ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸು ಬೇಗ ಸಿರಿವರ ಕರುಣಿಸು ಬೇಗ ಪ. ಲಕ್ಷ್ಮಾಶ್ರಯ ವಕ್ಷಸ್ಥಳ ಪಕ್ಷೇಂದ್ರ ವಿಹಾರಿ ಅಕ್ಷಾರಿ ಪ್ರಿಯ ಪೂರ್ಣ ಕಟಾಕ್ಷದಿ ನೋಡುತಲಿ 1 ಕಂಠೇಧೃತ ಕೌಸ್ತುಭ, ವೈಕುಂಠಾಲಯವಾಸಿ ಶುಂಠಾಶಯ ಧೂವನ ನರ ಕಂಠೀರವ ಕಮಠಾ 2 ದೂರೀಕೃತ ಘೋರಾಮಯ ಧೀರಾಖಳ ಸಾರಾ ನಾರಾಯಣ ನರಕಾರ್ಣವ ತಾರಣ ರಘುವೀರ 3 ಭಕ್ತಾವನಶಕ್ತಾಮೃತ ರಕ್ತಾಧರ ಶ್ರೀದ ಪಾದ 4 ವಾಗೀಶ ವೃತಾನುಗ ಸಕಲಾಗಮನುತ ಚರಣ ಭೋಗೀಶ ಧರಾಲಯ ದಯವಾಗು ಸದಾಶರಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಂದರ್ನೋಡೀ ಸುಂದರ್ತುಲಶೀರಾಮದಾಸರ್ಬಂದರು ಪ ಅಂದದೆಮ್ಮಾಕಂದರ್ಪಾಲಿಸೆಂದರ್ ತಾವೇ ಚಂದಾದಿಂದಾ ಇಂದ್ರರ್ಪದವಿಗಾಗಿ ಬೇಗಾ 1 ಭಕ್ತಿ ಮುಕ್ತಿ ಯೆರಡಕ್ಕೊಂದೆಯುಕ್ತಿ ತೋರಿ ಮತ್ತೆ ತಾನ್ ಭಕ್ತಿಜ್ಞಾನ ಯೇತನ್ಮಧ್ಯೆ ಹೊಕ್ಕಿ ಶಕ್ತರಾಗಿ ಬೇಗಾ 2 ಆಟಾಪಟಾವೆಂಬಳ ಕಳ್ಳ ಬೂಟಕಂಗಳನ್ನು ಬಿಡಿಸಿ ಸಾಟಿಯಾಗದ ತ್ರಿಕೂಟಮೆಂಬಟರಾರ್ಭಟಾ ತೋರಲ್ ಬೇಗಾ3 ಪಕ್ಷೇಂದ್ರನೇರಿ ಬಂದ ಯಕ್ಷರಕ್ಷನಾಗಿ ನಿಂದಾ ಸಾಕ್ಷಿ ಕೇಳುವಂತಾ ಅಡಿಯರ್ಗಾಕ್ಷಣವೆ ಮೋಕ್ಷ ತೋರಲ್ 4 ಆಶಪಾಶವೆಂಬೊದನ್ನು ನಾಶಮಾಡೊ ಈಶನಾಮಾ ದಾಸನಾದವರ್ಗೆ ಸಾಶಿರಾಂಗಾವಾಗಿ ಬೇಗಾ 5
--------------
ಚನ್ನಪಟ್ಟಣದ ಅಹೋಬಲದಾಸರು