ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣ ಕೃಷ್ಣನಂದ ಮುಕುಂದಾ ಪ ನಿನ್ನೆತ್ತಿ ಆಡಿಸಲು ನಂದ ಯಶೋದೆಯಲ್ಲಾ ನಿನ್ನೆಂತು ಸೇವಿಸುವೆ ಪೇಳು ಇಂದಿರೆರಮಣಾ1 ನಿನ್ನ ಸಹಪಾರಿ ಸುಧಾಮನಾನಲ್ಲಾ ನಿನ್ನೆಂತು ಸೇವಿಸಲೊ ಯದುಕುಲೋತ್ತಮನೇ2 ಅಗರು ಚಂದನ ಪರಿಮಳದ್ರವ್ಯಗಳನೆ ತಂದು ಅರ್ಪಿಸಲು ಕುಬುಜೆಯಲ್ಲಾ ಆದರದಿ ಪಾಲ ನೀಡೆ ವಿದುರನಲ್ಲಾ ಅನಂತ ಗುಣಪೂರ್ಣನೇ ಶ್ರೀ ಹರಿ3 ಗೋವುಪಾಲನು ತಂದು | ನಿನಗ ಭಿಷೇಕ ಮಾಡುವೆನೆ ವಿಧ ವಿಧ ಪುಷ್ಪಗಳ ತಂದು ಅರ್ಚಿಸಲು ಪೊಕ್ಕಳೊಳು ಪುಷ್ಪವನೆಪಡೆದಿರುವೆ ಹರಿಯೆ 4 ಕರಿರಾಜ ನಿನ್ನ ಕರೆಯೆ ಕರುಣದಿಂದ ಬಂದೆ ಪ್ರಹ್ಲಾದಗೋಲಿದು ಕಂಬದಲಿ ನಿಂತೇ ದ್ರೌಪದೀ ದೇವಿಗಕ್ಷಯಾಂಬರ ವಿತ್ತೆ ಅಂತೆ ಎನ್ನಪಾಲಿಸೊ ಲಕ್ಷ್ಮೀಕಾಂತನೇ 5 ಪರಿಪಯಲಿಭಕ್ತರ ಪಾಲಿಸಿದೆಯೊ ದೇವಾ ಪರಮ ದಯಾಳುವೆಂದೆನಿಸಿಕೊಂಡೇ ಪರಮ ಪುರುಷನು ನೀನು ಪಾಮರನು ನಾನಹುದೊ ದಾರಿ ಕಾಣದೆ ಇರುವೆ ದಯೆತೋರು ಮುರಾರಿ6 ಭಕ್ತವತ್ಸಲ ನೀನೆ ಭಯನಿವಾರಣ ನೀನೇ ಭಾಗವತಜನಪ್ರಿಯ ನೀನೆ ಸರ್ವರಕ್ಷಕ ನೀನೆ ಶ್ರೀ ವೇಂಕಟವಿಠಲಾ 7
--------------
ರಾಧಾಬಾಯಿ
ಎನ್ನ ರಕ್ಷಿಸೊ ನೀನು - ದೇವರ ದೇವ ಪಎನ್ನ ರಕ್ಷಿಸೊ ನೀನು ಯಾದವ ಕುಲಮಣಿಮುನ್ನ ದ್ರೌಪದಿಯಭಿಮಾನ ಕಾಯ್ದ ಕೃಷ್ಣ ಅ.ಪ.ಬಾಲನ ಮೊರೆಯನುಕೇಳಿಕೃಪೆಯಿಂದಪಾಲಿಸಿದೆಯೊ ನರಸಿಂಹ ರೂಪದಿಂದ 1ಪಾಷಾಣಚರಣದಿ ಯೋಷಿದ್ರೂಪವ ಗೈದೆದೋಷ ಸಂಹಾರ ನಿರ್ದೋಷಗುಣಪೂರ್ಣನೆ 2ಇನಕುಲಾಂಬುಧಿ ಚಂದ್ರ ಘನಶುಭಗುಣಸಾಂದ್ರಸನಕಾದಿ ಮುನಿವಂದ್ಯಪುರಂದರವಿಠಲ3
--------------
ಪುರಂದರದಾಸರು