ಒಟ್ಟು 13 ಕಡೆಗಳಲ್ಲಿ , 11 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಹಿ ಕೃಷ್ಣ ಮಹಿಪತಿ ಮಧುರೆಗೆ ಪೋಗೋದೇನೊ ಕಾರಣ ಯದುಕುಲನಾಥ ಪಾಹಿ ಕೃಷ್ಣ ಮಹಿಪತಿ ಪ ಮಧುವೈರಿ ತಾ ಬ್ಯಾಗ ಮಧುರಾಪಟ್ಟಣದಾರಿ ಹಿಡಿದಿರೆ1 ದಧಿ ಮಥನವ ಮಾಡಿ ಕದವ ತೆಗೆದು ಕಂಡರು ಬ್ಯಾಗ 2 ಮಿಂಚಿನಂತ್ಹೊಳೆವೊ ವಿರಿಂಚನಯ್ಯನ ರಥ ಚಂಚಲಾಕ್ಷಿಯರು ನೋಡುತಲಾಗ 3 ಬನ್ನಿರೆ ಬನ್ನಿರೇ ಪನ್ನಂಗಶಯನನ ಬೆನ್ನ್ಹತ್ತಿ ನಾವು ಹೋಗುವೊಣೀಗ 4 ಫುಲ್ಲನಾಭನೆ ಮತ್ತೆಲ್ಲಿಗೆ ಪಯಣವೊ ಎಲ್ಲ ವಾರ್ತೆಗಳ್ಹೇಳೊ ನಮಮುಂದೆ 5 ನಂದಗೋಪನ ಬುದ್ಧಿ ಮಂದವಾಯಿತೇನೊ ವೃಂದಾವನವ ಬಿಟ್ಟು ಕಳಿಸುವ 6 ಕೂಸೆಂದು ನಿನ್ನ ಮುದ್ದಿಸುವೊ ಮೋಹಗಳೆಲ್ಲ ಬ್ಯಾಸರಿಕ್ಯಾಯ್ತೇನೆಶೋದೆಗೆ 7 ಸಾಧುಗೋವ್ಗಳನೆಲ್ಲ ಕಾದುಕೊಂಡಿರುವೋದು ಶ್ರೀಧರ ನೀದಾರಿಗ್ಹೇಳಿದ್ಯೊ 8 ವತ್ಸಕಾಯ್ದುದು ಮನಕಿಚ್ಛಿಲ್ಲದಿರಲು ಶ್ರೀ- ವತ್ಸಧರನೆ ಸುಮ್ಮನಿರೊ ನೀನು 9 ನಮ್ಮನೆಯಲಿ ಪಾಲ್ ಬೆಣ್ಣೆ ಕದ್ದನೆಂದು ನಿಮ್ಮಮ್ಮನಲ್ಲಿ ದೂರಿದೆವೇನೊ 10 ಕ್ಷೀರಗಡಿಗೆ ಒಡೆದೋಡಿ ಪೋದನೆಂದು ದೂರಿಕೊಂಡವರಲ್ಲೋ ನಿನ್ನನು 11 ಊರೊಳಗೊಬ್ಬಳು ದೂರಿಕೊಂಡರೆ ನಾವು ಭಾರಿ ಶಿಕ್ಷೆಯ ಮಾಡಿ ಬಂದೆವೊ 12 ಎಂದಾದರೊಂ(ದು) ದಿನ ಅಂದ ಮಾತುಗಳೆಲ್ಲ ಇಂದೆ ತಪ್ಪಿ ್ಹಡಿಯದೆ ಕ್ಷಮಿಸಯ್ಯ 13 ಕದವ ತೆಗೆಯದ ಮುಂಚೆ ಸದನದ್ವಾರದಿ ಬಂದು ಯದುನಾಥ ಎದುರೆ ನಿಂತಿರುವ್ಯಲ್ಲೊ 14 ಕಂಗಳಿಂದಲಿ ನೋಡ್ಯಾಲಿಂಗನೆ ಮಾಡುತ ಸಂಗಸುಖದಿ ಬೆಳೆದಿದ್ದೇವೊ 15 ನಿನ್ನ ನೋಡದ ಕಂಗಳಿನ್ನ್ಯಾತಕಿರಲು ಕೇ(ಗೇ?) ರೆಣ್ಣೆಯ ತೀಡಿಕೊಂಬುವೋಣೇನೊ 16 ಮಾರನಾಟಕೆ ಮನಸೋತು ನಿನ್ನನೆ ನಾವು ಜಾರಪುರುಷನೆಂದು ತಿಳಿಯದೆ 17 ಇರುಳೇಯೆ ಮನೆಯಲ್ಲಿ ಕೊಳಲೂದೋ ಕಾಲಕ್ಕೆ ನಳಿನಾಕ್ಷ ನಾವ್ಹ್ಯಾಗೆ ಬಂದೆವೊ 18 ಕಾಲಿಗಿಡುವ ವಸ್ತು ಕರದಲಿಟ್ಟುಕೊಂಡು ವಾಲೆ ಮೂಗುತಿ ಹೆರಳಿಗೆ ಚುಚ್ಚಿ 19 ಹರಡಿ ಕಂಕಣ ಪಾದದ್ಹರಡಿನ ಮ್ಯಾಲಿಟ್ಟು ಮುಡಿವ ಮಲ್ಲಿಗೆ ಕಿವಿಯಲಿ ಸುತ್ತಿ 20 ಹಾರ ಪದಕವ ಟೊಂಕಕೆ ಕಟ್ಟಿ ನಾವು ಉಟ್ಟ ಸೀರೆ ಕುಪ್ಪುಸ ಪಾರವಿ(ಪರಿವೆಯಿ?)ಲ್ಲದೆ 21 ಗಂಡಮಕ್ಕಳಿಗುಣಬಡಿಸಿ ಮಂಡಿಯ ಮ್ಯಾಲೆ ಸಂಡಿಗ್ಹುಳಿಯನ್ಹಾಕಿ ಬಂದೆವೊ 22 ಎಲೆಯ ಮ್ಯಾಲ್ಹಾಕೋ ಪದಾರ್ಥವೆಚ್ಚರವಿಲ್ಲ ತಲೆಯ ಮ್ಯಾಲ್ಹಾಕಿ ಬಂದೆವು ನೋಡೊ 23 ಬೆಣ್ಣೆ ಚೆಟ್ಟಿಗೆಯ ಬೆಕ್ಕಿನ ಮುಂದೆ ಸರಿಸೇವೊ ಸಣ್ಣ ಕೂಸಿನ ನೆಲವಿನೊಳಿಟ್ಟು 24 ಅಳುವೊ ಮಕ್ಕಳನೆ ಆಕಳ ಕಣ್ಣಿಗೆ ಕಟ್ಟಿ ಕರು- ಗಳ ತೊಟ್ಟಿಲೊಳಗೆ ಇಟ್ಟು 25 ಬಂಗಾರದ್ಹಾರ ಪದಕನ್ಹಾಕಿ 26 ಅಚ್ಛದಿಂದೆತ್ತಿ ಮುದ್ದಿಡುತಿರೆ ನಮ ಗಲ್ಲ ಕಿ- ತ್ತಿ ಚಿವರಿಕೊಂಡ್ಹೋಯಿತು 27 ಬಂಗಾರ ಕಳಕೊಂಡು ಮಂಗನಂತಾದೆವೊ ಮಂಗಳಾಂಗನೆ ಇಷ್ಟು ಮರುಳಾಗಿ 28 ವ್ಯತ್ಯಾಸದಿಂದ್ವಸ್ತ್ರ ಇಟ್ಟು ಬಂದೆವೊ ನಾವು ಬಿಟ್ಟೊ ್ಹೀದನೆಂಬೊ ಸಿಟ್ಟಿಲ್ಲವೊ 29 ಅಡಅಡವಿಲಿ ನಿನ್ನ ಹುಡುಕುತ ತಿರುಗೇವೊ ಕಡಲಶಯನ ಕರುಣದಿ ಬಂದ್ಯೊ 30 ರಾಸಕ್ರೀಡೆ ಜಲಕ್ರೀಡೆನಾಡಿದ ವಾರ್ತೆ ರಾ(ರಹ?)ಸ್ಯ ಒಬ್ಬರಿಗೆ ನಾವ್ ತಿಳಿಸದೆ31 ಅತ್ತೆಮಾವಂದಿರೀ ವರ್ತಮಾನವ ಕೇಳಿ ನೆತ್ತಿಮ್ಯಾಲ್ಹೊಡದ್ಹೊರಗ್ಹಾಕೋರೊ 32 ಪತಿಗಳು ನಮ್ಮನ್ನು ಬಿಟ್ಟರೂ ಬಿಡಲೊ ಶ್ರೀ- ಪತಿ ನಿನ್ನ ಬಿಟ್ಟು ಪೋಗುವರಲ್ಲ 33 ಮನೆ ಧನ ಧಾನ್ಯ ಮಕ್ಕಳು ಪತಿಗಳು ಬ್ಯಾ- ಡ ನಮಗೊಂದು ಸ್ಥಾನ ತೋರಿಸೊ ನೀನು 34 ಕುಸುಮ ಮಲ್ಲಿಗೆ ಒಣಗಿದ ದಾರ ಮತ್ಯಾವ ಕೆಲಸಕ್ಕೆ ಬರುವುದೊ 35 ಎಲ್ಲಿ ಬಿಲ್ಲ ್ಹಬ್ಬ ಮತ್ತೆಲ್ಲಿ ಸೋದರಮಾವ ಎಲ್ಲಿಂದ ಕರೆಯ ಬಂದನು ಈತ 36 ಕ್ರೂರನೆನ್ನದಲೆ ಅಕ್ರೂರನೆಂಬುವೋ ಹೆ- ಸರ್ಯಾರಿಟ್ಟರ್ಹೇಳೊ ಈ ಪುರುಷಗೆ 37 ನಮ್ಮ ನಿಮ್ಮನು ಅಗಲಿಸುವೋನು ನಮ್ಮಂಥ ಹೆ- ಣ್ಣು ಮಕ್ಕುಳು ಇವಗಿಲ್ಲವೆ 38 ಇಳಿಯಿಳಿ ಇಳೆಯಲ್ಲೀಳಿಗೆಯ ಕೊಟ್ಟೇವೊ ನಮ್ಮ ಕೊ- ರಳ ಕೊಯ್ದು ಮುಂದಕ್ಹೋಗೋ ನೀ 39 ವಾಸುದೇವನೆ ನಿನ್ನ ರಥದ ಗಾಲಿಗೆ ನಾವು ಹಾಸಿಕ್ಯಾಗಿ ಅಡ್ಡಬಿದ್ದೆವೊ 40 ಮಧುರಾಪಟ್ಟಣದಲ್ಲಿ ಇದ್ದ ಸತಿಯರೆಲ್ಲ ಮದನಮೋಹನ ನಿನ್ನ ಬಿಡುವೋರೆ 41
--------------
ಹರಪನಹಳ್ಳಿಭೀಮವ್ವ
ಎತ್ತಣ ಪಯಣವೋ ಕೃಷ್ಣಯ್ಯ ನಿನ ಗಿತ್ತ[ಏನವ]ಸರ ಏಕೋ ರಂಗಯ್ಯ ಪ ಹೆತ್ತತಾಯಿಯ ಮುಂದಾಡದೆ ಇ ನ್ನೆತ್ತ ಯಾರಿಗೆ ಲೀಲೆ ತೋರುವೆ ಅ.ಪ ಗೊಲ್ಲ ಗೋಪಿಯರೆಲ್ಲ ಚೆಲ್ಲಾಟದಿಂದ ನಿನ್ನ ಗಲ್ಲವ ಹಿಡಿದುಕೊಂಡು ಅಲ್ಲಾಡಿಸಿ ಸೊಲ್ಲು ಸೊಲ್ಲಿಗೆ ಮುತ್ತಿಟ್ಟು ನೋಯಿಸಿದರೆಂದು ಬಿಲ್ಲ ಹಬ್ಬವ ನೋಡಲೊಲ್ಲದೆ ಪೋಪೆನೆಂಬೆ 1 ನೂರೆಂಟು ಕನ್ನೆಯರೋರಂತೆ ನಿನ್ನ ಬಳಿ ಸೇರಿರ್ಪುದನು ಕಂಡು ಕಲಹಪ್ರಿಯ ನಾರಿಯೊಬ್ಬಳ ತನಗಾರಿಸಿ ಕುಡಲೆಂದು [ಯಾರಬಳಿ ಮಸಲತ್ತು ಮಾಡಹೊರಟೆಯೊ] 2 ಬಾಲೆ ರುಕ್ಮಿಣಿಯನು ದುರಳಶಿಶು ಪಾಲಂಗೀಯುವರೆಂದು ಪೇಳಿದ್ದೆಯಲ್ತೆ ಬಾಲೆಯ ತರ್ಪೆನೆಂದೇ ಶ್ರೀ ಮಾಂಗಿರಿಯ ರಂಗ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏಕನಾದ ಹರಿಗುರುಗಳ ಬಿಟ್ಟು ನರಸ್ತುತಿಗಳನು ಮಾಡಬಾರ್ದು ಪ ಸಿರಿವುರಿಯಲಿ ಸಿಕ್ಕಿ ನರಹರಿ ಚರಣವ ಬಿಡಬಾರ್ದು ಅ.ಪ. ಒಂಟಿಲಿ ಸತಿಯನು ಪತಿವ್ರತೆ ಎನ್ನುತ ಬಿಡಬಾರ್ದು ನೆಂಟೆಗೆ ಮಿತ್ರಗೆ ಸೂಳೆಗೆ ಸಾಲವ ಕೊಡಬಾರ್ದು ತುಂಟರ ಕುಡುಕರ ಜಾರರ ನೆರೆಹೊರೆ ಇರಬಾರ್ದು ಒಂಟಿಯ ಊಟವ ಪಯಣವ ಕಲಹವ ಬೆಳೆಸಬಾರ್ದು 1 ಮಾವನ ಮನೆಯಲಿ ದುಡಿಯದ ಅಳಿಯನು ನಿಲ್ಲಬಾರ್ದು ಕೋವಿದರಡಿಗಳ ಸುಜನರ ಸಂಗವ ಬಿಡಬಾರ್ದು ಜೀವರು ಹರಿ ಸಮ ಮಾಯವೆ ಜಗಸರಿ ಎನಬಾರ್ದು ದೇವನ ದೂಡುತ ವಿಷಯವ ಹರಿಸುತ ಕೆಡಬಾರ್ದು 2 ಮನೆಕದ ಮುಂದಿಲಿ ಪತಿವ್ರತೆ ತಾನು ನಿಲಬಾರ್ದು ತನುವನು ತೋರುತ ಸೆರೆಗನು ಬೀರುತ ನಡಿ ಬಾರ್ದು ವನಿತೆಯ ಸಂಗಡ ಗುಟ್ಟಿನ ವಿಷಯವ ನುಡಿಬಾರ್ದು ಮಣಿಯದೆಲೆಂದಿಗು ಹಿರಿಯರ ಚರಣಕೆ ನಡಿಬಾರ್ದು3 ನುಡಿಯುವ ತೆರೆದಲಿ ನಡೆಯದ ಮನುಜನ ನಂಬಬಾರ್ದು ತಡೆಯದೆ ಕೋಪವ ದುಡುಕುವ ನೆಡೆಯಲಿ ನಿಲ್ಲಬಾರ್ದು ಬೆಡಗನು ತೋರುವ ನಾರಿಯ ಕಡೆಯಲಿ ನೋಡಬಾರ್ದು ದುಡುಕುತ ಲೊಡನೆಯೆ ಯಾವುದು ನಿಶ್ಚಯ ಮಾಡಬಾರ್ದು 4 ಕೆಟ್ಟರೆ ನೆಂಟರನೆಂದಿಗು ಮಾನಿಯು ಸೇರಬಾರ್ದು ಕಷ್ಟವು ಬಂದೆಡೆ ಧೈರ್ಯವನೆಂದಿಗು ಬಿಡಬಾರ್ದು ಗುಟ್ಟಿನ ಮಂತ್ರವು ಘಟ್ಟಿಲಿ ಜಪಿಸುತ ಕೂಗಬಾರ್ದು ಶಿಷ್ಯರಿಗಲ್ಲದೆ ದುಷ್ಟಗೆ ಶಾಸ್ತ್ರವ ನುಡಿಬಾರ್ದು 5 ತಿಂಡಿಯ ಚಪಲವ ನರಹರಿ ತೊಂಡನು ಮಾಡಬಾರ್ದು ಹೆಂಡರ ಭಜಕನ ಜಾರನ ನುಡಿಗಳ ನಂಬಬಾರ್ದು ಸತಿ ಸಹ ಸರಸವ ಮಾಡಬಾರ್ದು ಮಂಡೆಲಿ ಚರಣದಿ ಬರಿತೆರ ವೆಂದಿಗು ಹೋಗಬಾರ್ದು 6 ಹುಡುಗರ ಶಾಲೆಗೆ ಕಲಿಯಲು ಹುಡುಗಿಯ ಕಳಿಸಬಾರ್ದು ಮಡದಿಗೆ ಭಂಟಗೆ ಒಡನೆಯೆ ಸದರವ ನೀಡಬಾರ್ದು ಹುಡುಗಿಯ ಕಾಣದ ಜನರಿಗೆ ದೇಶಕೆ ಕೊಡಬಾರ್ದು ನಡೆನುಡಿ ನೋಟ ವಿಶೇಷದಿ ನೇಮವನಿಡದಲೆ ಇರಬಾರ್ದು 7 ಯಾಚಕ ಸವಿನುಡಿ ವಿನಯ ವಿವೇಕವ ಮರಿಬಾರ್ದು ಯೋಚನೆ ಗೈಯದೆ ನೆರೆಹೊರೆ ಹಗೆತನ ಗಳಿಸಬಾರ್ದು ಒಗೆತನ ಹುಳುಕನು ಹಾಕಬಾರ್ದು ಮೋಚಕ ನಿಜ ಸಖ ಹರಿತಾನೆಂಬುದ ಮರಿಬಾರ್ದು 8 ದೊಡ್ಡವರೆಡೆಯಲಿ ಹುಡುಗರು ಸರಸವ ಮಾಡಬಾರ್ದು ದುಡ್ಡಿನ ಜನಗಳನೆದುರಿಸಿ ಬಡವನು ನಿಲ್ಲಬಾರ್ದು ಸಡ್ಡೆಯ ಮಾಡದೆ ಅಡ್ಡಿಗಳೆಲ್ಲವ ಸರ್ವರಿಂ ದೊಡ್ಡವ ಶ್ರೀ ಕೃಷ್ಣವಿಠಲನ ಭಜನೆಯ ಬಿಡಬಾರ್ದು 9
--------------
ಕೃಷ್ಣವಿಠಲದಾಸರು
ಕೇಳಿದ್ಯಾ ಕೌತಕವನ್ನು ಕೇಳಿದ್ಯಾಪ ಕೇಳಿದ್ಯಾ ಕೌತಕವನ್ನು ನಾಕೇಳಿದೆ ನಿನಗಿಂತ ಮುನ್ನ ಆಹಾಚಾಳಿಕಾರ ಕೃಷ್ಣ ಪೇಳದೆ ಮಧುರೆಗೆಕೋಳಿ ಕೂಗದ ಮುನ್ನ ನಾಳೆ ಪಯಣವಂತೆಅ.ಪ. ಕರೆಯ ಬಂದಿಹನಂತೆ ಕ್ರೂರ ತಮ್ಮಕಿರಿಯಯ್ಯನಂತೆ ಅಕ್ರೂರ ಪುರಹೊರವಳಯದಿ ಬಿಟ್ಟು ತೇರ ಆಹಾಹಿರಿಯನೆಂದು ಕಾಲಿಗೆರಗಲು ರಾಮಕೃ-ಷ್ಣನ ಠಕ್ಕಿಸಿಕೊಂಡುಮರುಳುಮಾಡಿದ ಬುದ್ಧಿ 1 ಸೋದರ ಮಾವನ ಮನೆಗೆ ಬೆಳ-ಗಾದರೆ ನಾಳಿನ ಉದಯ ಪರ-ಮಾದರವಂತೆ ತ್ವರೆಯ ಅಲ್ಲಿ ತೋರಿದ ಮನಕೆ ನಾರಿಯ ಆಹಾಸಾದಿಮಲ್ಲ ಮೊದಲಾದ ಬಿಲ್ಲಹಬ್ಬಸಾಧಿಸಿಕೊಂಡು ಬರುವೆನೆಂದು ಸುದ್ದಿ 2 ಹುಟ್ಟಿದ ಸ್ಥಳವಂತೆ ಮಧುರೆ ಕಂಸ-ನಟ್ಟುಳಿಗಾರದೆ ಬೆದರಿ ತಂ-ದಿಟ್ಟ ತನ್ನ ತಂದೆ ಚದುರೆ ತೋರಿಕೊಟ್ಟಳು ಭಯವನ್ನು ಬೆದರಿ ಆಹಾಎಷ್ಟು ಹೇಳಲಿ ರಂಗವಿಠಲನು ಮಾವನಭೆಟ್ಟಿಗಾಗಿ ಒಡಂಬಟ್ಟು ಪೋಗುವ ಸುದ್ದಿ3
--------------
ಶ್ರೀಪಾದರಾಜರು
ಪ(ಪಾ)ವನಾ ಗುರು ಪವಮಾನ ಪ ಪಾವನ ಗುರು ಪವಮಾನ ದೇವ ಅವಾವಕಾಲದಿ ಸಲಹುವ ಕರುಣಿ ಕೃಪಾ ವಲೋಕನದಿಂದ ಕಾವುದೆಮ್ಮನು ಗುರುಅ.ಪ ಪರಮ ಮಹಿಮ ಶ್ರೀ ಮುಕುಂದಾ ನಿಂದ ಕರುಣಾದಿಂದ ಜನಿಸಿಬಂದ ಬಂದು ಸರ್ವಜೀವರೊಳಾನಂದದಿಂದ ಕರಣದೊಳು ನಿಂತಚಂದಾ ||ಆಹ|| ನಿರುತದಿ ಹರಿಪ್ರೇರಣೆಯಿಂದ ಕಾರ್ಯವ ಪರಿಪರಿಮಾಡಿ ಶ್ರೀಹರಿಗರ್ಪಿಸುವ ದೇವ 1 ತರುಚ್ಛಾಯೆಯಂತೆ ಶ್ರೀ ಹರಿಗೆ ನೀನೆ ಪರಮ ಪ್ರತಿಬಿಂಬನಾಗೆ ಸರ್ವ ಚರಾಚರಾದಿಗಳೊಳಗೆ ಅದರ ದರಯೋಗ್ಯತೆಗನುವಾಗೇ ಆಹ ನಿರುತಕಾರ್ಯವ ಮಾಳ್ವೆ ಅಣುಮಹದ್ರೂಪನೆ ಪರಿಪರಿ ಪ್ರಾಣಾದಿಗಳ ಕಾರ್ಯ ನಿನ್ನಿಂದ2 ಚಕ್ರವರ್ತಿ ಆಜ್ಞೆಯಂತೇ ಪುರದ- ಧಿಕಾರಿನಿಯಮದಂತೇ ಅದಕ- ಧಿಕೃತರಿರುವರಂತೇ ಅಂತೆ ತ- ತ್ವ ಕಾರ್ಯವು ನಿನ್ನಿಚ್ಛೆಯಂತೇ ||ಆಹ|| ಮಿಕ್ಕಾದ ತತ್ವರಿಗೆ ತಕ್ಕ ಕಾರ್ಯವನಿತ್ತು ನಿ- ಯುಕ್ತರ ಮಾಡುವೆ ಹರಿಉಕ್ತಿಯ ಮೀರದೆ 3 ಇಭರಾಜವರದನ ಪ್ರೀಯ ನೀನೆ ಪ್ರಭುವಾಗಿರುವೆ ಸರ್ವಕಾಯದೊಳು ಶುಭಾಶುಭಂಗಳ ಕಾರ್ಯ ನಿತ್ಯ ನಿಬಿಡ ನಿನ್ನಿಂದಲೆ ಜೀಯಾ ||ಆಹ|| ಅಬುಜಾಂಡದೊಳಗೆಲ್ಲ ಪ್ರಬಲ ನಿನ್ನಯ ಶೌಂiÀರ್i ಅಬುಜಭವನ ಪದಪಡೆವ ಪ್ರಭುವೆ ನೀನು4 ಪ್ರಾಣಾದೇವ ನಿನ್ನಿಂದ ಪಂಚ- ಪ್ರಾಣಾದಿರೂಪಗಳಿಂದ ತನು ಸ್ಥಾನದಿಭೇದಗಳಿಂದ ಜಡ ಪ್ರಾಣಭೂತ ಪಂಚದಿಂದಾ ||ಆಹ|| ಕಾಣಿಸಿಕೊಳ್ಳದೆ ಜಾಣತನದಿ ಪುಣ್ಯ ಪಾಪ ಜೀವಗೆ ಉಣಿಸುತಲಿರುವೆಯೊ5 ಪಾಯೂಪಸ್ಥದಿ ಅಪಾನ ಮುಖ ನಾಸಿಕ ಶ್ರೋತ್ರ ಪ್ರಾಣಾ-ನಾಭಿ ಅಯನವಾಗಿರುವ ಸಮಾನಾ ಇನ್ನು ಪಯಣವು ನಾಡಿಯೊಳು ವ್ಯಾನ ||ಆಹ|| ಒಯ್ದುಕೊಡುವ ಫಲಕಾರ್ಯವೆಲ್ಲ ಉದಾನನಿಂದ ಕೂಡಿ ಜೀಯ ನೀ ನಡೆಸೂವೆ 6 ಸೃಷ್ಟಿಯೊಳು ನೀ ಪ್ರವಿಷ್ಟನಾಗಿ ಸೃಷ್ಟಿಕಾರ್ಯದೊಳು ಚೇಷ್ಟಾ ಮಾಡಿ ಸೃಷ್ಟೀಶನೊಲಿಸಿ ಪ್ರತಿಷ್ಠಾ ತತ್ವ ಶ್ರೇಷ್ಠರೆಲ್ಲರ ಮನೋಭೀಷ್ಠ ||ಆಹ|| ತುಷ್ಟಿಪಡಿಸಿ ಪರಮೇಷ್ಠಿಯಾಗುವೆ ಕಪಿ ಶ್ರೇಷ್ಠನೆ ಉರಗಾದ್ರಿವಾಸವಿಠಲನದೂತ 7
--------------
ಉರಗಾದ್ರಿವಾಸವಿಠಲದಾಸರು
ಮಾನವನಾದ ಮ್ಯಾಲ ತಾನಾರೆಂದರಿಯಬೇಕು ಪ ಅನುಭವಿಗಳ ಕಂಡೆರಗಲಿಬೇಕು | ತನುಮನದಲಿ ನಿಷ್ಠೆಯು ಬಂದಿರಬೇಕು | ತನು ಧನ ಮದದಲಿ ಹೊರತಾಗಿರಬೇಕು | ಉಣಲುಡುವಲಿ ಹರಿಯಚ್ಚರಬೇಕು 1 ಎಲ್ಲಿಂದ ಧರೆಯೊಳು ಜನ್ಮಕ ಬಂದೇ | ಇಲ್ಲ್ಲಿಂದ ಪಯಣವು ಎಲ್ಲಿಗೆ ಮುಂದೇ | ಎಲ್ಲ ವಿಚಾರಿಸು ಗುರು ಮುಖದಿಂದಾ | ಫುಲ್ಲನಾಭನೆ ಸೇರಿ ಬದುಕಬೇಕೆಂದ 2 ತನ್ನ ತಾ ಮರೆದು ನೀ ತಿರುಗಲಿ ಬೇಡಾ | ಅನ್ಯರ ನಿಂದ್ಯಪಸ್ತುತಿ ಮಾಡಬೇಡಾ | ಚನ್ನಾಗಿ ಶಾಂತಿಯ ನೆಲೆಬಲಿ ಬೇಡಾ | ಕಣ್ಣಿದ್ದು ಕುರುಡ ನೀನಾಗಲಿ ಬೇಡಾ 3 ಏನು ತೋರುವದೆಲ್ಲಾ ಹರಿಯಾಜ್ಞೆದೆಂದು | ನಾನೇನು ಕರ್ತನಲ್ಲಿದಕೆಂದು | ಅನುಭವದಲಿ ಸಮದೃಷ್ಠಿಗೆ ಬಂದು | ಘನ ಗುರು ಪಾದಕ ಭಾವದಿ ಹೊಂದು 4 ಹೊತ್ತು ಹೋಗದ ಮಾತ ನಾಡಲೀ ಬೇಡಾ | ಮುತ್ತಿನಂಥಾ ಜನ್ಮ ದೊರಿಯದುಗಡಾ | ಸತ್ಯಜ್ಞಾನಾಮೃತ ನುಂಡವ ಪ್ರೌಢಾ | ಕರ್ತ ಮಹಿಪತಿ ಸುತ ಸುರಿದ ನೋಡಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿಜಯರಾಯರ ದಿನದಿ ವಿಜಯ ಪಯಣವ ಮಾಳ್ಪೆ ನಿಜದಾಸಕೂಟ ಪಥದಿ ಪ. ವಿಜಯಸಖಪ್ರಿಯ ತಂದೆ ಮುದ್ದುಮೋಹನ ಗುರು ವಿಜಯವಿತ್ತುದ್ಧರಿಸಲಿ ದಯದಿ ಅ.ಪ. ಧರೆಯಲ್ಲಿ ಪುಟ್ಟಿ ಮುವ್ವತ್ತಾರು ವತ್ಸರವು ಸರಿದುದೀ ಬಹುಧಾನ್ಯಕೆ ವರಗುರು ಉಪದೇಶ ಅಂಕಿತವು ಲಭಿಸಿ ಎಂ ಟೊರುಷವಾಗಲಿಂದಿಗೆ ಪರಮಕೃಪೆಯಿಂದ ದಾಸತ್ವ ಸಿದ್ಧಿಸಲೆಂಬ ಕಾಲ ಒದಗೆ ನರಹರಿಯೆ ನಿನ್ನ ಚರಣವೆ ಎನಗೆ ಗತಿ ಎಂದು ನೆರೆ ನಂಬಿ ಪೊರಟೆನೀಗ ಬೇಗ 1 ಸರುವ ವಸ್ತುಗಳಲ್ಲಿ ಇರುವ ಅಭಿಮಾನ ಶ್ರೀ ಹರಿ ನಿನ್ನ ಪದದಲಿರಿಸು ವರ ಗುರು ಚರಣದಲಿ ಸದ್ಭಕ್ತಿ ಸರ್ವದಾ ಸ್ಥಿರವಾಗಿ ನೆಲೆಯಗೊಳಿಸು ಹೊರಗೊಳಗೆ ಹಿಂದುಮುಂದರಘಳಿಗೆ ಬಿಡದೆ ನೀ ನಿರುತದಲಿ ಸಂರಕ್ಷಿಸು ಹರಿದಾಸ ಮಾರ್ಗದಲಿ ಹರುಷದಲಿ ನಲಿವಂತೆ ವರಮತಿಯ ದಯಪಾಲಿಸು ಹರಿಯೆ 2 ಗುರುಕರುಣ ಕವಚ ತೊಟ್ಟಿರುವ ಎನಗಿನ್ನಾವ ಪರಿಯ ಭಯವಿಲ್ಲವೆಂದು ಸ್ಥಿರವಾಗಿ ನಂಬಿ ಪೊರಮಡುವೆನೀ ಶುಭದಿನದಿ ಗುರುವಾರ ಗುರು ಕೃಪೆಯಲಿ ಪರಿಪರಿಯ ದುಷ್ಕರ್ಮ ಪರಿಹರಿಸಿ ಕಾಯುವೊ ಗುರುಚರಣ ಧ್ಯಾನಬಲದಿ ಮರುತಾಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ಕರುಣದಲಿ ಒಲಿದು ಪೊರೆಯೊ ಹರಿಯೆ 3
--------------
ಅಂಬಾಬಾಯಿ
ಶ್ರೀಕೃಷ್ಣಸಂಕೀರ್ತನೆ ಅಕ್ಕ ನಂದಗೋಪನ ಅರಮನೆಯೊಳಗೊಬ್ಬಅಕ್ರೂರ ಬಂದನಂತೆಹೊಕ್ಕು ಬಳಸಲಿಲ್ಲ ಹುಸಿಯನಾಡುವಳಲ್ಲಇಕ್ಕೋ ಬಾಗಿಲಮುಂದೆ ಈಗ ರಥವ ಕಂಡೆಪ. ಮಧುರಾಪಟ್ಟಣವಂತೆ ಮಾವನ ಮನೆಯಂತೆನದಿಯ ದಾಟಲಿಬೇಕಂತೆಎದುರು ದಾರಿಲ್ಲವಂತೆ ಏನೆಂಬೆ ಏಣಾಕ್ಷಿಉದಯದಲ್ಲಿ ಪಯಣವಂತೆ ಒಳ್ಳೆಯ ವೇಳೆಯಂತೆ1 ಮಲ್ಲರ ಕೂಟವಂತೆ ಮತ್ತೆ ಕಾಳಗವಂತೆಬಲ್ಲಿದ ಗಜಗಳಂತೆಬಿಲ್ಲಹಬ್ಬವಂತೆ ಬೀದಿ ಶೃಂಗಾರವಂತೆಅಲ್ಲಿ ತಾಯಿ[ತಂದೆಯರ]ಕಾಲಿಗೆ ನಿಗಡವಂತೆ 2 ಅಲ್ಲಿ ಹುಟ್ಟಿದನಂತೆ ಅರಸಿನ ಮಗನಂತೆಇಲ್ಲಿಗೆ ಬಂದನಂತೆಎಲ್ಲ ಕಪಟವಂತೆ ಎಂದೂ ಹೀಗಿಲ್ಲವಂತೆನಿಲ್ಲದೆ ಯಶೋದೆಯ ಕಣ್ಣಲುದಕವಂತೆ3 ಮತ್ತೆ ಪಾಂಡವರಂತೆ ಮೋಹದ ಸೋದರರಂತೆಅತ್ತೆಯ ಮಕ್ಕಳಂತೆಸುತ್ತ ಶತ್ರುಗಳಂತೆ ಸಕಲ ಕಾರ್ಯಗಳಂತೆಚಿತ್ತಜನಯ್ಯನ ಚಿತ್ತವೆರಡಾದುವಂತೆ4 ತಾಳಲಾರೆವು ನಾವು ತಾಟಂಕ ಹಯವದನಬಾಲಕನಗಲಿದನೆನೀಲವೇಣಿಯರೆಲ್ಲ ನಾಳೆ ಉದಯದಲ್ಲಿಆಲೋಚನೆ ಮಾಡದೆ ಆಣೆಯಿಕ್ಕಿ ತಡೆವ 5 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ಇದೆ.
--------------
ವಾದಿರಾಜ
ಸತತ ಹರಿಯ ನಾಮವನ್ನು ಯತುನದಿಂದ ನುಡಿವ ನರನು ಪ ಅತಿತ್ವರೆಯಲಿ ಸರ್ವಕಾರ್ಯ ಸಿದ್ಧಿಪೊಂದುವ ಅ.ಪ ದುರ್ಗಮಾರ್ಗ ಪಿಡಿದು ಕುರುಕ್ಷೇತ್ರ ಪಯಣವೇಕೆ ಜಿಹ್ವ ಯಗ್ರದಲ್ಲಿ ಹರಿಯನಾಮವಿರುವ ನರನಿಗೆ 1 ಮೂರು ಲೋಕಗಳಲಿ ಇರುವ ಹೇರು ಪುಣ್ಯಲಾಭ ಒಂದು ಸಾರಿ ಹರಿಯನಾಮದಿಂದ ಸಾಧ್ಯವಿರುವುದು 2 ಉಚ್ಚರಿಸಲು ಹರಿ ಎಂದೆರಡು ಅಕ್ಷರಗಳ ನರನು ಕ್ಷಣದಿ ಮೋಕ್ಷ ಪಾಥೇಯವನ್ನು ಸಿದ್ಧಗೊಳಿಸುವ 3 ಹರಿಯನಾಮ ಒಂದೇ ಎನಗೆ ಸರ್ವವಿಧದ ಜೀವನವು ಹರಿಯನಾಮ ಹೊರತು ಕಲಿಯೊಳರಿಯೆ ಗತಿಯನು 4 ಹರಿಯೇ ಗಂಗಾ ಹರಿಯೇ ಗಯಾ ಹರಿಯೇ ಕಾಶಿ ಸೇತು ಪುಷ್ಕರ ಹರಿಯ ನಾಮ ಜಿಹ್ವೆಯಲ್ಲಿ ಇರುವ ನರನಿಗೆ 5 ನೂಕಿ ಕಾಮಕ್ರೋಧಗಳನು ಏಕವಾರ ಹರಿಯೆಂದೆನಲು ನಾಕುವೇದಗಳನು ಓದಲೇಕೆ ಮನುಜನು 6 ಅಶ್ವಮೇಧ ಪುರುಷಮೇಧ ಯಜ್ಞಫಲವು ಲಬ್ಧವಿಹುದು ವಿಶ್ವಾಸದಿ ಹರಿಯನಾಮ ನುಡಿದ ನರನಿಗೆ 7 ಕೋಟಿ ಶತ ಗೋದಾನ ಕನ್ಯಾಭೂಮಿ ದಶಶತಕಗಳ ದಾನ ಸಾಟಿ ಹರಿಯನಾಮ ನುಡಿಯು ಭಕ್ತಜನರಿಗೆ 8 ಸಪ್ತ ಕೋಟಿ ಮಹಾಮಂತ್ರ ಚಿತ್ತ ವಿಭ್ರಮ ಕಾರಕಗಳು ಯುಕ್ತಿಯೊಂದೇ ಹರಿಯನಾಮದಕ್ಷರದ್ವಯ 9 ಮುನ್ನ ವರ ಪ್ರಹ್ಲಾದ ನುಡಿದ ಘನ್ನನಾಮ ಪಠನದಿಂದ ಪ್ರ ಸನ್ನ ಹರಿಯು ತನ್ನ ಪದವನೀವ ಮುದದಲಿ 10
--------------
ವಿದ್ಯಾಪ್ರಸನ್ನತೀರ್ಥರು
ಹೇಗಿದ್ದು ಹೇಗಾದೆಯೊ ಆತ್ಮಯೋಗೀಶನಾನಂದಪುರದಲಿರುವುದ ಬಿಟ್ಟು ಪ ಬಸಿರ ಹಳ್ಳಿಗೆ ಬಂದು ಮಾಸನೂರಲಿ ನಿಂದುಕುಸುಕಾಡಿ ನುಡಿದು ನೆಲಬಟ್ಟೆವಿಡಿದುಕಿಸುಕದರಿವೆಯ ಪೊದ್ದು ಮಲಮೂತ್ರದಲಿ ಬಿದ್ದುವಸುಧೆಯಲಿ ದಿನಗಳೆದೆಯಲ್ಲ ಆತ್ಮ 1 ಎಳಗೆರೆಯಲಿ ಆಡಿ ಯೌವನದೂರಿಗೆ ಬಂದುಥಳಥಳಿಪ ಹಸ್ತಾದ್ರಿ ನೆಳಲ ಸೇರಿಅಳಲು ಸುತ ಬೆಳೆದು ದಾರಿದ್ರ್ಯ ಪೇಟೆಗೆ ಬಂದುಹಳೆಯ ಬೀಡಿಗೆ ಪಯಣವೇ ಆತ್ಮ 2 ಗನ್ನಗತಕದ ಮಾತು ಇನ್ನು ನಿನಗೇತಕೋಮುನ್ನ ಮಾಡಿದ ಕರ್ಮಭರದೊಡಲಿದೆಉನ್ನತದ ಕಾಗಿನೆಲೆಯಾದಿಕೇಶವ ಸುಪ್ರ-ಸನ್ನ ಮೂರುತಿಯ ಭಜಿಸೆಲೊ ಆತ್ಮ 3
--------------
ಕನಕದಾಸ
ಎಚ್ಚರಿಕೆ ಎಚ್ಚರಿಕೆ ಮನವೆ - ನಮ್ಮಅಚ್ಯುತನ ಪಾದಾರವಿಂದ ಧ್ಯಾನದಲಿ ಪ.ಆಶಾಪಾಶದೊಳಗೆ ಸಿಲುಕಿ - ಬಹುಕ್ಲೇಶಪಟ್ಟು ತುಟ್ಟ ಸುಖದ ಮರುಳಿಕ್ಕಿಹೇಸಿ ಸಂಸಾರದಲಿ ಸಿಲ್ಕಿ -ಮಾಯಾಕ್ಲೇಶಅಂಬರಕೇಳಾಗೆ ಮೈಮರೆತು ಸೊಕ್ಕಿ1ಹಣ - ಹೆಣ್ಣು - ಮಣ್ಣಾಸೆ ವ್ಯರ್ಥ - ಈತನುವಿಗೆ ಯಮಪುರ ಪಯಣವೇನಿತ್ಯಮೂರು ಶೃಂಗಾರಗಳುಮಿಥ್ಯ - ಅಂತಕನ ಯಾತನೆಗಳಿಗೆ ಹರಿನಾಮ ಪತ್ಯ 2ತೊಗಲ ಚೀಲ ಒಂಬತ್ತು ಹರುಕು -ನರಬಿಗಿದುಕಟ್ಟಿ ಒಳಗೆ ಎಲುವುಗಳ ಸಿಲುಕುಬಗೆರಕ್ತ - ಮಾಂಸದ ಹುಳುಕು - ಒಳಗೆ ಮಲ - ಕಫ -ವಾತ- ಪಿತ್ತದಸರಕು3ದುಷ್ಟರ ಸಹವಾಸ ಹೀನ - ಬಲುಇಷ್ಟ ಜನಸಂಗವು ಹರಕೆ ಬಹುಮಾನಎಷ್ಟು ಓದಿದರಷ್ಟು ಜ್ಞಾನ - ಆದರಲ್ಲಿಟ್ಟು ಭಕುತಿಯ ತಿಳಿಯಲೊ ಸಾವಧಾನ 4ನಾಲಿಗೆಯ ಹರಿಯ ಬೀಡಬೇಡ - ತಿಂಡಿವಾಳರ ರುಚಿವಾತಗಳನೊರಿಸಬೇಡಹಾಳು ಮಾತು ಗೊಡಬೇಡ -ಶ್ರೀಲೋಲ ಪುರಂದರವಿಠಲನ ಬಿಡಬೇಡ 5
--------------
ಪುರಂದರದಾಸರು
ಕೃಷ್ಣಲೀಲೆಅಕ್ಕ ನಂದಗೋಪನ ಅರಮನೆಯೊಳಗೊಬ್ಬ |ಅಕ್ರೂರ ಬಂದನಂತೆ ಪಹೊಕ್ಕು ಬಳಕೆಯಿಲ್ಲ ಹೊಸಬನು ಇವನಂತೆ |ಇಕ್ಕೋ ಬಾಗಿಲ ಮುಂದೆ ಈಗ ರಥವ ಕಂಡೆ ಅ.ಪಮಧುರಾ ಪಟ್ಟಣವಂತೆ ಮಾವನ ಮನೆಯಂತೆ |ನದಿಯ ದಾಟಲುಬೇಕಂತೆ ||ಎದುರು ಅರಿವಿಲ್ಲದಂತೆ ಏನೆಂಬೆ ಏಣಾಕ್ಷಿ |ಉದಯದಿ ಪಯಣವಂತೆ 1ಒಳ್ಳೆ ವೇಳೆಗಳಂತೆ ಬಿಲ್ಲುಹಬ್ಬಗಳಂತೆ |ಎಲ್ಲಾ ಬೀದಿ ಸಿಂಗರವಂತೆ ||ಮಲ್ಲರ ಕೂಟವಂತೆ ಮತ್ತೆ ಕಾಳಗವಂತೆ |ಅಲ್ಲೆ ತಾಯ್ತಂದೆಗಳ ಕಾಲಿಗೆ ನಿಗಳವಂತೆ 2ಮತ್ತೆ ಪಾಂಡವರಂತೆ ಮೋಹದ ಸೋದರರಂತೆ |ಅತ್ತೆಯ ಮಕ್ಕಳಂತೆ ||ಸುತ್ತ ಶತ್ರುಗಳಂತೆ ಸಕಲ ಕಾರ್ಯಗಳಂತೆ |ಚಿತ್ತಜನಯ್ಯನ ಚಿತ್ತ ಎರಡಾಯ್ತಂತೆ 3ಅಲ್ಲಿ ಪುಟ್ಟಿದನಂತೆ ಅರಸನಳಿಯನಂತೆ |ಇಲ್ಲಿಗೆ ಬಂದನಂತೆ ||ಕಳ್ಳಕಪಟನಂತೆ ಎಂದಿಗೂ ಹೀಗಂತೆ |ನಿಲ್ಲದೆ ಯಶೋದೆಗೆ ಕಣ್ಣ ನೀರಂತೆ 4ತಾಳಲಾರೆವು ನಾವು ಪುರಂದರವಿಠಲನ |ಕಾಣದೆ ನಿಲಲಾರೆವೆ ||ಕಾಲದಲೊಂದಾಗಿ ಕಾಮಿನಿಯರು ಕೂಡಿ |ಆಲಸ್ಯವಿಲ್ಲದೆ ಆಣೆಯಿಡುವ ಬನ್ನಿ
--------------
ಪುರಂದರದಾಸರು
ರಂಗ ರಥವನೇರಿದನಕ್ಕ- ಮೋಹ- |ನಾಂಗ ನಮ್ಮ ಸೇರದೆ ಪೋಗುವನಕ್ಕ ಪಮಾತುಳಮಥರೆಯೊಳಿಹನಂತೆ - ಅಲ್ಲಿ |ಮಾತಾಪಿತರಿಗೆ ಬಂಧನವಂತೆ, ಇವರು |ನೂತನ ಬಿಲ್ಲಿನ ಅರ್ಥಿಗಳಂತೆ ||ಪೀತಾಂಬರಧರನ ಪೂಜೆ ನೋಡುವೆನೆಂಬ |ಆತುರದಿಂದಿರೆ ಅಕ್ರೂರನೊಡನೆ ಈಗ 1ಬಲರಾಮ ಬಂಧುವಿನೊಡಗೂಡಿ ನಂದ-|ನಡಿಗೆ ಯಶೋದೆಗೆ ವಂದನೆ ಮಾಡಿ-ತಾವು |ಬಿಡಲಾರೆವೆಂದು ಭಾಷೆಯ ನೀಡಿ ||ತಡೆಯೆನೆನುತ ತಾಯಿಗೆ ಭರವಸೆಯಿತ್ತು |ಕಡಲಶಯನನು ಕಾತರದಿಂದಲಿ ಈಗ 2ಮಧುರಾ ಪಟ್ಟಣದ ಮಾನಿನಿಯರು ಅತಿ |ಚದುರೆ ಚೆಂಚಲೆ ಚಾಪಲತೆಯರು-ನಮ್ಮ |ಮದನನಯ್ಯನ ಮೋಹಿಸುತಿಹರು ||ಕಧಿಜನಾಭ ನಮ್ಮ ಪುರಂದರವಿಠಲ |ಪದುಮನಾಭನ ಪಯಣವ ನಿಲ್ಲಿಸಕ್ಕ 3
--------------
ಪುರಂದರದಾಸರು