ದೇಶ ತಿರುಗಿಸಿ ಪರದೇಶಿ ಮಾಡಲು ಬೇಡೋ
ಈಶ ನೀ ಘನ್ನಾ ಸಂಪನ್ನಾ ಪ
ಜನಕನಂಶದಿ ಧ್ರುವನು ಸನುಮತವ ಮಂಡಿಸಲು
ಘನರೋಷ ತಾಳಿ ಮಲಜನನಿ ಧೂರ್ತೆ ದೂಡಲು
ವನವಾಸ ಲೇಸೆಂದು ತಿಳಿದು ನಿನ್ನ ನೆನೆಯೆ ತಾ ನಡೆದ
ಘನಮಹಿಮ ಶ್ರೀಮನ್ನಾರಾಯಣ ಸ್ಥಿರಪಟ್ಟವ ನಾಡಿದ 1
ಖಳ ಕುರುಪಗೊಡೆತನವು ಭಲೆ ಧರ್ಮಗೆ ವನವಾಸವು
ಬಲು ಮಾನವಂತೆ ದ್ರೌಪದಿಯು
ಜಲಜನಾಭನೆ ನೀನೆ ಗತಿಯೆನಲು
ಒಲಿದು ಬೆಂಬಲನಾಗಿ ಪಾಂಡವರ ಪೊರೆದೆ 2
ವರಮುನಿಯ ಶಾಪದಿಂದರಸನಿಂ ಪ್ರದ್ಯುಮ್ನ
ಕರಿರಾಜನಾಗಿ ಮಡುವೊಳು ಕ್ರೀಡಿಸೆ
ಭರದಿ ನೆಗಳಿಯು ಪೀಡಿಸೆ ಶ್ರೀ-
ಹರಿಯೆಂದು ಮೊರೆಯಿಡÀಲು ಶ್ರೀ-
ಕರದಿಯುದ್ಧರಿಸಿದೆ ನರಸಿಂಹವಿಠ್ಠಲಾ 3