ದೈವ ಭಕ್ತಿ ಸಂಸಾರದೊಳಿಲ್ಲ ಪ
ಜೀವಗಭಿಮಾನವು ಬಿಡದಲ್ಲ ಅ.ಪ
ವನಜಲೋಚನನ ಅರ್ಚನೆಗೆ ಆಲಸ್ಯ 1
ದಾನಕ್ಕೆ ದಾರಿದ್ರ್ಯ ತನಗೋಸುಗ ಸಾಲ
ಮಾನವ ಜನಕೆ 2
ಮಕ್ಕಳ ಮದುವೆಗೆ ರೊಕ್ಕಸಾವಿರ ಹೊನ್ನು
ಪಕ್ಕಿವಾಹನಗೆ ದೊರೆಯದೊಂದು ಕಾಸು 3
ಮತ್ತೆ ತನ್ನ ಹೆಂಡತಿಗೆ ಹತ್ತುವರಹದ ಸೀರೆ
ಮುತ್ತೈದೆಗೀವರೆ ಮೂರಾಣೆಯ ಕುಬಸ 4
ಮದುವೆ ಮುಂಜಿಗೆ ಸಾಲ ಮಾಡದಿದ್ದರೆ ಹ್ಯಾಂಗೆ
ಬುಧರು ಯಾಚಿಸಿದರೆಯಿಲ್ಲ ಎಂಬುವುದೇ? 5
ಎಷ್ಟು ಬಂದರು ಸಂಸಾರಕ್ಕೆ ಸಾಲದು
ಭ್ರಷ್ಟ ಯಾಚಕರಿಗೇತಕೆ ಕೊಡಬೇಕು 6
ಸತಿಸುತನು ನಾವು ಸಲಹಿದರೆ ಸಾಕು
ಅತಿಶಯದಾನ ಧರ್ಮಂಗಳು ಬೇಡ 7
ದಾಕ್ಷಿಣ್ಯಗಾರರಿಗೆ ಭಕ್ಷ್ಯ ಭೋಜ್ಯಗಳ ಊಟ
ಕುಕ್ಷಿಂಭರರು ಕೇಳೆ ಭಕ್ಷ್ಯವೂ ಇಲ್ಲ 8
ಶ್ರೀನಿಧಿ ಗುರುರಾಮ ವಿಠಲ ವಲಿವನೆ? 9