ಒಟ್ಟು 4 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಹುದೋ ದೇವ ನೀ ದಯಯುತನೆಂಬುದು ಸಹಜವೋ ಎಲೆ ರಂಗ ಪ ಮಹದುಪಕಾರವ ಗೈವೆ ಜಗಕೆಲ್ಲ ಅಹುದೋ ಅಹುದೋ ಸಲೆ ಸಲಹುವ ಪಿತ ನೀ ಅ.ಪ ಅಜಗೆ ನೇತ್ರವನಿತ್ತೆ ಗಜಕೆ ಪ್ರಾಣವನಿತ್ತೆ ಅಜಮಿಳನಿಗೆ ಮೋಕ್ಷಪದವಿಯನಿತ್ತೆ ಭಜನೆಗೈಯುವ ತುಂಬುರು ನಾರದರಿಂಗೆ ನಿಜಸುಖ ಸಾಮ್ರಾಜ್ಯ ಪದವಿಯನಿತ್ತೆ 1 ತರಳನ ನುಡಿಕೇಳಿ ಕಂಬದೊಳುದಯಿಸಿ ದುರುಳರಕ್ಕಸನಶಿಕ್ಷಿಸಿದೆ ತರಳ ಧ್ರುವನು ಗೈದಾ ತಪಸಿಗೆ ನಲಿಯುತೆ ವರಸುಖಪದವಿತ್ತ ಕರುಣಾಕರನೀ 2 ಭೂತಳದೊಳು ಜನ್ಮವಾಂತಿಹ ಸಾಸಿರ ಚೇತನಾಚೇತನ ವಸ್ತುಗಳನು ನೀ ಪ್ರೀತಿಸಿ ಪೊರೆಯುವ ರೀತಿಯದಾಶ್ಚರ್ಯ ಏ ತೆರ ಪೇಳ್ದೊಡನಂತಮಹಿಮ ನೀ 3 ದೇವದೇವನೆ ನಿನ್ನ ಪಾವನಚರಣವು ದೇವಮುನಿಗಳೆಲ್ಲ ಸೇವಿಸಲರಿದೈ ಭಾವಜಪಿತ ರಾಮದಾಸಾಚೇತ ಸಾಕು ಜನ್ಮವಬಿಡಿಸೊ ಮಾವಿನಕೆರೆರಂಗಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾದವಗಿರಿವಾಸನಹುದೋ ಶ್ರೀ ನಾರಸಿಂಹಆದಿನಾರಾಯಣ ಅಚ್ಯುತನಹುದೊ ಪ ಪಾವಕ ಮೂರ್ತಿಕಳ್ಳ ದೈತ್ಯರ ಸಂಹಾರವ ಮಾಡಿದೆನಳಿನೋದ್ಭವನಯ್ಯ ಅಮರ ಚೆನ್ನಿಗರಾಯ 1 ಕಾಯ ಬೇಕೆಂದುನಟಿಸಿ ಕಂಬದಿ ಮೂಡಿ ನಗುವ ಭಕ್ತನ ನೋಡಿಸಟೆಯಲ್ಲ ಅಜಾಂಡಗಳೊಡೆವಂತೆ ಘರ್ಜಿಸೆಕುಟಿಲ ದಾನವನೋಡುವುದ ಕಂಡು ಎಳೆತಂದುಚಿಟಿಚಿಟಿ ಚಿಟಿರೆನ್ನಲು ಉಗುರಲಿ ಸೀಳಿಪುಟನೆಗೆದ ಪಾದದಲಿ ಬಲಿಯ ತಲೆಯನು ಮೆಟ್ಟಿ ನಟನೆಯಾಡುವ ವಿದ್ಯೆಯನೆಲ್ಲಿ ಕಲಿತೆಯೊ ಕಪಟನಾಟಕ ಸೂತ್ರಧಾರಿ ನೀನಹುದು ಕ್ಷತ್ರಿಯರಚಟುಲ ಛಲದಿ ಒಗೆದು ಕರುಳ ಬಗೆದು ತುಳಿದ-ದಟರನು ಸಂಹರಿಸಿದ ಚೆಲುವರಾಯ 2 ಅಂದು ಕೌಸಲ್ಯಾ ಗರ್ಭ ಚಂದ್ರಮನಾಗಿ ಬೆಳಗಿಕೊಂದೆ ರಾವಣ ಕುಂಭಕರ್ಣಾದಿಗಳನೆಲ್ಲಇಂದಿರೇಶನೆ ನಿನ್ನ ನಂಬಿದ ವಿಭೀಷಣನಿಗೆಎಂದಿಗೂ ಪಾರವಿಲ್ಲದ ಪದವಿಯನಿತ್ತೆಕಂದನಾಗಿ ಜನಿಸಿ ವಸುದೇವ ದೇವಕಿಯರಿಗೆನಂದಗೋಕುಲದೊಳು ನಿಂದ ಕಂಸನ ಕೊಂದೆಚಂದಿರನ ನೆರೆಪೋಲ್ವ ಉನ್ನತೋನ್ನತನಾಗಿಕೊಂದು ತ್ರಿಪುರಾಸುರರ ಅವರ ಸತಿಯರ ಕೆಡೆಸಿಒಂದೆ ನೆಗೆತಕೆ ನೆಗೆವ ಅಶ್ವವನೇರಿದೆ ವ-ಸುಂಧರೆಯ ಮೇಲೆ ಲೀಲೆಯಾಡುತ ಕೃತಯುಗದಿನಿಂದು ಯಾದವಗಿರಿಯ ಮೇಲೆ ತ್ರೇತಾಯುಗದಿಬಂದು ರಾಮನೆನಿಸಿಕೊಂಡೆ ದ್ವಾಪರ ಯುಗದಿಬಂದು ಕೃಷ್ಣನೆನಸಿಕೊಂಡೆ ಕಲಿಯುಗದೊಳುನಿಂದು ಚೆಲುವ ಚೆನ್ನಿಗರಾಯನಾದೆ ವರನಂದಿಯ ಚಂದದಿಂ ರಕ್ಷಿಸಿದೆ ಎನ್ನ ಕಾಯೊಇಂದಿರಾಪ್ರಿಯ ಬಾಡದಾದಿಕೇಶವ ರಾಯ3
--------------
ಕನಕದಾಸ
ನೀನೇ ಅನಾಥ ಬಂಧು, ಕಾರುಣ್ಯಸಿಂಧುನೀನೇ ಅನಾಥ ಬಂಧು ಪಪತಿಗಳೈವರಿದ್ದರೇನು ಸತಿಯ ಸಮಯಕ್ಕೊದಗಲಿಲ್ಲ ||ಗತಿನೀನೆಂದು ಮುಕುಂದನೆ ನೆನೆದರೆಅತಿ ಚಮತ್ಕಾರದಿಂದೊದಗಿದೆ ಕೃಷ್ಣ 1ಮದಗಜವೆಲ್ಲ ಇದ್ದರೇನುಅದರ ಸಮಯಕ್ಕೊದಗಲಿಲ್ಲ ||ಮದನನಯ್ಯ ಮಧುಸೂದನನೆಂದರೆಒದಗಿದೆಯೋ ತಡಮಾಡದೆ ಕೃಷ್ಣ 2ಶಿಲೆಯಕಾಯಕುಲಕ್ಕೆ ತಂದೆಬಲಿಯೆನ್ನದೆ ಸತ್ಪದವಿಯನಿತ್ತೆ ||ಇಳೆಯೊಳು ನಿನ್ನಯ ದಾಸರ ಸಲಹುವಚೆಲುವ ಮೂರುತಿ ಶ್ರೀಪುರಂದರವಿಠಲ3
--------------
ಪುರಂದರದಾಸರು