ಒಟ್ಟು 9 ಕಡೆಗಳಲ್ಲಿ , 9 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಆ) ಶ್ರೀ ಹರಿಯ ಸ್ತುತಿ ಕೃತಿ ಆಗಿ ಹೋಗುವುದು ಜಗದೀಶನಾಕೃತಿಯು ಅಗಾಧವಿಹುದೈಯ್ಯ ಪ ಮಂದರೋದ್ಧರನಾಜ್ಞೆಯಿಂದ ಬ್ರಹ್ಮನು ತಾನು ಇಂದಿಗೆ ಸೃಷ್ಟಿ ಮಾಡುವುದಿಲ್ಲವೇನು ಇಂದೀವರಾಕ್ಷ ಮುಕುಂದನ ದಯದೀ ಪಾಂಡುನಂದನನು ಅಶ್ವಮೇಧವ ಮಾಡಲಿಲ್ಲೇ 1 ಹರಿಯ ಕೃಪೆಯಿಂದಲಿ ವರದಂಜನೇಯ ಸುತನು ಗುರು ರಾಮನಾ ಸತಿಯ ಅರಸುವುದಕ್ಕಾಗಿ ಪರಮ ದುರ್ಲಭವಾದ ಶರಧಿಯನು ಹರುಷದಲಿ ಸಿರಿನಾಮ ಸ್ಮರಿಸಿ ಹಾರಲಿಲ್ಲೇನೋ2 ಧನಭೂಮಿ ಕನ್ಯಾಗ್ರಹದಾನ ಕೊಡಲದಕೆ ಹರಿ ಅನುಕೂಲವಾದಷ್ಟೇ ಫಲಕೊಡುವನು ಮನವನೊಪ್ಪಿಸಿ ಗತಿ ಎಂದು ನೆನೆದವರಿಗೆ ಘನ ಮುಕ್ತಿಯನು ಕೊಡುವ ಹನುಮೇಶವಿಠಲ 3
--------------
ಹನುಮೇಶವಿಠಲ
ನಡತೆ ಹೀನನಾದರೇನಯ್ಯ - ಜಗದೊಡೆಯನ ಭಕುತಿ ಇದ್ದರೆ ಸಾಲದೆ ಪ ಪುಂಡರಾ ಪಾಂಡುನಂದನರು ಮತ್ತದರೊಳುಕಂಡೋರ್ವಳೈವರು ಭೋಗಿಪರುಖಂಡಿಸಿದರು ರಣದೊಳು ಗುರುಹಿರಿಯರಪುಂಡರೀಕಾಕ್ಷನ ಒಲುಮೆಯೊಂದಲ್ಲದೆ 1 ಪರಿ ಬುದ್ಧಿಯ ಹೇಳಿ ಹಿರಣ್ಯಕಕಂದನ ನಿರ್ಬಂಧಿಸುತಿರಲುಅಂದು ಸಾಧಿಸಲು ಕಂಬದ ಬಳಿಯೆ ತನ್ನತಂದೆಯ ಕೊಲಿಸಿದನೆಂಬರು ಜನರು2 ದಾಸಿಯ ಜಠರದೊಳು ಜನಿಸಿದ ವಿದುರ - ಸ-ನ್ಯಾಸಿಯೆಂದೆನಿಸಿಕೊಂಡಸಾಸಿರನಾಮದೊಡೆಯ ಕೃಷ್ಣ ಬಾಡದಾದಿಕೇಶವನ ಭಕುತಿಯೊಂದಿದ್ದರೆ ಸಾಲದೆ 3
--------------
ಕನಕದಾಸ
ಪಾಂಡುನಂದನರಂತೆ ತೋರುತಿಹರು ಪಂಡಿತೋತ್ತುಮ ಸತ್ಯಧ್ಯಾನ ತೀರ್ಥರು ಪ ನಿಜಜ್ಞಾನ ಚಿಹ್ನದಿ ವಿಜಯಾದಿ ಸುದ್ಣುಣದಿ ಸುಜನ ಗಣದಿ | ವೃಜಿನ ವರ್ಜಿತರಾಗಿ ಗಜವರದನಂಘ್ರಿಯುಗ ಭಜನ ತತ್ಪರರಾಗಿ 1 ಧರಮ ಬಲ್ಲವರಾಗಿ ಗುರುಭಕ್ತಿ ಯುತರಾಗಿ ವರ ಸುಗೀತಾರ್ಥ ತತ್ವಜ್ಞರಾಗಿ ಧರಣಿ ಮೇಲುಳ್ಳ ಸುಕ್ಷೇತ್ರ ತತ್ತೀರ್ಥ ಚರಿಸುತಲಿ ಕರಿತುರಗ ಪರಿಪಾಲಿಸುವರಾಗಿ 2 ಋಷಿ ವ್ಯಾಸರುಕ್ತಿಯಲಿ ನಿಶೆಹಗಲು ಮನವಿರಿಸಿ ವಸುಧಿ ಸುರರಿಗೆ ಸನ್ಮೋದಗೊಳಿಸಿ ವಸುದೇವಸುತ ಶಾಮಸುಂದರನ ವಶಗೊಳಿಸಿ ದಶ ದಿಶದಿ ಜಯಭೇರಿ ಅಸಮರೆಂಡೊಡೆಸುತಲಿ 3
--------------
ಶಾಮಸುಂದರ ವಿಠಲ
ಭಳಿಭಳಿರೆ ಶನಿರಾಜ ನೀನೆ ಬಲ್ಲಿದನೊ ಇಳೆ ಮೂರರಲಿ ನಿನಗಿಂ ಬಲ್ಲಿದರ ಕಾಣೆ ಪ ಧರೆಗೆಲ್ಲ ಒರ್ವನೆ ದೊರೆಯಾದ ನಳನನ್ನು ಪರರಾಯನಾಳೆನಿಸಿ ತಿರುವಿಸಿದಿ ಅಶ್ವ ವರ ಸತ್ಯ ಹರಿಶ್ಚಂದ್ರನ್ಹೊಲೆಯನಾಳೆನಿಸವನಿಂ ನಿರುತದಿಂ ಕಾಯ್ಸಿದೆಯೊ ಸುಡುಗಾಡವ 1 ಭೂಪತಿ ವಿಕ್ರಮಗೆ ಕಳ್ಳನೆಂದೆನಿಸವನ ತಾಪಬಡಿಸೆದೆಯೊ ಕೈಕಾಲುಗಳ ಕಡಿಸಿ ರೂಪಗೆಡಿಸಿದಿಂದ್ರಿನ ಮೈಯಲ್ಲಿ ತೂತ್ಹಾಕಿ ಶಾಪಕೊಡಿಸಿಂದುವಿನ ಕಳೆಯುಗುಂದಿಸಿದಿ 2 ಕುರುರಾಯನೊಂಶವಂ ನಿರ್ಮೂಲ ಮಾಡಿದೆಯೊ ತಿರಿದುಣಿಸಿದಿ ಆ ಮಹ ಪಾಂಡುನಂದನರ ಪರಮ ಸುಖಿಗಳ ಸುಖಕೆ ಕಿಡಿಯಿಟ್ಟು ನೋಡಿದಿ ವರ ತಪಸ್ವಿಗಳ ತಪಸ್ಸು ಭಂಗಪಡಿಸಿದೆಯೊ 3 ಒದಗಿ ಯಮದೇವನನ್ವಧೆ ಮಾಡಿಸಿದೆಯೊ ನೀ ಪದುಮಪೀಠನದೊಂದು ಮಸ್ತಕವ ಕಳೆದಿ ಮುದ ಕೃಷ್ಣ ಗಿಡದಡಿಯಸುವ ಬಿಟ್ಟನೆನಿಸಿದಿ 4 ಇಂತಿಂಥ ಮಹಿಮರನು ಈ ಪಾಡ ಪಡಿಸಿದಿ ನ ಮ್ಮಂಥ ನರಜನರ ಪಾಡೇನು ನಿನಗೆ ಕಂತುಪಿತ ಶ್ರೀರಾಮನನುಮತಿಯ ಪಡೆದು ಬಲ ವಂತನಿನಿಸಿದೆಯೋ ನೀ ಮೂಲೋಕದೊಳಗೆ 5
--------------
ರಾಮದಾಸರು
ಭಾರತೀ ರಮಣ ಸುರವಿನುತ ಚರಣ ಶಾರದಾ ಪುರ ಶರಣ ಪ ನೂರು ಯೋಜನಮಿರ್ದವಾರಿಧಿ ಲಂಘಿಸಿ ಬೇಗ ಧಾರುಣಿ ಸುತೆಯ ಕಂಡು ದೂರ ನಮಿಸಿ ಸಾರಿ ಮುದ್ರಿಕೆಯ ನಿತ್ತು ತೋರಿರಾಕ್ಷಸಗೆ ಭಯ ಶ್ರೀರಾಮಗೆ ಬಂದು ಕ್ಷೇಮ ವಾರುತಿಯ ಪೇಳಿದಂಥ 1 ಇಂದು ಕುಲದಲ್ಲಿ ಪಾಂಡುನಂದನನೆನಿಸಿ ಜರಾ ಸಂಧ ಮುಖರನು ಗದೆಯಿಂದವರಸಿ ಅಂದುರಣದಲ್ಲಿ ಕರುವೃಂದವ ಮಥಿಸಿ ಆ ನಂದ ಕಂದನೊಲಿಮೆಯ ಛಂದದಿ ಪಡೆದು ಗುರು 2 ಮೇದಿನಿ ಮೋದ ತೀರ್ಥರೆಂದೆನಿಸಿ ವಾದದಿಂದಲಿ ವಾದಿ ಮತ್ತ ವಾರಣ ಮೃಗಾಧಿಪರೆನಿಸಿ ಪಂಚ ಬೇಧ ಬೋಧಿಸುವ ಶಾಸ್ತ್ರ ಸಾದರದಿ ವಿರಚಿಸಿದ 3 ಕಾಲಕಾಲದಲಿ ದ್ವಿಜರಾಲಯದಿ ಬಂದು ನಿನ್ನ ಬಾಲವನಿತೆರ ಸಹ ಶೇವಿಸುವರು ಪಾಲಿಕಿ ಉತ್ಸವದಲ್ಲಿ ಶೇರುವದು ಪೌರಜನ ಪಾಲಿಸಬೇಕಯ್ಯ ಪಾಂಚಾಲಿರಮಣನೆ ನಮೊ 4 ಭವ ಕೂ ಪಾರ ನಾವಿಕನೆ ಎಂದು ಪ್ರಾರ್ಥಿಸುತಲಿ ಸೇರಿದ ಸಜ್ಜನರಘ ದೂರಮಾಡಿ ಪೊರೆವಂಥಕಾರ್ಪರ ನಿಲಯ ಸಿರಿನಾರಸಿಂಹ ನೊಲಿಸಿದ 5
--------------
ಕಾರ್ಪರ ನರಹರಿದಾಸರು
ಶೌರಿ ಬಾರೋ ಶ್ರೀಹರಿ ಪ ಬಾರೋ ಬಾರೋ ಕರುಣಾನಿಧಿ ನಿನ್ನನು ಬಾರಿ ಬಾರಿಗೆ ಸಿರಬಾಗಿ ನಮಿಸುವೆನು ಅ.ಪ ಮಾರನಯ್ಯನೆ ಮಂಗಳರೂಪ ತೋರೊ ಬೇಗನೆ ಸಾರಸಾಕ್ಷ ಸನ್ಮಂಗಳ ಮಹಿಮನೆ ತೋರೋ ನಿನ್ನ ಮಹಾ ಮೀನರೂಪವನು 1 ಸುಂದರಾನನ ಚಂದಿರವದನ ಮಂದಹಾಸನೆ ದುರಿತ ಕಳೆವಂದದಿ ಬೆನ್ನಿಲಿ ಮಂದರವೆತ್ತಿದ2 ಆದಿದೈತ್ಯನು ಭೂದೇವಿಯಪಹಾರ ಗೈದನು ಆ ದಿತಿಜರ ಸಂಹಾರ ಮಾಡಲು ನೆಲ ವರಾಹ ಬೇಗ 3 ಕಂದನಾಡಿದ ಆ ನುಡಿ ಕೇಳಿಯಾನಂದ ತಾಳಿದ ಮಂದರೋದ್ಧರ ಮುಚುಕುಂದ ವರದ ಸುರ- ಗಂಗೆಯ ಪಿತ ನರಸಿಂಗರೂಪದಿ 4 ಬಾಲರೂಪದಿ ಬೇಡಿದ ದಾನ ಭೂಮಿ ಮಾತ್ರದಿ ಬೇಡಿದುದನೆ ಕೊಟ್ಟಾಮಹೀಪಾಲನ ದೂಡಿ ಪಾತಾಳಕ್ಕೆ ಬಾಗಿಲ ಕಾಯ್ದೆ 5 ಶೂರ ರಾಜರ ಸಂಹಾರ ಮಾಡಿ ತೋರಿ ಶೌರ್ಯವ ಸಾಗರಶಯನಗೆ ತೋರಿ ಪರಾಕ್ರಮ ಶೂಲಿಯ ಧನುವಿತ್ತೆ ರೇಣುಕಾತ್ಮಜ 6 ವಾನರಾಧಿಪ ಹಗಲಿರುಳು ಭಕ್ತಿಮಾಡಿ ಧ್ಯಾನಿಪ ಶ್ರೀ ಮಾನಿನಿಯಳ ಕೈಪಿಡಿಯುತ ಅಯೋಧ್ಯದಿ ಮೆರೆದ ಶ್ರೀರಾಮ ಚಂದಿರನೆ 7 ಪಾಂಡುನಂದನ ಮಾಡಿದ ನಿನ್ನ ಬಂಡಿ ಬೋವನ ಸಂದೇಹಿಸದಲೆ ಅಂದು ಅವರ ಮನೆ ಎಂಜಲ ಬಳಿದ ಮುಕುಂದನೆ ಬೇಗದಿ 8 ಮಂಗಳಾತ್ಮಕ ತ್ರಿಪುರರ ಮದ ಭಂಗನಾಶಕ ಮಂಗಳಮಹಿಮ ವಿಹಂಗವಾಹನ ಸುರ ಸಂಗೀತಲೋಲ ಕೃಪಾಂಗ ದಯಾನಿಧೆ 9 ತೇಜಿಯನೇರುತ ಸುಜನರು ಮಾಳ್ಪಪೂಜೆಗೊಳ್ಳುತ ರಾಜೀವಾಕ್ಷ ರಕ್ಕಸ ಸಂಹಾರಕ ಅ- ಪಾರ ಮಹಿಮ ರಥವೇರುತ ತವಕದಿ 10 ಕಂಜಲೋಚನ ಕಮಲಾಯತಾಕ್ಷ ಮಂಜುಭೂಷಣ ಕಂಜದಳಾಂಬಕ ಕಮಲನಾಭ ವಿಠ್ಠಲಝಗಝಗಿಸುವ ಮದ್ಹøದಯ ಮಂಟಪಕೇ 11
--------------
ನಿಡಗುರುಕಿ ಜೀವೂಬಾಯಿ
ಸೂತ್ರನಾಮಕ | ಸುಂದರನೇಕ | ಸೂತ್ರನಾಮಕ ಪ ಸತ್ಪಾತ್ರ ವಿನುತ ಶುಭಗಾತ್ರ ಪವಿತ್ರ ಅ.ಪ. ರಾಮಪದ ಭೃಂಗಾ | ರಾವಣ ಮದಭಂಗ | ಗಜಸಿಂಗಾತಾಮಸ ಕುಲಕೆ ನೀ ಧೂಮಕೇತು ಬುಧಸೌಮನಸಾಗ್ರಣಿ ಕಾಮಿತ ಫಲದಾ 1 ಪಾಂಡುನಂದನಾ | ಪಾಲಿಸು ಯನ್ನಾ | ಖಂಡ ಪಾವನಾಅಂಡಜಾಧಿಪನ ಕಂಡು ಭಜಿಸಿ ದೋ-ರ್ದಂಡ ಖಳ ಕುಲ ಚಂಡ ಪ್ರಚಂಡಾ 2 ಜ್ಞಾನದಾಯಕಾ | ಆನಂದತೀರ್ಥ | ದೀನ ಪೋಷಕಭಾನುಕೋಟಿ ತೇಜ ವ್ಯಾಸ ವಿಠಲನಧ್ಯಾನದೊಳಿಹ ಮಮ ಮಾನಸ ಹಂಸಾ 3
--------------
ವ್ಯಾಸವಿಠ್ಠಲರು
ವನಿತೆ ನೀ ತೋರಿಸೆ ಹನುಮನ ಬೇಗ |ತನು-ಮನ-ಧನವನು ನಿನಗೀವೆನೀಗ ಪಆತುರದಿಂದಲಿ ಉದಧಿಹಾರಿದವನ |ಪ್ರೀತಿಯಲಿ ರಾಮನ ಮುದ್ರೆಯಿತ್ತವನ ||ಘಾತಕರನ್ನು ಮುರಿದಟ್ಟಿದವನ -ಸತಿ|ಸೀತೆಯಪತಿರಘುನಾಥಗರ್ಪಿಸಿದನ1ಪಾಂಡುನಂದನನಿಗೆ ಅನುಜನಾಗಿಹನ |ಪುಂಢರೀಕಾಕ್ಷನ ಚರಣಸೇವಿಪನ ||ಪುಂಡ ಕೌರವ ಶಿರವ ಚೆಂಡನಾಡಿದವನ 2ಎರಡು ಮೂರಾರೊಂದು ಕುಮತ ಖಂಡಿಸಿದನ |ಭರದಿ ಮಧ್ವಮತ ಉದ್ಧರಿಸಿದನ ||ಧರೆಯೊಳಧಿಕ ಶ್ರೀಹರಿಯ ಭಜಕನ |ವರದ ಶ್ರೀಪುರಂದರವಿಠಲರಾಯನ3
--------------
ಪುರಂದರದಾಸರು
ಶ್ರೀಹರಿ ಸಂಕೀರ್ತನೆ2ಶರಣು ಹೊಕ್ಕೆನೊ ನಿನ್ನ ಜಾತರೂಪಾಂಗದವರದ ಕೈಪಿಡಿಯನ್ನಪರಮೇಷ್ಠಿವಂದಿತ |ಚರಣಸುರ ಶಿರೋರನ್ನ ಸುಖ ಜ್ಞಾನ ಪೂರ್ಣಾಪಉರಗಪರ್ವತನಿಲಯಭಕತರ ಕರೆದು |ವರಗಳ ಕೊಡುವ ವೆಂಕಟ | ಗರುಡವಾಹನಲಕ್ಷ್ಮೀಪತಿ ಮಂದರಧರಾಧರಧಾರ ದೇವ ಅ.ಪ.ಕಾಮಿತಾರ್ಥದ ರಂಗ ಮಧ್ವಮುನಿ ಪೂಜಿತ |ರಾಮ ಭವಭಯಭಂಗದಶರೂಪಿ ಶರಧಿಜಾ |ಪ್ರೇಮ ಸುಜನರ ಸಂಗ ಕೊಡು ಎಂದೆಂದಿಗೂ ||ತಾಮಸರಿಪುಕುರಂಗಾಅಂಕಸಖಸಾಂಗ |ಹೇಮಗರ್ಭನ ನಾಭೀ ಕಮಲದಿ |ನೀ ಮುದದಿ ಪಡೆದೀ ಚರಾಚರ |ನೇಮದಿಂದಲಿ ಸೃಜಿಸ ಪೇಳಿದ |ಸ್ವಾಮಿ ನೀ ಸರ್ವರೊಳು ವ್ಯಾಪಿಸಿ |ಭೂಮಿಯೊಳು ಸಾತ್ವಿಕರು ರಾಜಸ |ತಾಮಸರ ನಿರ್ಮಾಣ ಮಾಡಿ ಸು |ಧಾಮಸಖಿಗತಿ ದುರ್ಗತಿಗಳನು |ಈ ಮರುಳು ಜನರಿಗೀಯುತ |ನೀ ಮಡಿವಂತನು ಎನಿಸುವೆ ಲೇಸುತ್ರಾಮಾ ವರಜ ಬಲು ಸೋಜಿಗವೊ ಇದು |ವ್ಯೋಮನ ದೀಪದ ನೀ ಮಾಡಿದ ಮರ್ಯಾದೆಯೋಮರಳ್ಯೊಬ್ಬರು ಪೇಳುವರುಂಟೇ 1ಪುಂಡರೀಕದಳಾಕ್ಷ ತನ್ಮಾತ್ರಾ ದೂರ |ಪಾಂಡುರಂಗಘ ಕಕ್ಷಗಾಂಗೇಯಗೀತ |ಪಾಂಡುನಂದನ ಪಕ್ಷದರಚಕ್ರಪಾಣಿ |ಪುಂಡ ಕೌರವ ಶಿಕ್ಷ ಶ್ರೀವತ್ಸವಕ್ಷ |ಕುಂಡಲೀಶ ಶಯನ ವಿದುರಸಖ| ಮಾ-ರ್ತಾಂಡ ಕೋಟಿ ಪ್ರಕಾಶಹರಿವು|ದ್ದಂಡ ಮಹಿಮನೆ ಕಂಡ ಕಂಡವ |ರಂಡಲೆಯ ಯನ್ನ ಶರೀರವು ||ಬೆಂಡು ಆಯಿತು ಕಾಣೆ ಕಾಯ್ವರ |ಜಾಂಡೋದರ ನಿನ್ನುಳಿದು ಓರ್ವರ |ದಂಡಿಸದೆ ಬರುತಿಪ್ರ್ಪ ಜನ್ಮವ |ಖಂಡಿಸಿ ನಿನ್ನ ನಾಮವುಳಿಸೊ ||ಮಂಡೋದರೀವಲ್ಲಭಶಕಟ ಪ್ರ |ಚಂಡ ಮುರಾದಿಖಳಕುಲಾಂತಕ |ದಂಡಾತ್ಮಜ ರಕ್ಷಕಹರಿಮೇ |ಷಾಂಡಜ ಸಂಹರ ಕರುಣದಿ ನೋಡೋ2ಧರಣಿಯೊಳಗಿನ ರಾಯರೆಂಬುವರು ವೇಷಕಾ |ಪುರುಷನಿಗೆ ಬಹು ದ್ರವ್ಯವಿತ್ತಿನ್ನು ವೇಷವ |ತರಲಿಗೊಡರೆಲೊ ದೇಹ ಬಹು ತಾಳಿ ಬಂದೆನೊ |ಕರುಣವಿಲ್ಲದೆಜೀಯ| ಸಾಕೆನ್ನೂ ಮಾಯಾ- ||ವರನೆ ಅಟವು ಮಾತ್ರ ಹಣ ಕೊಡ- |ದಿರೊ ನಾ ಬಲ್ಲೆನೊ ಕುಡಿದ ಸ್ತನ - ಪಯ |ಶರಧಿದ್ವಿಗುಣವು ಯನ್ನ ಅಸ್ಥಿಯು |ಗಿರಿಗೆ ದ್ವಿಗುಣವಾಗಿಹ್ಯವೊ ಇಂತಿ |ಕರೆ ಕರೆಯ ನಾನಾರಿಗುಸಿರಲಿ |ಸುರಪತಿಪ್ರಾಣೇಶ ವಿಠ್ಠಲ |ತರುಣಿ ಸುತ ಧನ ಪಶು ಎಂಬುವ ಈ |ಪರಮಮೋಹದ ಮಡುವೋಳ್ಬಿದ್ದು ||ಹರಿನಿನ್ನೊಂದಿನ ಸ್ಮರಿಸಿಲ್ಲವೋ ನೀ |ನರಿಯೆ ನಿಂತ್ಯಲ್ಲವೋ ಪರತರ |ಕರಿವರದಿ ಮ್ಯಾಲೆನರಿದದು ಮಾಡುವ - |ದರಿ ಕರಿಷಂಡ ಮೃಗೇಂದ್ರ ಪರಾಶು || ಶರಣು 3
--------------
ಪ್ರಾಣೇಶದಾಸರು