ಒಟ್ಟು 8 ಕಡೆಗಳಲ್ಲಿ , 6 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಂಧವಾಹನ ಮತವ ಪೊಂದವರು ಹಂದಿನಾಯಿಗಳಾಗಿ ಬಹುಕಾಲ ಕಳೆದಂತೆ ಪ ಇಳೆಯಾಣ್ಮನಿಲ್ಲದಾ ನಾಡು ಶೋಭಿಸದಂತೆ ಜಲವಿಲ್ಲದಾ ವಾಪಿ ಕೂಪದಂತೆ ನಳಿನ ಬಾಂಧವ ಮಿತ್ರನುದಯಿಸದ ದಿನದಂತೆ ಕುಲಹೀನನಾದವರ ಸಂಗಮಾಡಿದಂತೆ 1 ಕೋಣನಾ ಸಮ್ಮುಖದಿ ವೀಣೆ ಬಾರಿಸಿದಂತೆ ಜಾಣತನವಿಲ್ಲದಾಮಾತ್ಯನಂತೆ ವಾನರನ ಕೈಯಲ್ಲಿ ಮಾಣಿಕವ ಕೊಟ್ಟಂತೆ 2 ಶಾಮಸುಂದರನಾಮ ವರ್ಣಿಸದÀ ಕವಿಯಂತೆ ಪಾಮರಗೆ ಪೌರಾಣ ಪೇಳಿದಂತೆ ಕಾಮಾದಿಗುಣ ಬಿಡದೆ ಸನ್ಯಾಸಿಯಾದಂತೆ ಕೋಮಲಾಂಗದ ಸತಿಗೆ ಕ್ಲೀಬ ದೊರಕಿದಂತೆ 3
--------------
ಶಾಮಸುಂದರ ವಿಠಲ
ದಾಸನೆನಿಸು ಜೀಯಾ ಶ್ರೀ ವರದೇಶ ವಿಠಲರಾಯಾ ದಾಸರಥಿಯೆ ಯನ್ನಾಶೆ ತಳೆದು ನಿರ್ದೋಷನೆನಿಸಿ ಬಹು ಮೀಸಲು ಮನವಿತ್ತು ಪ ವರದೇಂದ್ರರ ಆಜ್ಞಾದಿಂದಲಿ ಗುರುವರ ಮಹಾಪ್ರಾಜ್ಞಾ ವರದೇಶ ವಿಠಲೆಂಬ ಗುರುತಿನ ಮುದ್ರಿಕೆ ಪರಮ ಪಾಮರಗೆ ತ್ವರ ಕರುಣಿಸಿದಕೆ 1 ಶೂನ್ಯ ನಾನು ಸರ್ವದ ಹೀನ ವಿಷಯ - ರತನು ವಾನರನ ತರದಿ ಮಾಣಿಕೆಂಬ ತೆರ ಹೀನನೆನಿಸದಲೆ ಪೋಣಿಸು ಸನ್ಮತಿ2 ಏಸು ಪೇಳಲಿನ್ನಾ ಶ್ರೀ ವರ- ದೇಶ ವಿಠಲ ನಿನ್ನಾ ದಾಸರ ವಚನಕೆ ದೋಷ ಬಾರದಂತೆ ಲೇಸು ಭಕುತಿ ಜ್ಞಾನ ದಾಸ್ಯವಿತ್ತು ತವ 3
--------------
ವರದೇಶವಿಠಲ
ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ವಂದಿಪೆ ಚರಣಾರವಿಂದಕೆ ಸದ್ಗುರು ವಾದಿರಾಜ ಮಂದ ಮತಿಯ ಬಿಡಿಸಿಂದಿರೇಶನ ತೋರೋ ಪ ದುರುಳ ಬುದ್ಧಿಲಿಂದ ಮರೆದು ಬಿಟ್ಟೆ ನಿನ್ನ ವಾದಿರಾಜ ಧರಣಿಮಂಡಲದೊಳು ಪಾಪಿಷ ನಾನಾದೆ ವಾದಿರಾಜ ಪರಮ ಪುರುಷ ಭಾವಿ ಮರುತ ನೀನೆÉಂದು ವಾದಿರಾಜ ಹಿರಿಯರ ಮುಖದಿಂದ ನಿಶ್ಚೈಸಿದೆ ವಾದಿರಾಜ 1 ಶಿರದೊಳು ಹೂರಣದ್ಹರಿವಾಣ ಧರಿಸುತ ವಾದಿರಾಜ ವರ ಭಕ್ತಿಯಿಂದಲಿ ತುರುಗಾಸ್ಯಗುಣಿಸಿದ ವಾದಿರಾಜ ಗುರು ಜಗನ್ನಾಥ ದಾಸರ ಸ್ವಪ್ನದೊಳು ಬಂದು ವಾದಿರಾಜ ಹÀರಿಕಥಾಮೃತಸಾರವಿರಚಿ ಸೆಂದರು ವಾದಿರಾಜ 2 ಶ್ರೀಮಧ್ವಾರ್ಯಮತ ಸಾಮ್ರಾಜ್ಯ ಧ್ವಜಪೆತ್ತಿ ವಾದಿರಾಜ ಶಾಮಸುಂದರ ಕೃಷ್ಣ ನಾಮದ ಮಹಿಮೆಯ ವಾದಿರಾಜ ಪಾಮರಂಗೆ ಪೇಳಿ ಪ್ರೇಮದಿ ಸಲುಹಿದ ವಾದಿರಾಜ 3
--------------
ಶಾಮಸುಂದರ ವಿಠಲ
ಹರಿಯಂದು ಸ್ಮರಿಸುವರ ದುರಿತಪರಿಹಾರವೆಂದು ನೆರೆಪೇಳ್ವ ಶೃತಿ ತಿಳಿದು ಮನವೆ ಕರುಣಾಸಾಗರನಾದ ಕಮಲಾದ್ರಿವಾಸ ನರಹರಿಯಪಾದ ಭಜಿಸುವ ಮನವೆ ಪ ಸುತನ ನಿಂದಗನೆಂದು ಹಿತದಂತ್ಯಕಾಲ ಸಂಘಾತನೆ ಹಿತ ವೇಳ್ವೆ ಕರಿಯಲು ಮನವೆ ಚತುರಾಸ್ಯ ಜನಕ ಮನ್ಮಥಕೋಟಿರೂಪ ಸದ್ಗತಿ ತೋರಿಸಲಹುದೇನು ಮನವೆ 1 ಆ ಮರರೀಮರ ಎಂಬ ಪಾಮರಗೆ ಪಟ್ಟಾಭಿರಾಮ ಭಕ್ತರ ಪ್ರೇಮ ಮನವೆ ಕಾಮಿತಾರ್ಥವನಿತ್ತ ಕಂಜಾಕ್ಷದಯದಿ ಸೀತಾಮನೋಹರ ರಾಮ ಮನವೆ 2 ಕರಿಯು ಮಕರಿಗೆ ಶಿಲ್ಕಿ ನೆರಳುತಲಿ ಪರಮಾತ್ಮ ಪರಬ್ರಹ್ಮನೆಂದು ಸ್ತುತಿಸಿ ಮನವೆ ಗರುಡವಾಹನ ಹೆನ್ನೆಪುರನಿಲಯ ಮರಿಯದಲೆ ಪರಿಪಾಲಿಸಿ ಪೊರೆವ ಮನವೆ 3
--------------
ಹೆನ್ನೆರಂಗದಾಸರು
ಏನು ಗತಿಯೊ ರಂಗ ನಾ ನಿನ್ನವನಾಗಿಜ್ಞಾನದಂತಿರಲಿಲ್ಲವೊ ಪ.ಉಂಡುಂಡುತುಡುಗಕೋಣನಪರಿಸೊಕ್ಕಿದೆಕಂಡಲ್ಲಿ ಕುಳಿತೆ ನೊಣನ ತೆರದಿಭಂಡು ಭೂತದ ಮಾತನಾಡಿ ಭಂಡನಾದೆಪುಂಡರೀಕಾಕ್ಷನನ್ನಂಥ ಪಾತಕಿಗೆ1ಬಲು ಶಾಸ್ತ್ರಶ್ರವಣೆಂಬುವ ಮಳೆಗರೆದರೇನುಕಲುಗುಂಡಿನಂತೆ ಕೆಟ್ಟೆದೆ ತೊಯ್ಯದುಹಲವು ಅಧ್ಯಾತ್ಮವನುಸುರೇನು ಚಿತ್ತದಕಳವಳಿ ನಿಲಿಸಲಾರದ ಪಾಮರಗೆ 2ಭವಸುಖ ಉಂಬಾಗ ನೋವು ಬೇವಾದಾಗತವಕದಿ ನುಡಿವಾಗ ಕನಸಿನಾಗಅವಿರಳಅಚ್ಯುತನಿನ್ನಂಘ್ರಿ ನೆನೆದೀಶಅವಸರಕೊದಗೆಂದೆ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ನೀನಲ್ಲದೆನಗಾರಿಲ್ಲ ಗೋವಿಂದನೀನಲ್ಲದೆ ಇಹಪರವಿಲ್ಲ ಪಪರರ ಬೇಡಿ ಪಂಥವಾಡಿ ಹೋಯಿತಲ್ಲನರರ ಕೊಂಡಾಡಿ ನಾಲಗೆ ಬರಡಾಯಿತಲ್ಲ ||ಪರವಿಲ್ಲ ಇಹವಿಲ್ಲ ನರಜನ್ಮ ಸ್ಥಿರವಲ್ಲನರಗೆ ಪಾಮರಗೆ ಪಾತಕದ ಪಂಜರಗೆ 1ತನುವು ತನ್ನದಲ್ಲ ತನ್ನವರು ತನಗಿಲ್ಲಧನಧಾನ್ಯ ಸಂಪತ್ತು ಅವಗಿರದು ||ತನುವು ಹೋಗಿ ಇನ್ನು ಮಣ್ಣು ಕೂಡುವಾಗತನುಮನಕ್ಕೆ - ಇನ್ನಾರಯ್ಯ ಸ್ವಾಮಿ 2ಮಾತಾಪಿತರು ಗೋತ್ರಜರು ಮೊದಲಾಗಿಪ್ರೀತಿಯಿಂದ ಬಹಳ ಸತಿಸುತರು ||ಕೀರ್ತಿಗೆ ಅವರು ಸ್ವಾರ್ಥಕೆ ಇವರು ಸಂಗಾತಿಗಿನ್ನಾರಯ್ಯಪುರಂದರವಿಠಲ3
--------------
ಪುರಂದರದಾಸರು
ಸಕ್ಕರೆ ಸವಿ ಸಮ ತತ್ವರಸಿಕಸುಖತೀರ್ಥರಲ್ಲದೆ ಶುನಿಕುತರ್ಕ ಪರ್ಣಾಶನ ನರಗುರಿ ಬಲ್ಲವೆಮುಕ್ತಿಪಥದಹವಣಪ.ಪಯಸ ಪಯವ ನಿರ್ಣೈಸಿ ಸೇವಿಪ ಹಂಸಚಯವಲ್ಲದೆ ಮಲವಬಯಸಿ ಮೆಲ್ಲುವ ವೃದ್ಧ ವಾಯಸ ತಾ ಬಲ್ಲದೆನಯರುಚಿಹೇಳಾ1ದ್ವಿಪಶಿರ ಪೀಯೂಷವ ಸಾಮಭೇದಜÕ ಮೃಗಾಧಿಪ ಬಲ್ಲಾಮೇಧ್ಯ ಆಮಿಷಚಪ್ಪರಿದುಂಬೊಶೃಗಾಲಶ್ವಾನತಾವು ಬಲ್ಲವೆಆ ಪರವಿಡಿಯ ಸುಖವ 2ಮಂಗಳಾಂಬುಜ ಮಕರಂದ ಭೋಜಕಶುಭಭೃಂಗವಲ್ಲದೆ ಅಶುಭಗುಂಗಿ ತಾ ಬಲ್ಲದೆಸುರಭಿಅಸುರಭಿ ಗುಣಂಗಳ ಬಗೆಗಳನು 3ಸುರತರುವಿಂಧನಸುರಭಿಪಶು ಪಾಮರಗೆ ಮಣಿಯೆ ಕಲ್ಲುವರಪೇಯ ವಿಷಗುರುಗುರುಕೃಪೆ ಹಿತದುರುಳನಿಗಪಕಾರ 4ಸಲ್ಲ ಕರುಧಿ ಗಿ? ರುಣೆ ಪಾಲ್ಗರಿದುಣ್ಣಲುಬಲ್ಲ ಪೂರಣಬೋಧರುಫುಲ್ಲನಾಭಪ್ರಸನ್ನವೆಂಕಟಪತಿಯಆಹ್ಲಾದ ಕಾರಣರು 5
--------------
ಪ್ರಸನ್ನವೆಂಕಟದಾಸರು