ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೀಠಕೀಗ ಬಾರೊ ದೇವನೆ ಆದ ಪಾಠ ಸಾಕೊ ಕೃಷ್ಣನೆ ಪ. ಮುತ್ತಿನಾಭರಣವ ತೊಡಿಸುವೆನು ಕಸ್ತೂರಿ ತಿಲಕವ ತಿದ್ದುವೆನೊ ಕೃಷ್ಣ ಮಸ್ತಕದರಳೆಲೆ ಮಾಗಾಯಿ ಪೊಳೆಯುತ ಕಸ್ತೂರಿ ರಂಗ ಬಾರೊ 1 ಕಂಗಳಿಗೆ ಕಪ್ಪು ಹಚ್ಚುವೆನೊ ರÀಂಗಗೆ ಪೀತಾಂಬರುಡಿಸುವೆನೊ ಮಂಗಳಾಂಗಗೆ ನಾ ಶೃಂಗಾರ ಮಾಡಿ ಕಂಗಳಿಂ ನೋಡುವೆನೊ 2 ಕಾಲಲಂದಿಗೆ ಗೆಜ್ಜೆ ಫಳಿರೆನುತ ನೀಲಮೇಘ ಶ್ಯಾಮ ಶ್ರೀ ಶ್ರೀನಿವಾಸ ಬಾಲ ಗೋಪಾಲ ಸುಶೀಲ ಮುರಳಿಧರ ರಮಾಲೋಲ ಶ್ರೀ ಕೃಷ್ಣ ಬಾರೋ3
--------------
ಸರಸ್ವತಿ ಬಾಯಿ
ಶೃಂಗಾರ ಬೇಕಾಯಿತೆ ಶ್ರೀಕಾಂತ ನಿನಗೆ ಶೃಂಗಾರವಾರ್ಧಿ ವೇಲಾಪುರದ ಚೆನ್ನಾ ಪ ಕರದಲ್ಲಿ ದಂಡ ಕೋಲು ಕಮಂಡಲನೀವ ಪರಿ ಹೇಗೆ ದಾಸಾನುದಾಸನಲ್ಲ ಇರಲಿಯಂತದುವೆ ಶ್ರೀಧರನೆಂಬ ಪೆಸರು ಬಿ ಟ್ಟುರದ ಲಕ್ಷ್ಮಿಯನು ಕಡೆಗಿರಿಸು ನೋಡುವೆನೊಮ್ಮೆ 1 ಎನ್ನ ಬಿನ್ನಪವೊಂದುಂಟು ಕೇಳೆಲೊ ಸ್ವಾಮಿ ನಿನ್ನ ಬಾಲಬ್ರಹ್ಮಚಾರಿಯೆಂದು ಸನ್ನುತಿಸುತಿದೆ ವೇದ ಶಾಸ್ತ್ರಾಗಮಗಳೆಲ್ಲ ಇನ್ನದಕುಪಾಯವೇನಯ್ಯ ಚೆನ್ನಿಗರಾಯ 2 ಶೃಂಗಾರಗಳನು ತತ್ವಂಗಳನು ಪೇಳುವಡೆ ಗುಂಗುರುಹಿನೊಳಲ್ಪ ಮನುಜನಲ್ಲ ಮಂಗಳಾತ್ಮಕನೆ ಆಡಿಸಿದೊಡಾಡುವೆ ಎನಗೆ ಭಂಗವೇಕಯ್ಯ ವೈಕುಂಠ ಚೆನ್ನಿಗರಾಯ 3
--------------
ಬೇಲೂರು ವೈಕುಂಠದಾಸರು