ಸತಿಯಿಲ್ಲಸುತರಿಲ್ಲ ಬಂದು ಬಾಂಧವರಿಲ್ಲ
ನುತ ಕೇಶವನಲ್ಲದೆ ಸದ್ಗತಿ ಎನಗಿಲ್ಲ ಪ
ಹೆರರನಾಶ್ರಯಿಸಿ ಬದುಕಬೇಕಲ್ಲ
ನರರನನುಸರಿಸಿ ಬಡವಾದೆನಲ್ಲ
ಇರುವ ನಾಲ್ಕು ದಿನದ ಬರಿದೆ ಸುಖಕ್ಕಾಗಿ
ನರನಿಗೆ ನೀಚನಿಗೆ ಈ ಸ್ಥಿತಿ ಒದಗಿತಲ್ಲ 1
ಹರಿನಿನ್ನ ಭಜಿಸದೆ ಬಲು ಬಾಧೆಯಾಗಿದೆ
ಪರಿಪರಿಯ ನೋವನ್ನು ನೀಗುವವರಾರಿಲ್ಲ
ಸಿರಿಸಂಪತ್ತಿರುವರೆಗೆ ಸತಿಸುತರೆಲ್ಲ
ಕರೆದರೂ ಬರರಲ್ಲ ಬಾಂಧವರು ಸ್ನೇಹಿತರು 2
ಸುಖದಲಿರುವಾಗ ಮನ್ನಿಪರೋ ಎಲ್ಲ
ಅಖಿಲಗೋತ್ರಜರು ನೆರೆಹೊರೆಯವರು
ಸಖರು ಯಾರಿಲ್ಲ ಸಾವು ಬಂದೆಳೆವಾಗ
ಅಖಂಡ ಒಡೆಯ ಜಾಜಿಪುರೀಶ ಕಾಯಬೇಕಯ್ಯ 3