್ತಕ ಛಂದ ಕಾಂಬುದಕೆ | ನೋಡಿಭಕ್ತ ಸಂದಣಿಯ ತೋಷಕ್ಕೆ | ಆಹಸುತ್ತಿಹುದನು ಬಿಚ್ಚೆ | ತುತ್ತಿಸುತಿರಲಾಗಕೃತ್ತಿವಾಸನ ತಾತ | ನೆತ್ತಿ ನೈಜವ ಕಂಡೆ 2 ಪೂಜಾರಿ ತೆಗೆಯಲು ಜರಿಯ | ಶಾಲುಮಾಜಾದೆ ವಿಠಲನ ಪರಿಯ | ಕಂಡೆನೈಜದ ಶ್ರೀವರನ ದ್ವಯ | ಹಸ್ತಯೋಚಿಸಿ ಕಟಿಲಿಹ ಪರಿಯ | ಆಹಸೋಜಿಗತನರೂಪ | ನೈಜದಿ ತೋರುತಪೂಜಾದಿ ಸ್ವೀಕಾರ | ವ್ಯಾಜಾವ ಕಂಡೆನು 3 ನಿರ್ಮಲಾಕೃತಿ ಪೊದ್ದ ಹಾರ | ತುಳಸಿಕಮ್ಮಲ ರ್ಸೂಸುವಧಾರಾ | ಕಾರಒಮ್ಮೇಲಿ ತೆಗೆದರಪಾರ | ದಯಸುಮ್ಮನ ಸರಿಗೀವ ಪೋರ | ಆಹಆಮ್ಮಹ ದೈವನ | ಇಮ್ಮಡಿ ಪ್ರಭೆ ಕಂಡನಿರ್ಮಾಲ್ಯ ತೆಗೆಯುವ | ಕರ್ಮಾಚರಿಸೂವಲ್ಲಿ 4 ಪಾದ | ಸ್ವೀಕರಿಸುವ ಭಕ್ತತೋಕನ ಬಿಂಬೋದ | ಶ್ರೀಕರ ದಳ ತುಳಸಿ 5 ನಾಕ್ಹತ್ತು ಭುವನಗಳ್ಜೋತಿ | ಮತ್ತನೇಕಾನೇಕಾಕಾರ ಜ್ಯೋತಿ | ಗಳೊಪ್ರಕಾಶ ಪ್ರದ ಪರಂಜ್ಯೋತಿ | ಮುಕ್ತಿಪ್ರಕಾರ ದೊಳಗಿವನೆ ಜ್ಯೋತಿ | ಆಹಏಕಮೇವ ಹರಿಗೆ | ಕಾಕಡಾರುತಿ ಮಾಳ್ಪಲೋಕರ ಪೂಜೆಯ | ಸ್ವೀಕರಿಪುದ ಕಂಡೆ 6 ಪಂಚ ಮೋಕ್ಷ ಪ್ರದ ಹರಿಗೆ | ಆಯ್ತುಪಂಚ ವಿಧಭಿಷೇಕ ಆವಗೆ | ಶೇಷಮಂಚಿಕೆ ಕ್ಷೀರಾಬ್ದಿಶಯಗೆ | ಮಧುಸಂಚನ ಮಧ್ವಿದ್ಯ ಹರಿಗೆ | ಆಹಪಂಚಾಮೃತಭಿಷೇಕ | ಸಂಚಿಂತಿಸುವನೀಗೆಸಂಚಿತ ಕರ್ಮವ | ಕೊಂಚವ ಮಾಡುವ 7 ಮಂಗಳ ಮಹಿಮಗ ಸ್ನಾನಾ | ಅವಗಂಗಾ ಪಿತನೆಂಬುದೆ ಮಾನ | ಹಾಗೂಅಂಗಜನಯ್ಯಗೆ ಸ್ನಾನಾ | ಆಯ್ತುಹಿಂಗದೆ ಲೋಕ ವಿಧಾನಾ | ಆಹಸಂಗೀತಲೋಲ ಸ | ತ್ಸಂಗವು ತುತಿಸಲುಸ್ವಾಂಗಾಯನಾಮ ಶು | ಭಾಂಗನು ಮೆರೆದನು 8 ಕಾಯ ವರೆಸಿ | ಬಹುಶಾಸ್ತ್ರೋಕ್ತಿ ಉಡಿಗೆಯ ಉಡಿಸಿ | ಮತ್ತೆರತ್ನಧ್ಯಾಭರಣವ ತೊಡಿಸಿ | ಚೆಲ್ವಕಸ್ತೂರಿ ತಿಲಕವನಿರಿಸಿ | ಆಹವಿಸ್ತøತೀಪರಿಯಲಿ | ಸತ್ಯ ಷೋಡಶ ಪೂಜೆಚತ್ತುರ ಮೊಗನಿಂದ | ಕೃತ್ಯಾನು ಸಂಧಾನ 9 ವೇದ ಘೋಷ ಪೂಜಾ ಮಂತ್ರ | ಬಹುನಾದ ವಿಠಲ ನಾಮ ಮಂತ್ರ | ತುಂಬಿಮೋದ ಪೂರೈಸಿತು ತಂತ್ರ | ಘಂಟೆನಾದದಿಂದಾರುತಿ ಕೃತ | ಆಹಆದರದಿಂದ ಪ್ರ | ಸಾದವು ಸ್ವೀಕೃತಮೋದದಿ ವಿಠಲನ | ಪಾದಾಲಿಂಗಾಂತ್ಯವ 10 ಉತ್ಕøಷ್ಟ ಸುಕೃತದ ಭೋಗ | ಹರಿಇತ್ತನು ಅನುಗ್ರಹ ಯೋಗ | ಸ್ವಂತಹಸ್ತದಿ ಪೂಜಾದಿ ಯೋಗ | ಮಾಳ್ಪಕೃತ್ಯ ಸಂಧಿಸಿದನು ಈಗ | ಆಹಚಿತ್ತಜ ಪಿತ ವಿಠಲ | ಭಕ್ತವತ್ಸಲ ದೇವನಿತ್ತಕಾರುಣ್ಯವ | ತುತ್ತಿಸಲೆನಗಳವೇ 11 ಪಿತೃ ಸೇವಕ ಪುಂಡಲೀಕ | ತನ್ನಕೃತ್ಯದೊಳಿರೆ ನಿರ್ವಲ್ಕೀಕ | ಹರಿವ್ಯಕ್ತ ತನ್ಭಕ್ತ ಪರೀಕ್ಷಕ | ನಾಗೆಭಕ್ತನು ಮನ ಸ್ಥೈರ್ಯಾಲೋಕ | ಆಹಇತ್ತ ಇಟ್ಟಿಗೆ ಪೀಠ | ಮೆಟ್ಟಿ ನಿಂತಿಹ ದೇವಕೃತ್ತಿ ವಾಸಾದ್ಯರಿಂ | ಸ್ತುತ್ಯ ಶ್ರೀ ವಿಠಲನ 12 ದಾಸೀಗೆ ಕಂಕಣವಿತ್ತು | ಹರಿದಾಸರ ರೂಪೀಲಿ ನಕ್ತ | ಕಳೆದಾಶು ದಾಸರ ಶಿಕ್ಷಕರ್ತ | ಮತ್ತೆದಾಸರ ನಿರ್ದೋಷ ವಾರ್ತ | ಆಹದಾಸನೋರ್ವಾ ವೇಶ | ಭೂಷಣ ಕೇಳುತ್ತವಾಸುಕಿ ಶಯನೊಲಿದ | ದಾಸ ಪುರಂದರಗೆ 13 ಮುಯ್ಯಕೆ ಮುಯ್ಯ ತೀರಿತು | ಜಗದಯ್ಯ ವಿಠಲನ್ನ ಕುರಿತು | ಪೇಳಿಕಯ್ಯನೆ ಮುಗಿದರು ತ್ವರಿತು | ದಾಸಮೈಯ್ಯ ಬಿಗಿದ ಕಂಬ ಒಳಿತು | ಆಹತ್ರಯ್ಯ ಲೋಕದಿ ದಾಸ | ಅಯ್ಯನ ಪೆಸರಾಯ್ತುತ್ರಯ್ಯ ಗೋಚರ ಹರಿ | ಪ್ರೀಯ್ಯನಿಗೊಲಿದಂಥಾ 14 ಅಂಡ ಬ್ರಹ್ಮಾಂಡಗಳೊಡೆಯ | ಭಕ್ತಪುಂಡಲೀಕನಿಗೊಲಿದ ಭಿಡೆಯ | ರಹಿತಚಂಡ ಕಿರಣಾನಂತ ಪ್ರಭೆಯ | ಹರಿಮಂಡಿತಿಂದು ಭಾಗ ತಡಿಯ | ಆಹಹಿಂಡು ದೈವರ ಗಂಡ | ಪುಂಡರೀಕ್ಷಾಕನೆಪಿಂಡಾಂಡದೊಳಗಿಹ | ಗಂಡನೆಂದೆನಿಸಿಹಗೆ 15 ಪುರಂದರ ವಿಜಯ ಭಾಗಣ್ಣ | ಮತ್ತೆವರ ಜಗನ್ನಾಥವರ್ಯ | ಬಹುಪರಿಠವಿಸಿತ್ತೆ ಮೃಷ್ಠಾನ್ನ | ದಾಸವರರ ಸೇವಕ ಸೇವಕನ್ನ | ಆಹಪುರಂದರದಾಸರ ದಿನ | ದರುಶನ ವಿತ್ತಿಹೆಅರಿದಾಯ್ತೆನ್ನಯ ಕುಲ | ಪರಮ ಧನ್ಯವೆಂದು 16 ಇಂದು ಭಾಗದಿ ವಾಸ ಜಯ | ಸಿರಿಇಂದಿರೆ ಲೋಲನೆ ಜಯ | ದಾಸಮಂದಗಭೀಷ್ಟದ ಜಯ | ಎನ್ನತಂದೆ ತಾಯಿ ಬಂದು ಜಯ | ಆಹ ಸುಂದರ ಗುರು ಗೋವಿಂದ ವಿಠಲ ಹೃ-ನ್ಮಂದಿರದೊಳು ತೋರಿ | ಬಂಧನ ಬಿಡಿಸುವ 17
--------------
ಗುರುಗೋವಿಂದವಿಠಲರು
ಪಂಕಜ ಪತಿ | ಪಂಕಜ ಸಖ ಸಂಕಾಶಾನೇಕಾ | ಸಂಕಟಳಿದು ನಿಃಶಂಕನ ಮಾಡೊ | ಅಂಕೆಯವನೆಂದು || ಪ ಬಂದೆ ಎದುರಿಲಿ ನಿಂದೆ ಸಿರಬಾಗಿ | ಒಂದೆ ವಂದನೆಯೆಂದೆ ಲೋಕದ ತಂದೆ ಮನಸಿಗೆ | ತಂದೆ ನಿನಗ ಇಂದೆ ಅಂದದನು | ಹಿಂದೆ ಯೆಸಗಿದ ದ್ವಂದ್ವ ಪಾಪಕೆ ಒಂದೆ ನಿನ್ನಂಘ್ರಿ | ಎಂದೆಗೆಂದಿಗೆ ಮುಂದೆ ಜನನಗಳು 1 ನೋಡು ಎನ್ನ ಕೂಡಾಡು ದಯವನ್ನು | ಮಾಡು ಮುದದಿಂದಲಾಡು ಮಾತನು | ನೀಡು ಕರುಣವ | ಹೋಡುಗಾರರು ಬೀಡಿನೊಳಗಿದ್ದು | ಕಾಡುವದು ನಾನಾಡಲೇನು | ಈಡು ನಿನಗೆಲ್ಲಿ ನಾಡೊಳು ಕಾಣೆ ಮೂಡಲಾದ್ರಿ ನಿಲಯಾ 2 ಸಾರಿದೆನೊ ಮನಸಾರ ನಿನ್ನಂಘ್ರಿ ಸಾರಾ| ಸಾರವೆಂಬದಾಸಾರವನು ನೂಕಿ | ಸಾರ ಹೃದಯರ ಸಾಲೆಲಿರಸೆನ್ನ | ಕಂಸಾರಿ ಪ್ರತಿದಿನ | ಸಾರಥಿಯಾಗೊ ಸಾರಿಸಾರಿಗೆ | ಸಾರಬೋಕ್ತಾ ವಿಜಯವಿಠ್ಠಲ ಕೆಲಸಾರದೆ ಸಾರಲಿರೊ 3
--------------
ವಿಜಯದಾಸ
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪವಿತ್ರೋತ್ಸವ ಗೀತೆ ಪವಿತ್ರ ಉತ್ಸವವನ್ನು ನೋಡುವ ಬನ್ನಿ ಭಕ್ತರೆಲ್ಲಾ ಪ ವರಶುಕ್ಲಪಕ್ಷದ ಏಕಾದಶಿಯಲಿ ಅನೇಕಾ ಭರಣವ ಬಿಟ್ಟು ರಂಗ ವೈದೀಕನಂತೆ ವೈಜಯಂತಿ ಜನಿವಾರ ಕೌಸ್ತುಭಮಣಿಯು ಕೊರಳೊಳು ಹೊಳೆಯೆ ಓಲ್ಯಾಡುತಲೆ ಅರಳಿದಪುಷ್ಪದ ಮೇಲೆ ಯಾಗಶಾಲೆಗೆ ಬಂದರಂಗನ 1 ವೇದಘೋಷಗಳನ್ನು ವಿಪ್ರರು ಮೋದದಿಂ ಮಾಡುತಿರಲು ವೇದಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರುಅರವತ್ತು ಪೂಜೆಯನು ಮಾಡಿ ಮುದ್ದುರಂಗನಿಗೆ ಮಜ್ಜನವ ಮಾಡಿ ನಿಂದು ಹರುಷದಿ ಯಾಗಪೂರ್ತಿಯ ಮಾಡಿದ ರಂಗನ 2 ತಂದ ತಂಡುಲವರವಿಯೆ ಮಧ್ಯದಿ ಭಾಂಡಗಳ ತಂದಿರಿಸಿ ತಂಬಿ ಪವಿತ್ರವನು ಕಲ್ಪೋಕ್ತದಿಂದ ಪ್ರತಿಷ್ಠೆ ಮಾಡಿ ಒಂದು ಪವಿತ್ರವನು ಪ್ರದಕ್ಷಿಣೆಯಿಂದ ತಂದು ಧರಿಸಿ ಚಂದದಿಂ ವೈಯ್ಯಾರ ನಡೆ ಯಿಂದ ಮಂದಿರಕೆ ನಡೆತಂದ ರಂಗನ 3 ದ್ವಾದಶಿ ದಿವಸದಲಿ ಶ್ರೀರಂಗನ ಪೊಗಳೆ ವೇದಪಾಠಕರು ಅನಾದಿಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರು ಅರವತ್ತು ಮಂಗಳಾರತಿ ಮು ಕ್ತಿದಾಯಕಗೆತ್ತಿ ಪೂಜೆಗೊಂಡು ಪವಿತ್ರವನು ಧರಿಸಿ ವಿ ನೋದ ಸೇವೆಯ ತೋರಿದ ರಂಗನ 4 ಸಂಧ್ಯಾರಾಗದಿ ಇಂದಿರಾಪತಿ ಬಂದು ಮಂಟಪದಲಿ ಚಂದದಿಂದಲೆ ಪೂಜೆ ನೈವೇದ್ಯವ ಆ ನಂದದಿಂದ ಗ್ರಹಿಸಿ ದಿಂಧಿಮಿತೆಂಬ ವಾದ್ಯದಿ ಗೋ ವಿಂದ ತಾನೆ ಪೊರಟು ಚಂದದಿಂದ ಶಾರ್ದೂಲನಡೆ ಯಿಂದ ಮಂದಹಾಸದಿ ಬಂದ ರಂಗನ 5 ಸಪ್ತದಿವಸದಿ ಪವಿತ್ರದಾಭರಣವಿಟ್ಟು ಭಕ್ತವತ್ಸಲ ಕರ್ಪೂರದ ಚೂರ್ಣಾಭಿಷೇಕವ ಅರ್ಥಿಯಿಂದ ಗ್ರಹಿಸಿ ಪತ್ನಿಯರು ಸಹಜವಾಗಿ ಭತ್ತದಕೊಟ್ಟಿಗೆ ಎದುರೆ ಭತ್ತವಳಿಸಿಯೆ ನಿಂತ ಭಕ್ತವತ್ಸಲ ಮಿತ್ರರಎದುರಲಿ ನಿಂದ ರಂಗನ 6 ಒಂಭತ್ತು ದಿನದಲಿ ಅಂಬುಜನಾಭ ಆನಂದ ದಾಭರಣವಿಟ್ಟು ಕುಂದಣದ ಕೋಳಿಕೆಯನೇರಿ [ತುಂಬು ಚೆಲ್ವನಾ] ಚಂದ್ರಪುಷ್ಕರಿಣಿಯಲಿ ಶುಭ್ರತೀರ್ಥವ ಆನಂದದಿಂದಲಿತ್ತು ಬಂದು ಅವಭೃತ ಮಾಡಿಯೆನಿಂದ ಶ್ರೀನಿವಾಸರಂಗನ 7 ಉತ್ಸವದ ಮರುದಿನದಿ ಶ್ರೀರಂಗನು ತನ್ನ ಏಕಾಂತ ಭಕ್ತರಿಗೆ ಇತ್ತು ಪವಿತ್ರದಾಭರಣ ತೀರ್ಥಪ್ರಸಾದವನ್ನು ಮುಕ್ತಿದಾಯಕ ಮುನಿಗಳ ಮುಂದೆ ಚಂದ್ರನಂತೆ ಬ ರುತ್ತಿರಲು ಸುತ್ತ ತಾರಕೆಯಂತೆ ವೈಷ್ಣವರು ಒತ್ತಿ ಬರುವ ಅಂದಚಂದದ 8
--------------
ಯದುಗಿರಿಯಮ್ಮ
ಪಾಲಿಸೋ ಶ್ರೀ ಗುರುರಾಯಾ ಪ ಕಾಯ - ಭವ ಜಾಲ ತಪ್ಪಿಸೊ ಮಹರಾಯ - ಆಹಾ ಪಾಲಗು ಜನರ ಸು - ಪಾಲಕ ಹರಿಪಾದ ಭವ - ತೂಲಕಾನಲನೆ ಅ.ಪ ಶೇಷಾಂಶ ಪ್ರಹ್ಲಾದ ವ್ಯಾಸಾ - ಮುನಿ ವೇಷ ತಾಳಿದೆಯೊ ಯತೀಶಾ - ಜಾಗು ಪೋಷಣೆ ಗೈಯ್ಯೊ ಮನೀಷಾ - ಎನ್ನಾ - ಶೇಷ ಕ್ಲೇಶವಳಿದೀಶಾ - ಆಹಾ ಭವ ನಿ - ಸ್ಸೇಷ ಮಾಡಿ ಎನ್ನ ಪೋಷಿಸೊ ನಿರುತ ಧೃ - ತಾಷಾಢ ಗುರುವರ 1 ಕಾಮಧೇನು ಕಲ್ಪವೃಕ್ಷಾ - ನಿನ್ನ ಈ ಮಹಮಹಿಮೆ ನಿರೀಕ್ಷಾ - ಮಾಡಿ ಈ ಮಹಿ ಯಾಕೆಂದುಪೇಕ್ಷಾ - ಮಾಡಿ ಧಾಮ ಸೇರಿದವೊ ಭಕ್ತಪಕ್ಷಾ - ಆಹಾ ಸಾಮಜನಾಥನ ಪ್ರೇಮ ಪಾತ್ರನೆ ನಿನ್ನ ಈ ಮಹ ಮಹಿಮೆಗೆ ನಾಮಾಳ್ಪೆ ನಮೊ ನಮೊ 2 ಆಸೇತು ಹಿಮಾದ್ರಿ ತನಕಾ - ನಿನ್ನ ಆಸೆಯ ಮಾಳ್ಪರನೇಕಾ - ಅಂಥ ದಾಸಜನರಿಗೆ ಅನೇಕಾ - ಫಲ ರಾಶಿಯ ಕೊಡುವಿ ಮಜ್ಜನಕಾ - ಆಹಾ ಮಾನವ ಜನ್ಮ ಈಸೆ ಸಾಕೆಲೊ ಸ್ವಾಮಿ ಎಸು ಪೇಳಲಿ ನಿನ್ನ ದಾಸರ ದಾಸನೋ 3 ಎಲ್ಲಿ ಪೋದರು ಕಾಯ್ವರಿಲ್ಲ - ಜಗ - ದ್ವಲ್ಲಭ ಬಲ್ಲಿ ನಿನೆಲ್ಲಾ - ಬಹು ಬಲ್ಲಿದನೆಂಬುವರೆಲ್ಲಾ - ಜನ ಸೊಲ್ಲು ಕೇಳಿಬಂದೆನಲ್ಲಾ - ಆಹಾ ಪುಲ್ಲಲೋಚನ ನೀ - ನಲ್ಲದೆ ಎನ ಭವ ಣೆಲ್ಲ ಮಾತ್ರವು ಕಳೆಯೊ - ರಿಲ್ಲವೊ ಎನ್ನಜೀಯಾ 4 ನಾಥ ನಿನ್ನೊಳು ಜಗಕೆಲ್ಲ - ಮಹ ಪ್ರೀತಿಯು ಇರುತಿಹುದಲ್ಲ - ಸದ - ತಾತ ನೀನಾಗಿ ಜಗಕೆಲ್ಲಾ - ಮತ್ತೆ ಪೂತ ಫಲ ಕೊಡುವಿಯಲ್ಲಾ - ಆಹಾ ದಾತ ಗುರುಜಗ - ನ್ನಾಥವಿಠಲ ಸದಾ ಪ್ರೀತಿಂದ ಇರುವೊನು5
--------------
ಗುರುಜಗನ್ನಾಥದಾಸರು
ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು
ಬಾ ಬಾ ಭಕುತರ ಹೃದಯ ಮಂದಿರ ಬಾ ಬಾ ಜಗದೋದ್ಧಾರ ಪ ಬಾ ಬಾ ವೇಂಕಟಾಚಲ ವಿಹಾರ ಬಾ ಬಾನೇಕಾವತಾರ ಧೀರ-ಶೂರ ಅ.ಪ. ದಕ್ಷ ಕಮಲಾಕ್ಷ ರಾಕ್ಷಸ ಕುಲ ಶಿಕ್ಷ ಲಕ್ಷ್ಮಣನಗ್ರಜ ಲಕ್ಷ್ಮೀವಕ್ಷ ಪಕ್ಷಿವಾಹನ ಪೂರ್ಣಲಕ್ಷಣ ಸರ್ವೇಶ ಮೋಕ್ಷದಾಯಕ ಪಾಂಡವ ಪಕ್ಷ ಅಕ್ಷಯವಂತ ಸೂಕ್ಷ್ಮಾಂಬರ ಧರಾ- ಧ್ಯಕ್ಷ ಪ್ರತ್ಯಕ್ಷದ ದೈವ ಅಕ್ಷತನಾರೇರ ತಕ್ಷಣದಲಿ ತಂದ ಅಕ್ಷರ ಪುರುಷ ಗೋವಿಂದ 1 ಜಾಂಬೂನಾದಾಂಬರ ಸಾಂಬಜನಕ-ನೀ ಲಾಂಬುದ ವರ್ಣಸುಪೂರ್ಣ ಸಾಂಬವಿನುತ ಸುಗುಣಾಂಬುಧಿ ನಾನಾ ವಿ ಡಂಬನ ತೋರಿದ ಮಹಿಮ ಕಾಂಬುವೆ ನಿನ್ನ ಚರಣಾಂಬುಜ ಮನದೊಳು ಜಾಂಬುವಂತನ ಪರಿಪಾಲಾ ವಿ- ಶ್ವಂಭರಂಬರಗ್ಗಣಿಯ ಪಡೆದ ವೃ- ತ್ತುಂಬರೇಶಾಂಬುಧಿ ಶಾಯಿ 2 ತಾಳ ಜಾಗಟೆ ಮದ್ದಳೆ ದುಂದುಭಿ ಭೇರಿ ಕಾಳೆ ಹೆಗ್ಗಾಳೆ ತಮ್ಮಟಿ ನಿ- ಸ್ಸಾಳೆ ಪಟಹ ತಂಬೂರಿ ಪಣವ ಕಂಸಾಳೆ ಕಂಬುಡಿಕ್ಕಿ ವಾದ್ಯ ಸೂಳೈಸುತಲಿರೆ ಭಾಗವತರು ಸಂ ಮೇಳದಿ ಕುಣಿದೊಲಿದಾಡೆ ಸಾಲುಪಂಜಿನ ಗುಂಜಿ ಛತ್ರ ಚಾಮರ ಧ್ವಜ ಢಾಲುಗಳು ಒಪ್ಪಿರಲು3 ಹಂಸವಾಹನ ಕ್ರತುಧ್ವಂಸಿ ಸುಮನಸೋ ತ್ತಂಸ ಕೃಶಾನು ಪಾಪಿಗಳ ಹಿಂಸೆಯ ಗೊಳಿಸುವ ಪಾಂಸರಕ್ಕಸಪಾಳಿ ಕೌಂಶಿಕಾಪತಿಯು ಧನವ ಅಂಶಮಾಲಿ ಸೋಮಕಂಶಿಕಮುನಿ ಪರಮ ಹಂಸರು ಅಲ್ಲಲ್ಲಿ ನಿಂದು ಸಂಶಯ ಮಾಡದೆ ಸಮ್ಮೊಗರಾಗಿಹರು ಕಂಸಾರಿ ತ್ರಿಗುಣಾತೀಶ 4 ಮೂರು ನಾಮಂಗಳ ಧರಿಸಿದ ದಾಸರು ವೀರ ಮಾರುತಿ ಮತದವರು ಸಾರುತ್ತ ಬೊಮ್ಮಾದಿ ಸುರರುಗಳನ್ನು ತಾರತಮ್ಯದಿಂದ ತಿಳಿದು ವಾರಿಧಿಯಲಿ ಮಗ್ನರಾಗಿ ತಾರರು ಮನಸಿಗೆ ಮುರಡು ದೇವತೆಗಳ ಸಾರ ಹೃದಯರು ನಿಂದಿಹರು 5 ಅಂದು ಬಲೀಂದ್ರನ್ನ ದ್ವಾರದಿ ನೀನಿರೆ ಮಂದಮತಿಯು ರಾವಣನು ಬಂದು ಕೆಣಕೆ ನಗುತ ಮಹಾಲೀಲೆ ಯಿಂದಲಿ ನೀನಾ ಖಳನ ಒಂದು ಶತಯೋಜನ ತಡಮಾಡದಲೆ ನೀ ಹಿಂದಕ್ಕೆ ಬೆರಳಲ್ಲಿ ಒಗೆದೆ ಅಂದವಾಗಿಹುದೇನೊ ದೇವ6 ಬಂಗಾರ ರಥದೊಳು ಶೃಂಗಾರವಾದ ಶ್ರೀ ಮಂಗಳಾಂಗ ಕಳಿಂಗ ಭಂಗ ನರಸಿಂಗÀ ಅಂಗಜ ಜನಕ ಸಾ- ರಥಾಂಗ ಪಾಣಿ ವಿಹಂಗ ಪ್ಲ- ಸಂಗೀತ ಲೋಲ ಗೋಪಾಂಗನೆಯರ ಅಂತ- ರಂಗ ಸಂತಾಪ ವಿದೂರ 7 ತಡಮಾಡಲಾಗದೊ ಪೊಡವೀಶ ನೀನಿಂದು ತಡೆವರಿನ್ನಾರೈಯ ವಡೆಯ ವೇದವೇದ್ಯ ಕಡೆಗಣ್ಣಿನಿಂದ ನೋಡಿದಲೆ ನಡೆವುದು ನುಡಿವುದು ಅಡಿಗಡಿಗೆ ನೀನು ಬಿಡದೆ ಒಳಗೆ ಹೊರಗಿದ್ದು ಸಡಗರ ದೈವವೆ ನುಡಿಯ ಲಾಲಿಸುವುದು ವಡನೊಡನೆ ಪಾಲಿಸುತ್ತ 8 ಹತ್ತವತಾರದ ಹರಿಯೆ ಘನಸಿರಿಯೆ ಮತ್ತೊಬ್ಬರನು ಹೀಗೆ ಕರೆಯೆ ಭೃತ್ಯರ ಸಂಗಡೋಡ್ಯಾಡುವ ದೊರೆಯೆ ಎ- ನ್ಹತ್ತಿಲಿ ಆಡುವ ಮರಿಯೆ ಚಿತ್ತದೊಲ್ಲಭ ನಮ್ಮ ವಿಜಯವಿಠ್ಠಲರೇಯ ಎತ್ತನೋಡಲು ನಿನಗೆ ಸರಿಯೆ ಅತ್ತಿತ್ತ ಪೋಗದೆ ಇತ್ತ ಬಾರೈಯ ಎ- ನ್ಹತ್ತಿಲಿ ವೆಂಕಟದೊರೆಯ 9
--------------
ವಿಜಯದಾಸ