ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲ ಮಾಡಿದವ ನೀನೊ ನಾನೊ |ಅಲ್ಲ ಅಹುದು ಎಂದು ಆಡುವದೇನೊ ಪ ಪುಣ್ಯಕೆ ಉಗ್ರ ಪಾಪವ ರಚಿಸಿದೆ |ಪುಣ್ಯದಿಂದಲಿ ಪಾಪವ ಕಳೆದೆ 1 ಮಿಥ್ಯ ಹರಿಸಿದೆ 2 ಅರಿವಿನೊಳಗೆ ಒಂದು ಮರವನು ಬೆರಸಿದೆ |ಗುರು ಭವತಾರಕನಾಗಿ ತಾರಿಸಿದೆ 3
--------------
ಭಾವತರಕರು
ಕರುಣದಿ ಕಾಯೋ ಗೋವಿಂದಾ ಯಂವ ದುರಿತಗಳಿಂದ ನೀನೀಗೊ ಮುಕುಂದ ಪ ಹರಿಸೇವೆ ಮಾಡುತ್ತ ಬಂದೆ ಮುಂದೆ ಚಿರ ಸಾಯುಜ್ಯವನ್ನು ನೀಡೋ ಶರಣಂದೆ ಅ.ಪ. ಲಕ್ಷಯೆಂಬತನಾಲ್ಕು ಜನ್ಮಯೆತ್ತಿ ಭಕ್ಷಿಸಿ ಬಂದೆನು ಕೋಟಿ ದುಃಖಗಳಾ 1 ಸಾಕ್ಷಿಯಾಗಿರುವಂಥ ಜೀವಾತ್ಮನನು ಲಕ್ಷಕೆ ತಂದೆ ಮನುಜ ಜನ್ಮದಲೀ 2 ಪಾಪ ಪುಣ್ಯಕೆ ಕರ್ತೃವಾಗಿ ಭವದಿ ಕೂಪದಿ ನಿಂದೆನು ಬೋಕ್ತøವು ಆಗೀ 3 ಪಾಪವ ಕ್ಷಮಿಸೋ ಸರ್ವಾತ್ಮಯಂನ ತಾಪವ ನೀಗುತ್ತ ಜನ್ಮ ಪರಿಪರಿಸೋ4 ಜನ್ಮ ತಾಳಲಾರೆ ಹರಿಯೇ ತಾಳಿ ಜನ್ಮದಿ ಹರಿಪಾದ ನಾ ಬಿಡಲಾರೆ 5 ಸನ್ನುತವರ ದೂರ್ವಾಪುರದ ನಂಮ ಚನ್ನಕೇಶವನೇ ಭಕ್ತಿಯನು ನೀ ಕೊಡೆಲೋ6
--------------
ಕರ್ಕಿ ಕೇಶವದಾಸ
ಗುರುಭಕ್ತಿ ಮನವೆ ನೀ ಮಾಡು ಸ್ಥಿರ ಗುರುತಿಟ್ಟು ಬಾಹುದು ಪರಾತ್ಪರ ಸರಿಗಾಣೆನೊ ಪುಣ್ಯಕೆ ನೋಡಿದರ ಕರಕೊಂಬುದಿದೆ ಸುಖ ಸಜ್ಜನರ 1 ಹಿಡಿಬೇಕು ಸದಾ ಗುರುಭಾವದೃಢ ಉಪಾಧಿ ಜಡ ಪಡಕೊಂಬುದು ಮಾಡಬಾರದು ತಡ ಒಡಲ ಹೊಕ್ಕರ ಸದ್ಗುರು ಕೈಯಬಿಡ 2 ಗುರುನಾಮ ನಿಧಾನ ನೆನಿಯೊ ಸದ ಸುರಲೋಕಕೆ ಪಾವನ ಮಾಡುವದ ಪರತತ್ವಕೆ ಪಾರನೆದೋರುವದ ಸ್ಮರಿಸಿನ್ನು ಮಹಿಪತಿ ಮುಖ್ಯವಿದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜೋಕೆ ಎನ್ನ ವಿಚಾರ ನಾಕು ಜನರಂತಲ್ಲ ಸ್ವೀಕರಿಸಬೇಕು ಕ್ಷಣದಿ ಪ ನಾಕಾರು ವಿಧಗಳಲಿ ನೀಪೇಳಿದುದನೆಲ್ಲ ಏಕಮನದಲಿ ಮಾಡಿದೆ ಕೃಷ್ಣ ಅ.ಪ ಬಾಲತನದಲಿ ಬಹಳ ಲೋಲನಾಗಿರು ಎಂದು ಪೇಳಲಿಲ್ಲವೆ ಯೋಚಿಸು ಕೀಳುಜೀವನದಲ್ಲಿ ಕಾಲವನು ಕಳೆ ಎಂದು ಪೇಳಿದುದ ನೀ ಮರೆತೆಯಾ ಶ್ರೀ ಲಕುಮಿಪತಿ ನಿನ್ನ ಕೀಲುಗೊಂಬೆಯ ತೆರದಿ ಪೇಳಿದುದ ಮಾಡಿರುವೆನೊ 1 ಶ್ರೀಪತಿಯೆ ನಿನ್ನ ಪ್ರೇರಣೆಯಲ್ಲವೆ ಸರ್ವ ಪಾಪ ಪುಣ್ಯಕೆ ಕಾರಣ ಈ ಪರಿಯ ನಿನ್ನ ಸಂಕಲ್ಪವನು ಮೀರಲು ತಾಪಸೋತ್ತಮರಿಗಳವೆ ಆಪತ್ತು ಸಂಪತ್ತು ನಿನ್ನಧೀನಗಳೆಂದು ತಾಪತ್ರಯವ ಸಹಿಸಿದೆ 2 ಇಂದಿರಾಪತಿ ನಿನ್ನ ಒಂದೊಂದು ದಿನದಲಾ ನಂದ ಪೂಜೆಗೈಯಲು ಹಿಂದಿನಾ ಲೆಕ್ಕವು ಸಂದಿಲ್ಲವೆಂದು ನೀ ಇಂದು ಮಾಡುವರ್ಯಾರು ಸಂದೇಹವಿಲ್ಲವೆನಗೆ 3 ಇಂತಹುದು ಬೇಕೆಂಬ ಚಿಂತೆಯಿಲ್ಲದೆ ಬಹಳ ಸಂತಸದಿ ಮುಳುಗಿರುವೆನೊ ಕಂತುಜನಕ ಎನಗೆ ಭ್ರಾಂತಿ ನೀಡದೆ ಮನಕೆ ಶಾಂತಿಯನು ದಯಮಾಡೆಲೊ ಸಂತತ ನೀನು ಎನ್ನಂತರಂಗದಲಿರಲು ಕಂತೆಯಂದದಿ ಕಾಂಬೆನೊ ಜಗವ 4 ಧೋರಣೆಯ ನುಡಿಗಳಿಗೆ ಕಾರಣನು ನೀನಿರಲು ಯಾರ ಭಯವೆನಗಿಲ್ಲವೊ ನೀರಜಾಕ್ಷನೆÉ ನಿನ್ನ ಪ್ರೇರಣೆಯನೆಳ್ಳಷ್ಟು ಮೀರಿ ನಡೆಯುವುದಿಲ್ಲವೊ ಸಾರಗುಣ ಸಂಪನ್ನ ಧೀರಭಕ್ತ ಪ್ರಸನ್ನ ಯಾರಿರುವರೊ ಜಗದಲಿ ನಿನ್ಹೊರತು 5
--------------
ವಿದ್ಯಾಪ್ರಸನ್ನತೀರ್ಥರು
ನೋಡಿದ್ಯಾ ಈ ದೇಹಕೆ ಬಂದು | ನೋಡಿದ್ಯಾ ನೋಡಿದ್ಯಾ |ನೋಡದವನ ನೀ ನೋಡುವೆ ಎಂದರೆ | ನೋಡುವಿ ಎಂದಿಗೆ ನೋಡಿದ್ಯಾ ಪ ಒಬ್ಬವರ್ಯಾರೂ ತೋರುವದಲ್ಲ | ತೋರಿಸಿಕೊಂಡರದು ತಾನಲ್ಲ | ತೋರಡಗುವದಕೆ ಮೀರಿರುವದು ಎಂದು | ಸಾರುತಿಹುದು ಶ್ರುತಿಸಾರವೆಂದು 1 ರೂಪವನ್ನು ಕಲ್ಪಿಸಲಿಲ್ಲಾ | ಚಿದ್ರೂಪವನು ಸರ್ವರೊಳೆಲ್ಲಾ | ಪಾಪ ಪುಣ್ಯಕೆ ವ್ಯಾಪಕನಾದ | ದೀಪ ಪ್ರಕಾಶನ ಬೋಧಿಪ ಬಲ್ಲಾ 2 ಕರೆದರೆ ಎತ್ತೆತ್ತ ಬಾರ ಮತ್ತೆ | ಮರೆದರೆ ಎತ್ತೆತ್ತ ಹೋಗನು ದೂರ | ಗುರು ಭವತಾರಕ ಶಿರದೊಳು ಕರವಿಟ್ಟು | ವರದ್ಹೇಳಿದ ವಸ್ತು ಪರಿಪೂರ್ಣವಾಗೆ 3
--------------
ಭಾವತರಕರು