ಒಟ್ಟು 11 ಕಡೆಗಳಲ್ಲಿ , 9 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದೇವಾ ದೇವಾ ಸಾರಂಗ ಪಾಣಿ ದೇವಾ ದೇವಾ ಸಾರಂಗ ಪಾಣೀ ಪ ದೇವ ದೇವ ಘನ ಶ್ರೀ ವಧುವಲ್ಲಭ ಸಾವಿರ ನಾಮದ ಪಾವನ ರೂಪಾ 1 ಭುವನವ ಪಿಡಿದೊಯ್ದನುಜನ ಹರಿ ಪವನಜ ಪ್ರೀಯಾ2 ಕುಂಜರ ಧ್ವಜಜನ ರಂಜಿಪ ಕದಲಿಗೆ ಅಂಜಿಕೆ ಹಾರಿಪ ಕುಂಜದ ಕರನೇ 3 ಸುಮನದಿ ಧರೆಯೊಳು ನಮನ ಕೃತಕ ಭಯ ಗಮನ ಸುರೇಶಾ4 ವಿಧಿ ತ್ರಿಪುರ ವಿನುತ ಪದ ಮಿಥುನದಯಾಳಾ5 ಹರಿಯೆಂದೊದರಲು ಸರಿಯಾದಿಗಳಿಗೆ ಅರಿಯ ದಂದದಿ ಬಂದು ಕರಿಯನು ಕಾಯ್ದೆ6 ನಂದನ ನಂದನ ಮಂದರಗಿರಿಧರಾ ನಂದನೆ ಮಹಿಪತಿ ನಂದನ ಪ್ರೀಯಾ||7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ಭವ ಶಿತಿಕಂಠ ನಿನ್ನಪದ ತಾಮರಸಯುಗ್ಮಗಳಿಗಾನಮಿಸುವೆ ಪ ಕಾಮಹರ ಕೈಲಾಸ ಹೇಮಗಿರಿಯಾವಾಸ ರಾಮನಾಮನ ಭಜಿಪ ಉಮೆಯರಸ ಶಂಭೋ ಅ ಮೃತ್ಯುಂಜಯ ಮೃಗಾಂಕ ಕೃತ್ತಿವಾಸ ಕೃಪಾಳೊ ವಿತ್ತÀ್ತಪತಿ ಸಖ ವಿನಾಯಕರ ಜನಕ ಭೃತ್ಯವರ್ಗಕೆ ಬಾಹಪಮೃತ್ಯು ಕಳೆದು ಸಂ ಪತ್ತು ಪಾಲಿಸುವುದು ನಿವೃತ್ತಿ ಸಂಗಮಪ 1 ಗೋಪತಿ ಧ್ವಜ ಘೋರ ಪಾಪ ಸಂಹರಣ ಹರಿ ತೋಪಲೋಪಮ ಕಂಠ ಚಾಪಪಾಣೀ ಶ್ರೀ ಪತಿಯ ಶ್ರೀನಾಭಿ ಕೂಪಸಂಭವತನಯ ನೀ ಪಾಲಿಸೆಮ್ಮನು ವಿರೂಪಾಕ್ಷ ಗುರುವೆ 2 ಭಸಿತ ಭೂಷಿತಡಮರು ತಿಸುಳಗೈಯನೆ ಶಂಭೋ ಕಿಸಲಯೋಪಮ ನವಿರ ಶಶಿಭೂಷಣ ಅಸುರಾರಿ ಶ್ರೀ ಜಗನ್ನಾಥ ವಿಠಲನ ಪದ ಬಿಸಜ ಧ್ಯಾನವನೀಯೊ ಹಸನಾಗಿ ಕಾಯೊ 3
--------------
ಜಗನ್ನಾಥದಾಸರು
ಮಧ್ವಾಂತರ್ಯಾಮಿ ಶ್ರೀ ಗುರು ಬಿಂಬ ಕಾಯೊ ಪ. ಹೃದ್ವನಜದಲಿ ನೆಲಸಿ ಆಜ್ಞಾನ ಹರಿಸಿ ಅ. ಸಾಟಿ ರಹಿತನೆ ನಿನ್ನ ಮುಖ ದರ್ಶನಾ ಹಾಟಕೋದರ ಮುಖರು ಅರಿಯದಂತವನನ್ನು ಕೋಟಲೆಯಭವ ಜನರು ಅರಿವದೆಂತಯ್ಯಾ 1 ತ್ರಿವಿಧ ಜೀವರ ತೆಗೆದು ಜನ್ಮದಲಿ ತೊಡಕಿಸೀ ಕರ್ಮ ಬಲೆ ಬೀಸಿ ಪವನನೈಯ್ಯನೆ ನಿನ್ನ ಮಾಯ ಮೋಡವ ಕವಿಸಿ ಭವಣಪಡಿಸಲು ಇನ್ನು ಬಿಡುಗಡೆಯದೆಂತೋ 2 ನೀನಾಗೆ ವಲಿದು ನಿನ್ನ ಭಕ್ತರನು ಕಾಯುತಿಯೊ ಮಾನಾಭಿಮಾನದೊಡೆಯನೆ ಆರ್ತಪಾಲ ಗಾನಲೋಲನೆ ನಿನ್ನ ಧ್ಯಾನ ಮೌನವನಿತ್ತು ಮಾನಸದಿ ನಿನ್ನ ತೋರೊ ದೀನ ರಕ್ಷಕನೇ3 ಅಂಗುಟದಿ ಗಂಗೆಯನು ಪೆತ್ತ ಪಾವನಪಾದ ಶೃಂಗಾರ ವಸನ ವಡ್ಯಾಣ್ಯನಡುವೂ ಅಂಗನೆಯು ವಕ್ಷದಲಿ ಹಾರಪದಕಗಳುಲಿಯೆ ಉಂಗುರದ ಬೆರಳು ಕಂಕಣ ಕಡಗ ಪಾಣೀ 4 ಕರ್ಣಕುಂಡಲ ಕಾಂತಿ ಮುಗುಳುನಗೆ ಕುಡಿನೋಟ ರನ್ನ ತಿಲಕದ ಫಣಿಯ ಮುಂಗುರುಳ ಸೊಬಗೊ ಸ್ವರ್ಣಕಾಂತಿಯ ತೇಜ ಕಡಗೋಲ ಕೈ ಸೊಬಗು ಚನ್ನಗೊಪಾಲಕೃಷ್ಣವಿಠಲ ಉಡುಪೀಶಾ 5
--------------
ಅಂಬಾಬಾಯಿ
ವಾಣಿ ವೀಣಾಪಾಣಿ ಬ್ರಹ್ಮನರಾಣಿ ಪಾಹಿ ಕಿಂಕರ ಪಾಪಕÀೃಪಾಣೀ ಪ ಖ್ಯಾತೇ ವೇದಮಾತೇ ನಾಗಭೂಷಣ ಮಾತೇ ಮಾಲಾಪುಸ್ತಕ ಶೋಭಿತಹಸ್ತೇ 1 ಭವ್ಯೇ ಭವ್ಯಕೃತ್ಯೇ ಭವ ಮುಖ್ಯರಿಗಭಯವನಿತ್ತೇ ಮತ್ತೆ ಗಿರಿಜಾದಿಗಳಿಗೆ ನೀನತ್ತೆ 2 ಶುಕ್ಲೇ ಪರಶುಕ್ಲೇ ಶುಕ್ಲಹಂಸದಿ ಮೆರೆದಿರ್ಪೆ ಶುಕ್ಲ ರಾಜೇಶ ಹಯಮುಖ ಭಕ್ತೇ 3
--------------
ವಿಶ್ವೇಂದ್ರತೀರ್ಥ
ವೆಂಕಟಾಚಲ ನಿವಾಸಾ-ಜಗದೀಶ ಸಂಕಟ ಹರಿಸೋ ಶ್ರೀಶಾ ಪ ಪಂಕಜಾಸನ ಪ್ರಮುಖ ಶಶಾಂಕಸುರವರಪೂಜಿತ ಅಕಳಂಕಮಹಿಮ ಖಗಾಂಕ ಚಕ್ರಗದಾ ಶಂಖಶ್ರೀಕರಕಂಜಧರಪಾಣೀ ಅ.ಪ ಲೋಕನಾಥ ಲೋಕಬಂಧು-ದಯಾಸಿಂಧು ಭಕುತರನಿಮಿತ್ತಬಂಧು-ಎಂದೆಂದೂ ಭಕುತರ ಬೆಂಬಲನು ಎಂದೂ-ಇಂತೆಂದೂ ಪಾಕಶಾಸನಪೂಜ್ಯ ಪಿನಾಕಿಪಿತ ಸುರಜೇಷ್ಠವಂದ್ಯ ಏಕಮೇವ ನೀ ಕೈಬಿಡದೆ ಕರ್ಮ- ಪಾಕಮಾಡಿಸೋ-ಕಾಲನಾಮಕ1 ಬಂಧಕಗಳ ತಂದೊಡ್ಡೀ-ಭಕುತರ ಮನ ಪರಿ ಧೃಢಮಾಡಿ-ಪರಿಯುನೋಡಿ ಬಂದ ಬಂಧವ ಹರಿಸಿ-ಹೃದ್ವಾಸೀ ಹಿಂದುಮುಂದೂಕಾಣದ ಮಹ- ಅಂಧಕಾರಣ್ಯದಲಿ ಸಲಹಿದೆ ಬಂಧ ಮೋಚಕನಹುದೋ ಅನಾಥ ಬಂಧು ನೀನೆಂದು ನಂಬಿದೇ 2 ಕರುಣಾಸಾಗರನೇ ನಿನ್ನಾ-ನಾ ನಂಬಿದೆ ಸ್ಮರಣೆಯೊಂದನೆ ಪಾಲಿಸೋ ಈ ಜನುಮದೀ ಪರಮಸಾಧನ ಕಾಣದೇ-ಪರಿತಪಿಸುವೇ ನಿರುತ ಭವಸಂಕೋಲೆಯಾ ಕಡಿದು ಪೊರೆಯುವುದೋ ಶ್ರೀ ವೆಂಕಟೇಶನೆ ಸ್ಮರಿಪರಘ ಪರಿಹರಿಪ ಶ್ರೀ- ಉರಗಾದ್ರಿವಾಸವಿಠಲ ಪ್ರಭೋ 3
--------------
ಉರಗಾದ್ರಿವಾಸವಿಠಲದಾಸರು
ಶ್ರೀ ಮಧ್ವಾಚಾರ್ಯರು ಸ್ಮರಿಸು ಸಂತತ ಗುರುಗಳಾ ಬಿಡದೆ ಅನುದಿನಾ ಪ ವಾತ ಭೀಮನ ಒಡೆಯ ವೇದವ್ಯಾಸಯುತ ಸಾರಂಗಧರನಆ ಪ್ರೇಮದಿಂದಲಿ ಭಜಿಪೆನಡಿಗಳ ಬಿಡದೆ ಅ.ಪ. ಮಂದ್ರಜಾಸನ ಸುತನ ವಚನ ಕೊಂಡು ಧರೆಯೊಳು ಬಂದು ಭಜಿಸುತ ಪೊಂದಿಪವರ ವೃಂದ ಹರಿಸಿ ಸುಗುಣ ಸುವೃಂದಗಳಿಗೆ ಬಂಧುಪರ ಗೋವಿಂದನೆಂಬುದ ಬೋಧಿಸಿದನ 1 ಮಂಗಳಾಂಗನ ಕೊಂಡು ತುಂಗಕುಲ ತೀರ್ಥರ ಶರದೀ ಬಂದೂ ಭೂಮಿಯೊಳು ಅನಂಗಪಿತನ ಒಲಿಸಿರಂಗರಾಜನ ದೂತನಿಂದಾ ವಿದ್ಯವಾ ಕೊಂಡು ಬಂದು ಪರಮಾದರದಿ ವ್ಯಾಸತ್ರಯಯುತ ಸುಧೆಯನಗರದನಂಘ್ರಿಯಾ 2 ರಘುಕುಲಾ ಜಲಧೀಗೆ ಜಲಜವೈರಿಯಂತೊಪ್ಪುವಾಮಾರನಯ್ಯ ಶಿರಿ ಪರಶು ಪಾಣೀ ಯಾತ ಜಡೆಧಾರ ತುರೀಯನಾಶ್ರಯಿಸೀ ಬಾಣರೂಪವಾ ಬಿಡದೆಬಾಣವಾ ಗುರಿ ಮಾಡಿಬಾಣವರದನ ಸರಿಯೆಂದೆನಿಸಿ ಬಾಣ ಭೇದವನೆ ಬೋಧಿಸಿಬೋಧತೀರ್ಥರ ಮತಾಧಿಪನ ತಂದೆವರದಗೋಪಾಲವಿಠಲನಭಜಕಾ 3
--------------
ತಂದೆವರದಗೋಪಾಲವಿಠಲರು
ಹರಿ ಹರಿ ಗೋವಿಂದ ಯನಬಾರದೇ ಪ್ರಾಣಿ ಪ ಹರಿ ಹರಿ ಗೋವಿಂದಯನಲು ಭಕುತಿಯಲಿ | ಹರಿಸುವ ಪಾಪೌಘವನು ಸಾರಂಗ ಪಾಣೀ 1 ವೃತ ತಪ ಸಾಧನದಿಂದಲೀ ನಿಲುಕದ ನಿಜಗತಿಯಾ| ಕ್ಷೀತಿಯೋಳು ಸುಲಭದಿ ಕೊಡುವನು ದೀನಾಭಿಮಾನಿ 2 ತಂದೆ ಮಹಿಪತಿ ಕಂದಗ ಸಾರಿದ ಯಚ್ಚರ ನೀ | ಛಂದದಿ ಇಹಪರ ನೀವದು ಯದುರಾಜ ಸ್ಮರಣೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯೋಗಧರತಾತಕಘ ಲೋಕಪತಿ ದೇವಸಿರಿ|ಯೋಗ ನಿನ ಪದಕೆ ಶರಣೆಂಬುವೆನೊ ಕಾಯೋ ಪಯೋಗಾಂಡದೊಳ ಹೊರಗೆ ವ್ಯಾಪ್ತನೆ ಗುಣರಹಿತನೆ |ಯೋಗಾಂಬರ ಧರ ಘ-ಮುಖ ಜನಕ ||ಯೋಗಗಾತ್ರಷ ದೂರ ವರ್ಗದ್ವಯ ಅವತಾರ |ಯೋಗ ಪಾಣೀ ಸುತ ಪ್ರಿಯ ಸುಮತಿ ಕೊಡು ಜೀಯ 1ಯೋಗರಾಯಗೆ ಅದೇಪದವಿಕರುಣಿಸಿ ಕೊಟ್ಟೆ |ಯೋಗೇಶಣಾಸ್ತ್ರ ಪಿತದಂತಿವರದ||ಯೋಗದಲಿ ಮನಸು ನಿಶ್ಚೈಸೊ ಹಾ ಕರ್ತೃತ್ವ |ಯೋಗಫಲ ಸ್ವೀಕರಿಸುತಿಹ ಕಂಜನಾಭ 2ಯೋಗನಾಗೆಯೋ ದುರ್ಮತಿಗಳಿಗೆಂದಿಗೂ ನೀನು |ಯೋಗಿಜನ ವಂದ್ಯ ಹಾ ನಾರೀಪತಿ ನಿನ್ನ ||ಯೋಗ ಸೇವಕರೊಳಿಡೋ ಪ್ರಾಣೇಶ ವಿಠ್ಠಲನೇ |ಯೋಗ ಹ್ರಾಸ ವಿವರ್ಜ ಘಟಜ ಕರಪೂಜ್ಯ 3
--------------
ಪ್ರಾಣೇಶದಾಸರು
ಶೋಭಾನ ಪಾಂಡುರಂಗಗೆ | ಶೋಭನ ಶ್ರೀನಿವಾಸಗೆ |ಶೋಭನಉಡುಪಿನಿಲಯಾಗೇ ಪಸುಮನಸರಾಳ್ದವನ ವರಜ ಬಾ |ಕಮಲೆಸದನಮುಖಕಂಜರವಿಬಾ |ವಿಮಲ ಗುಣಾರ್ಣವನೀಲಜಲದನಿಗಾತ್ರಾ ಬಾ ||ವಾರಿಜನೇತ್ರ ಬಾ ಮಂಗಳ ಸ್ತೋತ್ರ ಬಾ |ವಹನ ಪತತ್ರಾ ಬಾ ನತಜನ ಮಿತ್ರಾ ಬಾಹಸಿಯಾ ಜಗುಲೀಗೇ 1ಅಷ್ಟನಾಮ ಒಪ್ಪುವನೇ ಬಾ |ದುಷ್ಟ ದಿತಿ ಸುತ ಮದಹರಣಾ ಬಾ |ಮುಷ್ಟಿಕ ಪ್ರಮುಖಹ ಗೋವರ್ಧನಧರ ಕೃಷ್ಣಾ ಬಾ ||ಹರಿಗತಕಷ್ಟಾ ಬಾ ತ್ರಿಜಗಚ್ಚೇಷ್ಟಾ ಬಾ |ಅಕ್ಷರಜೇಷ್ಠಾ ಬಾ ನಿರುತ ವಿಶಿಷ್ಟಾ ಬಾಹಸಿಯಾ ಜಗುಲೀಗೇ 2ಮಾತುಳರಿಪುವನಅನಳಬಾ |ಶ್ವೇತವಹನ ರಥಸಾರಥಿಬಾ |ಮಾತಿ ಶಿರ ಕಡಿದು ಬಾಹುಜರೊರಸಿದ ನಾಥಾ ಬಾ ||ಗೋಕುಲ ತ್ರಾತಾ ಬಾ ಲೋಕೈಕದಾತಾಬಾ |ವಸುದೇವ ಜಾತಾ ಬಾ ಸುಪ್ರಖ್ಯಾತಾ ಬಾಹಸಿಯಾ ಜಗುಲೀಗೇ 3ವಾಮನ ಕೇಶವ ಹಯಮುಖ ಬಾ |ಭೀಮವಿನುತನಿಃಸೀಮಾ ಬಾ |ಕಾಮಿನಿಯರ ಚೈಲಹರಣ, ಋಷಿ, ರಣಭೀಮಾ ಬಾ ||ದಶರಥ ರಾಮಾ ಬಾ ಬಾಣವಿರಾಮಾ ಬಾ |ಅಜಮುಖ ನಾಮಾ ಬಾ ಕೃಷ್ಣಾ ಪ್ರೇಮಾ ಬಾಹಸಿಯಾ ಜಗುಲೀಗೇ 4ಕಂದರ್ಪಜನಕ ನರಹರಿ ಬಾ |ಅಂದಮೃತವ ತಂದವನೇ ಬಾ |ಮಂದೇತರಮುದಘಟಜ ಪ್ರಮುಖ ಮುನಿವಂದ್ಯಾ ಬಾ ||ಕಸ್ತುರಿ ಛಂದಾ ಬಾ ದೇವ ಮುಕುಂದಾ ಬಾ |ದೇವಕಿ ಕಂದಾ ಬಾ ಸದ್ಗುಣ ವೃಂದಾ ಬಾಹಸಿಯಾ ಜಗುಲೀಗೆ 5ಕ್ಷಿತಿಧರ ಜಿನಧರ ಸಖನೇ ಬಾ |ಅತುಳಮಹಿಮನೆ ಅಜಿತನೇ ಬಾ |ಸತಿಗಮರ ಸದನದಕುಸುಮತಂದಚ್ಯುತನೇ ಬಾ ||ಮೂರುತಿ ಸುತನೆ ಬಾ ಲೋಕ ವಿತತನೆ ಬಾ |ಪೂಜಿಗುಚಿತನೆ ಬಾ ರಕ್ಷಣರತನೇ ಬಾಹಸಿಯಾ ಜಗುಲೀಗೆ 6ಪ್ರಾಣೇಶ ವಿಠ್ಠಲರಾಯಾ ಬಾ |ವೀಣಾಪಾಣೀ ಜನಕನೆ ಬಾ |ಮಾಣದೆಭಕ್ತರ ಪೊರವುತಿಹನೆ ಸತ್ರಾಣಾ ಬಾ ||ಸತ್ಯಾ ಪ್ರಾಣಾ ಬಾ ಶ್ರೀ ಪಾಠೀಣಾ ಬಾ |ನಿಜ ವಿಜ್ಞಾನಾ ಬಾನಿತ್ಯಕಲ್ಯಾಣಾ ಬಾಹಸಿಯಾ ಜಗುಲೀಗೆ 7
--------------
ಪ್ರಾಣೇಶದಾಸರು