ಒಟ್ಟು 18 ಕಡೆಗಳಲ್ಲಿ , 10 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವುದು ಸ್ಥಿರವೆಲೋ ಮನವೆ ಇದು ಮಾಯವು ಕಾಣೆಲೊ ಪ ಆವದು ಸ್ಥಿರವೆಲೋ ಮಾಯವಿದೆಲ್ಲವು ಭಾವದಿ ಕುದಿಯುತ ನೋಯುವಿ ಯಾಕೆಲೊ ಅ.ಪ ಅರ್ಥವೆಂಬುವುದೆಲ್ಲ ವ್ಯರ್ಥವು ಮೃತ್ಯು ತಿಳಿಯೆ ನಿಖಿಲ ಅರ್ತುವಿಚಾರಿಸು ಸಾರ್ಥಕವಾವುದು ಮರ್ತುಕೆಡದೆ ಭವನಿರ್ತದಿಂ ಗೆಲೆಯೆಲೊ 1 ಸತಿಸುತರಿವರೆಲ್ಲ ಹಿತವಿರಲತಿ ಸೇವಿಪರೆಲ್ಲ ಗತಿಸಲು ಭಾಗ್ಯವು ಹಿತದೋರಿದವರೇ ಅತಿಜರೆಯುತ ನಿನ್ನ ವ್ಯಥೆಯ ಬಡಿಪರೆಲೊ 2 ಒಂದಿನ್ಹೋಗ್ವುದಂತು ತಪ್ಪದು ನೋಯುವುದ್ಯಾಕಿಂತು ಇಂದು ನಾಳೆನ್ನದೆ ತಂದೆ ಶ್ರೀರಾಮನ ಬಂಧುರಂಘ್ರಿಗಳಿಗ್ಹೊಂದಿ ನೀ ಸುಖಿಯಾಗೊ 3
--------------
ರಾಮದಾಸರು
ಇನ್ನೆಲ್ಲಿತನಕ ಇವಗೆ ದುರ್ಬವಣೆ ಹರಿಯೆ ನಿನ್ನ ಉನ್ನತವಾದ ಮರೆಬಿದ್ದ ಬಳಿಕ ಪ ಮಂದಮತಿ ತೊಲಗದು ಕುಂದು ನಿಂದೆ ಅಳಿವಲ್ಲದು ಮಂದಿಮಕ್ಕಳ ಮೋಹವೊಂದು ಕಡಿವಲ್ಲದು ಸಿಂಧುಶಯನನೆ ಗೋವಿಂದ ನಿಮ್ಮ ಚರಣ ವೊಂದೆ ಮನದಲಿ ಭಜಿಸಾನಂದಪಡಿವಲ್ಲದು 1 ಮೋಸಮರವೆ ಹರಿವಲ್ಲದು ಆಶಪಾಶ ಬಿಡವಲ್ಲದು ಹೇಸಿ ಸಂಸಾರದ ದುರ್ವಾಸನೆಯು ಹಿಂಗದು ದೂಷಣೆಗೆ ನೋಯುವುದು ಭೂಷಣೆಗೆ ಹಿಗ್ಗುವುದು ದೋಷದೂರನೆ ನಿನ್ನ ಧ್ಯಾಸನಿಲ್ಲವಲ್ಲದು 2 ಕಪಟ ಮತ್ಸರಬುದ್ಧಿ ಚಪಲತನ ಅತಿಕ್ರೋಧ ಕಪಿಮನದ ಚೇಷ್ಟೆ ಅಪರೋಕ್ಷ ನಿಲ್ಲವಲ್ಲದು ಅಪ್ಪ ಶ್ರೀರಾಮ ನಿಮ್ಮ ಜಪತಪ ಸಿದ್ಧಿಸವಲ್ಲದು 3
--------------
ರಾಮದಾಸರು
ಎದ್ದರಾಳಲ್ಲೆಂದು ಬಿದ್ದಿರುವೆನೊ ನಾನು ಮಧ್ವರಮಣನೆ ದಯದಿ ಉದ್ಧರಿಸೆಲೊ ಪ ಏನು ಮಾಡಿದರೇನು ಮಾಡದಿದ್ದರೆ ಏನು ಕಾಣಲಾರೆನೊ ನೀನೆ ತಿಳಿಸಿ ಪೊರೆಯೊ ಕಾನನದಿ ತಿರುತಿರುಗಿ ತೊಳಲಿ ಬಳಲುತಲಿ ಬಲು ದೀನನಾದೆನೊ ಶಕುತಿಯುಕುತಿ ಹೋಗಿ1 ನುಡಿದೆ ನಾ ನೂರೆಂಟು ಅಡಿಯಿಡಲು ಬಲು ಕುಂಟು ಕಡೆಗಾಲದರಿವಾಗಿ ಬಳಲುತಿಹೆನೊ ಸಡಲಿತೆನ್ನಯ ದೇಹ ಸಿಡಿಯಿತೆನ್ನಯ ಮೋಹ ನಡೆಯಾಟವೆನಗಿನ್ನು ಸಾಧ್ಯವಿಲ್ಲವು ದೇವ 2 ಕೊಟ್ಟರೆ ಹೊಗಳುವರು ಕೊಡದಿರಲು ಬೊಗಳುವರು ಕೊಟ್ಟೆನ್ನ ಕರವೆರಡು ಬೆಂಡಾದವೊ ಸುಟ್ಟಿತೆನ್ನಯ ಕೋಪ ನಿಷ್ಠುರದಿ ಬೇಸತ್ತು ಇಷ್ಟು ಜೀವನ ಸಾಕೊ ಕೃಷ್ಣ ಮೂರುತಿಯೇ3 ಗುಣವಿಲ್ಲ ಧನವಿಲ್ಲ ತನುವಿಲ್ಲ ಮನವಿಲ್ಲ ಹೊಣೆ ಹೊರೆವುದೆಂತೆಂದು ಕೈ ಬಿಡದಿರೊ ತೃಣ ಗಿರಿಯನೊದೆಯುವುದು ಒನಕೆ ತಾ ಚಿಗುರುವುದು ವನಜನಾಭನೆ ನಿನ್ನ ಮನಕೆ ಬರಲು 4 ನಾನೇನು ಬಲ್ಲೆ ನಿನಗೇನು ರುಚಿಯೆಂಬುದನು ನಾನರಿತರೂ ನಿನಗೆ ಕೊಡಬಲ್ಲನೆ ನಾನೇಕೆ ಜನಿಸಿದೆನೋ ನೀ ಬಲ್ಲೆ ನಾನರಿಯೆ ಏನೆಂದು ಕೋರದೆಲೆ ಪೊರೆಯಬೇಕೊ 5 ಸಾಯುವರ ನೋಡಿ ಮನ ನೋಯುವುದು ಮೂರುಕ್ಷಣ ಮಾಯಾಪಾಶವು ಮುಸುರೆ ಮರೆವುದೆಲ್ಲ ಪ್ರಾಯದವನಂತೆ ಬಲು ಹೇಯ ಕೃತ್ಯಗಳಾಸೆ ನಾಯಿಬಾಲದ ಡೊಂಕು ತಿದ್ದಿ ಪೊರೆಯೊ 6 ನಂಬಿದವರೆಲ್ಲ ಬಲು ಸಂಭ್ರಮದಲಿರುವರೊ ಅಂಬಿಗನ ತೆರನಾದೆ ನದಿ ದಾಟಿಸಿ ತುಂಬಿರುವ ಮನದಾಸೆ ಹಂಬಲಿಕೆ ನೀಡಿ ತಿರಿ ದುಂಬುವನ ಕನಸಿನಂತಾದವೆನಗೆÀ7 ಇಂದು ನಾನಿಟ್ಟಿಲ್ಲ ಮುಂದೆ ಎನಗೇನು ಬೇಕೆಂದರಿಯೆನೊ ಹಿಂದಾದುದಂತಿರಲಿ ಇಂದಿರುವದಿರಲಿ ಮನ ಮಂದಿರದ ದಾನವರ್ಪಿಸುವೆ ನಿನಗೆ 8 ಮನೆಗೆ ತಾ ಯಜಮಾನ ಕೆಣಕೆ ಬದುಕುವರುಂಟೆ ಕುಣಿಯುತಿದ್ದರು ಜನರು ನುಡಿದ ತೆರದಿ ತನುಸಡಲಿ ಬೀಳಲದ ಕೊನೆಗಾಲವೆಂದರಿತು ಮನೆ ಹೊರಗೆ ಕಸದಂತೆ ಬಿಸುಡುವುದ ನೋಡಿ9 ತುಂಬು ಸಂಸಾರದಲಿ ಸಂಭ್ರಮವನೇಕಗಳು ಸಂಭ್ರಮದಿ ನಿನ್ನ ಹಂಬಲವೇತಕೆ ಕಂಬ ಸಡಲಿದ ಮನೆಯ ತೆರದಿ ದೇಹವು ಸಡಲೆ ಡೊಂಬನಾಟವನಾಡಿ ಚಂಬು ಪಿಡಿದಂತೆ 10 ಕೆಲಸವಿರುವಾಗ ಬಲು ಹೊಲಸು ನಿದ್ರೆಯ ಮಾಡಿ ಹೊಲಸು ವಿಷಯದಿ ಬಹಳ ಎಚ್ಚೆತ್ತೆನೊ ಕಲಿಯು ಕರೆದೌತಣವನಿತ್ತೆ ನಾ ಬಹುವಿಧದಿ ಬಲಿಕೊಡುವ ಕುರಿಯಂತೆ ಬಳಲುತಿರುವೆನೊ ದೇವ 11 ಮರೆವು ಜನತೆಗೆ ದೊಡ್ಡವರವೆಂದು ನೀ ಕೊಟ್ಟೆ ಗಿರಿಯಂಥ ಕಷ್ಟಗಳ ಮರೆಯಲಾಯ್ತೊ ಅರಿವು ಕೊಡದಂತೆ ನಾ ಮರೆತೆನೆಂಬಪರಾಧ ಸರಿತೂಗುವುದೆ ಇದಕೆ ಗುರಿ ಯಾರೊ ದೇವ 12 ಸಾಧು ಜನರಿರುವರೊ ಮೇಧಾವಿಗಳು ಇಹರೊ ಮಾದರಿಯ ಜೀವನವ ತೋರ್ಪರಿಹರೊ ಸಾಧುವಲ್ಲವೊ ನಾನು ಮೇಧಾವಿಯಲ್ಲ ಹೊಸ ಮಾದರಿಯ ತಿರುಕನೆಂದರಿತು ಪೊರೆಯೊ13 ಅರೆಕ್ಷಣವು ನಿನ್ನನು ಸ್ಮರಿಸಲಾರದ ಜನರು ಅರಮನೆಗಳಲ್ಲಿ ವಾಸಿಸುವುದೇಕೊ ಕರಚರಣವಿಲ್ಲದ ಕಪೋತಿಕ ನಿನ್ನಯ ನಾಮ ಕಿರಿಚುತಿರುವುದ ನೋಡಿ ಹರುಷವದೇಕೊ 14 ಗಿಣಿಯಂತೆ ರಾಮ ರಾಮ ಎಂದರೇನು ಫಲ ಫಣಿಯಂತೆ ಸಾಷ್ಟಾಂಗ ನಮಿಸಲೇನು ಋಣಿಯಂತೆ ಧನಿಕನಲ್ಲಿ ಹಲ್ಲುಗಳ ಕಿರಿದರೇನು ಮನವಿಟ್ಟು ಕೆಲಸ ಮಾಡುವುದರಿಯದೆ 15 ಮನಕೆ ಬಂದುದನೆಲ್ಲ ಮಾಡÀುವವರಿರುವರೊ ಮನಕೆ ಶಾಂತಿಯ ಮಾಡುವವರ ಕಾಣೆ ಕನಕವೆರಿಚಿದರಿಲ್ಲ ವನವ ಸೇರಿದರಿಲ್ಲ ಮನಮಂದಿರದಲಿ ನೀ ಇಣಿಕಿನೋಡುವ ತನಕ 16 ಲಂಚಗಳ ಕೊಟ್ಟು ಫಲಗಳ ಬೇಡುವವನಲ್ಲ ಸಂಚುಮಾಡಲು ಶಕುತಿ ಯುಕುತಿಯಿಲ್ಲ ವಂಚಕರ ಬಹುಮತ ಪ್ರಪಂಚದಲಿ ನೀನೊಬ್ಬ ಹೊಂಚು ಕಾಯುತಲಿರುವ ಎಂಬುದರಿತು 17 ರೈಲು ಬಂಡಿಗಳಲಿ ಐಲುಪೈಲುಗಳನ್ನು ಮೌಲ್ಯವಿಲ್ಲದೆ ಸಾಗಿಸುವುದನರಿತು ಕಾಲು ಕಣ್ಣೆಲ್ಲದ ಕಪೋತಿಯೊ ನಾನೊಂದು ಮೂಲೆಯಲಿ ಕುಳಿತು ಬರಲವಕಾಶವೀಯೊ 18 ನಿನ್ನ ಗುಣಗಳನರಿಯೆ ನಿನ್ನ ವರ್ಣಿಸಲರಿಯೆ ನಿನ್ನ ಸೇರಲು ಎನಗುಪಾಯವಿಲ್ಲ ಕನ್ನ ಕತ್ತರಿಯ ಕಾಣಿಕೆಯೊಂದೆ ಸಾಧ್ಯವೊ ಇನ್ನು ತಲೆ ಎತ್ತಿನೊ ಪ್ರಸನ್ನನಾಗುವ ತನಕ 19
--------------
ವಿದ್ಯಾಪ್ರಸನ್ನತೀರ್ಥರು
ಕಲಿಪುರುಷನಿಗತಿಹರುಷ ಬಲುಸಜ್ಜನಗಳುಬಾಯ್ಬಾಯ್ಬಿಡುವುದು ಪ ಅಲಕ್ಷ್ಮೀರಮಣ ಅಖಿಲ ದುರ್ಗುಣಂ ಗಳಕೊಟ್ಟೆಲ್ಲರ ಗಾಳಿಗೆ ತೂರುವೆ ಅ.ಪ ರಾವಣಾಸುರಗೆ ಮಗನೆನಿಸಿ ದೇವತೆಗಳ ಸೆರೆಯಲ್ಲಿಡಿಸಿ ಭಾವಜ್ಞರನು ನಿರಾಕರಿಸಿ ಸಭಾಸ್ಥಾನಗಳ ಭಂಗಪಡಿಸಿ ಬಹುದುಃಖ ಪಡಿಸಿ ಪಾಂಡುಕುಮಾರರ ಪಾವನಿಯಿಂತೊಡೆಯೊಡೆದು ಬೀಳುತ ಬಗೆಯ ನೆನದುಯೀಗೆಮ್ಮ ಬಾಧಿಸುವೆ 1 ಆಗಮಗಳು ಸುಳ್ಳೆಂಬುವದು | ನಾ ಯೋಗಿಯೆಂದು ಹಿಗ್ಗುತಲಿಹುದು ಭಾಗವರತ ನಿಂದನೆಗೈದು | ನಿರ್ ಭಾಗ್ಯತನ್ನತಾನೆ ಪೊಗಳುವದು ಸಾಗರದಂತಿಹ ದುರಾಸೆಯೊಳಗಾ ವಾಗಲು ಜನ ಮುಳುಗುತ ತಿಳಿಯದೆ ಹಾಗರ್ವದಿ ನಿಷ್ಫಲವ ಪೊಂದುವರಿದು 2 ನೀತಿ ತಪ್ಪಿತಾವ್ನಡೆಯುವುದು | ದು ರ್ಜಾತಿಗಳುತ್ತಮರೆಂಬುವದು ಆತುರದಲಿಮನವಳುಕುವುದು | ಬಲು ಘಾತಕತನದಲಿತಿರುಗುವದು ಗಾತುರಸುಖವೇ ಮೊಕ್ಷವೆಂದು ವಿಷ ಯಾತಿಶಯದಿಯರಿಷಡ್ವರ್ಗಗಳೊಳು ರಾತಿರಿಪಗಲೆನ್ನದೆ ಬೀಳ್ವುದುನಿ ನ್ನಾತಗಳಿಂಗೆ ಸ್ವಭಾವಗುಣಂಗಳು 3 ಕ್ಷಾಮಡಾಂಬರಗಳ್ಹೆಚ್ಚುವದು | ನಿ- ಷ್ಕಾಮರ ಹಾಸ್ಯವಮಾಡುವದು ಕಾಮದಿಜನಗಳ ಬಾಧಿಪದು ನಿಷ್ಕಾರಣರೋಗದಿ ಸಾಯುವದು ಪಾಮರರೆಲ್ಲರು ಪಂಡಿತರಾವೆಂ- ದೀಮಹಿಯೊಳುಮನಬಂದಂತೆಸದಾ ತಾಮಸಗಳಬೋಧಿಸುತಲಿಜಗದೊಳು ದ್ರವ್ಯಾರ್ಜನೆಮುಖ್ಯಸಾಧನವೆಂಬುದು 4 ವಿಪರೀತ ಫಲಗಳಾಗುವುದು ಚಪಲಹೊಂದಿಚಿಂತಿಸುತಿಹುದು ಜಪಹೋಮಗಳನು ತ್ಯಜಿಸುವದು ಬಲುಜಾಡ್ಯಂಗಳನನುಭವಿಸುವದು ಉಪಕಾರಗಳನುಮಾಳ್ಪರಲ್ಲಿ ಪ್ರ ತ್ಯಪಕಾರಗಳೆಣಿಸುತಲಾವಾಗಲು ಕಾಲಕಳೆಯುತ ವೃಥಾನೋಯುವದು 5 ಶೂದ್ರರುವೇದವ ಪಠಿಸುವದು | ನಿರು ಪದ್ರವನುದಂಡಿಸುತಿಹುದು | ಹರಿ ರುದ್ರವಿಧಿಗಳದೂಷಿಪದು | ಅ- ಬದ್ಧವೆಬಲುರುಚಿಯೆಂಬುವದು ಕ್ಷುದ್ರಕುನಾಸ್ತಿಕಮತವನಂಬಿ ದೇ- ವದ್ರೋಹಗಳನುಮಾಡುತ ಬಾಯಲಿ ಇದ್ದದ್ದಾದರುಯಿಲ್ಲೆಂಬುವದು6 ಪರರೊಡವೆಗಳಪಹರಿಸುವದು | ನೆರೆ- ಹೊರೆಯಂತಿರಬೇಕೆಂಬುವದು ಗುರುವಿನಲ್ಲಿ ದ್ವೇಷವೆಣಿಸುವದು | ಸತಿ- ಯರುಪತಿಯಲಿದ್ವೇಷಿಸುತಿಹುದು ನಿರತವುಜೀವನಕಿಲ್ಲೆಂದುಬಳಲಿ ದುರ್ವಿದ್ಯಗಳಭ್ಯಾಸಿಸಿಕಡೆಯಲಿ ನರಕಂಗಳಿಗೆ ಪ್ರಯಾಣಮಾಡುವದು7
--------------
ಗುರುರಾಮವಿಠಲ
ಕಾಯಬೇಕೆನ್ನ ಲಕುಮಿ | ಕಮಲಾಯತಾಕ್ಷಿ ಕಾಯಬೇಕೆನ್ನ ಲಕುಮಿ ಪ. ಕಾಯಬೇಕೆನ್ನ ನೋಯುವೆ ಭವದಲಿ ಕಾಯಜಪಿತನನು ಕಾಯದಿ ತೋರಿ ಅ.ಪ. ಕ್ಷೀರವಾರಿಧಿ ತನಯೆ | ಶ್ರೀ ಹರಿಯ ಜಾಯೆ ಪಾರುಗಾಣಿಸೆ ಜನನಿಯೆ ತೋರೆ ನಿನ್ನ ಪತಿಯ ಪಾದವ ಮನದೊಳು ಸೇರಿಸೆ ಸುಜನರ ಸಂಗದೊಳೀಗ1 ಮುಕ್ತಿದಾಯಕಿ ಸಿರಿಯೆ | ನೀ ಎನ್ನ ಕಾಯೆ ಮುಕ್ತಿಮಾರ್ಗವ ನೀನೀಯೆ ಶಕ್ತಿರೂಪೆ ನಿನ್ನ ಭಕ್ತಿಲಿ ಭಜಿಸುವೆ ಮುಕ್ತರೊಡೆಯನೊಳು ಭಕ್ತಿಯ ನೀಡೆ 2 ಅಷ್ಟಭುಜದ ಶಕ್ತಿಯೆ | ಶ್ರೀ ಭೂಮಿ ದುರ್ಗೆ ಅಷ್ಟ ಐಶ್ವರ್ಯದಾಯಿನಿಯೆ ಶ್ರೇಷ್ಠ ಶ್ರೀಗೋಪಾಲಕೃಷ್ಣವಿಠ್ಠಲನೊಳು ಪಟ್ಟವಾಳ್ವೆ ಜಗಸೃಷ್ಟಿ ಪ್ರಳಯದಿ 3
--------------
ಅಂಬಾಬಾಯಿ
ಕೀಳು ಮನವೆ ಏನುಕೆಟ್ಟೆಲೋ ಹಾಳು ಮಾಡಿದಿ ದಿನಗಳ ಪ ನೀಲಮೇಘಶ್ಯಾಮ ಹರಿಪಾದ ಶೀಲಭಕ್ತಿಲಿ ಸ್ಮರಿಸದೆ ಅ.ಪ ಬಾಲತನದ ಸುಶೀಲ ದಿನಗಳ ಜಾಳುಗೈದೆಲೋ ಆಟದಿ ನಾಳೆ ಕಾಲನು ಸೀಳಿ ಕೊಲುವಾಗ ತಾಳಿ ಬಾಳುವುದೆಂತೆಲೊ 1 ಪ್ರಾಯದಿನಗಳ ಕಾಯಜನ ಮಹ ಮಾಯದಾಟದಿ ನೀಗಿದ್ಯೊ ಮಾಯಮೃತಿಯ ಬಾಯೊಳು ಸಿಲ್ಕಿ ನೋಯುವಾಗ ಕಾಯ್ವರಾರೆಲೊ 2 ಇಷ್ಟಕ್ಕಾದರೂ ಕೆಟ್ಟಗುಣಗಳ ಬಿಟ್ಟು ಶ್ರೀರಾಮಪಾದವ ನಿಷ್ಠೆಯಿಂ ಮನಮುಟ್ಟಿ ಭಜಿಸಲೆ ದುಷ್ಟಭವದಿಂ ಗೆಲಿಸುವ 3
--------------
ರಾಮದಾಸರು
ಜನಿಸಿ ನಾ ಬುವಿಯೊಳು ನಿನಗೆ ದುಡಿಯುವುದಾಯ್ತು ಎನಗೇನುಫಲ ಪೇಳು ಮಾಯವೆ ಎಲೆ ಜೀವವೆ ಪ ನಿನಗೆ ನೀ ದುಡಿಯುವಿ ಎನಗೆ ದುಡಿಯುವುದೇನು ದಿನಸರಿಯದೆನುವುದು ನ್ಯಾಯವೆ ಎಲೆ ಕಾಯವೆ ಅ.ಪ ಘನರೋಗ ತಾಪತ್ರವನುಭವಿಸುವುದೆಲ್ಲ ನಿನಗಾಗಲ್ಲೇನು ಪೇಳು ಮಾಯವೆ ಎಲೆ ಜೀವವೆ ನಿನಗೆ ಬಂದ ಕರ್ಮವನುಭವಿಪೆಯಲ್ಲದೆ ಎನಗಾಗೆನುವುದು ನಿಜನ್ಯಾಯವೆ ಎಲೆ ಕಾಯವೆ 1 ಬನ್ನ ಬಡುವೆನಲ್ಲ ಕರ್ಮ ಮಾಯವೆ ಎಲೆ ಜೀವವೆ ಎನ್ನ ಜೋಪಾನವು ನಿನ್ನಿಂದಲೆಂಬುವುದು ಮಣ್ಣುಗೊಂಬೆ ನಿನಗೆ ನ್ಯಾಯವೆ ಎಲೆ ಕಾಯವೆ 2 ಚಳಿಮಳೆಬಿಸಿಲಿನ ಬಲುತಾಪದಲಿ ನಿನ್ನ ಸಲಹುವರಾರ್ಹೇಳು ಮಾಯವೆ ಎಲೆ ಜೀವವೆ ಚಳಿಮಳೆಬಿಸಿಲಿನ ಬಲುತಾಪ ಎನಗೆಲ್ಲಿ ಎಲುವಿನ್ಹಂದರ ನಿಂದೀನ್ಯಾಯವೆ ಎಲೆ ಕಾಯವೆ 3 ಭಿನ್ನ ಮಾತುಗಳೇನೋ ಮಾಯವೆ ಎಲೆ ಜೀವವೆ ನಿನ್ನದು ದಾವೂರು ನನ್ನದು ದಾವೂರು ಎನ್ನ ಸರಿಗಟ್ಟುವುದು ನ್ಯಾಯವೆ ಎಲೆ ಕಾಯವೆ 4 ನಾನಿಲ್ಲದಿರೆ ನಿನ್ನ ಖೂನವರಿವರಾರು ನೀನೆ ಪೇಳೆಲೋ ನಿಜ ಮಾಯವೆ ಎಲೆ ಜೀವವೆ ಹೀನನೆ ನೀನೆನ್ನ ಖೂನವರಿಯದೆ ಬಿನಗು ಶ್ವಾನನಂತೊದರುವುದು ನ್ಯಾಯವೆ ಎಲೆ ಕಾಯವೆ 5 ಹೊನ್ನೂ ಹೆಣ್ಣು ಮಣ್ಣು ಎನ್ನಿಂದ ಪಡೆದು ನೀ ಧನ್ಯನೆನಿಸುವೆಯಲ್ಲ ಮಾಯವೆ ಎಲೆ ಜೀವವೆ ನಿನ್ನಗದರ ಫಲ ಎನ್ನಗೇನೆಲೆ ಪಾಪಿ ನಿನ್ನ ಮೋಹಿಸಿ ನಾನು ಕೆಡುವೆ ಎಲೆ ಕಾಯವೆ 6 ಎನ್ನಿಂದ ಕೆಡುವೆನೆಂಬನ್ಯವಾದವು ಬೇಡ ನಿನ್ನದೆಲ್ಲವ ಬಲ್ಲೆ ಮಾಯವೆ ಎಲೆ ಜೀವವೆ ಬನ್ನ ಬಡುವೆ ಸತತ ಎನ್ನನರಿವುದು ನಿನ್ನಗಳವೇ ಎಲೆ ಕಾಯವೆ 7 ಹೇವನಿನಗ್ಯಾಕಿಷ್ಟು ಸಾವುತ್ಹುಟ್ಟುತ ನೀನು ನೋಯುವುದ ಬಲ್ಲೆ ನಾ ಮಾಯವೆ ಎಲೆ ಜೀವವೆ ಹೇವದಮಾತಲ್ಲ ಸಾವುಹುಟ್ಟೆನಗಿಲ್ಲ ಕೇವಲನಾದಿಕಾಲದಿರುವೆ ಎಲೆ ಕಾಯವೆ 8 ಕೇವಲನಾದಿಯು ಜೀವ ನೀನಾದರೆ ದೇವರೆ ನೀನಿದ್ದಿ ಮಾಯವೆ ಎಲೆ ಜೀವವೆ ದೇವರು ನಾನಲ್ಲ ದೇವ ಶ್ರೀರಾಮನ ಕೇವಲದಾಸ ನಾನಿರುವೆ ಎಲೆ ಕಾಯವೆ 9
--------------
ರಾಮದಾಸರು
ಜೋ ಜೋ ರಂಗಯ್ಯ ಜೋ ಜೋ ಕೃಷ್ಣಯ್ಯ ಮಲಗಯ್ಯ ಜೋ ಜೋ ಪ ಕಣ್ಣೇಕೆ ನೀನು ಮುಚ್ಚಲೊಲ್ಲೆಯೊ ರಂಗ ಬೆನ್ನು ಭಾರವಾಗಿರುವುದೇನೋ ದೇವ ಮಣ್ಣಿನೊಳು ನೀನಾಡಿ ಮೈ ನೋಯುವುದೇನೊ ಹೊನ್ನು ಕಶಿಪುವಿನ ಕರುಳ ಕಂಡಂಜಿದೆಯೇನೊ 1 ಚಿಣ್ಣ ನೀ ಧರೆಯನಳೆಯಲೇತಕೆ ಪೋದೆ ಗಣ್ಡುಗೊಡಲಿ ಪಿಡಿದು ಕೈಯಿ ಉಳುಕಿಹುದೇನೊ ಅನ್ನವ ಬಿಟ್ಟು ನೀ ಪರ್ನವೇತಕೆ ತಿಂದೆ ಬೆಣ್ಣೆಯ ಮೆದ್ದು ನಿನ ಹೊಟ್ಟೆ ನೊಯ್ಯುವದೇನೊ 2 ಬತ್ತಲೆ ತಿರುಗಿ ಮೈ ಬಿಸಿಯಾಗಿರುವದೇನೊ ಕತ್ತಿಯ ಪಿಡಿದು ತೇಜಿಯ ಹತ್ತಬೇಕೇನೊ ಹೊತ್ತಾಯ್ತು ಕಂದಯ್ಯ ಮಲಗೆಂದು ಯಶೋದೆ ಮುತ್ತಿಟ್ಟು ತೂಗಿದಳು ರಂಗೇಶವಿಠಲನ 3
--------------
ರಂಗೇಶವಿಠಲದಾಸರು
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ಪ್ರಾಣೇಶನೆನ್ನೊಳಗೆ ಕೇಣವಾಂತಿಹನೇಕೆ ಗೋಣಬಿಗಿವಂತಾಗೆ ನಾಣದೇಕೆ ಇಲ್ಲದುದನಿವನೊಳಾಂ ಸೊಲ್ಲಿಸಿದೆನೇನಮ್ಮ ಕಲ್ಲೆದೆಯಿದೇವೆಳ್ವೆ ನಲ್ಲನಿವಗೆ ಕಂಡಸುದ್ದಿಯ ಪೇಳೆ ಕೆಂಡದಂತಾಗುವರೆ ಕಂಡುದಿಲ್ಲಕ್ಕಟೀ ಭಂಡತನವ ನ್ಯಾಯವನು ಸೂಚಿಸಲು ನೋಯುವಂತಾಡುವರೆ ಜಾಯೆಯೊಳಗೀತೆರದನ್ಯಾಯಮರರೆ ಕಪಟನಾಟಕ ಸೂತ್ರಧಾರನಿವನೆ ಸುಪವಿತ್ರ ಕೇಳೆನ್ನ ಪ್ರಾಣಸಖನೆ ತಪನವಂಶಾಬ್ಧಿ ರಾಕೇಂದುವಿವನೆ ವಿಪುಲ ಶೇಷಾದ್ರೀಶನೆನಿಪ ವರನೆ
--------------
ನಂಜನಗೂಡು ತಿರುಮಲಾಂಬಾ
ಬೇಗನೆ ಕರೆತಾರೇ ಸಖಿಯೇ [ಬೆಗನೆಕರೆತಾರೆ] ಪ ನಾಗಶಯನನವ ಕೂಗದೆ ಬಾರನೆ ಅ.ಪ ಪೂತನಿ ಶಿಶುಗಳ ಫಾತಿಸುತಿಹಳೆಂಬ ಮಾತನವಗೆ ಪೇಳೆ ಭೀತಿಯತೋರಿ ಆತುರದಿಂದವ ಐತರುವನೆ ಸಖಿ ಪ್ರೀತಿಯೊಳೀವೆನೀ ರತುನದ ಹಾರವ 1 ಕರಿ ಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಮೊರೆಯಿಡುವುದ ಹೇಳೆ ಭರದಲಿ ಬರುವ ಉರಗನ ಗರಳದಿ ಕರುತುರು ನೋಯುವ ಪರಿಯ ಬಿತ್ತರಿಸಿ | ಮುರಳೀಧರಗೆ 2 ಸಂಗಡ ಬರದಿರೆ ಭಂಗಿಸುವರು ಗೋ ಪಾಂಗನೆಯರು ಎಂದು ರಂಗಗೆ ಹೇಳೇ ಇಂಗಿತಜ್ಞನು ನಮ್ಮ ಮಾಂಗಿರಿಯರಸನು ಸಂಗಡ ಬರುವನು ಸಂದೇಹವಿಲ್ಲ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಂದಮತಿಯೇ ಮಾನವಾ ಪ ಹಿಂದೊ ಮುಂದೊ ಎಂದು ಯೋಚಿಸದಿರು ಅ.ಪ ಸತತವು ಲಕ್ಷ್ಮೀಪತಿಯ ಭಜಿಸು 1 ಭಾವದಿ ತಿಳಿದತಿಭಕ್ತಿಯೊಳಿರು 2 ಈ ಚರಾಚರಕು ಗೋಚರಿಸುವ ಕಂಜ- ಲೋಚನನೆಂದು ನಿನ್ನ ನಾಚಿಕೆ ಬಿಡು 3 ಕೊರಳು ನೋಯುವಂತೆ ಕೂಗುತಲಿರು 4 ಪರದಲಿ ಮುಕ್ತಿಯು ಇಹದಲಿ ಸೌಖ್ಯವು ಗುರುರಾಮವಿಠಲನೆ ಕರುಣಿಸುವನು 5
--------------
ಗುರುರಾಮವಿಠಲ
ವಾಯು ದೇವರು - ಹನುಮಂತ ಭವ ಪ ದಂಜಿಕೆ ಬಿಡಿಸು ಬೇಗ ಸಂಜೀವರಾಯನೆ ಅ.ಪ. ನೋಯುವೆ ನಾ ಸಂಸಾರದೊಳ್ ಕೈಯಪಿಡಿದೆತ್ತುವರಾರೈ 1 ಗುರುವರೇಣ್ಯ ತವ ಪಾದಪಂ ನೆರಲಿನೊಳಗಿಟ್ಟುಯನ್ನನು 2 ಕ್ಷೇಮದಾತನೇ ಶ್ರೀ ಗುರು ಭೂಮಿಜಾಶೋಕನಾಶನ 3
--------------
ಗುರುರಾಮವಿಠಲ
ಸುಲಿದ ಬಾಳೆ ಹಣ್ಣು ಸುಟ್ಟು ತಿನ್ನಬೇಡಿರೊ ಹಳೆಯ ಜನರ ಅನುಭವಗಳ ಹಳಿಯಬೇಡಿರೊ ಬಿಳಿಯ ವಸ್ತುವೆಲ್ಲ ಕ್ಷೀರವಲ್ಲ ಕಾಣಿರೊ ಥಳಥಳಿಸುವುದೆಲ್ಲ ರಜತವಲ್ಲ ಕಾಣಿರೊ ಸಿರಿಯು ಬಂದ ಕಾಲದಲ್ಲಿ ಮೆರೆಯಬೇಡವೋ ಶಿರವು ಗಟ್ಟಿಯೆಂದು ಕಂಬ ಗುದ್ದಬೇಡವೊ ಮನಕೆ ತುಷ್ಟಿಕೊಡದ ಕಾರ್ಯಗಣನೆ ಬೇಡವೊ ಅನುವಿನಲ್ಲಿ ಪಿಡಿದ ಕಾರ್ಯ ಕೊನೆಯಗಾಣಿಸೊ ಹಾವು ಕೊಂದು ಹದ್ದುಗಳಿಗೆ ಹಾಕಬೇಡವೊ ಗೋವು ಕೊಂದು ಪಾದರಕ್ಷೆ ದಾನಬೇಡವೊ 10 ಅರಿಯದ ಜನರಲ್ಲಿ ಅಂತರಂಗಬೇಡವೊ ಪರರ ಗೋಪ್ಯ ತಿಳಿದರೆ ಬಹಿರಂಗಬೇಡವೊ ಜಂಭ ಕೊಚ್ಚಬೇಡವೊ ರಗಳೆ ರಂಪದಿಂದ ಪರರ ಒಲಿಸಬೇಡವೊ ಗೆದ್ದರಾ ಎತ್ತು ಬಾಲವನ್ನು ಹಿಡಿಯಬೇಡವೊ ಒದ್ದರೆ ಅದು ಹಲ್ಲುಗಳನು ಕಿರಿಯಬೇಡವೊ ಮೂರ್ಖ ಜನಗಳಲ್ಲಿ ವಾದ ಮಾಡಬೇಡವೊ ಮಕ್ಕಳೆದುರಿನಲ್ಲಿ ಗ್ರಾಮ್ಯವಚನ ಬೇಡವೊ ಬಳಿಕ ಮಾತನಾಡುವನು ಗೆಳೆಯನಲ್ಲಯ್ಯ ಕುಳಿತು ತಿನ್ನುವವನು ಸಾಹುಕಾರನಲ್ಲಯ್ಯ 20 ಗಂಟು ಜಗಳ ಕದನಗಳಲಿ ತಂಟೆಬೇಡಯ್ಯ ನಂಟರಿಷ್ಟರಲ್ಲಿ ಭಂಟನಾಗಬೇಡಯ್ಯ ನಾಕು ಜನರ ಮಾತ ಮೀರಿ ನಡೆಯಬೇಡÀಯ್ಯ ಪೋಕರಿ ಜನಗಳಲಿ ಮೂಕ ಬದಿರನಂತಿರೊ ಕಾಲದಲ್ಲಿ ಕೆಲಸಮಾಡಿ ಮುಗಿಸೆಲೊ ನಾಳೆ ನಾಳೆಯೆಂಬ ಕೆಲಸ ಹಾಳು ಕಾಣಿರೊ ಬಿಂಕದಿಂದ ಹರಿಗುರುಗಳ ಮರೆಯಬೇಡಯ್ಯ ಸಂಕಟ ಬಂದಾಗ ವೆಂಕಟೇಶ ಬರುವನೆ ಸಾಲ ಸೋಲ ಮಾಡಿ ದಾನ ಧರ್ಮ ಬೇಡಯ್ಯ ಕೇಳದಿರಲು ನೀತಿ ಹೇಳ ಹೋಗಬೇಡಯ್ಯ 31 ಪರರು ನೋಯುವಂಥ ಮಾತನಾಡಬೇಡಯ್ಯ ಉರಿವ ಒಲೆಗೆ ಉಪ್ಪುಕಾಳನೆರಚಬೇಡಯ್ಯ ನೆರೆಯು ಬಾಳುತಿರಲು ನೋಡಿ ಕರಗಬೇಡಯ್ಯ ಬರಿದೆ ಅಯ್ಯೊ ಪಾಪವೆನಲು ಮರುಕವಲ್ಲವೊ ದುರುಳ ಜನಗಳಲ್ಲಿ ಸರಳನಾಗಬೇಡಯ್ಯ ಹರಿಯ ಭಜನೆಯಲ್ಲಿ ಮನದಿ ನಾಚಬೇಡವೊ ತಿರುಕನಂತೆ ಜ್ಞಾನದ ಭಿಕ್ಷೆಯನು ಬೇಡೆಲೊ ತುರುಕನಂತೆ ಕಾಮದ ತಲೆ ಬಡಿದು ಜೀವಿಸೊ ಸಜ್ಜನಗಳು ಸಮ್ಮತಿಸುವ ಮಾರ್ಗದಲಿ ನಡಿ ದುರ್ಜನಗಳು ಪೇಳಿ ತೋರಿದೆಲ್ಲವನು ಬಿಡಿ40 ಫಲದ ಚಿಂತೆಯಿಲ್ಲದಂತೆ ಧರ್ಮಗಳಿಸಿರೊ ಫಲವು ಹರಿಯಧೀನ ಕೆಲಸ ಮಾತ್ರ ನಿನ್ನದೊ ಧ್ಯಾನ ಮಾಡದಿರಲೊ ಮನದಿ ದುಷ್ಟ ವಿಷಯದ ಧ್ಯಾನದಿಂದ ವಿಷಯದಲ್ಲಿ ಸಂಗ ಬರುವುದೊ ಸಂಗದಿಂದ ದುಷ್ಟಭೋಗ ಕಾಮ ಬರುವುದೊ ಭಂಗವಾದ ಕಾಮದಿಂದ ಕೋಪ ಬರುವುದೊ ಕೋಪದಿಂದ ಮನದಲಿ ವ್ಯಾಮೋಹ ಬರುವುದೊ ಈ ಪರಿಮೋಹದಲಿ ಸ್ಮರಣೆ ನಾಶಪಡುವುದು ಸ್ಮøತಿಯು ತಪ್ಪಿದವನ ಬುದ್ಧಿಮೃತಿಯು ಪೊಂದಲು ಕ್ಷಿತಿಯೊಳವಗೆ ಸರ್ವನಾಶವೆಂದು ನುಡಿಯಿದೆ 50 ಜ್ಞಾನಕೆ ಸಮ ಸಂಪತ್ತಿಲ್ಲ ಜನಕೆ ಲೋಕದಿ ಮೌನಕೆ ಸಮ ಗುಹ್ಯಕೆ ಪಾಲಕರಿಲ್ಲವೊ ಜ್ಞಾನ ಸರ್ವಕರ್ಮಗಳನು ದಹಿಸಿಬಿಡುವುದೊ ಜ್ಞಾನದಿಂದ ಪರಮಶಾಂತಿ ಪಡೆಯುಬಹುದೆಲೊ ಚಿರತನ ವರ್ಣಾಶ್ರಮಗಳ ಧರ್ಮ ಬಿಡದಿರೊ ಮಿತಿಯ ಮೀರಿ ಭೋಜನವನು ಮಾಡಬೇಡವೊ ಕಾಲ ಕಳೆಯಬೇಡವೊ ಲೋಕವ ಭಯಪಡಿಸಬೇಡ ನಡೆನುಡಿಗಳಲಿ ಲೋಕಕೆ ಭಯಪಡಲಿಬೇಡ ಧರ್ಮ ಪಥದಲಿ 60 ಶತುಮಿತ್ರರಲ್ಲಿ ಒಂದೆ ಭಾವ ಪಡೆಯೆಲೊ ಸ್ತೋತ್ರ ನಿಂದೆಗಳಿಗೆ ಹಿಗ್ಗಿ ಕುಂದಬೇಡವೊ ಭಕ್ತಜನರ ನಡೆನುಡಿಗಳ ನಿಂದಿಸದಿರೆಲೊ ಯುಕ್ತರವರು ಹಿರಿಯ ದಯಕೆ ಪಾತ್ರರಿವರೊ ಜಗವು ಸತ್ಯ ಬಗೆ ಬಗೆಯಲಿ ಸೊಗಸ ನೋಡೆಲೊ ಜಗಕೆ ಕರ್ತನೋರ್ವಗೆ ಕೈ ಮುಗಿದು ಬೇಡೆಲೊ ದೇಶಕಾಲ ಪಾತ್ರವರಿತು ದಾನ ಮಾಡೆಲೊ ಆಸೆ ಮೋಸಗಳಿಗೆ ಮನವ ಲೇಸು ಕೊಡದಿರೊ ಪರರ ಮನವು ಕೆದರದಂತೆ ನಿಜಹಿತ ನುಡಿಯು ಗುರುತರ ವಾಚನಿಕ ತಪವ ಮರೆಯಬೇಡವೊ 70 ಸರ್ವಕರ್ಮ ಫಲಗಳನ್ನು ಬಿಡುವನೆ ಯತಿಯು ಗರ್ವಮತ್ಸರಾದಿಗಳನು ಬಿಡುವುದೆ ಮತಿಯು ಶರಣು ಹೊಡೆಯೊ ಕರುಣಮಯನ ಚರಣಯುಗಳದಿ ಕರಗತವಾಗುವುದು ನಿನಗೆ ಇಹಪರ ಸುಖವು ಮಮತೆ ಬಿಟ್ಟು ಜಗದಿ ತಗಲಿ ತಗಲದೆ ಇರೆಲೊ ಕಮಲಪತ್ರಗಳಲಿ ಜಲದ ಕಣಗಳ ತೆರದಿ ಶುದ್ಧ ಧರ್ಮಲೇಶವು ತಲೆ ಕಾಯಬಲ್ಲದೊ ಪದ್ಮನಾಭ ಜನರ ಚಿತ್ತಶುದ್ಧಿ ನೋಡುವ ನಾನೆ ಬ್ರಹ್ಮನೆಂಬ ವಾದ ಬಾಳಬಲ್ಲದೆ ತಾನೆ ಬೀಳಲಿರುವ ಮರಕೆ ಕೊಡಲಿ ಏತಕೆ 80 ಜ್ಞಾನತೀರ್ಥಗಳಲಿ ಮುಳುಗಿ ಸ್ನಾನ ಮಾಡೆಲೊ ಜ್ಞಾನಕೆ ಜ್ಯೋತಿಗಳ ಬೆಳಕು ಕಾಣುತಿರುವುದೊ ದಾರುಣ ಸಂಸಾರ ಜಲದಿ ಪಾರುಗಾಣಲು ಧೀರನಾಗಿ ಈಜುವವಗೆ ತಾರಣ ಸುಲಭ ತಲೆಯ ಮೇಲೆ ಕೈಯನಿಟ್ಟು ಕೂಡ ಬೇಡವೊ ಬೆಳಸಿದಂತೆ ತರುಲತೆಗಳು ಫಲಕೊಡುವುದೊ ಮುಂದೆ ಇಟ್ಟ ಹೆಜ್ಜೆಗಳನು ಹಿಂದೆಗೆಯದಿರೊ ಮಂದಿಗಳಿಗೆ ಫಲದಲಿ ಸಂದೇಹ ಬೇಡವೊ ಹುಳಿಯ ರಕ್ತವಿರುವತನಕ ತಲೆಯು ಬಾಗದು ಕಾಲ ಸಾಲದೊ 90 ಪರರ ನುಡಿಗಳನ್ನು ಕದ್ದು ಕೇಳಬೇಡವೊ ಅರಿತು ನಿನ್ನ ಹರಿಯು ಗುದ್ದಿ ಬುದ್ಧಿ ಕಲಿಸುವ ಚಾಡಿಯಾಡ ಬೇಡ ಚಾಡಿ ಕೇಳಬೇಡವೊ ಸೇಡನು ತೀರಿಸುವ ಹೇಡಿಯಾಗಬೇಡವೊ ನಿನ್ನ ಮಾನದಂತೆ ಪರರ ಮಾನವೆಂದರಿಯೆಲೊ ಅನ್ನ ಹಾಕುವವರ ಹರಿಸಿ ಘನ್ನವೆನಿಸೆಲೊ ಕುಲವ ಶೋಧಿಸುತಲಿ ಕನ್ಯೆದಾನ ಮಾಡೆಲೊ ತಲೆಯ ಕ್ರಾಪು ಯೋಗ್ಯತೆಗೆ ಪ್ರಮಾಣವಲ್ಲವೊ ಕರವ ಪಿಡಿಯೆಲೊ ಥಳಕು ಬೆಳಕು ನೋಡಿ ಬಲೆಗೆ ಬೀಳ ಬೇಡವೊ 100 ಗಾಳಿಯು ಬಂದಾಗ ಬೇಗ ತೂರಿ ಕೊಳ್ಳಲೊ ಕಾಲದ ಸ್ಥಿತಿಯರಿತು ತಗ್ಗಿ ಬಗ್ಗಿ ನಡೆಯೆಲೊ ಮೇಲಿನ ದರ್ಜೆಯಲಿ ನಡೆದು ಕೇಳಬೇಡವೊ ನಾಲಗೆ ಚೆನ್ನಿರುವ ನರಗೆ ಜಗಳವಿಲ್ಲವೊ ಇರುಳು ಕಂಡ ಬಾವಿಗೆ ನೀ ಉರುಳಬೇಡವೊ ಶಕ್ತಿ ಇರುವ ಕಾಲದಲ್ಲಿ ಉತ್ತಮನೆನಿಸೊ ಶಕ್ತಿಯಲ್ಲಿದಾಗ ಇದ್ದು ಸತ್ತ ಪ್ರಾಯವೊ ಸ್ವೊತ್ತಮ ಜನರಲ್ಲಿ ನಿಯತ ಭಕ್ತಿ ಮಾಡೆಲೊ ಭಕ್ತಿಯಿಲ್ಲದವಗೆ ಮುಕ್ತಿಯಿಲ್ಲ ಕಾಣಿರೊ 110 ಪಾಪಿಯಾಗಬೇಡ ಇತರ ಜನರ ವಂಚಿಸಿ ಕೋಪ ಮಾಡಬೇಡ ಕೊಟ್ಟ ಋಣವ ಕೇಳಲು ಕೂಪ ಕೂರ್ಮದಂತೆ ಜಗವ ನೋಡಬೇಡವೊ ರೂಪುರಂಗುಗಳಿಗೆ ಮನವ ಸೋಲಬೇಡವೊ ಹಡೆದ ಮಕ್ಕಳುಗಳ ಕಾಲದಲ್ಲಿ ತಿದ್ದೆಲೊ ಗಿಡದಲಿ ಬಗ್ಗಿಸದ ಮರವು ಬಗ್ಗಲಾರದೊ ಕೊಡಲಿಯನ್ನು ಸೇರಿ ಮರದ ಕಾವಿನಂದದಿ ನಡತೆ ಕಲಿಸದಿದ್ದರವರು ಬುಡಕೆ ತರುವರೊ ಗಳಿಸಿದವನ ಧನವು ಬಳಸಿದವನಿಗೆಂದರಿಯೆಲೊ ಬಳಸಲು ನೀತಿಯಲಿ ಧನವ ಗಳಿಸಿ ಸುಖಿಸೆಲೊ 120 ತಿಳಿದು ಮರ್ಮ ಕಲಿ ಪುರುಷನ ನೆಲಕೆ ತುಳಿಯಿರಿ ಗುಹ್ಯ ತತ್ವ ಪೇಳಬೇಡವೊ ನಾಯಿಗಳಿಗೆ ಹವ್ಯದಾನ ಮಾಡಬೇಡವೊ ಕಾಯುವ ಗುರುಚರಣವೆ ಬಲುಶ್ರೇಯವೆನ್ನದೆ ಕರ್ಮ ಸುಡುವುದೆ ಉಣಲು ಬದುಕಬೇಡ ಜಗದಿ ಬದುಕಲು ಉಣೆಲೊ ಜನನ ಮರಣ ನಿಯತ ಕಾಲಗಳಲಿ ಬರುವವೊ ಕೊನೆ ಮೊದಲುಗಳಿಲ್ಲವು ಈ ಜಗಪ್ರವಾಹಕೆ ತನಗೆ ತಾನೆ ಬೀಳದು ಜಗದಾಖ್ಯ ವೃಕ್ಷವು 130 ತಾಳಿದವನು ಬಾಳುವನೆಂದರಿತು ನಡೆಯೆಲೊ ಗಾಳಿಗುದ್ದಿ ಕರಗಳನ್ನು ನೋಯಿಸದಿರೆಲೊ ಬಾಲನೆಂದು ಅರಿತು ಸತತ ಜ್ಞಾನವ ಗಳಿಸೆಲೊ ನಾಳೆಯ ದಿನ ನಂಬದಂತೆ ಧರ್ಮಗಳಿಸೆಲೊ ಹರಿಯುಕೊಟ್ಟ ಕಾಲದಲ್ಲಿ ಪರರ ರಕ್ಷಿಸೊ ಹರಿಯು ಕೊಡದ ಕಾಲದಲ್ಲಿ ಹರುಷ ಬಿಡದಿರೊ ದೂಷಕರನು ಎಂದಿಗು ನೀ ದ್ವೇಷಿಸದಿರೆಲೊ ಹೇಸಿಗೆಯನು ನಾಲಿಗೆಯಲಿ ತೆಗೆದುಬಿಡುವರೊ ಹಳ್ಳಕೆ ಬಿದ್ದವನಮೇಲೆ ಕಲ್ಲೆಸೆಯದಿರೊ ಟೊಳ್ಳು ಹರಟೆಗಾರನೆದರು ನಿಲ್ಲ ಬೇಡವೊ 140 ಒಳ್ಳೆಯ ಫಲಕೊಡುವ ಕಾರ್ಯಗಳು ಚಿಂತಿಸೊ ಜಳ್ಳು ಹುಲ್ಲಿಗಾಗಿ ಬೆವರು ಸುರಿಸಬೇಡವೊ ಬಿಂದು ಬಿಂದು ಸೇರಿ ಸಿಂಧುವಾಯಿತೊ ಹಿಂದಿನ ಮೊಳೆಯಿಂದ ದೊಡ್ಡ ವೃಕ್ಷವಾಯಿತೊ ಒಂದನು ಇನ್ನೊಂದು ಸೇರಿ ಕೋಟಿಯಾಯಿತೊ ಮಂದಿಗಳಿದನರಿತು ಪುಣ್ಯರಾಶಿ ಗಳಿಸಿರೊ ನೆರಳು ನೀರು ಕೊಟ್ಟ ಜನರ ಮರೆಯ ಬೇಡವೊ ಸರಿಯುತಿರುವ ಮಾರಿ ಮಸಣಿ ಕರೆಯಬೇಡವೊ ಅರಿಯದ ಅಜ್ಞಾನಿಯೊಡನೆ ಸರಸಬೇಡವೊ ತರುಗು ತಿನ್ನುವವನ ಕೇಳಬೇಡ ಹಪ್ಪಳ 150 ದೇಹಿಯೆಂದು ಬಂದವನಿಗೆ ನಾಸ್ತಿಯೆನದಿರೊ ಸಾಹಸವನು ಮಾಡದಿರೊ ಪ್ರಬಲ ಜನರಲಿ ಮೋಹಕೆ ತುತ್ತಾಗದಿರೆಲೊ ಪರಸತಿಯರಲಿ ದೇಹಕೆ ಬಲ ಶುದ್ಧಿ ಕೊಡುವ ನಿಯಮ ಬಿಡದಿರೊ ಭಾಗ್ಯಹೀನ ಬಡವನೆಂದು ಜರಿಯಬೇಡವೊ ಯೋಗ್ಯತೆಯನು ತಿಳಿಯಲು ಬಲು ಸುಲಭವಲ್ಲವೊ ಶ್ಲಾಘ್ಯವಾದ ಮೂಲಿಕೆಗಳನರಿಯೆ ಸುಲಭವೆ ಯೋಗ್ಯತೆಯನುಸರಿಸಿ ಬರುವ ಭಾಗ್ಯ ಬೇರಿದೆ ಖ್ಯಾತಿಗಾಗಿ ಆತ್ಮಸ್ತುತಿಯ ಮಾಡಬೇಡವೊ ಕೋತಿಯಂತೆ ಕುಣಿಯಬೇಡ ಸರಿಸಮರೊಳಗೆ 160 ಮೂತಿ ತಿರುಗಬೇಡ ಪರರ ಹಿತನುಡಿಗಳಿಗೆ ಸೋತ ಹಾಸ್ಯ ಮಾಡಬೇಡ ರಸಿಕ ಜನರಲಿ ಹಿರಿಯರು ಸಂದೇಹಪಡುವ ಮಾರ್ಗ ತ್ಯಜಿಸೆಲೊ ಬರಿಯ ಮಾತನಾಡಿ ಬೆನ್ನು ತಟ್ಟ ಬೇಡವೊ ಪರರ ಹಳ್ಳಕ್ಕಿಳಿಸಿ ಆಳ ನೋಡಬೇಡವೊ ಕರಕೆ ಸಿಕ್ಕಿದಾಗ ಹಲ್ಲು ಕಿರಿಯಬೇಡವೊ ಅರಳು ಹುಡುಕಬೇಡವೊ ಎದೆಯು ಒಡೆಯುವಂತೆ ಸುದ್ದಿ ಪೇಳಬೇಡವೊ ಬೀದಿಯಲಿರುವ ಜನಗಳ ಬೇಸರಿಸಬೇಡವೊ ಬೆದೆಯಲಿರುವ ದುರುಳನನ್ನು ಕೆಣಕಬೇಡವೊ 170 ಊರು ಕುರಿಯ ಕಾದು ಗೌಡನೆನಿಸಬೇಡವೊ ದೂರು ತರುವ ಜನರ ಕ್ಷಣದಿ ನಂಬಬೇಡವೊ ನಾರಿಯ ಸಾಹಸವ ನಂಬಿ ದುಡುಕಬೇಡವೊ ಎರಡು ಕರವು ಸೇರದೆ ಚಪ್ಪಾಳೆಯಾಗದು ಕುರುಡನು ತೋರಿಸುವುದೆಲ್ಲ ಮಾರ್ಗವಾಗದು ಕರಡಿಯು ಮೈಯಪರಚಲದು ಸೌಖ್ಯವಾಗದು ಗುರುಗಳ ಬಿಟ್ಟೋದಲು ಉಪದೇಶವಾಗದು ಹರಿಯಭಕುತಿ ಹರಿಯದಿರಲು ಗಾನವಾಗದು ಬರಿಯ ಸ್ವರಗಳುರುಳಿಸೆ ಕೀರ್ತನೆಯದಾಗದು 180 ಕರದಿ ತಟ್ಟೆ ಹೊಳೆಯುಂತಿರೆ ಪುರಾಣವಾಗದು ಕಿರಿಯ ಜನರ ಗುಣಗಾನವು ಭಜನೆಯಾಗದು ಅಕ್ಕಿಗಾಗಿ ಅಲೆವರೆಲ್ಲ ದಾಸರಾಗರು ಬೆಕ್ಕಿನಂತೆ ಕಣ್ಣು ಮುಚ್ಚಿ ಯತಿಗಳಾಗರು ಚಿಕ್ಕ ಜಿರಳೆ ಮೀಸೆಯಿರಲು ರಾಯರಾಗದು ಚಿಕ್ಕ ಕೊಳೆಯ ಚೌಕ ಧರಿಸೆ ಮಡಿಯದಾಗದು ಕದ್ದು ಅವಿತುಕೊಂಬರೆಲ್ಲ ಗರತಿಯಾಗರು ಮದ್ದು ಮಾಟ ಮಾಡುವವರು ಸುದತಿಯಾಗರು ಶುದ್ಧ ಧೈರ್ಯ ನಡತೆಯಿಂದ ನಿಂದ್ಯರಾಗರು ಬುದ್ಧಿ ಬದುಕು ಹೇಳುವವರು ದ್ವೇಷಿಯಾಗರು 190 ರೀತಿ ನೀತಿಗಳನು ಪರಗೆ ಹೇಳಲು ಸುಲಭ ಮಾತನಾಡಿದಂತೆ ಮಾಡಿ ತೋರುವರಿಹರೇ ತಾತನ ಕಾಲದಲ್ಲಿ ನುಡಿದ ಮಾತಿದಲ್ಲವು ಹೋತನ ಗಳಸ್ತನವಿದಲ್ಲ ಕೂತು ಕೇಳರಿ ಗಾದೆಗಳನು ವೇದವೆಂದು ಪೇಳಲುಚಿತವು ಮಾದರಿ ಅಣುಶಕ್ತಿಯಿಂದೆ ಗಾದೆ ಗಾದೆಗು ಪರಮ ಭಾಗವತರ ಚರಿತೆಯೋದಿ ನೋಡಿರಿ ಅರಿಯಬಹುದು ನುಡಿದ ನೀತಿಸಾರವೆಲ್ಲವ ನಾಡುನುಡಿಗಳೆಂದು ಮರೆಯಬೇಡವೆಂದಿಗು ಪಾಡಿದರೆ ಪ್ರಸನ್ನ ಹರಿಯು ನೀಡುವ ಫಲವ 200
--------------
ವಿದ್ಯಾಪ್ರಸನ್ನತೀರ್ಥರು
ಹನುಮರಾಯ ಎನ್ನ ದುರಿತದಾರಿದ್ರ್ಯವ ಪರಿಹರಿಸಿ ಸಲಹೋ ಹನುಮರಾಯ ಪ ದಿನದಿನ ಘನಘನ ತನುವಿನರೋಗವು ಹನುಮರಾಯ ಇನ್ನು ಘನವಾಯ್ತು ಕನಿಕರದಿಂದ ಕಡೆಹಾಯ್ಸಯ್ಯ ಹನುಮರಾಯ ಕ್ಷಣಸುಖವಿಲ್ಲದೆ ಅನುಪಮ ನೋಯುವೆ ಹನುಮರಾಯ ಹನುಮರಾಯ1 ಕಿರಿಕಿರಿಸಂಸಾರ ಪರಿಪರಿಬಾಧೆಯು ಹನುಮರಾಯ ಬೇಗ ಪರಿ ಬಾಧ್ಯಾಕೊ ಹನುಮರಾಯ ಇನ್ನು ಮರವೆಹರಿಸಿ ನಿಜಅರಿವು ಕರುಣಿಸಿ ಕಾಯೊ ಹನುಮರಾಯ 2 ಸ್ವಾಮಿ ಶ್ರೀರಾಮನ ಪ್ರೇಮದದೂತನೆ ಹನುವiರಾಯ ದೇವ ಪಾದ ಭಜಿಸುವೆನಯ್ಯ ಹನುಮರಾಯ ಈ ಮಹಕಷ್ಟದಿ ಕ್ಷೇಮ ಪಾಲಿಸಯ್ಯ ಹನುಮರಾಯ ನಿನ್ನ ಪ್ರೇಮದಿರಿಸಿ ಎನ್ನ ಮುಕ್ತಿಗ್ಯೋಗ್ಯನ ಮಾಡೊ ಹನುಮರಾಯ 3
--------------
ರಾಮದಾಸರು