ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಣ್ಮನಕೆ ಆನಂದ ಇಂದಿನದಿ ಕೇಳೀ |ಮನ್ಮನೋರಥ ಮುಂದೆ | ಪೋಗಿ ಸೇರಿಹುದು ಪ ಮಧ್ವ ಸರಸಿಯ ತಟದಿ | ಮಧ್ವಮುನಿ ಸದ್ವಂದ್ಯಮಧ್ವೇಶ ಶಿರಿ ಕೃಷ್ಣ | ನರ್ಚಿಸುತ ನಿತ್ಯಮಧ್ವಮತ ಸಾಮ್ರಾಜ್ಯ | ಪೀಠದಲಿ ಭೂಷಿತರುವಿಶ್ವೇಶ ತೀರ್ಥರಿಗೆ | ವಂದಿಪೆನು ಸತತ 1 ಮಧ್ವ ಸಿದ್ಧಾಂತಗಳ | ಉತ್ಕರ್ಷ ಭೋದಿಸುತವಿದ್ವಜ್ಜನಾರಾಧ್ಯ | ಪಾಠಶಾಲಾವರ್ಧಂತಿ ಹತ್ತಾರು | ನಾಲ್ಕೊರ್ಷ ಉತ್ಸವದಿಅದ್ಯಕ್ಷ ವಿಶ್ವೇಶ | ತೀರ್ಥರನುಗ್ರಹಿಸೇ 2 ಅನಂತೇಶ ಸನ್ನಿಧಿಲಿ | ಅನುಮಾನ ತೀರ್ಥರಿಂದಾನಂತ ಸತ್ ಜ್ಞಾನ | ರಶ್ಮಿ ಸೂಸುತಲೀ |ಜ್ಞಾನ ಕಾರ್ಯವು ಗುರು | ಗೋವಿಂದ ವಿಠಲನಪ್ರೀಣನಕೆ ಜರುಗಿಹುದ | ನೋಡವನೆ ಧನ್ಯ 3
--------------
ಗುರುಗೋವಿಂದವಿಠಲರು
ಧ್ಯಾನ ಮಾಳ್ಪುದು ಮನಸಾ | ಹೃದಯಾರವಿಂದದಿಸಾನು ಕೂಲಿಪ ಅರಸ | ವಿಸ್ತರಿಸಿ ಗುಣಗಳಮೌನಿಯಾಗುತ ಸಹಸ | ಚಿಂತಿಸೆಲೊ ಅನಿಶಾ ಪ ಸಾನು ರಾಗದಿ ರೂಪಗುಣಗಳ | ಮಾನಮೇಯ ಜ್ಞಾನ ಸಹಿತದಿಏನು ಫಲದನು ರಾಗವಿಲ್ಲದೆ | ಶ್ರೀನಿವಾಸನ ಭಕುತಿಯಿಂದಲಿ ಅ.ಪ. ನತ ನಾ | ಸಾಗ್ರದಲಿ ದೃಷ್ಟಿಯನೆ ಇಡುತ 1 ಮಾನವ ಪ್ರಾಣ ನಿಯಮನ ವಾರ್ತಿ | ತಿಳಿಯುತ ಮನದಲಿಪ್ರಾಣ ರೇಚಕ ನೀತಿ | ಪೂರಕವು ಕುಂಭಕಜಾಣ ತನದಲಿ ಪೂರ್ತಿ | ಗೈದೋಂಕಾರ ಕೀರ್ತಿ ||ಪ್ರಾಣ ನಿರುತದಿ ಮಾಳ್ಪ ಅನು ಸಂಧಾನ ತಿಳಿದಾ ಚರಿಸೆ ವಿಹಿತದಿಪ್ರಾಣ ಸಂಯವ ಭಕ್ತಿ ಪೂರ್ವ ವಿ | ಧಾನ ಮಾಡಲು ವೇಗ ವಲಿದನು|2| ಹತ್ತು ಸಲ ಪ್ರತಿಸವನ | ಪ್ರಾಣನ್ನ ಸಂಯವ ಕರ್ತೃ ಹೀಗೆ ತ್ರಿಸದನ ಮಾಸಕ್ಕೆ ಮುಂಚೆಯೆಭರ್ತೃವಾಗಿಹ ಪ್ರಾಣ | ವಶನ ಹನು ಅವಗೆಂದುಉಕ್ತವಿದು ಸನ್ಮಾನ | ತಿಳಿದಾ ಚರಿಸು ಧ್ಯಾನ ||ಪೊತ್ತು ಕದಳಿಯ ಮೊಗ್ಗಿನಾಕೃತಿ | ಮತ್ತೆ ನಡು ಸತ್ಕರ್ಣಿಕವು ಇಹಹೃತ್ಸ ಅಷ್ಟದಳಾಖ್ಯ ಕಮಲವ | ಎತ್ತುವುದು - ಉದಯಾರ್ಕ ಮಂತ್ರದಿ |3| ಚಿಂತೆ ಕರ್ಣಕೆಯಲ್ಲಿ | ಮಾರ್ತಾಂಡ ಮಂಡಲಅಂತೆ ಅದರುಪರೀಲಿ | ತಾರೇಶ ಮಂಡಲಚಿಂತೆ ತದ್ದುಪರೀಲಿ | ಮಂಡಲ ವಿಭಾವಸುಅಂತೆ ತನ್ನಡುವೀಲಿ | ಹರಿಪದಾಜ್ಜಾಳಿ ||ಯಂತೆ ಚಿತ್ತ ಸ್ಥೈರ್ಯದಿಂದಲಿ | ಚಿಂತಿಸುತ ಗುಣರೂಪ ಕ್ರಿಯೆಗಳಕ್ರಾಂತನಾಗುವ ಹರಿಯ ಚರಣದಿ | ಶಾಂತ ಸತ್ಸಮಾಧಿಯನು ಪಡೆ 4 ಕಂಬು ಕುಂಡಲ ಮಕರ | ಶೋಭಿ ಕರ್ಣಾಪಾರ ||ಮಾರಪಿತ ಶಿರಿವತ್ಸ ಲಾಂಛನ | ಶ್ರೀ ರಮಾಪತೆ ಶ್ಯಾಮಸುಂದರಕಾರಣಿಕ ಕನಕಾಂಬರಾಧರ | ಹಾರ ಸುಮನ ವಿಶಾಲ ವಕ್ಷನ 5 ಕಂಬು ಕಟಿ ಸೂತ್ರಾಂಗದೈರ್ಯುತ | ವಸ್ತು ಸರ್ವಾಧಾರ ಹೃದ್ಯನ 6 ಧ್ಯಾನ ಬಹು ದುರ್ಭಾವ್ಯ | ಶ್ರೀಹರಿ ವಿಭೂತಿಯುಮನಕೆ ದುರ್ವಿಜ್ಞೇಯ | ಪೆಸರಿಹುದು ಕಾರಣಅನಘನಂಗವು ದೇಹ | ಒಂದೊಂದು ಸ್ಥಿರ ಪಡೆಪುನಹ ಸರ್ವಾವಯದ ಸ್ಥಿರ ತೆರದಿ ಧೇಯ ||ಎಣಿಸು ಪ್ರತ್ಯಾಹರಣ ಕಾರ್ಯವ | ವಿನಹವಿದು ಮನಸ್ಥೈರ್ಯವಾಗದುಅನಿಲದಯ ಸಂಪಾದಿಸುತ್ತಲಿ | ಗುಣಿಸು ನೈರಂತರ್ಯವೀತೆರ 7 ಶಿಷ್ಟನಾಗುತಲಿನ್ನು | ಅನ್ಯತ್ರ ಮನವನುಸುಷ್ಠು ಸೆಳೆಯುತಲಿನ್ನು | ಹರಿಪಾದ ವನಜದಿಘಟ್ಟ ಇಡುತಲಿ ಮುನ್ನ | ಸುಸ್ಥಿರದ ಚಿತ್ತದಿ ||ಪ್ರೇಷ್ಟ ತಮ ಅವನೆನ್ನು | ಸರ್ವಕಧಿಕೆನುನಷ್ಟವಾಗುತ ಭ್ರಾಮಕ ತ್ರಯ | ಶ್ರೇಷ್ಠ ಧ್ಯಾನಾಸಕ್ತನಾಗಲು ದೃಷ್ಟಿಸುತಲಿ ತತ್ವಪತಿಗಳ | ಇಷ್ಟ ಮೂರ್ತಿಯ ಕಾಂಬೆ ಕೊನೆಗೆ8 ಯೋಗವಿಹುದು ಸಮಾಧಿ | ಅಭ್ಯಾಸ ಸಾಧ್ಯ ನಿಯೋಗಿಸಿದನ ನಿರುತದಿ | ಸುಸ್ಥಿರದಿ ಚಿತ್ತವಯೋಗಿಸ್ಹರಿ ಚರಣದಿ | ಏನೊಂದು ಬೇಡದೆವೇಗ ಹರಿ ರೂಪದಿ | ನೋಡವನ ದಯದಿ ||ಆಗಮೈಕ ಸುವೇದ್ಯ ಭಕ್ತಿಯ | ಯೋಗ ಕೊಲಿಯುತ ಸಾಧಕಂಗೆಯೋಗಿ ಗುರು ಗೋವಿಂದ ವಿಠ್ಠಲ | ವೇಗತನ ದರ್ಶನವ ಪಾಲಿಪ 9
--------------
ಗುರುಗೋವಿಂದವಿಠಲರು
ಸಾಲವನು ಕೊಳುವಾಗ ಸಡಗರದ ಸಿರಿಯೋ ಸಾಲಿಗನು ಬಂದು ಕೆಳಲಾಗಡರಿತುರಿಯೋ ಪ ಡಬ್ಬುಗೈದಿದ್ದವನೊಳ್ ಎಬ್ಬಿಸಿ ಹಣತಂದು ಉಬ್ಬುಬ್ಬಿ ಸತಿಮುಂದೆ ಹೆಬ್ಬುಲಿಯ ತೆರದಿ ಒಬ್ಬರೀಡಿಲ್ಲೆನಗೆಂದಬ್ಬರಿಸುತ್ಹೇಳುವನು ತಬ್ಬಲು ಧಣಿಬಂದು ಮಬ್ಬಿನೊಳೆದ್ದೋಡ್ವ 1 ಹಣತಂದ ದಿನ ಅವನ ಮನೆಯೊಳಗೆ ಹಬ್ಬೂಟ ವನಿತೆಯೊಳೆನುತಿಹ್ಯನು ನನಗಾರು ಸರಿಯೆ ಹಣಕೊಟ್ಟ ಧಣಿಬಂದು ಮನೆಮುಂದೆ ಕುಳ್ಳಿರಲು ಹೆಣಇರುವ ಮನೆಗಿಂತ ಘನದು:ಖಕೇಳೊ 2 ಕಡುಹಿಗ್ಗಿನಿಂದೊಸನ ಒಡವೆ ಉದ್ದರಿತಂದು ಬಡಿವಾರ ಬಿಂಕ ಕೊಡುವ ವಾಯಿದೆ ಕಳೆದು ಬಡಿಗೆಯು ಬರಲಾಗ ಮಡದಿ ಸತ್ತವನಂತೆ ಇಡುವ ತಲಿ ಬುವಿಗೆ 3 ಅಕ್ಕಿಬೇಳೆ ಬೆಲ್ಲತಂದು ಅಕ್ಕರದಿಂ ಸತಿಸುತರಿ ಗಿಕ್ಕುವಾಗ ನೋಡವನವಕ್ಕರಂಗಳನು ಮಕ್ಕಮಾರಿಯಂದದಿ ತಿಕ್ಕುವಾಗಕೊಟ್ಟವರು ಸಿಕ್ಕದೆ ತಿರುಗುವನು ಬಿಕ್ಕೆ ಬೇಡುಣುತ 4 ಮನೆಮುರಿದು ಹೋಗಲಿ ವನಿತೆಯರು ಜರಿಯಲಿ ಎನಗೆಡರು ಬಂದೊದಗಿ ಅನ್ನ ಸಿಗದಿರಲಿ ಘನಮಹಿಮ ಶ್ರೀರಾಮ ಮಣಿದುಬೇಡುವೆ ನಿನಗೆ ಋಣದ ಬಾಳುವೆ ಬೇಡ ಜನಮಜನುಮಗಳಲಿ 5
--------------
ರಾಮದಾಸರು