ಒಟ್ಟು 39 ಕಡೆಗಳಲ್ಲಿ , 20 ದಾಸರು , 39 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿಶುವಿನ ಯಾತಕ ದೂರವಿರೆ| ನಿಶಿದಿನ ನೋಡಲು ಮಾತವರಿದವಾ| ಮರಳನೆ ಮಾಡುವರೆ ಪ ಅತಿ ಮೋಹದಿಂದಲಿ ಮೊಲೆಯನು| ಬಾಯೊಳಗಿಟ್ಟರೆ ಸೇವಿಸನು| ಮಿಲೆ ಯಿಲ್ಲದ ಪಾಲ್ಮೊಸರನು| ಕುಡಿಯಲು ತಕ್ಕವನೆ 1 ಪರಿಪರಿಯಿಂದಲಿ ಮುಂದಕೆ ಕರೆದರೆ|ಸರಕನೆ ಹೆಜ್ಜಿಡನು| ಹರಿ ನಿಮ್ಮುಡುಗೆಯ ಸೆಳೆದು ಕೊಳುತಲಿ| ಮರವನೆ ಏರುವನೆ 2 ಸುರಜನ ಪಾಲಕ ಮಹಿಪತಿ ನಂದನ|ಜೀವನ ಮೂರುತಿಯಾ| ಕುರುಪಿಡಬಹುದೆನೆ ಮಾನವನೆಂದು| ಲೀಲೆಯ ದೋರುತಿಹ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಪ್ಪಾ ಕೇಳೊ ನಿನ್ನ ಗುರುತ ನೀನೆ ತಪ್ಪಿದೆಪ್ಪ | ತುಪ್ಪ ಹಾಲು ಬಿಟ್ಟು ನೀ ಅಡವಿಯ ಸೊಪ್ಪು ಮೆಲಬ್ಯಾಡಪ್ಪ ಪ ಅನುದಿನ ನೆನೆದು ಮಾಡುವ ಕರ್ಮವು ನಿನಗಿಲ್ಲಪ್ಪ | ಚಿನುಮಯಾತ್ಮಕ ಬ್ರಹ್ಮನು ನೀನು ಅನುಮಾನ ಇದಕಿಲ್ಲಪ್ಪ 1 ನಿತ್ಯ ಬೋಧಾಮೃತವ ಕುಡಿಯಪ್ಪ | ನಾದ ಬಿಂದು ಕಲಾತೀತರು ಹಾಡುವ ಪದವ್ಯಾಕಪ್ಪ | ಸಾಧು ಪುರುಷರು ಹೋದ ಹಾದಿಯ ಹಿಡಿದು ಮುಕ್ತಿ ಪಡೆಯಪ್ಪ 2 ಇಂದು ನಾಳೆ ಎಂಬುವದೊಂದು ಸಂಶಯ ನಿನಗೆ ಬ್ಯಾಡಪ್ಪ | ಕುಂದು ಕೊರತೆಯು ಇಲ್ಲಾತನಿಗೆ ಆನಂದವೆ ಸ್ವಾದವಪ್ಪ | ಬಂದು ಹೋಗಿ ನೀ ಭವಸಾಗರದೊಳು ಬಹು ಪರಿಯಿಂದಲಿ ನೊಂದೆಪ್ಪ | ತಂದೆಯಾದ ಭವತಾರಕನ ಹೊಂದಿ ದಿನವ ಕಳೆಯಪ್ಪ 3
--------------
ಭಾವತರಕರು
ಇಂದಿರೇಶ ಭವಬಂಧನ ಬಿಡಿಸೊ ನಿನ್ನಾನಂದದೊಳಿರಿಸೊ ಪ ಸಿಂಧುಶಯನ ಗೋವಿಂದ ಮುರಾರೆ ಅಚಿಂತ್ಯಾದ್ಭುತ ಶೌರೆ ಅ.ಪ. ತಾಳಲಾರೆನೊ ಈ ತಾಪತ್ರಯ ಹರಿಸೊ ನಿನ್ನವನೆನಿಸೊ ಕಾಲಕರ್ಮ ಕೋಟಲೆ ತಪ್ಪದಲ್ಲ ನೀ ಕೇಳೆನ್ನ ಸೊಲ್ಲ ವಾಕು ಪಾಲಿಸಿ ಎನ್ನನು ಪಾರುಗಾಣಿಸೊ ಫಣಿರಾಜಶಯ್ಯ 1 ಪರಿಪರಿಯಿಂದಲಿ ಜನ್ಮ ಧರಿಸಿ ಕರೆದುತಂದೆ ಈ ಜನ್ಮದಿ ನಿಂದೆ ಅರಿಯದವರಂತಿರುವರೆ ಕಾಯುವ ಕರುಣಿ ನೀನು ದೀನಜನ ಸುರಧೇನು 2 ಅಂಬರ ಮಣಿಯಂತೆ ಬಿಂಬ ಮೊಳಗ್ಹೊಳೆದು ದುರಂತ ಕರ್ಮಂಗಳ ಕಳೆದು ಹಂಬಲಿಸುವ ಭಕುತರ ಬೆಂಬಲಿಗನೆನಿಸಿ ಸಂತತ ನಿನ್ನ ಸುಖಸಿರಿಯ ಸುರಿಸೊ 3 ಬಿಂಬವು ಒಲಿದರೆ ಪ್ರತಿಬಿಂಬ ಫಲಸುವದುಂಟು ಈ ಮಾತು ನಿಘಂಟು ಬಾಂಬೊಳೆ ಹರಿಸಿದ ಹರಿ ಮಾನಿಧಿವಿಠಲ ನೀನಲ್ಲದಿನ್ಯಾರೋ ದೇವರ ದೇವಾ 4
--------------
ಮಹಾನಿಥಿವಿಠಲ
ಈತÀನೀಗ ವಿಜಯ ವಿಠ್ಠಲಾ ಯಾತನೆಯನು ಕಳೆದು ಪೊರೆವಾ ಪ ಕರೆದರೊಂದೆ ನುಡಿಗೆ ಬಂದು ಕರುಣದಿಂದ ಮುಂದೆ ನಿಂದು ಕರವ ಪಿಡಿದು ಅಂದು ಅಭಯ ಕರವ ಪಾಲಿಸಿದ ದಯಾಸಿಂಧು ಪರಿಪರಿಯಿಂದಲಿ ಹಿಂದು ಮುಂದು ದುರಿತದಿಂದ ನೊಂದು ಬಂದು ಮೊರೆ ವಿಚಾರಿಸಿ ಸಾಕಿದನಿಂದು 1 ಅಚ್ಯುತಾನಂತನೆಂಬ ನಾಮಾ ಅಚ್ಚು ಸುಧೆಯೆನಗೆ ನೇಮಾ ನಿಚ್ಚ ಉಣಲಿಕಿತ್ತ ಪ್ರೇಮಾ ಚಚ್ಚಲದಲಿ ಪೂರ್ಣಕಾಮಾ ಹೆಚ್ಚಿ ಬಪ್ಪ ಮದದಾ ಸ್ತೋಮಾ ನುಚ್ಚು ಮಾಡಿ ಬಿಡುವ ಭೀಮಾ ಸುಚ್ಚರಿತ ಸಾರ್ವಭೌಮಾ2 ಮೊದಲೆ ಗುರು ಪುರಂದರದಾಸರಾ ಹೃದಯದೊಳಗೆ ನಿಂದಾ ಶೃಂಗಾರಾ ಉದಧಿಯೋ ಇದು ಬಣ್ಣಿಸಿಬಲ್ಲ್ಲಿರಾ ತ್ರಿದಶರೊಳಗೆ ಕಾಣೆ ಜ್ಞಾನರ ಸದಮಲಾನಂದ ಪೂರ್ಣ ಇಂದಿರಾ ಸದನಾ ಪ್ರತಾಪಗುಣ ಪಾರಾವಾರಾ ಪದೋಪದಿಗೆ ಎನ್ನಯ ಮನೋಹರಾ3
--------------
ವಿಜಯದಾಸ
ಕರೆದೂ ಕೈ ಪಿಡಿಯೊ ಎನ್ನಾ ಗುರುವರ ಮುನ್ನಾಕರೆದೂ ಕೈ ಪಿಡಿಯೊ ಎನ್ನಾ ಪ ಪರಿ ಪರಿಯಿಂದಲಿ ಅ.ಪ. ಪಸುಳೆ ತಪ್ಪನು ಮಾಡೆ | ಶಿಶುವ ಕರೆಯಳ ಜನನಿಕಸವಿಸಿ ಕಳೆದೆನಗೆ | ಕುಶಲವ ನೀಯೋ ||ಕಸರು ಕರ್ಮವ ಕಳೆದು | ಬಿಸಜನಾಭನ ಹೃನ್‍ಮುಸುಕಿಲಿ ತೋರಿಸಿ | ಪಸರಿಸು ಜ್ಞಾನವ 1 ಮಾನವ ನಾನು | ನಿನ್ನ ಮಹಿಮೆಯನ್ನಯೇನ ಬಣ್ಣಿಪೆನಯ್ಯ | ಘನದಯಾ ಪೂರ್ಣ 2 ಚಾರು ವಾರಿಧಿ ಗುರುವೇ |ಆರೂ ಕಾಯುವರಿಲ್ಲ | ಸಾರಿದೆ ತವ ಚರಣಭೋರಿಟ್ಟು ಮೊರೆಯಿಡುವೆ | ಧೀರ ಕಾಯಲಿ ಬೇಕೊ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕರೆಯೆ ಯಶೋದ ಕೃಷ್ಣನ ಕರೆಯೆ ಪ ನರಹರಿಯೆ ನಂದಗೋಪನ ಮರೆಯೆ ಮಾತಲಿ ಮಹಾ ದೊರೆಯೆ ಇವನ ಗುಣ- ವರಿಯೆವು ನೋಡಲಾಶ್ಚರ್ಯವಾಗೋದು ನಿ- ನ್ನರಮನೆಗೀತನ ಕರೆಯೆ 1 ನೋಡೆ ಈತಗೆ ಇನ್ಯಾರೀಡೇ ಕೋಪವ ಮಾಡಬ್ಯಾಡೆ ಮಾತಿಗೆ ಮಾತ- ನಾಡಿಂದಿರಾಪತಿ ಗಾಡಿಕಾರನೆಂದಾಡಿಕೊಂಬೆವೆ ನಮ್ಮ ಕಾಡುವೋದುಚಿತವೆ 2 ಬಾಲಗೋಪಾಲ ಕೃಷ್ಣ ಲೀಲೆಮಾಡುವೊ ದೊಡ್ಡಿ ್ವ ಶಾಲ ಉದರಕ್ಕೆ ಬೆಣ್ಣೆ ಪಾಲುಕುಡಿದು ನಮ್ಮಾಲಯದೊಳು ಬಂದು ಕಾಲಂದಿಗೆ ಧ್ವನಿ ಆಲಿಸಿ ಕೃಷ್ಣನ 3 ರೂಪನೋಡಿದರೆ ಸಣ್ಣ ಪೋರನೆನಿಸುವ ಅಪಾರಮಹಿಮ ಕೃಷ್ಣನ ವ್ಯಾಪಾರವ ನಾನಾಪರಿಯಿಂದಲಿ ಗೋಪನ ಮುಂದ್ಹೇ- ಳೀಪುರ ಬಿಡುವೆವೆ 4 ತುರುವ ಕಾಯುತ ಭಾಳಾತುರ ವಾರಿಜಾಕ್ಷ ನಮ್ಮ ತುರುವ ಪಿಡಿದು ನಿಂತ ತುರುವ ಭಾರಕೆ ಸೀರೆ ಜರಿದು ಬೀಳುತಲೆ ಸರಿಜನರೊಳು ಮಾನ ತೊರೆದಂತಾಯಿತು 5 ಕಾಂತರಿದ್ದಂಥ ಏಕಾಂತದೊಳಗೆ ಬಂದು ನಿಂತರಿಬ್ಬರೊಳಗ- ಭೃಂತರ ತಿಳಿಯದೆ ಭ್ರಾಂತಳಾದೆ ಎನ್ನ ಕಾಂತನೋ ಇವ ಶ್ರೀಕಾಂತನೊ ತಿಳಿಯದು 6 ನಂದನಂದನ ನಿನ್ನ ಕಂದ ಮಾಡುವೋದು ಬಾ- ಯಿಂದ ಹೇಳಿದರೆನ್ನ ಬಂಧು ಜನರು ಭೀಮೇಶಕೃಷ್ಣಗೆ - ನ್ನೊ ್ಹಂದಿಸಿಬಿಡುವೋರು ಸಂದೇಹವಿಲ್ಲದೆ 7
--------------
ಹರಪನಹಳ್ಳಿಭೀಮವ್ವ
ಕೇಳಿರೋ ಕೇಳಿರೋ ಆನಂದ ನುಡಿಗಳ | ಜಾಳಿಲಿ ದೋಷವ ಹರಿನಾಮ ನೆನೆಯುತ | ಕೇಳಿ ಕೇಳಿ ಕೇಳಿ ಕೇಳಿ ಪ ಯುಗದಂತಿಲಿ ಸರ್ವ ಮತವೆಲ್ಲ ಕೆಡಲಾಗಿ | ಜಗದೋದ್ಧಾರ ಜಗದೀಶ ಬರು ತಾನೆ 1 ಸ್ವ ಶಕ್ತಿ ಕುದುರೆಯ ನೇರಿ ರಾವುತನಾಗಿ | ಅಸಮ ಪೊನ್ನೀಟೆಯ ಹಿಡಕೊಂಡು ಬರುತಾನೆ2 ನಾಕು ವೇದಗಳೆಂಬಾ ಕುದುರೆಯ ಕಾಲವು | ಬೇಕಾದ ಅವಯವ ಆರು ಶಾಸ್ತ್ರಗಳಿವೆ3 ಮೂರು ಪೌರಾಣ ಶೃಂಗಾರಾಭರಣವು | ಶರಣವತ್ಸಲನೆಂಬ ಕಡಿವಾಣ ಕುದುರೆಗೆ4 ಬೋಧ ಹಕ್ಕರಿಕೆಯು | ಭಾವಿಸೆ ಭೂ ಭಾಗವೆಂಬುದು ಪಾವುಡವು5 ಈ ಪರಿಯಿಂದಲಿ ಭೋರ್ಗರೆವುತ ಬರೆ | ತಾಪವಡಗಿ ಸುಖ ತಂಗಾಳಿ ಬಂದೀತು 6 ತಾಯಿಯ ಧ್ವನಿ ಕೇಳಿ ಮಕ್ಕಳು ಬಹುಪರಿ | ಬಾಯ ದೆರವುತಲಿ ಜನಜಡಿ ಬಹುದು7 ಅವರಿ-ಗಭಯ ಕೊಟ್ಟು ಅಧರ್ಮವೇ ಕಿತ್ತಿ ಯವನರ ಹಂತಿಯ ಕಟ್ಟಿ ತಾ ತುಳಿಸುವ 8 ಹೊಟ್ಟವ ಹಾರಿಸಿ ಘಟ್ಟಿ ತಾ ಉಳಹುವ | ಸೃಷ್ಟಿಲಿ ಧರ್ಮ ಸಂ-ಸ್ಥಾಪನೆ ಮಾಡುವಾ 9 ಮೊದಲಂತೆ ಜಗವನು ಸುಖದಲಿ ಇಡುವನು | ಮುದದಿಂದ ಸಾರಿದ ಗುರುವರ ಮಹಿಪತಿ 10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯಗೋಪಾಲಕೃಷ್ಣಾ | ಜಯ ಜಯಯೋಗೀ ಮಾನಸ ಮೋಹನ ಘನಕರುಣಾ ಪ ದೇವಕಿವಸುದೇವರ ಭಾವನೆ ಪೂರಿಸಲಿ | ಶ್ರಾವಣ ಕೃಷ್ಣಪಕ್ಷದ ಅಷ್ಟಮಿರೋಹಿಣಿಲಿ || ತೀವಿದ ಚಂದ್ರೋದಯ ರಾತ್ರಿಯ ಕಾಲದಲಿ | ಭುವನದಿ ಅವತಾರವ ಮಾಡಿದೆನೀ ವೇಗದಲಿ 1 ಸೊಕ್ಕಿದ ಕಂಸನ ಕೊಂದು ದುಷ್ಕ್ರತನಾಶನವಾ | ಮುಖ್ಯಮಾಡು ಕಾರಣ ಧರ್ಮ ಸ್ಥಾಪನವಾ || ಸಖ್ಯದಿ ಕಟ್ಟಲು ಉಗ್ರಶೇನಗೆ ಪಟ್ಟವಾ | ಅಕ್ಕರದಿಂದಲಿ ಬೆಳೆದೆ ಗೋಕುಲದಲಿ ದೇವಾ 2 ಕುರುಕುಲಾನ್ವಯ ಜೀವನರೆಲ್ಲರ ಸೆಬಡಿದೆ | ಚರಣವನಂಬಿದ ಪಾಂಡವರನು ಸ್ಥಾಪನಗೈದೆ | ಪರಪರಿಯಿಂದಲಿ ಭಜಿಸುವ ಭಕ್ತಾವಳಿ ಪೊರೆದೇ | ಗುರುವರಮಹೀಪತಿ ಸುತ ಪ್ರಭುಸಲಹೆನ್ನನು ಬಿಡದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತ್ರಿಮೂರ್ತಿಗಳ ಲಾಲಿ ಜೋಜೋ ಬಾಲಕೃಷ್ಣ ಜೋಗುಳವ ಹಾಡುತ್ತ ತೂಗುವೆ ನಾ ಪ. ನವರತ್ನ ಖಚಿತದ ತೊಟ್ಟಿಲ ಕಟ್ಟಿ ನಾಗಸಂಪಿಗೆ ಜಾಜಿ ಮಾಲೆಯನ್ಹಾಕಿ ನಾಲ್ಕುವೇದದ ಸರಪಣಿ ಬಿಗಿದು ನಾಗಶಯನನ ಮಲಗಿಸಿ ಬೇಗ ರಾಗದಿ ಅನುಸೂಯ ಪಾಡಿ ತೂಗಿದಳು ಜೋ 1 ಮುತ್ತು ಮಾಣಿಕ್ಯದ ತೊಟ್ಟಿಲ ಕಟ್ಟಿ ಮುತ್ತು ಪವಳದ ಸರಪಣಿ ಬಿಗಿದು ಮುದದಿ ಮಲ್ಲಿಗೆ ಜಾಜಿ ಪುಷ್ಪವ ಕಟ್ಟಿ ಮುಕ್ತ ಬ್ರಹ್ಮನ ಮಲಗಿಸಿ ಬೇಗ ಅರ್ತಿಲಿ ಅನಸೂಯ ತೂಗಿದಳಾಗ 2 ನೀಲ ಮಾಣಿಕ್ಯದ್ವಜ್ರತೊಟ್ಟಿಲ ಕಟ್ಟಿ ಮೇಲೆ ಕೆಂಪಿನ ಸರಪಳಿ ಬಿಗಿದು ಮಾಲತಿ ಮಲ್ಲಿಗೆ ಮಾಲೆಯ ಕಟ್ಟಿ ನೀಲಕಂಠನ ಮಲಗಿಸಿ ಬೇಗ ಬಾಲನ ಅನಸೂಯ ತೂಗಿದಳಾಗ 3 ಈ ಪರಿಯಿಂದಲಿ ತೂಗುತಿರೆ ತಾಪಸ ಅತ್ರಿಋಷಿಯಾಗ ಬರೆ ಭೂಪರ ತೊಟ್ಟಿಲು ಕಾಣ ಬರೆ ಪರಿ ಶಿಶುಗಳು ಯಾರೆನ್ನುತಾ ಶ್ಚರ್ಯದಲಿ ಸತಿಯ ಕೇಳುತಾ 4 ನಮ್ಮ ಪುಣ್ಯದ ಫಲ ವದಗಿತೆಂದು ಮುನ್ನ ತ್ರಿಮೂರ್ತಿಗಳು ಶಿಶುರೂಪದಿ ಬಂದು ತನ್ನ ಪತಿಯ ಕೂಡ ಅರುಹುತಲೆ ಚಿನ್ನರ ತೂಗುತ್ತ ಹರುಷದಿ ಚೆನ್ನ ಶ್ರೀ ಶ್ರೀನಿವಾಸನ್ನ ತೂಗಿದಳು 5
--------------
ಸರಸ್ವತಿ ಬಾಯಿ
ದಾಸರ ಭಾಗ್ಯವಿದು-ಪುರಂದರ-ದಾಸರ ಭಾಗ್ಯವಿದು ಪ ತುಂಬಿ ಸೂಸುತಲಿದೆ ಅ.ಪ ಭೂಸುರ ಜನುಮದಿ ಬಂದು ಬೆಳೆದು ಉಪ- ದೇಶಗೊಂಡು ಮಧ್ವಮತ ಪೊಂದಿ ಲೇಸಾಗಿ ಭಕ್ತಿ ವಿರಕ್ತಿ ಜ್ಞಾನದ ವಿ- ಶೇಷವಾಗಿ ನಾ ಬಾಳುವದೆಲ್ಲ 1 ಸಜ್ಜನ ಸಂಗತಿ ಮಾಡಿ ದುರುಳಜನ ವರ್ಜನಗೈದು ಸತ್ಕರ್ಮಗಳ ಆರ್ಜಿಸಿ ನಾಮ ಮುದ್ರೆ ಹಗಲು ಇರಳು ನಿ ರ್ಲಜ್ಜನಾಗಿ ನಾ ಬಾಳುವುದೆಲ್ಲ 2 ಶ್ರವಣ ಕೀರ್ತನೆ ವಂದನೆ ಸ್ತೋತ್ರ ಹರಿನಾಮ ತವಕದಿಂದ ನುಡಿಯುವ ಕವನ ನವನವ ವಚನವು ಮಂತ್ರ ಸಂಕಲ್ಪವು ಸವಿದು ಸ್ಮರಿಸಿ ನಾ ಬಾಳುವುದೆಲ್ಲ 3 ಯಾತ್ರೆ ತೀರ್ಥ ದಿವ್ಯ ದಾನಧರ್ಮಂಗಳು ಕ್ಷೇತ್ರ ಮೆಟ್ಟಿ ಬಹ ಸಂಭ್ರಮವು ಮಿತ್ರರ ಕೂಡಾಡಿ ಹರಿಪರನೆಂದು ಸ- ತ್ಪಾತ್ರನಾಗಿ ನಾ ಬಾಳುವುದೆಲ್ಲ 4 ಹರಿದಿನದುಪವಾಸ ಜಾಗರಣೆ ಪಾರಣಿ ಗುರು ಹಿರಿಯರಲಿ ವಿಹಿತಸೇವೆ ಹಿರಿದಾಗಿ ಮಾಡೋಡು ಪರಿಪರಿಯಿಂದಲಿ ಹರುಷದಿಂದಲಿ ನಲಿದಾಡುವುದೆಲ್ಲ 5 ಷಡುರಸಭೋಜನ ದಿವ್ಯವಸನ ನಿತ್ಯ ಉಡುವುದು ಹೊದೆವುದು ಹಸನಾಗಿ ತಡೆಯದೆ ಜನರಿಂದ ಪೂಜೆಗೊಂಡು ಸುಖ- ಬಡಿಸುತಿರುವ ವಿಚಿತ್ರಗಳೆಲ್ಲ 6 ಮನವೆ ಹಿಗ್ಗದಿರು ಹಿಯ್ಯಾಳಿಕೆಯಿಂದ ಗುಣಿಸಿಕೊ ಸುಖವಾವುದು ಲೇಶ ನಿನಗೆ ಸ್ವತಂತ್ರ ಎಂಬುದು ಕಾಣೆನೆಂದಿಗು ಗುಣನಿಧಿ ವಿಜಯವಿಠ್ಠಲನ ಪ್ರೇರಣೆಯೆಲ್ಲ 7
--------------
ವಿಜಯದಾಸ
ದಾಸರ ಶಿಶು ನಾನು ಶ್ರೀಹರಿ ದಾಸರು ಶಿಶು ನಾನು ಪ ಹೇಸಿ ಪ್ರಪಂಚದ ವಾಸನಳಿದು ಜಗ ದೀಶನ ಶ್ರೀಪಾದದಾಸಾನುದಾಸರ ಅ.ಪ ಮರವೆ ಮಾಯ ತರಿದು ಲೋಕ ದರಿವಿನೊಳಗೆ ಬೆರೆದು ಪರಿಪರಿಯಿಂದಲಿ ನರಹರಿ ಚರಣವ ಸ್ಮರಣೆಯೊಳಿಟ್ಟು ಬಲು ಹಿರಿಹಿರಿ ಹಿಗ್ಗುವ 1 ಮೋಸಕ್ಲೇಶವನಳಿದು ಭವದ ಆಶಾಪಾಶತುಳಿದು ಸೋಸಿಲಿಂದ ಅನುಮೇಷ ಬಿಡದೆ ಹರಿ ಸಾಸಿರ ನಾಮಮಂ ಬೇಸರದ್ಹೊಗಳುವ 2 ಸತ್ಯ ಸನ್ಮಾರ್ಗಬಿಡದೆ ಮನವಂ ಎತ್ತ ಕದಲಗೊಡದೆ ನಿತ್ಯ ನಿರ್ಮಲಾತ್ಮ ಕರ್ತು ಶ್ರೀರಾಮನ ಅರ್ತು ಭಜಿಸುವಂಥ 3
--------------
ರಾಮದಾಸರು
ದೀನ ಬಂಧು ಕರುಣಾಸಿಂಧು ನೀನೆ ಬಂದು ರಕ್ಷಿಸೆಂದು ಪ. ನಿತ್ಯ ಮಂಗಳಾತ್ಮ ನಿಜ ಭೃತ್ಯಪೋಷಣ ಪರಾತ್ಮ ನಿತ್ಯ ಕಾರುಣ್ಯ ಚಿತ್ತಜನಯ್ಯನೆ ಈ ಜಗತ್ತಿನೊಳು ನಿನ್ನ ಪೋಲ್ಪ ಉತ್ತಮ ವಸ್ತುವ ಕಾಣೆ ಸತ್ಯಭಾಮಾ ವರ ನಿನ್ನಾಣೆ 1 ಸರಸಿಜಾಸನ ತಾನು ಪರಮ ಭಕುತಿಯಿಂದ ಸಿರಿವರ ನಿನ್ನ ನಾನಾ ಪರಿಯಿಂದಲಿ ಶರದೃತುವಿಲಿ ಬಹುಧರವಾಗಿ ಪೂಜಿಸುವ- ದರಿತು ಪಾಡುವೆನೀಗ ಕರುಣಿಸೆನ್ನ ನೀ ಬೇಗ 2 ಮತ್ಸಕೇತುಪಿತ ಭಕ್ತವತ್ಸಲ ವೆಂಕಟನಾಥ ತತ್ಸದೆಂಬೋ ಮಂತ್ರಾಗಮ್ಯ ಕುತ್ಸಿತಾಗಮ್ಯ ಉತ್ಸವ ಕಾಲದಲಿ ಸಿರಿವತ್ಸ ಬೆನ್ಹಾನಿನ್ನನು ನಿ- ರ್ಮತ್ಸರದಿ ನಂಬಿದೆ ಗೋವತ್ಸವೈದುವಂತೆ ಬಾರೊ 3
--------------
ತುಪಾಕಿ ವೆಂಕಟರಮಣಾಚಾರ್ಯ
ಧೇನಿಸೊ ಶ್ರೀಹರಿಯ ಮಹಿಮೆಯ ಪ ಧೇನಿಸು ಲಯದ ವಿಸ್ತಾರ ಚತುರಾ ನಾನಕಲ್ಪದ ವಿವರಾ ||ಆಹಾ|| ಧೇನಿಸು ಶತಾನಂದಗೆ ಶತ- ಮಾನಕಾಲದಲ್ಲಿ ಇದ್ದು ನಡೆಸುವ ಹರಿಕಾರ್ಯ ಅ.ಪ ಮೊದಲರ್ಧ ಶತಮಾನ ಸೂಕ್ಷ್ಮ ಸೃಷ್ಟಿ ಪದುಮನ ತೋರಿದ ಮಹಾಮಹಿಮ ಆಗ ಅದೆ ಪ್ರಥಮ ಪರಾರ್ಧವು ನೇಮ ಮೇಲೆ ದ್ವಿತೀಯ ಭಾಗಕ್ಕೆಲ್ಲ ಬ್ರಹ್ಮ ||ಆಹಾ|| ಅದರೊಳು ತ್ರಿದಶ ಏಳರ್ಧ ವರ್ಷವು ಪದುಮಜನಿಂದ ರಾಜ್ಯವನಾಳಿಸಿದ ಪರಿಯನು 1 ದ್ವಾದಶಾರ್ಧವರುಷ ತಾ ಉಳಿಯೆ ಆಗ ತೋರ್ದ ಅದುಭೂತವಾದ ಮಹಾಪ್ರಳಯ ಸೂಚ- ನಾದಿ ಕಾರ್ಯವು ತಾ ಮೆರೆಯೆ ಶತ ಅಬ್ದ ಅನಾವೃಷ್ಟಿ ತೋರಿರೆ ಆಹಾ|| ಉದಧಿ ಶೋಷಣೆಯಿಂದ ಸರ್ವಸಂಹಾರವು 2 ಮೇರುಪರ್ವತ ಸ್ಥಳದಲ್ಲಿ ಇದ್ದ ವಿ- ಧಿರುದ್ರಾದಿಗಳೆಲ್ಲರಲ್ಲಿ ಮಹ ತೋರುತ್ತ ಕುಣಿದಾಡುತ್ತಲಿ ||ಆಹಾ|| ಸುರರವಯವಗಳ ತಾನಲಂಕರಿಸಿದನ 3 ನರಹರಿ ನರ್ತನ ಮಾಡಿ ತನ್ನ ಕರದಿ ತ್ರಿಶೂಲವನ್ನು ನೀಡಿ ದಿ- ಕ್ಕರಿಗಳ ಪೋಣಿಸಿ ಆಡಿ ಸರ್ವರಉ- ದರದೋಳಿಟ್ಟು ಕೂಡಿ ||ಆಹಾ|| ಗ್ರಾಸ ತ್ವರಿತದಿ ತಾ ಮಾಡಿ ಕ್ರೀಡಿಸುತಿರ್ಪನ್ನ 4 ವಾಯುದೇವರ ಗದಾಪ್ರಹಾರದಿಂದ ಭಯ ಹುಂಕಾರದಿಂದ ಜೀವರ ಲಿಂಗ ಆಯತ ಸ್ಥಳದಲ್ಲಿಟ್ಟವರಾ ||ಆಹಾ|| ಲಯಕಾಲದಿ ಸಂಕರುಷಣ ಮುಖದಿಂದ ಲಯವಾಗಲು ಅಗ್ನಿ ಪೊರಟು ದಹಿಪುದಾ 5 ಕರಿಯ ಸೊಂಡಿಲಿನಂತೆ ಮಳೆಯ ಧಾರೆ ನಿರುತ ಶತವರ್ಷಗರೆಯೆ ನೋಡೆ ಸರ್ವತ್ರ ಜಲಮಯವಾಗೆ ಆಗ ನೀರಜಾಂಡವೆಲ್ಲ ಕರಗೆ ||ಆಹಾ|| ಗರುಡ ಶೇಷ ಮಾರ್ಗವರಿತು ಬರುತಿರ್ಪ ಸರ್ವಜೀವರ ತನ್ನ ಉದರದೊಳಿಟ್ಟನ್ನಾ 6 ಅರಿಯೋ ನೀ ಶೇಷಮಾರ್ಗವನ್ನೂ ಇಲ್ಲಿ ಸುರರು ಕುಬೇರನೊಳಿನ್ನು ಆತ ವರುಣನಲ್ಲಿ ಲಯವನ್ನೂ ಚಂದ್ರ ಹರಿಪಾರ್ಷಧರನಿರುದ್ಧನನ್ನು ಆಹಾ ಅನಿರುದ್ಧ ಸನತ್ಕುಮಾರನ್ನ ತಾವು ಪೊಂದಿ ಮಾರ ವಾರುಣಿಯು ಹರಿಮಡದಿಯರಲ್ಲಿ ಲಯವಾ 7 ಸುರರು ಮೊದಲು ಅಗ್ನಿಯೊಳ್ ಲಯವನ್ನೈದುವರು ಆ ಅಗ್ನಿ ತಾ ಸೂರ್ಯನ್ನ ಸೇರುವನು ಸೂರ್ಯ ತಾ ಗುರುವನ್ನ ಸೇರುವನು ||ಆಹಾ|| ಆಗಲೇ ಸರ್ವಮನುಜರು ಪಿತೃಗಳು ನಿರುಋತಿಯೊಳು ಪೊಕ್ಕು ತಾ ಯಮನಲ್ಲಿ ಸೇರುವಾ 8 ಯಮ ಪ್ರಿಯವ್ರತರಾಯರೆಲ್ಲ ಲಯ ತಮ್ಮ ಸ್ವಾಯಂಭು ಮನುವಿನಲ್ಲಿ ಮತ್ತೆ ಮ- ಹಿಮ ಭೃಗುವು ದಕ್ಷನಲ್ಲಿ ಲಯವು ಆ ಮಹಾದಕ್ಷ ಸ್ವಾಯಂಭು ಇಂದ್ರನಲ್ಲೀ-ಆಹಾ ಅಮರಪತಿಯು ತಾ ಸೌಪರಣಿಯನು ಪೊಂದಿ ಈ ಮಾರ್ಗದಿ ತಾನು ಗರುಡನ್ನ ಸೇರುವುದು 9 ಶೇಷಗರುಡರೊಡಗೂಡಿ ಆಗ ಸರಸ್ವತಿಯನ್ನೆ ಪೊಂದುವರು ಮತ್ತೆ ಆಸುವಿರಂಚಿ ವಾಯುಗಳು ತಾವು ಸರಸ್ವತಿಯನ್ನೆ ಪೊಂದುವರು ಆಹಾ ಈ ಸೂಕ್ಷ್ಮಲಯವನ್ನೆ ಕ್ರಮವರಿತು ನೀನೀಗ 10 ಸೂತ್ರನಾಮಕ ವಾಯುದೇವ ರುದ್ರ ಉಮೆಪ್ರದ್ಯುಮ್ನದ್ವಾರ ತ್ರಾತ ಸಂಕುರುಷಣನಾ ದಯದಿ ಜಗ- ನ್ಮಾತೆ ಲಕ್ಷ್ಮಿಯೊಳು ಸೇರುವರು ||ಆಹಾ|| ಚತುರಾಸ್ಯ ಜೀವರ ತನ್ನುದರದೊಳಿಟ್ಟು ಅತಿಮೋದದಿಂದ ವಿರಾಟನ್ನೈದುವುದು11 ವಿರಾಟ್ ಬ್ರಹ್ಮನು ತಾನೆಲ್ಲಾ ತನ್ನ ಆ ವರಣದಲ್ಲಿ ಇಪ್ಪಂಥ ತನ್ನ ಧರೆಯಲ್ಲಿ ಲೀನವಾಗುವ ಆಗ ಪರಿಪರಿಯಿಂದ ತನ್ಮಾತÀ್ರ ಆಹಾ ಅರಿತು ಶಬ್ದಸ್ಪರ್ಶರೂಪರಸಗಂಧ ಪರಿಪರಿಯಿಂದಲಿ ಲಯವನ್ನೈದುವುದಾ12 ಗಂಧದ್ವಾರ ಲಯತನ್ನ ಬಿಲದಿ ಜಾತ ವೇದದಲ್ಲಿ ರಸ ಲಯವು ರೂಪ ದ್ವಾರ ಲಯ ಆಕಾಶದೊಳು-ಆಹಾ- ಶಬ್ದದ್ವಾರ ಲಯತಮ ಅಹಂಕಾರಾದಿ ತದಾಂತರ್ಗತÀ ಭಗವದ್ರೂಪದಲ್ಲ್ಯೆಕ್ಯವಾ 13 ಅಹಂಕಾರತ್ರಯದಲಿ ಬಂದಾ ತತ್ತ ್ವ ದೇಹಸೂರರೆಲ್ಲರ ಲಯವು ಇಹ ತತ್ವಾಂತರ್ಗತ ಭಗವದ್ರೂಪಕೆ ||ಆಗ|| ಅಲ್ಲಲ್ಲಿ ತನ್ನೊಳೈಕ್ಯವೂ-ಆಹಾ ಅಹಂಕಾರತ್ರಯ ಮಹತ್ತತ್ವದಲ್ಲಿ ಲಯ ಮಹತ್ತತ್ತ ್ವವು ಮೂಲಪ್ರಕೃತಿಯಲ್ಲಿ ಲಯವು 14 ವಾಸುದೇವಾದಿ ಚತುರ ರೂಪ ಮತ್ಸ್ಯ ಶ್ರೀಶನನಂತಾದಿರೂಪ ಮತ್ತು ಶ್ರೀಶನಷ್ಟೋತ್ತರ ರೂಪ ||ಆಹಾ|| ತಾ ಸಕಲರೂಪಗಳು ಮೂಲರೂಪದೊಳೈಕ್ಯ ಶಾಶ್ವತನಾದ ಶ್ರೀ ಸಚ್ಚಿದಾನಂದನ್ನಾ 15 ಗುಣಮಾನಿ ಶ್ರೀ ಭೂ ದುರ್ಗಾ ಅಂ- ಭ್ರಣಿ ರೂಪವನ್ನೆ ತಾ ಧರಿಸೀ ಸಂ- ಪೂರ್ಣನ್ನ ಸಾಮೀಪ್ಯ ಸೇರಿ ಪೂರ್ಣ ಕಾಮನ್ನ ಎಡಬಿಡದೆ ನೋಡೀ ||ಆಹಾ|| ಕ್ಷಣ ಬಿಡದೊಡೆಯನ ಅಗಣಿತಗುಣಗಳ ಕಡೆಗಾಣದೆ ನೋಳ್ಪ ನಿತ್ಯಮುಕ್ತಳ ಸಹಿತಾ16 ಏಕೋ ನಾರಾಯಣ ಆಸೀತ ಅ- ನೇಕ ಜನರ ಸಲಹಲಿನ್ನು ತಾನೆ ಸಾಕಾರದಲಿ ನಿಂದಿಹನು ಇಂತು ವೇಂಕಟಾಚಲದಿ ಇನ್ನು ಮುನ್ನು ||ಆಹಾ|| ಏಕಮನಸಿನಿಂದ ಭಜಿಪ ಭಕ್ತರನ ತಾ ನಿ- ನಿತ್ಯ 17
--------------
ಉರಗಾದ್ರಿವಾಸವಿಠಲದಾಸರು
ಧ್ಯಾನವನು ಮಾಡಿ ತ್ರಿವೇಣಿ ಕ್ಷೇತ್ರವ ಬಿಡದೆ | ಙÁ್ಞನಭಕ್ತಿ ವೈರಾಗ್ಯ ನಾನಾ ಸತ್ಕರ್ಮ ನಿ | ಸಿರಿ | ಪ್ರಾಣೇಶ ಕುಣಿಯುವನಯ್ಯಾ ಅಯ್ಯಯ್ಯಾ ಪ ಹರಿವೀರ ದ್ರುಪದನುದ್ಧರಿಸಿವಾಗಲು ತನ್ನ | ಶರೀರದಿಂದಲಿ ಅಷ್ಟಕೇತ್ರಗಳ ಪುಟ್ಟಿಸಿ | ವರದೇಶ ವೈಕುಂಠದಲ್ಲಿಟ್ಟನು ಸಪ್ತ | ಪಿರಿಸಹಿತ ತೀರ್ಥರಾಜಾ || ಮೆರೆವದಿದೆ ಪುಂ ಕ್ಷೇತ್ರ ಉಳಿದವೇಳು ಸ್ತ್ರೀ | ಇರುತಿಪ್ಪವಲ್ಲಿ ಮಿಗಿಲಿದಾದಕೆ ಅತಿಶಯವೊ | ಧರಣಿಯೊಳಗಿದಿ ಕಾಲಾಂತರಕೆ ಹರಿತಂದ ವಟ | ತರು ಸಹವಾಗಿ ಅಯ್ಯಾ ಅಯ್ಯಾ ಅಯ್ಯಾ 1 ತರಣಿಸುತೆ ಮಾನಸೋತ್ತರ ಶೈಲದಲಿ ಕುಳಿತು | ವರರಾಜ ತೀರ್ಥ ಮಾಧವನ ಸಾರುವೆನೆಂದು | ಭರದಿಂದ ತಪವು ಮಾಡೆ ಸರಸಿಜೋದ್ಭವನೊಲಿದು | ವರವಿತ್ತ ಮುಂದೆ ನೀನು ಧರೆಯೊಳು ಕಾಳಿಂ || ದ ರಾಯಗೆ ಕುವರಿ ಎನಿಸಿ ಮಹಾಸರತಿಯಾಗಿ ಪೋಗಿ | ಸಿರಿ ಮಾಧವನ ಚರಣ | ನೆರೆ ಮೆರೆದಳೈಯ್ಯಾ ಅಯ್ಯಾ ಅಯ್ಯಾ ಅಯ್ಯಾ 2 ತುರುಗಮ ನೆವದಿಂದ ಅರವತ್ತು ಸಾವಿರ ಸ | ಗರನ ಕುಲದವರು ಕಪಿಲಾಖ್ಯಾ ಹರಿ ಮುನಿಯಿಂದ | ಉರಿದು ಪೋಗೆನಲಾಗಿ ಭಗೀರಥ ಭೂಪತಿ ಉಗ್ರ | ಧುರಧಿ ತಪವನ್ನೆ ಮಾಡೇ | ಹರಿ ನಿರೂಪವ ತಾಳಿ ಗಿರಿಗಹ್ವರವನೊಡದು | ಸಿರಿ | ಚರಣದೆಡೆಯಲ್ಲಿ ನಿಂದು ಯಮುನೆ ವಡಗೊಡಿ ಬಾ | ಮರವಾದವಳಂದು ಅಯ್ಯ ಅಯ್ಯಾ ಅಯ್ಯಾ3 ಸರಸ್ವತಿಯ ಬೆರೆದು ತ್ರಿವೇಣಿ ಸಂಗಮವೆಂದು | ಕರಿಸಿಕೊಂಡಿತು ವಿಕರ ಸೋಮೇಶ್ವರನ ತನಕ | ಪರಮೇಷ್ಠಿಯಿಲ್ಲಿಗೈತಂದು ಬೊಮ್ಮಾಂಡವನು | ಸರಿ ಮಾಡಿ ತೊಲಗಲಾಗೀ || ಸುರರು ಶಿರದೂಗುತಿರೆ | ವರರಾಜತೀರ್ಥ ಮಹಾಭಾರವಾಗಲು ಇದಕೆ | ಸರಿ ಮಿಗಿಲು ಇಲ್ಲೆನುತ ಪೊಗಳಿ ಕರದರು ಮಹ | ವರದ ಪ್ರಯಾಗವೆಂದಯ್ಯಾ ಅಯ್ಯಾ ಅಯ್ಯಾ 4 ಪುರವೈರಿ ನಟಣೆ ಪೂ ತುಲಸಿ ಸುರಪತಿ ವೈಶ್ವಾ | ನರನು ತಿಲ ಹೋಮ ಯಮರಾಯಕಿಂಚಿತು ದಾನ | ನಿಋರುತಿತ ಪೈತೃಕಕರ್ಮ ವರುಣ ಜಲದಾನಸ್ತುತಿ | ಮರುತ ಭೂತನು ಕುಬೇರ || ಅರಗಳಿಗೆ ವಸತಿ ಈ ವಟನಿಕಟ್ಟಿಯಲಿಯಿದ್ದು | ಪರಿಪರಿಯಿಂದಲಿ ಒಲಿಸಿ ಮಾಧವನಿಂದ | ಪುರಷಾರ್ಥ ಪಡೆದು ಸುಖಿಸಿದರು ಸಮಸ್ತ ಬಗೆ | ಅರಿತು ಕೊಂಡಾಡಿ ಜನರೈಯ್ಯ ಅಯ್ಯಾ ಅಯ್ಯಾ5 ಎರಡೊಂದು ಮೂರು ಕುಲದ ಮಧ್ಯ ನಿಂದು | ಕರ್ತಾರಿಯೊಳಗೆ ಮಿಂದು ಸತ್ಕರ್ಮವನೆಸಗಿ ಭೂ | ಸುರರ ಮೆಚ್ಚಿಸಿ ಮನದಿ ಪಾಪಗಳ ಉಚ್ಚರಿಸಿ | ಕರಣ ನಿರ್ಮಲಿನರಾಗಿ | ವಿಪ್ರ ಚಂಡಾಲ || ಪರಿಯಂತ ವಪನವೆ ಮುಖ್ಯವೆಂದು ತಿಳಿದು | ಚರಿಸಿದರೆ ಅನಂತ ಜನ್ಮಕ್ಕೆ ಮಹಾಸೌಖ್ಯ | ಬರಿದೆ ಆಗದು ಕಾಣಿರೈಯ್ಯ ಅಯ್ಯ ಅಯ್ಯಾ6 ಧರೆಯ ಮೇಲೆ ಬಿದ್ದ ಶಿಶುಗಳ ತಂದು ಮುಂಡಣವ | ಉರುತರ ಬುದ್ದಿಯಿಂದ ಮಾಡಿಸಲಿ ಬೇಕು ವಿ | ಸ್ತರಿಸುವೆನಯ್ಯಾ ಯೌವನ ವಾರ್ಧಿಕರಿಗೆ ನಿಜ | ವರನಾರಿಯರಿಗೆ ವೇಣಿ ಸರಿ ಎನ್ನಿ ಸಾತ್ವೀಕ || ಪುರಾಣದಲಿ ಪೇಳಿದ ಎರಡು ಭುಜದಲಿ ತಪ್ತ ಚಕ್ರ | ವಿರಹಿತರಾಗಿ ಬರಲು ಷಣ್ಮುತ ಜನಕ ಗತಿಯಿಲ್ಲ ಮತಿಯಿಲ್ಲ | ಸ್ಥಿರವಾಕ್ಯ ಲಾಲಿಪುದು ಅಯ್ಯಾ ಅಯ್ಯಾ ಅಯ್ಯಾ 7 ಎರಡೈದು ತುರಗ ಕೃತು ಮೊದಲಾದ ತೀರ್ಥಗಳು | ಪರಿಪರಿ ದೇವ ಮುನಿಗಳು ನಾಮದಲಿ ಉಂಟು | ಪರಮಭಕುತಿಯಿಂದ ಮಜ್ಜನಾದಿಯ ಮಾಡೆ | ಪರಲೋಕ ಕರತಳದೊಳು || ಇರುತಿಪ್ಪದು ನಿತ್ಯಾ ಪ್ರಯಾಗರಾಜನ | ಸ್ಮರಣೆ ಮಾಡಿದ ಮನುಜನು ಆವಾವಲ್ಲ್ಯಾದರು ಇರಲು | ಮಾಧವ ವೊಳಗೆ ಮೊಳೆವ | ದರುಶನವ ಕೊಡುತಲಯ್ಯ ಅಯ್ಯಾ ಅಯ್ಯಾ 8 ಅರುಣೋದಯಲೆದ್ದು ಶುದ್ಧಾತ್ಮರಾಗಿ | ಪರಿಪರನೆಂಬೊ ಙÁ್ಞನದಲಿ ಹಾಡಿಪಾಡಿದವರ | ದುರಿತ ರಾಸಿಗಳ ದಹಿಸಿ ನಿಂ | ದಿರದೆ ಸಂತರ ಕೊಡಿಸಿ || ಮೊರೆವುತಿಪ್ಪುದು ಗಡಾ ಸಿದ್ದಾರ್ಥ ಕ್ಷೇತ್ರವಿದು | ನೆರೆನಂಬಿ ಮಾನವನು ಮಾನಸದಲಿ ಭಜಿಸಿ | ಸಿರಿ ವಿಜಯವಿಠ್ಠಲ ಕರುಣವುಳ್ಳವನಿಗೆ | ದೊರಕುವದು ದೊರಕುವದಯ್ಯಾ ಅಯ್ಯಾ ಅಯ್ಯಾ 9
--------------
ವಿಜಯದಾಸ