ಒಟ್ಟು 17 ಕಡೆಗಳಲ್ಲಿ , 7 ದಾಸರು , 12 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಇಂದುಧರನ ಪಾದದ್ವಂದ್ವಗಳನು ದಿನವು | ಎಂದೆಂದಿಗೆ ಬಿಡದೆ | ಪೊಂದಿದ್ದ ಪಾಪಗಳು | ನಿಂದಿರದಲೆ ಓಡಿ ಬೆಂದು ಪೋದವು ನೋಡಾ ಪ ಸತಿಗೆ ಅಧರ್Àಕಾಯ ಹಿತದಿಂದಲಿ ಇತ್ತು | ಚತುರತನದಲಿಳೆಯೊಳು ಪತಿತ ಮಾನವರಿಗೆ | ಮತಿಬಾಹದೊ ಮಾನಸ ಸತತ ದೃಢವನೀವ | ಪ್ರತಿದಿನದಲಿ ಕಾಯ್ವಾ 1 ವಿಷವ ಧರಿಸಿ ಸುಮನಸರ ನಡುವೆ ಮೆರೆದೆ | ಪಶುವಾಹನ ಪರಮೇಶ ಅಸುರಾರಿಗಲ್ಲದ | ಅಸುರರ ಕೊಲ್ಲುವ ರಂಜಿಸುವಾ | ಶಶಿ ಜಟಾ ಕಮನೀಯ ಮಣಿಮಕುಟಾ 2 ಕಡಲ ತಡಿಯವಾಸ | ವೊಡಿಯ ರಾಮನ ದಾಸ | ಮೃಡರುಂಡ ಮಾಲಾಭೂಷಾ || ಬಿಡದೆ ಸೇತುಬಂದ ವಿಜಯವಿಠ್ಠಲನ | ಅಡಿಗಡಿಗೆ ನೆನೆಸುವ ಶಿವರಾಮಲಿಂಗಾ 3
--------------
ವಿಜಯದಾಸ
ಇಷ್ಟೇಕೆ ಎನ್ನ ಮೇಲೆ ಈ ಸಿಟ್ಟು ಹರಿಯೆ ಸೃಷ್ಟಿಗೆ ನೀ ಕರ್ತನಾಗಿ ಶ್ರೀನಿವಾಸಧೊರಿಯೆ ಪ ಇನ್ಯಾರು ಹರಿ ಎನಗಿನ್ನು ಈ ಜಗದೊಳಗೆ ಎನ್ನ ದೂರು ಯಾರಿಗೆ ಮೊರೆಯಿಡಲಿ ಎನಗೆ ಮನ್ನಿಸಿ ದಯಮಾಡಿ ಸುಮತಿಯ ನೀ ತಂದು ಕೈಯನ್ನೇ ಹಿಡಿದು ಇನ್ನು ಈಗ ರಕ್ಷಿಸದಲೆ 1 ಸಕಲ ಜೀವ ರಕ್ಷಕÀನು ಸಾಧುಜನ ಪೋ- ಷಕನು ಸಕಲ ಲೋಕಗಳೆಲ್ಲ ಸಲಹುತಿಹನೊ ಅಕಳಂಕ ಮಹಿಮ ಶ್ರೀ ಆದಿದೇವರ ದೇವ ಭಕುತ ವತ್ಸಲನೆಂಬ ಬಿರುದು ನಿನ್ನಲ್ಲಿ 2 ಇಂದು ಮಾಡಿದ ಪಾಪಗಳು ಇಂದು ಪರಿಹಾರ ಮಾಡಿ ಎನ್ನ ಮುಂದೆ ಧನ್ಯನ ಮಾಡಿ ಮುಕ್ತಾನಂತೆನಿಸಿ ತಂದೆ ' ಹೊನ್ನಯ ವಿಠಲ’ ದಯಮಾಡಿ ಸಲಹದಲೆ 3
--------------
ಹೆನ್ನೆರಂಗದಾಸರು
ಒಂದಾನು ಒಂದು ದಿನ ಶಿಂಧುವಿನೊಳ್ ನೆರೆದು ಬಂದಾರು ದೇವತೆಗಳುವೃಂದಾವು ದುಷ್ಟ ಜನರಿಂದಾಲೆ ಭೂಮಿ ನೊಂದಾಳುಎಂದುಸುರಿತಾ ಪ ಕಂದರ್ಪತಾತ ನಿನಗೊಂದಿಸಿ ಬೇಡುವೆನು ಛಂದಾದಸೂರ್ಯಸುತನಾಮಂದಿರದೋಳ್ ಜನಿಸಿ ನಂದಾದಿ ಗೋಕುಲದಿ ನಿಂದಾತ್ಮಲೀಲೆ ತೋರೊ ಅ.ಪ. ಅಂದಾಡಿದೂತ ಸುರವೃಂದಾರ ವಾಕ್ಯಗಳ ಕಿವಿಯಿಂದಾಲೆಕೇಳಿ ಹರಿಯುಛಂದಾದಿ ನೀವುಗಳು ಮುಂದಾಗಿ ಜನಿಸುವದು ಹಿಂದಾಗಿನಾ ಜನಿಸುವೇಅಂದಾಡಿದಂಥ ಹರಿ ಸುಂದರಾ ಮಾತವನು ತಂದಾನುಬ್ರಹ್ಮ ಮನದೀಇಂದ್ರಾದಿಗಳಿಗೆಲ್ಲ ಅವನಂದದ್ದು ಪೇಳೆ ನಿಜಮಂದಿರಖೋಗಿರೆಂದಾ 1 ಎಲ್ಲಾ ಅಮರರೂ ನಿಜವಲ್ಲಾಭಿಯರು ಸಹ ಅಲ್ಲಲ್ಲೆಜನಿಸುತಿಹರೂಫುಲ್ಲಾಕ್ಷತಾ ಮಥುರೆಯಲಿಟ್ಟು ಗೋಕುಲದಿ ಮೆಲ್ಲಾನೆಬೆಳೆಯುತಿರಲುಅಲ್ಲಿದ್ದ ಗೋಪಿಯರು ಯಲ್ಲಾರು ತಾವು ನಿಜವಲ್ಲಾಭೆರೆಂದು ಹರಿಯೋಳ್‍ಎಲ್ಲಾನು ಬಿಟ್ಟು ಅವನಲ್ಲಿಗೆ ಸ್ನೇಹವನು ಉಲ್ಹಾಸಮಾಡುತಿರಲು 2 ವ್ರಜ ಕರ ವೃಂದಾವನದಲ್ಲಿಳುಹಿದಾ 3 ವಂದೀನ ರಾತ್ರಿ ರವಿನಂದಿನಿಯೋಳ್ ಹರಿಯುನಿಂದೂದಲಾಗ ಕೊಳಲುವೃಂದಾದರಾಗಗಳಿಂದಾಲೆ ಕೇಳಿ ವ್ರಜದಿಂದಾವರಾನಿಹರೂಮಂದೀರದೊಳಗೆ ನಿಜ ಕಂದಾರು ನಾಥಗಳು ಛಂದಾದವಸ್ತ್ರಂಗಳುವಂದಾನು ನೋಡದಲೆ ವಂದಾರು ಯಮುನೆಯಲಿಂದಾರುಮೈಯ್ಯ ಮರೆತು 4 ಬಂದೇವು ನಾವು ನಿಜ ಮಂದೀರ ಬಿಟ್ಟು ನಿಮ್ಮ ಸುಂದರಕೊಳಲ ಧ್ವನಿಗೇಛಂದಾದ ಸ್ಮರಣೆ ಸುಖದಿಂದಿತ್ತು ನಮಗೆ ದ್ವಿಜೇಂದ್ರೇತಕಾಯೋ ಯನಲುಅಂದಾವರಾಮಾತು ನಂದಾನುಸೂನ ದಯದಿಂದಾಲೆಕೇಳಿ ಹರಿಯೂಮುಂದಣಿಯಾಗ ಅವರಿಂದಾಲೆ ಕೂಡಿ ದಯದಿಂದಾಲೆನಲಿದು ಮರೆದೂ 5 ಬಂದಾನು ಮಥುರೆಯಲಿ ಕೊಂದಾನು ಮಾತುಳನೆತಂದೀಯಾ ಬಂಧನವ ಬಿಡಿಸೀಸಾಂದೀಪಗಿತ್ತು ಕಂದಾನಸೂನ ಕುರು ನಂದಾರಕೊಲ್ಲಿಸಿದನೂಇಂದ್ರತ್ವ ಜ್ವಾಲೆಗಳೂ ಅಂತಿತ್ತು ರಾಜ ಸುಖ ಸಂದೇಹ ಸಂತೋಷದೀಇಂದ್ರಾದಿ ಸರ್ವಸುರ ಸಂದೇಹ ಪ್ರಾರ್ಥಿಸಿದ ಒಂದೊಂದೆ ಮಹಿಮೆಗಳನೂ 6 ಛಂದಾಗಿ ಮಾಡಿದ್ವಶ ಮಡುಹಿಕರ ವೃಂದಾವಪಾಲಿಸಿದನೂನಂದಾತ್ಮ ಜಾತವು ಒಂದೊಂದೆ ಮಹಿಮೆಗಳ ತಂದೊಮ್ಮೆಮನದಿ ಸ್ಮರಿಸೀಬೆಂದಾವು ಪಾಪಗಳು ಬಂದಾವು ಸೌಖ್ಯಗಳುಸಂದೇಹವಿಲ್ಲನಿದರೋಳ್‍ಕಂದಾರ ಕೊಡುವ ಧನ ವೃಂದಾವು ಪೊರೆವಾ ಮಂದೀರವಿತ್ತು ಸಲಹುವ 7 ಇಂದೆನ್ನ ಮಾನಸದಿ ತಂದಾತ್ಮ ರೂಪವನೂ ಛಂದಾಗಿ ಸಂತೈಸಲೀನಂದಬಾಲಾಷ್ಟಕವನೂ ಇಂದುವಾವರು ಪಠಿಸುವಾ ಇಂದಿರೇಶನು ಪಾಲಿಸುವನೂ 8
--------------
ಇಂದಿರೇಶರು
ತುತಿ | ಪರನ ಪೊರದೇ ಪ ನೋಡಿದಾಕ್ಷಣದಲ್ಲಿ ಅನಂತ ಜನ್ಮದಿಂದ | ಮಾಡಿದ ಪಾಪಗಳು ಪರಿದವಯ್ಯ | ಆಡಲೇನು ತೋಯ ಸ್ಪರ್ಶವಾಗಲು | ನಲಿ | ದಾಡಿದರು ಗೋತ್ರಜರು ಇವನ ಪುಣ್ಯಕ್ಕೆ ಎಣಿಯೇ 1 ಮಿಂದು ಮನಃಪೂರ್ವಕದಿ ಕೊಂಡಾಡಲು ವಳಗೆ | ಪೊಂದಿದ ದಾಸವರು ಸುಮ್ಮನಹರೋ | ವೃಂದಾರಕರ ಬಳಗ ಇವನ ಸಾಧನೆ ಮಾಳ್ಪಾ ನಂದದಲಿ ಇಪ್ಪನೆ ಅಭಿಮೊಗರಾಗಿ2 ವರನ ಕೊಡುವೆನೆಂದು ವೈಷ್ಣವ ಮಣಿಯಿಂದ | ಧರೆಯೊಳಗೆ ಜನಿಸದೆ ಜಗಜ್ಜನನಿ | ಕರಸಿಕೊಂಡೆ ನೀನು ವರದೆ ವರದೆ ಎಂದು | ವರವ ಕೊಡು ಎನಗೆ ಸುಜನರು ಮೆಚ್ಚವಂದದಲಿ 3 ಇದನೆ ಬೇಡಿಕೊಂಬೆ ಇರಳು ಹಗಲು ನೀನೆ | ಒದಗಿ ಬಿನ್ನಹ ಮಾಡು ನಿನ್ನ ಪತಿಗೆ | ಮುದದಿಂದ ಹರಿಯಾಪ್ರವಿಷ್ಠಾಪ್ರವಿಷ್ಠ ಕಥೆ | ತುದಿನಾಲಿಗೆಯಲ್ಲಿ ಬರಲಿ ಬಣ್ಣಿಸುವಂತೆ 4 ಪಾಂಚಜನ್ಯಾದ್ರಿಯಲ್ಲಿ ಉದುಭವಿಸಿ ತುಂಗೆಯೊಳು | ಪಂಚನದಿ ಸಂಗಮವೆಂದೆನಿಸಿದೆ | ಪಂಚವಿಂಶತಿ ನಮ್ಮ ವಿಜಯವಿಠ್ಠಲದೇವ | ಮೂರ್ತಿ ಮನದೊಳಗಿರಲಿ5
--------------
ವಿಜಯದಾಸ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಿನ್ನ ಮರೆದೆನೊ ರಂಗ ನಿನ್ನ ಮರೆದೆ ಅನ್ಯರನ್ನಕೆ ಸಿಲುಕಿ ಅನುಗಾಲ ಮರುಳಾಗಿ ಪ ಊಟಕ್ಕೆ ಬರುವಲ್ಲಿ ತನುವುಬ್ಬಿ ಎನ್ನ ಮನ ನಾಟುವುದು ಅವರ ಕಡೆ ಅನುರಾಗದಿ ನೀಟಾದ ಭೋಜನವ ಬಯಸುವೆನು ಯಮರಾಯ ಭಂಗ ಕೇಳಿ ಎಚ್ಚರಿಯದಲೆ1 ಮತ್ತೆ ಕರೆಯಲು ಬರಲು ಉತ್ಸವ ಪಿಡಿಯಲೊಶವೆ ಹೊತ್ತು ಹೊತ್ತಿಗೆ ಅವರ ಕೊಂಡಾಡುತ ಹೆತ್ತವರಿಗಿಂತಲೂ ಅಧಿಕ ನಮಸ್ಕರಿಸುವೆನು ಚಿತ್ತಜನಪಿತ ನಿನ್ನ ಸ್ತೋತ್ರ ಪಠಿಸದಲೆ2 ಎಡೆಯ ಮುಂದೆ ಕುಳಿತು ಎಲ್ಲ ಕಾಲಗಳಿಂದ ಬಿಡದೆ ಮಾಡಿದ ಪುಣ್ಯಪಾಪಗಳೆದು ಎಡಬಲದವರ ಪಙÉ್ತ ನೋಡಿಕೊಳ್ಳುತ ದುಃಖ ಪಡುವೆನೋ ಎನಗಿಷ್ಟು ಕಡಿಮೆ ಹಾಕಿದರೆಂದು3 ಅನ್ನವಿತ್ತವನ ಪಾಪಗಳು ನಿರಂತರದಿ ಅನ್ನದಾಶ್ರಯ ಮಾಡಿಕೊಂಡಿಪ್ಪವು ಚೆನ್ನಾಗಿ ತಿಳಿಯದಲೆ ಚಾತುರ್ಯದಿಂದಲಿ ಧನ್ಯನಾದೆನು ನಾನು ಪರರ ಪಾಪವ ಭುಜಿಸಿ 4 ಒಬ್ಬರೆಡೆ ನೋಡಿಕೊಳಲಧಿಕವಾಗಿದ್ದರೆ ಉಬ್ಬುವೆನು ಊರು ಕೇರಿ ಹಿಡಿಸದಂತೆ ಸುಬ್ಬನ ಸೂರೆಯಂತೆ ಪರರ ಅನ್ನವನುಂಡು ಮೊಬ್ಬಿನಲಿ ದಿನಗಳೆದೆ ದೀನ ಮನಸಿನಲಿ 5 ಒಡಲಿಗೆ ಬಿದ್ದರಸ ಮೂರು ಭಾಗಗಳಾಗಿ ಕಡೆಗೆ ಪೋಗುವುದೊಂದು ನಿಲುವುದೊಂದು ತಡೆಯದಲೆ ಸಂತಾನ ಪಡೆವುದೊಂದೀತೆರ ಕಡೆಗಾಣಲಿಲ್ಲ ಪರರಲಿ ಉಂಡ ಋಣಕೆ6 ಆವಾವ ಬಗೆರುಚಿ ಜಿಹ್ವಗೆ ತೋರುತಿದೆ ಆವಾವ ಬಗೆ ನರಕ ಬೇರೆಯುಂಟು ಮಣಿ ಸರ್ವೇಶ ವಿಜಯವಿಠ್ಠಲ ಸ್ವಾಮಿ ಈ ಜೀವ ಹಿತವಾಗುವಂತೆ ಮಾರ್ಗವ ತೋರು 7
--------------
ವಿಜಯದಾಸ
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬೇರೊಬ್ಬರನು ಕಾಣೆನೋ ಪ ಗರ್ಭದೊತ್ತಿನಲಿ ಇರಿಸಿದವರಾರೋ ಕೈಕಾಲಸುತ್ತಿನರದಲಿ ಬಿಗಿದವರಾರೋ ನೇತ್ರವನು ರಚಿಸಿದವರಾರೋ ತುಂಬಿ ತುತ್ತುಗಳ ನಡಸಿದವರಾರೋ 1 ನೇಮದಲಿ ಕಲ್ಪಿಸಿದವರಾರೋ ಪಲ್ಲವೋರಣದಿ ಪವಣಿಸಿದವರಾರೋ ನಿರ್ಮಿಸಿ ನವದ್ವಾರವನು ತಿದ್ದಿದವರಾರೋ ಪಾಪಗಳ ಕಾವಲನೆ ಮಾಡಿದವರಾರೋ 2 ನೀಲ ಕುರುಳಿಸಿದವರಾರೋ ಪಲ್ಲವಿಸಿ ಪಸರಿಸಿದರಾರೋ ಅಲ್ಲಿ ತೊಟ್ಟಿಲೊಳಿಕ್ಕಿದವರಾರೋ ಮೈಮರೆತಿಹರು ಮೂಢಜನರು 3 ಪ್ರತಿಬಿಂಬಿಸುತ ಪರಿಪೂರ್ಣನೆನಿಸಲಾರೋ ನೆಂಬುದಲ್ಲದೆ ಮತ್ತದಾರೋ ಅಂಬರೀಶನೆ ಸಾಕ್ಷಿಯಲ್ಲದಾರೋ 4 ಪತ್ತು ಬಿಡಸದೇನೋ ನೀ ಪರೀಕ್ಷಿಸಿದ ಮಾತ್ರದಿಂದೆನ್ನ ಪಾಪಗಳು ಪೋಗವೇನೋ ಶ್ರೀ ಲಕ್ಷ್ಮೀ ರಮಣಗರಿದೇನೋ 5
--------------
ಕವಿ ಪರಮದೇವದಾಸರು
ಭೃಂಗ ಜಯ ಶರಣು ಶ್ರೀ ಸುಜ್ಞಾನ ಭಕುತಿ ವೈರಾಗ್ಯಪರನೆ ಜಯ ಶರಣು ದಾಸೋತ್ತಮರ ಮಣಿಯ ನಿನಗ್ಯಾರೆಣಿಯೆ ಗುರು ಪುರಂದರದಾಸರೆ ನಿಮಗೆ ಪ ಪಾಕಶಾಸನಪುರದ ಚಿನಿವಾರ ವರದಪ್ಪ ನಾ ಕುಮಾರನಾಗಿ ಜನಿಸಿ ಸಂಸಾರದೊಳು ಸಂಚರಿಸಿ ಲೌಕಿಕವನ್ನೆ ತೊರೆದು ಈ ಕಲಿಯುಗದಲ್ಲಿ ತುಂಗಾತೀರ ಪಂಪಾ ರಾಕಾಬ್ಜನಂತೆ ಪೊಳೆವ ನಿಧಿಗೆ ಬಂದು ನಿ ರಾಕರಿಸಿ ದುಸ್ಸಂಗ ವೈಷ್ಣವರಾಗಿ ಪತಿಕರಿಸಿ ಹರಿಭಕುತಿಯಾ 1 ಕಾಮಕ್ರೋಧ ಲೋಭ ಮದ ಮತ್ಸರ ಡಂಭ ಈ ಮರಿಯಾದಿಗಳ ಮರ್ಮವನೆ ಕಡಿದು ನಿ ಸಿರಿ ಕೈಕೊಂಡು ಆ ಮಹಾ ರಚನೆಯಲ್ಲಿ ಸೀಮೆಯೊಳು ಪ್ರಾಕೃತದ ಗೀತೆಯಲಿ ಕೊಂಡಾಡಿ ತಾಮರಸ ಸದೆ ಬಡಿದು ಮಧ್ವಸಿದ್ಧಾಂತ ಲ ಹುಯಿಸಿ ಕಾವನೈಯನ ಕುಣಿಸಿದ 2 ಸಿರಿ ವಿಠ್ಠಲನ್ನ ಮೃದು ಪದ್ಮಗಂಧವನು ಮಧುಪÀನಂತೆ ಸೇವಿಸುತ್ತ ಬುದ್ಧಿ ಪೂರ್ವಕದಿಂದಲಿ ಶುದ್ಧ ಮಂದರನೆಲ್ಲ ಎಂದೆಂದಿಗೂ ಬಿಡದೆ ಪೊದ್ದರ್ದ ಪಾಪಗಳು ತಿರುಗಗೊಡದಲೆ ಕಾಲಿ ಮಾರ್ಗದ ಪದ್ಧತಿಯ ಸ್ಥಿತಿ ಪೇಳಿದ 3 ವರದಪ್ಪನೇ ಸೋಮ ಗುರುರಾಯ ದಿನಕರನು ಗುರು ಮಧ್ವಪತಿಯೆ ಭೃಗು ಅಭಿನವನೆ ಜೀವ ಉಪದೇಶಿಸಿ ಪರಮ ಜ್ಞಾನಿಗಳ ಮಾಡಿ ಶರಧಿ ತೆರೆಯಂತೆ ಹರಿಗುಣಗಳನ್ನು ಪೊಗಳುತಿಹ ತರಳರನು ನೋಡಿ ಗುರು ವ್ಯಾಸಮುನಿರಾಯರಿಗೆ ಕರಣ ಚರಿತೆಯಲಿ ನಲಿದಾಡಿದ 4 ಫೃತದ ಬಿಂದಿಗೆ ತಂದ ಅತಿಥಿಯ ವೋಗರನುಂಡ ಸತಿಯಳೆಂದಾ ನುಡಿಗೆ ಚತುರ ಭಾಗ್ಯವನಿತ್ತ ಹಿತನಾಗಿ ದೃಢನೋಡಿದ ಯತಿಯ ಪಂಕ್ತಿಗೆ ಭಾಗೀರಥಿ ನದಿಯ ತರಸಿದ ಸುತನಾಗಿ ನೀರು ನಿಶಿತದಲಿ ತಂದ ಅ ಪ್ರತಿ ದೈವತಾ ಕಿಂಕರ 5 ವಜ್ರ ಪ್ರಹರವಿದು ಸಜ್ಜನರ ದಿವ್ಯ ಚರಣಾಬ್ಜಕ್ಕೆ ಭೃಂಗವಿದು ಹೆಚ್ಚು ಲಜ್ಜೆಯನು ತೊರೆದು ನಿತ್ಯ ಹೆಜ್ಚ್ಚಿ ಹೆಜ್ಚಿಗೆ ಬಿಡದೆ ದಾಸರ ಕರುಣವೆಂಬ ವಜ್ರ ಕವಚವ ತೊಟ್ಟು ನುಡಿದವನ ನುಡಿ ಸತ್ಯ ಅಬ್ಜಭವನೊಡನೆ ಗತಿಗೆ 6 ಎಂತು ವರ್ಣಿಸಲಿ ಎನಗಳವಲ್ಲ ಧರೆಯೊಳಗೆ ಸಂತತಿ ನೆಲಸಿದಂತೆ ಕಾವ್ಯವನೆ ಸ್ಥಾಪಿಸಿ ದಾಸರನ ಸಂತರಿಸಿ ಧರೆಗೆ ತೋರಿ ಸಿರಿ ವಿಠಲನ ಸ್ಮರಿಸುತ ಸು ಪಂಥವನು ಹಿಡಿದು ಸದ್ಗತಿಯಲ್ಲಿ ಸೇರಿದರು ಚಿಂತೆಯೊಳಗಿಟ್ಟ ಗುರುವೆ 7
--------------
ವಿಜಯದಾಸ
ಮೊದಲಕಲ್ಲು ಶೇಷದಾಸ ಸ್ತುತಿ ನೇತ್ರಗಳ ಸಾಫಲ್ಯಮಾಳ್ವ ಸುಗಾತ್ರರನು ಕಂಡೆ ಪ ಪಾತ್ರರಾದವರು ದಾಸರ ಕೀರ್ತಿಸಲು ಪಾಪಗಳು ನಿಲ್ಲವೊ ಅ.ಪ. ವೇದ ಶಾಸ್ತ್ರಗಳ ಪೇಳುತ ಮೋದದಿಂದಿಹರುವಾದ ಮಾಡುವರಲ್ಲಿ ಶಮದಮಾದಿ ಗುಣದವರುಮೋದ ತೀರ್ಥರ ಮತಾನುಸಾರವಬೋಧಿಸುತ ಪರಮಾನುಗ್ರಹ ಮಾಳ್ವರ 1 ವಾಸುದೇವನ ದಾಸರೊಳಗ್ರೇಸರರು ಇವರುಶ್ರೀಶನ ಶುಭಗುಣ ಕರ್ಮಂಗಳು ಚಿಂತಿಸುತಲಿಹರುಭೂಸುರಾಂಶರಲ್ಲಿದಾವ ಸುರೇಶರೋಶೇಷದಾಸರಾಗಿ ಇಹರು 2 ತಂದೆ ಶ್ರೀ ನರಸಿಂಹನ ಪದದ್ವಂದ್ವ ಭಜಿಸುವರುಬಂದ ಸಜ್ಜನವೃಂದ ಜನಕಾನಂದಗೈಸುವರುಇಂದಿರೇಶನ ಒಂದೆ ಮನದಿ ಆ-ನಂದಬಾಷ್ಪಗಳಿಂದ ಧೇನಿಪರು 3
--------------
ಇಂದಿರೇಶರು
ವಾಸುದೇವಯನ್ನ ಸಲಹೋ ವಾರಿಜಾಸನ ಈಶವಾಸವಾರ್ಚಿತ ಚರಣ ವನಜೋದರ ಭಾಸುರಾಂಗ ಕೋಟಿ ಪ್ರಭಾಕರ ಪ್ರಕಾಶ ಮಂದಹಾಸ ಕಮಲಾಚಲನಿವಾಸ ಶ್ರೀ ಜಗದೀಶ ಪ ತಾಪಸೋತ್ತಮ ಸತಿಗೆ ಕೋಪದಿಂದ ಪಾಷಾಣರೂಪವಾಗಿ ಬಿಟ್ಡೆನುತ ಶಾಪಕೊಡಲು ಕೋಪನಾಮಣಿ ಬಲು ಪ್ರಲಾಪಿಸುತ ಮನದಿ ನಿಷ್ಪಾಪರರ ನುಡಿಯಂತೆ ಧರಿಯಲಿಬಿದ್ದಿರಲು ಪಾದ ಸ್ಪರ್ಶಿಸಲಾಕ್ಷಣ ಸೀತಾಪತಿಯ ಸೇವೆಯಿಂದ ಸುಂದರಿಯಾದಳು ತ್ವರದಿ 1 ಪಾಪಗಳು ಮಾಡಿದವನಂತ್ಯ ಕಾಲದಲಿ ಸುತನ ನಾರಗೆಂದು ಕರಿಯೇ ಗತಿ ತೋರಿದಿ ಹಿತದ ಲಾಮರಾಮರೆಂಬ ನಿನ್ನ ಹರುಷದಲಿ ಪೊರೆದೆ ಕ್ಷಿತಿ ನಾಥ ಹರಿ ಮಹೋನ್ನತ ಚರಿತನೆ ಪತಿತ ಪಾವನ ಬಿರುದು ಪರಮಾತ್ಮ ನಿನಗಿರಲು ಸ್ತುತಿಸುವೆನು ಗೋವಿಂದ ಶುಭಕರ ಶ್ರೀ ಮುಕುಂದ 2 ಶರಧಿ ಗಂಭೀರ ಹಾಟಕಾಂಬರ ಶೋಭಿತ ಪುರುಷೋತ್ತಮಾನಂತ ಮುರವೈರಿ ಮುರಲೀರವ ವಿನೋದ ಗರುಡಗಮನ `ವರ ಹೆನ್ನೆಪುರನಿಲಯ' ಪರಮಪಾವನ ನೃಹರೆ ಉರಗೇಂದ್ರಶಯನ ಮಂದರಧರ ಕೃಪಾಂಬುಧೆ3
--------------
ಹೆನ್ನೆರಂಗದಾಸರು
ಹರಿವಾಸರದುಪವಾಸದ ಫಲವು ಕಂಡವರಿಗೆ ದೊರಕುವುದೆ ಪ. ಹಿರಿದು ಜನ್ಮಗಳಲಿ ಹರಿಯನಾರಾಧಿಪ ಪರಮ ಭಾಗವತರ ಭಕ್ತರಿಗಲ್ಲದೆ ಅ.ಪ. ಸ್ನಾನಸಂಧ್ಯಾನವು ಮೊದಲಾದ ಕರ್ಮ ನ್ಯೂನದ ಪಾಪಂಗಳು ದೀನತ್ವದಿಂದ ತುಚ್ಛರಕೈಯ ಹಿಡಿದ ದು ರ್ದಾನದ ಪಾಪಂಗಳು ಭಾನುಬಿಂಬವ ಕಂಡ ಹಿಮದಂತೆ ಚಿದಾನಂದವಾದ ವ್ರತಕೆ ಸರಿ ಬಾರದು 1 ಪರಸತಿಯರ ನೋಡಿ ಮನವಿಟ್ಟ ಪಾಪವು ಪರದೂಷಣೆಯ ಪಾಪವು ಪರಮಾತ್ಮನ ಹೊಗಳುವ ನಾಲಗೆಯಲ್ಲಿ ನರರ ಹೊಗಳುವ ಪಾಪವು ಪರ ವಸ್ತುಗಳನಪ- ಹರಿಸುವ ಪಾಪಂಗಳು ಕರಿ ಓಡುವಂತೆ ದುರಿತ ಕೋಟಿಗಳನು ಪರಿಹರಿಸುವ ಶ್ರೀ 2 ಆಡುವ ಅನೃತವಾಕ್ಯಗಳಿಂದ ಸಂಭವವಾಗುವ ಪಾಪಂಗಳು ನೋಡಿಕೊಳ್ಳದೆ ದುರಾನ್ನವನುಂಬ ದುರ್ದಾನದ ಪಾಪಂಗಳು ಮಾಡಬಾರದ ದಿನದಲಿ ಸ್ತ್ರೀಗೋಷ್ಠಿಯ ಮಾಡಿದ ಪಾಪಂಗಳು ಓಡುವುದಘಸಂಘ ಉತ್ತಮವಾಗಿಹ3 ಮತ್ತೆ ಈ ಬಹಳ ಪಾಪಗಳಿಗೆಲ್ಲ ತಾ ಪಕ್ಷ ಪ್ರಾಯಶ್ಚಿತ್ತವು ಉತ್ತಮವಾದ ವ್ರತಗಳಿಗೆಲ್ಲ ತಾ ಉತ್ತಮವೆನಿಸುವುದು ಚಿತ್ತಶುದ್ಧಿಯನಿತ್ತು ಜ್ಞಾನವೈರಾಗ್ಯದಿ ಭಕ್ತಿ ಮಾರ್ಗವನೀವುದು ಮುಕ್ತಿಗೆ ಸೋಪಾನವಾಗಿ ಭವಾಭ್ಧಿಯ ದಾಟಿಸಿ ಹರಿಯ ಸನ್ನಿಧಿಗೆ ದಾರಿಯನೀವ 4 ತೋರುವ ದಶಮಿ ದ್ವಾದಶಿಗಳು ಸಂಪುಟಾಕಾರದಿ ಹರಿದಿನವು ಮೂರುದಿನದ ವ್ರತ ನಾಲ್ಕು ಹೊತ್ತಿನ ಆಹಾರಗಳು ವರ್ಜಿತವು ಊರುದಾರಿಗಳ ನಡೆಯದೆ ತಾಂಬೂಲ ಚರ್ವಣಂಗಳೊರ್ಜಿತವು ಜಾಗರ ಮಾಡಿ ವ್ರತವಾಚರಿಸುವ 5 ಅತಿಶಯವಾದ ಶ್ರೀಹರಿದಿನದಿ ಪಿತೃತರ್ಪಣಗಳು ವಜ್ರ್ಯವು ಪ್ರತಿವರುಷದಲಿ ಆಚರಿಸುವ ತಾಯಿತಂದೆ ತಿಥಿಗಳೆಲ್ಲ ವಜ್ರ್ಯವು ಸತತವು ಮಾಡುವ ಯಜ್ಞಪುರುಷಗೆ ಆಹುತಿಗಳೆಲ್ಲ ವಜ್ರ್ಯವು ಇತರ ಭೋಗ ಕೃತ್ಯಗಳನೆಲ್ಲ ವರ್ಜಿತಮಾಡಿ ಈ ವ್ರತವನಾಚರಿಸುವ 6 ಹಲವು ವ್ರತಗಳಾಚರಿಸಿ ದಾನಂಗಳ ಹಲವು ಮಾಡಿದರೇನು ಹಲವು ಪುಣ್ಯತೀರ್ಥನದಿಯಲ್ಲಿ ಸ್ನಾನವÀ ಮುದದಿ ಮಾಡಿದರೇನು ಹಲವು ಪುರಾಣಂಗಳ ಹಲವು ಶಾಸ್ತ್ರಂಗಳ ಹಲವು ಕೇಳಿದರೇನು ಶ್ರೀಹಯವದನನ್ನ ದಿನಕೆ ಸರಿಬಾರದು 7
--------------
ವಾದಿರಾಜ