ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(5) ದೇವರಹೊಸಹಳ್ಳಿ ಆಂಜನೇಯ (ಕೆಂಗಲ್ಲು ಸಮೀಪ) ಪರಿಪಾಹಿ ಸಂಜೀವರಾಯ ಜೀಯ ಕರವ ಮುಗಿವೆ ವಜ್ರಕಾಯ ಪ ವರ ಜಾಜಿ ಕೇಶವ ಪ್ರೇಮ ಧಾಮ ಅ.ಪ ರಾಮಾವತಾರದಿ ಹರಿಗೇ ನೀನು ನೇಮ ಸೇವಕನಾದೆ ಭರದೇ ಆ ಮಹೀಜಾತೆಗೆ ಮುದ್ರೆ ಸ್ವಾಮಿ ಪೇಳ್ದಂತೆ ನೀನು ಯಿತ್ತೆ 1 ಅಂಜನದೇವಿಕುಮಾರ ಶ್ರೀಮ ದಾಂಜನೇಯ ಗಂಭೀರ ಸಂಜೀವನಾದ್ರಿಯ ತಂದೆ ಪ್ರ ಭಂಜನ ಸೌಮಿತ್ರಿಗಂದೇ 2 ರಾಮನಾಮ ಧ್ಯಾನನಿರತ ಸುಖ ಶ್ಯಾಮನ ಕ್ಷೇಮ ಸುವಾರ್ತ ವ್ಯೋಮದಿ ಭಕುತಗೆ ಪೇಳ್ದೆ ಸುಪಿ ತಾಮಹ ಪದವಿಯ ಪಡೆದೆ 3 ವ್ಯಾಸಯತೀಂದ್ರ ಕರಪೂಜ್ಯಾ ನಿತ್ಯ ದಾಸರಪೊರೆವ ಸಾಮ್ರಾಜ್ಯ ದೋಷ ಶೋಷಣ ಪ್ರಭಾವ ಗುಣ ಭೂಷಣ ಸಜ್ಜನ ಜೀವ 4 ಭೂತ ಪ್ರೇತ ಬ್ರಹ್ಮ ಪಿಶಾಚಂಗ ಳಾತುರದಿಂ ಬಾಧಿತರು ಖ್ಯಾತಿಯ ಮಾರುತಿ ನಾಮಾಮೃತವ ಪ್ರೀತಿಯಿಂ ಸವಿವರೋ ಭೀಮಾ 4 ಹಿಂದಣ ಜನ್ಮದ ಪಾಪದಿಂದ ನೊಂದರು ಪ್ರಾರ್ಥಿಸಿ ತಂದೆ ಭಾವದುರಿತಂಗಳನಂದು ನಿ ರ್ಬಂಧಿಸಿ ಕಳೆಯುವೆ ಬಂಧು 5
--------------
ಶಾಮಶರ್ಮರು
ಎಂತಹದೋ ನಿನ್ನ ಸಂದುರಶನಾ | ಕಂತುವಿನ ಜನಕ ಉಡಪಿ ಕೃಷ್ಣರಾಯಾ ಪ ಓದನ ತಿಂದೆ | ಪರರ ದ್ರವ್ಯದ ತಂದೆ | ಪರ ಸತಿಯರಿಗೆ ನೊಂದೆ | ಗುರು ಹಿರಿಯರ ನಿಂದೆ | ಹಿರದಾಗಾಡಿದೆ ಮುಂದೆ | ಬರುತಿಪ್ಪ ಪಾಪದಿಂದೆ | ಪರಿಯಾಗಿ ಈ ಬಂದೆ | ಅರುಹು ತೊರದೆ ಬಂದೆ | ಕರುಣಿಸು ಜಗದ ತಂದೆ 1 ಸುಜನರ ಗುಣವ ಹಳಿದೆ | ಕುಜನರ ಸಂಗದಲಿ ಬೆಳಿದೆ | ಭಜನೆಗೆÀಟ್ಟು ಸುಳಿದೆ | ಪ್ರಜರನು ಪೊಗಳಿದೆ | ವೃಜ ಪುಣ್ಯಕೋಶ ಕಳಿದೆ | ಋಜುಮಾರ್ಗವ ತೊರದುಳಿದೆ | ರಜನಿಚರ ಮತಿಗಳಿದೆ | ವಿಜಯ ವಾರ್ತೆಗೆ ಮುಳಿದೆ | ತ್ರಿಜಗಪತಿ ಕೇಳಿದೆ 2 ಹರಿವಾಸರವ ಬಿಟ್ಟೆ | ದುರುಳರಿಗೆ ಧನ ಕೊಟ್ಟೆ | ಹರಿಭಕ್ತರ ತೊರೆದು ಕೆಟ್ಟೆ | ಹರಿಶ್ರವಣ ಬಚ್ಚಿಟ್ಟೆ | ಪರಮ ವ್ರತವ ಮೆಟ್ಟೆ | ಹರುಷದಲ್ಲಿಗೆ ಮನಮುಟ್ಟಿ | ಬಟ್ಟೆ | ವಿರಕುತಿಯನು ಬಿಟ್ಟೆ | ದುರಿತಕ್ಕೆ ಗುರುತಿಟ್ಟೆ | ಬಟ್ಟೆ 3 ಜ್ಞಾನವೆಂಬೋದೇ ಇಲ್ಲಾ | ಏನು ಪೇಳಲಿ ಸೊಲ್ಲಾ | ನೀನೆಂಬೋದಿಲ್ಲವಲ್ಲಾ | ಹಾನಿ ವೃದ್ದಿಗಳೆಲ್ಲಾ | ನಾನುಂಟೆ ಎಲ್ಲ ಸಲ್ಲಾ | ದಾನಾದೆ ಸತತ ಖುಲ್ಲಾ | ತಾ ನುಡಿಗೆ ಸೋತು ಚಿಲ್ಲಿ | ರಾನಡತಿ ಸಿರಿನಲ್ಲಾ | ನಾ ನಡದೆ ನೀ ಬಲ್ಲಾ | ದೇ ನೋಡು ಪ್ರತಿ ಮಲ್ಲಾ 4 ಅಪರಾಧಿ ನಾನಯ್ಯ | ಅಪವಾದದವನಯ್ಯ | ಕೃಪಣದಿಂದೆನ್ನ ಕಾಯಾ | ಉಪಜಯವಾಯಿತು ಪ್ರೀಯಾ | ಸ್ವಪನದಿ ಪುಣ್ಯ ಸಹಾಯಾ | ಲಪಮಾಡಲಿಲ್ಲ ಜೀಯಾ | ಕೃಪೆಯಲ್ಲಿ ಪಿಡಿ ಕೈಯಾ | ವಿಜಯವಿಠ್ಠಲರೇಯಾ | ಗುಪುತವಾದುದುಪಾಯಾ | ತಪಸಿಗಳ ಮನೋಜಯಾ 5
--------------
ವಿಜಯದಾಸ
ಮಾಯೆಎನ್ನ ಕಾಯವನ್ನುಪಾಯದಿಂದ ಮೋಹಿಸಿ |ಬಾಯ ಮುಚ್ಚಿ ಕೊಲ್ಲುತಿಹಳು ಕಾಯೊ ಲಕ್ಷ್ಮೀರಮಣನೆ ಪಮಾತೆ-ಪಿತರ ವಿಷಯದಿಂದ ಶ್ವೇತಬಿಂದು ಬೀಳಲಾಗಿ |ಕೀತ ತತ್ತಿ ಬಲಿದು ಮಾಸಚೀಲದೊಳಗೆ ಬೆಳೆದೆನು ||ರಕ್ತಗೂಡಿ ಬಸಿರೊಳೊಂಬತ್ತು ತಿಂಗಳಿದ್ದೆ ನಾನು |ಸತ್ತು ಮತ್ತೆ ಹುಟ್ಟ ಹೋಗಲಾರೆ ಲಕ್ಷ್ಮೀರಮಣನೆ 1ಎಲವು ಕಂಬಮಾಡಿ ನರದ ಬಳ್ಳಿಯಲ್ಲಿ ಬಿಗಿದು ಬಿಗಿದು |ಒಳಗೆ ರಕ್ತದಿಂದ ಮೆತ್ತಿ ಹೊಸೆ ಪಾಪದಿಂದ ನಿಂದೆ ||ನೆಲೆಯ ಮನೆಯ ಮಾಡಿ ಚರ್ಮಹೊಲಿzಯ ಹೊದಿಕೆ ಹೊದಿಸಿದಂಥ |ಹೊಲೆಯ ಗೂಡಿನಲ್ಲಿ ಜನಿಸಲಾರೆ ಲಕ್ಷ್ಮೀರಮಣನೆ 2ಎನ್ನ ಸತಿಯು ಎನ್ನ ಸುತರು ಎನ್ನ ಬಂಧು - ಬಳಗವು |ಎನ್ನ ಸಾಕಿ ಸಲಹು ಎಂದು ಹರಿದು ತಿಂಬರು ||ಎನ್ನ ತನುವ ಜವನು ಬಂದು ಎಳೆದುಕೊಂಡು ಒಯ್ಯುವಾಗ |ಬೆನ್ನಬಪ್ಪರಾರ ಕಾಣೆ ಚೆನ್ನ ಲಕ್ಷ್ಮೀರಮಣನೇ 3ಇರುವೆ ಮೊದಲು ಆನೆ ಕಡೆಯು ಬಸಿರೊಳು ಬಂದೆ ನಾ |ಹರಿದು ಪಾಪಕರ್ಮದಿಂದೆ ತೊಪಳಲಿಬಳಲಿ ನೊಂದೆ ನಾ ||ಬಿರುಗಾಳಿಗೆ ಸಿಕ್ಕ ಮರದ ತರಗೆಲೆಯಂತುದುರಿ ನಾ |ಮರಳಿ ಮರಳಿ ಸತ್ತು ಹುಟ್ಟಲಾರೆ ಲಕ್ಷ್ಮೀರಮಣನೆ 4ಲಕ್ಷ ಜೀವರಾಶಿಗಳನು ಕುಕ್ಷಿಯೊಳಗೆ ಇರಿಸಿ ನಿನ್ನ |ಅಕ್ಷಯ- ಅನಂತ ನನ್ನನೇಕೆ ಹೊರಗೆ ಮಾಡಿದೆ ||ಈಕ್ಷಿಸುತಿರು ಎನ್ನ ನೀನು ಕುಕ್ಷಿಯೊಳಗೆ ಇಂಬನಿತ್ತು |ರಕ್ಷಿಸಯ್ಯ ಲಕ್ಷೀಪತಿಪುರಂದರವಿಠಲನೆ5
--------------
ಪುರಂದರದಾಸರು