ಒಟ್ಟು 11 ಕಡೆಗಳಲ್ಲಿ , 11 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
ಕಾಲಮಹಿಮೆ ಕೇಳಿ ಜಗದಾಲೋಚನೆ ತಾಳೀ ಪ ಕೀಳು ಖೂಳರಿಗೆ ಮೇಲು ಹಾಸಿಗೆ ಮಂಚ ಬಾಲಾಜಿ ಭಜನೆ ಜನಕೆ ಜೋಳಿಗೆ ಯೀ ಪ್ರಪಂಚಾ 1 ಉತ್ತಮಪುರುಷರಿಗೆಲ್ಲ ತುತ್ತಿಗೆ ಮಾನಹೋಗಿ ಹೆತ್ತವ್ವೆ ಹೋಗೆ ಕಳ್ಳ ಚಿತ್ತರ್ಗೆ ಮಂಚಾ ತೂಗೆ 2 ಡಂಬಾಚಾರಿಗಳಿಗೆಲ್ಲಾ ಕೊಂಬು ಕುದುರೆಯಗಾಡಿ ಶಂಬೂನುತರೂ ಪಾಪಿಗಾಡಿಗಳ ಹಿಂದೆ ವೋಡೆ 3 ನಿಚ್ಚಾ ಮುತ್ತೈದೆರ್ಗೆಲ್ಲಾ ಅಂಜಿಕೆ ಅರುಶನವಿಲ್ಲಾ ಬಿಚ್ಚಾಲೆಯಿಲ್ಲದ ರಂಡೇರ್ಹೆಚ್ಚಿ ಹೀಗಾಯಿತಲ್ಲ 4 ದೋಷರಹಿತ ಹರಿದಾಸ ತುಲಸೀರಾಮಾ ದೇಶಿಕಾ ತನ್ನ ನಿಜದಾಸಾನ ಮಾಡಿಕೊಂಡಾ 5
--------------
ಚನ್ನಪಟ್ಟಣದ ಅಹೋಬಲದಾಸರು
ಗುರುಸೇವೆ ನಿರತರಿಗೆ ನಮೋ ನಮೋ ಪ ಅರಿವು ನಿಲ್ಲಿಸಿ ಪರಸಾಧನದಿರುತಿಹ್ಯ ಪರಮಪಾವನರಿಗೆ ನಮೋ ನಮೋ ಅ.ಪ ತಾಪಸಾರ್ಯರಿಗೆ ನಮೋ ನಮೋ ಮಹ ಪಾಪ ದೂರರಿಗೆ ನಮೋ ನಮೋ ಕೋಪಲೋಪರಿಗೆ ನಮೋ ನಮೋ ಇಹ ವ್ಯಾಪಾರರಿತವರಿಗೆ ನಮೋ ನಮೋ ತಾಪತ್ರಯವ ನೀಗಿ ಶ್ರೀಪತಿ ಚರಣವ ಗೌಪ್ಯದಿ ನೆನೆವರ್ಗೆ ನಮೋ ನಮೋ 1 ವೇದ ಸಂಪನ್ನರಿಗೆ ನಮೋ ನಮೋ ಭವ ಬಾಧೆ ಗೆಲಿದವರಿಗೆ ನಮೋ ನಮೋ ಸಾಧನ ಚತುಷ್ಟರಿಗೆ ನಮೋ ನಮೋ ಮಹ ಸಾಧುಸಂತರಿಗೆ ನಮೋ ನಮೋ ವಾದಿ ಮೂರ್ಖರೊಳು ವಾದಿಸದಂಥ ಸು ಬೋಧ ಗುರುವರಗೆ ನಮೋ ನಮೋ 2 ಭಾಗವತರಿಗೆ ನಮೋ ನಮೋ ಇಹ ಭೋಗನಿರಾಸ್ಯರಿಗೆ ನಮೋ ನಮೋ ಯೋಗಸಾಧಕರಿಗೆ ನಮೋ ನಮೋ ಮಹ ಯೋಗಿ ಮಹಾತ್ಮರಿಗೆ ನಮೋ ನಮೋ ಆಗಯೀಗೆನ್ನದೆ ಸಾಗರನಿಲಯನನ್ನ ಬಾಗಿಭಜಿಪರಿಗೆ ನಮೋ ನಮೋ 3 ಭಕ್ತಜನರಿಗೆ ನಮೋ ನಮೋ ವಿ ರಕ್ತ ಪುರುಷರಿಗೆ ನಮೋ ನಮೋ ಸತ್ಯಶೀಲರಿಗೆ ನಮೋ ನಮೋ ತಮ್ಮ ಗುರ್ತು ಅರ್ತವರಿಗೆ ನಮೋ ನಮೋ ಭಕ್ತಿಯುಕ್ತಿ ವಹಿಸೆತ್ತಗಲದಂಥ ಚಿತ್ತಶುದ್ಧರಿಗೆ ನಮೋ ನಮೋ 4 ನಿತ್ಯ ನಿರ್ಮಲರಿಗೆ ನಮೋ ನಮೋ ಭವ ಮರ್ತ ನಿರ್ತರಿಗೆ ನಮೋ ನಮೋ ತ ತ್ವರ್ಥಿಕರಿಗೆ ನಮೋ ನಮೋ ಮಹ ಮುಕ್ತಿ ಸಾಧ್ಯರಿಗೆ ನಮೋ ನಮೋ ಮೃತ್ಯುವ ಗೆಲಿದು ಕರ್ತ ಶ್ರೀರಾಮನ ಅರ್ತವರಿಗೆ ಬಹು ನಮೋ ನಮೋ 5
--------------
ರಾಮದಾಸರು
ಜಯ ಜಯ ನಿಮಗೆ ಜಯವಣ್ಣ ಭಯವಿಲ್ಲೀನುಡಿ ಕೇಳ್ ಚಿಣ್ಣ ಪ ಶ್ರೀ ಮನೋಹರನ ಲೀಲೆಯಿದು ಸು ಕ್ಷೇಮವಹುದು ಸತ್ಪುರುಷರಿಗೆ1 ಈ ಜಗತ್ತನೂ ಈಶ್ವರನೂ ತಾ ರಾಜನಾಗಿ ಕಾಪಾಡುವನು 2 ಕುರುಡರು ತಾವ್ ಕೆಡುವರು ಕೊನೆಗೆ 3 ಇದರೊಳುಂಟು ಬಹುವಿಧ ಭೇದ ವದರುತಿಪ್ಪದು ಸಕಲವೇದ4 ಅಂತ್ಯವಿಲ್ಲದಿಹ ಕಾರಣದಿ ಅ ನಂತ್ಯವೆಂದು ಪೇಳ್ವರು ಭರದಿ 5 ಮನುಜ ಜನ್ಮ ಬಹುದುರ್ಲಭವು ಮನನಶೀಲರಿಗಹುದು ಶುಭವು 6 ಮರೆಯಬೇಡಿ ಜನರೆ ನೀವು ಅರಿತು ಅರಿಯದವರಿಗೆ ನೋವು 7 ಕತ್ತಲೆ ಕೊನೆಯಿಲ್ಲದ ಘೋರ 8 ವುಳಿಯದು ನಿಮಗದು ಕೇಳ್ ಜನರೆ 6 ಧರ್ಮವೆಂಬ ಮೂಟೆಯ ಕಟ್ಟೆ ಬಟ್ಟೆ 10 ಗುರುವಾಜ್ಞೆಯ ಮೀರುವುದು ಸಲ್ಲ ಈ ದುರುಳತನ ನಿಮಗೆ ಸರಿಯಲ್ಲ 11 ನಾನೇ ಶ್ರೇಷ್ಠನೆಂಬುವ ಮಾತು ಶಾನೆ ವಡಕು ಗಡಿಗೆಯು ತೂತು 12 ಹಿಂದಿನವರ ಕಷ್ಟವ ನೋಡಿ ಮುಂದಕೆ ಸತ್ ಸಾಧನೆ ಮಾಡಿ 13 ಮೂರು ಕರಣ ಶುದ್ಧಿಯು ಬೇಕು ಧೀರ ಜನರಿಗಿಷ್ಟೇ ಸಾಕು 14 ಜನರ ನೋಡಿ ನಡೆಯಲಿಬೇಡಿ ಕೊನೆಗೆ ನಿಮಗೆ ಕಾಲಿಗೆ ಬೇಡಿ 15 ಹೆಚ್ಚಪೇಕ್ಷಿಸೆ ಬರುವುದಿಲ್ಲ ಮೆಚ್ಚನು ನಿಮಗೆ ಸಿರಿಯನಲ್ಲ 16 ನಿರ್ಮಲ ಮಾರ್ಗ ಹುಡುಕಿದಿರಾ 17 ಜ್ಞಾನರತ್ನ ಸಂಪಾದನೆಯು ಹೀನ ಜನರಿಗಾಗದು ಕೊನೆಯು 18 ದುರಾಸೆಯಲಿ ಕೆಡುವರು ಕೆಲರು ನರಾಧಮರು ಎಂದೆನಿಸುವರು 19 ಪರಿಯಂತ ತಂ ತಮ್ಮಟ್ಟಿಗಿಹುದು ಅಂತ 20 ಗೂಡಿನ ಮೇಲೆ ದುರಭಿಮಾನ ಮಾಡಿ ಮಾಡಿ ಕೆಡುತಿಹರು ಜನ 21 ಯೀಗೂಡಿಗೆವೊಂದಾಧಾರ ಯೋಗಿಗಳರಿವರಿದರಸಾರ 22 ವರ ರಸಗಳು ನಾಲ್ಕು ತೊಗರು 23 ಹಂಚೇಳರಿಂ ಮಾಡಿಹದೇವ 24 ಘಟಿಸಿರುವುದು ಪತ್ತಲೆಯಿದರೊಳ್ 25 ಮರನಿದೆಂದು ಶಾಸ್ತ್ರದ ಮೂಲ ಅರಿಯದೆ ನಾನೆಂಬೆನು ಬಾಲ 26 ಪಕ್ಷಿಗಳೆರಡೀ ಮರದಲ್ಲಿ ಸಾಕ್ಷಿ ಒಂದು ಒಂದಕೆ ಅಲ್ಲಿ 27 ಮರದ ಪಣ್ಣು ತಿಂಬುವದೊಂದು ನಿರುತವು ನೋಡುತಿರುವದೊಂದು 28 ದ್ವಾಸುಪರ್ಣ ಶೃತಿ ಇದರರ್ಥ ದಾಸನಾಗದಿರುವನು ವ್ಯರ್ಥ 29 ಅಧ್ಯಾತ್ಮ ವಿದ್ಯದಲಿ ತೋರುವುದೇ 30 ಜೀವನಾಮ ಆತ್ಮನಿಗುಂಟು ದೇವತಾನು ತಬ್ಬಿದ ಗಂಟು 31 ಅಭೇದ ಶೃತಿಗಳೇನಕ ವಿಧ ಸ್ವಭಾವದಿರುನಡೆ ತೋರುವದ32 ಸುರರುತ್ತಮರು ನರರಾನಿತ್ಯ ಸುರೇತರರು ನೀಚರು ಸತ್ಯ 33 ನೂರು ವರುಷ ಬದುಕುವರೆಂದು ಮೀರಿ ಮನದಿ ಯೋಚಿಸಿ ಮುಂದು 34 ಬಹು ಧನಾರ್ಜನೆಯ ವೂಹೆಯಲಿ 35 ಮೊದಲು ಅನ್ನಕಿಲ್ಲೆಂದು ಮತಿ ವಿಧ ವಿಧ ವಸ್ತ್ರಗಳಲಿ ಪ್ರೀತಿ 36 ನಾಬಡವನು ಎಂದಗಲಿರುಳು 37 ತನಗೆ ಬೇಕಂತ ಚಿಂತೆಯೊಳು 38 ಇತರರ ನೋಡಿ ತನಗಪೇಕ್ಷೆ ಗತಿ ಇಲ್ಲದೆ ಇರುವುದೆ ಶಿಕ್ಷೆ 39 ತಾವ್ ಸಮಂಜಸದಿ ಪೇಳಿದರು 40 ಪ್ರವೃತ್ತಿ ಮಾರ್ಗದ ಸಂಪತ್ತು ಭವಾಂಬುಧಿ ಸುಳಿಯು ವಿಪತ್ತು 41 ಫಲವ ಕೋರಿ ಕರ್ಮವ ಮಾಡಿ ಹಲವು ಯೋನಿಗಳೊಳೋಡಾಡಿ42 ಮರಳಿ ಮರಳಿ ಜನನ ಮರಣದೆ ದರಿಯ ಕಾಂಬ ಬಗೆ ದಾರಿಯದೆ 43 ಇದುವೆ ದೊಡ್ಡ ಸಂಸೃತಿ ವೃಕ್ಷ ತುದಿ ಮೊದಲಿಗು ದೊರಕದು ಮೋಕ್ಷ 44 ಇನ್ನು ಅಕ್ಕ ತಂಗಿಯು ಮೊದಲು 45 ಸತಿ ಸುತರು ಬಳಗಗಳು 46 ಇವರು ತನ್ನವರಿತರರಲ್ಲ ಭವ ಜಲಧಿಯ ಜಂತುಗಳೆಲ್ಲ 47 ಕೊಡದಿದ್ದರೆ ಕೋಪವು ಬಹಳ 48 ವಿತ್ತವಿರಲು ಬಂಧುಗಳೆಲ್ಲ ಹತ್ತಿ ಇವನ ಬಾಧಿಪರೆಲ್ಲ 49 ಸುಳ್ಳುಹೇಳಿದರೆ ಬಹುನಂಬಿಕೆ 50 ಹಿತೋಪದೇಶದಿ ಬಹುಕೋಪ ಪತಿತ ಜನರಿಗೆ ಇದು ಪಾಪ 51 ಒಬ್ಬ ದೈವಲೋಕಕೆ ಸತ್ಯ ಹಬ್ಬವವನ ಭಜಿಪುದಗತ್ಯ 52 ಕಾಮುಕರಿಗೆ ಕಡೆಗೂ ದುಃಖ ನೇಮವದಕೆ ಮೂಲವುರೊಕ್ಕ 53 ಸ್ಪøಹದಿಂದಲೆ ಕೋಪವು ಬಹುದು ವಿಹಿತವೆಂದು ನಗುವನೆ ಸಾಧು 54 ಲೋಭದಿಂದ ಮೂಲಕೆ ನಾಶ ಸ್ವಾಭಾವ್ಯದಿ ದುರ್ಜನಕಾಶಾ 55 ರಾಶಿ ಧನವ ಕೊಳ್ಳೆಯು ಕೊಡುವ 56 ದಾನಕೆಂದರಿಲ್ಲವು ಕಾಸು ದಂಡಕೊಡುವುದಕೆ ಬಹುಲೇಸು 57 ನಷ್ಟವಾದರೂ ಮನಕಿಷ್ಟ ದುಷ್ಟಾತ್ಮರು ಪಡುವರು ಕಷ್ಟ 58 ಆರ್ಯರುಕ್ತಿ ಕೇಳುವುದಿಲ್ಲ ಕಾರ್ಯದಲಿ ವಿಘಾತವೆ ಎಲ್ಲ 59 ಧನವಿದ್ದರು ಸೌಖ್ಯವು ಕಾಣೆ ಘನದುರಾಸೆ ಕುಜನರಿಗೆ ಆಣೆ 60 ಭೂಮಿ ಉಂಟು ತನಗೆಂಬುವರು ನೇಮದಿ ದಂಡವ ತೆರುತಿಹರು 61 ಮಳೆಬೆಳೆಯನು ನಿಂದಿಪರು ಕೆಲರು ಖಳರು ಸುಮನಸರ ದೂಷಿಪರು62 ಮೊದಲು ತುದಿಯಲಿ ದುರಭಿಮಾನ 63 ವ್ಯಾಪಾರದಿ ಧನ ಕಳಕೊಂಡು ಕೋಪ ವ್ಯಾಜ್ಯಕೆಳೆವದೆ ಫಂಡು 64 ಬಲುಧನವ ಕೂಡಿಸುತಲಿ ಮುಂದು 65 ಮುಖದಾಕ್ಷಿಣ್ಯದಿ ಮಾತಾಡಿ ವಿಕಲರನರ ಸ್ನೇಹದಿ ಕೂಡಿ66 ದೊಡ್ಡದಾಗಿ ಮನೆಯನು ಕಟ್ಟಿ ದುಷ್ಟತನದಿ ವಾದಿಸಿ ಬಿಟ್ಟಿ 67 ಕೂಲಿಯವರ ಹೊಟ್ಟೆಗೆ ಕೊಡದೆ ಲೋಲನಾಗಿ ವಂಚನೆ ಬಿಡದೆ 68 ಸಂಸಾರವಿದೆ ಸ್ಥಿರವೆಂದು ಹಿಂಸೆಪಡುತಲಿ ಸದಾನೊಂದು 69 ಚತುರ ಶೀತಿ ಲಕ್ಷಯೋನಿಗಳೊಳ್ ಮತಿಹೀನರಾಗಿ ಜನಿಸುತಲೂ 70 ಭದ್ರವು ತಮಗೆಂದು ಪ್ರಾಣಿಗಳು 71 ಇದಕ್ಕಾಗಿ ಪರಾಧೀನದಲಿ ಪದೇ ಪದೆಗೆ ತಾವು ನೋಯುತಲಿ 72 ಮನುಜ ಜನ್ಮ ಬರುವುದೆ ಕಷ್ಟ ಮಾನಿತನಾದವನೆ ಅತಿ ಶ್ರೇಷ್ಠ 73 ಭೋಧಿಸುವಾತನೆ ಶುಭತಮನು 74 ಸುಜನರಿಲ್ಲವವರದೆ ಪಂಥ 75 ಕರ್ಮಾರ್ಥ ಶೃತಿ ಗಹನದಲಿ ನಿರ್ಮಲರಾಗದೆ ಚಿಂತೆಯಲಿ&ಟಿbsಠಿ
--------------
ಗುರುರಾಮವಿಠಲ
ನೀಲಕಂಠನ ಸುತಗಭಿನಮಿಸಿ ಆದಿಬ್ರಹ್ಮನ ಸತಿಯಳ ಭಜಿಸಿ ನೀಲವರ್ಣನು ಲಕ್ಷ್ಮೀಲೋಲನ ದಯದಿಂದ ಪಾಲಿಸಿದರೆ ಪಾಡಿ ಪೊಗಳುವೆನು ಪ ಜಯ ಜಯ ಭೀಮ ಭಾರತಿಗೆ ಜಯ ಜಯ ಧರ್ಮ ಭೀಮಾರ್ಜುನರಿಗೆ ಜಯ ದ್ರೌಪದಿ ನಕುಲ ಸಾದೇವಗೆ .......... ........... ............ 1 ಉಕ್ಕುವೊಯೆಣ್ಣೆಯೊಳಗೆ ನೋಡಿ ಕೊಟ್ಟೇನೆನುತ ಪರಮುತ್ಸವದಿಂದಲಿ ಪೃಥಿವಿರಾಯರಿಗ್ವಾಲೆ ಬರೆದ ರಾಯ 2 ದಿಕ್ಕು ದಿಕ್ಕಿನ ರಾಜರು ಬರಲು ಕೃಷ್ಣ್ಣೆಸ್ವಯಂವರ ನೋಡಬೇಕೆನುತ ವಿಪ್ರವೇಷವÀ ಧರಿಸಿ ಹೆತ್ತಮ್ಮನ ಸಹಿತಾಗಿ ಸತ್ಯಪಾಂಡವರು ಬಂದರು ಬ್ಯಾಗ 3 ಬಲವಂತ ರಾಯರೆಲ್ಲರು ತಾವು ಬಲುಮೆಯಿಂದಲಿ ಧನುವೆತ್ತಿ ಬೀಳೆ ಹಲಧರನನುಜ ತಾ ಚೆಲುವ ಪಾರ್ಥನ ನೋಡಿ ಬಲವಕೊಟ್ಟನು ಭೀಮಾರ್ಜುನಗೆ 4 ಸಾದೇವನನುಜ ಸುಂದರ ಪಾರ್ಥ ಆದಿಮೂರುತಿಯ ಪಾದಕ್ಕೆ ನಮಿಸಿ ಕಾದಯೆಣ್ಣೆಯ ನೋಡಿ ಕಟ್ಟಿದ ಮೀನವ ತಾ ಧನುವೆತ್ತಿ ಹೊಡೆದನಾಗ 5 ಚೆಲ್ಲೆಗಂಗಳ ದ್ರೌಪದಿದೇವಿ ವಲ್ಲಭ ಪಾರ್ಥಗೊಲಿದು ಬ್ಯಾಗ ಮಲ್ಲಮರ್ದನಸಖನಲ್ಲಿ ನಡೆದು ಬಂದು ಮಲ್ಲಿಗೆ ಮಾಲೆ ಹಾಕಿದಳಾಗ 6 ವಿಪ್ರ ಕ್ಷತ್ರಿಯರೊ ದಾವಕುಲವೊ ನೆಲೆ ಕಾಣದಲೆ ಮಾಜದೆ ನಿಮ್ಮ ಮರ್ಮಗಳ್ಹೇಳಬೇಕೆಂದು ಕೇಳುತ್ತಿದ್ದನು ಕಂಗೆಡುತ ರಾಯ 7 ಮಚ್ಛಯೆಸೆಯಲು ಮಗಳ ನಾನು ಕೊಟ್ಟೇನೆನುತ ನಿಶ್ಚಯವ ಮಾಡಿ ಇಷ್ಟುವಿಚಾರದಿಂದೀಗೇನು ಫಲವೆಂದು ಸತ್ಯಧರ್ಮಜ ನುಡಿದನು ನಗುತ 8 ಕೇಳುತ ಕುಂತಿಸುತರುಯೆಂದು ಭಾಳ ಸಂಭ್ರಮದಿ ಪಾದವ ತೊಳೆಯೆ ಕಾಲ ನೀಡಲು ಕಂಡು ತಾ ಜಾರಿ ಹಿಂದಕ್ಕೆ ಸರಿದ ರಾಜ9 ಸತ್ಯವತಿಯ ಸುತರ್ಹೇಳುತಿರೆ ಮತ್ತಾಗೆರೆದನು ಮಗಳ ಧಾರೆ ಮುತ್ತು ಮಾಣಿಕ್ಯದ ಮಂಗಳಸೂತ್ರವ ಕಟ್ಟಿ ಕೊಟ್ಟನೈವರಿಗೆ ದ್ರೌಪದಿಯನಾಗ 10 ಲಾಜಾಹೋಮವು ಭೂಮಾನಂತರದಿ ಮೂರ್ಜಗದೊಡೆಯ ಕೃಷ್ಣನ ಸಹಿತ ರಾಜಾಧಿರಾಜರೈವರು ಕುಳಿತಿರೆ ಕೃಷ್ಣ ರಾಜ ಧರ್ಮರ ವಾಮಭಾಗದಲಿ 11 ರುಕ್ಮಿಣಿದೇವಿ ಪಾರ್ವತಿ ಗಂಗಾ ಸತ್ಯಭಾಮೇರ ಸಹಿತಾಗಿ ಬಂದು ಸತ್ಯ ಪಾಂಡವರಿಗೂಟಣಿ (ಉರುಟಣೆ?) ಮಾಡಬೇಕೆಂದು ಕೃಷ್ಣೆ ನೀಯೇಳೆಯೇಳೆನುತಿದ್ದರು 12 ಕಂಜನೈಯ್ಯನು ಕಡೆನೋಟದಲಿ ತಂಗಿ ಕೃಷ್ಣೆಯ ಮುಖವನು ನೋಡಿ ಅಂಜದಲ್ಹೇಳುತಲೈವರ ಗುಣಗಳ ಹಂಗೀಸೂಟಾಣಿ ಮಾಡಬೇಕೆಂದನು 13 ಕನ್ನೆ ದ್ರೌಪದಿ ಅರಿಷಿಣ ಪಿಡಿದು ತನ್ನ ಪತಿಗೆ ಎದುರಾಗಿ ನಿಂತು ಸುಮ್ಮನೆ ರಾಜ್ಯವ ಬಿಟ್ಟು ವನವನಾ ತಿರುಗೋ ಧsÀರ್ಮರೇ ನಿಮ್ಮ ಮುಖ ತೋರಿರೆಂದಳು 14 ಕಂಕಭಟ್ಟೆನಿಸುವೊ ದೊರೆಗಳಿಗೆ ಕುಂಕುಮ ಹಚ್ಚುವೆ ಕುಶಲದಿಂದ ಪಂಚಾಂಗ ಪಠಿಸುವ ಪಾಣಿಯ ಪಿಡಿದು ನಾ ಮುಂಚೆ ಗಂಧವ ಹಚ್ಚುವೆನೆಂದಳು 15 ಯಿಟ್ಟಸತಿಯ ಅನುಜರನೆಲ್ಲ ಗಟ್ಟಿ ಹೃದಯಕ್ಕೆ ಬುಕ್ಕಿ ್ಹಟ್ಟು ಪರಿಮಳ ಹಚ್ಚಿ ಅಚ್ಚ ಮಲ್ಲಿಗೆ ಹಾರ ಹಾಕುವೆನೆಂದಳು 16 ಶಾಂತಧರ್ಮರ ಚರಣಕ್ಕೆ ಎರಗಿ ಮಂತ್ರಿಭೀಮನ ಮುಂಭಾಗದಲಿ ಕಾಂತರ ಮುಖಕ್ಕೆ ಹಚ್ಚುವೆನೆಂದಳು 17 ಬಂದೇಕಚಕ್ರನಗರದಲ್ಲಿ ಬಂಡಿಲನ್ನವನುಂಡು ¨ಕಾಸುರನ ತುಂಡು ಮಾಡ್ಯವನ ತೋರಣ ಕಟ್ಟಿದ ತೋಳಿಗೆ ಗಂಧವ ಹಚ್ಚೇನೆಂದಳು ನಗುತ 18 ಇಟ್ಟ ವಿಷದ ಲಡ್ಡಿಗೆಯ ಮೆದ್ದು ಭಿಕ್ಷÀದನ್ನವು ಬರಿಯಾಗದಲೆ ಹುಟ್ಟುಹಿಡಿದು ಅಟ್ಟುಂಬೋ ಪುರುಷರಿಗೆ ಬು- ಕ್ಕಿ ್ಹಟ್ಟು ಪರಿಮಳ ಹಾಕುವೆನೆಂದಳು 19 ಕಪಿಗಳೊಳಗೆ ಶ್ರೇಷ್ಠರುಯೆನಿಸಿ ಅತಿ ಬ್ಯಾಗದಿಂದ ಕೌರವರ ಕುಲ ಹತವ ಮಾಡ್ಯತಿಯಾಗೋ ಪತಿಗೆ ಮಾಲೆಯ ಹಾಕಿ ಅತಿ ಭಕ್ತಿಲಿಂದೆರಗಿದಳಾಗ 20 ಸರಸಿಜಮುಖಿ ದ್ರೌಪದಿದೇವಿ ಅರಸು ಅರ್ಜುನಗೆದುರಾಗಿ ನಿಂತು ಅರಿಷಿಣ ಕುಂಕುಮ ಪಿಡಿದು ಸ್ತ್ರೀರೂಪವ ಧರಿಸುವ ನಿಮ್ಮ ಮುಖ ತೋ(ರಿ)ರೆಂದಳು 21 ತಂದು ಗಜವ ತೋ
--------------
ಹರಪನಹಳ್ಳಿಭೀಮವ್ವ
ಪಾಪಿಯ ನೋಡೆ ಬಡಿಸುವ ಪಾಪಿಯ ನೋಡೆಪಾಪಿಯ ನೋಡೆ ಪಾಪದ ಪಿಶಾಚಿಪಾಪಿಯ ಮೋರೆಯ ನೋಡಬಾರದಕ್ಕೆ ಪ ಅನ್ನವನೀಗ ಇಷ್ಟಿಷ್ಟು ಹಾಕುವಳು ಅತ್ತಲಾಗಿ ಇಡುವಳುಏನು ಇಷ್ಟೆಂದು ಕೇಳಲು ಅರಿಯಿರಿ ಹೊಟ್ಟೆಯೆಂದು ಎದುರಿಗೆ ನಿಂತೆ ಮುಸಿ ಮುಸಿ ನಗುವಳು 1 ಆಜ್ಯವ ಹಾಕೆನೆ ಅಲ್ಲಾಡುತಲಿ ಅರಿಯಿರಿ ಬೇಸಗೆ ಸೆಖೆ ಎಂತೆಂಬಳುಮಜ್ಜಿಗೆ ಹಾಕೆನೆ ಮಂದಮತಿಗಳ ಮಹಾಶೈತ್ಯವು ಬೇಡವು ಎಂತೆಂಬಳು 2 ಉತ್ತಮರೆಂದರೆ ಒಳ್ಳೆಯದಿಕ್ಕಳು ಉಬ್ಬಿಸಹೋದರೆ ಉಬ್ಬದಿಹಳುನಿತ್ಯ ಚಿದಾನಂದ ಸತ್ಪುರುಷರಿಗೆ ನಿಶ್ಚಯವಾಗಿ ಉಣಬಡಿಸುವಳು 3
--------------
ಚಿದಾನಂದ ಅವಧೂತರು
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ವಿಶ್ವಪತಿ
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹರಿಕಥಾಮೃತಸಾರ ಸುರಸ ಗ್ರಂಥವ | ಧರಣಿ ಸುರರಲ್ಲದೆ ದುರುಳ ಪಾಷಂಡಿಗಳರಿತು ಇದರ ಮರ್ಮ ಹರುಷಿತರಾಗುವರೇ ಪ ಹಿಮ ಮಯೂಖನ ನೋಡಿ ಕುಮುದ ಪುಷ್ಪದವೊಲು ಕಮಲವರಳುವದೇ || ಯಾಮಿಜನರಂದದಿ ದಿನಮಣಿಯುದದಿ ತಿಮಿರಷ್ರ್ಯ ಕೊಡಬಲ್ಲದೇ 1 ಚಿನ್ನದಾಭರಣಗಳಿಡಲು ದಾಸಿಯು ದೇವ ಕನ್ನಿಕೆಯಾಗುವಳೇ ಮನ್ನಣೆಯರಿಯದ ಮನುಜನ ಶಿರ ಪುಣ್ಯ ಪುರುಷರಿಗೆರಗದೇ 2 ಗಂಧವಾಹನ ಮತ ಪೊಂದದವರಿಗೆ ಬಂಧ ತಪ್ಪುವದೇ | ಮಂದಮತಿಗೆ ಶಾಮಸುಂದರನ ಮಂದಿರ ದೊರಕುವದೇ 3
--------------
ಶಾಮಸುಂದರ ವಿಠಲ
ಲೋಕನೀತಿ379ಇಂದೀಗ ಹರಿದಿನವು ಏಕಾದಶಿಯೆಂದುಶೋಭಿಪ ದಿನವುಪಚಂದಾದಿ ವಿಷ್ಣುಸಾಯುಜ್ಯ ಹೊಂದುವುದಕ್ಕೆಅಂದವಾಗಿಹ ದಿನ ಸಂದೇಹವಿಲ್ಲವುಅ.ಪಶರಧಿಮಥಿಸೆ ಸುಧೆಯೂ ಬರಲು ಕಂಡುದುರುಳರೊಯ್ಯಲೂ ಹರಿಯೂಸರ್ವರಿಗುಪವಾಸವೆಂದು ತಾನ್ ಸೆಳೆದನುವರವಿತ್ತ ಮಾಸಕ್ಕೆ ಎರಡೇಕಾದಶಿಯೆಂದೂ1ದಶಮಿ ಒಂದಶನಾಗೈದೂ ಏಕಾದಶಿ ದಿವಸುಪವಾಸವಿರ್ದುಕುಸುಮನಾಭನ ಪೂಜೆಗೈದು ತೀರ್ಥವಗೊಂಡುನಿಶೆಯೊಳ್ ಜಾಗರವಿದ್ದು ಹರಿಕಥೆ ಕೇಳ್ವುದೂ2ವೀಳ್ಯ ಭೋಜನ ಪಾನವೂ ಈ ದಿನರತಿಕೇಳಿನಿದ್ರೆಯು ವಜ್ರ್ಯವೂಖೂಳನಾದರೆ ಯಮನಾಳೊಳ್ ಪಿಡಿದೊಯ್ದುಗೋಳುಗುಡಿಸುವ ಹೇಳಲಸಾಧ್ಯವು3ಅಶನಕ್ಕೆ ಬಿಸಿ ಮಳಲು ತಿನಿಸೀ ವೀಳ್ಯವ್ಯಸನ ಪಾನಕೆ ಉಕ್ಕಂ ತರಸಿ ಬಾಯ್ಗೆರಸಿಮುಳ್ಳು ಹಾಸಿಗೆ ಮೇಲೆ ಮಲಗೆಂದು ಹೊ-ರಳಿಸಿ ಉರಿಕಂಭ ಧರಿಸೆಂಬರ್ಸತಿಪುರುಷರಿಗೆ4ಧ್ರ್ರುವ ಹರಿಶ್ಚಂದ್ರ ಪ್ರಹ್ಲಾದ ತನ್ನಭುವನಕಟ್ಟಳೆಯೊಳ್ ರುಕ್ಮಾಂಗದಭವಹರವ್ರತಗೈದು ಹರಿಪಾದ ಸೇರ್ವರುಭುವನದಿ ಸರ್ವರಿಗ್ಯೋಗ್ಯವೀ ವ್ರತವೂ5ದ್ವಾದಶಿ ವ್ರತವೆಂಬುದು ಶ್ರೇಷ್ಠವು ಬೇಗಸಾಧಿಸಿ ಪಾರಣೆಗೈವುದೂಮೇದಿನಿಯೊಳಂಬರೀಷ ನೀ ವ್ರತಗೈದೂಆದಿಮೂರುತಿ ಗೋವಿಂದನ ಪಾದಸೇರ್ದನೂ6<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹರಿಪದಯುಗಲವನಿತ್ಯ ನೆನೆದವೆಗೆ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಪರಮಪದವಿಯೇ ಸಾಕ್ಷಿ ||ಹರಿ -ಗುರು ದೂಷಣ ಮಾಡಿದ ಮನುಜಗೆ |ನರಕರೌರವವೆ ಸಾಕ್ಷಿ ಪ.ಕಡುಭಕ್ತಿಯಲಿ ಕೃಷ್ಣನÀ ನೆನೆದರೆ |ನಡೆಯಲಿ ಸತ್ಯವೆ ಸಾಕ್ಷಿ ||ದೃಡ ಭಕುತಿಯಿಂದ ಉಣಬಡಿಸಿದವಗೆ |ಷಡುರಸಾನ್ನವೇ ಸಾಕ್ಷಿ 1ತಾನೊಂದುಂಡು ಪರರಿಗೊಂದಿಕ್ಕುವಗೆ |ಗುಲ್ಮರೋಗವೇ ಸಾಕ್ಷಿ ||ಹೀನನಾಗಿ ಹಿರಿಯರನು ದೂಷಿಪಗೆ |ಹೀನ ನರಕವೇ ಸಾಕ್ಷಿ 2ಕನ್ಯಾದಾನವ ಮಾಡಿದವಗೆ ದಿವ್ಯ |ಹೆಣ್ಣಿನ ಭೋಗವೆ ಸಾಕ್ಷಿ ||ಕನ್ಯಾದಾನವ ಮಾಡದ ಮನುಜಗೆ |ಹೆಣ್ಣಿನ ದೈನ್ಯವೇ ಸಾಕ್ಷಿ 3ಅನ್ನದಾನ ಮಾಡಿದ ಮನುಜಗೆ ದಿ - |ವ್ಯಾನ್ನವನುಂಬುದೆ ಸಾಕ್ಷಿ ||ಅನ್ನದಾನ ಮಾಡದ ಮನುಜಗೆ ತಿರಿ -ದುಣ್ಣುತಿರುವುದೇ ಸಾಕ್ಷಿ 4ಕ್ಷೇತ್ರದಾನ ಮಾಡಿದ ಮನುಜಗೆ ಏತ - |ಛತ್ರವನಾಳ್ವುವದೆ ಸಾಕ್ಷಿ ||ಪಾತ್ರವರಿತು ಧರ್ಮಮಾಡಿದವಗೆ ಸತ್ -ಪುತ್ರರಾಗುವುದೆ ಸಾಕ್ಷಿ 5ಕಂಡ ಪುರುಷರಿಗೆ ಕಣ್ಣಿಡುವ ನಾರಿಗೆ |ಗಂಡನು ಕೇಳುವುದೆ ಸಾಕ್ಷಿ ||ಪುಂಡನಾಗಿ ಪರಸ್ತ್ರೀಯರ ಸೇರುವಗೆ |ಹೆಂಡಿರ ಕಳೆವುದೆ ಸಾಕ್ಷಿ 6ಭಕ್ತಿಯರಿಯದ ಅಧಮನಿಗೊಂದು |ಕತ್ತಲಮನೆಯೇ ಸಾಕ್ಷಿ ||ಮುಕ್ತಿಪಡೆವುದಕೆ ಪುರಂದರವಿಠಲನ |ಭಕ್ತನಾಗುವದೆ ಸಾಕ್ಷಿ 7
--------------
ಪುರಂದರದಾಸರು