ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗೆ ನೀ ಕರುಣಿಸುವಿ ಸುಂದರಾಂಗ ಎನ್ನೊಳು ಕುಂದಿ ಪೋದೆನಲ್ಲೊ ಬೇಗ ಬಂದು ಕಾಯೊ ಕರುಣಾಳು ಪ. ಧರ್ಮ ಕರ್ಮಗಳು ಮಾಳ್ಪ ಮರ್ಮವರಿಯದಿದ್ದರು ಭರ್ಮದಾಶೆಗಾಗಿ ಹೀನ ಕರ್ಮದೊಳಗೆ ಬಿದ್ದರು ದುರ್ಮದಾಂಧರನು ಗೆಲುವ ನಿರ್ಮಲ ಚಿದಾತ್ಮ ನಿನ್ನ ಹಮ್ರ್ಯದ ಮುಂದೊದರಿ ಸರ್ವಶರ್ಮಪೊಂದಿಚ್ಛಿಸುವೆನು 1 ಜೀಯ ನಿನ್ನ ಪೊಗಳಿ ಪಾಡುವಾಯವಿರಲು ಸಾಕಯ್ಯ ರಾಯರೊಲವು ತನ್ನಂತೆ ನಿರಾಯಾಸದಿಂದಹುದೈಯ್ಯ ವಾಯುವೀಯ ಜನರ ಕೂಡಿ ಮಾಯ ಗೆಲಲು ಮಾನವೀಯ ಕಾಯವನ್ನು ನೋಯದಂತೆ ಕಾಯೊ ಸಕಲದಾಯಕಾರಿ 2 ನಿತ್ಯಾನಂದ ನಿನ್ನ ಪಾಡಿ ಹೊತ್ತ ಕಳೆವ ಕಾರ್ಯಕ್ಕೆ ಒತ್ತಿ ಬರುವ ವಿಘ್ನಬಾಧೆ ಹತ್ತದಂತೆ ಓಡಿಸು ಸತ್ಯರಮಣ ಶರಣ ಪುರುಷೋತ್ತಮ ಶ್ರೀ ವೆಂಕಟೇಶ ಚಿತ್ತದಲ್ಲಿ ನಿನ್ನ ದಿವ್ಯ ಮೂರ್ತಿದೋರೊ ಮರಿಯದಿರು 3
--------------
ತುಪಾಕಿ ವೆಂಕಟರಮಣಾಚಾರ್ಯ
ನೆಚ್ಚಬೇಡಿ ಪತಿತನಾರಿಯ | ಕಚ್ಚುವ ಹಾವಿನ ಸಂಗವೆನ್ನಿ || ಪ ಮೆಚ್ಚುಗೊಳಿಪಳು ಗುಣಿಸಿ ನೋಡಿ ನಿಚ್ಚದಲಿ ಚಿತ್ತ ಚಂಚಲಳಾಗಿ ಅ.ಪ ಪರಿಯಂತ | ಯಾವದನಿತು ಮೊಗವನೆತ್ತದಲೆ || ಎವೆ ತೆಗೆದು ದಿಕ್ಕುಗಳು ನೋಡದೆ | ಅವನಿಗೆ ಬಾಗಿ ನಡೆಯುತ || ತವರು ಮನೆಯವರನು ಹಳಿದು | ನವÀನವ ಪ್ರಾವರ್ತನವನು ತೋರುತ || ಅವಗುಣಂಗಳಿಲ್ಲ ದೋಷಾದಲಿ | ಲವಕಾಲವನು ಕಳೆವ ನಾರಿಯ 1 ಪ್ರಾಯಾವಸ್ಥೆ ಬಂದು ಪ್ರಾಪ್ತವಾಗಲು | ಆಯುತಾಕ್ಷಿಗಳ ತಿರುಹಿ ಮೆಲ್ಲನೆ || ಬಾಯಲ್ಲಿ ಒಂದೊಂದು ಕ್ರಮಾಸಾರದಿ | ನೋಯ ನೋಯದಂತೆ ವಚನವ || ದಾಯಿಗಳಂತೆ ಮತ್ಸರಿಸಿ ಬಯ್ಯದೆ | ಮಾಯಾವಿ ಕಲ್ಪಿಸಿ ಮುಸಿಮುಸಿ ನಗೆ || ಆಯಕೆ ತಗಲಿ ಕಂಡ ಜನರಿಗೆ | ಘಾಯ ಕಾಣಿಸದಂತೆ ಮಾಳ್ಪಳ 2 ಅತ್ತೆ ಮಾವಗೆ ಅತ್ಯಂತವಾಗಿ ತಾನು | ಪ್ರತಿ ಉತ್ತರ ಪೇಳಲು ಅಂಜಿ ಅಂಜಿದಂತೆ || ಉತ್ತಮರ ಮನೋರಥವ ಕೆಡಿಸಿ | ಅತ್ತಿಗಿ ನಾದುನಿ ಮಿಗಿಲಾದವರೆಲ್ಲ || ಕತ್ತೆ ನಾಯಿ ನರಿಯೆಂಬೊ ಸೊಲ್ಲಲ್ಲಾದೆ | ಎತ್ತಲಾದರು ವಂಚಿಸಿ ಗಂಡನ್ನ || ತನ್ನಂತೆ ಮಾಡಿಕೊಂಡು ಹಗಲಿರುಳು ಥೈ- | ತಥ್ಥಾ ಎಂದಾಡಿಸಿ ಕುಣಿಸುವ ಸತಿಯಳ 3 ಕೊಂಡ ತೆರದಿ | ಪತಿಯ ಸಮಯ ನೋಡದೆ ತಾನು || ಸಥೆಯಿಂದಲಿ ಸಂಸಾರದೊಳಗಿದ್ದು | ಸುತರ ಪಡೆದು ಹಮ್ಮಿಲಿ || ಕಥನವೆಬ್ಬಿಸಿ ಗಂಡನ್ನ ಅಡವಿ | ಪಥವ ಹಿಡಿಸಿ ಹಣದಗೋಸುಗ || ಸತತ ಮನೆಯೊಳಗಿದ್ದ ಬದುಕು | ಮಿತಿಯಿಲ್ಲದೆ ಭಕ್ಷಿಸುವ ನಾರಿಯ 4 ಒಲಿಪಗೆ ನೀವು ಮೋಸಗೊಂಡು | ಒಲಿಯದಿರಿ ಸ್ತ್ರೀಯರಿಗೆ ಸೋತು || ಕಲಿಗೆ ಪ್ರಥಮ ಪಟ್ಟದ ಗದ್ದಿಗೆ | ಸುಲಭವಲ್ಲವೋ ಸುಖವಿಲ್ಲಾ || ಕೆಲಕಾಲ ಮಹಾ ಕಾತರದಿಂದಲಿ | ವಳಗಾಗದಿರು ಒಳಿತು ಪೇಳುವೆ || ಜಲಜಾಕ್ಷ ವಿಜಯವಿಠ್ಠಲನ್ನ ನಂಬಿರೋ | ನಂಬಿರೋ ನಂಬಿರೋ ಚತುರರು 5
--------------
ವಿಜಯದಾಸ
ಹುಟ್ಟಿ ಹುಟ್ಟಿ ಹೊಂದಲಾರೆನಯ್ಯ ಕೃಷ್ಣನೆ ುೀಕಷ್ಟವನ್ನು ಬಿಡಿಸಿ ಕಾಯಬೇಕು ಕೃಷ್ಣನೆ ಪಇಷ್ಟು ದಿವಸ ನಿನ್ನನರಿಯದಿದ್ದೆ ಕೃಷ್ಣನೆ ನೀನುದ್ಟೃುಟ್ಟು ಹುಟ್ಟದಂತೆ ಮಾಡು ಕೃಷ್ಣನೆಅ.ಪಗರ್ಭದೊಳು ನವಮಾಸ ಸಿಕ್ಕಿ ಕೃಷ್ಣನೆ ನೊಂದೆನರ್ಭಕತ್ವದಲ್ಲಿ ಮುಗ್ಧನಾದೆ ಕೃಷ್ಣನೆನಿರ್ಬಂಧವಾುತು ವಿದ್ಯದಲ್ಲಿ ಕೃಷ್ಣನೆ ಮತ್ತೆನಿರ್ಭರದ ಪ್ರಾಯದಲ್ಲಿ ಬೆರೆತೆ ಕೃಷ್ಣನೆ 1ಮದಗಳೆಂಟರಿಂದ ಮೈಯ ಮರೆತೆ ಕೃಷ್ಣನೆ ಬೇಗಹುದುಗಿ ಕ್ಲೇಶವೈದರಲ್ಲಿ ಬಿದ್ದೆ ಕೃಷ್ಣನೆವೊದಗಿ ಪಾಶವೆಂಟರಿಂದ ಬಿಗಿದೆ ಕೃಷ್ಣನೆ ಹಮ್ಮುಇದಕೆ ಮೂಲವಾುತು ಕರ್ಮದಿಂದ ಕೃಷ್ಣನೆ 2ಅರಿಗಳರುವರಿಂದ ಕೊರಗುತಿಹೆನು ಕೃಷ್ಣನೆ ಮುಂದನರಿಯದವರ ಸಂಗವನ್ನು ಮಾಡಿ ಕೃಷ್ಣನೆಉರುಳಿಬಿದ್ದೆ ವಿಷಯಕೂಪದಲ್ಲಿ ಕೃಷ್ಣನೆ ುದನುಪರಿವ ಶಕ್ತಿಯನ್ನು ಕಾಣೆನಯ್ಯ ಕೃಷ್ಣನೆ 3ಮಾಯಾಕಾರ್ಯ ದೇಹವೆನ್ನದೆಂದು ಕೃಷ್ಣನೆ ಅದುಹೇಯವೆಂದು ಕಾಣದಾದೆನಯ್ಯ ಕೃಷ್ಣನೆ ನೋಯದಂತೆ ಪೋಷಣೆಯ ಮಾಡಿ ಕೃಷ್ಣನೆ ುೀಗ ನೋಯಲಾಗಿ ಭಯವು ಜನಿಸಿತಯ್ಯ ಕೃಷ್ಣನೆ 4ಹರಿವ ನದಿಯ ನಡುವೆ ಪರ್ಣ ಸಿಕ್ಕಿ ಕೃಷ್ಣನೆ ಸುಳಿಯಬೆರಸಿ ತಡಿಯ ತಾನು ಸೇರದಂತೆ ಕೃಷ್ಣನೆಕುರುಡ ಕೂಪವರಿಯದುರುಳುವಂತೆ ಕೃಷ್ಣನೆ ಕಾಲಶರಧಿಯಲ್ಲಿ ಮುಳುಗಿ ನೆಲೆಯ ಕಾಣೆ ಕೃಷ್ಣನೆ 5ಇರುಹೆ ಕಡೆಯು ಬ್ರಹ್ಮನಾದಿಯಾಗಿ ಕೃಷ್ಣನೆ ಲೋಕಮರುಳುಗೊಂಡು ಮಾಯೆುಂದ ಮರುಗಿ ಕೃಷ್ಣನೆ ಕೊರಗುತಿದೆ; ಮಾಯೆಯನ್ನು ದಾಟಿ ಕೃಷ್ಣನೆ ಬೇಗಪರಮನೊಳು ಬೆರೆಸಿ ಕೊರಗ ಬಿಡಿಸು ಕೃಷ್ಣನೆ 6ರಜ್ಜು ಸರ್ಪನಾಗಿ ತೋರಿ ಬೆದರೆ ಕೃಷ್ಣನೆ ಅದರಬೆಜ್ಜರವ ಪರಿವ ಮಂತ್ರವುಂಟೆ ಕೃಷ್ಣನೆರಜ್ಜುವೆಂದು ತಿಳಿವುದೊಂದೆ ಮಂತ್ರ ಕೃಷ್ಣನೆ ಹಾಗೆರಜ್ಜು ಸ್ಥಾನ ನಿನ್ನ ನಿಜವ ತೋರು ಕೃಷ್ಣನೆ 7ಕರ್ಮವೆ ಜನ್ಮಕ್ಕೆ ಹೇತುವೆನಲು ಕೃಷ್ಣನೆ ಅಂದುಬ್ರಹ್ಮವತ್ಸಪಾಲರಪಹರಿಸೆ ಕೃಷ್ಣನೆಕರ್ಮವಿತ್ತೆ ಬದುಲ ನಿರ್ಮಿಸಲು ಕೃಷ್ಣನೆ ಹಾಗೆಕರ್ಮವೆನ್ನದೀಗಲೆನ್ನ ಸಲಹು ಕೃಷ್ಣನೆ 8ದುರಿತ ದುಃಖದಿಂದ ನೋವ ಜನರ ಕೃಷ್ಣನೆ ಅವರದುರಿತಗಳ ನೂಕಿ ನಿನ್ನೊಳಿರಿಸು ಕೃಷ್ಣನೆತಿರುಪತೀಶ ದೇವ ವೆಂಕಟೇಶ ಕೃಷ್ಣನೆ ಮಾಯಾತೆರೆಯ ತೆಗೆದು ನಿನ್ನ ನಿಜವ ತೋರು ಕೃಷ್ಣನೆ 9ಓಂ ಸತ್ಯಸಂಕಲ್ಪಾಯ ನಮಃ
--------------
ತಿಮ್ಮಪ್ಪದಾಸರು